Homeಮುಖಪುಟಗಂಪು ಥಳಿತದಲ್ಲಿ ಹತ್ಯೆಯಾದ ಪೆಹ್ಲು ಖಾನ್ ವಿರುದ್ಧವೇ ಚಾರ್ಜ್‍ಶೀಟ್ ಸಲ್ಲಿಸಿದ ರಾಜಸ್ಥಾನ ಪೊಲೀಸರು!

ಗಂಪು ಥಳಿತದಲ್ಲಿ ಹತ್ಯೆಯಾದ ಪೆಹ್ಲು ಖಾನ್ ವಿರುದ್ಧವೇ ಚಾರ್ಜ್‍ಶೀಟ್ ಸಲ್ಲಿಸಿದ ರಾಜಸ್ಥಾನ ಪೊಲೀಸರು!

- Advertisement -
- Advertisement -

| ನಾನುಗೌರಿ ಡೆಸ್ಕ್ |

2017ರ ಏಪ್ರಿಲ್ 1 ರಂದು ಜೈಪುರ-ದೆಹಲಿ ಹೆದ್ದಾರಿಯಲ್ಲಿ ಗೋವು ಸಾಗಿಸುತ್ತಿದ್ದರು ಎಂಬು ಆರೋಪದಿಂದ ಸ್ವಘೋಷಿತ ಗೋರಕ್ಷಕರಿಂದ ತೀವ್ರವಾಗಿ ಹಲ್ಲೆಗೊಳಗಾಗಿ ನಿಧನವಾಗಿದ್ದ ಪೆಹ್ಲು ಖಾನ್ ವಿರುದ್ಧವೇ ರಾಜಸ್ಥಾನ ಪೊಲೀಸರು ಚಾರ್ಜ್‍ಶೀಟ್ ಸಲ್ಲಿಸುವ ಮೂಲಕ ವಿವಾದ ಉಂಟು ಮಾಡಿದ್ದಾರೆ.

ಮೂಲತಃ ಪಶು ಸಂಗೋಪನೆ ಮಾಡುತ್ತಿದ್ದ ಪೆಹ್ಲು ಖಾನ್ ಮತ್ತು ಅವರ ಮಗ ಇರ್ಶಾದ್ ಖಾನ್ ಜೈಪುರದ ದನಗಳ ಸಂತೆಯಿಂದ ಸಾಕಾಣಿಕೆಗೆಂದು 2017ರ ಏಪ್ರಿಲ್ 1 ರಂದು ಎರಡು ಹಸುಗಳನ್ನು ಕೊಂಡು ತರುತ್ತಿದ್ದಾರು. ಆಗ ಅಕ್ರಮ ಕಳ್ಳಸಾಗಾಣಿಕೆ ಮಾಡುತ್ತಿದ್ದಾರೆ ಎಂದು ಆರೋಪಿಸಿ ಸ್ವಘೋಷಿತ ಗೋರಕ್ಷಕರು ದಾರಿ ಮಧ್ಯದಲ್ಲೇ ಇವರನ್ನು ತಡೆದು ಮನಬಂದಂತೆ ಥಳಿಸಿ, ಕಾಲಿನಿಂದ ಒದ್ದು ಗಾಯಗೊಳಿಸಿದ್ದರು. ಈ ಘಟನೆಯ ವಿಡಿಯೋ ರೆಕಾರ್ಡ್ ಎಲ್ಲೆಡೆ ಹರಡಿ ಖಂಡನೆ ವ್ಯಕ್ತವಾಗಿತ್ತು. ಘಟನೆ ನಡೆದ ಎರಡು ದಿನಗಳ ನಂತರ ಪೆಹ್ಲು ಖಾನ್ ಆಸ್ಪತ್ರೆಯಲ್ಲಿ ನಿಧನರಾಗಿದ್ದರು.

ಪೆಹ್ಲು ಖಾನ್ ಮತ್ತು ಆತನ ಮಕ್ಕಳು 8 ಜನರ ಮೇಲೆ ಗುಂಪು ಥಳಿತ, ಹಲ್ಲೆಯ ದೂರು ದಾಖಲಿಸಿದ್ದರು. ಪರವಾನಗಿ ಇಲ್ಲದೇ ದನಗಳನ್ನು ಸಾಗಿಸುತ್ತಿದ್ದರೆಂಬ ಆರೋಪದ ಮೇಲೆ ಅವರ ಮೇಲೆಯೂ ಸಹ ಎಫ್.ಐ.ಆರ್ ದಾಖಲಾಗಿತ್ತು.

ಈಗ ಎರಡನೇ ಕೇಸಿನಲ್ಲಿ ಪೆಹ್ಲು ಖಾನ್ ಮತ್ತು ಆತನ ಮಕ್ಕಳ ಮೇಲೆ ಪೊಲೀಸರು ಚಾರ್ಜ್ ಶೀಟ್ ಸಲ್ಲಿಸಿದ್ದಾರೆ. ಗೋವು ಕಳ್ಳತನ, ಕಳ್ಳಸಾಗಣೆ ಮತ್ತಿತ್ತರ ಕೇಸುಗಳನ್ನು ಹಾಕಲಾಗಿದೆ. ಪೆಹ್ಲು ಖಾನ್‍ನನ್ನು ಕೊಂದ ಆರೋಪಿಗಳಾದ ಆ ಎಂಟು ಜನರು ಸದ್ಯಕ್ಕೆ ಜಾಮೀನನ ಮೇಲೆ ಹೊರಬಂದಿದ್ದು ಅವರಲ್ಲಿ ಇಬ್ಬರು ತಲೆಮರೆಸಿಕೊಂಡಿದ್ದಾರೆ.

ಪೆಹ್ಲು ಖಾನ್‍ನ ಮಗ ಇರ್ಶಾದ್ ಖಾನ್ “ನಾವು ಹಸುಗಳನ್ನು ಮನೆಯಲ್ಲಿ ಸಾಕಲೆಂದು ತರುತ್ತಿದ್ದೇವು. ಆದರೆ ದಾರಿಯಲ್ಲಿ ಅಡ್ಡಗಟ್ಟಿದ ಅವರು ನಮ್ಮನ್ನು ವಾಹನದಿಂದ ಕೆಳಗಿಳಿಯುವಂತೆ ಒತ್ತಾಯಿಸಿದರು. ನಾವು ಸಂತೆಯಿಂದ ತರುತ್ತಿದ್ದೇವೆ, ಕಳ್ಳತನ ಮಾಡಿಲ್ಲವೆಂದು ಪೇಪರ್‍ಗಳನ್ನು ತೋರಿಸಲು ಮುಂದಾದೆವು. ಆದರೂ ಅವರು ನಮ್ಮನ್ನು ಹೊರಗೆಳೆದು ಬೇಕಾಬಿಟ್ಟಿ ಥಳಿಸಿದರು. ನನ್ನ ಕಣ್ಣೆದುರು ಹೊಡೆದು ನನ್ನ ತಂದೆಯನ್ನು ಸಾಯಿಸಿಬಿಟ್ಟರು. ಆಗ ನಾನು ಬದುಕಿದ್ದೇನೆ ಎಂದು ಅನ್ನಿಸಿರಲಿಲ್ಲ ಎಂದು ತಮ್ಮ ಅಳಲು ತೋಡಿಕೊಂಡಿದ್ದಾರೆ.”

ಇತ್ತೀಚೆಗೆ ಜಾರ್ಖಂಡ್‍ನಲ್ಲಿ 22 ವರ್ಷದ ತಬ್ರೇಜ್ ಅನ್ಸಾರಿ ಎಂಬುವವರನ್ನು ಸಹ ಕಳ್ಳತನದ ಆರೋಪಿ ಹೊರಿಸಿ, ಕಂಬಕ್ಕೆ ಕಟ್ಟಿ ಜೈ ಶ್ರೀರಾಮ್ ಹೇಳುವಂತೆ ಒತ್ತಾಯಿಸಿ ಹಲ್ಲೆ ಮಾಡಿ ಗುಂಪು ಹತ್ಯೆ ಮಾಡಿದ್ದು ದೇಶಾದ್ಯಂತ ಸುದ್ದಿಯಲ್ಲಿದ್ದು ವ್ಯಾಪಕ ಚರ್ಚೆಯಾಗುತ್ತಿದೆ. ಇಂತಹ ಸಂದರ್ಭದಲ್ಲೇ ರಾಜಸ್ಥಾನದ ಪೊಲೀಸರ ಈ ನಡೆ ವಿವಾದ ಉಂಟುಮಾಡಿದೆ.

ಇದನ್ನು ಓದಿ: ನಾಟ್ ಇನ್ ದ ನೇಮ್ ಆಫ್ ಲಿಂಚಿಂಗ್: ಜೂನ್ 26ರಂದು ದೇಶಾದ್ಯಂತ ಪ್ರತಿಭಟನೆಗೆ ಕರೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಸರ್ಕಾರ ಬದಲಾದರೂ ಅಲ್ಲಿನ ಪೋಲಿಸರು ಬದಲಾಗಿಲ್ಲ

LEAVE A REPLY

Please enter your comment!
Please enter your name here

- Advertisment -

ವಿದ್ಯುತ್ ಖಾಸಗೀಕರಣ ವಿರುದ್ದದ ಹೋರಾಟಕ್ಕೆ ಗೆಲುವು: ಅರ್ಜಿ ಹಿಂಪಡೆದ ಟಾಟಾ ಪವರ್ ಕಂಪನಿ

ರಾಜ್ಯದಲ್ಲಿ ವಿದ್ಯುತ್ ಕ್ಷೇತ್ರದಲ್ಲಿ ಖಾಸಗೀಕರಣದ ಹೆಜ್ಜೆ ಇಡಲು ಮುಂದಾಗಿದ್ದ ಟಾಟಾ ಪವರ್ ಕಂಪನಿಗೆ ಭಾರಿ ಹಿನ್ನಡೆಯಾಗಿದೆ. ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗದ (KERC) ಮುಂದೆ ರಾಜ್ಯದ 19 ಕಂದಾಯ ಜಿಲ್ಲೆಗಳಿಗೆ ಸಂಬಂಧಿಸಿದಂತೆ ತಾನು...

SIR: ಮತದಾರರ ಮನೆಗೆ ಹೋಗದೆ ಕಚೇರಿಯಲ್ಲೇ ಕುಳಿತು ಫಾರ್ಮ್ ವಿತರಣೆ ಆರೋಪ, BLO ಗಳಿಗೆ ಎಚ್ಚರಿಕೆ ನೀಡಿದ ಆಯೋಗ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಸಾರ್ವಜನಿಕರಿಂದ ವ್ಯಾಪಕ ದೂರುಗಳು ಕೇಳಿಬಂದ ಬೆನ್ನಲ್ಲೇ, ರಾಜ್ಯ ಚುನಾವಣಾ ಆಯೋಗವು ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಮತದಾರರ ಮನೆ-ಮನೆಗೆ ಭೇಟಿ...

ಅಳುವ ಕಂದಮ್ಮಗಳನ್ನು ವಾಷಿಂಗ್ ಮೆಷಿನ್‌ನಲ್ಲಿ ಕೂಡಿಹಾಕ್ತಿದ್ದ ಇಬ್ಬರು ಕೇರ್‌ಟೇಕರ್ ಅರೆಸ್ಟ್

ಸಿಲಿಕಾನ್ ಸಿಟಿಯ ಬ್ರೂಕ್‌ಫೀಲ್ಡ್‌ನಲ್ಲಿರುವ ಪ್ರಮುಖ ಐಟಿ ಸಂಸ್ಥೆ 'ಕ್ಯಾಪ್‌ಜೆಮಿನಿ' ಕ್ಯಾಂಪಸ್‌ನ ಡೇ-ಕೇರ್ ಸೆಂಟರ್‌ನಲ್ಲಿ ಪುಟ್ಟ ಕಂದಮ್ಮಗಳನ್ನು ಬಾತ್‌ರೂಮ್ ಹಾಗೂ ವಾಷಿಂಗ್ ಮೆಷಿನ್‌ಗಳಲ್ಲಿ ಕೂಡಿಹಾಕಿ ವಿಕೃತಿ ಮೆರೆದಿದ್ದ ಪ್ರಕರಣದಲ್ಲಿ ಪೊಲೀಸರು ಭರ್ಜರಿ ಬೇಟೆಯಾಡಿದ್ದಾರೆ. ಪ್ರಕರಣದ...

“ನಾಗರಿಕರು ಸರ್ಕಾರದ ಗುಲಾಮರಲ್ಲ”: ಸಿಎಎ, ಜ್ಞಾನವಾಪಿ ವಿರೋಧಿ ಪ್ರತಿಭಟನೆ ಸಂಬಂಧ ಎಸ್‌ಡಿಪಿಐ ನಾಯಕನ ಗಡಿಪಾರು ಪ್ರಶ್ನಿಸಿದ ಬಾಂಬೆ ಹೈಕೋರ್ಟ್

“ದೇಶದ ನಾಗರಿಕರು ಸರ್ಕಾರದ ಗುಲಾಮರಲ್ಲ. ಕೇವಲ ಸರ್ಕಾರದ ನಿರ್ಧಾರಗಳನ್ನು ವಿರೋಧಿಸುವುದು ಅಥವಾ ಆಡಳಿತ ವ್ಯವಸ್ಥೆಯ ವಿರುದ್ಧ ಘೋಷಣೆಗಳನ್ನು ಕೂಗುವುದು ಒಬ್ಬ ನಾಗರಿಕನನ್ನು ಗಡಿಪಾರು ಮಾಡಲು ಕಾನೂನಾತ್ಮಕ ಕಾರಣವಾಗಲಾರದು,” ಎಂದು ಬಾಂಬೆ ಹೈಕೋರ್ಟ್‌ ಐತಿಹಾಸಿಕ...

ಗೌರಿಯಕ್ಕ, ಸುರೇಶ್ ಭಟ್ರ ಬಗ್ಗೆ ತಿಳಿಯಲು ಎಕ್ಸ್ ಆರೆಸ್ಸೆಸ್‌ನವರ ಪ್ರಮಾಣ ಪತ್ರ ಬೇಕಿಲ್ಲ

ಕರ್ನಾಟಕ ಕೋಮು ಸೌಹಾರ್ದ ವೇದಿಕೆಯಲ್ಲಿ ನಮ್ಮ ಒಡನಾಡಿಯಾಗಿದ್ದ ಎ‌ಐಸಿಸಿ ಕಾರ್ಯದರ್ಶಿಯೂ ಆಗಿರುವ ಪಿ.ವಿ.ಮೋಹನ್‌ರಿಗೆ ವಿಧಾನ ಪರಿಷತ್ ಸದಸ್ಯತ್ವ ಸಿಕ್ಕಿದ್ದು ಸಹಜವಾಗಿಯೇ ನಮಗೆ ಖುಷಿಯಾಗಿತ್ತು. ಈ ನಿಟ್ಟಿನಲ್ಲಿ ಮಂಗಳೂರಿನ ವುಡ್‌ಲ್ಯಾಂಡ್ಸ್ ಹೋಟೆಲಲ್ಲಿ ಕೋಮು ಸೌಹಾರ್ದ...

ಡ್ರಗ್ಸ್ ಮುಕ್ತ ಕರ್ನಾಟಕ ನಮ್ಮ ಗುರಿ: ‘ಆಪರೇಷನ್ RISE’ ಮತ್ತು ‘ಬೇಡ BRO’ ಅಭಿಯಾನಕ್ಕೆ ಸಚಿವ ಪ್ರಿಯಾಂಕ್ ಖರ್ಗೆ ಕರೆ

ಬೆಂಗಳೂರು: ಮಾದಕ ದ್ರವ್ಯ ಮುಕ್ತ ಕರ್ನಾಟಕವನ್ನು ನಿರ್ಮಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದ್ದು, ಮಾದಕ ವ್ಯಸನದ ವಿರುದ್ಧ ಯುವಜನತೆ ಮತ್ತು ಸಾರ್ವಜನಿಕರು ಕೈಜೋಡಿಸಬೇಕು ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ...

ಬೆಂಗಳೂರಿನ 3 ಪ್ರಮುಖ ಮಾರ್ಗಗಳಲ್ಲಿ ಟೋಲ್ ದರ ಭಾರಿ ಹೆಚ್ಚಳ: ಇಂದಿನಿಂದಲೇ ಜಾರಿ 

ಬೆಂಗಳೂರು: ಸಿಲಿಕಾನ್ ಸಿಟಿಯ ವಾಹನ ಸವಾರರಿಗೆ ಜುಲೈ ಒಂದರಿಂದಲೇ ಅನ್ವಯವಾಗುವಂತೆ ಬೆಲೆ ಏರಿಕೆಯ ಭಾರಿ ಬಿಸಿ ತಟ್ಟಿದೆ. ಬೆಂಗಳೂರಿನ ಪ್ರಮುಖ ಸಂಪರ್ಕ ರಸ್ತೆಗಳಾದ ನೈಸ್ ರಸ್ತೆ (NICE Road), ಎಲೆಕ್ಟ್ರಾನಿಕ್ಸ್ ಸಿಟಿ ಎಲಿವೇಟೆಡ್...

ಕೊಪ್ಪಳದ ಬೋಚನಹಳ್ಳಿಯಲ್ಲಿ ದಲಿತರ ಮೇಲೆ ಹಲ್ಲೆ: ದೂರು-ಪ್ರತಿದೂರು; ಹೋರಾಟಕ್ಕೆ ಸಂಘಟನೆಗಳ ನಿರ್ಧಾರ

ಮೊಹರಂ ಮೆರವಣಿಗೆ ವೇಳೆ ನಡೆದ ಗಲಾಟೆಗೆ ಸಂಬಂಧಿಸಿದಂತೆ ದಲಿತರ ಮನೆಗಳಿಗೆ ನುಗ್ಗಿ ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ಕೊಪ್ಪಳ ತಾಲೂಕಿನ ಅಳವಂಡಿ ಬಳಿಯ ಬೋಚನಹಳ್ಳಿ ಗ್ರಾಮದಲ್ಲಿ ನಡೆದಿದೆ. ಜೂನ್ 25ರಂದು ಗ್ರಾಮದಲ್ಲಿ ಮೊಹರಂ ಮೆರವಣಿಗೆ...

ಎನ್ಯೂಮರೇಷನ್ ಫಾರಂ ಭರ್ತಿ ಮಾಡುವ ಮೂಲಕ SIR ಗೆ ಚಾಲನೆ ನೀಡಿದ ಸಿಎಂ ಡಿ.ಕೆ ಶಿವಕುಮಾರ್

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಇಂದು (ಜೂನ್ 30) ಮಂಗಳವಾರ ತಮ್ಮ ಸದಾಶಿವನಗರ ನಿವಾಸದಲ್ಲಿ ದಾಖಲಾತಿ ನಮೂನೆಯನ್ನು ಭರ್ತಿ ಮಾಡಿ ಸಲ್ಲಿಸುವ ಮೂಲಕ ಮತದಾರರ ಪಟ್ಟಿಯ 'ವಿಶೇಷ ತೀವ್ರ ಪರಿಷ್ಕರಣೆ' (SIR) ಅಭಿಯಾನಕ್ಕೆ ಅಧಿಕೃತವಾಗಿ...

‘ಆಪರೇಷನ್ ಸಿಂಧೂರ್‌’ ಕುರಿತು ಸಂಸತ್ತಿಗೆ ಸುಳ್ಳು ಮಾಹಿತಿ: ರಾಜನಾಥ್ ಸಿಂಗ್ ವಿರುದ್ಧ ಕಾಂಗ್ರೆಸ್‌ನಿಂದ ಹಕ್ಕುಚ್ಯುತಿ ನೋಟಿಸ್

ಕೇಂದ್ರ ರಕ್ಷಣಾ ಸಚಿವ ರಾಜ್‌ನಾಥ್ ಸಿಂಗ್ ವಿರುದ್ಧ ಕಾಂಗ್ರೆಸ್ ಪಕ್ಷ ಲೋಕಸಭೆಯಲ್ಲಿ ಹಕ್ಕುಚ್ಯುತಿ ನೋಟಿಸ್ ನೀಡಿದೆ. ಕಾಂಗ್ರೆಸ್ ಸಂಸದ ಕೆ. ಸಿ. ವೇಣುಗೋಪಾಲ್ ಅವರು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರಿಗೆ ಈ ಕುರಿತು ಪತ್ರ ಬರೆದಿದ್ದು,...