Homeಕರೋನಾ ತಲ್ಲಣಕೋವಿಡ್ ಉಲ್ಬಣಕ್ಕೆ ದೇಶದ ಎಲ್ಲಾ ವರ್ಗದ ಜನರು ಮತ್ತು ಸರ್ಕಾರದ ನಿರ್ಲಕ್ಷ್ಯ ಕಾರಣ: ಮೋಹನ್ ಭಾಗವತ್

ಕೋವಿಡ್ ಉಲ್ಬಣಕ್ಕೆ ದೇಶದ ಎಲ್ಲಾ ವರ್ಗದ ಜನರು ಮತ್ತು ಸರ್ಕಾರದ ನಿರ್ಲಕ್ಷ್ಯ ಕಾರಣ: ಮೋಹನ್ ಭಾಗವತ್

- Advertisement -
- Advertisement -

ಮೊದಲ ಕೋವಿಡ್ ಅಲೆಯನ್ನು ದೇಶದ ಎಲ್ಲಾ ವರ್ಗದ ಜನರು ಮತ್ತು ಸರ್ಕಾರ ನಿರ್ಲಕ್ಷಿಸಿದ್ದರಿಂದಲೇ ನಾವು ಈ ವೈದ್ಯಕೀಯ ತುರ್ತುಪರಿಸ್ಥಿತಿಯನ್ನು ಎದುರಿಸುತ್ತಿದ್ದೇವೆ ಎಂದು ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್ ಭಾಗವಾತ್ ಪ್ರತಿಪಾದಿಸಿದ್ದಾರೆ.

ಪಾಸಿಟಿವಿಟಿ ಅನ್‌ಲಿಮಿಟೆಡ್ (ಕೋವಿಡ್ ಕಷ್ಟಕಾಲದಲ್ಲಿ ಸಕರಾತ್ಮತೆಯನ್ನು ಹರಡಬೇಕು) ಎನ್ನುವ ಪ್ರಚಾರಾಂದೋಲನದ ಸರಣಿ ಉಪನ್ಯಾಸ ಮಾಲಿಕೆಯಲ್ಲಿ ಮಾತನಾಡಿದ ಅವರು, “ಕೋವಿಡ್ ಮೊದಲ ಅಲೆಯ ಸಂದರ್ಭದಲ್ಲಿ ವೈದ್ಯರುಗಳು ನಮಗೆ ಎಚ್ಚರಿಕೆ ನೀಡಿದ್ದರು. ಆದರೆ ಸರ್ಕಾರ, ಆಡಳಿತ ಅಥವಾ ಸಾರ್ವಜನಿಕರು ಸುರಕ್ಷತಾ ಕ್ರಮಗಳನ್ನು ಕೈಚೆಲ್ಲಿದುದರ ಪರಿಣಾಮವನ್ನು ನಾವಿಂದು ಅನುಭವಿಸುತ್ತಿದ್ದೇವೆ” ಎಂದರು.

ಈಗ ಮೂರನೇ ಅಲೆ ಬರಲಿದೆ ಎನ್ನಲಾಗಿದೆ. ಇದಕ್ಕೆ ನಾವು ಹೆದರಿ ಕೂರಬೇಕೆ ಅಥವಾ ಹೋರಾಡಿ ಅದರ ವಿರುದ್ಧ ಗೆಲುವು ಸಾಧಿಸಬೇಕೆ? ಈಗಿನ ಪರಿಸ್ಥಿತಿಯಿಂದ ನಾವು ಕಲಿತು ಭವಿಷ್ಯದ ಹೋರಾಟಕ್ಕೆ ಸಜ್ಜಾಗಬೇಕು. ಸದ್ಯ ಭಾರತ ಎದುರಿಸುತ್ತಿರುವ ಆಕ್ಸಿಜನ್, ಔಷಧ, ಬೆಡ್ ಕೊರತೆಗಳ ಸಮಸ್ಯೆಯನ್ನು ಕಡೆಗಣಿಸಿದ ಅವರು, ಇಂದಿನ ತಪ್ಪುಗಳಿಂದ ಪಾಠ ಕಲಿತು ಮುಂದಿನ ಮೂರನೇ ಅಲೆಗೆ ಆತ್ಮವಿಶ್ವಾಸದಿಂದ ಸಜ್ಜಾಗಬೇಕು ಎಂದರು.

“ಬದುಕು ಮತ್ತು ಸಾವಿನ ಚಕ್ರವು ಮುಂದುವರಿಯುತ್ತದೆ… ಈ ವಿಷಯಗಳು ನಮ್ಮನ್ನು ಹೆದರಿಸಲು ಸಾಧ್ಯವಿಲ್ಲ. ಈ ಸಂದರ್ಭಗಳೇ ಭವಿಷ್ಯಕ್ಕಾಗಿ ನಮಗೆ ತರಬೇತಿ ನೀಡುತ್ತವೆ. ಯಶಸ್ಸು ಅಂತಿಮವಲ್ಲ. ವೈಫಲ್ಯ ಮಾರಕವಲ್ಲ. ಮುಂದುವರಿಯುವ ಧೈರ್ಯ ಮಾತ್ರ ಮುಖ್ಯವಾಗಿದೆ” ಎಂದು ಅವರು ಹೇಳಿದರು.

ಜನ ಸಾಯುತ್ತಿರುವುದು ಪಾಸಿಟಿವಿಟಿಯೇ?

ಕೋವಿಡ್ ಉಲ್ಬಣಕ್ಕೆ ಮೋದಿ ಸರ್ಕಾರದ ನಿರ್ಲಕ್ಷ್ಯ, ಅದಕ್ಷತೆ ಮತ್ತು ಅಹಂಕಾರಗಳೆ ನೇರ ಕಾರಣ. ಸರ್ಕಾರ ತನ್ನ ವೈಫಲ್ಯಗಳನ್ನು ಮುಚ್ಚಿಕೊಳ್ಳಲು ಪಾಸಿಟಿವಿಟಿ ಹರಡಿ ಎಂಬ ಕಾರ್ಯಕ್ರಮಗಳನ್ನು ಮಾಡುತ್ತಿದೆ. ಜನ ಸಾಯುತ್ತಿರುವುದು ನಿಮಗೆ ಪಾಸಿಟಿವಿಯೇ ಎಂದು ವಿರೋಧ ಪಕ್ಷಗಳು ಸೇರಿದಂತೆ ಹಲವರು ಕಿಡಿಕಾರಿದ್ದಾರೆ.


ಇದನ್ನೂ ಓದಿ: ಕಾಶ್ಮೀರದಾಗಿನ ಅಲೌಕಿಕ ಚಲುವೆಯರು ಎಲ್ಲೇ, ಈ ಲೌಕಿಕದ ಜುಜುಬಿ ಸರಕಾರೀ ಆಸ್ಪತ್ರೆ ಬೆಡ್, ಆಕ್ಸಿಜನ್, ಇಂಜೆಕ್ಷನ್ ಎಲ್ಲೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

LEAVE A REPLY

Please enter your comment!
Please enter your name here

- Advertisment -

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...