Homeಮುಖಪುಟಜನರ ದನಿ ಅಡಗಿಸಲು ಪೆಗಾಸಸ್ ಆಯುಧ ಬಳಸಲಾಗುತ್ತಿದೆ : ರಾಹುಲ್ ಗಾಂಧಿ

ಜನರ ದನಿ ಅಡಗಿಸಲು ಪೆಗಾಸಸ್ ಆಯುಧ ಬಳಸಲಾಗುತ್ತಿದೆ : ರಾಹುಲ್ ಗಾಂಧಿ

ಪೆಗಾಸಸ್ ಅನ್ನು ಸರ್ಕಾರಗಳಿಗೆ ಬಿಟ್ಟರೆ ಬೇರೆಯವರಿಗೆ ಮಾರಲು ಸಾಧ್ಯವಿಲ್ಲ. ಹಾಗಾಗಿ ಈ ಪ್ರಕರಣದಲ್ಲಿ ತಪ್ಪಿತಸ್ಥರಾದ ಗೃಹ ಮಂತ್ರಿ ಅಮಿತ್ ಶಾ ಮತ್ತು ಪ್ರಧಾನಿ ಮೋದಿ ಕೂಡಲೇ ರಾಜೀನಾಮೆ ನೀಡಬೇಕು.

- Advertisement -
- Advertisement -

ಪೆಗಾಸಸ್ ಎಂಬುದು ಕೇವಲ ಸಾಫ್ಟ್‌ವೇರ್ ಅಲ್ಲ. ಅದೊಂದು ಆಯುಧವಾಗಿದೆ. ಅದನ್ನು ಭಯೋತ್ಪಾದಕರು, ಕ್ರಿಮಿನಲ್‌ಗಳ ವಿರುದ್ಧ ಬಳಸುವುದು ಬಿಟ್ಟು ಈ ದೇಶದ ಪ್ರಜಾತಂತ್ರವನ್ನು ಹಾಳು ಮಾಡಲು ಬಳಸಲಾಗುತ್ತಿದೆ. ದೇಶದ ಜನರ ಜನರ ದನಿ ಅಡಗಿಸಲು ದುರಪಯೋಗ ಮಾಡಿಕೊಳ್ಳಲಾಗುತ್ತಿದೆ ಎಂದು ರಾಹುಲ್ ಗಾಂಧಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸಂಸತ್ತಿನ ಹೊರಗೆ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, “ಪೆಗಾಸಸ್ ಅನ್ನು ಕರ್ನಾಟಕದ ಸರ್ಕಾರ ಕೆಡವಲು ಬಳಸಿಕೊಳ್ಳಲಾಯಿತು. ರಾಫೇಲ್ ಹಗರಣವನ್ನು ಮುಚ್ಚಿಹಾಕಲು ಸುಪ್ರೀಂ ಕೋರ್ಟ್ ನ್ಯಾಯಾಧೀಶರ ಮೇಲೆ ಅದನ್ನು ಬಳಸಲಾಯಿತು. ಪತ್ರಕರ್ತರು, ವಿರೋಧ ಪಕ್ಷದವರ ಮೇಲೆ ಬಳಸಿ ಮೋದಿ ಮತ್ತು ಅಮಿತ್ ಶಾ ದುರುಪಯೋಗ ಮಾಡಿಕೊಳ್ಳುತ್ತಿದ್ದಾರೆ ಎಂದು ರಾಹುಲ್ ಆರೋಪಿಸಿದ್ದಾರೆ.

ನನ್ನ ಫೋನ್ ಕೇವಲ ಗುರಿಯಾಗಿರಲಿಲ್ಲ, ಬದಲಿಗೆ ಖಂಡಿತಾ ಟ್ಯಾಪ್ ಮಾಡಲಾಗಿದೆ. ಕೇವಲ ರಾಹುಲ್ ಗಾಂಧಿಯ ಫೋನ್ ಟ್ಯಾಪ್ ಮಾಡಿದರೆ ಅದು ದೊಡ್ಡ ವಿಷಯವಲ್ಲ. ಆದರೆ ನಾನು ವಿರೋಧ ಪಕ್ಷದ ನಾಯಕ. ಜನರ ದನಿಯಾಗಿ ಕೆಲಸ ಮಾಡುತ್ತಿರುವವನು. ನನ್ನ ಫೋನ್ ಟ್ಯಾಪ್ ಮಾಡುವ ಮೂಲಕ ಜನರ ದನಿ ಅಡಗಿಸಲು ಈ ಸರ್ಕಾರ ಮುಂದಾಗಿದೆ. ಇಡೀ ದೇಶದ ಮೇಲಿನ ದಾಳಿ ಇದಾಗಿದೆ ಎಂದು ಕಿಡಿಕಾರಿದರು.

ಪೆಗಾಸಸ್ ಅನ್ನು ಸರ್ಕಾರಗಳಿಗೆ ಬಿಟ್ಟರೆ ಬೇರೆಯವರಿಗೆ ಮಾರಲು ಸಾಧ್ಯವಿಲ್ಲ. ಹಾಗಾಗಿ ಈ ಪ್ರಕರಣದಲ್ಲಿ ತಪ್ಪಿತಸ್ಥರಾದ ಗೃಹ ಮಂತ್ರಿ ಅಮಿತ್ ಶಾ ಮತ್ತು ಪ್ರಧಾನಿ ಮೋದಿ ಕೂಡಲೇ ರಾಜೀನಾಮೆ ನೀಡಬೇಕು. ಸುಪ್ರೀಂ ಕೋರ್ಟ್ ಮೇಲ್ವೀಚಾರಣೆಯಲ್ಲಿ ಸ್ವತಂತ್ರ ನ್ಯಾಯಾಂಗ ತನಿಖೆ ನಡೆಯಬೇಕೆಂದು ರಾಹುಲ್ ಆಗ್ರಹಿಸಿದ್ದಾರೆ.

ಪೆಗಾಸಸ್ ಕಣ್ಗಾವಲಿನಲ್ಲಿ ಉದ್ಯಮಿ ಅನಿಲ್ ಅಂಬಾನಿಯ ಹೆಸರು ಕೇಳಿಬಂದಿರುವ ಬಗ್ಗೆ ನಿಮ್ಮ ಪ್ರತಿಕ್ರಿಯೆಯೇನು ಎಂಬ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ಅವರು, “ರಾಫೇಲ್ ಹಗರಣದ ಬಗ್ಗೆ ನಾನು ದನಿಯೆತ್ತಿದೆ. ನೀವು ಸೇರಿದಂತೆ ಯಾವ ಮಾಧ್ಯಮಗಳು ನನ್ನನ್ನು ಬೆಂಬಲಿಸಲಿಲ್ಲ. ಇದು ನಿಜ. ಆದರೆ ನಿಧಾನವಾಗಿ ರಾಫೇಲ್ ಹಗರಣ ಹೊರಬರುತ್ತಿದೆ. ಪ್ರಧಾನ ಮಂತ್ರಿಗಳು ಈ ಹಗರಣದಲ್ಲಿ ನೇರ ಭಾಗಿಯಾಗಿದ್ದಾರೆ. ನೀವು ಏಕೆ ಮಾಜಿ ಸಿಬಿಐ ಡೈರೆಕ್ಟರ್ ಪೆಗಾಸಸ್ ಕಣ್ಗಾವಲಿಗೆ ಒಳಗಾಗಿದ್ದಾರೆ ಎಂಬ ಪ್ರಶ್ನೆ ಕೇಳಲಿಲ್ಲ? ಅವರು ತಮ್ಮದೆ ಇಲಾಖೆಯ ಅಧಿಕಾರಿಯ ವಿರುದ್ಧ ಎಫ್‌ಐಆರ್ ದಾಖಲಿಸಿದ ಕೆಲವೇ ಕ್ಷಣಗಳಲ್ಲಿ ಅವರ ನಂಬರ್‌ ಅನ್ನು ಟ್ಯಾಪ್ ಮಾಡುವ ಪಟ್ಟಿಗೆ ಸೇರಿಸಲಾಯಿತು? ಏಕೆ ಅವರನ್ನು ಬ್ಲಾಕ್‌ಮೇಲ್ ಮಾಡಲಾಯಿತು? ಇದನ್ನು ಯಾರು ಮಾಡಿದರು ಎಂಬುದು ನಿಜವಾದ ಪ್ರಶ್ನೆಯಲ್ಲವೇ ಎಂದು ರಾಹುಲ್ ಪ್ರಶ್ನಿಸಿದ್ದಾರೆ.

ಸರ್ಕಾರವೇ ಇದನ್ನು ಮಾಡಿಸಿದೆ ಎಂದು ಹೇಗೆ ಹೇಳುತ್ತೀರಿ ಎಂಬ ಪ್ರಶ್ನೆಗೆ, “ಪೆಗಾಸಸ್ ಅನ್ನು ಸರ್ಕಾರಗಳಿಗೆ ಮಾತ್ರ ಮಾರಲಾಗುತ್ತದೆ. ಮೋದಿ ಸರ್ಕಾರ ಇದನ್ನು ಮಾಡಿಲ್ಲ ಎಂದಾದರೆ ಜಪಾನ್, ಇಸ್ರೇಲ್, ಉಗಾಂಡ ಸರ್ಕಾರ ಮಾಡಿರಬಹುದಲ್ಲವೇ? ಪೋನ್‌ಗಳು ಟ್ಯಾಪ್‌ ಆಗುತ್ತಿರುವುದು ನಿಜವಾದರೆ ಅದರ ಬಗ್ಗೆ ಸರ್ಕಾರ ಏಕೆ ತನಿಖೆ ನಡೆಸುತ್ತಿಲ್ಲ? ನಾವು ಇದನ್ನು ಮಾಡಿಲ್ಲ ಎಂದು ಏಕೆ ಮೋದಿ ಇದುವರೆಗೂ ಹೇಳಿಲ್ಲ? ಎಂದರು.

ನಾನು ಇದರಿಂದ ಹೆದರುವುದಿಲ್ಲ. ಭ್ರಷ್ಟಾಚಾರ ಮತ್ತು ಕಳ್ಳತನ ಮಾಡಿದವರು ತಮ್ಮ ಫೋನ್ ಟ್ಯಾಪ್ ಆದರೆ ಹೆದರಬೇಕು. ಈ ಎರಡು ಭಯ ನನಗಿಲ್ಲ. ಹಾಗಾಗಿ ನರೇಂದ್ರ ಮೋದಿಯವರ ಕದ್ದಾಲಿಕೆಗೆ ಹೆದರುವ ಮಾತೇ ಇಲ್ಲ ಎಂದಿದ್ದಾರೆ. ಇಂಟೆಲಿಜೆನ್ಸ್ ನವರು ಸಹ ನನ್ನ ಫೋನ್ ಟ್ಯಾಪ್ ಮಾಡುತ್ತಿದ್ದಾರೆ.

ರಾಹುಲ್ ಗಾಂಧಿ ಆರೋಪಗಳನ್ನು ಅಲ್ಲಗೆಳೆದಿರುವ ಗೃಹ ವ್ಯವಹಾರಗಳ ರಾಜ್ಯ ಸಚಿವ ಅಜಯ್ ಕುಮಾರ್, “ನಾವು ಎಲ್ಲಾ ವಿಷಯಗಳಿಗೆ ಸ್ಪಷ್ಟೀಕರಣ ನೀಡಿದ್ದೇವೆ. ಇದರಲ್ಲಿ ತನಿಖೆ ಮಾಡುವ ಅಗತ್ಯವಿಲ್ಲ” ಎಂದಿದ್ದಾರೆ.


ಇದನ್ನೂ ಓದಿ: ಪೆಗಾಸಸ್ ಫೋನ್‌ ಹ್ಯಾಕ್‌ಗೆ ಒಳಗಾದವರು ಯಾರು ಯಾರು? ಪ್ರಮುಖ 30 ಜನರ ಪಟ್ಟಿ ಇಲ್ಲಿದೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...