Homeಮುಖಪುಟಗಂಪು ಥಳಿತದಲ್ಲಿ ಹತ್ಯೆಯಾದ ಪೆಹ್ಲು ಖಾನ್ ವಿರುದ್ಧವೇ ಚಾರ್ಜ್‍ಶೀಟ್ ಸಲ್ಲಿಸಿದ ರಾಜಸ್ಥಾನ ಪೊಲೀಸರು!

ಗಂಪು ಥಳಿತದಲ್ಲಿ ಹತ್ಯೆಯಾದ ಪೆಹ್ಲು ಖಾನ್ ವಿರುದ್ಧವೇ ಚಾರ್ಜ್‍ಶೀಟ್ ಸಲ್ಲಿಸಿದ ರಾಜಸ್ಥಾನ ಪೊಲೀಸರು!

- Advertisement -
- Advertisement -

| ನಾನುಗೌರಿ ಡೆಸ್ಕ್ |

2017ರ ಏಪ್ರಿಲ್ 1 ರಂದು ಜೈಪುರ-ದೆಹಲಿ ಹೆದ್ದಾರಿಯಲ್ಲಿ ಗೋವು ಸಾಗಿಸುತ್ತಿದ್ದರು ಎಂಬು ಆರೋಪದಿಂದ ಸ್ವಘೋಷಿತ ಗೋರಕ್ಷಕರಿಂದ ತೀವ್ರವಾಗಿ ಹಲ್ಲೆಗೊಳಗಾಗಿ ನಿಧನವಾಗಿದ್ದ ಪೆಹ್ಲು ಖಾನ್ ವಿರುದ್ಧವೇ ರಾಜಸ್ಥಾನ ಪೊಲೀಸರು ಚಾರ್ಜ್‍ಶೀಟ್ ಸಲ್ಲಿಸುವ ಮೂಲಕ ವಿವಾದ ಉಂಟು ಮಾಡಿದ್ದಾರೆ.

ಮೂಲತಃ ಪಶು ಸಂಗೋಪನೆ ಮಾಡುತ್ತಿದ್ದ ಪೆಹ್ಲು ಖಾನ್ ಮತ್ತು ಅವರ ಮಗ ಇರ್ಶಾದ್ ಖಾನ್ ಜೈಪುರದ ದನಗಳ ಸಂತೆಯಿಂದ ಸಾಕಾಣಿಕೆಗೆಂದು 2017ರ ಏಪ್ರಿಲ್ 1 ರಂದು ಎರಡು ಹಸುಗಳನ್ನು ಕೊಂಡು ತರುತ್ತಿದ್ದಾರು. ಆಗ ಅಕ್ರಮ ಕಳ್ಳಸಾಗಾಣಿಕೆ ಮಾಡುತ್ತಿದ್ದಾರೆ ಎಂದು ಆರೋಪಿಸಿ ಸ್ವಘೋಷಿತ ಗೋರಕ್ಷಕರು ದಾರಿ ಮಧ್ಯದಲ್ಲೇ ಇವರನ್ನು ತಡೆದು ಮನಬಂದಂತೆ ಥಳಿಸಿ, ಕಾಲಿನಿಂದ ಒದ್ದು ಗಾಯಗೊಳಿಸಿದ್ದರು. ಈ ಘಟನೆಯ ವಿಡಿಯೋ ರೆಕಾರ್ಡ್ ಎಲ್ಲೆಡೆ ಹರಡಿ ಖಂಡನೆ ವ್ಯಕ್ತವಾಗಿತ್ತು. ಘಟನೆ ನಡೆದ ಎರಡು ದಿನಗಳ ನಂತರ ಪೆಹ್ಲು ಖಾನ್ ಆಸ್ಪತ್ರೆಯಲ್ಲಿ ನಿಧನರಾಗಿದ್ದರು.

ಪೆಹ್ಲು ಖಾನ್ ಮತ್ತು ಆತನ ಮಕ್ಕಳು 8 ಜನರ ಮೇಲೆ ಗುಂಪು ಥಳಿತ, ಹಲ್ಲೆಯ ದೂರು ದಾಖಲಿಸಿದ್ದರು. ಪರವಾನಗಿ ಇಲ್ಲದೇ ದನಗಳನ್ನು ಸಾಗಿಸುತ್ತಿದ್ದರೆಂಬ ಆರೋಪದ ಮೇಲೆ ಅವರ ಮೇಲೆಯೂ ಸಹ ಎಫ್.ಐ.ಆರ್ ದಾಖಲಾಗಿತ್ತು.

ಈಗ ಎರಡನೇ ಕೇಸಿನಲ್ಲಿ ಪೆಹ್ಲು ಖಾನ್ ಮತ್ತು ಆತನ ಮಕ್ಕಳ ಮೇಲೆ ಪೊಲೀಸರು ಚಾರ್ಜ್ ಶೀಟ್ ಸಲ್ಲಿಸಿದ್ದಾರೆ. ಗೋವು ಕಳ್ಳತನ, ಕಳ್ಳಸಾಗಣೆ ಮತ್ತಿತ್ತರ ಕೇಸುಗಳನ್ನು ಹಾಕಲಾಗಿದೆ. ಪೆಹ್ಲು ಖಾನ್‍ನನ್ನು ಕೊಂದ ಆರೋಪಿಗಳಾದ ಆ ಎಂಟು ಜನರು ಸದ್ಯಕ್ಕೆ ಜಾಮೀನನ ಮೇಲೆ ಹೊರಬಂದಿದ್ದು ಅವರಲ್ಲಿ ಇಬ್ಬರು ತಲೆಮರೆಸಿಕೊಂಡಿದ್ದಾರೆ.

ಪೆಹ್ಲು ಖಾನ್‍ನ ಮಗ ಇರ್ಶಾದ್ ಖಾನ್ “ನಾವು ಹಸುಗಳನ್ನು ಮನೆಯಲ್ಲಿ ಸಾಕಲೆಂದು ತರುತ್ತಿದ್ದೇವು. ಆದರೆ ದಾರಿಯಲ್ಲಿ ಅಡ್ಡಗಟ್ಟಿದ ಅವರು ನಮ್ಮನ್ನು ವಾಹನದಿಂದ ಕೆಳಗಿಳಿಯುವಂತೆ ಒತ್ತಾಯಿಸಿದರು. ನಾವು ಸಂತೆಯಿಂದ ತರುತ್ತಿದ್ದೇವೆ, ಕಳ್ಳತನ ಮಾಡಿಲ್ಲವೆಂದು ಪೇಪರ್‍ಗಳನ್ನು ತೋರಿಸಲು ಮುಂದಾದೆವು. ಆದರೂ ಅವರು ನಮ್ಮನ್ನು ಹೊರಗೆಳೆದು ಬೇಕಾಬಿಟ್ಟಿ ಥಳಿಸಿದರು. ನನ್ನ ಕಣ್ಣೆದುರು ಹೊಡೆದು ನನ್ನ ತಂದೆಯನ್ನು ಸಾಯಿಸಿಬಿಟ್ಟರು. ಆಗ ನಾನು ಬದುಕಿದ್ದೇನೆ ಎಂದು ಅನ್ನಿಸಿರಲಿಲ್ಲ ಎಂದು ತಮ್ಮ ಅಳಲು ತೋಡಿಕೊಂಡಿದ್ದಾರೆ.”

ಇತ್ತೀಚೆಗೆ ಜಾರ್ಖಂಡ್‍ನಲ್ಲಿ 22 ವರ್ಷದ ತಬ್ರೇಜ್ ಅನ್ಸಾರಿ ಎಂಬುವವರನ್ನು ಸಹ ಕಳ್ಳತನದ ಆರೋಪಿ ಹೊರಿಸಿ, ಕಂಬಕ್ಕೆ ಕಟ್ಟಿ ಜೈ ಶ್ರೀರಾಮ್ ಹೇಳುವಂತೆ ಒತ್ತಾಯಿಸಿ ಹಲ್ಲೆ ಮಾಡಿ ಗುಂಪು ಹತ್ಯೆ ಮಾಡಿದ್ದು ದೇಶಾದ್ಯಂತ ಸುದ್ದಿಯಲ್ಲಿದ್ದು ವ್ಯಾಪಕ ಚರ್ಚೆಯಾಗುತ್ತಿದೆ. ಇಂತಹ ಸಂದರ್ಭದಲ್ಲೇ ರಾಜಸ್ಥಾನದ ಪೊಲೀಸರ ಈ ನಡೆ ವಿವಾದ ಉಂಟುಮಾಡಿದೆ.

ಇದನ್ನು ಓದಿ: ನಾಟ್ ಇನ್ ದ ನೇಮ್ ಆಫ್ ಲಿಂಚಿಂಗ್: ಜೂನ್ 26ರಂದು ದೇಶಾದ್ಯಂತ ಪ್ರತಿಭಟನೆಗೆ ಕರೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಸರ್ಕಾರ ಬದಲಾದರೂ ಅಲ್ಲಿನ ಪೋಲಿಸರು ಬದಲಾಗಿಲ್ಲ

LEAVE A REPLY

Please enter your comment!
Please enter your name here

- Advertisment -

ಬಸವಣ್ಣನ ಕಲ್ಯಾಣದಲ್ಲಿ SIR ವಿರೋಧಿ ಜಾಥಾ.

ಬಸವಕಲ್ಯಾಣSIR ವಿರೋಧಿಸಿ ಕರ್ನಾಟಕದಾದ್ಯಂತ ನಡೆಯುತ್ತಿರುವ ಜಾಗೃತಿ ಜಾತಾವು ಬಸವಕಲ್ಯಾಣಕ್ಕೆ ತಲುಪಿತು. ಬಸವಕಲ್ಯಾಣದ ಅಂಬೇಡ್ಕರ್ ವೃತ್ತದಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಜನರು ಜನವಿರೋಧಿ SIR ನ್ನೂ ವಿರೋಧಿಸಿ ನಿರ್ಣಯ ಕೈಗೊಂಡರು. ಸಭೆಯಲ್ಲಿ ಮಾತನಾಡಿದ ಜಾಥಾದ ಮುಖ್ಯಸ್ಥ...

ಸಂಸದ ಬಿ.ವೈ ರಾಘವೇಂದ್ರ ನಡೆಸುತ್ತಿದ್ದ ಸಾರ್ವಜನಿಕ ಕುಂದುಕೊರತೆ ಸಭೆಯಲ್ಲಿ SIR ವಿರೋಧಿ ಜನಜಾಗೃತಿ ಜಾಥಾ ಕರಪತ್ರ ಹಂಚಿದ ಕಾರ್ಯಕರ್ತರು

ಶಿವಮೊಗ್ಗ : ಬಿಜೆಪಿ ಸಂಸದ ಬಿ.ವೈ.ರಾಘವೇಂದ್ರ ಅವರು ಜಿಲ್ಲೆಯ ಸಾಗರ ತಾಲ್ಲೂಕಿನ ರೈಲು ನಿಲ್ದಾಣದಲ್ಲಿ ಕುಂದುಕೊರತೆಗಳ ಸಭೆ ನಡೆಸುತ್ತಿದ್ದ ವೇಳೆ ಎಸ್‌ಐಆರ್ ವಿರುದ್ಧ ’ಎದ್ದೇಳು ಕರ್ನಾಟಕ’ ಮತ್ತು ’ಎಸ್‌ಐಆರ್ ವಿರೋಧಿ ಒಕ್ಕೂಟ’ದ ಮುಖಂಡರು...

ಬೀದರ್‌ ನಿಂದ ಶುರವಾದ SIR ವಿರೋಧಿ ಜನಜಾಗೃತಿ ಜಾಥಾ

SIR ವಿರೋಧಿ ಕರ್ನಾಟಕ ಹಾಗೂ ಎದ್ದೇಳು ಕರ್ನಾಟಕವು ಕರ್ನಾಟಕದಲ್ಲಿ SIR ಜಾರಿಯನ್ನು ವಿರೋಧಿಸಿ ರಾಜ್ಯದ 5 ಸ್ಥಳಗಳಿಂದ ಜನಜಾಗೃತಿ ಜಾಥಾ ಆಯೋಜಿಸಿದೆ. ಇಂದು ಬೀದರ್‌ ನ ಅಂಬೇಡ್ಕರ್‌ ಸರ್ಕಲ್‌ ನಿಂದ ಆರಂಭವಾದ ಜಾಥಾವು...

ಒಬ್ಬರೇ ಒಬ್ಬ ಅರ್ಹ ಮತದಾರರ ಹೊರಗಿಡುವುದನ್ನು ಒಪ್ಪುವುದಿಲ್ಲ : ಯೂಸುಫ್ ಕನ್ನಿ

ಮತದಾರರ ಪಟ್ಟಿಯ ಪರಿಷ್ಕರಣೆ ಮಾಡಲಿ, ಆದರೆ, ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಬೇಡವೇ ಬೇಡ. ಎಸ್‌ಐಆರ್‌ ಮೂಲಕ ಒಬ್ಬರೇ ಒಬ್ಬರು ಅರ್ಹ ಮತದಾರರನ್ನೂ ಪಟ್ಟಿಯಿಂದ ಹೊರಗಿಡುವುದನ್ನು ನಾವು ಒಪ್ಪುವುದಿಲ್ಲ ಎಂದು ಜಮಾಅತೆ ಇಸ್ಲಾಮಿ...

ಪ್ರಜಾಪ್ರಭುತ್ವದ ರಕ್ಷಣೆಗೆ ಎಸ್‌ಐಆರ್ (SIR) ವಿರುದ್ಧ ಜನಜಾಗೃತಿ ಜಾಥಾಕ್ಕೆ ಶಿವಮೊಗ್ಗದಲ್ಲಿ ಚಾಲನೆ

ಕೇಂದ್ರ ಸರ್ಕಾರದ ಎಸ್‌ಐಆರ್ (SIR) ನೀತಿಯ ವಿರುದ್ಧ ರಾಜ್ಯಾದ್ಯಂತ ಜನವಿರೋಧಿ ಅಲೆ ಎದ್ದಿದೆ. "ಸಂತ-ಶರಣರ ಈ ನಾಡಿನಲ್ಲಿ ಯಾವುದೇ ರೀತಿಯ ದುಷ್ಟ ಆಟ, ಮೋಸ, ವಂಚನೆಗೆ ಅವಕಾಶವಿಲ್ಲ" ಎಂಬ ದೃಢ ಸಂಕಲ್ಪದೊಂದಿಗೆ 'ಎಸ್‌ಐಆರ್...

ಜೂನ್ 13 ರಿಂದ ಕರ್ನಾಟಕದಲ್ಲಿ ‘SIR ವಿರೋಧಿ’ ಜನಜಾಗೃತಿ ಜಾಥ

ರಾಜ್ಯ ಚುನಾವಣಾ ಆಯೋಗವು ಎಸ್‌ಐಆರ್ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ನಾಗರಿಕರ ಆಕ್ಷೇಪಣೆಗಳಿಗೆ ಸ್ಪಂದಿಸದಿರುವ ನಿರ್ಲಕ್ಷ್ಯ ಧೋರಣೆಯನ್ನು ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಾಗೂ ‘ಎದ್ದೇಳು ಕರ್ನಾಟಕ’ ಸಂಘಟನೆಯ ವತಿಯಿಂದ ಜೂನ್ 13 ರಿಂದ...

‘ಕಾನೂನು ಪ್ರಕ್ರಿಯೆಯದುರುಪಯೋಗ’: ನ್ಯೂಸ್‌ಕ್ಲಿಕ್ ವಿರುದ್ಧದ ದೆಹಲಿ ಪೊಲೀಸ್, ಇಡಿ ಪ್ರಕರಣಗಳನ್ನು ರದ್ದುಗೊಳಿಸಿದ ಹೈಕೋರ್ಟ್

ವಿದೇಶಿ ನೇರ ಹೂಡಿಕೆ (ಎಫ್‌ಡಿಐ) ನಿಯಮಗಳ ಉಲ್ಲಂಘನೆ ಆರೋಪಕ್ಕೆ ಸಂಬಂಧಿಸಿದಂತೆ ನ್ಯೂಸ್‌ಕ್ಲಿಕ್ ಸುದ್ದಿ ಸಂಸ್ಥೆ ಮತ್ತು ಅದರ ಮುಖ್ಯ ಸಂಪಾದಕ ಪ್ರಬೀರ್ ಪುರಕಾಯಸ್ಥ ವಿರುದ್ಧ ದೆಹಲಿ ಪೊಲೀಸರು ಹಾಗೂ ಜಾರಿ ನಿರ್ದೇಶನಾಲಯ (ಇಡಿ) ದಾಖಲಿಸಿದ್ದ ಪ್ರಕರಣಗಳನ್ನು ದೆಹಲಿ...

ಕಾಂಗ್ರೆಸ್ ಜೊತೆ ವಿಲೀನ? ಅದೆಲ್ಲ ಬರೀ ಸುಳ್ಳು ಎಂದ ಟಿಎಂಸಿ

ಕಾಂಗ್ರೆಸ್ ಪಕ್ಷದೊಂದಿಗೆ ತೃಣಮೂಲ ಕಾಂಗ್ರೆಸ್ (ಟಿಎಂಸಿ) ವಿಲೀನವಾಗಬಹುದು ಎಂಬ ವರದಿಗಳನ್ನು ಟಿಎಂಸಿ ಉನ್ನತ ಮೂಲಗಳು ಬುಧವಾರ (ಇಂದು) ಸಂಪೂರ್ಣವಾಗಿ ತಳ್ಳಿಹಾಕಿವೆ. "ನಮ್ಮ ಪಕ್ಷಕ್ಕೆ ಈ ಬಗ್ಗೆ ಯಾವುದೇ ಮಾಹಿತಿ ಇಲ್ಲ ಮತ್ತು ವಿಲೀನಕ್ಕೆ...

ಮೀನಾಕ್ಷಿ ನಟರಾಜನ್ ನಾಮಪತ್ರ ತಿರಸ್ಕಾರ : ಬಿಜೆಪಿಯ ಸೀಟ್ ಚೋರಿ?

ರಾಜ್ಯಸಭಾ ಚುನಾವಣೆಗೆ ಮಧ್ಯಪ್ರದೇಶದಿಂದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿದ್ದ ಮೀನಾಕ್ಷಿ ನಟರಾಜನ್ ಅವರ ನಾಮಪತ್ರವನ್ನು ಚುನಾವಣಾ ಆಯೋಗ ತಿರಸ್ಕರಿಸಿರುವುದು ದೇಶದಲ್ಲಿ ದೊಡ್ಡ ರಾಜಕೀಯ ಜಟಾಪಟಿಗೆ ಕಾರಣವಾಗಿದೆ. ಕಾಂಗ್ರೆಸ್ ಈ ವಿಚಾರವನ್ನು ಬಹಳ ಗಂಭೀರವಾಗಿ ಪರಿಗಣಿಸಿ ಬುಧವಾರ (ಜೂ. 10)...

ಒಳಮೀಸಲಾತಿ ನಾಡು ಕಂಡ ಸುದೀರ್ಘ ಹೋರಾಟದ ಕಥೆ

ಇದು ಬೆವರು ನಿಟ್ಟುಸಿರುಗಳ ಚಳವಳಿ. ತಮ್ಮ ಅನ್ನದ ಬಟ್ಟಲಿಗಾಗಿ ದಶಕಗಳ ಕಾಲ ಹಸಿವು, ಬಾಯಾರಿಕೆ, ನಿದ್ರೆ ಎಲ್ಲವನ್ನೂ ಬಿಟ್ಟು ನಡೆಸಿದ ಅಭೂತಪೂರ್ವ ಚಳವಳಿ. ರಾಜಕೀಯ ಚಕ್ರವ್ಯೂಹಗಳನ್ನು ಬೇಧಿಸಿ, ಸಾಂವಿಧಾನಿಕ ಹಕ್ಕನ್ನು ತಮ್ಮದಾಗಿಸಿಕೊಂಡ ಚಳವಳಿ....