HomeUncategorizedಉನ್ನಾವ್ ಅತ್ಯಾಚಾರ ಆರೋಪಿ ಶಾಸಕನೂರಲ್ಲಿ ಸೆಂಗರ್ ಕುಟುಂಬದ್ದೇ ಪಾಳೇಗಾರಿಕೆ: ಇಲ್ಲಿದೆ ಗ್ರೌಂಡ್ ರಿಪೋರ್ಟ್

ಉನ್ನಾವ್ ಅತ್ಯಾಚಾರ ಆರೋಪಿ ಶಾಸಕನೂರಲ್ಲಿ ಸೆಂಗರ್ ಕುಟುಂಬದ್ದೇ ಪಾಳೇಗಾರಿಕೆ: ಇಲ್ಲಿದೆ ಗ್ರೌಂಡ್ ರಿಪೋರ್ಟ್

- Advertisement -
- Advertisement -

ಅತ್ಯಾಚಾರ ಮತ್ತು ಕೊಲೆಯತ್ನ ಆರೋಪ ಎದುರಿಸುತ್ತಿರುವ ಬಿಜೆಪಿಯ ಉಚ್ಛಾಟಿತ ಶಾಸಕ ಕುಲದೀಪ್ ಸೆಂಗರ್ ನ ಉನ್ನಾವ್ ಗ್ರಾಮಕ್ಕೆ ‘ದಿ ಕ್ವಿಂಟ್’ ತಂಡ ಭೇಟಿ ನೀಡಿ ಅಲ್ಲಿನ ಭಯಭೀತ ವಾತಾವರಣವನ್ನು ತೆರೆದಿಟ್ಟಿದೆ.

‘ಸೆಂಗರ್ ಗಳ ಹುಕುಂ ಇಲ್ಲದೇ ಇಲ್ಲಿ ಹುಲ್ಲುಕಡ್ಡಿ ಕೂಡ ಚಲಿಸುವಂತಿಲ್ಲ. ಅವರ ಒಪ್ಪಿಗೆಯಿಲ್ಲದೇ ತುಂಡುಭೂಮಿ ಮಾರಂಗಿಲ್ಲ, ಕೊಳ್ಳಂಗಿಲ್ಲ….’ – ಎನ್ನುತ್ತಾನೆ ಗ್ರಾಮದ ಯುವಕ ಅಜೀತ್.

ಇದು ಉನ್ನಾವ್. ಅತ್ಯಾಚಾರ ಮತ್ತು ಕೊಲೆಯತ್ನದ ಆರೋಪಿ ಶಾಸಕ ಕುಲದೀಪ್ ಸೆಂಗರ್ ನ ಗ್ರಾಮ. ಇಲ್ಲಿ ಶಾಸಕ ಮತ್ತು ಕುಟುಂಬದ ವಿರುದ್ಧ ಯಾರೂ ಮಾತಾಡುವಂತಿಲ್ಲ. ಈ ಕುಟುಂಬದ ನಜರ್ ಇಲ್ಲದೇ ಏನೂ ನಡೆಯುವಂತಿಲ್ಲ. ಒಂಥರಾ ಹಳೇ ಸಿನಿಮಾಗಳಲ್ಲಿ ಗೌಡರ ದರ್ಪ, ಪಾಳೇಗಾರಿಕೆಯಡಿ ನಲುಗುವ ಊರಿನಂತಿದೆ ಉನ್ನಾವ್.

ಸತತ ಸಾರ್ವಜನಿಕ ಒತ್ತಾಯ ಮತ್ತು ಒತ್ತಡಗಳ ಪರಿಣಾಮವಾಗಿ ಈಗ ಬಿಜೆಪಿ ಕುಲದೀಪ್ ಸೆಂಗರ್ ನನ್ನು ಪಕ್ಷದಿಂದ ಉಚ್ಛಾಟಿಸಿದೆ. ಅತ್ಯಾಚಾರ ಆರೋಪಕ್ಕೆ ಸಿಕ್ಕ 14 ತಿಂಗಳ ಬಳಿಕ ಬಿಜೆಪಿ ಈ ಕ್ರಮಕ್ಕೆ ಮುಂದಾಗಿದೆ. ಈ ಶಾಸಕರ ಉನ್ನಾವ್ 30 ಸಾವಿರದಷ್ಟು ಜನಸಂಖ್ಯೆ ಹೊಂದಿರುವ ದೊಡ್ಡ ಗ್ರಾಮವಾಗಿದ್ದು ಇಲ್ಲಿ ಯಾರೂ ಶಾಸಕರಿಗೆ ಅಹಿತ ಅನಿಸುವುದನ್ನು ಮಾತಾಡಲು ಒಲ್ಲರು, ಶಾಸಕರ ನಜರ್ ಗೆ ಬೀಳದಂತೆ ಬದುಕಲು ಯತ್ನಿಸುವವರು.

60 ವರ್ಷದಿಂದ ಸೆಂಗರ್ ಕುಟುಂಬದ್ದೇ ರಾಜಕೀಯ ಪಾರುಪತ್ಯ!

ಶಾಸಕ ಸೆಂಗರ್ ಅಜ್ಜ (ತಾಯಿಯ ತಂದೆ) 37 ವರ್ಷಗಳವರೆಗೆ ಗ್ರಾಮದ ಮುಖ್ಯಸ್ಥನಾಗಿದ್ದ. ನಂತರ ಕುಲದೀಪ್ ರಾಜಕೀಯ ಶುರು ಮಾಡಿದ. ಈಗ 4ನೇ ಬಾರಿ ಶಾಸಕನಾಗಿ ಆಯ್ಕೆಯಾಗಿದ್ದಾನೆ. ಸೆಂಗರ್ ತಾಯಿ ಎರಡು ಸಲ ಗ್ರಾಮ್ ಪ್ರಧಾನ್ ಆಗಿದ್ದರೆ, ಸಂಗರ್ ಸೊಸೆ, ಸಹೋದರನ ಪತ್ನಿ-ಹೀಗೆ ಗ್ರಾಮ್ ಪ್ರಧಾನ್ ಅಧಿಕಾರ ಅವರ ಕುಟುಂಬದ ಬಳಿಯೇ ಇದೆ ಎಂದು ಅಲ್ಲಿನ ಕೆಲವರು ಹೇಳುವಾಗ, ತಮ್ಮನ್ನು ಯಾರೂ ಗಮನಿಸುತ್ತಿಲ್ಲ ಎಂಬುದನ್ನು ಖಚಿತ ಮಾಡಿಕೊಳ್ಳುತ್ತಾರೆ.

ಆರಂಭದಲ್ಲಿ ಕಾಂಗ್ರೆಸ್‍ನಲ್ಲಿದ್ದ ಕುಲದೀಪ್ ಪಾರ್ಟಿಗಳನ್ನು ಬದಲಿಸುತ್ತಲೇ ಬಂದು ಈಗ ಬಿಜೆಪಿಯ ಪ್ರಭಾವಿ ಶಾಸಕನೂ, ಮುಖ್ಯಮಂತ್ರಿ ಯೋಗಿಯವರಿಗೆ ಆಪ್ತನೂ ಆಗಿದ್ದಾನೆ. ಅಕ್ರಮ ಕಲ್ಲು ಗಣಿಗಾರಿಕೆಯಿಂದ ಲೂಟಿ ಮಾಡುತ್ತಿರುವ ಈ ಕುಟುಂಬ ಪೊಲೀಸ್ ಅಧಿಕಾರಿಗಳ ಮೇಲೆಯೇ ದಾಳಿಗಳನ್ನು ಮಾಡುತ್ತ ಬಂದಿದೆ. 2004ರಲ್ಲಿ ಕುಲದೀಪ್ ಸೆಂಗರ್ ಸಹೋದರ ಅತುಲ್ ಜಿಲ್ಲಾ ಉಪ ಪೊಲೀಸ್ ವರಿಷ್ಠಾಧಿಕಾರಿ ರಾಮಲಾಲ್ ವರ್ಮಾ ಅವರ ಹೊಟ್ಟೆಗೆ ಗುಂಡು ಹೊಡೆದಿದ್ದ. ಈ ಕುಟುಂಬದ ಒತ್ತಡಕ್ಕೆ ಮಣಿದು ರಾಮಲಾಲ್ ವರ್ಮಾರೇ ದೂರು ಹಿಂಪಡೆಯಬೇಕಾಗಿತು.

ಪೊಲೀಸ್ ಅಧಿಕಾರಿಗಳ ಮೇಲೆಯೇ ಏರಿ ಹೋಗುವ ಈ ಕುಟುಂಬ ಸಾಮಾನ್ಯ ಜನರನ್ನು ಅದೆಷ್ಟು ಭಯಭೀತಿಯಲ್ಲಿ ಇಟ್ಟಿರಬಹುದು ಎಂದು ಊಹಿಸಿ. ಈ ಭೇಟಿಯ ವೇಳೆ ನಮ್ಮ ತಂಡಕ್ಕೆ ಅದರ ದರ್ಶನವೂ ಆಯಿತು. ‘ಪರಿಸ್ಥಿತಿ ಹೀಗಿರುವಾಗ ಅತ್ಯಾಚಾರ ಸಂತ್ರಸ್ತೆಯ ಕುಟುಂಬಕ್ಕೆ ಎಂತಹ ಹಿಂಸೆ ಕೊಟ್ಟಿರಬಹುದು ಊಹಿಸಿ’ ಎಂದ ಯುವಕ ಅಜಿತ್. (ಹೆಸರು ಬದಲಿಸಿದೆ).

2018ರಲ್ಲಿ ಇದೇ ಅತುಲ್ ಸೆಂಗರ್ ಅತ್ಯಾಚಾರ ಸಂತ್ರಸ್ತೆಯ ತಂದೆಯನ್ನು ಮರಕ್ಕೆ ಕಟ್ಟಿ ವಿಪರೀತ ಹಡೆದಿದ್ದ ಎಂದು ಹೆಸರು ಹೇಳಲು ಇಚ್ಛಿಸದ ಜನ ಹೇಳುತ್ತಾರೆ. ಆಗ ಬಹುಶಃ ಒಳಗಾಯಗಳಾಗಿದ್ದವು ಎನಿಸುತ್ತದೆ. ಮುಂದೆ ಐದೇ ದಿನದಲ್ಲಿ ಆಕೆಯ ತಂದೆ ಪೊಲೀಸ್ ಲಾಕಪ್ಪಿನಲ್ಲಿ ಮೃತಪಟ್ಟರು. ಪೊಲೀಸ್ ಸ್ಟೇಷನ್ನಿನಲ್ಲೂ ಅತುಲ್ ಒತ್ತಡ ಹೇರಿ ಮತ್ತೆ ದೌರ್ಜನ್ಯ ನಡೆಸಿದ್ದಾನೆ ಎಂಬ ಆರೋಪವೂ ಇದೆ. ಈ ಕುರಿತು ದೂರು ದಾಖಲಾಗಿದೆ.

ಅತುಲ್ ಮರಕ್ಕೆ ಕಟ್ಟಿ ದೌರ್ಜನ್ಯ ನಡೆಸಿದಾಗ ದೂರು ಕೊಟ್ಟರೂ ಬಂಧಿಸದ ಪೊಲೀಸರು, ಸಂತ್ರಸ್ತೆಯ ತಂದೆಯನ್ನೇ, ‘ ಅಕ್ರಮವಾಗಿ ಶಸ್ತ್ರಾಸ್ತ ಹೊಂದಿದ್ದ’ ಎಂದು ಆರೋಪಿಸಿ ಬಂಧಿಸಿದ್ದರು. ಶಾಸಕ ಮತ್ತು ಆತನ ಇಬ್ಬರು ಸಹೋದರರ ಈ ದರ್ಪ ಮತ್ತು ಪಾಳೇಗಾರಿಕೆಯ ಬಗ್ಗೆ ಭಯದಿಂದಲೇ ಇಲ್ಲಿನ ಜನರು ಹೇಳುತ್ತಾರೆ.

ಈಗ ಶಾಸಕನ ಅತ್ಯಾಚಾರ, ಕೊಲೆಯತ್ನ, ಸಂಚು ಕೇಸುಗಳಲ್ಲಿ, ಇನ್ನಿಬ್ಬರು ಸಹೋದರರು ಕೊಲೆಯತ್ನ ಕೇಸು ಎದುರಿಸುತ್ತಿದ್ದಾರೆ. ಇಷ್ಟೆಲ್ಲದರ ನಂತರವೂ ಶಾಸಕನ ವಿರುದ್ಧ ಇಲ್ಲಿ ಯಾರೂ ಸೊಲ್ಲೆತ್ತುವಂತಿಲ್ಲ. ಉತ್ತರ ಪ್ರದೇಶದ ಪಕ್ಷೇತರ ಶಾಸಕ, ಡಾನ್ ‘ರಾಜಾ ಭಯ್ಯಾ’ನ ಮಾದರಿಯಲ್ಲೇ ಕುಲದೀಪ್ ಕೂಡ ಜನರನ್ನು ಭಯದಲ್ಲಿಟ್ಟು ನಾಲ್ಕು ಸಲ ಗೆದ್ದಿದ್ದಾನೆ.

ಆಧಾರ: ದಿ ಕ್ವಿಂಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇರಳ | ಆದಿವಾಸಿ ಯುವಕ ಮಧು ಗುಂಪು ಹತ್ಯೆ ಪ್ರಕರಣ : 12 ಮಂದಿ ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಹೈಕೋರ್ಟ್

ಇಡೀ ದೇಶವನ್ನೇ ಬೆಚ್ಚಿ ಬೀಳಿಸಿದ್ದ ಕೇರಳದ ಆದಿವಾಸಿ ಯುವಕ ಮಧು ಗುಂಪು ಹಲ್ಲೆ ಮತ್ತು ಹತ್ಯೆ ಪ್ರಕರಣದ 12 ಜನ ಅಪರಾಧಿಗಳಿಗೆ ಹೈಕೋರ್ಟ್ ಸೋಮವಾರ (ಮೇ.25) ಜೀವಾವಧಿ ಶಿಕ್ಷೆ ಮತ್ತು ತಲಾ 2...

“ನನ್ನ ಅನುಮತಿ ಇಲ್ಲದೆ ನನ್ನ ಮಗುವನ್ನು ಸುಡಲಾಗಿದೆ”: ಕೊಲೆಯಾದ ಕೊಯಮತ್ತೂರು ಬಾಲಕಿಯ ತಾಯಿ ಅಳಲು

ಕೊಯಮತ್ತೂರು ಬಳಿ ಲೈಂಗಿಕ ದೌರ್ಜನ್ಯಕ್ಕೊಳಗಾಗಿ ಕೊಲೆಯಾದ 10 ವರ್ಷದ ಬಾಲಕಿಯ ತಾಯಿ, ತನ್ನ ಮಗಳ ಮೃತದೇಹದ ಅಂತ್ಯಸಂಸ್ಕಾರಕ್ಕೆ ತಾನು ಅನುಮತಿ ನೀಡಿರಲಿಲ್ಲ ಎಂದು ಹೇಳಿದ್ದಾರೆ. ಮಗುವಿನ ಮರಣೋತ್ತರ ಪರೀಕ್ಷೆಯ ನಂತರ, ತನ್ನ ಪತಿ...

ಅಷ್ಟೊಂದು ‘ಸೆಂಟಿಮೆಂಟ್’ ಬೇಡ: ‘ಕಾಕ್ರೋಚ್ ಅಭಿಯಾನ’ದ ವಿರುದ್ಧದ ಅರ್ಜಿಗೆ ಸಿಜೆಐ ಪ್ರತಿಕ್ರಿಯೆ

"ವ್ಯವಸ್ಥೆಯ ಮೇಲೆ ದಾಳಿ ಮಾಡುವವರ" ಕುರಿತು ತಾವು ನೀಡಿದ್ದ ಹೇಳಿಕೆಗೆ ವ್ಯಂಗ್ಯದ ರೂಪದಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಸೃಷ್ಟಿಯಾಗಿರುವ ‘ಕಾಕ್ರೋಚ್ ಜನತಾ ಪಾರ್ಟಿ’  ವಿವಾದವನ್ನು ಅಷ್ಟೊಂದು "ಭಾವನಾತ್ಮಕವಾಗಿ ತೆಗೆದುಕೊಳ್ಳಬೇಡಿ" ಎಂದು ಭಾರತದ ಮುಖ್ಯ ನ್ಯಾಯಮೂರ್ತಿ ...

ನಾಳೆ ದಿ. ಎಚ್.ಎಸ್ ದೊರೆಸ್ವಾಮಿ ಅವರಿಗೆ ‘ಕರ್ನಾಟಕದ ಗೌರವಾರ್ಪಣೆ’

ಸ್ವಾತಂತ್ರ್ಯ ಸೇನಾನಿ ದಿ. ಎಚ್.ಎಸ್ ದೊರೆಸ್ವಾಮಿ ಅವರಿಗೆ 'ಕರ್ನಾಟಕದ ಗೌರವಾರ್ಪಣೆ' ಕಾರ್ಯಕ್ರಮವನ್ನು ನಾಳೆ, ಅಂದರೆ 2026 ಮೇ 26 ರಂದು ಬೆಳಿಗ್ಗೆ 10.30ಕ್ಕೆ ಬೆಂಗಳೂರಿನ ಜ್ಞಾನಜ್ಯೋತಿ ಸಭಾಂಗಣದಲ್ಲಿ ಆಯೋಜಿಸಲಾಗಿದೆ. ಎಚ್.ಎಸ್‌ ದೊರೆಸ್ವಾಮಿ ಸ್ಮಾರಕ ಪ್ರತಿಷ್ಠಾನ,...

FACT CHECK : ಕಾಕ್ರೋಚ್ ಜನತಾ ಪಾರ್ಟಿಯ ಹೆಚ್ಚಿನ ಫಾಲೋವರ್ಸ್ ಪಾಕಿಸ್ತಾನದವರಾ?

ಇತ್ತೀಚೆಗೆ ಹುಟ್ಟಿಕೊಂಡ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಇನ್‌ಸ್ಟಾಗ್ರಾಮ್ ಪೇಜ್ ಕಾಂಗ್ರೆಸ್‌ನ 13 ಮಿಲಿಯನ್ ಮತ್ತು ಬಿಜೆಪಿಯ 9 ಮಿಲಿಯನ್ ಫಾಲೋವರ್ಸ್‌ಗಳ ಗಡಿಯನ್ನು ದಾಟಿದ್ದು, ಬರೋಬ್ಬರಿ 23 ಮಿಲಿಯನ್ (ಮೇ 24ರಂತೆ) ಫಾಲೋವರ್ಸ್‌...

ಬಾಂಗ್ಲಾ ಗಡಿಯಾಚೆಗೆ ತಳ್ಳಿದವರ ವಾಪಸಾತಿ: ಭಾರತೀಯರನ್ನೇ ಗಡಿಪಾರು ಮಾಡುತ್ತಿರುವ ಕೇಂದ್ರ?

ದಾಖಲೆರಹಿತ ವಲಸಿಗರೆಂದು ಆರೋಪಿಸಿ ಅಧಿಕಾರಿಗಳು ಬಾಂಗ್ಲಾದೇಶದ ಗಡಿಯಾಚೆಗೆ 'ತಳ್ಳಿದ್ದ' ಪಶ್ಚಿಮ ಬಂಗಾಳದ ನಿವಾಸಿಗಳನ್ನು ವಾಪಸ್ ಕರೆ ತರುವುದಾಗಿ ಕೇಂದ್ರ ಸರ್ಕಾರ ಶುಕ್ರವಾರ (ಮೇ 22,2026) ಸುಪ್ರೀಂ ಕೋರ್ಟ್‌ಗೆ ವಾಗ್ದಾನ ಮಾಡಿದೆ ಎಂದು ವರದಿಯಾಗಿದೆ....

SIR ಜಾರಿಯಾದ್ರೆ ಗ್ಯಾರಂಟಿಯನ್ನು ಕಳೆದುಕೊಳ್ತೀರಿ!

"ಬಡವರ ಮತಗಳನ್ನು ಪಟ್ಟಿಯಿಂದ ತೆಗೆಯಲು ಎಸ್‌ಐಆರ್ (SIR) ಮೂಲಕ ದೊಡ್ಡ ಸಂಚು ರೂಪಿಸಲಾಗಿದೆ. ನಾವೆಲ್ಲರೂ ಬಹಳ ಎಚ್ಚರಿಕೆಯಿಂದ ಇರಬೇಕು, ಇಲ್ಲದಿದ್ದರೆ ಮತ ಹಕ್ಕಿನ ಜೊತೆಗೆ ಶಕ್ತಿ, ಗೃಹಲಕ್ಷ್ಮಿಯಂತಹ ಗ್ಯಾರೆಂಟಿ ಯೋಜನೆಯನ್ನು ಕಳೆದುಕೊಳ್ಳಬೇಕಾಗುತ್ತದೆ" ಎಂದು...

ವೈಯಕ್ತಿಕ ಸ್ವಾತಂತ್ರ್ಯ Vs ಕಠಿಣ ಕಾಯ್ದೆ: ಯುಎಪಿಎ ಜಾಮೀನು ಭಿನ್ನಾಭಿಪ್ರಾಯಕ್ಕೆ ಸಿಗುವುದೇ ಸುಪ್ರೀಂ ಪರಿಹಾರ?

ಯುಎಪಿಎ ಅಡಿಯಲ್ಲಿ ದೀರ್ಘಕಾಲದ ಜೈಲುವಾಸದ ಹಿನ್ನೆಲೆ, ಜಾಮೀನು ನೀಡುವ ಕುರಿತು ಸುಪ್ರೀಂ ಕೋರ್ಟ್‌ನ ಎರಡು ನ್ಯಾಯಪೀಠಗಳ ನಡುವೆ ಭಿನ್ನಾಭಿಪ್ರಾಯ ಮೂಡಿದ ಕಾರಣ, ವಿಚಾರವನ್ನು ಸುಪ್ರೀಂ ಕೋರ್ಟ್‌ ವಿಸ್ತೃತ ಪೀಠಕ್ಕೆ ಶಿಫಾರಸು ಮಾಡಲಾಗಿದೆ ಎಂದು...

ತಾಯ್ತನ ಕ್ರೀಡೆಗೆ ಅಡ್ಡಿಯಾಗಬಾರದು: ಕುಸ್ತಿ ಒಕ್ಕೂಟಕ್ಕೆ ದೆಹಲಿ ಹೈಕೋರ್ಟ್ ಚಾಟಿ, ವಿನೇಶ್ ಫೋಗಟ್‌ಗೆ ಬಿಗ್ ರಿಲೀಫ್!

ಖ್ಯಾತ ಮಹಿಳಾ ಕುಸ್ತಿ ಪಟು ವಿನೇಶ್ ಫೋಗಟ್ ಅವರನ್ನು ದೇಶೀಯ ಕ್ರೀಡಾಕೂಟಗಳಲ್ಲಿ ಭಾಗವಹಿಸದಂತೆ "ಅನರ್ಹ" ಎಂದು ಘೋಷಿಸಿದ್ದ ಭಾರತೀಯ ಕುಸ್ತಿ ಒಕ್ಕೂಟದ (WFI) ನಿರ್ಧಾರವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ....

ಗುಜರಾತ್: ಜಾನುವಾರು ಹತ್ಯೆ ಆರೋಪದಲ್ಲಿ ಬಂಧಿಸಿದ 70 ವರ್ಷದ ಮುಸ್ಲಿಂ ವ್ಯಕ್ತಿ ಸಾವು: ‘ತಂದೆಯನ್ನು ಕೊಂದರು’ ಎಂದು ಆರೋಪಿಸಿದ ಮಗ

ಗುಜರಾತ್‌ನ ಅಹಮದಾಬಾದ್ ನಗರದಲ್ಲಿ ಪೊಲೀಸ್ ಕಸ್ಟಡಿಯಲ್ಲಿದ್ದ 70 ವರ್ಷದ ಜಹೀರ್ ಶೇಖ್ ಎಂಬ ಮುಸ್ಲಿಂ ವೃದ್ಧರೊಬ್ಬರು ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ. ಈ ಘಟನೆಯು ಗುಜರಾತ್‌ನಲ್ಲಿ ತೀವ್ರ ಸಂಚಲನ ಸೃಷ್ಟಿಸಿದ್ದು, ಕಸ್ಟಡಿ ನಿಂದನೆ, ಪೊಲೀಸರ ದೌರ್ಜನ್ಯ...