Homeಕರ್ನಾಟಕಪೇಜಾವರ ಸ್ವಾಮಿ ನಡೆ ಮತೀಯವಾದಿ ನಾಯಕರಂತಿದೆ : ಬಿ.ಕೆ ಹರಿಪ್ರಸಾದ್

ಪೇಜಾವರ ಸ್ವಾಮಿ ನಡೆ ಮತೀಯವಾದಿ ನಾಯಕರಂತಿದೆ : ಬಿ.ಕೆ ಹರಿಪ್ರಸಾದ್

- Advertisement -
- Advertisement -

“ನಮ್ಮನ್ನೂ ಗೌರವಿಸುವ ಸಂವಿಧಾನ ಬರಲಿ” ಎಂದು ಹೇಳಿಕೆ ಕೊಟ್ಟು, ನಂತರ “ನಾನು ಸಂವಿಧಾನ ವಿರುದ್ದ ಮಾತಾನಾಡಿಯೇ ಇಲ್ಲ” ಎಂದಿರುವ ಪೇಜಾವರ ಮಠದ ವಿಶ್ವಪ್ರಸನ್ನ ಸ್ವಾಮಿ ವಿರುದ್ದ ವಿಧಾನಪರಿಷತ್ ಸದಸ್ಯ ಬಿ.ಕೆ ಹರಿಪ್ರಸಾದ್ ಕಿಡಿಕಾರಿದ್ದಾರೆ.

ಈ ಕುರಿತು ಫೇಸ್‌ಬುಕ್‌ನಲ್ಲಿ ಬರೆದುಕೊಂಡಿರುವ ಹರಿಪ್ರಸಾದ್, “ಸಂವಿಧಾನ ಬದಲಾವಣೆಯ ಮುಂಚೂಣಿಯ ನಾಯಕರಂತೆ ವರ್ತಿಸುತ್ತಿದ್ದ ಪೇಜಾವರರು, ತಮ್ಮ ಹೇಳಿಕೆಗಳು ಹಾಗೂ ನಡವಳಿಕೆಗಳಿಂದ ಪ್ರಜ್ಞಾವಂತ ಸಮಾಜ ತಿರುಗಿ ಬಿದ್ದಿರುವುದನ್ನ ನೋಡಿ “ನಾನು ಸಂವಿಧಾನ ವಿರೋಧಿ ಹೇಳಿಕೆಯೇ ನೀಡಿಲ್ಲ” ಎಂದು ತಾವೇ ಆಡಿದ ಮಾತುಗಳನ್ನು ತಿರುಚಿಕೊಳ್ಳುತ್ತಿರುವುದು ವಿಪರ್ಯಾಸ” ಎಂದಿದ್ದಾರೆ.

ಸಮಾಜ ದಾರಿ ತಪ್ಪಿದರೆ ತಿದ್ದುವ ಹಾಗೂ ಧರ್ಮದೊಳಗಿನ ಸಹಬಾಳ್ವೆಯ ತಿರುಳನ್ನು ತಿಳಿ ಹೇಳುವ ಸ್ವಾಮೀಜಿಗಳೇ ಸಮಾಜವನ್ನು ದಾರಿತಪ್ಪಿಸುತ್ತಿರುವುದು ಸ್ವಾಸ್ಥ್ಯ ಸಮಾಜವನ್ನು ಒಡೆಯುವ ಹುನ್ನಾರ ಮಾತ್ರವಲ್ಲ ಪೇಜಾವವರ ನಡೆಗಳು ಮತೀಯವಾದಿ ಸಂಘಟನೆ ನಾಯಕರಂತೆ ಕಾಣುತ್ತಿದೆ ಎಂದು ಹೇಳಿದ್ದಾರೆ.

ಸಂವಿಧಾನದಡಿಯಲ್ಲಿ ಚುನಾಯಿತ ಸರ್ಕಾರದ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಹಾಗೂ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿಯ ಮಾಧ್ಯಮ ವಕ್ತಾರರಂತೆ “ಅಲ್ಪಸಂಖ್ಯಾತರನ್ನು ಓಲೈಕೆ ಮಾಡುತ್ತಿದ್ದಾರೆ” ಎಂದು ಬಹಿರಂಗ ಹೇಳಿಕೆ ನೀಡುವುದು ಪೇಜಾವರರು ಬಿಜೆಪಿ ಪಕ್ಷದ ನಿಷ್ಟೆಯನ್ನು ಪದೇ ಪದೇ ಸಾಬೀತು ಮಾಡುತ್ತಿರುವಂತಿದೆ. ಆಧಾರ ಇಲ್ಲದೇ ಒಂದು ಸರ್ಕಾರದ ಮೇಲೆ ಗಂಭೀರ ಆರೋಪಗಳನ್ನು ಮಾಡುವುದು ಯತಿಗಳಾದಂತವರಿಗೆ ತರವಲ್ಲ ಎಂದು ಅಸಮಾಧಾನ ಹೊರ ಹಾಕಿದ್ದಾರೆ.

ಸಂವಿಧಾನದ ವಿರೋಧಿ ನಿಲುವುಗಳಿಂದ ದಲಿತರು, ಬಹುಜನ ಶೋಷಿತ ಸಮುದಾಯಗಳ ಆಕ್ರೋಶವನ್ನು ಎದುರಿಸಲಾಗದೆ ಪೇಜಾವರರು ಅಲ್ಪಸಂಖ್ಯಾತರ ವಿರುದ್ಧ ಮಾತಾಡುವ ಮೂಲಕ ಚರ್ಚೆಯನ್ನೇ ದಾರಿ ತಪ್ಪಿಸುತ್ತಿದ್ದಾರೆ. ಸಂವಿಧಾನ ಮೂಲಕವೇ ಆಯ್ಕೆಯಾಗಿ ಸಂವಿಧಾನ ಬದಲಾವಣೆಯ ಹೇಳಿಕೆ ನೀಡಿದ ಬಿಜೆಪಿಯ ನಾಯಕರಿಗೆ ಸಾರ್ವಜನಿಕ ಜೀವನದಲ್ಲಿ ಯೋಗ್ಯತೆಯೇ ಇಲ್ಲ ಎಂದು ಜನರು ತಕ್ಕ ಉತ್ತರ ನೀಡಿದ್ದಾರೆ. ಅಂತಹ ದುರ್ದೈವ ಪೇಜಾವರರು ಬರ ಮಾಡಿಕೊಳ್ಳದೇ ಇರಲಿ ಎಂದಿದ್ದಾರೆ.

ಸಂವಿಧಾನದ ವಿರುದ್ಧ ತಮಗಿರುವ ಅಸಹನೆ, ಆಕ್ರೋಶವನ್ನು ಸಾಬೀತು ಮಾಡುತ್ತಿರುವ ಪೇಜಾವರರು, ಇದೇ ಸಂವಿಧಾನದಡಿಯಲ್ಲಿ ರಕ್ಷಣೆ ಪಡೆಯುತ್ತಿರುವುದನ್ನು ಮರೆಯಬಾರದು. ತಮಗೆ ಗೌರವ ನೀಡುವ ಸಂವಿಧಾನ ಬರಲಿ ಎಂದ ರಾಜ್ಯದ ಸಂವಿಧಾನದ ರಕ್ಷಕರಾಗಿರುವ ರಾಜ್ಯಪಾಲರಿಗೆ ಮನವಿ ನೀಡುವುದು ಅತ್ಯಂತ ಖಂಡನೀಯ. ಕೂಡಲೇ ರಾಜ್ಯಪಾಲರು ಸಂವಿಧಾನ ವಿರೋಧಿ ಮನಸ್ಥಿತಿ ಸ್ವಾಮೀಜಿಗಳ ಮೇಲೆ ಕ್ರಮಕ್ಕೆ ಮುಂದಾಗಬೇಕು ಎಂದು ಒತ್ತಾಯಿಸುತ್ತೇನೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ : ಬಿಜೆಪಿ ನಾಯಕ ನಳಿನ್ ಕುಮಾರ್ ಕಟೀಲ್ ವಿರುದ್ಧದ ಚುನಾವಣಾ ಬಾಂಡ್ ‘ಸುಲಿಗೆ’ ಎಫ್‌ಐಆರ್ ರದ್ದು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...

ಕನಿಷ್ಠ 20 ಸಾವಿರ ‘ಕಾಕ್ರೋಚ್‌’ಗಳಿಂದ ಸಂಸತ್ತಿಗೆ ಮೆರವಣಿಗೆ; ವಿದ್ಯಾರ್ಥಿಗಳ ಮೇಲೆ ಪೊಲೀಸರಿಂದ ಲಾಠಿಚಾರ್ಜ್ – ಅಶ್ರುವಾಯು

ಧರ್ಮೇಂದ್ರ ಪ್ರಧಾನ್ ರಾಜೀನಾಮಗೆ ಒತ್ತಾಯಿಸಿ ಮುಂಗಾರು ಅಧಿವೇಶನದ ಮೊದಲ ದಿನದಂದು ಸಂಸತ್ತಿಗೆ ಮೆರವಣಿಗೆ ನಡೆಸಲು ದೆಹಲಿಯಲ್ಲಿ ಜಮಾಯಿಸಿದ್ದ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಸಾವಿರಾರು ಬೆಂಬಲಿಗರನ್ನು ಚದುರಿಸಲು ದೆಹಲಿ ಪೊಳಿಸರು ಅಶ್ರುವಾಯು ಶೆಲ್‌ಗಳನ್ನು...

ಸಿಜೆಪಿ ಪ್ರತಿಭಟನೆಗೆ ನಡುಗಿದ ಕೇಂದ್ರ ಸರ್ಕಾರ; ತರಾತುರಿಯಲ್ಲಿ ಸಂಸತ್ತಿನ ಗೇಟ್ ಮುಚ್ಚಿದ ಭದ್ರತಾ ಸಿಬ್ಬಂದಿ

ನೀಟ್‌ ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ವಿರೋಧಿಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಒತ್ತಾಯಿಸಿ ಇಂದು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಹಮ್ಮಿಕೊಂಡಿರುವ ಸಂಸತ್ ಮೆರವಣಿಗೆಗೆ ಕೇಂದ್ರ ಸರ್ಕಾರ...

ಹಕ್ಕುಗಳ ಕಾಯ್ದೆಗೆ 7 ವರ್ಷ: ಕಾಗದದಲ್ಲಷ್ಟೇ ಸಮಾನತೆ, ಉದ್ಯೋಗ ಸಿಗದೆ ಬೀದಿಗೆ ತಳ್ಳಲ್ಪಡುತ್ತಿರುವ ಟ್ರಾನ್ಸ್‌ಜೆಂಡರ್‌ ಸಮುದಾಯ

ಬೆಂಗಳೂರು: ರಾಷ್ಟ್ರೀಯ ಮಟ್ಟದಲ್ಲಿ ‘ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ಕಾಯ್ದೆ-2019’ ಜಾರಿಗೆ ಬಂದು ಏಳು ವರ್ಷಗಳು ಕಳೆದಿದ್ದರೂ, ಸಮುದಾಯದ ಆರ್ಥಿಕ ಸಬಲೀಕರಣ ಇನ್ನೂ ಕನಸಾಗಿಯೇ ಉಳಿದಿದೆ. ಬೆಂಗಳೂರಿನ ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆ...

ಸಂಸತ್‌ ಚಲೋ: ಕಾಕ್ರೋಚ್ ಜನತಾ ಪಾರ್ಟಿ ಪ್ರತಿಭಟನೆಗೆ ಭಾರೀ ಬೆಂಬಲ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್‌ (NEET) ಪ್ರಶ್ನೆಪತ್ರಿಕೆ ಸೋರಿಕೆ, ಸಾಲು ಸಾಲು ವಿದ್ಯಾರ್ಥಿಗಳ ಆತ್ಮಹತ್ಯೆ ಹಾಗೂ ದೇಶದ ಪರೀಕ್ಷಾ ವ್ಯವಸ್ಥೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ (CJP) ಆಯೋಜಿಸಿರುವ...

ಡಿಜಿಟಲೀಕರಣಗೊಂಡ 2002ರ ಮತದಾರರ ಪಟ್ಟಿಯಿಂದ ಬೆಂಗಳೂರಿನ ಮತಗಟ್ಟೆಗಳೇ ಮಾಯ: ಮಾಹಿತಿ ಸಿಗದೆ ಆತಂಕದಲ್ಲಿ ನೂರಾರು ಮತದಾರರು

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಹಲವು ಭಾಗಗಳಲ್ಲಿ 2002ರ ಡಿಜಿಟಲೀಕರಣಗೊಂಡ ಮತದಾರರ ಪಟ್ಟಿಯಿಂದ ಇಡೀ ಮತಗಟ್ಟೆಗಳೇ ಕಾಣೆಯಾಗಿರುವ ಗಂಭೀರ ಪ್ರಕರಣವೊಂದು ಬೆಳಕಿಗೆ ಬಂದಿದೆ. ಇದರಿಂದಾಗಿ ನೂರಾರು ಮತದಾರರು ಆತಂಕ ಮತ್ತು ಗೊಂದಲಕ್ಕೊಳಗಾಗಿದ್ದಾರೆ ಎಂದು...

‘ರಾಮನಿಗೆ ಅವಮಾನಿಸಿದ್ದಕ್ಕೆ ಶಾಯಿ ಎರಚಿದೆ’: ಜಂತರ್ ಮಂತರ್‌ನಲ್ಲಿ ಅಭಿಜೀತ್ ದೀಪ್ಕೆ ಮೇಲಿನ ದಾಳಿಯನ್ನು ಸಮರ್ಥಿಸಿಕೊಂಡ ಬರ್ಖಾ ಟ್ರೆಹಾನ್

ನವದೆಹಲಿ: ದೇಶದ ರಾಜಧಾನಿಯ ಜಂತರ್ ಮಂತರ್‌ನಲ್ಲಿ ಜುಲೈ 18 ರ ಶನಿವಾರದಂದು ನಡೆದ ಪ್ರತಿಭಟನಾ ಸಭೆಯಲ್ಲಿ ಭಾಷಣ ಮಾಡುತ್ತಿದ್ದ ‘ಜಿರಳೆ ಜನತಾ ಪಕ್ಷ’ದ ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರ ಮೇಲೆ ಶಾಯಿ ಎರಚಿದ...