Homeಕರ್ನಾಟಕಪೆನ್‌ಡ್ರೈವ್‌ ಬಿಡುಗಡೆಯಲ್ಲಿ ಕುಮಾರಸ್ವಾಮಿ, ಬಿಜೆಪಿ ನಾಯಕರ ಕೈವಾಡ: ಡಿ.ಕೆ.ಸುರೇಶ್

ಪೆನ್‌ಡ್ರೈವ್‌ ಬಿಡುಗಡೆಯಲ್ಲಿ ಕುಮಾರಸ್ವಾಮಿ, ಬಿಜೆಪಿ ನಾಯಕರ ಕೈವಾಡ: ಡಿ.ಕೆ.ಸುರೇಶ್

- Advertisement -
- Advertisement -

ಪೆನ್ ಡ್ರೈವ್ ವಿಚಾರ ಎಲ್ಲರಿಗಿಂತ ಮೊದಲೇ ಕುಮಾರಸ್ವಾಮಿ ಹಾಗೂ ಬಿಜೆಪಿ ನಾಯಕರಿಗೆ ತಿಳಿದಿತ್ತು. ಈ ಪ್ರಕರಣದಿಂದ ನುಣುಚಿಕೊಳ್ಳಲು ಕಾಂಗ್ರೆಸ್ ಹಾಗೂ ಶಿವಕುಮಾರ್ ಅವರ ಮೇಲೆ ಆರೋಪ ಮಾಡುತ್ತಿದ್ದಾರೆ. ಪೆನ್‌ ಡ್ರೈವ್‌ ಬಿಡುಗಡೆಯಲ್ಲಿ ಮೈತ್ರಿ ಬಿಜೆಪಿ ನಾಯಕರು ಮತ್ತು ಕುಮಾರಸ್ವಾಮಿಯವರ ಕೈವಾಡ ಇದೆ ಎಂದು ಬೆಂಗಳೂರು ಗ್ರಾಮಾಂತರ ಸಂಸದ ಡಿ.ಕೆ.ಸುರೇಶ್ ಆರೋಪಿಸಿದ್ದಾರೆ.

ಪ್ರಜ್ವಲ್ ರೇವಣ್ಣ ಅವರ ಪೆನ್ ಡ್ರೈವ್ ಬಹಿರಂಗಗೊಳಿಸಿರುವುದು ಮಹಾನ್ ನಾಯಕ ಡಿ.ಕೆ. ಶಿವಕುಮಾರ್ ಎಂಬ ಕುಮಾರಸ್ವಾಮಿ ಅವರ ಆರೋಪದ ಬಗ್ಗೆ ಸದಾಶಿವನಗರ ನಿವಾಸದಲ್ಲಿ ಪ್ರತಿಕ್ರಿಯಿಸಿದ್ದ ಡಿಕೆ ಸುರೇಶ್‌, ಮಾಜಿ ಸಿಎಂ ಕುಮಾರಸ್ವಾಮಿ ಅವರಿಗೆ ಶಿವಕುಮಾರ್ ಅವರನ್ನು ಸ್ಮರಿಸದಿದ್ದರೆ ತಿಂದ ಅನ್ನ ಜೀರ್ಣವಾಗುವುದಿಲ್ಲ, ನಿದ್ದೆ ಬರುವುದಿಲ್ಲ. ನಾವು ಪೆನ್ ಡ್ರೈವ್ ಬಿಡುಗಡೆ ಮಾಡುವುದಾಗಿದ್ದರೆ ಚುನಾವಣೆಗೆ ವಾರ ಅಥವಾ ಹತ್ತು ದಿನ ಮುಂಚಿತವಾಗಿಯೇ ಬಿಡುಗಡೆ ಮಾಡಬಹುದಾಗಿತ್ತಲ್ಲವೇ? ಈ ವಿಚಾರದಲ್ಲಿ ಎಲ್ಲರಿಗಿಂತ ಮುಂಚಿತವಾಗಿ ಕುಮಾರಸ್ವಾಮಿ ಹಾಗೂ ಬಿಜೆಪಿ ನಾಯಕರಿಗೆ ಗೊತ್ತಿತ್ತು. ಅವರು ಈಗ ಕಾಂಗ್ರೆಸ್ ಮೇಲೆ ಆರೋಪ ಮಾಡಿ ನುಣುಚಿಕೊಳ್ಳುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ಹೇಳಿದ್ದಾರೆ.

ಅವರು ತಮ್ಮ ಹುಳುಕು ಮುಚ್ಚಿಕೊಳ್ಳಲು ದಿನಾ ಒಂದೊಂದು ಹೇಳಿಕೆ ನೀಡುತ್ತಲೇ ಇರುತ್ತಾರೆ. ಅನ್ಯಾಯಕ್ಕೆ ಒಳಗಾಗಿರುವವರ ಬಗ್ಗೆ ನಾವು ಚಿಂತನೆ ಮಾಡಬೇಕು. ಕುಮಾರಸ್ವಾಮಿ ಅವರು ಯಾವ ವಿಚಾರದಲ್ಲಿ ಶಿವಕುಮಾರ್ ಅವರ ವಿರುದ್ಧ ಟೀಕೆ ಮಾಡದೆ ಇದ್ದಾರೆ ಹೇಳಿ? ಎಲ್ಲಿ ಏನೇ ಆದರೂ ಅದಕ್ಕೆ ಶಿವಕುಮಾರ್ ಅವರೇ ಕಾರಣ ಎನ್ನುತ್ತಾರೆ. ಶಿವಕುಮಾರ್ ಅವರ ವಿರುದ್ಧ ಆರೋಪ ಮಾಡದೆ ಇರಲು ಅವರಿಗೆ ಆಗುವುದಿಲ್ಲ ಎಂದು ಹೇಳಿದ್ದಾರೆ.

ದೇವರಾಜೇಗೌಡ ತಮ್ಮ ಉಳಿವಿಗಾಗಿ ಡಿ.ಕೆ. ಶಿವಕುಮಾರ್ ಅವರ ಹೆಸರು ಬಳಸಿಕೊಳ್ಳುತ್ತಿದ್ದಾರೆ. ಶಿವಕುಮಾರ್ ಅವರ ಬಳಿ ಪೆನ್ ಡ್ರೈವ್ ಇದ್ದಿದ್ದರೆ ಇದಕ್ಕೆ ಮುಂಚಿತವಾಗಿ ರಿಲೀಸ್ ಮಾಡಬಹುದಿತ್ತಲ್ಲವೇ? ಇದು ಬಿಡುಗಡೆ ಆಗಿರುವುದು ಹಾಸನ ಜಿಲ್ಲೆಯಲ್ಲಿ, ಹಾಸನ ಜಿಲ್ಲೆಯ ನಾಯಕರ ಕೈವಾಡ ಇದರಲ್ಲಿದೆ. ಅವರ ಮೈತ್ರಿ ನಾಯಕರು ಹಾಗೂ ಕುಮಾರಸ್ವಾಮಿ ಅವರ ಕೈವಾಡವಿದೆ. ಕುಮಾರಸ್ವಾಮಿ ಅವರಿಗೆ ಈ ಬಗ್ಗೆ ಮುಂಚಿತವಾಗಿಯೇ ಗೊತ್ತಿತ್ತು, ಇನ್ನು ಈ ವಿಡಿಯೋಗಳು ನಾಲ್ಕು ವರ್ಷಗಳ ಹಳೆಯದು ಎಂದು ರೇವಣ್ಣನವರೇ ಒಪ್ಪಿಕೊಂಡಿದ್ದಾರೆ. ಅವರ ಕುಟುಂಬದವರೇ ಈ ವಿಚಾರವಾಗಿ ಒಬ್ಬೊಬ್ಬರು ಒಂದೊಂದು ಹೇಳಿಕೆ ನೀಡಿದ್ದು, ಬೇರೆಯವರ ಮೇಲೆ ಯಾಕೆ ಆರೋಪ ಮಾಡಬೇಕು ಎಂದು ಕೇಳಿದ್ದಾರೆ.

ನನ್ನ ಬಳಿ ಪೆನ್ ಡ್ರೈವ್ ಬರುವ ಮುನ್ನ ಡಿ.ಕೆ.ಶಿವಕುಮಾರ್ ಅವರ ಬಳಿ ಈ ಪೆನ್ ಡ್ರೈವ್ ಹೋಗಿತ್ತು ಎಂಬ ದೇವರಾಜೇಗೌಡರ ಹೇಳಿಕೆ ಬಗ್ಗೆ ಕೇಳಿದಾಗ, ಈ ಬಗ್ಗೆ ನನಗೆ ಮಾಹಿತಿ ಇಲ್ಲ. ಹಾಸನ ಜಿಲ್ಲೆಯಲ್ಲಿ ಕೇವಲ ಗುಸು ಗುಸು ಇತ್ತು. ಅವರು ಕೋರ್ಟ್‌ನಲ್ಲಿ ತಡೆಯಾಜ್ಞೆ ಕೂಡ ತಂದಿದ್ದರು. ಪೆನ್ ಡ್ರೈವ್ ಹರಿದಾಡಿದ ನಂತರ ಈಗ  ಈ ವಿಚಾರ ಚರ್ಚೆಯಾಗುತ್ತಿದೆ ಎಂದು ಹೇಳಿದ್ದಾರೆ.

ಪ್ರಕರಣದ ಪಾರದರ್ಶಕ ತನಿಖೆ ಸರ್ಕಾರದ ಕೆಲಸ, ಈಗಾಗಲೇ ಎಸ್ಐಟಿ ತನಿಖೆಗೆ ಆದೇಶಿಸಲಾಗಿದೆ. ಇದರಲ್ಲಿ ನಮ್ಮ ಮಾತೇನಿದೆ. ಅಲ್ಲಿರುವ ಮಹಿಳೆಯರಿಗೆ ರಕ್ಷಣೆ ನೀಡಬೇಕು ಎನ್ನುವುದಷ್ಟೇ ನನ್ನ ಒತ್ತಾಯ ಎಂದು ತಿಳಿಸಿದ್ದಾರೆ.

ವಿಚಾರಣೆಗೆ ಹಾಜರಾಗಲು ಕಾಲಾವಕಾಶ ಕೋರಿದ ಪ್ರಜ್ವಲ್‌ ರೇವಣ್ಣ

ಲೈಂಗಿಕ ದೌರ್ಜನ್ಯದ ದೂರಿನ ಹಿನ್ನೆಲೆಯಲ್ಲಿ ವಿಶೇಷ ತನಿಖಾ ತಂಡದ ಮುಂದೆ ಹಾಜರಾಗಲು ಒಂದು ವಾರದ ಕಾಲಾವಕಾಶ ನೀಡುವಂತೆ ಹಾಸನದ NDA ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಕೋರಿದ್ದಾರೆ. ವಿಚಾರಣೆಗೆ ಹಾಜರಾಗಲು ನಾನು ಬೆಂಗಳೂರಿನಲ್ಲಿ‌ ಇಲ್ಲದ ಕಾರಣ, ಕಾಲಾವಕಾಶ ಕೋರಿ ನಾನು ನನ್ನ ವಕೀಲರ ಮೂಲಕ ಮನವಿ ಸಲ್ಲಿಸಿದ್ದೇನೆ ಎಂದು ಪ್ರಜ್ವಲ್ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.

ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಪಟ್ಟಂತೆ ತನಿಖೆಗೆ ಹಾಜರಾಗಲು ಆರೋಪಿಗಳಾದ ಹೆಚ್‌.ಡಿ ರೇವಣ್ಣ ಹಾಗೂ ಪ್ರಜ್ವಲ್ ರೇವಣ್ಣಗೆ ಎಸ್ಐಟಿ ಅಧಿಕಾರಿಗಳು ಈ ಮೊದಲು ನೊಟೀಸ್‌ ನೀಡಿದ್ದರು. ನೋಟಿಸ್ ತಲುಪಿದ 24 ಗಂಟೆಯೊಳಗೆ ವಿಚಾರಣೆಗೆ ಹಾಜರಾಗಬೇಕೆಂದು ಎಸ್‌ಐಟಿ ಸೂಚಿಸಿತ್ತು.

ಇದನ್ನು ಓದಿ: ಬಿಜೆಪಿ ಭದ್ರಕೋಟೆ ಮಥುರಾದಲ್ಲಿ ಮುಸ್ಲಿಮರಿಗೆ ಮತದಾನ ನಿರಾಕರಣೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉಪಚುನಾವಣೆ : ಬಿಹಾರದ ಬಂಕಿಪುರದಲ್ಲಿ ಪ್ರಶಾಂತ್ ಕಿಶೋರ್‌ಗೆ ಐತಿಹಾಸಿಕ ಗೆಲುವು; ಇನ್ನೆರಡು ಕ್ಷೇತ್ರಗಳು ಕಾಂಗ್ರೆಸ್-ಬಿಜೆಪಿ ಪಾಲು

ಬಿಹಾರದ ಬಂಕಿಪುರ, ಗುಜರಾತ್‌ನ ಮಂಜಲ್‌ಪುರ ಮತ್ತು ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರಗಳಿಗೆ ಜುಲೈ 30ರಂದು ನಡೆದ ಉಪಚುನಾವಣೆಯ ಫಲಿತಾಂಶ ಸೋಮವಾರ (ಆ.3) ಹೊರಬಿದ್ದಿದ್ದಿದೆ. ಬಿಜೆಪಿಯ ಭದ್ರಕೋಟೆ ಎನಿಸಿಕೊಂಡಿದ್ದ, ಕಳೆದ 31 ವರ್ಷಗಳಿಂದ ಬಿಜೆಪಿಯೇ...

‘ಪಂಕ್ಚರ್-ತಲಾ ಬನಾನೆ ವಾಲೆಗಳೇ ಹೆಚ್ಚು’: ನೀಟ್ ಅಕ್ರಮಗಳ ವಿರುದ್ಧ ಪ್ರತಿಭಟಿಸಿದವರ ವಿರುದ್ಧ ನಾಲಿಗೆ ಹರಿಬಿಟ್ಟ ಬಿಜೆಪಿ ನಾಯಕ ರಮೇಶ್ ಬಿಧು

ದೆಹಲಿಯ ಜಂತರ್ ಮಂತರ್‌ನಲ್ಲಿ ‘ನೀಟ್’ (NEET) ಪರೀಕ್ಷೆಯ ಅಕ್ರಮಗಳ ವಿರುದ್ಧ ಧ್ವನಿಯೆತ್ತಿದ ಯುವಜನತೆ ಮತ್ತು ವಿದ್ಯಾರ್ಥಿಗಳ ಹೋರಾಟವನ್ನು ದಮನ ಮಾಡಲು ಯತ್ನಿಸುತ್ತಿರುವ ಬಿಜೆಪಿ, ಈಗ ಅವರ ವಿರುದ್ಧವೇ ಅತ್ಯಂತ ಕೀಳುಮಟ್ಟದ ಇಸ್ಲಾಮೋಫೋಬಿಕ್ ಮತ್ತು...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಖುಲಾಸೆ : ಇಡೀ ವ್ಯವಸ್ಥೆಯೇ ಬ್ರಿಜ್ ಭೂಷಣ್‌ರನ್ನು ರಕ್ಷಿಸಿತು ಎಂದ ವಿನೇಶ್ ಫೋಗಟ್; ಮೇಲ್ಮನವಿ ಸಲ್ಲಿಸಲು ಮಹಿಳಾ ಕುಸ್ತಿಪಟುಗಳ ನಿರ್ಧಾರ

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿದ್ದ ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಹಾಗೂ ಬಿಜೆಪಿ ಮಾಜಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರನ್ನು ದೆಹಲಿಯ ರೋಸ್...

ಕರ್ನಾಟಕದಲ್ಲಿ SIR ಬಿಹಾರ-ಬಂಗಾಳಕ್ಕಿಂತ ಭೀಕರ: ಆಗಸ್ಟ್ 4 ರಂದು ಜನಪರ ಸಂಘಟನೆಗಳಿಂದ ಮಹತ್ವದ ಮಾಧ್ಯಮಗೋಷ್ಠಿ

ಬೆಂಗಳೂರು: ಕರ್ನಾಟಕದಲ್ಲಿ ನಡೆಯುತ್ತಿರುವ ಎಸ್‌ಐಆರ್ (SIR) ಪ್ರಕ್ರಿಯೆಯು ಬಿಹಾರ ಮತ್ತು ಪಶ್ಚಿಮ ಬಂಗಾಳ ರಾಜ್ಯಗಳಿಗಿಂತಲೂ ಅತ್ಯಂತ ಭೀಕರ ರೂಪ ಪಡೆದುಕೊಳ್ಳುತ್ತಿದೆ ಎಂದು 'SIR ವಿರೋಧಿ ಜಾತ್ಯತೀತ ಪಕ್ಷಗಳು ಮತ್ತು ಜನಪರ ಸಂಘಟನೆಗಳ ಒಕ್ಕೂಟ'...

“ನೈರ್ಮಲ್ಯ ಕಾರ್ಮಿಕರು ಕೆಲಸ ಬಿಡಲು ಸಾಧ್ಯವಿಲ್ಲ”: ದೇಶಾದ್ಯಂತ ಪ್ರತಿಭಟನೆಗೆ DASAM ಬೆಂಬಲ, ಉದ್ಯೋಗ ಖಾಯಂಗೊಳಿಸಲು ತೀವ್ರ ಒತ್ತಾಯ

ನವದೆಹಲಿ: ಉದ್ಯೋಗ ಕ್ರಮಬದ್ಧಗೊಳಿಸುವಿಕೆ (ಖಾಯಂಗೊಳಿಸುವುದು), ನ್ಯಾಯಯುತ ವೇತನ, ಸಾಮಾಜಿಕ ಭದ್ರತೆ, ಸುರಕ್ಷಿತ ಕೆಲಸದ ವಾತಾವರಣ ಮತ್ತು ಕೆಲಸದ ಸ್ಥಳದಲ್ಲಿ ಮಾನವ ಘನತೆಯನ್ನು ಎತ್ತಿಹಿಡಿಯುವಂತೆ ಒತ್ತಾಯಿಸಿ ದೇಶದ ನಾನಾ ಭಾಗಗಳಲ್ಲಿ ನೈರ್ಮಲ್ಯ ಕಾರ್ಮಿಕರು ನಡೆಸುತ್ತಿರುವ...

ದ್ವೇಷ ಭಾಷಣ ಪ್ರಕರಣ: ಬಿಜೆಪಿ ನಾಯಕರಾದ ಅನುರಾಗ್‌ ಠಾಕೂರ್‌, ಪರ್ವೇಶ್‌ ವರ್ಮಾಗೆ ಕ್ಲೀನ್ ಚೀಟ್: ಪುನರ್ ಪರಿಶೀಲನಾ ಅರ್ಜಿ ವಜಾಗೊಳಿಸಿದ ಸುಪ್ರೀಂ

ನವದೆಹಲಿ: 2020ರ ದೆಹಲಿಯಲ್ಲಿ ನಡೆದ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ವಿರೋಧಿ ಪ್ರತಿಭಟನೆಗಳ ಸಂದರ್ಭದಲ್ಲಿ ಉದ್ರೇಕಕಾರಿ ಹಾಗೂ ದ್ವೇಷಪೂರಿತ ಭಾಷಣ ಮಾಡಿದ ಆರೋಪ ಹೊತ್ತಿದ್ದ ಬಿಜೆಪಿ ನಾಯಕರಾದ ಅನುರಾಗ್ ಠಾಕೂರ್ ಮತ್ತು ಪರ್ವೇಶ್‌...

ಕರ್ನಾಟಕ ಸಚಿವ ಸಂಪುಟ ವಿಸ್ತರಣೆ: ನೂತನ ಸಚಿವರ ಪಟ್ಟಿಗೆ ವರಿಷ್ಠರ ಅನುಮೋದನೆ: ಇಂದು ಸಂಜೆ 4:05 ಕ್ಕೆ ಪ್ರಮಾಣ ವಚನ

ಬಹುನಿರೀಕ್ಷಿತ ಕರ್ನಾಟಕ ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಕೊನೆಗೂ ಮುಹೂರ್ತ ನಿಗದಿಯಾಗಿದ್ದು, ಕಾಂಗ್ರೆಸ್ ಹೈಕಮಾಂಡ್ ನೂತನ ಸಚಿವರ ಪಟ್ಟಿಗೆ ಅಧಿಕೃತ ಅನುಮೋದನೆ ನೀಡಿದೆ. ಇದರೊಂದಿಗೆ ಕಳೆದ ಕೆಲವು ದಿನಗಳಿಂದ ರಾಜ್ಯ ರಾಜಕಾರಣದಲ್ಲಿ ತೀವ್ರ...

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ಪ್ರಕರಣ : WFI ಮಾಜಿ ಅಧ್ಯಕ್ಷ ಬ್ರಿಜ್ ಭೂಷಣ್‌ ಸಿಂಗ್‌ ಖುಲಾಸೆ

ದೆಹಲಿ ನ್ಯಾಯಾಲಯವು ಸೋಮವಾರ (ಆ.3) ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಮತ್ತು ಬಿಜೆಪಿ ನಾಯಕ ಬ್ರಿಜ್ ಭೂಷಣ್ ಸಿಂಗ್ ಅವರನ್ನು ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಪ್ರಕರಣದಿಂದ...

ಪ್ರಶ್ನೆ ಪತ್ರಿಕೆ ಸೋರಿಕೆ : ಫಾಸ್ಟ್‌ ಟ್ರ್ಯಾಕ್ ಕೋರ್ಟ್ ನ್ಯಾಯಾಧೀಶೆ ಒಂದೇ ವಾರದಲ್ಲಿ ವರ್ಗಾವಣೆ

ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಗಳ ವಿಚಾರಣೆಗಾಗಿ ಸ್ಥಾಪಿಸಲಾದ ತ್ವರಿತಗತಿ (ಫಾಸ್ಟ್‌ ಟ್ರ್ಯಾಕ್) ನ್ಯಾಯಾಲಯದ ನೇತೃತ್ವ ವಹಿಸಲು ನೇಮಕಗೊಂಡ ಕೇವಲ ಒಂದು ವಾರದ ನಂತರ, ದೆಹಲಿ ಹೈಕೋರ್ಟ್ ಶನಿವಾರ (ಆಗಸ್ಟ್ 1) ವಿಶೇಷ ನ್ಯಾಯಾಧೀಶರಾದ...

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...