Homeಮುಖಪುಟಸಿಎಎ ವಿರೋಧಿ ಹೋರಾಟಗಾರರಿಗೆ ದಂಡ: ಯುಪಿ ಸರ್ಕಾರಕ್ಕೆ ಸುಪ್ರೀಂ ತರಾಟೆ

ಸಿಎಎ ವಿರೋಧಿ ಹೋರಾಟಗಾರರಿಗೆ ದಂಡ: ಯುಪಿ ಸರ್ಕಾರಕ್ಕೆ ಸುಪ್ರೀಂ ತರಾಟೆ

"ಈ ಪ್ರಕ್ರಿಯೆಗಳನ್ನು ಹಿಂತೆಗೆದುಕೊಳ್ಳಿ ಅಥವಾ ಈ ನ್ಯಾಯಾಲಯವು ನಿಗದಿಪಡಿಸಿದ ಕಾನೂನನ್ನು ಉಲ್ಲಂಘಿಸಿದ್ದಕ್ಕಾಗಿ ನಾವು ಪ್ರಕ್ರಿಯೆಯನ್ನು ರದ್ದುಗೊಳಿಸುತ್ತೇವೆ" ಎಂದು ಕೋರ್ಟ್ ತಿಳಿಸಿದೆ.

- Advertisement -
- Advertisement -

2019ರ ಪೌರತ್ವ (ತಿದ್ದುಪಡಿ) ಕಾಯ್ದೆ ವಿರೋಧಿ ಪ್ರತಿಭಟನೆಯ ಸಂದರ್ಭದಲ್ಲಿ ಪ್ರತಿಭಟನಕಾರರು ಸಾರ್ವಜನಿಕ ಆಸ್ತಿಗಳಿಗೆ ಹಾನಿ ಮಾಡಿದ್ದಾರೆ ಎಂದು ಆರೋಪಿಸಿ ಪ್ರತಿಭಟನಾಕಾರರಿಂದ ಆಸ್ತಿ ಜಪ್ತಿ ಮಾಡುವುದಕ್ಕೆ ಉತ್ತರ ಪ್ರದೇಶ ಸರ್ಕಾರ ಯತ್ನಿಸಿರುವುದನ್ನು ಸರ್ವೋಚ್ಚ ನ್ಯಾಯಾಲಯ ತರಾಟೆಗೆ ತೆಗೆದುಕೊಂಡಿದೆ.

“ಈ ಸಂಬಂಧ ಪ್ರಕ್ರಿಯೆಯನ್ನು  ಹಿಂಪಡೆಯಲು ರಾಜ್ಯಕ್ಕೆ ಒಂದು ಅಂತಿಮ ಅವಕಾಶವನ್ನು ನೀಡಲಾಗುವುದು. ಅಥವಾ ಕಾನೂನನ್ನು ಉಲ್ಲಂಘಿಸಿದ್ದಕ್ಕಾಗಿ ಪ್ರಕ್ರಿಯೆಯನ್ನು ರದ್ದುಗೊಳಿಸಲಾಗುವುದು” ಎಂದು ನ್ಯಾಯಾಲಯ ಎಚ್ಚರಿಕೆ ನೀಡಿದೆ.

“ನೀವು ಕಾನೂನಿನ ಅಡಿಯಲ್ಲಿ ಸರಿಯಾದ ಪ್ರಕ್ರಿಯೆಯನ್ನು ಅನುಸರಿಸಬೇಕು. ದಯವಿಟ್ಟು ಇದನ್ನು ಪರಿಶೀಲಿಸಿ, ನಾವು ಫೆಬ್ರವರಿ 18 ರವರೆಗೆ ಒಂದು ಅವಕಾಶವನ್ನು ನೀಡುತ್ತೇವೆ” ಎಂದು ನ್ಯಾಯಾಲಯ ಗಡುವು ನೀಡಿದೆ.

ಆರೋಪಿಗಳ ಆಸ್ತಿಯನ್ನು ಮುಟ್ಟುಗೋಲು ಹಾಕಿಕೊಳ್ಳುವ ಪ್ರಕ್ರಿಯೆ ನಡೆಸುತ್ತಾ ಉತ್ತರ ಪ್ರದೇಶ ಸರ್ಕಾರವು “ದೂರುದಾರ, ತೀರ್ಪುಗಾರ ಮತ್ತು ಪ್ರಾಸಿಕ್ಯೂಟರ್” ಎಲ್ಲವೂ ಆಗಿ ವರ್ತಿಸುತ್ತಿದೆ ಎಂದು ನ್ಯಾಯಮೂರ್ತಿಗಳಾದ ಡಿವೈ ಚಂದ್ರಚೂಡ್ ಮತ್ತು ಸೂರ್ಯಕಾಂತ್ ಅವರಿದ್ದ ಪೀಠ ಆಕ್ಷೇಪ ವ್ಯಕ್ತಪಡಿಸಿದೆ.

“ನೀವು ದೂರುದಾರರಾಗಿದ್ದೀರಿ, ನೀವು ನ್ಯಾಯಾಧೀಶರಾಗಿದ್ದೀರಿ ಮತ್ತು ನಂತರ ನೀವು ಆರೋಪಿಯ ಆಸ್ತಿಯನ್ನು ಜಪ್ತಿ ಮಾಡುತ್ತಿದ್ದೀರಿ” ಎಂದು ನ್ಯಾಯಮೂರ್ತಿ ಸೂರ್ಯ ಕಾಂತ್ ಅವರು ಯುಪಿ ಹೆಚ್ಚುವರಿ ಅಡ್ವೊಕೇಟ್ ಜನರಲ್ ಗರಿಮಾ ಪ್ರಸಾದ್ ಅವರಿಗೆ ಹೇಳಿದ್ದಾರೆ. “ನ್ಯಾಯಾಂಗ ಅಧಿಕಾರಿಯಿಂದ ತೀರ್ಪು ನೀಡಬೇಕು ಎಂದು ನಾವು ನಿರ್ದೇಶಿಸಿರುವಾಗ ಎಡಿಎಂ ಹೇಗೆ ವಿಚಾರಣೆ ನಡೆಸುತ್ತಿದ್ದಾರೆ?” ಎಂದು ನ್ಯಾಯಮೂರ್ತಿ ಚಂದ್ರಚೂಡ್ ಪ್ರಶ್ನಿಸಿದ್ದಾರೆ.

“ಈ ಪ್ರಕ್ರಿಯೆಗಳನ್ನು ಹಿಂತೆಗೆದುಕೊಳ್ಳಿ ಅಥವಾ ಈ ನ್ಯಾಯಾಲಯವು ನಿಗದಿಪಡಿಸಿದ ಕಾನೂನನ್ನು ಉಲ್ಲಂಘಿಸಿದ್ದಕ್ಕಾಗಿ ನಾವು ಪ್ರಕ್ರಿಯೆಯನ್ನು ರದ್ದುಗೊಳಿಸುತ್ತೇವೆ” ಎಂದು ಕೋರ್ಟ್ ತಿಳಿಸಿದೆ.

ಪೌರತ್ವ (ತಿದ್ದುಪಡಿ) ಕಾಯ್ದೆ (ಸಿಎಎ) ವಿರೋಧಿ ಆಂದೋಲನದ ಸಂದರ್ಭದಲ್ಲಿ ಸಾರ್ವಜನಿಕ ಆಸ್ತಿಗಳಿಗೆ ಹಾನಿ ಉಂಟಾಗಿದೆ. ಆ ನಷ್ಟವನ್ನು ವಸೂಲಿ ಮಾಡುವುದಾಗಿ ಜಿಲ್ಲಾಡಳಿತವು ಪ್ರತಿಭಟನಾಕಾರರಿಗೆ ಕಳುಹಿಸಿರುವ ನೋಟಿಸ್ ರದ್ದುಗೊಳಿಸುವಂತೆ ಕೋರಿ ಪರ್ವೈಜ್ ಆರಿಫ್ ಟಿಟು ಅವರು ಸಲ್ಲಿಸಿದ ಮನವಿಯನ್ನು ಸುಪ್ರೀಂ ಕೋರ್ಟ್ ವಿಚಾರಣೆ ನಡೆಸುತ್ತಿದೆ.

ಸರ್ವಾಧಿಕಾರಿಗಳಂತೆ ನೋಟಿಸ್‌ಗಳನ್ನು ಕಳುಹಿಸಲಾಗಿದೆ ಎಂದು ಮನವಿಯಲ್ಲಿ ಆಕ್ಷೇಪಿಸಲಾಗಿದೆ. ಆರು ವರ್ಷಗಳ ಹಿಂದೆ 94ನೇ ವಯಸ್ಸಿನಲ್ಲಿ ಸಾವನ್ನಪ್ಪಿದ ವ್ಯಕ್ತಿಗೆ, 90 ವರ್ಷಕ್ಕಿಂತ ಮೇಲ್ಪಟ್ಟ ಇಬ್ಬರು ವ್ಯಕ್ತಿಗಳು ಸೇರಿದಂತೆ ಹಲವರಿಗೆ ನೋಟಿಸ್ ಕಳುಹಿಸಿರುವ ನಿದರ್ಶನಗಳನ್ನು ದೂರಿನಲ್ಲಿ ಉಲ್ಲೇಖಿಸಲಾಗಿದೆ.

833 ಹೋರಾಟಗಾರರ ವಿರುದ್ಧ 106 ಎಫ್‌ಐಆರ್‌ಗಳನ್ನು ದಾಖಲಿಸಲಾಗಿದ್ದು, 274 ವಸೂಲಿ ನೋಟಿಸ್‌ಗಳನ್ನು ನೀಡಲಾಗಿದೆ ಎಂದು ರಾಜ್ಯ ಸರ್ಕಾರದ ಪರ ವಕೀಲ ಗರಿಮಾ ಪ್ರಸಾದ್ ಕೋರ್ಟ್‌ಗೆ ಮಾಹಿತಿ ನೀಡಿದ್ದಾರೆ.

“274 ನೋಟಿಸ್‌ಗಳಲ್ಲಿ 236 ನೋಟಿಸ್‌ಗಳು ವಸೂಲಾತಿ ಆದೇಶಗಳನ್ನು ಹೊಂದಿವೆ. ಅಲ್ಲದೇ 38 ಪ್ರಕರಣಗಳನ್ನು ಈಗಾಗಲೇ ತೆರವುಗೊಳಿಸಲಾಗಿದೆ” ಎಂದು ಯುಪಿ ಸರ್ಕಾರದ ವಕೀಲರು ತಿಳಿಸಿದ್ದಾರೆ.

ನ್ಯಾಯಾಂಗ ಅಧಿಕಾರಿಗಳನ್ನು ಕ್ಲೈಮ್ಸ್‌‌ ಟ್ರಿಬ್ಯೂನಲ್‌ಗಳಲ್ಲಿ ನೇಮಿಸಬೇಕು ಎಂದು ನ್ಯಾಯಪೀಠವು 2009 ಮತ್ತು 2018ರಲ್ಲಿ ಎರಡು ತೀರ್ಪುಗಳನ್ನು ನೀಡಿದೆ. ಆದರೆ ನೀವು ಹೆಚ್ಚುವರಿ ಜಿಲ್ಲಾ ಮ್ಯಾಜಿಸ್ಟ್ರೇಟ್‌ಗಳನ್ನು (ಎಡಿಎಂ) ನೇಮಿಸಿದ್ದೀರಿ ಎಂದು ಪೀಠ ಆಕ್ಷೇಪ ವ್ಯಕ್ತಪಡಿಸಿದೆ.

ನ್ಯಾಯಮೂರ್ತಿ ಸೂರ್ಯ ಕಾಂತ್ ಮಾತನಾಡಿ, “ಮೇಡಂ ಪ್ರಸಾದ್‌, ಇದು ಕೇವಲ ಸಲಹೆಯಾಗಿದೆ. 2019ರಲ್ಲಿನ ಆಂದೋಲನಕ್ಕೆ ಸಂಬಂಧಿಸಿದಂತೆ ಕಳುಹಿಸಲಾದ ನೋಟಿಸ್‌ಗಳಿಗೆ ಸಂಬಂಧಿಸಿದ ಮನವಿ ಇದಾಗಿದೆ. ಯುಪಿಯಂತಹ ದೊಡ್ಡ ರಾಜ್ಯದಲ್ಲಿ 236 ನೋಟಿಸ್‌ಗಳು ದೊಡ್ಡ ವಿಷಯವಲ್ಲ. ನೀವು ಆಲಿಸದಿದ್ದರೆ, ನಂತರದ ಪರಿಣಾಮಗಳನ್ನು ಎದುರಿಸಲು ಸಿದ್ಧರಾಗಿರಿ. ಸುಪ್ರೀಂ ಕೋರ್ಟ್‌‌ನ ತೀರ್ಪುಗಳನ್ನು ಹೇಗೆ ಅನುಸರಿಸಬೇಕು ಎಂಬುದನ್ನು ನಾವು ನಿಮಗೆ ಹೇಳುತ್ತೇವೆ” ಎಂದು ಪ್ರತಿಕ್ರಿಯಿಸಿದ್ದಾರೆ.

ನ್ಯಾಯಾಂಗ ಅಧಿಕಾರಿಯೇ ತೀರ್ಪು ನೀಡಬೇಕು ಎಂದು ನ್ಯಾಯಾಲಯ ಸೂಚಿಸಿರುವಾಗ ಎಡಿಎಂಗಳು ಏಕೆ ಕಲಾಪ ನಡೆಸುತ್ತಿದ್ದಾರೆ ಎಂದು ನ್ಯಾಯಮೂರ್ತಿ ಚಂದ್ರಚೂಡ್ ತೀಕ್ಷ್ಣವಾಗಿ ಪ್ರಶ್ನಿಸಿದ್ದಾರೆ.

ಕ್ಲೈಮ್ಸ್‌‌ ನ್ಯಾಯಮಂಡಳಿಗಳು 2011ರಲ್ಲಿ ನೀಡಿದ ಸೂಚನೆಯಂತೆ ಹೊರಡಿಸಲಾದ ಸರ್ಕಾರಿ ಆದೇಶಗಳನ್ನು ಉತ್ತರ ಪ್ರದೇಶ ಸರ್ಕಾರದ ವಕೀಲರು ಉಲ್ಲೇಖಿಸಿದರು. ಇದನ್ನು ಹೈಕೋರ್ಟ್ ತನ್ನ ನಂತರದ ಆದೇಶಗಳಲ್ಲಿ ಅನುಮೋದಿಸಿದೆ ಎಂದು ವಾದಿಸಿದರು.

ನ್ಯಾಯಮೂರ್ತಿ ಚಂದ್ರಚೂಡ್, “ನಾವು ಇತರ ಪ್ರಕ್ರಿಯೆಗಳಿಗೆ ಸಂಬಂಧಿಸಿಲ್ಲ. ಸಿಎಎ ಪ್ರತಿಭಟನೆಗಳ ಸಂದರ್ಭದಲ್ಲಿ ಡಿಸೆಂಬರ್ 2019ರಲ್ಲಿ ಕಳುಹಿಸಲಾದ ನೋಟಿಸ್‌ಗಳಿಗೆ ಮಾತ್ರ ನಾವು ಕಾಳಜಿ ವಹಿಸುತ್ತೇವೆ. ನಮ್ಮ ಆದೇಶಗಳನ್ನು ನೀವು ಬೈಪಾಸ್ ಮಾಡಲು ಸಾಧ್ಯವಿಲ್ಲ. ನ್ಯಾಯಾಂಗ ಅಧಿಕಾರಿಗಳನ್ನು ನೇಮಿಸಲು ನಾವು ಹೇಳಿರುವಾಗ ನೀವು ಎಡಿಎಂಗಳನ್ನು ಹೇಗೆ ನೇಮಿಸಬಹುದು. ಡಿಸೆಂಬರ್ 2019ರಲ್ಲಿ ಯಾವುದೇ ಪ್ರಕ್ರಿಯೆಗಳನ್ನು ನಡೆಸಲಾಗಿದ್ದರೂ ನ್ಯಾಯಾಲಯವು ನಿಗದಿಪಡಿಸಿದ ಕಾನೂನಿಗೆ ಪ್ರಕ್ರಿಯೆಯು ವಿರುದ್ಧವಾಗಿದೆ” ಎಂದು ತಿಳಿಸಿದ್ದಾರೆ.


ಇದನ್ನೂ ಓದಿರಿ: ಹಿಜಾಬ್‌ಗೆ ಬೆಂಬಲ; ರಾಜ್ಯ ಸರ್ಕಾರವನ್ನು ‘ಸರ್ವಾಧಿಕಾರಿ’ ಎಂದ ಎನ್‌ಸಿಪಿ ಸಂಸದೆ  ಸುಪ್ರಿಯಾ ಸುಲೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸ್ವಕ್ಷೇತ್ರ ತಿರುವನಂತಪುರದಲ್ಲಿ ಬಿಜೆಪಿ ಭರ್ಜರಿ ಗೆಲುವು : ‘ಪ್ರಜಾಪ್ರಭುತ್ವದ ಸೌಂದರ್ಯ’ ಎಂದ ಕಾಂಗ್ರೆಸ್ ಸಂಸದ ಶಶಿ ತರೂರ್

ಕೇರಳದ ಸ್ಥಳೀಯ ಸಂಸ್ಥೆ ಚುನಾವಣೆಯ ಫಲಿತಾಂಶ ಇಂದು (ಡಿ.13) ಪ್ರಕಟಗೊಂಡಿದ್ದು, ತಿರುವನಂತಪುರಂ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಭರ್ಜರಿ ಗೆಲುವು ದಾಖಲಿಸಿದೆ. ಈ ಮೂಲಕ 45 ವರ್ಷಗಳ ಸಿಪಿಐ(ಎಂ) ನೇತೃತ್ವದ ಎಲ್‌ಡಿಎಫ್‌...

ಕೇರಳ ಸ್ಥಳೀಯ ಸಂಸ್ಥೆ ಚುನಾವಣೆ : ಯುಡಿಎಫ್‌ ಸ್ಪಷ್ಟ ಮೇಲುಗೈ

ಇಂದು (2025 ಡಿಸೆಂಬರ್ 13, ಶನಿವಾರ) ಪ್ರಕಟಗೊಂಡ ಕೇರಳದ ಸ್ಥಳೀಯ ಸಂಸ್ಥೆಗಳ ಚುನಾವಣಾ ಫಲಿತಾಂಶದಲ್ಲಿ ವಿರೋಧ ಪಕ್ಷಗಳ ಒಕ್ಕೂಟವಾದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್) ಸ್ಪಷ್ಟ ಮೇಲುಗೈ ಸಾಧಿಸಿದೆ. ಈ ಮೂಲಕ ರಾಜ್ಯ...

ಕೋಲ್ಕತ್ತಾ ಮೆಸ್ಸಿ ಕಾರ್ಯಕ್ರಮದಲ್ಲಿ ಗಲಾಟೆ | ಕ್ಷಮೆ ಯಾಚಿಸಿದ ಸಿಎಂ ಮಮತಾ ಬ್ಯಾನರ್ಜಿ, ತನಿಖೆಗೆ ಸಮಿತಿ ರಚನೆ; ಆಯೋಜಕನ ಬಂಧನ

ಫುಟ್ಬಾಲ್ ತಾರೆ ಲಿಯೋನೆಲ್ ಮೆಸ್ಸಿ ಭೇಟಿಯ ವೇಳೆ ಶನಿವಾರ (ಡಿಸೆಂಬರ್ 13) ಕೋಲ್ಕತ್ತಾದ ಸಾಲ್ಟ್ ಲೇಕ್ ಕ್ರೀಡಾಂಗಣದಲ್ಲಿ ಉಂಟಾದ ಗಲಾಟೆಗೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕ್ಷಮೆಯಾಚಿಸಿದ್ದು, ನಿವೃತ್ತ ನ್ಯಾಯಮೂರ್ತಿ...

ಮೆಸ್ಸಿ ನೋಡಲು 25 ಸಾವಿರ ರೂ. ಪಾವತಿಸಿದವರಿಗೆ ನಿರಾಶೆ; ಕೋಪಗೊಂಡ ಅಭಿಮಾನಿಗಳಿಂದ ಕ್ರೀಡಾಂಗಣದಲ್ಲಿ ದಾಂಧಲೆ

ಶನಿವಾರ ನಡೆದ ಲಿಯೋನೆಲ್ ಮೆಸ್ಸಿ ಅವರ ಬಹು ನಿರೀಕ್ಷಿತ "ಗೋಟ್ ಇಂಡಿಯಾ ಟೂರ್" ಕೋಲ್ಕತ್ತಾದಲ್ಲಿ ಅಸ್ತವ್ಯಸ್ತವಾಯಿತು. ಯುವ ಭಾರತಿ ಕ್ರಿರಂಗನ್‌ನಲ್ಲಿ ರೊಚ್ಚಿಗೆದ್ದ ಅಭಿಮಾನಿಗಳ ದಾಂಧಲೆಯಿಂದ ಕ್ರೀಡಾಂಗಣ ಅವ್ಯವಸ್ಥೆಗೆ ಒಳಗಾಯಿತು. ಸಾವಿರಾರು ಅಭಿಮಾನಿಗಳು ಅರ್ಜೆಂಟೀನಾದ...

ಡ್ರಗ್‌ ಪೆಡ್ಲರ್‌ಗಳ ಮನೆ ಒಡೆದು ಹಾಕುವ ಹೇಳಿಕೆ : ಪರಮೇಶ್ವರ್ ಮಾತಿಗೆ ಆತಂಕ ವ್ಯಕ್ತಪಡಿಸಿದ ಕಾಂಗ್ರೆಸ್ ಹಿರಿಯ ನಾಯಕ ಚಿದಂಬರಂ

"ಡ್ರಗ್‌ ಪೆಡ್ಲರ್‌ಗಳ ಬಾಡಿಗೆ ಮನೆಗಳನ್ನು ಒಡೆದು ಹಾಕುವ ಹಂತಕ್ಕೆ ಹೋಗಿದ್ದೇವೆ" ಎಂಬ ಗೃಹ ಸಚಿವ ಜಿ.ಪರಮೇಶ್ವರ್ ಹೇಳಿಕೆಗೆ ಕಾಂಗ್ರೆಸ್ ಹಿರಿಯ ನಾಯಕ, ಮಾಜಿ ಕೇಂದ್ರ ಸಚಿವ ಪಿ. ಚಿದಂಬರಂ ಆತಂಕ ವ್ಯಕ್ತಪಡಿಸಿದ್ದಾರೆ. ಸಾಮಾಜಿಕ...

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆ: ಶಶಿ ತರೂರ್ ಕ್ಷೇತ್ರ ತಿರುವನಂತಪುರಂನಲ್ಲಿ ಬಿಜೆಪಿ ಮುನ್ನಡೆ

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ, ವಿಶೇಷವಾಗಿ ತಿರುವನಂತಪುರಂನಲ್ಲಿ ಭಾರತೀಯ ಜನತಾ ಪಕ್ಷದ ಸಾಧನೆಯನ್ನು ಹಿರಿಯ ಕಾಂಗ್ರೆಸ್ ನಾಯಕ ಶಶಿ ತರೂರ್ ಶನಿವಾರ ಅಭಿನಂದಿಸಿದ್ದಾರೆ. ಜನರ ತೀರ್ಪನ್ನು ಗೌರವಿಸಬೇಕು ಎಂದು ಹೇಳಿದ್ದಾರೆ. ಎಕ್ಸ್‌ನಲ್ಲಿ ದೀರ್ಘ...

ಆಳಂದ ಮತಗಳ್ಳತನ | ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್ ಸೇರಿ 7 ಮಂದಿ ವಿರುದ್ಧ ಎಸ್‌ಐಟಿ ಚಾರ್ಜ್‌ಶೀಟ್‌

ಕಲಬುರಗಿಯ ಆಳಂದ ವಿಧಾನಸಭಾ ಕ್ಷೇತ್ರದಲ್ಲಿ ನಡೆದ ಮತಗಳ್ಳತನ (ಚುನಾವಣಾ ಆಕ್ರಮ) ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಿದ್ದು, ಆಳಂದದ ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್...

ಉತ್ತರ ಪ್ರದೇಶ| ಗಸ್ತು ವಾಹನ ಹಳ್ಳಕ್ಕೆ ಉರುಳಿಸಿದ ಪಾನಮತ್ತ ಪೊಲೀಸರು; ಕ್ರೇನ್ ಚಾಲಕನ ಮೇಲೆ ಹಲ್ಲೆ

ಶುಕ್ರವಾರ (ಡಿಸೆಂಬರ್ 12) ರಾತ್ರಿ ಪೊಲೀಸರೊಬ್ಬರು ಕಾರಿನ ನಿಯಂತ್ರಣ ಕಳೆದುಕೊಂಡ ಬಳಿಕ '112' ಪೊಲೀಸ್ ಪ್ರತಿಕ್ರಿಯೆ ವಾಹನ (ಪಿಆರ್‌ವಿ) ಹಳ್ಳಕ್ಕೆ ಉರುಳಿದೆ. ವರದಿಗಳ ಪ್ರಕಾರ, ಘಟನೆಯ ಸಮಯದಲ್ಲಿ ಪೊಲೀಸರು ಪಾನಮತ್ತರಾಗಿದ್ದರು. ಕಾರ್ ಕಂದಕಕ್ಕೆ...

ಲಿಯೋನೆಲ್ ಮೆಸ್ಸಿ ಇಂಡಿಯಾ ಪ್ರವಾಸ; ಅಭೂತಪೂರ್ವ ಸ್ವಾಗತ ಕೋರಿದ ಕೋಲ್ಕತ್ತಾ ಅಭಿಮಾನಿಗಳು

ಇಂಡಿಯಾ ಪ್ರವಾಸ ಪ್ರಾರಂಭಿಸಿರುವ ಅರ್ಜೆಂಟೀನಾದ ಪುಟ್‌ಬಾಲ್‌ ತಾರೆ ಲಿಯೋನೆಲ್ ಮೆಸ್ಸಿ ಕೋಲ್ಕತ್ತಾಗೆ ಬಂದಿಳಿದಿದ್ದಾರೆ. ಶನಿವಾರ ಬೆಳಗಿನ ಜಾವ ವಿಮಾನ ನಿಲ್ದಾಣದಲ್ಲಿ ನೆರೆದಿದ್ದ ಸಾವಿರಾರು ಅಭಿಮಾನಿಗಳಿಂದ ಅವರಿಗೆ ಅಭೂತಪೂರ್ವ ಸ್ವಾಗತ ಕೋರಿದರು. ಅರ್ಜೆಂಟೀನಾದ ಸೂಪರ್‌ಸ್ಟಾರ್ ದುಬೈ...

ನಟಿಯ ಅಪಹರಣ, ಅತ್ಯಾಚಾರ ಪ್ರಕರಣ : ಆರು ಅಪರಾಧಿಗಳಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

ಮಲಯಾಳಂ ಮೂಲದ ಬಹುಭಾಷಾ ನಟಿಯ ಅಪಹರಣ ಮತ್ತು ಅತ್ಯಾಚಾರ ಪ್ರಕರಣದ (2017ರ ಪ್ರಕರಣ) ಆರು ಅಪರಾಧಿಗಳಿಗೆ ಇಪ್ಪತ್ತು ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿ ಶುಕ್ರವಾರ (ಡಿಸೆಂಬರ್ 12) ಕೇರಳ ನ್ಯಾಯಾಲಯ ಆದೇಶಿಸಿದೆ. ಡಿಸೆಂಬರ್...