Homeಕರ್ನಾಟಕಪೆಗಾಸಸ್ ಹಗರಣ: ಅಮಿತ್ ಶಾ ಮೇಲೆ ನೇರ ಆರೋಪ ಹೊರಿಸಿದ ಕಾಂಗ್ರೆಸ್

ಪೆಗಾಸಸ್ ಹಗರಣ: ಅಮಿತ್ ಶಾ ಮೇಲೆ ನೇರ ಆರೋಪ ಹೊರಿಸಿದ ಕಾಂಗ್ರೆಸ್

- Advertisement -
- Advertisement -

ದೇಶದಲ್ಲಿ ಆತಂಕ, ಕೋಲಾಹಲಕ್ಕೆ ಕಾರಣವಾಗಿರುವ ಪೆಗಾಸಸ್ ಸ್ಪೈವೇರ್‌ ಹಗರಣಕ್ಕೆ ಸಂಬಂಧ ಪಟ್ಟಂತೆ ಕರ್ನಾಟಕ ಕಾಂಗ್ರೆಸ್ ಅಮಿತ್ ಶಾ ವಿರುದ್ಧ ನೇರ ಆರೋಪ ಮಾಡಿದೆ. ಈ ಹಗರಣದಲ್ಲಿ ಗೃಹ ಸಚಿವ ಅಮಿತ್ ಶಾ ಅವರ ನೇರ ಕೈವಾಡವಿದೆ ಎಂದು ಆರೋಪಿಸಿದೆ.

ಮಂಗಳವಾರವಷ್ಟೇ ಮಾಜಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಮತ್ತು ಎಚ್.ಡಿ.ಕುಮಾರಸ್ವಾಮಿ ಅವರ ಆಪ್ತ ಸಹಾಯಕರು ಮತ್ತು ಮಾಜಿ ಉಪಮುಖ್ಯಮಂತ್ರಿ ಜಿ.ಪರಮೇಶ್ವರ ಅವರ ಮೇಲೆ ಪೆಗಾಸಸ್ ಕಣ್ಗಾವಲು ಇದ್ದದ್ದು  ಬಹಿರಂಗವಾಗಿದೆ. 2019 ರ ಸಮ್ಮಿಶ್ರ ಸರ್ಕಾರ ಉರುಳಲು ಈ ಪೆಗಾಸಸ್ ಗೂಢಚರ್ಯೆ ಕಾರಣವಾಗಿದೆಯೇ ಎಂಬ ಅನುಮಾನಗಳಿಗೆ ಕಾರಣವಾಗಿದೆ.

“ಪೆಗಾಸಸ್ ಹಗರಣದಲ್ಲಿ ಕೇಂದ್ರ ಗೃಹಮಂತ್ರಿ ಅಮಿತ್ ಶಾ ಅವರ ನೇರ ಕೈವಾಡವಿದೆ. ರಾಜ್ಯದಲ್ಲಿ ಸಮ್ಮಿಶ್ರ ಸರ್ಕಾರ ಉರುಳಿಸುವಲ್ಲಿ ಅವರ ಪಾತ್ರ ಪ್ರಮುಖವಾಗಿದ್ದಿದ್ದು ಸ್ಪಷ್ಟ. ಇಂತಹದ್ದೇ ಸ್ನೂಪ್ ಗೇಟ್ ಹಗರಣ ನಡೆಸಿದ ಇತಿಹಾಸ ಅವರಿಗಿದೆ. ಕೂಡಲೇ ಅಮಿತ್ ಶಾ ರಾಜೀನಾಮೆ ನೀಡಿ, ತನಿಖೆ ಎದುರಿಸಬೇಕು” ಎಂದು ಕರ್ನಾಟಕ ಕಾಂಗ್ರೆಸ್ ಟ್ವೀಟ್ ಮೂಲಕ ಆರೋಪಿಸಿದೆ.

ಇದನ್ನೂ ಓದಿ: ಫೋನ್ ಹ್ಯಾಕ್ ಮಾಡಿಯೂ ಬಿಜೆಪಿಗೆ ಚುನಾವಣೆ ಗೆಲ್ಲಲು ಸಾಧ್ಯವಾಗಲಿಲ್ಲ: ಟಿಎಂಸಿ

 

ಸೋರಿಕೆಯಾಗಿರುವ ದತ್ತಾಂಶದ ಪ್ರಕಾರ, ಆಗಿನ ಸಮ್ಮಿಶ್ರ ಸರ್ಕಾರದಲ್ಲಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರ ಆಪ್ತ ಸಹಾಯಕರಾಗಿದ್ದ ಸತೀಶ್ ಅವರಿಗೆ ಸಂಬಂಧಿಸಿದ ಎರಡು ಫೋನ್ ಸಂಖ್ಯೆಗಳನ್ನು ಪೆಗಾಸಸ್‌ ಟಾರ್ಗೆಟ್ ಮಾಡಲಾಗಿದೆ. ಇನ್ನು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆಪ್ತ ಸಹಾಯಕರಾಗಿದ್ದ ವೆಂಕಟೇಶ್ ಅವರ ದೂರವಾಣಿ ಸಂಖ್ಯೆಯನ್ನು ಸಹ ಇದೇ ಅವಧಿಯಲ್ಲಿ ಸೇರಿಸಲಾಗಿದೆ ಎಂದು ವರದಿ ಬಹಿರಂಗ ಪಡಿಸಿದೆ.

“ಪೋನ್ ಕದ್ದಾಲಿಕೆ ಬಗ್ಗೆ ಸುಳ್ಳನ್ನೇ ಮನೆ ದೇವರನ್ನಾಗಿ ಮಾಡಿಕೊಂಡಿರುವ ಬಿಜೆಪಿ ನಾಯಕರಿಗೆ ಇರುವ ಭಯ ನನಗಿಲ್ಲ. ನುಡಿದಂತೆ ನಡೆಯುವ ಸತ್ಯದ ಹಾದಿ ನನ್ನದು. ಆದರೆ ಪ್ರಜೆಗಳ ಖಾಸಗಿ ಬದುಕಿನೊಳಗೆ ಇಣುಕಿ ನೋಡುವ ಚಟ ಸಂವಿಧಾನ ವಿರೋಧಿ ಮಾತ್ರ ಅಲ್ಲ, ಸಭ್ಯತೆಯ ಸಂಸ್ಕೃತಿಯೂ ಅಲ್ಲ” ಎಂದು  ಸಿದ್ದರಾಮಯ್ಯ ಟ್ವೀಟ್ ಮೂಲಕ ಕಿಡಿ ಕಾರಿದ್ದಾರೆ.

ಇವರ ಜೊತೆಗೆ  ಮಾಜಿ ಪ್ರಧಾನಿ ಮತ್ತು ಜೆಡಿಎಸ್ ಅಧ್ಯಕ್ಷ ಎಚ್.ಡಿ.ದೇವೇಗೌಡ ಅವರ ಭದ್ರತಾ ಸಿಬ್ಬಂದಿಯಲ್ಲಿ ಒಬ್ಬರಾಗಿದ್ದ ಮಂಜುನಾಥ್ ಮುದ್ದೇಗೌಡ ಎಂಬ ಪೊಲೀಸ್ ಅಧಿಕಾರಿಯ ಪೋನ್ ನಂಬರ್ ಕೂಡ ಹ್ಯಾಕ್ ಮಾಡಲಾಗಿದೆ ಎಂಬುದು ಬಹಿರಂಗವಾಗಿದೆ.


ಇದನ್ನೂ ಓದಿ: ಸಮ್ಮಿಶ್ರ ಸರ್ಕಾರ ಉರುಳಲು ಪೆಗಾಸಸ್ ಕಾರಣ? HDK, ಸಿದ್ದು ಆಪ್ತ ಸಹಾಯಕರು, ಜಿ.ಪರಮೇಶ್ವರ್ ಫೋನ್ ಹ್ಯಾಕ್!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...

‘ಬೀಬಿ ನೀನು ಅಡಗಿಕೊಳ್ಳಲು ಸಾಧ್ಯವಿಲ್ಲ’: ವಾಷಿಂಗ್ಟನ್‌ ಗೆ ಭೇಟಿ ನೀಡಿದ ನೆತನ್ಯಾಹು ವಿರುದ್ಧ ಜನಾಕ್ರೋಶ: ಐಸಿಸಿ ವಾರಂಟ್ ನಿರ್ಲಕ್ಷಿಸಿ ಟ್ರಂಪ್ ಆತಿಥ್ಯ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗಿನ ಮಾತುಕತೆಗಾಗಿ ವಾಷಿಂಗ್ಟನ್ ಡಿಸಿಗೆ ಭೇಟಿ ನೀಡುತ್ತಿದ್ದಂತೆಯೇ, ರಾಜಧಾನಿಯಾದ್ಯಂತ ಅವರ ವಿರುದ್ಧ ಕಟು ಆಕ್ರೋಶ ಮತ್ತು ಪ್ರತಿಭಟನೆಗಳ ಕಾವು ತೀವ್ರಗೊಂಡಿದೆ. ಅಂತರರಾಷ್ಟ್ರೀಯ...

SIR: ಕರ್ನಾಟಕದಲ್ಲಿ 43 ಲಕ್ಷಕ್ಕೂ ಹೆಚ್ಚು ಜನರಿಂದ ಸಿಗದ ಸಹಿ ಮಾಡಿದ ನಮೂನೆ; ಕರಡು ಪಟ್ಟಿಯಿಂದ ಹೆಸರು ಕೈಬಿಡುವ ಭೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಪ್ರಮುಖ ಮೈಲಿಗಲ್ಲುಗಳನ್ನು ತಲುಪಿದ್ದು, ರಾಜ್ಯಾದ್ಯಂತ ಶೇಕಡಾ 77ರಷ್ಟು ಗಣತಿ ನಮೂನೆಗಳು ಡಿಜಿಟಲೀಕರಣಗೊಂಡಿವೆ. ಆದಾಗ್ಯೂ, ರಾಜ್ಯದ 43.24 ಲಕ್ಷಕ್ಕೂ ಹೆಚ್ಚು ಮತದಾರರು...