Homeಮುಖಪುಟಗಂಪು ಥಳಿತದಲ್ಲಿ ಹತ್ಯೆಯಾದ ಪೆಹ್ಲು ಖಾನ್ ವಿರುದ್ಧವೇ ಚಾರ್ಜ್‍ಶೀಟ್ ಸಲ್ಲಿಸಿದ ರಾಜಸ್ಥಾನ ಪೊಲೀಸರು!

ಗಂಪು ಥಳಿತದಲ್ಲಿ ಹತ್ಯೆಯಾದ ಪೆಹ್ಲು ಖಾನ್ ವಿರುದ್ಧವೇ ಚಾರ್ಜ್‍ಶೀಟ್ ಸಲ್ಲಿಸಿದ ರಾಜಸ್ಥಾನ ಪೊಲೀಸರು!

- Advertisement -
- Advertisement -

| ನಾನುಗೌರಿ ಡೆಸ್ಕ್ |

2017ರ ಏಪ್ರಿಲ್ 1 ರಂದು ಜೈಪುರ-ದೆಹಲಿ ಹೆದ್ದಾರಿಯಲ್ಲಿ ಗೋವು ಸಾಗಿಸುತ್ತಿದ್ದರು ಎಂಬು ಆರೋಪದಿಂದ ಸ್ವಘೋಷಿತ ಗೋರಕ್ಷಕರಿಂದ ತೀವ್ರವಾಗಿ ಹಲ್ಲೆಗೊಳಗಾಗಿ ನಿಧನವಾಗಿದ್ದ ಪೆಹ್ಲು ಖಾನ್ ವಿರುದ್ಧವೇ ರಾಜಸ್ಥಾನ ಪೊಲೀಸರು ಚಾರ್ಜ್‍ಶೀಟ್ ಸಲ್ಲಿಸುವ ಮೂಲಕ ವಿವಾದ ಉಂಟು ಮಾಡಿದ್ದಾರೆ.

ಮೂಲತಃ ಪಶು ಸಂಗೋಪನೆ ಮಾಡುತ್ತಿದ್ದ ಪೆಹ್ಲು ಖಾನ್ ಮತ್ತು ಅವರ ಮಗ ಇರ್ಶಾದ್ ಖಾನ್ ಜೈಪುರದ ದನಗಳ ಸಂತೆಯಿಂದ ಸಾಕಾಣಿಕೆಗೆಂದು 2017ರ ಏಪ್ರಿಲ್ 1 ರಂದು ಎರಡು ಹಸುಗಳನ್ನು ಕೊಂಡು ತರುತ್ತಿದ್ದಾರು. ಆಗ ಅಕ್ರಮ ಕಳ್ಳಸಾಗಾಣಿಕೆ ಮಾಡುತ್ತಿದ್ದಾರೆ ಎಂದು ಆರೋಪಿಸಿ ಸ್ವಘೋಷಿತ ಗೋರಕ್ಷಕರು ದಾರಿ ಮಧ್ಯದಲ್ಲೇ ಇವರನ್ನು ತಡೆದು ಮನಬಂದಂತೆ ಥಳಿಸಿ, ಕಾಲಿನಿಂದ ಒದ್ದು ಗಾಯಗೊಳಿಸಿದ್ದರು. ಈ ಘಟನೆಯ ವಿಡಿಯೋ ರೆಕಾರ್ಡ್ ಎಲ್ಲೆಡೆ ಹರಡಿ ಖಂಡನೆ ವ್ಯಕ್ತವಾಗಿತ್ತು. ಘಟನೆ ನಡೆದ ಎರಡು ದಿನಗಳ ನಂತರ ಪೆಹ್ಲು ಖಾನ್ ಆಸ್ಪತ್ರೆಯಲ್ಲಿ ನಿಧನರಾಗಿದ್ದರು.

ಪೆಹ್ಲು ಖಾನ್ ಮತ್ತು ಆತನ ಮಕ್ಕಳು 8 ಜನರ ಮೇಲೆ ಗುಂಪು ಥಳಿತ, ಹಲ್ಲೆಯ ದೂರು ದಾಖಲಿಸಿದ್ದರು. ಪರವಾನಗಿ ಇಲ್ಲದೇ ದನಗಳನ್ನು ಸಾಗಿಸುತ್ತಿದ್ದರೆಂಬ ಆರೋಪದ ಮೇಲೆ ಅವರ ಮೇಲೆಯೂ ಸಹ ಎಫ್.ಐ.ಆರ್ ದಾಖಲಾಗಿತ್ತು.

ಈಗ ಎರಡನೇ ಕೇಸಿನಲ್ಲಿ ಪೆಹ್ಲು ಖಾನ್ ಮತ್ತು ಆತನ ಮಕ್ಕಳ ಮೇಲೆ ಪೊಲೀಸರು ಚಾರ್ಜ್ ಶೀಟ್ ಸಲ್ಲಿಸಿದ್ದಾರೆ. ಗೋವು ಕಳ್ಳತನ, ಕಳ್ಳಸಾಗಣೆ ಮತ್ತಿತ್ತರ ಕೇಸುಗಳನ್ನು ಹಾಕಲಾಗಿದೆ. ಪೆಹ್ಲು ಖಾನ್‍ನನ್ನು ಕೊಂದ ಆರೋಪಿಗಳಾದ ಆ ಎಂಟು ಜನರು ಸದ್ಯಕ್ಕೆ ಜಾಮೀನನ ಮೇಲೆ ಹೊರಬಂದಿದ್ದು ಅವರಲ್ಲಿ ಇಬ್ಬರು ತಲೆಮರೆಸಿಕೊಂಡಿದ್ದಾರೆ.

ಪೆಹ್ಲು ಖಾನ್‍ನ ಮಗ ಇರ್ಶಾದ್ ಖಾನ್ “ನಾವು ಹಸುಗಳನ್ನು ಮನೆಯಲ್ಲಿ ಸಾಕಲೆಂದು ತರುತ್ತಿದ್ದೇವು. ಆದರೆ ದಾರಿಯಲ್ಲಿ ಅಡ್ಡಗಟ್ಟಿದ ಅವರು ನಮ್ಮನ್ನು ವಾಹನದಿಂದ ಕೆಳಗಿಳಿಯುವಂತೆ ಒತ್ತಾಯಿಸಿದರು. ನಾವು ಸಂತೆಯಿಂದ ತರುತ್ತಿದ್ದೇವೆ, ಕಳ್ಳತನ ಮಾಡಿಲ್ಲವೆಂದು ಪೇಪರ್‍ಗಳನ್ನು ತೋರಿಸಲು ಮುಂದಾದೆವು. ಆದರೂ ಅವರು ನಮ್ಮನ್ನು ಹೊರಗೆಳೆದು ಬೇಕಾಬಿಟ್ಟಿ ಥಳಿಸಿದರು. ನನ್ನ ಕಣ್ಣೆದುರು ಹೊಡೆದು ನನ್ನ ತಂದೆಯನ್ನು ಸಾಯಿಸಿಬಿಟ್ಟರು. ಆಗ ನಾನು ಬದುಕಿದ್ದೇನೆ ಎಂದು ಅನ್ನಿಸಿರಲಿಲ್ಲ ಎಂದು ತಮ್ಮ ಅಳಲು ತೋಡಿಕೊಂಡಿದ್ದಾರೆ.”

ಇತ್ತೀಚೆಗೆ ಜಾರ್ಖಂಡ್‍ನಲ್ಲಿ 22 ವರ್ಷದ ತಬ್ರೇಜ್ ಅನ್ಸಾರಿ ಎಂಬುವವರನ್ನು ಸಹ ಕಳ್ಳತನದ ಆರೋಪಿ ಹೊರಿಸಿ, ಕಂಬಕ್ಕೆ ಕಟ್ಟಿ ಜೈ ಶ್ರೀರಾಮ್ ಹೇಳುವಂತೆ ಒತ್ತಾಯಿಸಿ ಹಲ್ಲೆ ಮಾಡಿ ಗುಂಪು ಹತ್ಯೆ ಮಾಡಿದ್ದು ದೇಶಾದ್ಯಂತ ಸುದ್ದಿಯಲ್ಲಿದ್ದು ವ್ಯಾಪಕ ಚರ್ಚೆಯಾಗುತ್ತಿದೆ. ಇಂತಹ ಸಂದರ್ಭದಲ್ಲೇ ರಾಜಸ್ಥಾನದ ಪೊಲೀಸರ ಈ ನಡೆ ವಿವಾದ ಉಂಟುಮಾಡಿದೆ.

ಇದನ್ನು ಓದಿ: ನಾಟ್ ಇನ್ ದ ನೇಮ್ ಆಫ್ ಲಿಂಚಿಂಗ್: ಜೂನ್ 26ರಂದು ದೇಶಾದ್ಯಂತ ಪ್ರತಿಭಟನೆಗೆ ಕರೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಸರ್ಕಾರ ಬದಲಾದರೂ ಅಲ್ಲಿನ ಪೋಲಿಸರು ಬದಲಾಗಿಲ್ಲ

LEAVE A REPLY

Please enter your comment!
Please enter your name here

- Advertisment -

SIR: ಚಿಂತಕ ಪರಕಾಲ ಪ್ರಭಾಕರ್‌ಗೆ ಚುನಾವಣಾ ಆಯೋಗದಿಂದ ನೋಟಿಸ್

ಅರ್ಥಶಾಸ್ತ್ರಜ್ಞ, ರಾಜಕೀಯ ವಿಶ್ಲೇಷಕ ಡಾ. ಪರಕಾಲ ಪ್ರಭಾಕರ್ ಅವರಿಗೂ ಈಗ ‘ವಿಶೇಷ ತೀವ್ರ ಪರಿಷ್ಕರಣೆ’ (SIR) ಪ್ರಕ್ರಿಯೆಯಡಿ ಚುನಾವಣಾ ಆಯೋಗದ ನೋಟಿಸ್ ಜಾರಿಯಾಗಿದೆ. ವೋಟರ್ ಐಡಿ ಪರಿಶೀಲನೆಯಲ್ಲಿ ‘Logical Discrepancy’ (ತಾರ್ಕಿಕ ಅಸಂಗತತೆ)...

ಕರ್ನಾಟಕ ಎಸ್‌ಐಆರ್: ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬರಿಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಮಂಗಳೂರು: ಶೈಕ್ಷಣಿಕ ಕ್ಷೇತ್ರದಲ್ಲಿ ತಮ್ಮ ವಿಶಿಷ್ಟ ಸೇವೆಯ ಮೂಲಕ ದೇಶ-ವಿದೇಶಗಳಲ್ಲಿ ಗುರುತಿಸಿಕೊಂಡಿರುವ ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬ ಅವರಿಗೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಗೆ ಸಂಬಂಧಿಸಿದಂತೆ ಚುನಾವಣಾ ಆಯೋಗದ...

SIR ಸೂತ್ರದಿಂದ ಬದಲಾಗುತ್ತಾ ಬೆಂಗಳೂರಿನ 28 ಕ್ಷೇತ್ರಗಳ ಗೆಲುವಿನ ಸಮೀಕರಣ?

ರಾಜ್ಯ ರಾಜಕೀಯದ ಶಕ್ತಿಕೇಂದ್ರವಾದ ಬೆಂಗಳೂರಿನ 28 ವಿಧಾನಸಭಾ ಕ್ಷೇತ್ರಗಳಲ್ಲಿ ‘ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ (SIR)’ ಪ್ರಕ್ರಿಯೆಯು ಮಹತ್ವದ ರಾಜಕೀಯ ಮತ್ತು ಆಡಳಿತಾತ್ಮಕ ಚರ್ಚೆಯನ್ನು ಹುಟ್ಟುಹಾಕಿದೆ. ಎಸ್‌ಐಆರ್‌ಗೂ ಮುನ್ನ ನಗರದಲ್ಲಿದ್ದ ಸುಮಾರು 1.03...

ಮಣಿಪುರದಲ್ಲಿ ಹಿಂಸಾಚಾರಕ್ಕೆ 306 ಬಲಿ, 49 ಮಂದಿ ನಾಪತ್ತೆ: ವಿಧಾನಸಭೆಯಲ್ಲಿ ಗೃಹ ಸಚಿವರ ಸ್ಪಷ್ಟನೆ

ಇಂಫಾಲ್: ಮಣಿಪುರದಲ್ಲಿ 2023ರ ಮೇ ತಿಂಗಳಲ್ಲಿ ಭುಗಿಲೆದ್ದ ಜನಾಂಗೀಯ ಹಿಂಸಾಚಾರಕ್ಕೆ ಮೂರು ವರ್ಷಗಳಿಗೂ ಹೆಚ್ಚು ಕಾಲ ಕಳೆದಿದ್ದರೂ, ಅದರ ಪರಿಣಾಮದಿಂದ ರಾಜ್ಯ ಸಂಪೂರ್ಣವಾಗಿ ಹೊರಬಂದಿಲ್ಲ. ಹಿಂಸಾಚಾರ ಆರಂಭವಾದ ಬಳಿಕ ಇದುವರೆಗೆ ಕನಿಷ್ಠ 306...

ದಲಿತರ ಅಭಿವೃದ್ಧಿಗೆ ಮೀಸಲಿಟ್ಟ ನಿಧಿ ದುರ್ಬಳಕೆ; ಜನವಸತಿಯೇ ಇಲ್ಲದ ಜಾಗದಲ್ಲಿ ರೂ. 50 ಲಕ್ಷದ ಸಿ.ಸಿ. ರಸ್ತೆ ನಿರ್ಮಾಣ!

ಸಮಾಜ ಕಲ್ಯಾಣ ಇಲಾಖೆಯ 'ಪ್ರಗತಿ ಕಾಲೋನಿ' ಯೋಜನೆಯ ನಿಧಿ ದುರ್ಬಳಕೆಯಾಗಿರುವ ಆರೋಪ ಕೇಳಿಬಂದಿದ್ದು, ಜನವಸತಿಯೇ ಇಲ್ಲದ ಜಾಗದಲ್ಲಿ ರೂ. 50 ಲಕ್ಷ ವೆಚ್ಚದಲ್ಲಿ ಸಿಸಿ ರಸ್ತೆ ನಿರ್ಮಾಣ ಮಾಡಿರುವ ಪ್ರಕರಣ ಬೆಂಗಳೂರು...

SIR: ‘ಚುನಾವಣಾ ಆಯೋಗದಿಂದ ನೋಟಿಸ್‌’ ಇಲ್ಲದಿರುವ ದಾಖಲೆಗಳನ್ನು ಎಲ್ಲಿಂದಾ ತರೋದು? ಸಾರ್ವಜನಿಕರ ಪ್ರಶ್ನೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಚುನಾವಣಾ ಆಯೋಗವು ಬಳಸುತ್ತಿರುವ 'Logical Discrepancy' (ತಾರ್ಕಿಕ ವ್ಯತ್ಯಾಸ) ಎಂಬ ಸಾಫ್ಟ್‌ವೇರ್ ಆಧಾರಿತ ಪರಿಶೀಲನೆಯು ತಾಂತ್ರಿಕವಾಗಿ ದೋಷರಹಿತವೆಂದು ತೋರಿದರೂ, ವಾಸ್ತವದಲ್ಲಿ ಲಕ್ಷಾಂತರ ನೈಜ...

SIR ರಗಳೆ: ಕೊನೆಗೂ 43.81 ಲಕ್ಷ ಮತದಾರರ ನೋಟಿಸ್ ಪಟ್ಟಿ ಬಹಿರಂಗಪಡಿಸಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ಭಾರಿ ಸದ್ದು ಮಾಡುತ್ತಿರುವ 'ವಿಶೇಷ ತೀವ್ರ ಪರಿಷ್ಕರಣೆ' (SIR) ಪ್ರಕ್ರಿಯೆಯಲ್ಲಿ ನೋಟಿಸ್‌ಗೆ ಗುರಿಯಾಗಿರುವ 43.81 ಲಕ್ಷ ಮತದಾರರ ಪಟ್ಟಿಯನ್ನು ರಾಜ್ಯ ಮುಖ್ಯ ಚುನಾವಣಾಧಿಕಾರಿ ಕಚೇರಿ ಕೊನೆಗೂ ತನ್ನ ಅಧಿಕೃತ ವೆಬ್‌ಸೈಟ್‌ನಲ್ಲಿ...

‘ಆರ್‌ಎಸ್‌ಎಸ್‌ ಅಡಗಿಕೊಂಡಿದೆ’: ಮೋಹನ್ ಭಾಗವತ್‌ ಯುಕೆ ಭೇಟಿ ವಿರೋಧಿಸಿ ಲಂಡನ್‌ನಲ್ಲಿ ಪ್ರತಿಭಟನೆ

ಲಂಡನ್: ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಅವರ ಯುನೈಟೆಡ್ ಕಿಂಗ್‌ಡಮ್‌ ಭೇಟಿಯನ್ನು ವಿರೋಧಿಸಿ ಲಂಡನ್‌ನ ಪಾರ್ಲಿಮೆಂಟ್ ಸ್ಕ್ವೇರ್‌ನಲ್ಲಿ ನೂರಾರು ಜನರು ಪ್ರತಿಭಟನೆ ನಡೆಸಿದ್ದಾರೆ. ಭಾಗವತ್ ಅವರ ಯುಕೆ ಪ್ರವಾಸದ...

ಪಂಚಾಯಿತಿಯಲ್ಲಿ ಅಸ್ಪೃಶ್ಯತೆ ಆಚರಣೆ-ಪ್ರತ್ಯೇಕ ಟೀ ಲೋಟ; ಆತ್ಮಹತ್ಯೆಗೆ ಯತ್ನಿಸಿದ ಪೌರಕಾರ್ಮಿಕ ಮಹಿಳೆ

ಕೆಲಸದ ಸ್ಥಳದಲ್ಲಿ ನಡೆಯುತ್ತಿದ್ದ ಅಸ್ಪೃಶ್ಯತೆ ಆಚರಣೆಯಿಂದ ಮನನೊಂದ 37 ವರ್ಷದ ದಲಿತ ನೈರ್ಮಲ್ಯ ಕಾರ್ಮಿಕರೊಬ್ಬರು ಕ್ರಿಮಿನಾಶಕ ಸೇವಿಸಿ ಆತ್ಮತ್ಯೆಗೆ ಯತ್ನಿಸಿರುವ ಘಟನೆ ತಮಿಳುನಾಡಿನ ಮೇಲೂರು ಸಮೀಪದ ಕಂಬೂರ್ ಪಂಚಾಯತ್‌ನಲ್ಲಿ ಬೆಳಕಿಗೆ ಬಂದಿದೆ. ...

ಗೌರಿ, ಗಾಂಧಿಯನ್ನು ಕೊಂದದ್ದು ಬರೀ ಬುಲೆಟ್‌ಗಳಲ್ಲ, ಕೋಮುವಾದಿ ಸಿದ್ಧಾಂತ: ವಿದ್ಯಾರ್ಥಿ ನಾಯಕಿ ದಾನಿಶ್ ಅಲಿ

"ಗಾಂಧಿ, ಗೌರಿಯನ್ನು ಕೊಂದಿದ್ದು ಬರೀ ಬುಲೆಟ್‌ಗಳಲ್ಲ, ಅದು ಸಿದ್ಧಾಂತ ಎಂಬುದನ್ನು ನಾವು ನೆನಪಿಡಬೇಕು. ಈ ಸಿದ್ಧಾಂತಗಳ ವಿರುದ್ಧವಾಗಿ ನಾವು ಇಂದು ಹೋರಾಡಬೇಕಿದೆ” ಎಂದು ದೆಹಲಿಯ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ (JNU) ವಿದ್ಯಾರ್ಥಿ ನಾಯಕಿ...