Homeಮುಖಪುಟಪೆಗಾಸಸ್‌: ರಾಷ್ಟ್ರೀಯ ಭದ್ರತೆಗೆ ಧಕ್ಕೆಯಾಗುವ ವಿಷಯ ಬಹಿರಂಗಪಡಿಸುವ ಅಗತ್ಯವಿಲ್ಲ- ಸುಪ್ರೀಂ

ಪೆಗಾಸಸ್‌: ರಾಷ್ಟ್ರೀಯ ಭದ್ರತೆಗೆ ಧಕ್ಕೆಯಾಗುವ ವಿಷಯ ಬಹಿರಂಗಪಡಿಸುವ ಅಗತ್ಯವಿಲ್ಲ- ಸುಪ್ರೀಂ

- Advertisement -
- Advertisement -

ಪೆಗಾಸಸ್‌ ಗೂಢಚಾರ ಪ್ರಕರಣದ ಬಗ್ಗೆ ಸ್ವತಂತ್ರ ತನಿಖೆ ನಡೆಸುವಂತೆ ಕೋರಿ ಸಲ್ಲಿಕೆಯಾಗಿದ್ದ ಅರ್ಜಿಯ ಕುರಿತು ಸುಪ್ರೀಂಕೋರ್ಟ್ ಮಂಗಳವಾರದಂದು ಒಕ್ಕೂಟ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದೆ. ಆದರೆ ರಾಷ್ಟ್ರೀಯ ಭದ್ರತೆಗೆ ಧಕ್ಕೆಯಾಗುವಂತಹ ಯಾವುದೇ ವಿಷಯವನ್ನು ಸರ್ಕಾರ ಬಹಿರಂಗಪಡಿಸುವ ಅಗತ್ಯವಿಲ್ಲ ಎಂದು ಅದು ಸ್ಪಷ್ಟಪಡಿಸಿದೆ.

ಮುಖ್ಯ ನ್ಯಾಯಮೂರ್ತಿ ಎನ್.ವಿ. ರಮಣ ನೇತೃತ್ವದ ನ್ಯಾಯಪೀಠವು ಮನವಿಗಳ ಕುರಿತು ಒಕ್ಕೂಟ ಸರ್ಕಾರದ ಪ್ರತಿಕ್ರಿಯೆಯನ್ನು ಕೋರಿತು. ಜೊತೆಗೆ 10 ದಿನಗಳ ನಂತರ ಈ ವಿಷಯವನ್ನು ಕೈಗೆತ್ತಿಕೊಳ್ಳಲಾಗುವುದು ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಪೆಗಾಸಸ್ ಹಗರಣ: ನ್ಯಾಯಾಂಗ ತನಿಖೆಗೆ ಒತ್ತಾಯಿಸಿ ಸುಪ್ರೀಂ ಮೆಟ್ಟಿಲೇರಿದ ಹಿರಿಯ ಪತ್ರಕರ್ತರು

ನ್ಯಾಯಮೂರ್ತಿಗಳಾದ ಸೂರ್ಯಕಾಂತ್ ಮತ್ತು ಅನಿರುದ್ಧ ಬೋಸ್ ಅವರನ್ನೊಳಗೊಂಡ ನ್ಯಾಯಪೀಠವು, ರಾಷ್ಟ್ರೀಯ ಭದ್ರತೆಗೆ ಧಕ್ಕೆ ತರುವಂತಹ ಯಾವುದಾದರು ವಿಷಯವನ್ನು ಸರ್ಕಾರ ಬಹಿರಂಗಪಡಿಸಬೇಕು ಎಂದು ಸುಪ್ರೀಂ ಕೋರ್ಟ್ ಬಯಸುವುದಿಲ್ಲ ಎಂದು ಒಕ್ಕೂಟ ಸರ್ಕಾರವನ್ನು ಪ್ರತಿನಿಧಿಸುವ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರಿಗೆ ಹೇಳಿದೆ.

ಪೆಗಾಸಸ್‌ ಗೂಢಚಾರ ಪ್ರಕರಣದ ಬಗ್ಗೆ ಅರ್ಜಿದಾರರು ಕೇಳಿದಂತೆ ಅಫಿಡವಿಟ್‌ನಲ್ಲಿ ಮಾಹಿತಿಯನ್ನು ಬಹಿರಂಗಪಡಿಸುವುದು ರಾಷ್ಟ್ರೀಯ ಭದ್ರತೆಯ ಅಂಶಗಳನ್ನು ಒಳಗೊಂಡಿರುತ್ತದೆ ಎಂದು ತುಷಾರ್‌‌ ಮೆಹ್ತಾ ವಾದಿಸಿದ್ದು, ಇದರ ನಂತರ ಸುಪ್ರೀಂಕೋರ್ಟ್ ಮೇಲಿನಂತೆ ಅಭಿಪ್ರಾಯಪಟ್ಟಿದೆ.

ಇದನ್ನೂ ಓದಿ: ಮಾನ್ಸೂನ್ ಅಧಿವೇಶನ: ಪೆಗಾಸಸ್, ಕೃಷಿ ಕಾಯ್ದೆಗಳ ವಿರೋಧಿಸಿ ಪ್ರತಿಪಕ್ಷಗಳ ಪ್ರತಿಭಟನೆ

ಪೆಗಾಸಸ್‌‌ ಗೂಢಚಾರ ಕುರಿತು ಸ್ವತಂತ್ರ ತನಿಖೆ ನಡೆಸುವಂತೆ ಕೋರಿ ಎಡಿಟರ್ಸ್ ಗಿಲ್ಡ್ ಆಫ್ ಇಂಡಿಯಾ ಸಲ್ಲಿಸಿದ್ದ ಅರ್ಜಿ ಸೇರಿದಂತೆ ನ್ಯಾಯಾಲಯವು ಒಂದು ಬ್ಯಾಚ್‌‌‌ನ ವಿಚಾರಣೆ ನಡೆಸುತ್ತಿದೆ.

ಇಸ್ರೇಲ್ ಮೂಲದ NSO ಸಂಸ್ಥೆಯ ಗೂಢಚಾರ ತಂತ್ರಾಂಶವಾದ ಪೆಗಾಸಸ್ ಅನ್ನು ಬಳಸಿಕೊಂಡು ಭಾರತದ ಗಣ್ಯ ವ್ಯಕ್ತಿಗಳು, ರಾಜಕಾರಣಿಗಳು ಮತ್ತು ಪತ್ರಕರ್ತರ ಮೇಲೆ ಗೂಢಚಾರ ಮಾಡಿದ ಬಗ್ಗೆ ಕಳೆದ ತಿಂಗಳು ವಿವಾದವೆದ್ದಿತ್ತು.

ಪೆಗಾಸಸ್ ಬಳಸಿ ಕಣ್ಗಾವಲು ಮಾಡುವ ಸಂಭಾವ್ಯ ಗುರಿಗಳ ಪಟ್ಟಿಯಲ್ಲಿ 300 ಕ್ಕೂ ಹೆಚ್ಚು ಭಾರತೀಯ ಮೊಬೈಲ್ ಫೋನ್ ಸಂಖ್ಯೆಗಳಿವೆ ಎಂದು ಅಂತರಾಷ್ಟ್ರೀಯ ಮಾಧ್ಯಮ ಒಕ್ಕೂಟ ತನ್ನ ವರದಿಯಲ್ಲಿ ಹೇಳಿತ್ತು.

ಇದನ್ನೂ ಓದಿ: ಪೆಗಾಸಸ್ ಗೂಢಚರ್ಯೆ ಸಮಸ್ಯೆಯಲ್ಲ: ವಿವಾದಿತ ಹೇಳಿಕೆ ನೀಡಿದ ಕೇಂದ್ರ ಸಚಿವ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....

ಬಿಹಾರ: ಸರ್ಕಾರಿ ಶಾಲಾ ಶಿಕ್ಷಕರಿಗೆ ಬೀದಿ ನಾಯಿಗಳನ್ನು ಎಣಿಸುವ ಹೆಚ್ಚುವರಿ ಕರ್ತವ್ಯ ವಹಿಸಿದ ಪುರಸಭೆ  

ಪಾಟ್ನಾ: ಸುಪ್ರೀಂ ಕೋರ್ಟ್ ಬೀದಿ ನಾಯಿಗಳ ವಿಚಾರದಲ್ಲಿ ಮಹತ್ವದ ಆದೇಶ ನೀಡಿದೆ. ಸಾರ್ವಜನಿಕ ರಸ್ತೆಗಳು, ಬೀದಿಗಳು ಬೀದಿನಾಯಿ ಮುಕ್ತವಾಗಿರಬೇಕು ಎಂದು ಹೇಳಿದೆ. ಆದರೆ ಈ ಆದೇಶ ಸರ್ಕಾರಿ ಶಾಲಾ ಶಿಕ್ಷಕರ ಪಾಲಿಗೆ ದೊಡ್ಡ...

ಮಮತಾ ಬ್ಯಾನರ್ಜಿಯ ರಾಜಕೀಯ ಸಲಹಾ ಸಂಸ್ಥೆ ಐ-ಪ್ಯಾಕ್, ಅದರ ಮುಖ್ಯಸ್ಥ ಪ್ರತೀಕ್ ಜೈನ್ ಮನೆ ಮೇಲೆ ಇಡಿ ದಾಳಿ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ...

ಉತ್ತರಪ್ರದೇಶ: ಕಬ್ಬಿನ ಗದ್ದೆಯಲ್ಲಿ ಸುಟ್ಟ, ಅರೆನಗ್ನ ಮಹಿಳೆಯ ಮೃತದೇಹ ಪತ್ತೆ: ಅತ್ಯಾಚಾರ ಮಾಡಿ ಬೆಂಕಿ ಹಚ್ಚಿರುವ ಶಂಕೆ

ಹಾಪುರ್: ಉತ್ತರ ಪ್ರದೇಶದ ಹಾಪುರ್ ಜಿಲ್ಲೆಯಲ್ಲಿ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದ್ದು, ಬಹದ್ದೂರ್‌ಗಢ ಪೊಲೀಸ್ ಠಾಣೆ ವ್ಯಾಪ್ತಿಯ ಲಹಾದ್ರಾ ಗ್ರಾಮದ ಇಟ್ಟಿಗೆ ಗೂಡುಗಳ ಹಿಂದಿನ ಕಬ್ಬಿನ ಗದ್ದೆಯಲ್ಲಿ ಸುಮಾರು 30 ವರ್ಷ ವಯಸ್ಸಿನ...

ಗೋಮಾಂಸ ಸೇವನೆ ಶಂಕೆಯಲ್ಲಿ ಮಾನಸಿಕ ಅಸ್ವಸ್ಥ ವ್ಯಕ್ತಿಯ ಮೇಲೆ ಕ್ರೂರ ಹಲ್ಲೆ : ಮೂವರು ದುಷ್ಕರ್ಮಿಗಳ ಬಂಧನ

ಸಾರ್ವಜನಿಕವಾಗಿ ಹಸುವನ್ನು ಕೊಂದು, ಅದರ ಮಾಂಸವನ್ನು ತಿಂದಿದ್ದಾರೆ ಎಂದು ಆರೋಪಿಸಿ ಮಾನಸಿಕ ಅಸ್ವಸ್ಥ ವ್ಯಕ್ತಿ ಮೇಲೆ ಸ್ವಘೋಷಿತ ಗೋರಕ್ಷಕರು ಕ್ರೂರವಾಗಿ ಹಲ್ಲೆ ನಡೆಸಿದ ಘಟನೆ ರಾಜಸ್ಥಾನದ ಝಾಲಾವರ್ ಜಿಲ್ಲೆಯ ಅಕ್ಲೇರಾ ತಾಲೂಕಿನ ಕಿಶನ್‌ಪುರ...

‘ನಿಮ್ಮನ್ನು ನಂಬಿ ಬಂದ ನಕ್ಸಲ್ ಕಾರ್ಯಕರ್ತರಿಗೆ ಕೊಟ್ಟ ಮಾತು ಉಳಿಸಿಕೊಳ್ಳಿ’: ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದ ಶಾಂತಿಗಾಗಿ ನಾಗರೀಕ ವೇದಿಕೆ

ಬೆಂಗಳೂರು: ‘ಮುಖ್ಯವಾಹಿನಿಗೆ ಬಂದ ಏಳೂ ಜನ ನಕ್ಸಲೀಯರು ಜೈಲಿನಲ್ಲೇ ಇದ್ದಾರೆ. ಬಹಳ ಸೊರಗಿದ್ದಾರೆ. ತೀವ್ರ ದೈಹಿಕ ಹಾಗೂ ಮಾನಸಿಕ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಅವರನ್ನು ಹೋಗಿ ಕಾಣುವುದೇ ನಮ್ಮ ಪಾಲಿಗೆ ದೊಡ್ಡ ಹಿಂಸೆಯಾಗಿದೆ ಎಂದು...

ಕೋಗಿಲು ಮನೆಗಳ ನೆಲಸಮ : ಪ್ರತಿಭಟಿಸಿದ ಹೋರಾಟಗಾರರ ಮೇಲೆ ಎಫ್‌ಐಆರ್

ಕೋಗಿಲು ಬಡಾವಣೆಯಲ್ಲಿ ಬಡವರ ಮನೆಗಳ ನೆಲಸಮ ವೇಳೆ ಬಿಗುವಿನ ವಾತಾವರಣ ಸೃಷ್ಟಿಸಿದ್ದಾರೆ ಎಂಬ ಆರೋಪದ ಮೇಲೆ ಹೋರಾಟಗಾರರ ವಿರುದ್ದ ಯಲಹಂಕ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಜನಪರ ವೇದಿಕೆಯ ಮುಖಂಡರಾದ ಗೌರಮ್ಮ ಮತ್ತು ಮನೋಹರ್,...

17 ವರ್ಷದ ಮಹಿಳಾ ಅಥ್ಲೀಟ್ ಮೇಲೆ ಲೈಂಗಿಕ ದೌರ್ಜನ್ಯ ಆರೋಪ: ರಾಷ್ಟ್ರೀಯ ಶೂಟಿಂಗ್ ತರಬೇತುದಾರ ಅಮಾನತು

ಫರಿದಾಬಾದ್‌ನ ಹೋಟೆಲ್‌ನಲ್ಲಿ 17 ವರ್ಷದ ರಾಷ್ಟ್ರಮಟ್ಟದ ಮಹಿಳಾ ಶೂಟರ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಹರಿಯಾಣ ಪೊಲೀಸರು ಪ್ರಕರಣ ದಾಖಲಿಸಿದ ನಂತರ ರಾಷ್ಟ್ರೀಯ ಶೂಟಿಂಗ್ ತರಬೇತುದಾರ ಅಂಕುಶ್ ಭಾರದ್ವಾಜ್ ಅವರನ್ನು...

ಸುಪ್ರೀಂ ಕೋರ್ಟ್‌ನಿಂದ ಜಾಮೀನು : ಗುಲ್ಫಿಶಾ ಫಾತಿಮಾ ಸೇರಿದಂತೆ ನಾಲ್ವರು ಜೈಲಿನಿಂದ ಬಿಡುಗಡೆ

ಈಶಾನ್ಯ ದೆಹಲಿಯ 2020ರ ಗಲಭೆ ಪಿತೂರಿ ಆರೋಪದಲ್ಲಿ ಬಂಧಿತರಾಗಿದ್ದ ನಾಲ್ವರು ವಿದ್ಯಾರ್ಥಿ ಹೋರಾಟಗಾರರು ಬುಧವಾರ (ಜ.7) ಜೈಲಿನಿಂದ ಹೊರ ಬಂದಿದ್ದಾರೆ. ಗುಲ್ಫಿಶಾ ಫಾತಿಮಾ, ಮೀರಾನ್ ಹೈದರ್, ಶಿಫಾ ಉರ್ ರೆಹಮಾನ್ ಮತ್ತು ಮೊಹಮ್ಮದ್ ಸಲೀಮ್...