Homeಮುಖಪುಟಪೆಗಾಸಸ್‌: ರಾಷ್ಟ್ರೀಯ ಭದ್ರತೆಗೆ ಧಕ್ಕೆಯಾಗುವ ವಿಷಯ ಬಹಿರಂಗಪಡಿಸುವ ಅಗತ್ಯವಿಲ್ಲ- ಸುಪ್ರೀಂ

ಪೆಗಾಸಸ್‌: ರಾಷ್ಟ್ರೀಯ ಭದ್ರತೆಗೆ ಧಕ್ಕೆಯಾಗುವ ವಿಷಯ ಬಹಿರಂಗಪಡಿಸುವ ಅಗತ್ಯವಿಲ್ಲ- ಸುಪ್ರೀಂ

- Advertisement -
- Advertisement -

ಪೆಗಾಸಸ್‌ ಗೂಢಚಾರ ಪ್ರಕರಣದ ಬಗ್ಗೆ ಸ್ವತಂತ್ರ ತನಿಖೆ ನಡೆಸುವಂತೆ ಕೋರಿ ಸಲ್ಲಿಕೆಯಾಗಿದ್ದ ಅರ್ಜಿಯ ಕುರಿತು ಸುಪ್ರೀಂಕೋರ್ಟ್ ಮಂಗಳವಾರದಂದು ಒಕ್ಕೂಟ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದೆ. ಆದರೆ ರಾಷ್ಟ್ರೀಯ ಭದ್ರತೆಗೆ ಧಕ್ಕೆಯಾಗುವಂತಹ ಯಾವುದೇ ವಿಷಯವನ್ನು ಸರ್ಕಾರ ಬಹಿರಂಗಪಡಿಸುವ ಅಗತ್ಯವಿಲ್ಲ ಎಂದು ಅದು ಸ್ಪಷ್ಟಪಡಿಸಿದೆ.

ಮುಖ್ಯ ನ್ಯಾಯಮೂರ್ತಿ ಎನ್.ವಿ. ರಮಣ ನೇತೃತ್ವದ ನ್ಯಾಯಪೀಠವು ಮನವಿಗಳ ಕುರಿತು ಒಕ್ಕೂಟ ಸರ್ಕಾರದ ಪ್ರತಿಕ್ರಿಯೆಯನ್ನು ಕೋರಿತು. ಜೊತೆಗೆ 10 ದಿನಗಳ ನಂತರ ಈ ವಿಷಯವನ್ನು ಕೈಗೆತ್ತಿಕೊಳ್ಳಲಾಗುವುದು ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಪೆಗಾಸಸ್ ಹಗರಣ: ನ್ಯಾಯಾಂಗ ತನಿಖೆಗೆ ಒತ್ತಾಯಿಸಿ ಸುಪ್ರೀಂ ಮೆಟ್ಟಿಲೇರಿದ ಹಿರಿಯ ಪತ್ರಕರ್ತರು

ನ್ಯಾಯಮೂರ್ತಿಗಳಾದ ಸೂರ್ಯಕಾಂತ್ ಮತ್ತು ಅನಿರುದ್ಧ ಬೋಸ್ ಅವರನ್ನೊಳಗೊಂಡ ನ್ಯಾಯಪೀಠವು, ರಾಷ್ಟ್ರೀಯ ಭದ್ರತೆಗೆ ಧಕ್ಕೆ ತರುವಂತಹ ಯಾವುದಾದರು ವಿಷಯವನ್ನು ಸರ್ಕಾರ ಬಹಿರಂಗಪಡಿಸಬೇಕು ಎಂದು ಸುಪ್ರೀಂ ಕೋರ್ಟ್ ಬಯಸುವುದಿಲ್ಲ ಎಂದು ಒಕ್ಕೂಟ ಸರ್ಕಾರವನ್ನು ಪ್ರತಿನಿಧಿಸುವ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರಿಗೆ ಹೇಳಿದೆ.

ಪೆಗಾಸಸ್‌ ಗೂಢಚಾರ ಪ್ರಕರಣದ ಬಗ್ಗೆ ಅರ್ಜಿದಾರರು ಕೇಳಿದಂತೆ ಅಫಿಡವಿಟ್‌ನಲ್ಲಿ ಮಾಹಿತಿಯನ್ನು ಬಹಿರಂಗಪಡಿಸುವುದು ರಾಷ್ಟ್ರೀಯ ಭದ್ರತೆಯ ಅಂಶಗಳನ್ನು ಒಳಗೊಂಡಿರುತ್ತದೆ ಎಂದು ತುಷಾರ್‌‌ ಮೆಹ್ತಾ ವಾದಿಸಿದ್ದು, ಇದರ ನಂತರ ಸುಪ್ರೀಂಕೋರ್ಟ್ ಮೇಲಿನಂತೆ ಅಭಿಪ್ರಾಯಪಟ್ಟಿದೆ.

ಇದನ್ನೂ ಓದಿ: ಮಾನ್ಸೂನ್ ಅಧಿವೇಶನ: ಪೆಗಾಸಸ್, ಕೃಷಿ ಕಾಯ್ದೆಗಳ ವಿರೋಧಿಸಿ ಪ್ರತಿಪಕ್ಷಗಳ ಪ್ರತಿಭಟನೆ

ಪೆಗಾಸಸ್‌‌ ಗೂಢಚಾರ ಕುರಿತು ಸ್ವತಂತ್ರ ತನಿಖೆ ನಡೆಸುವಂತೆ ಕೋರಿ ಎಡಿಟರ್ಸ್ ಗಿಲ್ಡ್ ಆಫ್ ಇಂಡಿಯಾ ಸಲ್ಲಿಸಿದ್ದ ಅರ್ಜಿ ಸೇರಿದಂತೆ ನ್ಯಾಯಾಲಯವು ಒಂದು ಬ್ಯಾಚ್‌‌‌ನ ವಿಚಾರಣೆ ನಡೆಸುತ್ತಿದೆ.

ಇಸ್ರೇಲ್ ಮೂಲದ NSO ಸಂಸ್ಥೆಯ ಗೂಢಚಾರ ತಂತ್ರಾಂಶವಾದ ಪೆಗಾಸಸ್ ಅನ್ನು ಬಳಸಿಕೊಂಡು ಭಾರತದ ಗಣ್ಯ ವ್ಯಕ್ತಿಗಳು, ರಾಜಕಾರಣಿಗಳು ಮತ್ತು ಪತ್ರಕರ್ತರ ಮೇಲೆ ಗೂಢಚಾರ ಮಾಡಿದ ಬಗ್ಗೆ ಕಳೆದ ತಿಂಗಳು ವಿವಾದವೆದ್ದಿತ್ತು.

ಪೆಗಾಸಸ್ ಬಳಸಿ ಕಣ್ಗಾವಲು ಮಾಡುವ ಸಂಭಾವ್ಯ ಗುರಿಗಳ ಪಟ್ಟಿಯಲ್ಲಿ 300 ಕ್ಕೂ ಹೆಚ್ಚು ಭಾರತೀಯ ಮೊಬೈಲ್ ಫೋನ್ ಸಂಖ್ಯೆಗಳಿವೆ ಎಂದು ಅಂತರಾಷ್ಟ್ರೀಯ ಮಾಧ್ಯಮ ಒಕ್ಕೂಟ ತನ್ನ ವರದಿಯಲ್ಲಿ ಹೇಳಿತ್ತು.

ಇದನ್ನೂ ಓದಿ: ಪೆಗಾಸಸ್ ಗೂಢಚರ್ಯೆ ಸಮಸ್ಯೆಯಲ್ಲ: ವಿವಾದಿತ ಹೇಳಿಕೆ ನೀಡಿದ ಕೇಂದ್ರ ಸಚಿವ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...