Homeಮುಖಪುಟಜನರ ದನಿ ಅಡಗಿಸಲು ಪೆಗಾಸಸ್ ಆಯುಧ ಬಳಸಲಾಗುತ್ತಿದೆ : ರಾಹುಲ್ ಗಾಂಧಿ

ಜನರ ದನಿ ಅಡಗಿಸಲು ಪೆಗಾಸಸ್ ಆಯುಧ ಬಳಸಲಾಗುತ್ತಿದೆ : ರಾಹುಲ್ ಗಾಂಧಿ

ಪೆಗಾಸಸ್ ಅನ್ನು ಸರ್ಕಾರಗಳಿಗೆ ಬಿಟ್ಟರೆ ಬೇರೆಯವರಿಗೆ ಮಾರಲು ಸಾಧ್ಯವಿಲ್ಲ. ಹಾಗಾಗಿ ಈ ಪ್ರಕರಣದಲ್ಲಿ ತಪ್ಪಿತಸ್ಥರಾದ ಗೃಹ ಮಂತ್ರಿ ಅಮಿತ್ ಶಾ ಮತ್ತು ಪ್ರಧಾನಿ ಮೋದಿ ಕೂಡಲೇ ರಾಜೀನಾಮೆ ನೀಡಬೇಕು.

- Advertisement -
- Advertisement -

ಪೆಗಾಸಸ್ ಎಂಬುದು ಕೇವಲ ಸಾಫ್ಟ್‌ವೇರ್ ಅಲ್ಲ. ಅದೊಂದು ಆಯುಧವಾಗಿದೆ. ಅದನ್ನು ಭಯೋತ್ಪಾದಕರು, ಕ್ರಿಮಿನಲ್‌ಗಳ ವಿರುದ್ಧ ಬಳಸುವುದು ಬಿಟ್ಟು ಈ ದೇಶದ ಪ್ರಜಾತಂತ್ರವನ್ನು ಹಾಳು ಮಾಡಲು ಬಳಸಲಾಗುತ್ತಿದೆ. ದೇಶದ ಜನರ ಜನರ ದನಿ ಅಡಗಿಸಲು ದುರಪಯೋಗ ಮಾಡಿಕೊಳ್ಳಲಾಗುತ್ತಿದೆ ಎಂದು ರಾಹುಲ್ ಗಾಂಧಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸಂಸತ್ತಿನ ಹೊರಗೆ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, “ಪೆಗಾಸಸ್ ಅನ್ನು ಕರ್ನಾಟಕದ ಸರ್ಕಾರ ಕೆಡವಲು ಬಳಸಿಕೊಳ್ಳಲಾಯಿತು. ರಾಫೇಲ್ ಹಗರಣವನ್ನು ಮುಚ್ಚಿಹಾಕಲು ಸುಪ್ರೀಂ ಕೋರ್ಟ್ ನ್ಯಾಯಾಧೀಶರ ಮೇಲೆ ಅದನ್ನು ಬಳಸಲಾಯಿತು. ಪತ್ರಕರ್ತರು, ವಿರೋಧ ಪಕ್ಷದವರ ಮೇಲೆ ಬಳಸಿ ಮೋದಿ ಮತ್ತು ಅಮಿತ್ ಶಾ ದುರುಪಯೋಗ ಮಾಡಿಕೊಳ್ಳುತ್ತಿದ್ದಾರೆ ಎಂದು ರಾಹುಲ್ ಆರೋಪಿಸಿದ್ದಾರೆ.

ನನ್ನ ಫೋನ್ ಕೇವಲ ಗುರಿಯಾಗಿರಲಿಲ್ಲ, ಬದಲಿಗೆ ಖಂಡಿತಾ ಟ್ಯಾಪ್ ಮಾಡಲಾಗಿದೆ. ಕೇವಲ ರಾಹುಲ್ ಗಾಂಧಿಯ ಫೋನ್ ಟ್ಯಾಪ್ ಮಾಡಿದರೆ ಅದು ದೊಡ್ಡ ವಿಷಯವಲ್ಲ. ಆದರೆ ನಾನು ವಿರೋಧ ಪಕ್ಷದ ನಾಯಕ. ಜನರ ದನಿಯಾಗಿ ಕೆಲಸ ಮಾಡುತ್ತಿರುವವನು. ನನ್ನ ಫೋನ್ ಟ್ಯಾಪ್ ಮಾಡುವ ಮೂಲಕ ಜನರ ದನಿ ಅಡಗಿಸಲು ಈ ಸರ್ಕಾರ ಮುಂದಾಗಿದೆ. ಇಡೀ ದೇಶದ ಮೇಲಿನ ದಾಳಿ ಇದಾಗಿದೆ ಎಂದು ಕಿಡಿಕಾರಿದರು.

ಪೆಗಾಸಸ್ ಅನ್ನು ಸರ್ಕಾರಗಳಿಗೆ ಬಿಟ್ಟರೆ ಬೇರೆಯವರಿಗೆ ಮಾರಲು ಸಾಧ್ಯವಿಲ್ಲ. ಹಾಗಾಗಿ ಈ ಪ್ರಕರಣದಲ್ಲಿ ತಪ್ಪಿತಸ್ಥರಾದ ಗೃಹ ಮಂತ್ರಿ ಅಮಿತ್ ಶಾ ಮತ್ತು ಪ್ರಧಾನಿ ಮೋದಿ ಕೂಡಲೇ ರಾಜೀನಾಮೆ ನೀಡಬೇಕು. ಸುಪ್ರೀಂ ಕೋರ್ಟ್ ಮೇಲ್ವೀಚಾರಣೆಯಲ್ಲಿ ಸ್ವತಂತ್ರ ನ್ಯಾಯಾಂಗ ತನಿಖೆ ನಡೆಯಬೇಕೆಂದು ರಾಹುಲ್ ಆಗ್ರಹಿಸಿದ್ದಾರೆ.

ಪೆಗಾಸಸ್ ಕಣ್ಗಾವಲಿನಲ್ಲಿ ಉದ್ಯಮಿ ಅನಿಲ್ ಅಂಬಾನಿಯ ಹೆಸರು ಕೇಳಿಬಂದಿರುವ ಬಗ್ಗೆ ನಿಮ್ಮ ಪ್ರತಿಕ್ರಿಯೆಯೇನು ಎಂಬ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ಅವರು, “ರಾಫೇಲ್ ಹಗರಣದ ಬಗ್ಗೆ ನಾನು ದನಿಯೆತ್ತಿದೆ. ನೀವು ಸೇರಿದಂತೆ ಯಾವ ಮಾಧ್ಯಮಗಳು ನನ್ನನ್ನು ಬೆಂಬಲಿಸಲಿಲ್ಲ. ಇದು ನಿಜ. ಆದರೆ ನಿಧಾನವಾಗಿ ರಾಫೇಲ್ ಹಗರಣ ಹೊರಬರುತ್ತಿದೆ. ಪ್ರಧಾನ ಮಂತ್ರಿಗಳು ಈ ಹಗರಣದಲ್ಲಿ ನೇರ ಭಾಗಿಯಾಗಿದ್ದಾರೆ. ನೀವು ಏಕೆ ಮಾಜಿ ಸಿಬಿಐ ಡೈರೆಕ್ಟರ್ ಪೆಗಾಸಸ್ ಕಣ್ಗಾವಲಿಗೆ ಒಳಗಾಗಿದ್ದಾರೆ ಎಂಬ ಪ್ರಶ್ನೆ ಕೇಳಲಿಲ್ಲ? ಅವರು ತಮ್ಮದೆ ಇಲಾಖೆಯ ಅಧಿಕಾರಿಯ ವಿರುದ್ಧ ಎಫ್‌ಐಆರ್ ದಾಖಲಿಸಿದ ಕೆಲವೇ ಕ್ಷಣಗಳಲ್ಲಿ ಅವರ ನಂಬರ್‌ ಅನ್ನು ಟ್ಯಾಪ್ ಮಾಡುವ ಪಟ್ಟಿಗೆ ಸೇರಿಸಲಾಯಿತು? ಏಕೆ ಅವರನ್ನು ಬ್ಲಾಕ್‌ಮೇಲ್ ಮಾಡಲಾಯಿತು? ಇದನ್ನು ಯಾರು ಮಾಡಿದರು ಎಂಬುದು ನಿಜವಾದ ಪ್ರಶ್ನೆಯಲ್ಲವೇ ಎಂದು ರಾಹುಲ್ ಪ್ರಶ್ನಿಸಿದ್ದಾರೆ.

ಸರ್ಕಾರವೇ ಇದನ್ನು ಮಾಡಿಸಿದೆ ಎಂದು ಹೇಗೆ ಹೇಳುತ್ತೀರಿ ಎಂಬ ಪ್ರಶ್ನೆಗೆ, “ಪೆಗಾಸಸ್ ಅನ್ನು ಸರ್ಕಾರಗಳಿಗೆ ಮಾತ್ರ ಮಾರಲಾಗುತ್ತದೆ. ಮೋದಿ ಸರ್ಕಾರ ಇದನ್ನು ಮಾಡಿಲ್ಲ ಎಂದಾದರೆ ಜಪಾನ್, ಇಸ್ರೇಲ್, ಉಗಾಂಡ ಸರ್ಕಾರ ಮಾಡಿರಬಹುದಲ್ಲವೇ? ಪೋನ್‌ಗಳು ಟ್ಯಾಪ್‌ ಆಗುತ್ತಿರುವುದು ನಿಜವಾದರೆ ಅದರ ಬಗ್ಗೆ ಸರ್ಕಾರ ಏಕೆ ತನಿಖೆ ನಡೆಸುತ್ತಿಲ್ಲ? ನಾವು ಇದನ್ನು ಮಾಡಿಲ್ಲ ಎಂದು ಏಕೆ ಮೋದಿ ಇದುವರೆಗೂ ಹೇಳಿಲ್ಲ? ಎಂದರು.

ನಾನು ಇದರಿಂದ ಹೆದರುವುದಿಲ್ಲ. ಭ್ರಷ್ಟಾಚಾರ ಮತ್ತು ಕಳ್ಳತನ ಮಾಡಿದವರು ತಮ್ಮ ಫೋನ್ ಟ್ಯಾಪ್ ಆದರೆ ಹೆದರಬೇಕು. ಈ ಎರಡು ಭಯ ನನಗಿಲ್ಲ. ಹಾಗಾಗಿ ನರೇಂದ್ರ ಮೋದಿಯವರ ಕದ್ದಾಲಿಕೆಗೆ ಹೆದರುವ ಮಾತೇ ಇಲ್ಲ ಎಂದಿದ್ದಾರೆ. ಇಂಟೆಲಿಜೆನ್ಸ್ ನವರು ಸಹ ನನ್ನ ಫೋನ್ ಟ್ಯಾಪ್ ಮಾಡುತ್ತಿದ್ದಾರೆ.

ರಾಹುಲ್ ಗಾಂಧಿ ಆರೋಪಗಳನ್ನು ಅಲ್ಲಗೆಳೆದಿರುವ ಗೃಹ ವ್ಯವಹಾರಗಳ ರಾಜ್ಯ ಸಚಿವ ಅಜಯ್ ಕುಮಾರ್, “ನಾವು ಎಲ್ಲಾ ವಿಷಯಗಳಿಗೆ ಸ್ಪಷ್ಟೀಕರಣ ನೀಡಿದ್ದೇವೆ. ಇದರಲ್ಲಿ ತನಿಖೆ ಮಾಡುವ ಅಗತ್ಯವಿಲ್ಲ” ಎಂದಿದ್ದಾರೆ.


ಇದನ್ನೂ ಓದಿ: ಪೆಗಾಸಸ್ ಫೋನ್‌ ಹ್ಯಾಕ್‌ಗೆ ಒಳಗಾದವರು ಯಾರು ಯಾರು? ಪ್ರಮುಖ 30 ಜನರ ಪಟ್ಟಿ ಇಲ್ಲಿದೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...