Homeಮುಖಪುಟಗಂಪು ಥಳಿತದಲ್ಲಿ ಹತ್ಯೆಯಾದ ಪೆಹ್ಲು ಖಾನ್ ವಿರುದ್ಧವೇ ಚಾರ್ಜ್‍ಶೀಟ್ ಸಲ್ಲಿಸಿದ ರಾಜಸ್ಥಾನ ಪೊಲೀಸರು!

ಗಂಪು ಥಳಿತದಲ್ಲಿ ಹತ್ಯೆಯಾದ ಪೆಹ್ಲು ಖಾನ್ ವಿರುದ್ಧವೇ ಚಾರ್ಜ್‍ಶೀಟ್ ಸಲ್ಲಿಸಿದ ರಾಜಸ್ಥಾನ ಪೊಲೀಸರು!

- Advertisement -
- Advertisement -

| ನಾನುಗೌರಿ ಡೆಸ್ಕ್ |

2017ರ ಏಪ್ರಿಲ್ 1 ರಂದು ಜೈಪುರ-ದೆಹಲಿ ಹೆದ್ದಾರಿಯಲ್ಲಿ ಗೋವು ಸಾಗಿಸುತ್ತಿದ್ದರು ಎಂಬು ಆರೋಪದಿಂದ ಸ್ವಘೋಷಿತ ಗೋರಕ್ಷಕರಿಂದ ತೀವ್ರವಾಗಿ ಹಲ್ಲೆಗೊಳಗಾಗಿ ನಿಧನವಾಗಿದ್ದ ಪೆಹ್ಲು ಖಾನ್ ವಿರುದ್ಧವೇ ರಾಜಸ್ಥಾನ ಪೊಲೀಸರು ಚಾರ್ಜ್‍ಶೀಟ್ ಸಲ್ಲಿಸುವ ಮೂಲಕ ವಿವಾದ ಉಂಟು ಮಾಡಿದ್ದಾರೆ.

ಮೂಲತಃ ಪಶು ಸಂಗೋಪನೆ ಮಾಡುತ್ತಿದ್ದ ಪೆಹ್ಲು ಖಾನ್ ಮತ್ತು ಅವರ ಮಗ ಇರ್ಶಾದ್ ಖಾನ್ ಜೈಪುರದ ದನಗಳ ಸಂತೆಯಿಂದ ಸಾಕಾಣಿಕೆಗೆಂದು 2017ರ ಏಪ್ರಿಲ್ 1 ರಂದು ಎರಡು ಹಸುಗಳನ್ನು ಕೊಂಡು ತರುತ್ತಿದ್ದಾರು. ಆಗ ಅಕ್ರಮ ಕಳ್ಳಸಾಗಾಣಿಕೆ ಮಾಡುತ್ತಿದ್ದಾರೆ ಎಂದು ಆರೋಪಿಸಿ ಸ್ವಘೋಷಿತ ಗೋರಕ್ಷಕರು ದಾರಿ ಮಧ್ಯದಲ್ಲೇ ಇವರನ್ನು ತಡೆದು ಮನಬಂದಂತೆ ಥಳಿಸಿ, ಕಾಲಿನಿಂದ ಒದ್ದು ಗಾಯಗೊಳಿಸಿದ್ದರು. ಈ ಘಟನೆಯ ವಿಡಿಯೋ ರೆಕಾರ್ಡ್ ಎಲ್ಲೆಡೆ ಹರಡಿ ಖಂಡನೆ ವ್ಯಕ್ತವಾಗಿತ್ತು. ಘಟನೆ ನಡೆದ ಎರಡು ದಿನಗಳ ನಂತರ ಪೆಹ್ಲು ಖಾನ್ ಆಸ್ಪತ್ರೆಯಲ್ಲಿ ನಿಧನರಾಗಿದ್ದರು.

ಪೆಹ್ಲು ಖಾನ್ ಮತ್ತು ಆತನ ಮಕ್ಕಳು 8 ಜನರ ಮೇಲೆ ಗುಂಪು ಥಳಿತ, ಹಲ್ಲೆಯ ದೂರು ದಾಖಲಿಸಿದ್ದರು. ಪರವಾನಗಿ ಇಲ್ಲದೇ ದನಗಳನ್ನು ಸಾಗಿಸುತ್ತಿದ್ದರೆಂಬ ಆರೋಪದ ಮೇಲೆ ಅವರ ಮೇಲೆಯೂ ಸಹ ಎಫ್.ಐ.ಆರ್ ದಾಖಲಾಗಿತ್ತು.

ಈಗ ಎರಡನೇ ಕೇಸಿನಲ್ಲಿ ಪೆಹ್ಲು ಖಾನ್ ಮತ್ತು ಆತನ ಮಕ್ಕಳ ಮೇಲೆ ಪೊಲೀಸರು ಚಾರ್ಜ್ ಶೀಟ್ ಸಲ್ಲಿಸಿದ್ದಾರೆ. ಗೋವು ಕಳ್ಳತನ, ಕಳ್ಳಸಾಗಣೆ ಮತ್ತಿತ್ತರ ಕೇಸುಗಳನ್ನು ಹಾಕಲಾಗಿದೆ. ಪೆಹ್ಲು ಖಾನ್‍ನನ್ನು ಕೊಂದ ಆರೋಪಿಗಳಾದ ಆ ಎಂಟು ಜನರು ಸದ್ಯಕ್ಕೆ ಜಾಮೀನನ ಮೇಲೆ ಹೊರಬಂದಿದ್ದು ಅವರಲ್ಲಿ ಇಬ್ಬರು ತಲೆಮರೆಸಿಕೊಂಡಿದ್ದಾರೆ.

ಪೆಹ್ಲು ಖಾನ್‍ನ ಮಗ ಇರ್ಶಾದ್ ಖಾನ್ “ನಾವು ಹಸುಗಳನ್ನು ಮನೆಯಲ್ಲಿ ಸಾಕಲೆಂದು ತರುತ್ತಿದ್ದೇವು. ಆದರೆ ದಾರಿಯಲ್ಲಿ ಅಡ್ಡಗಟ್ಟಿದ ಅವರು ನಮ್ಮನ್ನು ವಾಹನದಿಂದ ಕೆಳಗಿಳಿಯುವಂತೆ ಒತ್ತಾಯಿಸಿದರು. ನಾವು ಸಂತೆಯಿಂದ ತರುತ್ತಿದ್ದೇವೆ, ಕಳ್ಳತನ ಮಾಡಿಲ್ಲವೆಂದು ಪೇಪರ್‍ಗಳನ್ನು ತೋರಿಸಲು ಮುಂದಾದೆವು. ಆದರೂ ಅವರು ನಮ್ಮನ್ನು ಹೊರಗೆಳೆದು ಬೇಕಾಬಿಟ್ಟಿ ಥಳಿಸಿದರು. ನನ್ನ ಕಣ್ಣೆದುರು ಹೊಡೆದು ನನ್ನ ತಂದೆಯನ್ನು ಸಾಯಿಸಿಬಿಟ್ಟರು. ಆಗ ನಾನು ಬದುಕಿದ್ದೇನೆ ಎಂದು ಅನ್ನಿಸಿರಲಿಲ್ಲ ಎಂದು ತಮ್ಮ ಅಳಲು ತೋಡಿಕೊಂಡಿದ್ದಾರೆ.”

ಇತ್ತೀಚೆಗೆ ಜಾರ್ಖಂಡ್‍ನಲ್ಲಿ 22 ವರ್ಷದ ತಬ್ರೇಜ್ ಅನ್ಸಾರಿ ಎಂಬುವವರನ್ನು ಸಹ ಕಳ್ಳತನದ ಆರೋಪಿ ಹೊರಿಸಿ, ಕಂಬಕ್ಕೆ ಕಟ್ಟಿ ಜೈ ಶ್ರೀರಾಮ್ ಹೇಳುವಂತೆ ಒತ್ತಾಯಿಸಿ ಹಲ್ಲೆ ಮಾಡಿ ಗುಂಪು ಹತ್ಯೆ ಮಾಡಿದ್ದು ದೇಶಾದ್ಯಂತ ಸುದ್ದಿಯಲ್ಲಿದ್ದು ವ್ಯಾಪಕ ಚರ್ಚೆಯಾಗುತ್ತಿದೆ. ಇಂತಹ ಸಂದರ್ಭದಲ್ಲೇ ರಾಜಸ್ಥಾನದ ಪೊಲೀಸರ ಈ ನಡೆ ವಿವಾದ ಉಂಟುಮಾಡಿದೆ.

ಇದನ್ನು ಓದಿ: ನಾಟ್ ಇನ್ ದ ನೇಮ್ ಆಫ್ ಲಿಂಚಿಂಗ್: ಜೂನ್ 26ರಂದು ದೇಶಾದ್ಯಂತ ಪ್ರತಿಭಟನೆಗೆ ಕರೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಸರ್ಕಾರ ಬದಲಾದರೂ ಅಲ್ಲಿನ ಪೋಲಿಸರು ಬದಲಾಗಿಲ್ಲ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...