Homeಕರ್ನಾಟಕಪೆಗಾಸಸ್ ಹಗರಣ: ಕಾಂಗ್ರೆಸ್‌ನಿಂದ ರಾಜಭವನ ಮುತ್ತಿಗೆಗೆ ಯತ್ನ, ಬಂಧನ

ಪೆಗಾಸಸ್ ಹಗರಣ: ಕಾಂಗ್ರೆಸ್‌ನಿಂದ ರಾಜಭವನ ಮುತ್ತಿಗೆಗೆ ಯತ್ನ, ಬಂಧನ

- Advertisement -
- Advertisement -

ಪೆಗಾಸಸ್ ಬೇಹುಗಾರಿಕೆ ಹಗರಣಕ್ಕೆ ಸಂಬಂಧಿಸಿದಂತೆ ಒಕ್ಕೂಟ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿರುವ ಕರ್ನಾಟಕ ಕಾಂಗ್ರೆಸ್ ರಾಜಭವನಕ್ಕೆ ಮುತ್ತಿಗೆ ಹಾಕಲು ಯತ್ನಿಸಿದೆ. ಪ್ರಜಾಪ್ರಭುತ್ವಕ್ಕೆ ಪದೇ ಪದೇ ಧಕ್ಕೆ ತರುವ ಬಿಜೆಪಿ ಸರ್ಕಾರ ಪೆಗಾಸಸ್ ಬೇಹುಗಾರಿಕೆ ಮೂಲಕ ಅಧಃಪತನಕ್ಕೆ ಇಳಿದಿದೆ ಎಂದು ಕಾಂಗ್ರೆಸ್ ಕಿಡಿಕಾರಿದೆ.

ರಾಜಭವನ ಮುತ್ತಿಗೆಗೂ ಮೊದಲು ವಿಧಾನಸೌಧದಲ್ಲಿ ಸಭೆ ನಡೆಸಿದ ಕಾಂಗ್ರೆಸ್ ನಾಯಕರು, ಕಾಂಗ್ರೆಸ್ ಸೇರಿದಂತೆ ವಿರೋಧ ಪಕ್ಷಗಳ ನಾಯಕರ ಟೆಲಿಫೋನ್ ಗೂಢಚರ್ಯೆ ವಿರೋಧಿಸಿ ಮಹಾತ್ಮ ಗಾಂಧಿ ಪ್ರತಿಮೆ ಬಳಿ ಧರಣಿ ನಡೆಸಿದರು.

ಧರಣಿಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಎಸ್.ಆರ್. ಪಾಟೀಲ್, ಮುಖಂಡರಾದ ಎಚ್.ಕೆ. ಪಾಟೀಲ್, ಅಲ್ಲಂ ವೀರಭದ್ರಪ್ಪ, ರಾಮಲಿಂಗಾರೆಡ್ಡಿ, ಕೆ.ಆರ್. ರಮೇಶ್ ಕುಮಾರ್, ಶಿವಾನಂದ ಪಾಟೀಲ್, ಶಿವಶಂಕರರೆಡ್ಡಿ, ಕೃಷ್ಣಬೈರೇಗೌಡ, ಪ್ರಿಯಾಂಕ್ ಖರ್ಗೆ, ಸಲೀಂ ಅಹಮದ್, ಅಜಯ್ ಸಿಂಗ್, ನಾರಾಯಣಸ್ವಾಮಿ, ಎಸ್. ರವಿ ಮತ್ತಿತರರು ಭಾಗವಹಿಸಿದ್ದರು.

ಇದನ್ನೂ ಓದಿ: ಪೆಗಾಸಸ್ ಹಗರಣ: ಅಮಿತ್ ಶಾ ಮೇಲೆ ನೇರ ಆರೋಪ ಹೊರಿಸಿದ ಕಾಂಗ್ರೆಸ್

ರಾಜಭವನ ಮುತ್ತಿಗೆ ಹಾಕಲು ಹೊರಟ್ಟಿದ್ದ ಕಾಂಗ್ರೆಸ್ ಮುಖಂಡರನ್ನು ಪೊಲೀಸರು ಪ್ರಧಾನ ಅಂಚೆ ಕಚೇರಿ (ಜಿಪಿಒ) ಬಳಿ ತಡೆದು, ಬಂಧಿಸಿ ಪೊಲೀಸ್ ವಾಹನದಲ್ಲಿ ಆಶೋಕ ನಗರ ಪೊಲೀಸ್ ಠಾಣೆಗೆ ಕರೆದೊಯ್ದರು.

“ಸಂವಿಧಾನಾತ್ಮಕವಾಗಿ ಅಧಿಕಾರ ಹಿಡಿಯಲು ಯೋಗ್ಯತೆ ಇಲ್ಲದ ಬಿಜೆಪಿ, ಹಿಡಿಯುವುದೆಲ್ಲವೂ ಅನೈತಿಕ ಮಾರ್ಗವೇ. ಐಟಿ, ಈಡಿ, ಸಿಬಿಐಗಳನ್ನು ಅಸ್ತ್ರಗಳಂತೆ ಬಳಸುವುದು, ಶಾಸಕರನ್ನ ‘ಸಿಡಿ ಬ್ಲಾಕ್ಮೇಲ್’ ಮಾಡುವುದು. ಫೋನ್ ಕದ್ದಾಲಿಕೆ ನಡೆಸುವುದು. ಈ ಅನೈತಿಕ ಸರ್ಕಾರಕ್ಕೆ ಒಂದು ಕ್ಷಣವೂ ಅಧಿಕಾರದಲ್ಲಿ ಮುಂದುವರೆಯುವ ನೈತಿಕತೆ ಇಲ್ಲ” ಎಂದು ಕಾಂಗ್ರೆಸ್ ಆರೋಪಿಸಿದೆ.

ಕಾಂಗ್ರೆಸ್ ನಾಯಕರನ್ನು ಪೊಲೀಸ್ ವಾಹನದಲ್ಲಿ ಕರೆದೊಯ್ಯುತ್ತಿರುವುದು

ಇದನ್ನೂ ಓದಿ: ಪ್ರಜೆಗಳ ಖಾಸಗಿ ಬದುಕಿನೊಳಗೆ ಇಣುಕಿ ನೋಡುವ ಚಟ ಸಂವಿಧಾನ ವಿರೋಧಿ: ಸಿದ್ದರಾಮಯ್ಯ

ಕಳೆದೆರಡು ದಿನಗಳ ಹಿಂದೆ ಮಾಜಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಮತ್ತು ಎಚ್.ಡಿ.ಕುಮಾರಸ್ವಾಮಿ ಅವರ ಆಪ್ತ ಸಹಾಯಕರು ಮತ್ತು ಮಾಜಿ ಉಪಮುಖ್ಯಮಂತ್ರಿ ಜಿ.ಪರಮೇಶ್ವರ ಅವರ ಮೇಲೆ ಪೆಗಾಸಸ್ ಕಣ್ಗಾವಲು ಇದ್ದದ್ದು ಬಹಿರಂಗವಾಗಿದೆ. 2019 ರ ಸಮ್ಮಿಶ್ರ ಸರ್ಕಾರ ಉರುಳಲು ಈ ಪೆಗಾಸಸ್ ಗೂಢಚರ್ಯೆ ಕಾರಣವಾಗಿದೆಯೇ ಎಂಬ ಅನುಮಾನಗಳಿಗೆ ಕಾರಣವಾಗಿದೆ. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ದೇಶಾದ್ಯಂತ ಪ್ರತಿಭಟನೆ ನಡೆಸುತ್ತಿದೆ.


ಇದನ್ನೂ ಓದಿ: ಸಮ್ಮಿಶ್ರ ಸರ್ಕಾರ ಉರುಳಲು ಪೆಗಾಸಸ್ ಕಾರಣ? HDK, ಸಿದ್ದು ಆಪ್ತ ಸಹಾಯಕರು, ಜಿ.ಪರಮೇಶ್ವರ್ ಫೋನ್ ಹ್ಯಾಕ್!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...