Homeಮುಖಪುಟಸಿಎಎ ವಿರೋಧಿ ಹೋರಾಟಗಾರರಿಗೆ ದಂಡ: ಯುಪಿ ಸರ್ಕಾರಕ್ಕೆ ಸುಪ್ರೀಂ ತರಾಟೆ

ಸಿಎಎ ವಿರೋಧಿ ಹೋರಾಟಗಾರರಿಗೆ ದಂಡ: ಯುಪಿ ಸರ್ಕಾರಕ್ಕೆ ಸುಪ್ರೀಂ ತರಾಟೆ

"ಈ ಪ್ರಕ್ರಿಯೆಗಳನ್ನು ಹಿಂತೆಗೆದುಕೊಳ್ಳಿ ಅಥವಾ ಈ ನ್ಯಾಯಾಲಯವು ನಿಗದಿಪಡಿಸಿದ ಕಾನೂನನ್ನು ಉಲ್ಲಂಘಿಸಿದ್ದಕ್ಕಾಗಿ ನಾವು ಪ್ರಕ್ರಿಯೆಯನ್ನು ರದ್ದುಗೊಳಿಸುತ್ತೇವೆ" ಎಂದು ಕೋರ್ಟ್ ತಿಳಿಸಿದೆ.

- Advertisement -
- Advertisement -

2019ರ ಪೌರತ್ವ (ತಿದ್ದುಪಡಿ) ಕಾಯ್ದೆ ವಿರೋಧಿ ಪ್ರತಿಭಟನೆಯ ಸಂದರ್ಭದಲ್ಲಿ ಪ್ರತಿಭಟನಕಾರರು ಸಾರ್ವಜನಿಕ ಆಸ್ತಿಗಳಿಗೆ ಹಾನಿ ಮಾಡಿದ್ದಾರೆ ಎಂದು ಆರೋಪಿಸಿ ಪ್ರತಿಭಟನಾಕಾರರಿಂದ ಆಸ್ತಿ ಜಪ್ತಿ ಮಾಡುವುದಕ್ಕೆ ಉತ್ತರ ಪ್ರದೇಶ ಸರ್ಕಾರ ಯತ್ನಿಸಿರುವುದನ್ನು ಸರ್ವೋಚ್ಚ ನ್ಯಾಯಾಲಯ ತರಾಟೆಗೆ ತೆಗೆದುಕೊಂಡಿದೆ.

“ಈ ಸಂಬಂಧ ಪ್ರಕ್ರಿಯೆಯನ್ನು  ಹಿಂಪಡೆಯಲು ರಾಜ್ಯಕ್ಕೆ ಒಂದು ಅಂತಿಮ ಅವಕಾಶವನ್ನು ನೀಡಲಾಗುವುದು. ಅಥವಾ ಕಾನೂನನ್ನು ಉಲ್ಲಂಘಿಸಿದ್ದಕ್ಕಾಗಿ ಪ್ರಕ್ರಿಯೆಯನ್ನು ರದ್ದುಗೊಳಿಸಲಾಗುವುದು” ಎಂದು ನ್ಯಾಯಾಲಯ ಎಚ್ಚರಿಕೆ ನೀಡಿದೆ.

“ನೀವು ಕಾನೂನಿನ ಅಡಿಯಲ್ಲಿ ಸರಿಯಾದ ಪ್ರಕ್ರಿಯೆಯನ್ನು ಅನುಸರಿಸಬೇಕು. ದಯವಿಟ್ಟು ಇದನ್ನು ಪರಿಶೀಲಿಸಿ, ನಾವು ಫೆಬ್ರವರಿ 18 ರವರೆಗೆ ಒಂದು ಅವಕಾಶವನ್ನು ನೀಡುತ್ತೇವೆ” ಎಂದು ನ್ಯಾಯಾಲಯ ಗಡುವು ನೀಡಿದೆ.

ಆರೋಪಿಗಳ ಆಸ್ತಿಯನ್ನು ಮುಟ್ಟುಗೋಲು ಹಾಕಿಕೊಳ್ಳುವ ಪ್ರಕ್ರಿಯೆ ನಡೆಸುತ್ತಾ ಉತ್ತರ ಪ್ರದೇಶ ಸರ್ಕಾರವು “ದೂರುದಾರ, ತೀರ್ಪುಗಾರ ಮತ್ತು ಪ್ರಾಸಿಕ್ಯೂಟರ್” ಎಲ್ಲವೂ ಆಗಿ ವರ್ತಿಸುತ್ತಿದೆ ಎಂದು ನ್ಯಾಯಮೂರ್ತಿಗಳಾದ ಡಿವೈ ಚಂದ್ರಚೂಡ್ ಮತ್ತು ಸೂರ್ಯಕಾಂತ್ ಅವರಿದ್ದ ಪೀಠ ಆಕ್ಷೇಪ ವ್ಯಕ್ತಪಡಿಸಿದೆ.

“ನೀವು ದೂರುದಾರರಾಗಿದ್ದೀರಿ, ನೀವು ನ್ಯಾಯಾಧೀಶರಾಗಿದ್ದೀರಿ ಮತ್ತು ನಂತರ ನೀವು ಆರೋಪಿಯ ಆಸ್ತಿಯನ್ನು ಜಪ್ತಿ ಮಾಡುತ್ತಿದ್ದೀರಿ” ಎಂದು ನ್ಯಾಯಮೂರ್ತಿ ಸೂರ್ಯ ಕಾಂತ್ ಅವರು ಯುಪಿ ಹೆಚ್ಚುವರಿ ಅಡ್ವೊಕೇಟ್ ಜನರಲ್ ಗರಿಮಾ ಪ್ರಸಾದ್ ಅವರಿಗೆ ಹೇಳಿದ್ದಾರೆ. “ನ್ಯಾಯಾಂಗ ಅಧಿಕಾರಿಯಿಂದ ತೀರ್ಪು ನೀಡಬೇಕು ಎಂದು ನಾವು ನಿರ್ದೇಶಿಸಿರುವಾಗ ಎಡಿಎಂ ಹೇಗೆ ವಿಚಾರಣೆ ನಡೆಸುತ್ತಿದ್ದಾರೆ?” ಎಂದು ನ್ಯಾಯಮೂರ್ತಿ ಚಂದ್ರಚೂಡ್ ಪ್ರಶ್ನಿಸಿದ್ದಾರೆ.

“ಈ ಪ್ರಕ್ರಿಯೆಗಳನ್ನು ಹಿಂತೆಗೆದುಕೊಳ್ಳಿ ಅಥವಾ ಈ ನ್ಯಾಯಾಲಯವು ನಿಗದಿಪಡಿಸಿದ ಕಾನೂನನ್ನು ಉಲ್ಲಂಘಿಸಿದ್ದಕ್ಕಾಗಿ ನಾವು ಪ್ರಕ್ರಿಯೆಯನ್ನು ರದ್ದುಗೊಳಿಸುತ್ತೇವೆ” ಎಂದು ಕೋರ್ಟ್ ತಿಳಿಸಿದೆ.

ಪೌರತ್ವ (ತಿದ್ದುಪಡಿ) ಕಾಯ್ದೆ (ಸಿಎಎ) ವಿರೋಧಿ ಆಂದೋಲನದ ಸಂದರ್ಭದಲ್ಲಿ ಸಾರ್ವಜನಿಕ ಆಸ್ತಿಗಳಿಗೆ ಹಾನಿ ಉಂಟಾಗಿದೆ. ಆ ನಷ್ಟವನ್ನು ವಸೂಲಿ ಮಾಡುವುದಾಗಿ ಜಿಲ್ಲಾಡಳಿತವು ಪ್ರತಿಭಟನಾಕಾರರಿಗೆ ಕಳುಹಿಸಿರುವ ನೋಟಿಸ್ ರದ್ದುಗೊಳಿಸುವಂತೆ ಕೋರಿ ಪರ್ವೈಜ್ ಆರಿಫ್ ಟಿಟು ಅವರು ಸಲ್ಲಿಸಿದ ಮನವಿಯನ್ನು ಸುಪ್ರೀಂ ಕೋರ್ಟ್ ವಿಚಾರಣೆ ನಡೆಸುತ್ತಿದೆ.

ಸರ್ವಾಧಿಕಾರಿಗಳಂತೆ ನೋಟಿಸ್‌ಗಳನ್ನು ಕಳುಹಿಸಲಾಗಿದೆ ಎಂದು ಮನವಿಯಲ್ಲಿ ಆಕ್ಷೇಪಿಸಲಾಗಿದೆ. ಆರು ವರ್ಷಗಳ ಹಿಂದೆ 94ನೇ ವಯಸ್ಸಿನಲ್ಲಿ ಸಾವನ್ನಪ್ಪಿದ ವ್ಯಕ್ತಿಗೆ, 90 ವರ್ಷಕ್ಕಿಂತ ಮೇಲ್ಪಟ್ಟ ಇಬ್ಬರು ವ್ಯಕ್ತಿಗಳು ಸೇರಿದಂತೆ ಹಲವರಿಗೆ ನೋಟಿಸ್ ಕಳುಹಿಸಿರುವ ನಿದರ್ಶನಗಳನ್ನು ದೂರಿನಲ್ಲಿ ಉಲ್ಲೇಖಿಸಲಾಗಿದೆ.

833 ಹೋರಾಟಗಾರರ ವಿರುದ್ಧ 106 ಎಫ್‌ಐಆರ್‌ಗಳನ್ನು ದಾಖಲಿಸಲಾಗಿದ್ದು, 274 ವಸೂಲಿ ನೋಟಿಸ್‌ಗಳನ್ನು ನೀಡಲಾಗಿದೆ ಎಂದು ರಾಜ್ಯ ಸರ್ಕಾರದ ಪರ ವಕೀಲ ಗರಿಮಾ ಪ್ರಸಾದ್ ಕೋರ್ಟ್‌ಗೆ ಮಾಹಿತಿ ನೀಡಿದ್ದಾರೆ.

“274 ನೋಟಿಸ್‌ಗಳಲ್ಲಿ 236 ನೋಟಿಸ್‌ಗಳು ವಸೂಲಾತಿ ಆದೇಶಗಳನ್ನು ಹೊಂದಿವೆ. ಅಲ್ಲದೇ 38 ಪ್ರಕರಣಗಳನ್ನು ಈಗಾಗಲೇ ತೆರವುಗೊಳಿಸಲಾಗಿದೆ” ಎಂದು ಯುಪಿ ಸರ್ಕಾರದ ವಕೀಲರು ತಿಳಿಸಿದ್ದಾರೆ.

ನ್ಯಾಯಾಂಗ ಅಧಿಕಾರಿಗಳನ್ನು ಕ್ಲೈಮ್ಸ್‌‌ ಟ್ರಿಬ್ಯೂನಲ್‌ಗಳಲ್ಲಿ ನೇಮಿಸಬೇಕು ಎಂದು ನ್ಯಾಯಪೀಠವು 2009 ಮತ್ತು 2018ರಲ್ಲಿ ಎರಡು ತೀರ್ಪುಗಳನ್ನು ನೀಡಿದೆ. ಆದರೆ ನೀವು ಹೆಚ್ಚುವರಿ ಜಿಲ್ಲಾ ಮ್ಯಾಜಿಸ್ಟ್ರೇಟ್‌ಗಳನ್ನು (ಎಡಿಎಂ) ನೇಮಿಸಿದ್ದೀರಿ ಎಂದು ಪೀಠ ಆಕ್ಷೇಪ ವ್ಯಕ್ತಪಡಿಸಿದೆ.

ನ್ಯಾಯಮೂರ್ತಿ ಸೂರ್ಯ ಕಾಂತ್ ಮಾತನಾಡಿ, “ಮೇಡಂ ಪ್ರಸಾದ್‌, ಇದು ಕೇವಲ ಸಲಹೆಯಾಗಿದೆ. 2019ರಲ್ಲಿನ ಆಂದೋಲನಕ್ಕೆ ಸಂಬಂಧಿಸಿದಂತೆ ಕಳುಹಿಸಲಾದ ನೋಟಿಸ್‌ಗಳಿಗೆ ಸಂಬಂಧಿಸಿದ ಮನವಿ ಇದಾಗಿದೆ. ಯುಪಿಯಂತಹ ದೊಡ್ಡ ರಾಜ್ಯದಲ್ಲಿ 236 ನೋಟಿಸ್‌ಗಳು ದೊಡ್ಡ ವಿಷಯವಲ್ಲ. ನೀವು ಆಲಿಸದಿದ್ದರೆ, ನಂತರದ ಪರಿಣಾಮಗಳನ್ನು ಎದುರಿಸಲು ಸಿದ್ಧರಾಗಿರಿ. ಸುಪ್ರೀಂ ಕೋರ್ಟ್‌‌ನ ತೀರ್ಪುಗಳನ್ನು ಹೇಗೆ ಅನುಸರಿಸಬೇಕು ಎಂಬುದನ್ನು ನಾವು ನಿಮಗೆ ಹೇಳುತ್ತೇವೆ” ಎಂದು ಪ್ರತಿಕ್ರಿಯಿಸಿದ್ದಾರೆ.

ನ್ಯಾಯಾಂಗ ಅಧಿಕಾರಿಯೇ ತೀರ್ಪು ನೀಡಬೇಕು ಎಂದು ನ್ಯಾಯಾಲಯ ಸೂಚಿಸಿರುವಾಗ ಎಡಿಎಂಗಳು ಏಕೆ ಕಲಾಪ ನಡೆಸುತ್ತಿದ್ದಾರೆ ಎಂದು ನ್ಯಾಯಮೂರ್ತಿ ಚಂದ್ರಚೂಡ್ ತೀಕ್ಷ್ಣವಾಗಿ ಪ್ರಶ್ನಿಸಿದ್ದಾರೆ.

ಕ್ಲೈಮ್ಸ್‌‌ ನ್ಯಾಯಮಂಡಳಿಗಳು 2011ರಲ್ಲಿ ನೀಡಿದ ಸೂಚನೆಯಂತೆ ಹೊರಡಿಸಲಾದ ಸರ್ಕಾರಿ ಆದೇಶಗಳನ್ನು ಉತ್ತರ ಪ್ರದೇಶ ಸರ್ಕಾರದ ವಕೀಲರು ಉಲ್ಲೇಖಿಸಿದರು. ಇದನ್ನು ಹೈಕೋರ್ಟ್ ತನ್ನ ನಂತರದ ಆದೇಶಗಳಲ್ಲಿ ಅನುಮೋದಿಸಿದೆ ಎಂದು ವಾದಿಸಿದರು.

ನ್ಯಾಯಮೂರ್ತಿ ಚಂದ್ರಚೂಡ್, “ನಾವು ಇತರ ಪ್ರಕ್ರಿಯೆಗಳಿಗೆ ಸಂಬಂಧಿಸಿಲ್ಲ. ಸಿಎಎ ಪ್ರತಿಭಟನೆಗಳ ಸಂದರ್ಭದಲ್ಲಿ ಡಿಸೆಂಬರ್ 2019ರಲ್ಲಿ ಕಳುಹಿಸಲಾದ ನೋಟಿಸ್‌ಗಳಿಗೆ ಮಾತ್ರ ನಾವು ಕಾಳಜಿ ವಹಿಸುತ್ತೇವೆ. ನಮ್ಮ ಆದೇಶಗಳನ್ನು ನೀವು ಬೈಪಾಸ್ ಮಾಡಲು ಸಾಧ್ಯವಿಲ್ಲ. ನ್ಯಾಯಾಂಗ ಅಧಿಕಾರಿಗಳನ್ನು ನೇಮಿಸಲು ನಾವು ಹೇಳಿರುವಾಗ ನೀವು ಎಡಿಎಂಗಳನ್ನು ಹೇಗೆ ನೇಮಿಸಬಹುದು. ಡಿಸೆಂಬರ್ 2019ರಲ್ಲಿ ಯಾವುದೇ ಪ್ರಕ್ರಿಯೆಗಳನ್ನು ನಡೆಸಲಾಗಿದ್ದರೂ ನ್ಯಾಯಾಲಯವು ನಿಗದಿಪಡಿಸಿದ ಕಾನೂನಿಗೆ ಪ್ರಕ್ರಿಯೆಯು ವಿರುದ್ಧವಾಗಿದೆ” ಎಂದು ತಿಳಿಸಿದ್ದಾರೆ.


ಇದನ್ನೂ ಓದಿರಿ: ಹಿಜಾಬ್‌ಗೆ ಬೆಂಬಲ; ರಾಜ್ಯ ಸರ್ಕಾರವನ್ನು ‘ಸರ್ವಾಧಿಕಾರಿ’ ಎಂದ ಎನ್‌ಸಿಪಿ ಸಂಸದೆ  ಸುಪ್ರಿಯಾ ಸುಲೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...