HomeUncategorizedಉನ್ನಾವ್ ಅತ್ಯಾಚಾರ ಆರೋಪಿ ಶಾಸಕನೂರಲ್ಲಿ ಸೆಂಗರ್ ಕುಟುಂಬದ್ದೇ ಪಾಳೇಗಾರಿಕೆ: ಇಲ್ಲಿದೆ ಗ್ರೌಂಡ್ ರಿಪೋರ್ಟ್

ಉನ್ನಾವ್ ಅತ್ಯಾಚಾರ ಆರೋಪಿ ಶಾಸಕನೂರಲ್ಲಿ ಸೆಂಗರ್ ಕುಟುಂಬದ್ದೇ ಪಾಳೇಗಾರಿಕೆ: ಇಲ್ಲಿದೆ ಗ್ರೌಂಡ್ ರಿಪೋರ್ಟ್

- Advertisement -
- Advertisement -

ಅತ್ಯಾಚಾರ ಮತ್ತು ಕೊಲೆಯತ್ನ ಆರೋಪ ಎದುರಿಸುತ್ತಿರುವ ಬಿಜೆಪಿಯ ಉಚ್ಛಾಟಿತ ಶಾಸಕ ಕುಲದೀಪ್ ಸೆಂಗರ್ ನ ಉನ್ನಾವ್ ಗ್ರಾಮಕ್ಕೆ ‘ದಿ ಕ್ವಿಂಟ್’ ತಂಡ ಭೇಟಿ ನೀಡಿ ಅಲ್ಲಿನ ಭಯಭೀತ ವಾತಾವರಣವನ್ನು ತೆರೆದಿಟ್ಟಿದೆ.

‘ಸೆಂಗರ್ ಗಳ ಹುಕುಂ ಇಲ್ಲದೇ ಇಲ್ಲಿ ಹುಲ್ಲುಕಡ್ಡಿ ಕೂಡ ಚಲಿಸುವಂತಿಲ್ಲ. ಅವರ ಒಪ್ಪಿಗೆಯಿಲ್ಲದೇ ತುಂಡುಭೂಮಿ ಮಾರಂಗಿಲ್ಲ, ಕೊಳ್ಳಂಗಿಲ್ಲ….’ – ಎನ್ನುತ್ತಾನೆ ಗ್ರಾಮದ ಯುವಕ ಅಜೀತ್.

ಇದು ಉನ್ನಾವ್. ಅತ್ಯಾಚಾರ ಮತ್ತು ಕೊಲೆಯತ್ನದ ಆರೋಪಿ ಶಾಸಕ ಕುಲದೀಪ್ ಸೆಂಗರ್ ನ ಗ್ರಾಮ. ಇಲ್ಲಿ ಶಾಸಕ ಮತ್ತು ಕುಟುಂಬದ ವಿರುದ್ಧ ಯಾರೂ ಮಾತಾಡುವಂತಿಲ್ಲ. ಈ ಕುಟುಂಬದ ನಜರ್ ಇಲ್ಲದೇ ಏನೂ ನಡೆಯುವಂತಿಲ್ಲ. ಒಂಥರಾ ಹಳೇ ಸಿನಿಮಾಗಳಲ್ಲಿ ಗೌಡರ ದರ್ಪ, ಪಾಳೇಗಾರಿಕೆಯಡಿ ನಲುಗುವ ಊರಿನಂತಿದೆ ಉನ್ನಾವ್.

ಸತತ ಸಾರ್ವಜನಿಕ ಒತ್ತಾಯ ಮತ್ತು ಒತ್ತಡಗಳ ಪರಿಣಾಮವಾಗಿ ಈಗ ಬಿಜೆಪಿ ಕುಲದೀಪ್ ಸೆಂಗರ್ ನನ್ನು ಪಕ್ಷದಿಂದ ಉಚ್ಛಾಟಿಸಿದೆ. ಅತ್ಯಾಚಾರ ಆರೋಪಕ್ಕೆ ಸಿಕ್ಕ 14 ತಿಂಗಳ ಬಳಿಕ ಬಿಜೆಪಿ ಈ ಕ್ರಮಕ್ಕೆ ಮುಂದಾಗಿದೆ. ಈ ಶಾಸಕರ ಉನ್ನಾವ್ 30 ಸಾವಿರದಷ್ಟು ಜನಸಂಖ್ಯೆ ಹೊಂದಿರುವ ದೊಡ್ಡ ಗ್ರಾಮವಾಗಿದ್ದು ಇಲ್ಲಿ ಯಾರೂ ಶಾಸಕರಿಗೆ ಅಹಿತ ಅನಿಸುವುದನ್ನು ಮಾತಾಡಲು ಒಲ್ಲರು, ಶಾಸಕರ ನಜರ್ ಗೆ ಬೀಳದಂತೆ ಬದುಕಲು ಯತ್ನಿಸುವವರು.

60 ವರ್ಷದಿಂದ ಸೆಂಗರ್ ಕುಟುಂಬದ್ದೇ ರಾಜಕೀಯ ಪಾರುಪತ್ಯ!

ಶಾಸಕ ಸೆಂಗರ್ ಅಜ್ಜ (ತಾಯಿಯ ತಂದೆ) 37 ವರ್ಷಗಳವರೆಗೆ ಗ್ರಾಮದ ಮುಖ್ಯಸ್ಥನಾಗಿದ್ದ. ನಂತರ ಕುಲದೀಪ್ ರಾಜಕೀಯ ಶುರು ಮಾಡಿದ. ಈಗ 4ನೇ ಬಾರಿ ಶಾಸಕನಾಗಿ ಆಯ್ಕೆಯಾಗಿದ್ದಾನೆ. ಸೆಂಗರ್ ತಾಯಿ ಎರಡು ಸಲ ಗ್ರಾಮ್ ಪ್ರಧಾನ್ ಆಗಿದ್ದರೆ, ಸಂಗರ್ ಸೊಸೆ, ಸಹೋದರನ ಪತ್ನಿ-ಹೀಗೆ ಗ್ರಾಮ್ ಪ್ರಧಾನ್ ಅಧಿಕಾರ ಅವರ ಕುಟುಂಬದ ಬಳಿಯೇ ಇದೆ ಎಂದು ಅಲ್ಲಿನ ಕೆಲವರು ಹೇಳುವಾಗ, ತಮ್ಮನ್ನು ಯಾರೂ ಗಮನಿಸುತ್ತಿಲ್ಲ ಎಂಬುದನ್ನು ಖಚಿತ ಮಾಡಿಕೊಳ್ಳುತ್ತಾರೆ.

ಆರಂಭದಲ್ಲಿ ಕಾಂಗ್ರೆಸ್‍ನಲ್ಲಿದ್ದ ಕುಲದೀಪ್ ಪಾರ್ಟಿಗಳನ್ನು ಬದಲಿಸುತ್ತಲೇ ಬಂದು ಈಗ ಬಿಜೆಪಿಯ ಪ್ರಭಾವಿ ಶಾಸಕನೂ, ಮುಖ್ಯಮಂತ್ರಿ ಯೋಗಿಯವರಿಗೆ ಆಪ್ತನೂ ಆಗಿದ್ದಾನೆ. ಅಕ್ರಮ ಕಲ್ಲು ಗಣಿಗಾರಿಕೆಯಿಂದ ಲೂಟಿ ಮಾಡುತ್ತಿರುವ ಈ ಕುಟುಂಬ ಪೊಲೀಸ್ ಅಧಿಕಾರಿಗಳ ಮೇಲೆಯೇ ದಾಳಿಗಳನ್ನು ಮಾಡುತ್ತ ಬಂದಿದೆ. 2004ರಲ್ಲಿ ಕುಲದೀಪ್ ಸೆಂಗರ್ ಸಹೋದರ ಅತುಲ್ ಜಿಲ್ಲಾ ಉಪ ಪೊಲೀಸ್ ವರಿಷ್ಠಾಧಿಕಾರಿ ರಾಮಲಾಲ್ ವರ್ಮಾ ಅವರ ಹೊಟ್ಟೆಗೆ ಗುಂಡು ಹೊಡೆದಿದ್ದ. ಈ ಕುಟುಂಬದ ಒತ್ತಡಕ್ಕೆ ಮಣಿದು ರಾಮಲಾಲ್ ವರ್ಮಾರೇ ದೂರು ಹಿಂಪಡೆಯಬೇಕಾಗಿತು.

ಪೊಲೀಸ್ ಅಧಿಕಾರಿಗಳ ಮೇಲೆಯೇ ಏರಿ ಹೋಗುವ ಈ ಕುಟುಂಬ ಸಾಮಾನ್ಯ ಜನರನ್ನು ಅದೆಷ್ಟು ಭಯಭೀತಿಯಲ್ಲಿ ಇಟ್ಟಿರಬಹುದು ಎಂದು ಊಹಿಸಿ. ಈ ಭೇಟಿಯ ವೇಳೆ ನಮ್ಮ ತಂಡಕ್ಕೆ ಅದರ ದರ್ಶನವೂ ಆಯಿತು. ‘ಪರಿಸ್ಥಿತಿ ಹೀಗಿರುವಾಗ ಅತ್ಯಾಚಾರ ಸಂತ್ರಸ್ತೆಯ ಕುಟುಂಬಕ್ಕೆ ಎಂತಹ ಹಿಂಸೆ ಕೊಟ್ಟಿರಬಹುದು ಊಹಿಸಿ’ ಎಂದ ಯುವಕ ಅಜಿತ್. (ಹೆಸರು ಬದಲಿಸಿದೆ).

2018ರಲ್ಲಿ ಇದೇ ಅತುಲ್ ಸೆಂಗರ್ ಅತ್ಯಾಚಾರ ಸಂತ್ರಸ್ತೆಯ ತಂದೆಯನ್ನು ಮರಕ್ಕೆ ಕಟ್ಟಿ ವಿಪರೀತ ಹಡೆದಿದ್ದ ಎಂದು ಹೆಸರು ಹೇಳಲು ಇಚ್ಛಿಸದ ಜನ ಹೇಳುತ್ತಾರೆ. ಆಗ ಬಹುಶಃ ಒಳಗಾಯಗಳಾಗಿದ್ದವು ಎನಿಸುತ್ತದೆ. ಮುಂದೆ ಐದೇ ದಿನದಲ್ಲಿ ಆಕೆಯ ತಂದೆ ಪೊಲೀಸ್ ಲಾಕಪ್ಪಿನಲ್ಲಿ ಮೃತಪಟ್ಟರು. ಪೊಲೀಸ್ ಸ್ಟೇಷನ್ನಿನಲ್ಲೂ ಅತುಲ್ ಒತ್ತಡ ಹೇರಿ ಮತ್ತೆ ದೌರ್ಜನ್ಯ ನಡೆಸಿದ್ದಾನೆ ಎಂಬ ಆರೋಪವೂ ಇದೆ. ಈ ಕುರಿತು ದೂರು ದಾಖಲಾಗಿದೆ.

ಅತುಲ್ ಮರಕ್ಕೆ ಕಟ್ಟಿ ದೌರ್ಜನ್ಯ ನಡೆಸಿದಾಗ ದೂರು ಕೊಟ್ಟರೂ ಬಂಧಿಸದ ಪೊಲೀಸರು, ಸಂತ್ರಸ್ತೆಯ ತಂದೆಯನ್ನೇ, ‘ ಅಕ್ರಮವಾಗಿ ಶಸ್ತ್ರಾಸ್ತ ಹೊಂದಿದ್ದ’ ಎಂದು ಆರೋಪಿಸಿ ಬಂಧಿಸಿದ್ದರು. ಶಾಸಕ ಮತ್ತು ಆತನ ಇಬ್ಬರು ಸಹೋದರರ ಈ ದರ್ಪ ಮತ್ತು ಪಾಳೇಗಾರಿಕೆಯ ಬಗ್ಗೆ ಭಯದಿಂದಲೇ ಇಲ್ಲಿನ ಜನರು ಹೇಳುತ್ತಾರೆ.

ಈಗ ಶಾಸಕನ ಅತ್ಯಾಚಾರ, ಕೊಲೆಯತ್ನ, ಸಂಚು ಕೇಸುಗಳಲ್ಲಿ, ಇನ್ನಿಬ್ಬರು ಸಹೋದರರು ಕೊಲೆಯತ್ನ ಕೇಸು ಎದುರಿಸುತ್ತಿದ್ದಾರೆ. ಇಷ್ಟೆಲ್ಲದರ ನಂತರವೂ ಶಾಸಕನ ವಿರುದ್ಧ ಇಲ್ಲಿ ಯಾರೂ ಸೊಲ್ಲೆತ್ತುವಂತಿಲ್ಲ. ಉತ್ತರ ಪ್ರದೇಶದ ಪಕ್ಷೇತರ ಶಾಸಕ, ಡಾನ್ ‘ರಾಜಾ ಭಯ್ಯಾ’ನ ಮಾದರಿಯಲ್ಲೇ ಕುಲದೀಪ್ ಕೂಡ ಜನರನ್ನು ಭಯದಲ್ಲಿಟ್ಟು ನಾಲ್ಕು ಸಲ ಗೆದ್ದಿದ್ದಾನೆ.

ಆಧಾರ: ದಿ ಕ್ವಿಂಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...