Homeಮುಖಪುಟಪೆಹ್ಲು ಖಾನ್ ತೀರ್ಪು ಕುರಿತು ಪ್ರಿಯಾಂಕ ಗಾಂಧಿ ಟ್ವೀಟ್: ಕ್ರಿಮಿನಲ್ ಕೇಸು ದಾಖಲು...

ಪೆಹ್ಲು ಖಾನ್ ತೀರ್ಪು ಕುರಿತು ಪ್ರಿಯಾಂಕ ಗಾಂಧಿ ಟ್ವೀಟ್: ಕ್ರಿಮಿನಲ್ ಕೇಸು ದಾಖಲು…

- Advertisement -
- Advertisement -

ಪೆಹ್ಲು ಖಾನ್ ತೀರ್ಪಿನ ಬಗ್ಗೆ ಟ್ವೀಟ್ ಮಾಡಿದ್ದಕ್ಕಾಗಿ ಪ್ರಿಯಾಂಕಾ ಗಾಂಧಿ ವಿರುದ್ಧ ಮುಜಫರ್ ಪುರ್ ನ್ಯಾಯಾಲಯದಲ್ಲಿ ಕ್ರಿಮಿನಲ್ ಮೊಕದ್ದಮೆ ದಾಖಲಿಸಲಾಗಿದೆ.

ಪ್ರಿಯಾಂಕಾ ಗಾಂಧಿ ಅವರ ಹೇಳಿಕೆಗಳು ನ್ಯಾಯಾಂಗ ನಿಂದನೆ ಮತ್ತು ಕೋಮು ದ್ವೇಷವನ್ನು ಹರಡಲು ಪ್ರಯತ್ನಿಸಿವೆ ಎಂದು ಆರೋಪಿಸಿ ಕೇಸು ದಾಖಲಾಗಿದ್ದು ಆಗಸ್ಟ್ 26 ರಂದು ವಿಚಾರಣೆ ನಡೆಯಲಿದೆ.

ಪೆಹ್ಲು ಖಾನ್ ಗೆ ಗುಂಪು ಥಳಿತ ಮತ್ತು ಸಾವಿನ ಪ್ರಕರಣದಲ್ಲಿ ರಾಜಸ್ಥಾನ ನ್ಯಾಯಾಲಯದ ತೀರ್ಪಿನ ಕುರಿತು ಟ್ವೀಟ್ ಮಾಡಿದ್ದಕ್ಕಾಗಿ ಕಾಂಗ್ರೆಸ್ ಮುಖಂಡೆ ಪ್ರಿಯಾಂಕಾ ಗಾಂಧಿ ವಾದ್ರಾ ವಿರುದ್ಧ ಶುಕ್ರವಾರ ಕ್ರಿಮಿನಲ್ ಮೊಕದ್ದಮೆ ದಾಖಲಿಸಲಾಗಿದೆ ಎಂದು ಪಿಟಿಐ ವರದಿ ಮಾಡಿದೆ. ಪ್ರಿಯಾಂಕಾ ಗಾಂಧಿ ಅವರ ಹೇಳಿಕೆಗಳು ನ್ಯಾಯಾಂಗ ನಿಂದನೆ ಮತ್ತು ಕೋಮು ದ್ವೇಷವನ್ನು ಹರಡಲು ಪ್ರಯತ್ನಿಸಿದೆ ಎನ್ನಲಾಗಿದೆ.

ಪೆಹ್ಲೂ ಖಾನ್ ಸಾವಿನ ಪ್ರಕರಣದ ಆರು ಆರೋಪಿಗಳನ್ನು ರಾಜಸ್ಥಾನ ಕೋರ್ಟ್ ಖುಲಾಸೆಗೊಳಿಸಿದ್ದರಿಂದ ಪ್ರಿಯಾಂಕ ಗಾಂಧಿ ಆ ತೀರ್ಪನ್ನು ಆಘಾತಕಾರಿ ಎಂದು ಕರೆದಿದ್ದರು. ಗುಂಪು ಹತ್ಯೆ ವಿರುದ್ಧ ಕಾನೂನು ಜಾರಿಗೆ ತಂದಿದ್ದಕ್ಕಾಗಿ ಅವರು ರಾಜಸ್ಥಾನ ಸರ್ಕಾರವನ್ನು ಶ್ಲಾಘಿಸಿದ್ದರು. “ಪೆಹ್ಲು ಖಾನ್ ಪ್ರಕರಣದಲ್ಲಿ ನ್ಯಾಯ ಒದಗಿಸಲು ಇದರಿಂದ ಸಾಧ್ಯವಾಗುತ್ತದೆ ನಾನು ಭಾವಿಸುತ್ತೇನೆ. ನಮ್ಮ ದೇಶದಲ್ಲಿ ಅಮಾನವೀಯತೆಗೆ ಯಾವುದೇ ಸ್ಥಾನವಿರಬಾರದು ಮತ್ತು ಗುಂಪು ಥಳಿಸಿ ಕೊಲೆ ಮಾಡುವುದು ಘೋರ ಅಪರಾಧವಾಗಿದೆ.” ಎಂದು ಅವರು ಟ್ವೀಟ್ ಮಾಡಿದ್ದರು.

ಪ್ರಿಯಾಂಕಾ ಗಾಂಧಿ ವಿರುದ್ಧ ಮುಖ್ಯ ನ್ಯಾಯಾಂಗ ಮ್ಯಾಜಿಸ್ಟ್ರೇಟ್ ಸೂರ್ಯ ಕಾಂತ್ ತಿವಾರಿ ಅವರ ನ್ಯಾಯಾಲಯದಲ್ಲಿ ಸ್ಥಳೀಯ ವಕೀಲ ಸುಧೀರ್ ಕುಮಾರ್ ಓಜಾ ಅವರು 153, 504, 506 [ಕ್ರಿಮಿನಲ್ ಬೆದರಿಕೆ] ಅಡಿಯಲ್ಲಿ ದಾಖಲಿಸಿದ್ದಾರೆ.

ಪೆಹ್ಲು ಖಾನ್ ಆಸ್ಪತ್ರೆಯಲ್ಲಿದ್ದಾಗ

ರಾಜಸ್ಥಾನ ನ್ಯಾಯಾಲಯವು ಪೆಹ್ಲೂ ಖಾನ್ ಹತ್ಯೆ ಪ್ರಕರಣದಲ್ಲಿ ಆರು ಆರೋಪಿಗಳನ್ನು ಬುಧವಾರ ಖುಲಾಸೆಗೊಳಿಸಿತ್ತು. ಅಪರಾಧದ ಸಮಯದಲ್ಲಿ ಅಪ್ರಾಪ್ತ ವಯಸ್ಕರಾಗಿದ್ದ ಇತರ ಮೂವರು ಆರೋಪಿಗಳನ್ನು ಬಾಲಾಪರಾಧಿ ನ್ಯಾಯಾಲಯದಲ್ಲಿ ಪ್ರತ್ಯೇಕವಾಗಿ ವಿಚಾರಣೆ ನಡೆಸಲಾಗುತ್ತಿದೆ.

ಇದನ್ನೂ ಓದಿ: ಗಂಪು ಥಳಿತದಲ್ಲಿ ಹತ್ಯೆಯಾದ ಪೆಹ್ಲು ಖಾನ್ ವಿರುದ್ಧವೇ ಚಾರ್ಜ್‍ಶೀಟ್ ಸಲ್ಲಿಸಿದ ರಾಜಸ್ಥಾನ ಪೊಲೀಸರು!

ತೀರ್ಪಿನ ವಿರುದ್ಧ ಮೇಲ್ಮನವಿ ಸಲ್ಲಿಸುವುದಾಗಿ ಕಾಂಗ್ರೆಸ್ ನೇತೃತ್ವದ ರಾಜಸ್ಥಾನ ಸರ್ಕಾರ ಹೇಳಿದೆ. ಅಲ್ಲದೇ ಗುಂಪು ಹತ್ಯೆ ವಿರುದ್ಧದ ಕಾನೂನನ್ನು ಸಹ ಅದು ಈಗಾಗಲೇ ಜಾರಿಗೊಳಿಸಿದೆ.

ಇದನ್ನೂ ಓದಿ: ಮಾರ್ಯಾದೆ ಹತ್ಯೆ, ಗುಂಪು ಹಲ್ಲೆಗಳ ವಿರುದ್ಧ ಕಠಿಣ ಕಾನೂನು ಜಾರಿಗೊಳಿಸಿದ ರಾಜಸ್ಥಾನ ಸರ್ಕಾರ

2017ರ ಏಪ್ರಿಲ್ 1 ರಂದು ಜೈಪುರ-ದೆಹಲಿ ಹೆದ್ದಾರಿಯಲ್ಲಿ ಗೋವು ಸಾಗಿಸುತ್ತಿದ್ದರು ಎಂಬು ಆರೋಪದಿಂದ ಸ್ವಘೋಷಿತ ಗೋರಕ್ಷಕರಿಂದ ತೀವ್ರವಾಗಿ ಹಲ್ಲೆಗೊಳಗಾಗಿ ಪೆಹ್ಲು ಖಾನ್ ನಿಧನವಾಗಿದ್ದರು. ಮೂಲತಃ ಪಶು ಸಂಗೋಪನೆ ಮಾಡುತ್ತಿದ್ದ ಪೆಹ್ಲು ಖಾನ್ ಮತ್ತು ಅವರ ಮಗ ಇರ್ಶಾದ್ ಖಾನ್ ಜೈಪುರದ ದನಗಳ ಸಂತೆಯಿಂದ ಸಾಕಾಣಿಕೆಗೆಂದು ದಾಖಲೆಗಳ ಸಮೇತ 2017ರ ಏಪ್ರಿಲ್ 1 ರಂದು ಎರಡು ಹಸುಗಳನ್ನು ಕೊಂಡು ತರುತ್ತಿದ್ದಾಗ ಘಟನೆ ಜರುಗಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಖ್ಯಾತ ಪತ್ರಕರ್ತ ಪಿ. ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

ಕನ್ನಡ ಪತ್ರಿಕೋದ್ಯಮದ ಧ್ರುವತಾರೆ, ದಿವಂಗತ ಪಿ. ಲಂಕೇಶ್ ಅವರ ಧರ್ಮಪತ್ನಿ ಹಾಗೂ ದಿವಂಗತ ಪತ್ರಕರ್ತೆ ಗೌರಿ ಲಂಕೇಶ್ ಅವರ ತಾಯಿಯಾದ ಇಂದಿರಾ ಲಂಕೇಶ್ (84) ಅವರು ಸೋಮವಾರ ಬೆಳಗ್ಗೆ ನಿಧನರಾಗಿದ್ದಾರೆ. ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ...

ಬಾಗಲಕೋಟೆಯ ವಿವಿಧ ಪ್ರದೇಶಗಳಲ್ಲಿ ಎಸ್‌ಐಆರ್‌ ವಿರುದ್ಧ ಜನಜಾಗೃತಿ ಜಾಥಾ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರುದ್ಧ ಬಾಗಲಕೋಟೆ ನಗರದ ವಿವಿಧ ಭಾಗಗಳಲ್ಲಿ ಭಾನುವಾರ (ಜೂ.14) ಜಾಗೃತಿ ಜಾಥಾ ನಡೆಯಿತು. ನವನಗರದ ವಿದ್ಯಾಗಿರಿ ಬಸವೇಶ್ವರ ಇಂಜಿನಿಯರಿಂಗ್ ಕಾಲೇಜು ಸರ್ಕಲ್‌ನಿಂದ ಪ್ರಾರಂಭವಾದ ಜಾಥಾ...

SIR ವಿರೋಧಿ ಜನಜಾಗೃತಿ ಜಾಥಾ: ಕಾಫಿ ನಾಡು ಚಿಕ್ಕಮಗಳೂರಲ್ಲಿ ಅದ್ದೂರಿ ಸ್ವಾಗತ

ಚಿಕ್ಕಮಗಳೂರು: ರಾಜ್ಯಾದ್ಯಂತ ಐದು ವಿಭಾಗಗಳಲ್ಲಿ ಸಂಚರಿಸುತ್ತಿರುವ 'SIR ವಿರೋಧಿ ಜನಜಾಗೃತಿ ಜಾಥಾ'ದ 3ನೇ ಮಾರ್ಗದ ತಂಡಕ್ಕೆ ಕಾಫಿ ನಾಡು ಚಿಕ್ಕಮಗಳೂರಿನಲ್ಲಿ ಅದ್ದೂರಿ ಸ್ವಾಗತ ದೊರೆಯಿತು. ಭಾನುವಾರ ಬೆಳಗ್ಗೆ ಜಿಲ್ಲೆಯ ಕೊಪ್ಪ ತಾಲ್ಲೂಕಿಗೆ ಆಗಮಿಸಿದ ಜಾಥಾ...

ಚಿಕ್ಕಮಗಳೂರಿನಲ್ಲಿ ಎಸ್‌ಐಆರ್ (SIR) ವಿರೋಧಿ ಜಾಥಾ: ಮತದಾರರ ಹಕ್ಕು ಕಸಿಯುವ ಹುನ್ನಾರದ ವಿರುದ್ಧ ಆಕ್ರೋಶ

ಭಾರತ ಚುನಾವಣಾ ಆಯೋಗವು ಜಾರಿಗೆ ತಂದಿರುವ ವಿಶೇಷ ತೀವ್ರ ಪರಿಷ್ಕರಣೆ (SIR - Special Intensive Revision) ಪ್ರಕ್ರಿಯೆಯಲ್ಲಿ ಯಾವುದೇ ಅರ್ಹ ಮತದಾರರು ಪಟ್ಟಿಯಿಂದ ಹೊರಗುಳಿಯದಂತೆ ಜಾಗ್ರತೆ ವಹಿಸಬೇಕಾದ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ....

ಮಂಗಳೂರು: ಚುನಾವಣಾ ಆಯೋಗ ಕೇಂದ್ರ ಸರ್ಕಾರದ ಮುಖವಾಣಿಯಾಗಿ ಕಾರ್ಯನಿರ್ವಹಿಸುತ್ತಿದೆ: ವಿ.ಎಸ್. ಶ್ರೀಧರ್ 

ರಾಜ್ಯದ ಆರು ಜಿಲ್ಲೆಗಳಲ್ಲಿ ಪ್ರಗತಿಪರ ಸಂಘಟನೆಗಳು, ಎದ್ದೇಳು ಕರ್ನಾಟಕ ಹಾಗೂ ಜಾತ್ಯತೀತ ಪಕ್ಷಗಳ ಒಕ್ಕೂಟವಾದ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಗಿರುವ ಎಸ್‌ಐಆರ್ ಜನಜಾಗೃತಿ ಜಾಥಾದ ಭಾಗವಾಗಿ ಇಂದು (ಜೂನ್-14) ಮಂಗಳೂರಿನಲ್ಲಿ ಸಭೆ...

ಬಿಸಿಲ ನಾಡು ಕಲಬುರಗಿಯಲ್ಲಿ ಮೊಳಗಿದ SIR ವಿರೋಧಿ ಘೋಷಣೆ.

ಕೇಂದ್ರ ಚುನಾವಣಾ ಆಯೋಗ ಜಾರಿಗೆ ತಂದಿರುವ ವಿಶೇಷ ತೀವ್ರ ಮತ ಪರಿಷ್ಕರಣೆ SIR ಅನ್ನು ಕರ್ನಾಟಕದಲ್ಲಿ ಜಾರಿ ಮಾಡಬಾರದು ಎಂದು ಆಗ್ರಹಿಸಿ ಕರ್ನಾಟಕದಾದ್ಯಂತ ಎದ್ದೇಳು ಕರ್ನಾಟಕ ಹಾಗಾ SIR ವಿರೋಧಿ ಕರ್ನಾಟಕ ವೇದಿಕೆಯು...

ವಿಜಯಪುರ : ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾಗೆ ಚಾಲನೆ

ರಾಜ್ಯದ ಆರು ಜಿಲ್ಲೆಗಳಲ್ಲಿ ನಡೆಯಲಿರುವ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾಗೆ ವಿಜಯಪುರದ ಅಂಬೇಡ್ಕರ್ ವೃತ್ತದಲ್ಲಿ ಶನಿವಾರ (ಜೂ.13) ಸಂಜೆ ಚಾಲನೆ ದೊರೆಯಿತು. ಜಾಥಾವನ್ನು ಉದ್ಘಾಟಿಸಿ ಮಾತನಾಡಿದ ಅಹಿಂದ ಮುಖಂಡ ಎಸ್ ಎಂ ಪಾಟೀಲ...

ಬಸವಣ್ಣನ ಕಲ್ಯಾಣದಲ್ಲಿ SIR ವಿರೋಧಿ ಜಾಥಾ.

ಬಸವಕಲ್ಯಾಣSIR ವಿರೋಧಿಸಿ ಕರ್ನಾಟಕದಾದ್ಯಂತ ನಡೆಯುತ್ತಿರುವ ಜಾಗೃತಿ ಜಾತಾವು ಬಸವಕಲ್ಯಾಣಕ್ಕೆ ತಲುಪಿತು. ಬಸವಕಲ್ಯಾಣದ ಅಂಬೇಡ್ಕರ್ ವೃತ್ತದಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಜನರು ಜನವಿರೋಧಿ SIR ನ್ನೂ ವಿರೋಧಿಸಿ ನಿರ್ಣಯ ಕೈಗೊಂಡರು. ಸಭೆಯಲ್ಲಿ ಮಾತನಾಡಿದ ಜಾಥಾದ ಮುಖ್ಯಸ್ಥ...

ಸಂಸದ ಬಿ.ವೈ ರಾಘವೇಂದ್ರ ನಡೆಸುತ್ತಿದ್ದ ಸಾರ್ವಜನಿಕ ಕುಂದುಕೊರತೆ ಸಭೆಯಲ್ಲಿ SIR ವಿರೋಧಿ ಜನಜಾಗೃತಿ ಜಾಥಾ ಕರಪತ್ರ ಹಂಚಿದ ಕಾರ್ಯಕರ್ತರು

ಶಿವಮೊಗ್ಗ : ಬಿಜೆಪಿ ಸಂಸದ ಬಿ.ವೈ.ರಾಘವೇಂದ್ರ ಅವರು ಜಿಲ್ಲೆಯ ಸಾಗರ ತಾಲ್ಲೂಕಿನ ರೈಲು ನಿಲ್ದಾಣದಲ್ಲಿ ಕುಂದುಕೊರತೆಗಳ ಸಭೆ ನಡೆಸುತ್ತಿದ್ದ ವೇಳೆ ಎಸ್‌ಐಆರ್ ವಿರುದ್ಧ ’ಎದ್ದೇಳು ಕರ್ನಾಟಕ’ ಮತ್ತು ’ಎಸ್‌ಐಆರ್ ವಿರೋಧಿ ಒಕ್ಕೂಟ’ದ ಮುಖಂಡರು...

ಬೀದರ್‌ ನಿಂದ ಶುರವಾದ SIR ವಿರೋಧಿ ಜನಜಾಗೃತಿ ಜಾಥಾ

SIR ವಿರೋಧಿ ಕರ್ನಾಟಕ ಹಾಗೂ ಎದ್ದೇಳು ಕರ್ನಾಟಕವು ಕರ್ನಾಟಕದಲ್ಲಿ SIR ಜಾರಿಯನ್ನು ವಿರೋಧಿಸಿ ರಾಜ್ಯದ 5 ಸ್ಥಳಗಳಿಂದ ಜನಜಾಗೃತಿ ಜಾಥಾ ಆಯೋಜಿಸಿದೆ. ಇಂದು ಬೀದರ್‌ ನ ಅಂಬೇಡ್ಕರ್‌ ಸರ್ಕಲ್‌ ನಿಂದ ಆರಂಭವಾದ ಜಾಥಾವು...