Homeಮುಖಪುಟಜನರ ದನಿ ಅಡಗಿಸಲು ಪೆಗಾಸಸ್ ಆಯುಧ ಬಳಸಲಾಗುತ್ತಿದೆ : ರಾಹುಲ್ ಗಾಂಧಿ

ಜನರ ದನಿ ಅಡಗಿಸಲು ಪೆಗಾಸಸ್ ಆಯುಧ ಬಳಸಲಾಗುತ್ತಿದೆ : ರಾಹುಲ್ ಗಾಂಧಿ

ಪೆಗಾಸಸ್ ಅನ್ನು ಸರ್ಕಾರಗಳಿಗೆ ಬಿಟ್ಟರೆ ಬೇರೆಯವರಿಗೆ ಮಾರಲು ಸಾಧ್ಯವಿಲ್ಲ. ಹಾಗಾಗಿ ಈ ಪ್ರಕರಣದಲ್ಲಿ ತಪ್ಪಿತಸ್ಥರಾದ ಗೃಹ ಮಂತ್ರಿ ಅಮಿತ್ ಶಾ ಮತ್ತು ಪ್ರಧಾನಿ ಮೋದಿ ಕೂಡಲೇ ರಾಜೀನಾಮೆ ನೀಡಬೇಕು.

- Advertisement -
- Advertisement -

ಪೆಗಾಸಸ್ ಎಂಬುದು ಕೇವಲ ಸಾಫ್ಟ್‌ವೇರ್ ಅಲ್ಲ. ಅದೊಂದು ಆಯುಧವಾಗಿದೆ. ಅದನ್ನು ಭಯೋತ್ಪಾದಕರು, ಕ್ರಿಮಿನಲ್‌ಗಳ ವಿರುದ್ಧ ಬಳಸುವುದು ಬಿಟ್ಟು ಈ ದೇಶದ ಪ್ರಜಾತಂತ್ರವನ್ನು ಹಾಳು ಮಾಡಲು ಬಳಸಲಾಗುತ್ತಿದೆ. ದೇಶದ ಜನರ ಜನರ ದನಿ ಅಡಗಿಸಲು ದುರಪಯೋಗ ಮಾಡಿಕೊಳ್ಳಲಾಗುತ್ತಿದೆ ಎಂದು ರಾಹುಲ್ ಗಾಂಧಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸಂಸತ್ತಿನ ಹೊರಗೆ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, “ಪೆಗಾಸಸ್ ಅನ್ನು ಕರ್ನಾಟಕದ ಸರ್ಕಾರ ಕೆಡವಲು ಬಳಸಿಕೊಳ್ಳಲಾಯಿತು. ರಾಫೇಲ್ ಹಗರಣವನ್ನು ಮುಚ್ಚಿಹಾಕಲು ಸುಪ್ರೀಂ ಕೋರ್ಟ್ ನ್ಯಾಯಾಧೀಶರ ಮೇಲೆ ಅದನ್ನು ಬಳಸಲಾಯಿತು. ಪತ್ರಕರ್ತರು, ವಿರೋಧ ಪಕ್ಷದವರ ಮೇಲೆ ಬಳಸಿ ಮೋದಿ ಮತ್ತು ಅಮಿತ್ ಶಾ ದುರುಪಯೋಗ ಮಾಡಿಕೊಳ್ಳುತ್ತಿದ್ದಾರೆ ಎಂದು ರಾಹುಲ್ ಆರೋಪಿಸಿದ್ದಾರೆ.

ನನ್ನ ಫೋನ್ ಕೇವಲ ಗುರಿಯಾಗಿರಲಿಲ್ಲ, ಬದಲಿಗೆ ಖಂಡಿತಾ ಟ್ಯಾಪ್ ಮಾಡಲಾಗಿದೆ. ಕೇವಲ ರಾಹುಲ್ ಗಾಂಧಿಯ ಫೋನ್ ಟ್ಯಾಪ್ ಮಾಡಿದರೆ ಅದು ದೊಡ್ಡ ವಿಷಯವಲ್ಲ. ಆದರೆ ನಾನು ವಿರೋಧ ಪಕ್ಷದ ನಾಯಕ. ಜನರ ದನಿಯಾಗಿ ಕೆಲಸ ಮಾಡುತ್ತಿರುವವನು. ನನ್ನ ಫೋನ್ ಟ್ಯಾಪ್ ಮಾಡುವ ಮೂಲಕ ಜನರ ದನಿ ಅಡಗಿಸಲು ಈ ಸರ್ಕಾರ ಮುಂದಾಗಿದೆ. ಇಡೀ ದೇಶದ ಮೇಲಿನ ದಾಳಿ ಇದಾಗಿದೆ ಎಂದು ಕಿಡಿಕಾರಿದರು.

ಪೆಗಾಸಸ್ ಅನ್ನು ಸರ್ಕಾರಗಳಿಗೆ ಬಿಟ್ಟರೆ ಬೇರೆಯವರಿಗೆ ಮಾರಲು ಸಾಧ್ಯವಿಲ್ಲ. ಹಾಗಾಗಿ ಈ ಪ್ರಕರಣದಲ್ಲಿ ತಪ್ಪಿತಸ್ಥರಾದ ಗೃಹ ಮಂತ್ರಿ ಅಮಿತ್ ಶಾ ಮತ್ತು ಪ್ರಧಾನಿ ಮೋದಿ ಕೂಡಲೇ ರಾಜೀನಾಮೆ ನೀಡಬೇಕು. ಸುಪ್ರೀಂ ಕೋರ್ಟ್ ಮೇಲ್ವೀಚಾರಣೆಯಲ್ಲಿ ಸ್ವತಂತ್ರ ನ್ಯಾಯಾಂಗ ತನಿಖೆ ನಡೆಯಬೇಕೆಂದು ರಾಹುಲ್ ಆಗ್ರಹಿಸಿದ್ದಾರೆ.

ಪೆಗಾಸಸ್ ಕಣ್ಗಾವಲಿನಲ್ಲಿ ಉದ್ಯಮಿ ಅನಿಲ್ ಅಂಬಾನಿಯ ಹೆಸರು ಕೇಳಿಬಂದಿರುವ ಬಗ್ಗೆ ನಿಮ್ಮ ಪ್ರತಿಕ್ರಿಯೆಯೇನು ಎಂಬ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ಅವರು, “ರಾಫೇಲ್ ಹಗರಣದ ಬಗ್ಗೆ ನಾನು ದನಿಯೆತ್ತಿದೆ. ನೀವು ಸೇರಿದಂತೆ ಯಾವ ಮಾಧ್ಯಮಗಳು ನನ್ನನ್ನು ಬೆಂಬಲಿಸಲಿಲ್ಲ. ಇದು ನಿಜ. ಆದರೆ ನಿಧಾನವಾಗಿ ರಾಫೇಲ್ ಹಗರಣ ಹೊರಬರುತ್ತಿದೆ. ಪ್ರಧಾನ ಮಂತ್ರಿಗಳು ಈ ಹಗರಣದಲ್ಲಿ ನೇರ ಭಾಗಿಯಾಗಿದ್ದಾರೆ. ನೀವು ಏಕೆ ಮಾಜಿ ಸಿಬಿಐ ಡೈರೆಕ್ಟರ್ ಪೆಗಾಸಸ್ ಕಣ್ಗಾವಲಿಗೆ ಒಳಗಾಗಿದ್ದಾರೆ ಎಂಬ ಪ್ರಶ್ನೆ ಕೇಳಲಿಲ್ಲ? ಅವರು ತಮ್ಮದೆ ಇಲಾಖೆಯ ಅಧಿಕಾರಿಯ ವಿರುದ್ಧ ಎಫ್‌ಐಆರ್ ದಾಖಲಿಸಿದ ಕೆಲವೇ ಕ್ಷಣಗಳಲ್ಲಿ ಅವರ ನಂಬರ್‌ ಅನ್ನು ಟ್ಯಾಪ್ ಮಾಡುವ ಪಟ್ಟಿಗೆ ಸೇರಿಸಲಾಯಿತು? ಏಕೆ ಅವರನ್ನು ಬ್ಲಾಕ್‌ಮೇಲ್ ಮಾಡಲಾಯಿತು? ಇದನ್ನು ಯಾರು ಮಾಡಿದರು ಎಂಬುದು ನಿಜವಾದ ಪ್ರಶ್ನೆಯಲ್ಲವೇ ಎಂದು ರಾಹುಲ್ ಪ್ರಶ್ನಿಸಿದ್ದಾರೆ.

ಸರ್ಕಾರವೇ ಇದನ್ನು ಮಾಡಿಸಿದೆ ಎಂದು ಹೇಗೆ ಹೇಳುತ್ತೀರಿ ಎಂಬ ಪ್ರಶ್ನೆಗೆ, “ಪೆಗಾಸಸ್ ಅನ್ನು ಸರ್ಕಾರಗಳಿಗೆ ಮಾತ್ರ ಮಾರಲಾಗುತ್ತದೆ. ಮೋದಿ ಸರ್ಕಾರ ಇದನ್ನು ಮಾಡಿಲ್ಲ ಎಂದಾದರೆ ಜಪಾನ್, ಇಸ್ರೇಲ್, ಉಗಾಂಡ ಸರ್ಕಾರ ಮಾಡಿರಬಹುದಲ್ಲವೇ? ಪೋನ್‌ಗಳು ಟ್ಯಾಪ್‌ ಆಗುತ್ತಿರುವುದು ನಿಜವಾದರೆ ಅದರ ಬಗ್ಗೆ ಸರ್ಕಾರ ಏಕೆ ತನಿಖೆ ನಡೆಸುತ್ತಿಲ್ಲ? ನಾವು ಇದನ್ನು ಮಾಡಿಲ್ಲ ಎಂದು ಏಕೆ ಮೋದಿ ಇದುವರೆಗೂ ಹೇಳಿಲ್ಲ? ಎಂದರು.

ನಾನು ಇದರಿಂದ ಹೆದರುವುದಿಲ್ಲ. ಭ್ರಷ್ಟಾಚಾರ ಮತ್ತು ಕಳ್ಳತನ ಮಾಡಿದವರು ತಮ್ಮ ಫೋನ್ ಟ್ಯಾಪ್ ಆದರೆ ಹೆದರಬೇಕು. ಈ ಎರಡು ಭಯ ನನಗಿಲ್ಲ. ಹಾಗಾಗಿ ನರೇಂದ್ರ ಮೋದಿಯವರ ಕದ್ದಾಲಿಕೆಗೆ ಹೆದರುವ ಮಾತೇ ಇಲ್ಲ ಎಂದಿದ್ದಾರೆ. ಇಂಟೆಲಿಜೆನ್ಸ್ ನವರು ಸಹ ನನ್ನ ಫೋನ್ ಟ್ಯಾಪ್ ಮಾಡುತ್ತಿದ್ದಾರೆ.

ರಾಹುಲ್ ಗಾಂಧಿ ಆರೋಪಗಳನ್ನು ಅಲ್ಲಗೆಳೆದಿರುವ ಗೃಹ ವ್ಯವಹಾರಗಳ ರಾಜ್ಯ ಸಚಿವ ಅಜಯ್ ಕುಮಾರ್, “ನಾವು ಎಲ್ಲಾ ವಿಷಯಗಳಿಗೆ ಸ್ಪಷ್ಟೀಕರಣ ನೀಡಿದ್ದೇವೆ. ಇದರಲ್ಲಿ ತನಿಖೆ ಮಾಡುವ ಅಗತ್ಯವಿಲ್ಲ” ಎಂದಿದ್ದಾರೆ.


ಇದನ್ನೂ ಓದಿ: ಪೆಗಾಸಸ್ ಫೋನ್‌ ಹ್ಯಾಕ್‌ಗೆ ಒಳಗಾದವರು ಯಾರು ಯಾರು? ಪ್ರಮುಖ 30 ಜನರ ಪಟ್ಟಿ ಇಲ್ಲಿದೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...