Homeಮುಖಪುಟಪೆಹ್ಲು ಖಾನ್ ತೀರ್ಪು ಕುರಿತು ಪ್ರಿಯಾಂಕ ಗಾಂಧಿ ಟ್ವೀಟ್: ಕ್ರಿಮಿನಲ್ ಕೇಸು ದಾಖಲು...

ಪೆಹ್ಲು ಖಾನ್ ತೀರ್ಪು ಕುರಿತು ಪ್ರಿಯಾಂಕ ಗಾಂಧಿ ಟ್ವೀಟ್: ಕ್ರಿಮಿನಲ್ ಕೇಸು ದಾಖಲು…

- Advertisement -
- Advertisement -

ಪೆಹ್ಲು ಖಾನ್ ತೀರ್ಪಿನ ಬಗ್ಗೆ ಟ್ವೀಟ್ ಮಾಡಿದ್ದಕ್ಕಾಗಿ ಪ್ರಿಯಾಂಕಾ ಗಾಂಧಿ ವಿರುದ್ಧ ಮುಜಫರ್ ಪುರ್ ನ್ಯಾಯಾಲಯದಲ್ಲಿ ಕ್ರಿಮಿನಲ್ ಮೊಕದ್ದಮೆ ದಾಖಲಿಸಲಾಗಿದೆ.

ಪ್ರಿಯಾಂಕಾ ಗಾಂಧಿ ಅವರ ಹೇಳಿಕೆಗಳು ನ್ಯಾಯಾಂಗ ನಿಂದನೆ ಮತ್ತು ಕೋಮು ದ್ವೇಷವನ್ನು ಹರಡಲು ಪ್ರಯತ್ನಿಸಿವೆ ಎಂದು ಆರೋಪಿಸಿ ಕೇಸು ದಾಖಲಾಗಿದ್ದು ಆಗಸ್ಟ್ 26 ರಂದು ವಿಚಾರಣೆ ನಡೆಯಲಿದೆ.

ಪೆಹ್ಲು ಖಾನ್ ಗೆ ಗುಂಪು ಥಳಿತ ಮತ್ತು ಸಾವಿನ ಪ್ರಕರಣದಲ್ಲಿ ರಾಜಸ್ಥಾನ ನ್ಯಾಯಾಲಯದ ತೀರ್ಪಿನ ಕುರಿತು ಟ್ವೀಟ್ ಮಾಡಿದ್ದಕ್ಕಾಗಿ ಕಾಂಗ್ರೆಸ್ ಮುಖಂಡೆ ಪ್ರಿಯಾಂಕಾ ಗಾಂಧಿ ವಾದ್ರಾ ವಿರುದ್ಧ ಶುಕ್ರವಾರ ಕ್ರಿಮಿನಲ್ ಮೊಕದ್ದಮೆ ದಾಖಲಿಸಲಾಗಿದೆ ಎಂದು ಪಿಟಿಐ ವರದಿ ಮಾಡಿದೆ. ಪ್ರಿಯಾಂಕಾ ಗಾಂಧಿ ಅವರ ಹೇಳಿಕೆಗಳು ನ್ಯಾಯಾಂಗ ನಿಂದನೆ ಮತ್ತು ಕೋಮು ದ್ವೇಷವನ್ನು ಹರಡಲು ಪ್ರಯತ್ನಿಸಿದೆ ಎನ್ನಲಾಗಿದೆ.

ಪೆಹ್ಲೂ ಖಾನ್ ಸಾವಿನ ಪ್ರಕರಣದ ಆರು ಆರೋಪಿಗಳನ್ನು ರಾಜಸ್ಥಾನ ಕೋರ್ಟ್ ಖುಲಾಸೆಗೊಳಿಸಿದ್ದರಿಂದ ಪ್ರಿಯಾಂಕ ಗಾಂಧಿ ಆ ತೀರ್ಪನ್ನು ಆಘಾತಕಾರಿ ಎಂದು ಕರೆದಿದ್ದರು. ಗುಂಪು ಹತ್ಯೆ ವಿರುದ್ಧ ಕಾನೂನು ಜಾರಿಗೆ ತಂದಿದ್ದಕ್ಕಾಗಿ ಅವರು ರಾಜಸ್ಥಾನ ಸರ್ಕಾರವನ್ನು ಶ್ಲಾಘಿಸಿದ್ದರು. “ಪೆಹ್ಲು ಖಾನ್ ಪ್ರಕರಣದಲ್ಲಿ ನ್ಯಾಯ ಒದಗಿಸಲು ಇದರಿಂದ ಸಾಧ್ಯವಾಗುತ್ತದೆ ನಾನು ಭಾವಿಸುತ್ತೇನೆ. ನಮ್ಮ ದೇಶದಲ್ಲಿ ಅಮಾನವೀಯತೆಗೆ ಯಾವುದೇ ಸ್ಥಾನವಿರಬಾರದು ಮತ್ತು ಗುಂಪು ಥಳಿಸಿ ಕೊಲೆ ಮಾಡುವುದು ಘೋರ ಅಪರಾಧವಾಗಿದೆ.” ಎಂದು ಅವರು ಟ್ವೀಟ್ ಮಾಡಿದ್ದರು.

ಪ್ರಿಯಾಂಕಾ ಗಾಂಧಿ ವಿರುದ್ಧ ಮುಖ್ಯ ನ್ಯಾಯಾಂಗ ಮ್ಯಾಜಿಸ್ಟ್ರೇಟ್ ಸೂರ್ಯ ಕಾಂತ್ ತಿವಾರಿ ಅವರ ನ್ಯಾಯಾಲಯದಲ್ಲಿ ಸ್ಥಳೀಯ ವಕೀಲ ಸುಧೀರ್ ಕುಮಾರ್ ಓಜಾ ಅವರು 153, 504, 506 [ಕ್ರಿಮಿನಲ್ ಬೆದರಿಕೆ] ಅಡಿಯಲ್ಲಿ ದಾಖಲಿಸಿದ್ದಾರೆ.

ಪೆಹ್ಲು ಖಾನ್ ಆಸ್ಪತ್ರೆಯಲ್ಲಿದ್ದಾಗ

ರಾಜಸ್ಥಾನ ನ್ಯಾಯಾಲಯವು ಪೆಹ್ಲೂ ಖಾನ್ ಹತ್ಯೆ ಪ್ರಕರಣದಲ್ಲಿ ಆರು ಆರೋಪಿಗಳನ್ನು ಬುಧವಾರ ಖುಲಾಸೆಗೊಳಿಸಿತ್ತು. ಅಪರಾಧದ ಸಮಯದಲ್ಲಿ ಅಪ್ರಾಪ್ತ ವಯಸ್ಕರಾಗಿದ್ದ ಇತರ ಮೂವರು ಆರೋಪಿಗಳನ್ನು ಬಾಲಾಪರಾಧಿ ನ್ಯಾಯಾಲಯದಲ್ಲಿ ಪ್ರತ್ಯೇಕವಾಗಿ ವಿಚಾರಣೆ ನಡೆಸಲಾಗುತ್ತಿದೆ.

ಇದನ್ನೂ ಓದಿ: ಗಂಪು ಥಳಿತದಲ್ಲಿ ಹತ್ಯೆಯಾದ ಪೆಹ್ಲು ಖಾನ್ ವಿರುದ್ಧವೇ ಚಾರ್ಜ್‍ಶೀಟ್ ಸಲ್ಲಿಸಿದ ರಾಜಸ್ಥಾನ ಪೊಲೀಸರು!

ತೀರ್ಪಿನ ವಿರುದ್ಧ ಮೇಲ್ಮನವಿ ಸಲ್ಲಿಸುವುದಾಗಿ ಕಾಂಗ್ರೆಸ್ ನೇತೃತ್ವದ ರಾಜಸ್ಥಾನ ಸರ್ಕಾರ ಹೇಳಿದೆ. ಅಲ್ಲದೇ ಗುಂಪು ಹತ್ಯೆ ವಿರುದ್ಧದ ಕಾನೂನನ್ನು ಸಹ ಅದು ಈಗಾಗಲೇ ಜಾರಿಗೊಳಿಸಿದೆ.

ಇದನ್ನೂ ಓದಿ: ಮಾರ್ಯಾದೆ ಹತ್ಯೆ, ಗುಂಪು ಹಲ್ಲೆಗಳ ವಿರುದ್ಧ ಕಠಿಣ ಕಾನೂನು ಜಾರಿಗೊಳಿಸಿದ ರಾಜಸ್ಥಾನ ಸರ್ಕಾರ

2017ರ ಏಪ್ರಿಲ್ 1 ರಂದು ಜೈಪುರ-ದೆಹಲಿ ಹೆದ್ದಾರಿಯಲ್ಲಿ ಗೋವು ಸಾಗಿಸುತ್ತಿದ್ದರು ಎಂಬು ಆರೋಪದಿಂದ ಸ್ವಘೋಷಿತ ಗೋರಕ್ಷಕರಿಂದ ತೀವ್ರವಾಗಿ ಹಲ್ಲೆಗೊಳಗಾಗಿ ಪೆಹ್ಲು ಖಾನ್ ನಿಧನವಾಗಿದ್ದರು. ಮೂಲತಃ ಪಶು ಸಂಗೋಪನೆ ಮಾಡುತ್ತಿದ್ದ ಪೆಹ್ಲು ಖಾನ್ ಮತ್ತು ಅವರ ಮಗ ಇರ್ಶಾದ್ ಖಾನ್ ಜೈಪುರದ ದನಗಳ ಸಂತೆಯಿಂದ ಸಾಕಾಣಿಕೆಗೆಂದು ದಾಖಲೆಗಳ ಸಮೇತ 2017ರ ಏಪ್ರಿಲ್ 1 ರಂದು ಎರಡು ಹಸುಗಳನ್ನು ಕೊಂಡು ತರುತ್ತಿದ್ದಾಗ ಘಟನೆ ಜರುಗಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...

ಹತ್ಯಾಕಾಂಡಕ್ಕೆ ಸಮನಾದ NEET ಹಗರಣ ನಡೆಯಲು ಬಿಟ್ಟ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಡಲಿ

ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಲೀಕ್ ಆದ ನಂತರದ ಬೆಳವಣಿಗೆಗಳನ್ನು ಇಡೀ ದೇಶ ಗಮನಿಸುತ್ತಿದೆ. ಅದರಲ್ಲೂ ವಿಶೇಷವಾಗಿ ಜೂನ್ ಆರಂಭದಿಂದ ಇಲ್ಲಿಯವರೆಗೆ ದೇಶದ ವಿದ್ಯಾರ್ಥಿಗಳು ನಡೆಸುತ್ತಿರುವ ಆಂದೋಲನವನ್ನು ದೇಶದ ಜನತೆ ನೋಡುತ್ತಿದ್ದಾರೆ. ದೇಶದ...

ಸಿಜೆಪಿ ಮತ್ತು ಜೆನ್‌ ಜಿಫಿಕೇಶನ್: ಪ್ರಸ್ತುತ ಬೆಳವಣಿಗೆ, ಭವಿಷ್ಯದ ಸಾಧ್ಯತೆ

ಇತ್ತೀಚಿನ ಬೆಳವಣಿಗೆಗಳು ಕಳೆದ ಒಂದು ತಿಂಗಳಿಂದ ನಡೆಯುತ್ತಿರುವ ಸಿಜೆಪಿ (ಕಾಕ್ರೋಚ್‌ ಜನತಾ ಪಕ್ಷ) ಪ್ರತಿಭಟನೆ ಈಗ ತಾರ್ಕಿಕ ಹಂತಕ್ಕೆ ತಲಪುತ್ತಿದೆ. ಪ್ರಶ್ನೆಪತ್ರಿಕೆ ಸೋರಿಕೆಯ ಕಾರಣಕ್ಕೆ ನೀಟ್‌ನ (ರಾಷ್ಟ್ರೀಯ ಅರ್ಹತಾ ಹಾಗೂ ಪ್ರವೇಶ ಪರೀಕ್ಷೆ) ಮೊದಲ...

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...

ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ನಡುವೆ ವಿದ್ಯಾರ್ಥಿಗಳ ಹೋರಾಟವನ್ನು ಕುಹಕವಾಡಿರುವ ವಿಧಾನ ಪರಿಷತ್ ಬಿಜೆಪಿ...