Homeಕರ್ನಾಟಕಪ್ರಜೆಗಳ ಖಾಸಗಿ ಬದುಕಿನೊಳಗೆ ಇಣುಕಿ ನೋಡುವ ಚಟ ಸಂವಿಧಾನ ವಿರೋಧಿ: ಸಿದ್ದರಾಮಯ್ಯ

ಪ್ರಜೆಗಳ ಖಾಸಗಿ ಬದುಕಿನೊಳಗೆ ಇಣುಕಿ ನೋಡುವ ಚಟ ಸಂವಿಧಾನ ವಿರೋಧಿ: ಸಿದ್ದರಾಮಯ್ಯ

ಮೋದಿಯವರು ಗುಜರಾತ್ ಮುಖ್ಯಮಂತ್ರಿಯಾಗಿದ್ದಾಗಲೇ ಅಮಾಯಕ ಪ್ರಜೆಗಳ ಪೋನ್ ಕದ್ದಾಲಿಕೆ ಮಾಡಿ ಕುಖ್ಯಾತಿ ಪಡೆದವರು. ಅವರ ಹುಟ್ಟುಗುಣ ಸುಲಭದಲ್ಲಿ ಬಿಟ್ಟುಹೋಗುವುದಿಲ್ಲ.

- Advertisement -
- Advertisement -

ಭಾರತದ 300 ಕ್ಕೂ ಹೆಚ್ಚು ಪತ್ರಕರ್ತರು, ವಿರೋಧ ಪಕ್ಷದ ಮುಖಂಡರನ್ನು ಪೆಗಾಸಸ್ ಎಂಬ ಇಸ್ರೇಲಿ ಸ್ಪೈವೇರ್ ಬಳಸಿ ಕಣ್ಗಾವಲು ಇಡಲಾಗಿತ್ತು ಎಂಬ ಸುದ್ದಿ ಬಹಿರಂಗಗೊಂಡ ನಂತರ ವಿರೋಧ ಪಕ್ಷಗಳು ನರೇಂದ್ರ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿವೆ. ಕರ್ನಾಟಕದ ವಿರೋಧ ಪಕ್ಷದ ಮುಖಂಡರಾದ ಸಿದ್ದರಾಮಯ್ಯನವರ ಆಪ್ತ ಸಹಾಯಕರ ಫೋನ್ ಅನ್ನು ಹ್ಯಾಕ್ ಮಾಡಲಾಗಿದ್ದಕ್ಕೆ ಪ್ರತಿಕ್ರಿಯಿಸಿರುವ ಸಿದ್ದರಾಮಯ್ಯನವರು ‘ಇದು ಕೇಂದ್ರ ಸರ್ಕಾರ ಮತ್ತು ಬಿಜೆಪಿ ಮಾಡಿರುವ ಕಾನೂನು ಬಾಹಿರ ಕೃತ್ಯ ಎಂದು ಕಿಡಿಕಾರಿದ್ದಾರೆ.

ಪೋನ್ ಕದ್ದಾಲಿಕೆ ಬಗ್ಗೆ ಸುಳ್ಳನ್ನೇ ಮನೆ ದೇವರನ್ನಾಗಿ ಮಾಡಿಕೊಂಡಿರುವ ಬಿಜೆಪಿ ನಾಯಕರಿಗೆ ಇರುವ ಭಯ ನನಗಿಲ್ಲ. ನುಡಿದಂತೆ ನಡೆಯುವ ಸತ್ಯದ ಹಾದಿ ನನ್ನದು. ಆದರೆ ಪ್ರಜೆಗಳ ಖಾಸಗಿ ಬದುಕಿನೊಳಗೆ ಇಣುಕಿ ನೋಡುವ ಚಟ ಸಂವಿಧಾನ ವಿರೋಧಿ ಮಾತ್ರ ಅಲ್ಲ, ಸಭ್ಯತೆಯ ಸಂಸ್ಕೃತಿಯೂ ಅಲ್ಲ ಎಂದು ಅವರು ಟ್ವೀಟ್ ಮಾಡಿದ್ದಾರೆ.

ಇದರಲ್ಲಿ ಮೋದಿ ಮತ್ತು ಬಿಜೆಪಿ ಭಾಗಿಯಾಗಿದೆ. ಮೋದಿಯವರು ಗುಜರಾತ್ ಮುಖ್ಯಮಂತ್ರಿಯಾಗಿದ್ದಾಗಲೇ ಅಮಾಯಕ ಪ್ರಜೆಗಳ ಪೋನ್ ಕದ್ದಾಲಿಕೆ ಮಾಡಿ ಕುಖ್ಯಾತಿ ಪಡೆದವರು. ಅವರ ಹುಟ್ಟುಗುಣ ಸುಲಭದಲ್ಲಿ ಬಿಟ್ಟುಹೋಗುವುದಿಲ್ಲ. ಹಾಗಾಗಿ ಈ ಪ್ರಕರಣವನ್ನು ಉನ್ನತ ಮಟ್ಟದ ಸಮಿತಿಯ ಮೂಲಕ ತನಿಖೆ ನಡೆಸಬೇಕು ಎಂದು ಆಗ್ರಹಿಸಿದ್ದಾರೆ.

ಇದು ಬಿಜೆಪಿಯವರ “ಡರ್ಟಿ ಗೇಮ್”. ಕೇಂದ್ರ ಸರ್ಕಾರವೇ ನಡೆಸಿರುವ ಈ ಕಾನೂನು ಬಾಹಿರ ಕೃತ್ಯವನ್ನು ಮೇಲ್ಮನೆಯ ಎರಡೂ ಸದನಗಳಲ್ಲಿ ಪ್ರಸ್ತಾಪಿಸಬೇಕು ಎಂದು ಅಧೀರ್ ರಂಜನ್ ಚೌಧರಿ ಹಾಗೂ ಮಲ್ಲಿಕಾರ್ಜುನ ಖರ್ಗೆ ಅವರಲ್ಲಿ ಕೋರುತ್ತೇನೆ ಎಂದು ಸಿದ್ದರಾಮಯ್ಯನವರು ಮನವಿ ಮಾಡಿದ್ದಾರೆ.

ಸಮ್ಮಿಶ್ರ ಸರ್ಕಾರವನ್ನು ಉರುಳಿಸಿದ ಕಾಲದಲ್ಲಿ ನನ್ನ ಆಪ್ತಸಹಾಯಕನ ಪೋನ್ ಕರೆಗಳನ್ನು ಕೇಂದ್ರ ಸರ್ಕಾರ ಟ್ಯಾಪ್ ಮಾಡಿದೆ ಎನ್ನುವುದು ಅಚ್ಚರಿಯ ಸುದ್ದಿ ಅಲ್ಲ. ಬಿಜೆಪಿ ನಾಯಕರು ಅಧಿಕಾರಕ್ಕಾಗಿ ಯಾವ ಮಟ್ಟಕ್ಕೂ ಇಳಿಯಲು ಹೇಸದವರು ಎನ್ನುವುದು ನಮಗೆ ಗೊತ್ತಿದೆ. ಆಮಿಷ, ಬೆದರಿಕೆ ಮತ್ತು ಸುಳ್ಳುಗಳೇ ಆಪರೇಷನ್ ಕಮಲ‌ ಎಂಬ‌ ಪಾತಕದ ಅಸ್ತ್ರಗಳು. ಸಮ್ಮಿಶ್ರ ಸರ್ಕಾರವನ್ನು‌ ಉರುಳಿಸಿ ಅಧಿಕಾರಕ್ಕೆ ಬರಲು ಬಿಜೆಪಿ ಮಾಡಿದ ಕುಕೃತ್ಯಗಳು ಒಂದೊಂದಾಗಿ ಬಯಲಾಗುತ್ತಿದೆ, ಬಿಜೆಪಿ ನಾಯಕರು ಜನರ ಮುಂದೆ ಬೆತ್ತಲಾಗುತ್ತಿದ್ದಾರೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ಪೆಗಾಸಸ್ ಗೂಢಾಚರ್ಯೆಯಲ್ಲಿ‌ ಕೇಂದ್ರ ಸರ್ಕಾರ ಸಿಲುಕಿಕೊಂಡಿದೆ. ಇದು ಮಾನವ ಹಕ್ಕು ಉಲ್ಲಂಘನೆಯಂಥ ಪ್ರಕರಣವಾದರೂ ಇತ್ತೀಚೆಗೆ ಕೇಂದ್ರ ಆದ್ಯತೆ ಮೇಲೆ ಗೂಢಚರ್ಯೆ ನಡೆಸುತ್ತಿರುವುದು ಗುಟ್ಟೇನಲ್ಲ. ಕೇಂದ್ರದಲ್ಲಿ ಅಧಿಕಾರ ಉಳಿಸಿಕೊಳ್ಳಲು, ರಾಜ್ಯಗಳಲ್ಲಿ ಸರ್ಕಾರ ಕೆಡವಿ, ಸರ್ಕಾರವನ್ನು ತರಲು ಬಿಜೆಪಿ ಪ್ರಯೋಗಿಸಿರುವ ಅಸ್ತ್ರಗಳಲ್ಲಿ ಇದೂ ಒಂದು” ಎಂದು ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ ಅಭಿಪ್ರಾಯಪಟ್ಟಿದ್ದಾರೆ.

ನನ್ನ ಮೇಲೆ ಗೂಢಚರ್ಯೆ ನಡೆಸಿದ್ದ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ, ಕೊನೆಗೆ ನನ್ನ ಮೇಲೆ ಫೋನ್ ಕದ್ದಾಲಿಕೆ ಆರೋಪ ಮಾಡಿತು. ಸಿಬಿಐ ತನಿಖೆ ನಡೆಸಿತು. ಅದಾಗಲೇ ಅಪಮಾರ್ಗದಲ್ಲಿ ಹೆಜ್ಜೆ ಹಾಕಿದ್ದ ಬಿಜೆಪಿ, ನನ್ನ ಮೇಲಿನ ತನಿಖೆ ಮೂಲಕ ಆತ್ಮವಂಚನೆಯಿಂದ ನಡೆದುಕೊಂಡಿದೆ. ಅಧಿಕಾರಕ್ಕಾಗಿ ಬಿಜೆಪಿ ಕೀಳು ಮಟ್ಟಕ್ಕಿಳಿಯುತ್ತಿದೆ. ಇದು ಅಪಾಯಕಾರಿ ಎಂದು ಅವರು ಕಿಡಿಕಾರಿದ್ದಾರೆ.

ರಾಜಕಾರಣಿಗಳು, ಅಧಿಕಾರಿಗಳು, ಪತ್ರಕರ್ತರು, ಹೋರಾಟಗಾರರ ಮೇಲೆ ಗೂಢಚರ್ಯೆ ನಡೆಸಿರುವ ಬಿಜೆಪಿ ಮುಂದೊಂದು ದಿನ ಅಗತ್ಯಬಿದ್ದಾಗ ಜನರ ವೈಯಕ್ತಿಕ ಬದುಕಿನಲ್ಲಿ ಇಣುಕದು ಎಂಬುದಕ್ಕೆ ಖಚಿತತೆ ಇದೆಯೇ? ಅಂತ ದಿನ ದೂರವಿಲ್ಲ. ಬಿಜೆಪಿ ದಮನಕಾರಿ ನಡೆ ಈಗ ಮಾನವ ಹಕ್ಕುಗಳತ್ತ ಕೇಂದ್ರೀಕೃತವಾಗಿದೆ. ಬಿಜೆಪಿಯ ಇಂಥ ಕೃತ್ಯಗಳ ಬಗ್ಗೆ ಜನರು ಜಾಗೃತರಾಗಬೇಕು ಎಂದು ಅವರು ತಿಳಿಸಿದ್ದಾರೆ.


ಇದನ್ನೂ ಓದಿ: ಸಮ್ಮಿಶ್ರ ಸರ್ಕಾರ ಉರುಳಲು ಪೆಗಾಸಸ್ ಕಾರಣ? HDK, ಸಿದ್ದು ಆಪ್ತ ಸಹಾಯಕರು, ಜಿ.ಪರಮೇಶ್ವರ್ ಫೋನ್ ಹ್ಯಾಕ್!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...