Homeಕರ್ನಾಟಕಪೇಜಾವರ ಸ್ವಾಮಿ ನಡೆ ಮತೀಯವಾದಿ ನಾಯಕರಂತಿದೆ : ಬಿ.ಕೆ ಹರಿಪ್ರಸಾದ್

ಪೇಜಾವರ ಸ್ವಾಮಿ ನಡೆ ಮತೀಯವಾದಿ ನಾಯಕರಂತಿದೆ : ಬಿ.ಕೆ ಹರಿಪ್ರಸಾದ್

- Advertisement -
- Advertisement -

“ನಮ್ಮನ್ನೂ ಗೌರವಿಸುವ ಸಂವಿಧಾನ ಬರಲಿ” ಎಂದು ಹೇಳಿಕೆ ಕೊಟ್ಟು, ನಂತರ “ನಾನು ಸಂವಿಧಾನ ವಿರುದ್ದ ಮಾತಾನಾಡಿಯೇ ಇಲ್ಲ” ಎಂದಿರುವ ಪೇಜಾವರ ಮಠದ ವಿಶ್ವಪ್ರಸನ್ನ ಸ್ವಾಮಿ ವಿರುದ್ದ ವಿಧಾನಪರಿಷತ್ ಸದಸ್ಯ ಬಿ.ಕೆ ಹರಿಪ್ರಸಾದ್ ಕಿಡಿಕಾರಿದ್ದಾರೆ.

ಈ ಕುರಿತು ಫೇಸ್‌ಬುಕ್‌ನಲ್ಲಿ ಬರೆದುಕೊಂಡಿರುವ ಹರಿಪ್ರಸಾದ್, “ಸಂವಿಧಾನ ಬದಲಾವಣೆಯ ಮುಂಚೂಣಿಯ ನಾಯಕರಂತೆ ವರ್ತಿಸುತ್ತಿದ್ದ ಪೇಜಾವರರು, ತಮ್ಮ ಹೇಳಿಕೆಗಳು ಹಾಗೂ ನಡವಳಿಕೆಗಳಿಂದ ಪ್ರಜ್ಞಾವಂತ ಸಮಾಜ ತಿರುಗಿ ಬಿದ್ದಿರುವುದನ್ನ ನೋಡಿ “ನಾನು ಸಂವಿಧಾನ ವಿರೋಧಿ ಹೇಳಿಕೆಯೇ ನೀಡಿಲ್ಲ” ಎಂದು ತಾವೇ ಆಡಿದ ಮಾತುಗಳನ್ನು ತಿರುಚಿಕೊಳ್ಳುತ್ತಿರುವುದು ವಿಪರ್ಯಾಸ” ಎಂದಿದ್ದಾರೆ.

ಸಮಾಜ ದಾರಿ ತಪ್ಪಿದರೆ ತಿದ್ದುವ ಹಾಗೂ ಧರ್ಮದೊಳಗಿನ ಸಹಬಾಳ್ವೆಯ ತಿರುಳನ್ನು ತಿಳಿ ಹೇಳುವ ಸ್ವಾಮೀಜಿಗಳೇ ಸಮಾಜವನ್ನು ದಾರಿತಪ್ಪಿಸುತ್ತಿರುವುದು ಸ್ವಾಸ್ಥ್ಯ ಸಮಾಜವನ್ನು ಒಡೆಯುವ ಹುನ್ನಾರ ಮಾತ್ರವಲ್ಲ ಪೇಜಾವವರ ನಡೆಗಳು ಮತೀಯವಾದಿ ಸಂಘಟನೆ ನಾಯಕರಂತೆ ಕಾಣುತ್ತಿದೆ ಎಂದು ಹೇಳಿದ್ದಾರೆ.

ಸಂವಿಧಾನದಡಿಯಲ್ಲಿ ಚುನಾಯಿತ ಸರ್ಕಾರದ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಹಾಗೂ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿಯ ಮಾಧ್ಯಮ ವಕ್ತಾರರಂತೆ “ಅಲ್ಪಸಂಖ್ಯಾತರನ್ನು ಓಲೈಕೆ ಮಾಡುತ್ತಿದ್ದಾರೆ” ಎಂದು ಬಹಿರಂಗ ಹೇಳಿಕೆ ನೀಡುವುದು ಪೇಜಾವರರು ಬಿಜೆಪಿ ಪಕ್ಷದ ನಿಷ್ಟೆಯನ್ನು ಪದೇ ಪದೇ ಸಾಬೀತು ಮಾಡುತ್ತಿರುವಂತಿದೆ. ಆಧಾರ ಇಲ್ಲದೇ ಒಂದು ಸರ್ಕಾರದ ಮೇಲೆ ಗಂಭೀರ ಆರೋಪಗಳನ್ನು ಮಾಡುವುದು ಯತಿಗಳಾದಂತವರಿಗೆ ತರವಲ್ಲ ಎಂದು ಅಸಮಾಧಾನ ಹೊರ ಹಾಕಿದ್ದಾರೆ.

ಸಂವಿಧಾನದ ವಿರೋಧಿ ನಿಲುವುಗಳಿಂದ ದಲಿತರು, ಬಹುಜನ ಶೋಷಿತ ಸಮುದಾಯಗಳ ಆಕ್ರೋಶವನ್ನು ಎದುರಿಸಲಾಗದೆ ಪೇಜಾವರರು ಅಲ್ಪಸಂಖ್ಯಾತರ ವಿರುದ್ಧ ಮಾತಾಡುವ ಮೂಲಕ ಚರ್ಚೆಯನ್ನೇ ದಾರಿ ತಪ್ಪಿಸುತ್ತಿದ್ದಾರೆ. ಸಂವಿಧಾನ ಮೂಲಕವೇ ಆಯ್ಕೆಯಾಗಿ ಸಂವಿಧಾನ ಬದಲಾವಣೆಯ ಹೇಳಿಕೆ ನೀಡಿದ ಬಿಜೆಪಿಯ ನಾಯಕರಿಗೆ ಸಾರ್ವಜನಿಕ ಜೀವನದಲ್ಲಿ ಯೋಗ್ಯತೆಯೇ ಇಲ್ಲ ಎಂದು ಜನರು ತಕ್ಕ ಉತ್ತರ ನೀಡಿದ್ದಾರೆ. ಅಂತಹ ದುರ್ದೈವ ಪೇಜಾವರರು ಬರ ಮಾಡಿಕೊಳ್ಳದೇ ಇರಲಿ ಎಂದಿದ್ದಾರೆ.

ಸಂವಿಧಾನದ ವಿರುದ್ಧ ತಮಗಿರುವ ಅಸಹನೆ, ಆಕ್ರೋಶವನ್ನು ಸಾಬೀತು ಮಾಡುತ್ತಿರುವ ಪೇಜಾವರರು, ಇದೇ ಸಂವಿಧಾನದಡಿಯಲ್ಲಿ ರಕ್ಷಣೆ ಪಡೆಯುತ್ತಿರುವುದನ್ನು ಮರೆಯಬಾರದು. ತಮಗೆ ಗೌರವ ನೀಡುವ ಸಂವಿಧಾನ ಬರಲಿ ಎಂದ ರಾಜ್ಯದ ಸಂವಿಧಾನದ ರಕ್ಷಕರಾಗಿರುವ ರಾಜ್ಯಪಾಲರಿಗೆ ಮನವಿ ನೀಡುವುದು ಅತ್ಯಂತ ಖಂಡನೀಯ. ಕೂಡಲೇ ರಾಜ್ಯಪಾಲರು ಸಂವಿಧಾನ ವಿರೋಧಿ ಮನಸ್ಥಿತಿ ಸ್ವಾಮೀಜಿಗಳ ಮೇಲೆ ಕ್ರಮಕ್ಕೆ ಮುಂದಾಗಬೇಕು ಎಂದು ಒತ್ತಾಯಿಸುತ್ತೇನೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ : ಬಿಜೆಪಿ ನಾಯಕ ನಳಿನ್ ಕುಮಾರ್ ಕಟೀಲ್ ವಿರುದ್ಧದ ಚುನಾವಣಾ ಬಾಂಡ್ ‘ಸುಲಿಗೆ’ ಎಫ್‌ಐಆರ್ ರದ್ದು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಜಾರಿ ಸರ್ಕಾರದ ಹೊಸ ಸೂತ್ರ

ಕರ್ನಾಟಕದಲ್ಲಿ ಒಳಮೀಸಲಾತಿಯ ’ಸದ್ದು-ಗುದ್ದು’ ಅವಿಭಜಿತ ಆಂಧ್ರಪ್ರದೇಶಕ್ಕಿಂತಲೂ ಹೆಚ್ಚಾಗಿದೆ. ಇದಕ್ಕೆ ಕಾರಣ ಪರಿಶಿಷ್ಟ ಜಾತಿಗಳೊಳಗಿನ ಮೇಲಾಟವೂ ಹೌದು, ಸರ್ಕಾರದ ಬೇಜವಾಬ್ದಾರಿ ನಡೆಗಳೂ ಹೌದು. ಆದರೆ ದಿನಾಂಕ: 24.04.2026ರಂದು ನಡೆದ ಸಚಿವ ಸಂಪುಟ ಸಭೆಯು ಒಳಮೀಸಲಾತಿ...

ಕೊರೋನಾ ಲಸಿಕೆ ಒಳಹೊರಗುಗಳ ಪರಾಮರ್ಶೆಯ ನೋಟ

ಮನುಷ್ಯನ ನೆನಪಿನ ಶಕ್ತಿ ಕಡಿಮೆ ಎಂದು ರಾಜಕಾರಣಿಗಳು, ಅಧಿಕಾರಿಗಳು ಸದಾ ಗುನುಗುತ್ತಿರುತ್ತಾರೆ. ಅದು ಜೀವ ಮತ್ತು ಜೀವನ ಕಳೆದುಕೊಂಡ ವಿಚಾರವನ್ನು ಕೂಡ ಬಹಳ ಬೇಗ ಮರೆವಿನ ತೊಟ್ಟಿಗೆ ತಳ್ಳಿ ಬಿಡುತ್ತದೆ.ಆದರೂ, ಮನುಷ್ಯ ಭೂಮಿಯ...

‘ಮಾವಿನ ಮರ’ ಕಂಡ ಕನಸು

ಪುಸ್ತಕ ಪರಿಚಯ ಸವಾಲಿನ ವಿಷಯ. ಅದರಲ್ಲೂ ಕವಿತೆಗಳ ಕುರಿತು ಮಾತನಾಡುವುದು ಇನ್ನೂ ಸವಾಲು. ಪ್ರತಿಯೊಂದು ಕವಿತೆಯೂ ತನ್ನ ಓದುಗರೊಂದಿಗೆ ಸಂವಾದಿಸುವ ಬಗೆ ವಿಭಿನ್ನವಾಗಿರುತ್ತದೆ. ಅದನ್ನು ಏಕರೂಪೀ ಪರಿಭಾಷೆಯಲ್ಲಿ ಮಂಡಿಸುವುದು ಸರಿಯಲ್ಲ. ’ಮಿಥಿಲೆಯ ಮಾವಿನ...

NEET ರದ್ದು : ಖಿನ್ನತೆ, ಆತಂಕಕ್ಕೆ ಒಳಗಾದ ವಿದ್ಯಾರ್ಥಿಗಳು; ನಾಲ್ಕು ದಿನದಲ್ಲಿ ನಾಲ್ವರು ಸಾವಿಗೆ ಶರಣು

ಈ ವರ್ಷದ (2026) ನೀಟ್-ಯುಜಿ (NEET-UG) ಪರೀಕ್ಷೆ ರದ್ದಾದ ಬಳಿಕ ದೇಶದಾದ್ಯಂತ ಕನಿಷ್ಠ ನಾಲ್ವರು ವಿದ್ಯಾರ್ಥಿಗಳು ತೀವ್ರ ಮಾನಸಿಕ ಒತ್ತಡ ಹಾಗೂ ಹತಾಶೆಯಿಂದ ಸಾವಿಗೆ ಶರಣಾಗಿದ್ದಾರೆ. ರಾಜಸ್ಥಾನದ ಝುಂಜುನು ಜಿಲ್ಲೆಯ 23 ವರ್ಷದ ಪ್ರದೀಪ್...

ಪ್ಯಾಲೆಸ್ಟೀನಿಯನ್ ಕೈದಿಗಳ ಮೇಲೆ ಲೈಂಗಿಕ ದೌರ್ಜನ್ಯ ವರದಿ: ನ್ಯೂಯಾರ್ಕ್ ಟೈಮ್ ವಿರುದ್ಧ ಮೊಕದ್ದಮೆ ದಾಖಲಿಸಿದ ಇಸ್ರೇಲ್ ಕ್ರಮಕ್ಕೆ ಆರ್‌ಎಸ್‌ಎಫ್ ಖಂಡನೆ

ಪ್ಯಾಲೆಸ್ಟೀನಿಯನ್ ಕೈದಿಗಳನ್ನು ಗುರಿಯಾಗಿಸಿಕೊಂಡು ವ್ಯಾಪಕವಾದ ಲೈಂಗಿಕ ದೌರ್ಜನ್ಯವನ್ನು ಬಹಿರಂಗಪಡಿಸಿದ ನಿಕೋಲಸ್ ಕ್ರಿಸ್ಟೋಫ್ ಅವರ  ಅಭಿಪ್ರಾಯ ಅಂಕಣವನ್ನು ಪ್ರಕಟಿಸಿದ ನ್ಯೂಯಾರ್ಕ್ ಟೈಮ್ಸ್ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿರುವ ಇಸ್ರೇಲಿ ಸರ್ಕಾರದ ನಿರ್ಧಾರವನ್ನು ರಿಪೋರ್ಟರ್ಸ್ ವಿದೌಟ್...

“ಮುಸ್ಲಿಮರಿಗೆ ಯಾವುದೇ ಕೆಲಸ ಮಾಡಲ್ಲ” ಎಂದು ವಿವಾದಾತ್ಮಕ ಶಪಥ ಮಾಡಿದ ಪಶ್ಚಿಮ ಬಂಗಾಳದ ಬಿಜೆಪಿ ಶಾಸಕ ರಿತೇಶ್ ತಿವಾರಿ

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಬಿಜೆಪಿ ತನ್ನ ಮೊದಲ ಸರ್ಕಾರವನ್ನು ರಚಿಸಿದ ಕೆಲವೇ ದಿನಗಳಲ್ಲಿ, ಪಕ್ಷದ ಶಾಸಕ ರಿತೇಶ್ ತಿವಾರಿ ಅವರು ಮಾಡಿರುವ ಭಾಷಣವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. "ಪಶ್ಚಿಮ...

’ಎಸ್‌ಐಆರ್’ ವಿರುದ್ಧ ಜನಪರ ಸಂಘಟನೆಗಳಿಂದ ಜನಾಂದೋಲನ ಬಂಗಾಳದ ಜನರ ಜೊತೆಗೆ ನಿಂತ ಕರ್ನಾಟಕ

ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ (ಎಸ್‌ಐಆರ್) ಮೂಲಕ ವಿರೋಧ ಪಕ್ಷಗಳ ಮತದಾರರು ಮತ್ತು ಅಲ್ಪಸಂಖ್ಯಾತ ಸಮುದಾಯದ ಲಕ್ಷಾಂತರ ಮತದಾರರನ್ನು ಪಟ್ಟಿಯಿಂದ ಕೈಬಿಡುವ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಕುತಂತ್ರ ಈಗಾಗಲೇ ಬಿಹಾರದಲ್ಲಿ ಜಗಜ್ಜಾಹೀರಾಗಿದೆ....

ನಿರುದ್ಯೋಗಿ ಯುವಕರನ್ನು ಜಿರಳೆಗಳು ಎಂದ ಸಿಜೆಐ: ಇದೆಂತಾ ಮಾತು ನ್ಯಾಯಮೂರ್ತಿಗಳೇ!

‘ಕೆಲವು ನಿರುದ್ಯೋಗಿ ಯುವಕರು ಜಿರಳೆಗಳಂತೆ ಸಮಾಜವನ್ನು ಕಾಡುತ್ತಾರೆ. ಉದ್ಯೋಗ, ಸ್ಥಾನಮಾನ ಸಿಗದೆ ಇದ್ದಾಗ ಅವರು ಎಲ್ಲರ ಮೇಲೆ ದಾಳಿ ಆರಂಭಿಸುತ್ತಾರೆ’ ಇದು ಯಾವುದೋ ರಾಜಕೀಯ ರ‍್ಯಾಲಿಯ ಭಾಷಣವಲ್ಲ ಅಥವಾ ಟಿವಿ ಚಾನೆಲ್‌ಗಳ ಜಗಳವಲ್ಲ,...

ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ..ಹಕ್ಕುಗಳನ್ನು ಕೇಳಬಾರದಾ?: ಕಾಂಗ್ರೆಸ್‌ಗೆ ಮುಸ್ಲಿಂ ಸಮಾವೇಶ ಪ್ರಶ್ನೆ

"ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ? ಯಾವ ಹಕ್ಕನ್ನೂ ಕೇಳಬಾರದು ಎಂದು ನೀವು (ಕಾಂಗ್ರೆಸ್‌ನವರು) ಬಯಸುತ್ತಿದ್ದೀರಾ?" ಎಂದು ಕರ್ನಾಟಕ ಮುಸ್ಲಿಂ ಸಮಾವೇಶ ಖಾರವಾಗಿ ಪ್ರಶ್ನಿಸಿತು. ಬೆಂಗಳೂರಿನ ಪುರಭವನದಲ್ಲಿ ಇಂದು (ಮೇ 16, ಶನಿವಾರ) ನಡೆದ...

“ಸನಾತನ ಬೇರುಗಳಲ್ಲಿರುವ ಅಸಮಾನತೆಗೆ ದ್ರಾವಿಡ ನೆಲದ ಪ್ರತಿರೋಧ”: ಉದಯನಿಧಿ ಹೇಳಿಕೆ ವಿವಾದವಾಗಿದ್ದೇಗೆ..?

ಸನಾತನ ಸಂಸ್ಥೆಗಳನ್ನು ಮತ್ತು ಸನಾತನ ಧರ್ಮವನ್ನು ನಿರ್ಮೂಲನೆ ಮಾಡುವ ಬಗ್ಗೆ ಉದಯನಿಧಿ ಸ್ಟಾಲಿನ್ ಅವರ ಹೇಳಿಕೆಗಳು ಸದ್ಯ ದೇಶಾದ್ಯಂತ ಸಂಚಲನ ಮೂಡಿಸಿವೆ.  ತಮಿಳುನಾಡು ವಿಧಾನಸಭೆಯಲ್ಲಿ ನೂತನ ಮುಖ್ಯಮಂತ್ರಿಯಾಗಿ ಸಿ. ಜೋಸೆಫ್ ವಿಜಯ್ ಅವರು ಅಧಿಕಾರ...