Homeಮುಖಪುಟಪೆಹ್ಲು ಖಾನ್ ತೀರ್ಪು ಕುರಿತು ಪ್ರಿಯಾಂಕ ಗಾಂಧಿ ಟ್ವೀಟ್: ಕ್ರಿಮಿನಲ್ ಕೇಸು ದಾಖಲು...

ಪೆಹ್ಲು ಖಾನ್ ತೀರ್ಪು ಕುರಿತು ಪ್ರಿಯಾಂಕ ಗಾಂಧಿ ಟ್ವೀಟ್: ಕ್ರಿಮಿನಲ್ ಕೇಸು ದಾಖಲು…

- Advertisement -
- Advertisement -

ಪೆಹ್ಲು ಖಾನ್ ತೀರ್ಪಿನ ಬಗ್ಗೆ ಟ್ವೀಟ್ ಮಾಡಿದ್ದಕ್ಕಾಗಿ ಪ್ರಿಯಾಂಕಾ ಗಾಂಧಿ ವಿರುದ್ಧ ಮುಜಫರ್ ಪುರ್ ನ್ಯಾಯಾಲಯದಲ್ಲಿ ಕ್ರಿಮಿನಲ್ ಮೊಕದ್ದಮೆ ದಾಖಲಿಸಲಾಗಿದೆ.

ಪ್ರಿಯಾಂಕಾ ಗಾಂಧಿ ಅವರ ಹೇಳಿಕೆಗಳು ನ್ಯಾಯಾಂಗ ನಿಂದನೆ ಮತ್ತು ಕೋಮು ದ್ವೇಷವನ್ನು ಹರಡಲು ಪ್ರಯತ್ನಿಸಿವೆ ಎಂದು ಆರೋಪಿಸಿ ಕೇಸು ದಾಖಲಾಗಿದ್ದು ಆಗಸ್ಟ್ 26 ರಂದು ವಿಚಾರಣೆ ನಡೆಯಲಿದೆ.

ಪೆಹ್ಲು ಖಾನ್ ಗೆ ಗುಂಪು ಥಳಿತ ಮತ್ತು ಸಾವಿನ ಪ್ರಕರಣದಲ್ಲಿ ರಾಜಸ್ಥಾನ ನ್ಯಾಯಾಲಯದ ತೀರ್ಪಿನ ಕುರಿತು ಟ್ವೀಟ್ ಮಾಡಿದ್ದಕ್ಕಾಗಿ ಕಾಂಗ್ರೆಸ್ ಮುಖಂಡೆ ಪ್ರಿಯಾಂಕಾ ಗಾಂಧಿ ವಾದ್ರಾ ವಿರುದ್ಧ ಶುಕ್ರವಾರ ಕ್ರಿಮಿನಲ್ ಮೊಕದ್ದಮೆ ದಾಖಲಿಸಲಾಗಿದೆ ಎಂದು ಪಿಟಿಐ ವರದಿ ಮಾಡಿದೆ. ಪ್ರಿಯಾಂಕಾ ಗಾಂಧಿ ಅವರ ಹೇಳಿಕೆಗಳು ನ್ಯಾಯಾಂಗ ನಿಂದನೆ ಮತ್ತು ಕೋಮು ದ್ವೇಷವನ್ನು ಹರಡಲು ಪ್ರಯತ್ನಿಸಿದೆ ಎನ್ನಲಾಗಿದೆ.

ಪೆಹ್ಲೂ ಖಾನ್ ಸಾವಿನ ಪ್ರಕರಣದ ಆರು ಆರೋಪಿಗಳನ್ನು ರಾಜಸ್ಥಾನ ಕೋರ್ಟ್ ಖುಲಾಸೆಗೊಳಿಸಿದ್ದರಿಂದ ಪ್ರಿಯಾಂಕ ಗಾಂಧಿ ಆ ತೀರ್ಪನ್ನು ಆಘಾತಕಾರಿ ಎಂದು ಕರೆದಿದ್ದರು. ಗುಂಪು ಹತ್ಯೆ ವಿರುದ್ಧ ಕಾನೂನು ಜಾರಿಗೆ ತಂದಿದ್ದಕ್ಕಾಗಿ ಅವರು ರಾಜಸ್ಥಾನ ಸರ್ಕಾರವನ್ನು ಶ್ಲಾಘಿಸಿದ್ದರು. “ಪೆಹ್ಲು ಖಾನ್ ಪ್ರಕರಣದಲ್ಲಿ ನ್ಯಾಯ ಒದಗಿಸಲು ಇದರಿಂದ ಸಾಧ್ಯವಾಗುತ್ತದೆ ನಾನು ಭಾವಿಸುತ್ತೇನೆ. ನಮ್ಮ ದೇಶದಲ್ಲಿ ಅಮಾನವೀಯತೆಗೆ ಯಾವುದೇ ಸ್ಥಾನವಿರಬಾರದು ಮತ್ತು ಗುಂಪು ಥಳಿಸಿ ಕೊಲೆ ಮಾಡುವುದು ಘೋರ ಅಪರಾಧವಾಗಿದೆ.” ಎಂದು ಅವರು ಟ್ವೀಟ್ ಮಾಡಿದ್ದರು.

ಪ್ರಿಯಾಂಕಾ ಗಾಂಧಿ ವಿರುದ್ಧ ಮುಖ್ಯ ನ್ಯಾಯಾಂಗ ಮ್ಯಾಜಿಸ್ಟ್ರೇಟ್ ಸೂರ್ಯ ಕಾಂತ್ ತಿವಾರಿ ಅವರ ನ್ಯಾಯಾಲಯದಲ್ಲಿ ಸ್ಥಳೀಯ ವಕೀಲ ಸುಧೀರ್ ಕುಮಾರ್ ಓಜಾ ಅವರು 153, 504, 506 [ಕ್ರಿಮಿನಲ್ ಬೆದರಿಕೆ] ಅಡಿಯಲ್ಲಿ ದಾಖಲಿಸಿದ್ದಾರೆ.

ಪೆಹ್ಲು ಖಾನ್ ಆಸ್ಪತ್ರೆಯಲ್ಲಿದ್ದಾಗ

ರಾಜಸ್ಥಾನ ನ್ಯಾಯಾಲಯವು ಪೆಹ್ಲೂ ಖಾನ್ ಹತ್ಯೆ ಪ್ರಕರಣದಲ್ಲಿ ಆರು ಆರೋಪಿಗಳನ್ನು ಬುಧವಾರ ಖುಲಾಸೆಗೊಳಿಸಿತ್ತು. ಅಪರಾಧದ ಸಮಯದಲ್ಲಿ ಅಪ್ರಾಪ್ತ ವಯಸ್ಕರಾಗಿದ್ದ ಇತರ ಮೂವರು ಆರೋಪಿಗಳನ್ನು ಬಾಲಾಪರಾಧಿ ನ್ಯಾಯಾಲಯದಲ್ಲಿ ಪ್ರತ್ಯೇಕವಾಗಿ ವಿಚಾರಣೆ ನಡೆಸಲಾಗುತ್ತಿದೆ.

ಇದನ್ನೂ ಓದಿ: ಗಂಪು ಥಳಿತದಲ್ಲಿ ಹತ್ಯೆಯಾದ ಪೆಹ್ಲು ಖಾನ್ ವಿರುದ್ಧವೇ ಚಾರ್ಜ್‍ಶೀಟ್ ಸಲ್ಲಿಸಿದ ರಾಜಸ್ಥಾನ ಪೊಲೀಸರು!

ತೀರ್ಪಿನ ವಿರುದ್ಧ ಮೇಲ್ಮನವಿ ಸಲ್ಲಿಸುವುದಾಗಿ ಕಾಂಗ್ರೆಸ್ ನೇತೃತ್ವದ ರಾಜಸ್ಥಾನ ಸರ್ಕಾರ ಹೇಳಿದೆ. ಅಲ್ಲದೇ ಗುಂಪು ಹತ್ಯೆ ವಿರುದ್ಧದ ಕಾನೂನನ್ನು ಸಹ ಅದು ಈಗಾಗಲೇ ಜಾರಿಗೊಳಿಸಿದೆ.

ಇದನ್ನೂ ಓದಿ: ಮಾರ್ಯಾದೆ ಹತ್ಯೆ, ಗುಂಪು ಹಲ್ಲೆಗಳ ವಿರುದ್ಧ ಕಠಿಣ ಕಾನೂನು ಜಾರಿಗೊಳಿಸಿದ ರಾಜಸ್ಥಾನ ಸರ್ಕಾರ

2017ರ ಏಪ್ರಿಲ್ 1 ರಂದು ಜೈಪುರ-ದೆಹಲಿ ಹೆದ್ದಾರಿಯಲ್ಲಿ ಗೋವು ಸಾಗಿಸುತ್ತಿದ್ದರು ಎಂಬು ಆರೋಪದಿಂದ ಸ್ವಘೋಷಿತ ಗೋರಕ್ಷಕರಿಂದ ತೀವ್ರವಾಗಿ ಹಲ್ಲೆಗೊಳಗಾಗಿ ಪೆಹ್ಲು ಖಾನ್ ನಿಧನವಾಗಿದ್ದರು. ಮೂಲತಃ ಪಶು ಸಂಗೋಪನೆ ಮಾಡುತ್ತಿದ್ದ ಪೆಹ್ಲು ಖಾನ್ ಮತ್ತು ಅವರ ಮಗ ಇರ್ಶಾದ್ ಖಾನ್ ಜೈಪುರದ ದನಗಳ ಸಂತೆಯಿಂದ ಸಾಕಾಣಿಕೆಗೆಂದು ದಾಖಲೆಗಳ ಸಮೇತ 2017ರ ಏಪ್ರಿಲ್ 1 ರಂದು ಎರಡು ಹಸುಗಳನ್ನು ಕೊಂಡು ತರುತ್ತಿದ್ದಾಗ ಘಟನೆ ಜರುಗಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...