HomeUncategorizedಉನ್ನಾವ್ ಅತ್ಯಾಚಾರ ಆರೋಪಿ ಶಾಸಕನೂರಲ್ಲಿ ಸೆಂಗರ್ ಕುಟುಂಬದ್ದೇ ಪಾಳೇಗಾರಿಕೆ: ಇಲ್ಲಿದೆ ಗ್ರೌಂಡ್ ರಿಪೋರ್ಟ್

ಉನ್ನಾವ್ ಅತ್ಯಾಚಾರ ಆರೋಪಿ ಶಾಸಕನೂರಲ್ಲಿ ಸೆಂಗರ್ ಕುಟುಂಬದ್ದೇ ಪಾಳೇಗಾರಿಕೆ: ಇಲ್ಲಿದೆ ಗ್ರೌಂಡ್ ರಿಪೋರ್ಟ್

- Advertisement -
- Advertisement -

ಅತ್ಯಾಚಾರ ಮತ್ತು ಕೊಲೆಯತ್ನ ಆರೋಪ ಎದುರಿಸುತ್ತಿರುವ ಬಿಜೆಪಿಯ ಉಚ್ಛಾಟಿತ ಶಾಸಕ ಕುಲದೀಪ್ ಸೆಂಗರ್ ನ ಉನ್ನಾವ್ ಗ್ರಾಮಕ್ಕೆ ‘ದಿ ಕ್ವಿಂಟ್’ ತಂಡ ಭೇಟಿ ನೀಡಿ ಅಲ್ಲಿನ ಭಯಭೀತ ವಾತಾವರಣವನ್ನು ತೆರೆದಿಟ್ಟಿದೆ.

‘ಸೆಂಗರ್ ಗಳ ಹುಕುಂ ಇಲ್ಲದೇ ಇಲ್ಲಿ ಹುಲ್ಲುಕಡ್ಡಿ ಕೂಡ ಚಲಿಸುವಂತಿಲ್ಲ. ಅವರ ಒಪ್ಪಿಗೆಯಿಲ್ಲದೇ ತುಂಡುಭೂಮಿ ಮಾರಂಗಿಲ್ಲ, ಕೊಳ್ಳಂಗಿಲ್ಲ….’ – ಎನ್ನುತ್ತಾನೆ ಗ್ರಾಮದ ಯುವಕ ಅಜೀತ್.

ಇದು ಉನ್ನಾವ್. ಅತ್ಯಾಚಾರ ಮತ್ತು ಕೊಲೆಯತ್ನದ ಆರೋಪಿ ಶಾಸಕ ಕುಲದೀಪ್ ಸೆಂಗರ್ ನ ಗ್ರಾಮ. ಇಲ್ಲಿ ಶಾಸಕ ಮತ್ತು ಕುಟುಂಬದ ವಿರುದ್ಧ ಯಾರೂ ಮಾತಾಡುವಂತಿಲ್ಲ. ಈ ಕುಟುಂಬದ ನಜರ್ ಇಲ್ಲದೇ ಏನೂ ನಡೆಯುವಂತಿಲ್ಲ. ಒಂಥರಾ ಹಳೇ ಸಿನಿಮಾಗಳಲ್ಲಿ ಗೌಡರ ದರ್ಪ, ಪಾಳೇಗಾರಿಕೆಯಡಿ ನಲುಗುವ ಊರಿನಂತಿದೆ ಉನ್ನಾವ್.

ಸತತ ಸಾರ್ವಜನಿಕ ಒತ್ತಾಯ ಮತ್ತು ಒತ್ತಡಗಳ ಪರಿಣಾಮವಾಗಿ ಈಗ ಬಿಜೆಪಿ ಕುಲದೀಪ್ ಸೆಂಗರ್ ನನ್ನು ಪಕ್ಷದಿಂದ ಉಚ್ಛಾಟಿಸಿದೆ. ಅತ್ಯಾಚಾರ ಆರೋಪಕ್ಕೆ ಸಿಕ್ಕ 14 ತಿಂಗಳ ಬಳಿಕ ಬಿಜೆಪಿ ಈ ಕ್ರಮಕ್ಕೆ ಮುಂದಾಗಿದೆ. ಈ ಶಾಸಕರ ಉನ್ನಾವ್ 30 ಸಾವಿರದಷ್ಟು ಜನಸಂಖ್ಯೆ ಹೊಂದಿರುವ ದೊಡ್ಡ ಗ್ರಾಮವಾಗಿದ್ದು ಇಲ್ಲಿ ಯಾರೂ ಶಾಸಕರಿಗೆ ಅಹಿತ ಅನಿಸುವುದನ್ನು ಮಾತಾಡಲು ಒಲ್ಲರು, ಶಾಸಕರ ನಜರ್ ಗೆ ಬೀಳದಂತೆ ಬದುಕಲು ಯತ್ನಿಸುವವರು.

60 ವರ್ಷದಿಂದ ಸೆಂಗರ್ ಕುಟುಂಬದ್ದೇ ರಾಜಕೀಯ ಪಾರುಪತ್ಯ!

ಶಾಸಕ ಸೆಂಗರ್ ಅಜ್ಜ (ತಾಯಿಯ ತಂದೆ) 37 ವರ್ಷಗಳವರೆಗೆ ಗ್ರಾಮದ ಮುಖ್ಯಸ್ಥನಾಗಿದ್ದ. ನಂತರ ಕುಲದೀಪ್ ರಾಜಕೀಯ ಶುರು ಮಾಡಿದ. ಈಗ 4ನೇ ಬಾರಿ ಶಾಸಕನಾಗಿ ಆಯ್ಕೆಯಾಗಿದ್ದಾನೆ. ಸೆಂಗರ್ ತಾಯಿ ಎರಡು ಸಲ ಗ್ರಾಮ್ ಪ್ರಧಾನ್ ಆಗಿದ್ದರೆ, ಸಂಗರ್ ಸೊಸೆ, ಸಹೋದರನ ಪತ್ನಿ-ಹೀಗೆ ಗ್ರಾಮ್ ಪ್ರಧಾನ್ ಅಧಿಕಾರ ಅವರ ಕುಟುಂಬದ ಬಳಿಯೇ ಇದೆ ಎಂದು ಅಲ್ಲಿನ ಕೆಲವರು ಹೇಳುವಾಗ, ತಮ್ಮನ್ನು ಯಾರೂ ಗಮನಿಸುತ್ತಿಲ್ಲ ಎಂಬುದನ್ನು ಖಚಿತ ಮಾಡಿಕೊಳ್ಳುತ್ತಾರೆ.

ಆರಂಭದಲ್ಲಿ ಕಾಂಗ್ರೆಸ್‍ನಲ್ಲಿದ್ದ ಕುಲದೀಪ್ ಪಾರ್ಟಿಗಳನ್ನು ಬದಲಿಸುತ್ತಲೇ ಬಂದು ಈಗ ಬಿಜೆಪಿಯ ಪ್ರಭಾವಿ ಶಾಸಕನೂ, ಮುಖ್ಯಮಂತ್ರಿ ಯೋಗಿಯವರಿಗೆ ಆಪ್ತನೂ ಆಗಿದ್ದಾನೆ. ಅಕ್ರಮ ಕಲ್ಲು ಗಣಿಗಾರಿಕೆಯಿಂದ ಲೂಟಿ ಮಾಡುತ್ತಿರುವ ಈ ಕುಟುಂಬ ಪೊಲೀಸ್ ಅಧಿಕಾರಿಗಳ ಮೇಲೆಯೇ ದಾಳಿಗಳನ್ನು ಮಾಡುತ್ತ ಬಂದಿದೆ. 2004ರಲ್ಲಿ ಕುಲದೀಪ್ ಸೆಂಗರ್ ಸಹೋದರ ಅತುಲ್ ಜಿಲ್ಲಾ ಉಪ ಪೊಲೀಸ್ ವರಿಷ್ಠಾಧಿಕಾರಿ ರಾಮಲಾಲ್ ವರ್ಮಾ ಅವರ ಹೊಟ್ಟೆಗೆ ಗುಂಡು ಹೊಡೆದಿದ್ದ. ಈ ಕುಟುಂಬದ ಒತ್ತಡಕ್ಕೆ ಮಣಿದು ರಾಮಲಾಲ್ ವರ್ಮಾರೇ ದೂರು ಹಿಂಪಡೆಯಬೇಕಾಗಿತು.

ಪೊಲೀಸ್ ಅಧಿಕಾರಿಗಳ ಮೇಲೆಯೇ ಏರಿ ಹೋಗುವ ಈ ಕುಟುಂಬ ಸಾಮಾನ್ಯ ಜನರನ್ನು ಅದೆಷ್ಟು ಭಯಭೀತಿಯಲ್ಲಿ ಇಟ್ಟಿರಬಹುದು ಎಂದು ಊಹಿಸಿ. ಈ ಭೇಟಿಯ ವೇಳೆ ನಮ್ಮ ತಂಡಕ್ಕೆ ಅದರ ದರ್ಶನವೂ ಆಯಿತು. ‘ಪರಿಸ್ಥಿತಿ ಹೀಗಿರುವಾಗ ಅತ್ಯಾಚಾರ ಸಂತ್ರಸ್ತೆಯ ಕುಟುಂಬಕ್ಕೆ ಎಂತಹ ಹಿಂಸೆ ಕೊಟ್ಟಿರಬಹುದು ಊಹಿಸಿ’ ಎಂದ ಯುವಕ ಅಜಿತ್. (ಹೆಸರು ಬದಲಿಸಿದೆ).

2018ರಲ್ಲಿ ಇದೇ ಅತುಲ್ ಸೆಂಗರ್ ಅತ್ಯಾಚಾರ ಸಂತ್ರಸ್ತೆಯ ತಂದೆಯನ್ನು ಮರಕ್ಕೆ ಕಟ್ಟಿ ವಿಪರೀತ ಹಡೆದಿದ್ದ ಎಂದು ಹೆಸರು ಹೇಳಲು ಇಚ್ಛಿಸದ ಜನ ಹೇಳುತ್ತಾರೆ. ಆಗ ಬಹುಶಃ ಒಳಗಾಯಗಳಾಗಿದ್ದವು ಎನಿಸುತ್ತದೆ. ಮುಂದೆ ಐದೇ ದಿನದಲ್ಲಿ ಆಕೆಯ ತಂದೆ ಪೊಲೀಸ್ ಲಾಕಪ್ಪಿನಲ್ಲಿ ಮೃತಪಟ್ಟರು. ಪೊಲೀಸ್ ಸ್ಟೇಷನ್ನಿನಲ್ಲೂ ಅತುಲ್ ಒತ್ತಡ ಹೇರಿ ಮತ್ತೆ ದೌರ್ಜನ್ಯ ನಡೆಸಿದ್ದಾನೆ ಎಂಬ ಆರೋಪವೂ ಇದೆ. ಈ ಕುರಿತು ದೂರು ದಾಖಲಾಗಿದೆ.

ಅತುಲ್ ಮರಕ್ಕೆ ಕಟ್ಟಿ ದೌರ್ಜನ್ಯ ನಡೆಸಿದಾಗ ದೂರು ಕೊಟ್ಟರೂ ಬಂಧಿಸದ ಪೊಲೀಸರು, ಸಂತ್ರಸ್ತೆಯ ತಂದೆಯನ್ನೇ, ‘ ಅಕ್ರಮವಾಗಿ ಶಸ್ತ್ರಾಸ್ತ ಹೊಂದಿದ್ದ’ ಎಂದು ಆರೋಪಿಸಿ ಬಂಧಿಸಿದ್ದರು. ಶಾಸಕ ಮತ್ತು ಆತನ ಇಬ್ಬರು ಸಹೋದರರ ಈ ದರ್ಪ ಮತ್ತು ಪಾಳೇಗಾರಿಕೆಯ ಬಗ್ಗೆ ಭಯದಿಂದಲೇ ಇಲ್ಲಿನ ಜನರು ಹೇಳುತ್ತಾರೆ.

ಈಗ ಶಾಸಕನ ಅತ್ಯಾಚಾರ, ಕೊಲೆಯತ್ನ, ಸಂಚು ಕೇಸುಗಳಲ್ಲಿ, ಇನ್ನಿಬ್ಬರು ಸಹೋದರರು ಕೊಲೆಯತ್ನ ಕೇಸು ಎದುರಿಸುತ್ತಿದ್ದಾರೆ. ಇಷ್ಟೆಲ್ಲದರ ನಂತರವೂ ಶಾಸಕನ ವಿರುದ್ಧ ಇಲ್ಲಿ ಯಾರೂ ಸೊಲ್ಲೆತ್ತುವಂತಿಲ್ಲ. ಉತ್ತರ ಪ್ರದೇಶದ ಪಕ್ಷೇತರ ಶಾಸಕ, ಡಾನ್ ‘ರಾಜಾ ಭಯ್ಯಾ’ನ ಮಾದರಿಯಲ್ಲೇ ಕುಲದೀಪ್ ಕೂಡ ಜನರನ್ನು ಭಯದಲ್ಲಿಟ್ಟು ನಾಲ್ಕು ಸಲ ಗೆದ್ದಿದ್ದಾನೆ.

ಆಧಾರ: ದಿ ಕ್ವಿಂಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...