Homeಕರ್ನಾಟಕಪೆಗಾಸಸ್ ಹಗರಣ: ಕಾಂಗ್ರೆಸ್‌ನಿಂದ ರಾಜಭವನ ಮುತ್ತಿಗೆಗೆ ಯತ್ನ, ಬಂಧನ

ಪೆಗಾಸಸ್ ಹಗರಣ: ಕಾಂಗ್ರೆಸ್‌ನಿಂದ ರಾಜಭವನ ಮುತ್ತಿಗೆಗೆ ಯತ್ನ, ಬಂಧನ

- Advertisement -
- Advertisement -

ಪೆಗಾಸಸ್ ಬೇಹುಗಾರಿಕೆ ಹಗರಣಕ್ಕೆ ಸಂಬಂಧಿಸಿದಂತೆ ಒಕ್ಕೂಟ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿರುವ ಕರ್ನಾಟಕ ಕಾಂಗ್ರೆಸ್ ರಾಜಭವನಕ್ಕೆ ಮುತ್ತಿಗೆ ಹಾಕಲು ಯತ್ನಿಸಿದೆ. ಪ್ರಜಾಪ್ರಭುತ್ವಕ್ಕೆ ಪದೇ ಪದೇ ಧಕ್ಕೆ ತರುವ ಬಿಜೆಪಿ ಸರ್ಕಾರ ಪೆಗಾಸಸ್ ಬೇಹುಗಾರಿಕೆ ಮೂಲಕ ಅಧಃಪತನಕ್ಕೆ ಇಳಿದಿದೆ ಎಂದು ಕಾಂಗ್ರೆಸ್ ಕಿಡಿಕಾರಿದೆ.

ರಾಜಭವನ ಮುತ್ತಿಗೆಗೂ ಮೊದಲು ವಿಧಾನಸೌಧದಲ್ಲಿ ಸಭೆ ನಡೆಸಿದ ಕಾಂಗ್ರೆಸ್ ನಾಯಕರು, ಕಾಂಗ್ರೆಸ್ ಸೇರಿದಂತೆ ವಿರೋಧ ಪಕ್ಷಗಳ ನಾಯಕರ ಟೆಲಿಫೋನ್ ಗೂಢಚರ್ಯೆ ವಿರೋಧಿಸಿ ಮಹಾತ್ಮ ಗಾಂಧಿ ಪ್ರತಿಮೆ ಬಳಿ ಧರಣಿ ನಡೆಸಿದರು.

ಧರಣಿಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಎಸ್.ಆರ್. ಪಾಟೀಲ್, ಮುಖಂಡರಾದ ಎಚ್.ಕೆ. ಪಾಟೀಲ್, ಅಲ್ಲಂ ವೀರಭದ್ರಪ್ಪ, ರಾಮಲಿಂಗಾರೆಡ್ಡಿ, ಕೆ.ಆರ್. ರಮೇಶ್ ಕುಮಾರ್, ಶಿವಾನಂದ ಪಾಟೀಲ್, ಶಿವಶಂಕರರೆಡ್ಡಿ, ಕೃಷ್ಣಬೈರೇಗೌಡ, ಪ್ರಿಯಾಂಕ್ ಖರ್ಗೆ, ಸಲೀಂ ಅಹಮದ್, ಅಜಯ್ ಸಿಂಗ್, ನಾರಾಯಣಸ್ವಾಮಿ, ಎಸ್. ರವಿ ಮತ್ತಿತರರು ಭಾಗವಹಿಸಿದ್ದರು.

ಇದನ್ನೂ ಓದಿ: ಪೆಗಾಸಸ್ ಹಗರಣ: ಅಮಿತ್ ಶಾ ಮೇಲೆ ನೇರ ಆರೋಪ ಹೊರಿಸಿದ ಕಾಂಗ್ರೆಸ್

ರಾಜಭವನ ಮುತ್ತಿಗೆ ಹಾಕಲು ಹೊರಟ್ಟಿದ್ದ ಕಾಂಗ್ರೆಸ್ ಮುಖಂಡರನ್ನು ಪೊಲೀಸರು ಪ್ರಧಾನ ಅಂಚೆ ಕಚೇರಿ (ಜಿಪಿಒ) ಬಳಿ ತಡೆದು, ಬಂಧಿಸಿ ಪೊಲೀಸ್ ವಾಹನದಲ್ಲಿ ಆಶೋಕ ನಗರ ಪೊಲೀಸ್ ಠಾಣೆಗೆ ಕರೆದೊಯ್ದರು.

“ಸಂವಿಧಾನಾತ್ಮಕವಾಗಿ ಅಧಿಕಾರ ಹಿಡಿಯಲು ಯೋಗ್ಯತೆ ಇಲ್ಲದ ಬಿಜೆಪಿ, ಹಿಡಿಯುವುದೆಲ್ಲವೂ ಅನೈತಿಕ ಮಾರ್ಗವೇ. ಐಟಿ, ಈಡಿ, ಸಿಬಿಐಗಳನ್ನು ಅಸ್ತ್ರಗಳಂತೆ ಬಳಸುವುದು, ಶಾಸಕರನ್ನ ‘ಸಿಡಿ ಬ್ಲಾಕ್ಮೇಲ್’ ಮಾಡುವುದು. ಫೋನ್ ಕದ್ದಾಲಿಕೆ ನಡೆಸುವುದು. ಈ ಅನೈತಿಕ ಸರ್ಕಾರಕ್ಕೆ ಒಂದು ಕ್ಷಣವೂ ಅಧಿಕಾರದಲ್ಲಿ ಮುಂದುವರೆಯುವ ನೈತಿಕತೆ ಇಲ್ಲ” ಎಂದು ಕಾಂಗ್ರೆಸ್ ಆರೋಪಿಸಿದೆ.

ಕಾಂಗ್ರೆಸ್ ನಾಯಕರನ್ನು ಪೊಲೀಸ್ ವಾಹನದಲ್ಲಿ ಕರೆದೊಯ್ಯುತ್ತಿರುವುದು

ಇದನ್ನೂ ಓದಿ: ಪ್ರಜೆಗಳ ಖಾಸಗಿ ಬದುಕಿನೊಳಗೆ ಇಣುಕಿ ನೋಡುವ ಚಟ ಸಂವಿಧಾನ ವಿರೋಧಿ: ಸಿದ್ದರಾಮಯ್ಯ

ಕಳೆದೆರಡು ದಿನಗಳ ಹಿಂದೆ ಮಾಜಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಮತ್ತು ಎಚ್.ಡಿ.ಕುಮಾರಸ್ವಾಮಿ ಅವರ ಆಪ್ತ ಸಹಾಯಕರು ಮತ್ತು ಮಾಜಿ ಉಪಮುಖ್ಯಮಂತ್ರಿ ಜಿ.ಪರಮೇಶ್ವರ ಅವರ ಮೇಲೆ ಪೆಗಾಸಸ್ ಕಣ್ಗಾವಲು ಇದ್ದದ್ದು ಬಹಿರಂಗವಾಗಿದೆ. 2019 ರ ಸಮ್ಮಿಶ್ರ ಸರ್ಕಾರ ಉರುಳಲು ಈ ಪೆಗಾಸಸ್ ಗೂಢಚರ್ಯೆ ಕಾರಣವಾಗಿದೆಯೇ ಎಂಬ ಅನುಮಾನಗಳಿಗೆ ಕಾರಣವಾಗಿದೆ. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ದೇಶಾದ್ಯಂತ ಪ್ರತಿಭಟನೆ ನಡೆಸುತ್ತಿದೆ.


ಇದನ್ನೂ ಓದಿ: ಸಮ್ಮಿಶ್ರ ಸರ್ಕಾರ ಉರುಳಲು ಪೆಗಾಸಸ್ ಕಾರಣ? HDK, ಸಿದ್ದು ಆಪ್ತ ಸಹಾಯಕರು, ಜಿ.ಪರಮೇಶ್ವರ್ ಫೋನ್ ಹ್ಯಾಕ್!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...

ಬಂಗಾಳ ಎಸ್ಐಆರ್ ಪ್ರಕ್ರಿಯೆ: ಚುನಾವಣಾ ಆಯೋಗದ ಸಹಾಯಕ್ಕೆ ನ್ಯಾಯಾಂಗ ಅಧಿಕಾರಿಗಳನ್ನು ನೇಮಿಸಲು ಕಲ್ಕತ್ತಾ ಹೈಕೋರ್ಟ್‌ಗೆ ಸುಪ್ರೀಂ ಸೂಚನೆ

ನವದೆಹಲಿ: ಪಶ್ಚಿಮ ಬಂಗಾಳ ಸರ್ಕಾರ ಮತ್ತು ಚುನಾವಣಾ ಆಯೋಗದ ನಡುವೆ ಮತದಾರರ ಪಟ್ಟಿ ಶುದ್ಧೀಕರಣ ಅಭಿಯಾನಕ್ಕೆ ಸಂಬಂಧಿಸಿದಂತೆ ದುರದೃಷ್ಟಕರ ಆರೋಪದ ಆಟ ನಡೆಯುತ್ತಿದೆ ಎಂದು ಪ್ರತಿಕ್ರಿಯಿಸಿರುವ ಸುಪ್ರೀಂ ಕೋರ್ಟ್, ವಿಶೇಷ ತೀವ್ರ ಪರಿಷ್ಕರಣೆ...

ಬಾಲಿವುಡ್ ನಟ ರಣವೀರ್ ಸಿಂಗ್ ಗೆ ಬಿಷ್ಣೋಯಿ ಗ್ಯಾಂಗ್ ನಿಂದ ಜೀವಬೆದರಿಕೆ: ಅಮೆರಿಕಾ ನಂಬರ್ ನಿಂದ 10ಕೋಟಿ ರೂ. ಬೇಡಿಕೆ 

ಬಿಷ್ಣೋಯ್ ಗ್ಯಾಂಗ್ ಬಾಲಿವುಡ್ ನಟ ರಣವೀರ್ ಸಿಂಗ್ ಅವರಿಂದ 10 ಕೋಟಿ ರೂ.ಗೆ ಬೇಡಿಕೆ ಇಟ್ಟಿದೆ ಎನ್ನಲಾಗಿದೆ. ಅಮೆರಿಕದ ಸಂಖ್ಯೆಯಿಂದ ಬಂದ ವಾಯ್ಸ್ ನೋಟ್ ಮೂಲಕ ಬೆದರಿಕೆ ಹಾಕಲಾಗಿದೆ ಎಂದು ವರದಿಯಾಗಿದೆ. ಮುಂಬೈ ಪೊಲೀಸ್...

‘ರಾಜಿ ಮಾಡಿಕೊಂಡ ಪ್ರಧಾನಿ’: ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರಿಂದ ಶರ್ಟ್‌ ಬಿಚ್ಚಿ ಪ್ರತಿಭಟನೆ

ಎಐ ಇಂಪ್ಯಾಕ್ಟ್ ಶೃಂಗಸಭೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಗುರಿಯಾಗಿಸಿಕೊಂಡು ಮತ್ತು ಪ್ರಧಾನಿ "ರಾಜಿ ಮಾಡಿಕೊಂಡಿದ್ದಾರೆ" ಎಂದು ಆರೋಪಿಸಿ ಭಾರತೀಯ ಯುವ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ಭಾರತ್ ಮಂಟಪದಲ್ಲಿ ಶರ್ಟ್ ಧರಿಸದೆ ಪ್ರತಿಭಟನೆ...

ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಉದ್ವಿಗ್ನ ಪರಿಸ್ಥಿತಿ: ಫೆ.24ರವರೆಗೆ ನಿಷೇಧಾಜ್ಞೆ ಜಾರಿ

ಬಾಗಲಕೋಟೆಯಲ್ಲಿ ಗುರುವಾರ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ನಡೆದ ಪ್ರತಿಮೆ ಮೆರವಣಿಗೆಯ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದ ಘಟನೆ ವರದಿಯಾಗಿದೆ. ಹಳೆಯ ನಗರ ಪ್ರದೇಶದ ಪಂಕ ಮಸೀದಿ ಬಳಿ ಮೆರವಣಿಗೆ ಸಾಗುತ್ತಿದ್ದಾಗ ಈ...

ನಿಯಮಿತವಾಗಿ ಎಸ್‌ಸಿ/ಎಸ್‌ಟಿ ಕಾಯ್ದೆ ಕೋಶದ ಸಭೆ ನಡೆಸುತ್ತಿಲ್ಲ ಎಂದು ಆರೋಪಿಸಿದ ಮೇವಾನಿ; ಗುಜರಾತ್ ವಿಧಾನಸಭೆಯಲ್ಲಿ ಕಾಂಗ್ರೆಸ್- ಬಿಜೆಪಿ ನಡುವೆ ವಾಗ್ವಾದ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿಯಲ್ಲಿ ರಚಿಸಲಾದ ರಾಜ್ಯ ಮೇಲ್ವಿಚಾರಣಾ ಕೋಶದ (ಎಸ್‌ಎಂಸಿ) ನಿಯಮಿತ ಸಭೆಗಳನ್ನು ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಕರೆಯುತ್ತಿಲ್ಲ ಎಂದು ವಡ್ಗಾಮ್‌ನ ಕಾಂಗ್ರೆಸ್ ಶಾಸಕ ಜಿಗ್ನೇಶ್...

ನೆಲಮಂಗಲದಲ್ಲಿ ಹಾಸಿಗೆ ಹಿಡಿದ ಪತಿಯ ಎದುರೇ 60ವರ್ಷದ ಮಹಿಳೆಯ ಕೊಲೆ; ಐದು ಗಂಟೆಗಳಲ್ಲಿ ಆರೋಪಿ ಬಂಧನ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲದ ಪೇಟೆ ಬೀದಿಯಲ್ಲಿ ವೀಲ್‌ಚೇರ್‌ನಲ್ಲಿ ಕುಳಿತಿದ್ದ ಗಂಡನ ಮುಂದೆಯೇ ಮಹಿಳೆಯೊಬ್ಬಳ ಕೊಲೆಯಾದ ಐದು ಗಂಟೆಗಳಲ್ಲಿ ನೆಲಮಂಗಲ ಪಟ್ಟಣ ಪೊಲೀಸರು 45 ವರ್ಷದ ದಿನಸಿ ಅಂಗಡಿ ಮಾಲೀಕನನ್ನು ಬಂಧಿಸಿದ್ದಾರೆ. ಫೆಬ್ರವರಿ...

‘ದಿ ಕೇರಳ ಸ್ಟೋರಿ 2’ ಚಿತ್ರ ನಿರ್ಮಾಪಕರು, ಸಿಬಿಎಫ್‌ಸಿ ಮಂಡಳಿಗೆ ನೋಟಿಸ್ ಜಾರಿ ಮಾಡಿದ ಕೇರಳ ಹೈಕೋರ್ಟ್

ಕೊಚ್ಚಿ: 'ದಿ ಕೇರಳ ಸ್ಟೋರಿ 2 - ಗೋಸ್ ಬಿಯಾಂಡ್' ಚಿತ್ರದ ಪ್ರಮಾಣೀಕರಣವನ್ನು ರದ್ದುಗೊಳಿಸುವಂತೆ ಮತ್ತು ಅದರ ಶೀರ್ಷಿಕೆಯ ಮರುಪರಿಶೀಲನೆ ಸೇರಿದಂತೆ ಮಾರ್ಪಾಡುಗಳಿಗೆ ನಿರ್ದೇಶನ ನೀಡಬೇಕೆಂದು ಕೋರಿ ಕಣ್ಣೂರು ಮೂಲದವರು ಸಲ್ಲಿಸಿದ ಅರ್ಜಿಯ...

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...