Homeಕರ್ನಾಟಕಪ್ರಜೆಗಳ ಖಾಸಗಿ ಬದುಕಿನೊಳಗೆ ಇಣುಕಿ ನೋಡುವ ಚಟ ಸಂವಿಧಾನ ವಿರೋಧಿ: ಸಿದ್ದರಾಮಯ್ಯ

ಪ್ರಜೆಗಳ ಖಾಸಗಿ ಬದುಕಿನೊಳಗೆ ಇಣುಕಿ ನೋಡುವ ಚಟ ಸಂವಿಧಾನ ವಿರೋಧಿ: ಸಿದ್ದರಾಮಯ್ಯ

ಮೋದಿಯವರು ಗುಜರಾತ್ ಮುಖ್ಯಮಂತ್ರಿಯಾಗಿದ್ದಾಗಲೇ ಅಮಾಯಕ ಪ್ರಜೆಗಳ ಪೋನ್ ಕದ್ದಾಲಿಕೆ ಮಾಡಿ ಕುಖ್ಯಾತಿ ಪಡೆದವರು. ಅವರ ಹುಟ್ಟುಗುಣ ಸುಲಭದಲ್ಲಿ ಬಿಟ್ಟುಹೋಗುವುದಿಲ್ಲ.

- Advertisement -
- Advertisement -

ಭಾರತದ 300 ಕ್ಕೂ ಹೆಚ್ಚು ಪತ್ರಕರ್ತರು, ವಿರೋಧ ಪಕ್ಷದ ಮುಖಂಡರನ್ನು ಪೆಗಾಸಸ್ ಎಂಬ ಇಸ್ರೇಲಿ ಸ್ಪೈವೇರ್ ಬಳಸಿ ಕಣ್ಗಾವಲು ಇಡಲಾಗಿತ್ತು ಎಂಬ ಸುದ್ದಿ ಬಹಿರಂಗಗೊಂಡ ನಂತರ ವಿರೋಧ ಪಕ್ಷಗಳು ನರೇಂದ್ರ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿವೆ. ಕರ್ನಾಟಕದ ವಿರೋಧ ಪಕ್ಷದ ಮುಖಂಡರಾದ ಸಿದ್ದರಾಮಯ್ಯನವರ ಆಪ್ತ ಸಹಾಯಕರ ಫೋನ್ ಅನ್ನು ಹ್ಯಾಕ್ ಮಾಡಲಾಗಿದ್ದಕ್ಕೆ ಪ್ರತಿಕ್ರಿಯಿಸಿರುವ ಸಿದ್ದರಾಮಯ್ಯನವರು ‘ಇದು ಕೇಂದ್ರ ಸರ್ಕಾರ ಮತ್ತು ಬಿಜೆಪಿ ಮಾಡಿರುವ ಕಾನೂನು ಬಾಹಿರ ಕೃತ್ಯ ಎಂದು ಕಿಡಿಕಾರಿದ್ದಾರೆ.

ಪೋನ್ ಕದ್ದಾಲಿಕೆ ಬಗ್ಗೆ ಸುಳ್ಳನ್ನೇ ಮನೆ ದೇವರನ್ನಾಗಿ ಮಾಡಿಕೊಂಡಿರುವ ಬಿಜೆಪಿ ನಾಯಕರಿಗೆ ಇರುವ ಭಯ ನನಗಿಲ್ಲ. ನುಡಿದಂತೆ ನಡೆಯುವ ಸತ್ಯದ ಹಾದಿ ನನ್ನದು. ಆದರೆ ಪ್ರಜೆಗಳ ಖಾಸಗಿ ಬದುಕಿನೊಳಗೆ ಇಣುಕಿ ನೋಡುವ ಚಟ ಸಂವಿಧಾನ ವಿರೋಧಿ ಮಾತ್ರ ಅಲ್ಲ, ಸಭ್ಯತೆಯ ಸಂಸ್ಕೃತಿಯೂ ಅಲ್ಲ ಎಂದು ಅವರು ಟ್ವೀಟ್ ಮಾಡಿದ್ದಾರೆ.

ಇದರಲ್ಲಿ ಮೋದಿ ಮತ್ತು ಬಿಜೆಪಿ ಭಾಗಿಯಾಗಿದೆ. ಮೋದಿಯವರು ಗುಜರಾತ್ ಮುಖ್ಯಮಂತ್ರಿಯಾಗಿದ್ದಾಗಲೇ ಅಮಾಯಕ ಪ್ರಜೆಗಳ ಪೋನ್ ಕದ್ದಾಲಿಕೆ ಮಾಡಿ ಕುಖ್ಯಾತಿ ಪಡೆದವರು. ಅವರ ಹುಟ್ಟುಗುಣ ಸುಲಭದಲ್ಲಿ ಬಿಟ್ಟುಹೋಗುವುದಿಲ್ಲ. ಹಾಗಾಗಿ ಈ ಪ್ರಕರಣವನ್ನು ಉನ್ನತ ಮಟ್ಟದ ಸಮಿತಿಯ ಮೂಲಕ ತನಿಖೆ ನಡೆಸಬೇಕು ಎಂದು ಆಗ್ರಹಿಸಿದ್ದಾರೆ.

ಇದು ಬಿಜೆಪಿಯವರ “ಡರ್ಟಿ ಗೇಮ್”. ಕೇಂದ್ರ ಸರ್ಕಾರವೇ ನಡೆಸಿರುವ ಈ ಕಾನೂನು ಬಾಹಿರ ಕೃತ್ಯವನ್ನು ಮೇಲ್ಮನೆಯ ಎರಡೂ ಸದನಗಳಲ್ಲಿ ಪ್ರಸ್ತಾಪಿಸಬೇಕು ಎಂದು ಅಧೀರ್ ರಂಜನ್ ಚೌಧರಿ ಹಾಗೂ ಮಲ್ಲಿಕಾರ್ಜುನ ಖರ್ಗೆ ಅವರಲ್ಲಿ ಕೋರುತ್ತೇನೆ ಎಂದು ಸಿದ್ದರಾಮಯ್ಯನವರು ಮನವಿ ಮಾಡಿದ್ದಾರೆ.

ಸಮ್ಮಿಶ್ರ ಸರ್ಕಾರವನ್ನು ಉರುಳಿಸಿದ ಕಾಲದಲ್ಲಿ ನನ್ನ ಆಪ್ತಸಹಾಯಕನ ಪೋನ್ ಕರೆಗಳನ್ನು ಕೇಂದ್ರ ಸರ್ಕಾರ ಟ್ಯಾಪ್ ಮಾಡಿದೆ ಎನ್ನುವುದು ಅಚ್ಚರಿಯ ಸುದ್ದಿ ಅಲ್ಲ. ಬಿಜೆಪಿ ನಾಯಕರು ಅಧಿಕಾರಕ್ಕಾಗಿ ಯಾವ ಮಟ್ಟಕ್ಕೂ ಇಳಿಯಲು ಹೇಸದವರು ಎನ್ನುವುದು ನಮಗೆ ಗೊತ್ತಿದೆ. ಆಮಿಷ, ಬೆದರಿಕೆ ಮತ್ತು ಸುಳ್ಳುಗಳೇ ಆಪರೇಷನ್ ಕಮಲ‌ ಎಂಬ‌ ಪಾತಕದ ಅಸ್ತ್ರಗಳು. ಸಮ್ಮಿಶ್ರ ಸರ್ಕಾರವನ್ನು‌ ಉರುಳಿಸಿ ಅಧಿಕಾರಕ್ಕೆ ಬರಲು ಬಿಜೆಪಿ ಮಾಡಿದ ಕುಕೃತ್ಯಗಳು ಒಂದೊಂದಾಗಿ ಬಯಲಾಗುತ್ತಿದೆ, ಬಿಜೆಪಿ ನಾಯಕರು ಜನರ ಮುಂದೆ ಬೆತ್ತಲಾಗುತ್ತಿದ್ದಾರೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ಪೆಗಾಸಸ್ ಗೂಢಾಚರ್ಯೆಯಲ್ಲಿ‌ ಕೇಂದ್ರ ಸರ್ಕಾರ ಸಿಲುಕಿಕೊಂಡಿದೆ. ಇದು ಮಾನವ ಹಕ್ಕು ಉಲ್ಲಂಘನೆಯಂಥ ಪ್ರಕರಣವಾದರೂ ಇತ್ತೀಚೆಗೆ ಕೇಂದ್ರ ಆದ್ಯತೆ ಮೇಲೆ ಗೂಢಚರ್ಯೆ ನಡೆಸುತ್ತಿರುವುದು ಗುಟ್ಟೇನಲ್ಲ. ಕೇಂದ್ರದಲ್ಲಿ ಅಧಿಕಾರ ಉಳಿಸಿಕೊಳ್ಳಲು, ರಾಜ್ಯಗಳಲ್ಲಿ ಸರ್ಕಾರ ಕೆಡವಿ, ಸರ್ಕಾರವನ್ನು ತರಲು ಬಿಜೆಪಿ ಪ್ರಯೋಗಿಸಿರುವ ಅಸ್ತ್ರಗಳಲ್ಲಿ ಇದೂ ಒಂದು” ಎಂದು ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ ಅಭಿಪ್ರಾಯಪಟ್ಟಿದ್ದಾರೆ.

ನನ್ನ ಮೇಲೆ ಗೂಢಚರ್ಯೆ ನಡೆಸಿದ್ದ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ, ಕೊನೆಗೆ ನನ್ನ ಮೇಲೆ ಫೋನ್ ಕದ್ದಾಲಿಕೆ ಆರೋಪ ಮಾಡಿತು. ಸಿಬಿಐ ತನಿಖೆ ನಡೆಸಿತು. ಅದಾಗಲೇ ಅಪಮಾರ್ಗದಲ್ಲಿ ಹೆಜ್ಜೆ ಹಾಕಿದ್ದ ಬಿಜೆಪಿ, ನನ್ನ ಮೇಲಿನ ತನಿಖೆ ಮೂಲಕ ಆತ್ಮವಂಚನೆಯಿಂದ ನಡೆದುಕೊಂಡಿದೆ. ಅಧಿಕಾರಕ್ಕಾಗಿ ಬಿಜೆಪಿ ಕೀಳು ಮಟ್ಟಕ್ಕಿಳಿಯುತ್ತಿದೆ. ಇದು ಅಪಾಯಕಾರಿ ಎಂದು ಅವರು ಕಿಡಿಕಾರಿದ್ದಾರೆ.

ರಾಜಕಾರಣಿಗಳು, ಅಧಿಕಾರಿಗಳು, ಪತ್ರಕರ್ತರು, ಹೋರಾಟಗಾರರ ಮೇಲೆ ಗೂಢಚರ್ಯೆ ನಡೆಸಿರುವ ಬಿಜೆಪಿ ಮುಂದೊಂದು ದಿನ ಅಗತ್ಯಬಿದ್ದಾಗ ಜನರ ವೈಯಕ್ತಿಕ ಬದುಕಿನಲ್ಲಿ ಇಣುಕದು ಎಂಬುದಕ್ಕೆ ಖಚಿತತೆ ಇದೆಯೇ? ಅಂತ ದಿನ ದೂರವಿಲ್ಲ. ಬಿಜೆಪಿ ದಮನಕಾರಿ ನಡೆ ಈಗ ಮಾನವ ಹಕ್ಕುಗಳತ್ತ ಕೇಂದ್ರೀಕೃತವಾಗಿದೆ. ಬಿಜೆಪಿಯ ಇಂಥ ಕೃತ್ಯಗಳ ಬಗ್ಗೆ ಜನರು ಜಾಗೃತರಾಗಬೇಕು ಎಂದು ಅವರು ತಿಳಿಸಿದ್ದಾರೆ.


ಇದನ್ನೂ ಓದಿ: ಸಮ್ಮಿಶ್ರ ಸರ್ಕಾರ ಉರುಳಲು ಪೆಗಾಸಸ್ ಕಾರಣ? HDK, ಸಿದ್ದು ಆಪ್ತ ಸಹಾಯಕರು, ಜಿ.ಪರಮೇಶ್ವರ್ ಫೋನ್ ಹ್ಯಾಕ್!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...

ಬಿಹಾರ: ನಕಲಿ ದಾಖಲೆ ನೀಡಿ ಕೆಲಸ ಗಿಟ್ಟಿಸಿದ್ದ 3,000ಕ್ಕೂ ಹೆಚ್ಚು ಶಿಕ್ಷಕರು ವಜಾ!

ನಕಲಿ ಪದವಿ ಹಾಗೂ ನಕಲಿ ಶೈಕ್ಷಣಿಕ ಪ್ರಮಾಣಪತ್ರಗಳನ್ನು ನೀಡಿ ಸರ್ಕಾರಿ ಶಾಲೆಗಳಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದ 3,000ಕ್ಕೂ ಹೆಚ್ಚು ಶಿಕ್ಷಕರನ್ನು ಸೇವೆಯಿಂದ ವಜಾಗೊಳಿಸಲು ಬಿಹಾರ ಸರ್ಕಾರ ನಿರ್ಧರಿಸಿದೆ. ಈ ಕುರಿತು ಶುಕ್ರವಾರ ಅಧಿಕೃತ ಪ್ರಕಟಣೆ...

TMC ತೊರೆದು BJP ಸೇರಿದ ಮಾಜಿ ಸಂಸದರಿಗೆ ಬಿಜೆಪಿಯಿಂದ ರಾಜ್ಯಸಭಾ ಟಿಕೆಟ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (TMC) ಪಕ್ಷದ ರಾಜ್ಯಸಭಾ ಸ್ಥಾನಗಳಿಗೆ ರಾಜೀನಾಮೆ ನೀಡಿದ ಕೆಲವೇ ವಾರಗಳಲ್ಲಿ, ಆ ಮೂವರು ಮಾಜಿ ಸಂಸದರು ಈಗ ಬೇರೆ ಬಣ್ಣದ (BJP) ಶಾಲು ಧರಿಸಿ ಮತ್ತೆ...