Homeಕರ್ನಾಟಕಪ್ರಜೆಗಳ ಖಾಸಗಿ ಬದುಕಿನೊಳಗೆ ಇಣುಕಿ ನೋಡುವ ಚಟ ಸಂವಿಧಾನ ವಿರೋಧಿ: ಸಿದ್ದರಾಮಯ್ಯ

ಪ್ರಜೆಗಳ ಖಾಸಗಿ ಬದುಕಿನೊಳಗೆ ಇಣುಕಿ ನೋಡುವ ಚಟ ಸಂವಿಧಾನ ವಿರೋಧಿ: ಸಿದ್ದರಾಮಯ್ಯ

ಮೋದಿಯವರು ಗುಜರಾತ್ ಮುಖ್ಯಮಂತ್ರಿಯಾಗಿದ್ದಾಗಲೇ ಅಮಾಯಕ ಪ್ರಜೆಗಳ ಪೋನ್ ಕದ್ದಾಲಿಕೆ ಮಾಡಿ ಕುಖ್ಯಾತಿ ಪಡೆದವರು. ಅವರ ಹುಟ್ಟುಗುಣ ಸುಲಭದಲ್ಲಿ ಬಿಟ್ಟುಹೋಗುವುದಿಲ್ಲ.

- Advertisement -
- Advertisement -

ಭಾರತದ 300 ಕ್ಕೂ ಹೆಚ್ಚು ಪತ್ರಕರ್ತರು, ವಿರೋಧ ಪಕ್ಷದ ಮುಖಂಡರನ್ನು ಪೆಗಾಸಸ್ ಎಂಬ ಇಸ್ರೇಲಿ ಸ್ಪೈವೇರ್ ಬಳಸಿ ಕಣ್ಗಾವಲು ಇಡಲಾಗಿತ್ತು ಎಂಬ ಸುದ್ದಿ ಬಹಿರಂಗಗೊಂಡ ನಂತರ ವಿರೋಧ ಪಕ್ಷಗಳು ನರೇಂದ್ರ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿವೆ. ಕರ್ನಾಟಕದ ವಿರೋಧ ಪಕ್ಷದ ಮುಖಂಡರಾದ ಸಿದ್ದರಾಮಯ್ಯನವರ ಆಪ್ತ ಸಹಾಯಕರ ಫೋನ್ ಅನ್ನು ಹ್ಯಾಕ್ ಮಾಡಲಾಗಿದ್ದಕ್ಕೆ ಪ್ರತಿಕ್ರಿಯಿಸಿರುವ ಸಿದ್ದರಾಮಯ್ಯನವರು ‘ಇದು ಕೇಂದ್ರ ಸರ್ಕಾರ ಮತ್ತು ಬಿಜೆಪಿ ಮಾಡಿರುವ ಕಾನೂನು ಬಾಹಿರ ಕೃತ್ಯ ಎಂದು ಕಿಡಿಕಾರಿದ್ದಾರೆ.

ಪೋನ್ ಕದ್ದಾಲಿಕೆ ಬಗ್ಗೆ ಸುಳ್ಳನ್ನೇ ಮನೆ ದೇವರನ್ನಾಗಿ ಮಾಡಿಕೊಂಡಿರುವ ಬಿಜೆಪಿ ನಾಯಕರಿಗೆ ಇರುವ ಭಯ ನನಗಿಲ್ಲ. ನುಡಿದಂತೆ ನಡೆಯುವ ಸತ್ಯದ ಹಾದಿ ನನ್ನದು. ಆದರೆ ಪ್ರಜೆಗಳ ಖಾಸಗಿ ಬದುಕಿನೊಳಗೆ ಇಣುಕಿ ನೋಡುವ ಚಟ ಸಂವಿಧಾನ ವಿರೋಧಿ ಮಾತ್ರ ಅಲ್ಲ, ಸಭ್ಯತೆಯ ಸಂಸ್ಕೃತಿಯೂ ಅಲ್ಲ ಎಂದು ಅವರು ಟ್ವೀಟ್ ಮಾಡಿದ್ದಾರೆ.

ಇದರಲ್ಲಿ ಮೋದಿ ಮತ್ತು ಬಿಜೆಪಿ ಭಾಗಿಯಾಗಿದೆ. ಮೋದಿಯವರು ಗುಜರಾತ್ ಮುಖ್ಯಮಂತ್ರಿಯಾಗಿದ್ದಾಗಲೇ ಅಮಾಯಕ ಪ್ರಜೆಗಳ ಪೋನ್ ಕದ್ದಾಲಿಕೆ ಮಾಡಿ ಕುಖ್ಯಾತಿ ಪಡೆದವರು. ಅವರ ಹುಟ್ಟುಗುಣ ಸುಲಭದಲ್ಲಿ ಬಿಟ್ಟುಹೋಗುವುದಿಲ್ಲ. ಹಾಗಾಗಿ ಈ ಪ್ರಕರಣವನ್ನು ಉನ್ನತ ಮಟ್ಟದ ಸಮಿತಿಯ ಮೂಲಕ ತನಿಖೆ ನಡೆಸಬೇಕು ಎಂದು ಆಗ್ರಹಿಸಿದ್ದಾರೆ.

ಇದು ಬಿಜೆಪಿಯವರ “ಡರ್ಟಿ ಗೇಮ್”. ಕೇಂದ್ರ ಸರ್ಕಾರವೇ ನಡೆಸಿರುವ ಈ ಕಾನೂನು ಬಾಹಿರ ಕೃತ್ಯವನ್ನು ಮೇಲ್ಮನೆಯ ಎರಡೂ ಸದನಗಳಲ್ಲಿ ಪ್ರಸ್ತಾಪಿಸಬೇಕು ಎಂದು ಅಧೀರ್ ರಂಜನ್ ಚೌಧರಿ ಹಾಗೂ ಮಲ್ಲಿಕಾರ್ಜುನ ಖರ್ಗೆ ಅವರಲ್ಲಿ ಕೋರುತ್ತೇನೆ ಎಂದು ಸಿದ್ದರಾಮಯ್ಯನವರು ಮನವಿ ಮಾಡಿದ್ದಾರೆ.

ಸಮ್ಮಿಶ್ರ ಸರ್ಕಾರವನ್ನು ಉರುಳಿಸಿದ ಕಾಲದಲ್ಲಿ ನನ್ನ ಆಪ್ತಸಹಾಯಕನ ಪೋನ್ ಕರೆಗಳನ್ನು ಕೇಂದ್ರ ಸರ್ಕಾರ ಟ್ಯಾಪ್ ಮಾಡಿದೆ ಎನ್ನುವುದು ಅಚ್ಚರಿಯ ಸುದ್ದಿ ಅಲ್ಲ. ಬಿಜೆಪಿ ನಾಯಕರು ಅಧಿಕಾರಕ್ಕಾಗಿ ಯಾವ ಮಟ್ಟಕ್ಕೂ ಇಳಿಯಲು ಹೇಸದವರು ಎನ್ನುವುದು ನಮಗೆ ಗೊತ್ತಿದೆ. ಆಮಿಷ, ಬೆದರಿಕೆ ಮತ್ತು ಸುಳ್ಳುಗಳೇ ಆಪರೇಷನ್ ಕಮಲ‌ ಎಂಬ‌ ಪಾತಕದ ಅಸ್ತ್ರಗಳು. ಸಮ್ಮಿಶ್ರ ಸರ್ಕಾರವನ್ನು‌ ಉರುಳಿಸಿ ಅಧಿಕಾರಕ್ಕೆ ಬರಲು ಬಿಜೆಪಿ ಮಾಡಿದ ಕುಕೃತ್ಯಗಳು ಒಂದೊಂದಾಗಿ ಬಯಲಾಗುತ್ತಿದೆ, ಬಿಜೆಪಿ ನಾಯಕರು ಜನರ ಮುಂದೆ ಬೆತ್ತಲಾಗುತ್ತಿದ್ದಾರೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ಪೆಗಾಸಸ್ ಗೂಢಾಚರ್ಯೆಯಲ್ಲಿ‌ ಕೇಂದ್ರ ಸರ್ಕಾರ ಸಿಲುಕಿಕೊಂಡಿದೆ. ಇದು ಮಾನವ ಹಕ್ಕು ಉಲ್ಲಂಘನೆಯಂಥ ಪ್ರಕರಣವಾದರೂ ಇತ್ತೀಚೆಗೆ ಕೇಂದ್ರ ಆದ್ಯತೆ ಮೇಲೆ ಗೂಢಚರ್ಯೆ ನಡೆಸುತ್ತಿರುವುದು ಗುಟ್ಟೇನಲ್ಲ. ಕೇಂದ್ರದಲ್ಲಿ ಅಧಿಕಾರ ಉಳಿಸಿಕೊಳ್ಳಲು, ರಾಜ್ಯಗಳಲ್ಲಿ ಸರ್ಕಾರ ಕೆಡವಿ, ಸರ್ಕಾರವನ್ನು ತರಲು ಬಿಜೆಪಿ ಪ್ರಯೋಗಿಸಿರುವ ಅಸ್ತ್ರಗಳಲ್ಲಿ ಇದೂ ಒಂದು” ಎಂದು ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ ಅಭಿಪ್ರಾಯಪಟ್ಟಿದ್ದಾರೆ.

ನನ್ನ ಮೇಲೆ ಗೂಢಚರ್ಯೆ ನಡೆಸಿದ್ದ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ, ಕೊನೆಗೆ ನನ್ನ ಮೇಲೆ ಫೋನ್ ಕದ್ದಾಲಿಕೆ ಆರೋಪ ಮಾಡಿತು. ಸಿಬಿಐ ತನಿಖೆ ನಡೆಸಿತು. ಅದಾಗಲೇ ಅಪಮಾರ್ಗದಲ್ಲಿ ಹೆಜ್ಜೆ ಹಾಕಿದ್ದ ಬಿಜೆಪಿ, ನನ್ನ ಮೇಲಿನ ತನಿಖೆ ಮೂಲಕ ಆತ್ಮವಂಚನೆಯಿಂದ ನಡೆದುಕೊಂಡಿದೆ. ಅಧಿಕಾರಕ್ಕಾಗಿ ಬಿಜೆಪಿ ಕೀಳು ಮಟ್ಟಕ್ಕಿಳಿಯುತ್ತಿದೆ. ಇದು ಅಪಾಯಕಾರಿ ಎಂದು ಅವರು ಕಿಡಿಕಾರಿದ್ದಾರೆ.

ರಾಜಕಾರಣಿಗಳು, ಅಧಿಕಾರಿಗಳು, ಪತ್ರಕರ್ತರು, ಹೋರಾಟಗಾರರ ಮೇಲೆ ಗೂಢಚರ್ಯೆ ನಡೆಸಿರುವ ಬಿಜೆಪಿ ಮುಂದೊಂದು ದಿನ ಅಗತ್ಯಬಿದ್ದಾಗ ಜನರ ವೈಯಕ್ತಿಕ ಬದುಕಿನಲ್ಲಿ ಇಣುಕದು ಎಂಬುದಕ್ಕೆ ಖಚಿತತೆ ಇದೆಯೇ? ಅಂತ ದಿನ ದೂರವಿಲ್ಲ. ಬಿಜೆಪಿ ದಮನಕಾರಿ ನಡೆ ಈಗ ಮಾನವ ಹಕ್ಕುಗಳತ್ತ ಕೇಂದ್ರೀಕೃತವಾಗಿದೆ. ಬಿಜೆಪಿಯ ಇಂಥ ಕೃತ್ಯಗಳ ಬಗ್ಗೆ ಜನರು ಜಾಗೃತರಾಗಬೇಕು ಎಂದು ಅವರು ತಿಳಿಸಿದ್ದಾರೆ.


ಇದನ್ನೂ ಓದಿ: ಸಮ್ಮಿಶ್ರ ಸರ್ಕಾರ ಉರುಳಲು ಪೆಗಾಸಸ್ ಕಾರಣ? HDK, ಸಿದ್ದು ಆಪ್ತ ಸಹಾಯಕರು, ಜಿ.ಪರಮೇಶ್ವರ್ ಫೋನ್ ಹ್ಯಾಕ್!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...