Homeಮುಖಪುಟಗಂಪು ಥಳಿತದಲ್ಲಿ ಹತ್ಯೆಯಾದ ಪೆಹ್ಲು ಖಾನ್ ವಿರುದ್ಧವೇ ಚಾರ್ಜ್‍ಶೀಟ್ ಸಲ್ಲಿಸಿದ ರಾಜಸ್ಥಾನ ಪೊಲೀಸರು!

ಗಂಪು ಥಳಿತದಲ್ಲಿ ಹತ್ಯೆಯಾದ ಪೆಹ್ಲು ಖಾನ್ ವಿರುದ್ಧವೇ ಚಾರ್ಜ್‍ಶೀಟ್ ಸಲ್ಲಿಸಿದ ರಾಜಸ್ಥಾನ ಪೊಲೀಸರು!

- Advertisement -
- Advertisement -

| ನಾನುಗೌರಿ ಡೆಸ್ಕ್ |

2017ರ ಏಪ್ರಿಲ್ 1 ರಂದು ಜೈಪುರ-ದೆಹಲಿ ಹೆದ್ದಾರಿಯಲ್ಲಿ ಗೋವು ಸಾಗಿಸುತ್ತಿದ್ದರು ಎಂಬು ಆರೋಪದಿಂದ ಸ್ವಘೋಷಿತ ಗೋರಕ್ಷಕರಿಂದ ತೀವ್ರವಾಗಿ ಹಲ್ಲೆಗೊಳಗಾಗಿ ನಿಧನವಾಗಿದ್ದ ಪೆಹ್ಲು ಖಾನ್ ವಿರುದ್ಧವೇ ರಾಜಸ್ಥಾನ ಪೊಲೀಸರು ಚಾರ್ಜ್‍ಶೀಟ್ ಸಲ್ಲಿಸುವ ಮೂಲಕ ವಿವಾದ ಉಂಟು ಮಾಡಿದ್ದಾರೆ.

ಮೂಲತಃ ಪಶು ಸಂಗೋಪನೆ ಮಾಡುತ್ತಿದ್ದ ಪೆಹ್ಲು ಖಾನ್ ಮತ್ತು ಅವರ ಮಗ ಇರ್ಶಾದ್ ಖಾನ್ ಜೈಪುರದ ದನಗಳ ಸಂತೆಯಿಂದ ಸಾಕಾಣಿಕೆಗೆಂದು 2017ರ ಏಪ್ರಿಲ್ 1 ರಂದು ಎರಡು ಹಸುಗಳನ್ನು ಕೊಂಡು ತರುತ್ತಿದ್ದಾರು. ಆಗ ಅಕ್ರಮ ಕಳ್ಳಸಾಗಾಣಿಕೆ ಮಾಡುತ್ತಿದ್ದಾರೆ ಎಂದು ಆರೋಪಿಸಿ ಸ್ವಘೋಷಿತ ಗೋರಕ್ಷಕರು ದಾರಿ ಮಧ್ಯದಲ್ಲೇ ಇವರನ್ನು ತಡೆದು ಮನಬಂದಂತೆ ಥಳಿಸಿ, ಕಾಲಿನಿಂದ ಒದ್ದು ಗಾಯಗೊಳಿಸಿದ್ದರು. ಈ ಘಟನೆಯ ವಿಡಿಯೋ ರೆಕಾರ್ಡ್ ಎಲ್ಲೆಡೆ ಹರಡಿ ಖಂಡನೆ ವ್ಯಕ್ತವಾಗಿತ್ತು. ಘಟನೆ ನಡೆದ ಎರಡು ದಿನಗಳ ನಂತರ ಪೆಹ್ಲು ಖಾನ್ ಆಸ್ಪತ್ರೆಯಲ್ಲಿ ನಿಧನರಾಗಿದ್ದರು.

ಪೆಹ್ಲು ಖಾನ್ ಮತ್ತು ಆತನ ಮಕ್ಕಳು 8 ಜನರ ಮೇಲೆ ಗುಂಪು ಥಳಿತ, ಹಲ್ಲೆಯ ದೂರು ದಾಖಲಿಸಿದ್ದರು. ಪರವಾನಗಿ ಇಲ್ಲದೇ ದನಗಳನ್ನು ಸಾಗಿಸುತ್ತಿದ್ದರೆಂಬ ಆರೋಪದ ಮೇಲೆ ಅವರ ಮೇಲೆಯೂ ಸಹ ಎಫ್.ಐ.ಆರ್ ದಾಖಲಾಗಿತ್ತು.

ಈಗ ಎರಡನೇ ಕೇಸಿನಲ್ಲಿ ಪೆಹ್ಲು ಖಾನ್ ಮತ್ತು ಆತನ ಮಕ್ಕಳ ಮೇಲೆ ಪೊಲೀಸರು ಚಾರ್ಜ್ ಶೀಟ್ ಸಲ್ಲಿಸಿದ್ದಾರೆ. ಗೋವು ಕಳ್ಳತನ, ಕಳ್ಳಸಾಗಣೆ ಮತ್ತಿತ್ತರ ಕೇಸುಗಳನ್ನು ಹಾಕಲಾಗಿದೆ. ಪೆಹ್ಲು ಖಾನ್‍ನನ್ನು ಕೊಂದ ಆರೋಪಿಗಳಾದ ಆ ಎಂಟು ಜನರು ಸದ್ಯಕ್ಕೆ ಜಾಮೀನನ ಮೇಲೆ ಹೊರಬಂದಿದ್ದು ಅವರಲ್ಲಿ ಇಬ್ಬರು ತಲೆಮರೆಸಿಕೊಂಡಿದ್ದಾರೆ.

ಪೆಹ್ಲು ಖಾನ್‍ನ ಮಗ ಇರ್ಶಾದ್ ಖಾನ್ “ನಾವು ಹಸುಗಳನ್ನು ಮನೆಯಲ್ಲಿ ಸಾಕಲೆಂದು ತರುತ್ತಿದ್ದೇವು. ಆದರೆ ದಾರಿಯಲ್ಲಿ ಅಡ್ಡಗಟ್ಟಿದ ಅವರು ನಮ್ಮನ್ನು ವಾಹನದಿಂದ ಕೆಳಗಿಳಿಯುವಂತೆ ಒತ್ತಾಯಿಸಿದರು. ನಾವು ಸಂತೆಯಿಂದ ತರುತ್ತಿದ್ದೇವೆ, ಕಳ್ಳತನ ಮಾಡಿಲ್ಲವೆಂದು ಪೇಪರ್‍ಗಳನ್ನು ತೋರಿಸಲು ಮುಂದಾದೆವು. ಆದರೂ ಅವರು ನಮ್ಮನ್ನು ಹೊರಗೆಳೆದು ಬೇಕಾಬಿಟ್ಟಿ ಥಳಿಸಿದರು. ನನ್ನ ಕಣ್ಣೆದುರು ಹೊಡೆದು ನನ್ನ ತಂದೆಯನ್ನು ಸಾಯಿಸಿಬಿಟ್ಟರು. ಆಗ ನಾನು ಬದುಕಿದ್ದೇನೆ ಎಂದು ಅನ್ನಿಸಿರಲಿಲ್ಲ ಎಂದು ತಮ್ಮ ಅಳಲು ತೋಡಿಕೊಂಡಿದ್ದಾರೆ.”

ಇತ್ತೀಚೆಗೆ ಜಾರ್ಖಂಡ್‍ನಲ್ಲಿ 22 ವರ್ಷದ ತಬ್ರೇಜ್ ಅನ್ಸಾರಿ ಎಂಬುವವರನ್ನು ಸಹ ಕಳ್ಳತನದ ಆರೋಪಿ ಹೊರಿಸಿ, ಕಂಬಕ್ಕೆ ಕಟ್ಟಿ ಜೈ ಶ್ರೀರಾಮ್ ಹೇಳುವಂತೆ ಒತ್ತಾಯಿಸಿ ಹಲ್ಲೆ ಮಾಡಿ ಗುಂಪು ಹತ್ಯೆ ಮಾಡಿದ್ದು ದೇಶಾದ್ಯಂತ ಸುದ್ದಿಯಲ್ಲಿದ್ದು ವ್ಯಾಪಕ ಚರ್ಚೆಯಾಗುತ್ತಿದೆ. ಇಂತಹ ಸಂದರ್ಭದಲ್ಲೇ ರಾಜಸ್ಥಾನದ ಪೊಲೀಸರ ಈ ನಡೆ ವಿವಾದ ಉಂಟುಮಾಡಿದೆ.

ಇದನ್ನು ಓದಿ: ನಾಟ್ ಇನ್ ದ ನೇಮ್ ಆಫ್ ಲಿಂಚಿಂಗ್: ಜೂನ್ 26ರಂದು ದೇಶಾದ್ಯಂತ ಪ್ರತಿಭಟನೆಗೆ ಕರೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಸರ್ಕಾರ ಬದಲಾದರೂ ಅಲ್ಲಿನ ಪೋಲಿಸರು ಬದಲಾಗಿಲ್ಲ

LEAVE A REPLY

Please enter your comment!
Please enter your name here

- Advertisment -

ಪ್ರತಿಭಟನೆಯನ್ನು ಹತ್ತಿಕ್ಕಲು ಅಕ್ಕಾಡಕ್ಕಿಳಿದಿವೆ ಹಿಂದುತ್ವವಾದಿ ಸೋಷಿಯಲ್ ಮೀಡಿಯಾ ಇನ್ಫ್ಲುಯೆನ್ಸರ್ಸ್‌ ಮತ್ತು ಉಗ್ರ ಗೂಂಡಾ ಪಡೆ

ದೆಹಲಿಯ ಜಂತರ್ ಮಂತರ್‌ನಲ್ಲಿ ಜೂನ್ 20ರಂದು ಶುರುವಾಗಿದ್ದ ಈ ಆಂದೋಲನ ಇದೀಗ ದೇಶಾದ್ಯಂತ ತೀವ್ರ ಸ್ವರೂಪ ಪಡೆದುಕೊಂಡಿದೆ. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಸಿಜೆಪಿ ಪಟ್ಟು ಹಿಡಿದಿದ್ದು, ಇಂದು...

ಜಿರಳೆಗಳನ್ನು ಸಾಯಿಸಿ ಎಂದು ವಿವಾದಾತ್ಮಕ ಪೋಸ್ಟ್‌ ಹಾಕಿದ ಪ್ರಜ್ಞಾ ಸಿಂಗ್ ಠಾಕೂರ್

ಮಾಜಿ ಬಿಜೆಪಿ ಸಂಸದೆ ಪ್ರಜ್ಞಾ ಸಿಂಗ್ ಠಾಕೂರ್ ಅವರು ದೇಶದಿಂದ ಜಿರಳೆಗಳನ್ನು ಶಾಶ್ವತವಾಗಿ ನಿರ್ಮೂಲನೆ ಮಾಡಲು ವ್ಯವಸ್ಥೆ ಮಾಡುವಂತೆ ದೇಶದ ನಾಯಕರಿಗೆ ಮನವಿ ಮಾಡಿದ್ದಾರೆ. X (ಟ್ವಿಟರ್) ನಲ್ಲಿ ಮಾಡಿದ ಪೋಸ್ಟ್‌ನಲ್ಲಿ, 2008 ರ...

ಸೋನಮ್ ವಾಂಗ್ಚುಕ್ ಮತ್ತು ಸರ್ಕಾರದ ಡೀಲ್‌ನಲ್ಲಿ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಅಂಶವೇ ಇಲ್ಲ

ಕೇಂದ್ರದ ಮೋದಿ ಸರ್ಕಾರ ತನ್ನ ಮೂರು ಪ್ರಮುಖ ಬೇಡಿಕೆಗಳನ್ನು ಈಡೇರಿಸಲು ಒಪ್ಪಿಕೊಂಡ ನಂತರ, ಪರಿಸರ ಹೋರಾಟಗಾರ ಸೋನಮ್ ವಾಂಗ್ಚುಕ್ ಜುಲೈ 23ರ ಗುರುವಾರ ತಮ್ಮ 26 ದಿನಗಳ ಸುದೀರ್ಘ ಉಪವಾಸ ಸತ್ಯಾಗ್ರಹವನ್ನು ಕೊನೆಗೊಳಿಸಿದ್ದಾರೆ....

“50 ಗ್ರಾಂ ಡ್ರಗ್ಸ್ ಇಟ್ಟು ಕೇಸ್ ಹಾಕ್ತೀನಿ!”: ಪ್ರತಿಭಟನಾ ನಿರತ ವಿದ್ಯಾರ್ಥಿಗಳಿಗೆ ಮಾದಕದ್ರವ್ಯ ಪ್ರಕರಣದ ಬೆದರಿಕೆಯೊಡ್ಡಿದ ಮುಂಬೈ ಪೊಲೀಸ್!

ಮುಂಬೈ: ದೇಶಾದ್ಯಂತ ವಿದ್ಯಾರ್ಥಿ ಸಮುದಾಯದ ಆಕ್ರೋಶ ತೀವ್ರಗೊಳ್ಳುತ್ತಿರುವ ಬೆನ್ನಲ್ಲೇ, ತಮ್ಮ ಹಕ್ಕುಗಳಿಗಾಗಿ ಧ್ವನಿ ಎತ್ತುತ್ತಿರುವ ಯುವಜನರನ್ನು ಹತೋಟಿಗೆ ತರಲು ಪೊಲೀಸರು ಯಾವ ಮಟ್ಟದ ದಮನಕಾರಿ ಮಾರ್ಗಗಳನ್ನು ತುಳಿಯುತ್ತಿದ್ದಾರೆ ಎಂಬುದಕ್ಕೆ ಮುಂಬೈನಲ್ಲಿ ನಡೆದ ಘಟನೆಯೊಂದು...

ಬಿಡದಿ ಟೌನ್‌ಶಿಪ್: 80% ರೈತರ ಒಪ್ಪಿಗೆ ಇದೆ ಎಂಬ ವಾದ ಸಾಬೀತುಪಡಿಸಿ – ಸರ್ಕಾರಕ್ಕೆ ಸಂಯುಕ್ತ ಹೋರಾಟ ಸವಾಲು

ಬಿಡದಿ ಟೌನ್‌ಶಿಪ್ ಯೋಜನೆಗೆ ಭೂಮಿ ನೀಡಲು ಉದ್ದೇಶಿತ ಪ್ರದೇಶದ ಶೇಕಡಾ 80 ರಷ್ಟು ರೈತರು ಒಪ್ಪಿದ್ದಾರೆ ಎಂಬ ಸರ್ಕಾರದ ವಾದಕ್ಕೆ ಯಾವುದೇ ವಾಸ್ತವಿಕ ಆಧಾರವಿಲ್ಲ. ಸರ್ಕಾರಕ್ಕೆ ಧೈರ್ಯವಿದ್ದರೆ ತನ್ನ ಈ ಹೇಳಿಕೆಯನ್ನು ಜನರ...

ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ: ವಿಚಾರಣೆ ತಿರಸ್ಕರಿಸಿದ ಸುಪ್ರೀಂ; “ವಿಡಿಯೋ ನೋಡಲು ನಮಗೆ ಆಸಕ್ತಿಯೂ ಇಲ್ಲ, ಸಮಯವೂ ಇಲ್ಲ” ಎಂದ ನ್ಯಾಯಮೂರ್ತಿ ಸೂರ್ಯಕಾಂತ್

ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಶಾಂತಿಯುತವಾಗಿ ಹೋರಾಡುತ್ತಿದ್ದ ಯುವ ಸಮೂಹದ ಮೇಲೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯದ ವಿರುದ್ಧ ನ್ಯಾಯದ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ದೇಶದ ಅತ್ಯುನ್ನತ ನ್ಯಾಯಾಲಯದಿಂದ...

ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ‘ರಾಜಕೀಯ ದಾಳ’ವಾಗಿ ಬಳಸುತ್ತಿದ್ದಾರೆ ಎಂದ ಧರ್ಮೇಂದ್ರ ಪ್ರಧಾನ್ ವಿರುದ್ಧ ವ್ಯಾಪಕ ಆಕ್ರೋಶ

ನವದೆಹಲಿ: ದೇಶಾದ್ಯಂತ ನೀಟ್ (NEET) ಪರೀಕ್ಷೆಯ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ಇಲಾಖೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ...

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...

ಪ್ರತಿಭಟನಾನಿರತ ಮಹಿಳೆಯ ಕೆನ್ನೆಗೆ ಹೊಡೆದ ದೆಹಲಿ ಪೊಲೀಸ್ ಅಧಿಕಾರಿ ಸಂದೀಪ್ ಲಂಬಾ: ವಿಡಿಯೋ ವೈರಲ್ ನಂತರ ವ್ಯಾಪಕ ಟೀಕೆ

ದೆಹಲಿ: ಶಾಂತಿಯುತವಾಗಿ ತಮ್ಮ ಹಕ್ಕುಗಳಿಗಾಗಿ ಹೋರಾಡುತ್ತಿದ್ದ ಪ್ರತಿಭಟನಾಕಾರರ ಮೇಲೆ ದೆಹಲಿ ಪೊಲೀಸರು ನಡೆಸಿದ ಕ್ರೂರ ದಮನ ಕಾರ್ಯಾಚರಣೆಯ ಭೀಕರ ಮುಖವಾಡವೊಂದು ಮತ್ತೆ ಜಗಜ್ಜಾಹೀರಾಗಿದೆ. ಸೋಮವಾರ ಸಂಸತ್ತಿನ ಮೆರವಣಿಗೆಯಲ್ಲಿ ಭಾಗವಹಿಸಿದ್ದ ಪ್ರತಿಭಟನಾಕಾರರನ್ನು ಹತ್ತಿಕ್ಕುವ ನೆಪದಲ್ಲಿ,...

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....