HomeUncategorizedಉನ್ನಾವ್ ಅತ್ಯಾಚಾರ ಆರೋಪಿ ಶಾಸಕನೂರಲ್ಲಿ ಸೆಂಗರ್ ಕುಟುಂಬದ್ದೇ ಪಾಳೇಗಾರಿಕೆ: ಇಲ್ಲಿದೆ ಗ್ರೌಂಡ್ ರಿಪೋರ್ಟ್

ಉನ್ನಾವ್ ಅತ್ಯಾಚಾರ ಆರೋಪಿ ಶಾಸಕನೂರಲ್ಲಿ ಸೆಂಗರ್ ಕುಟುಂಬದ್ದೇ ಪಾಳೇಗಾರಿಕೆ: ಇಲ್ಲಿದೆ ಗ್ರೌಂಡ್ ರಿಪೋರ್ಟ್

- Advertisement -
- Advertisement -

ಅತ್ಯಾಚಾರ ಮತ್ತು ಕೊಲೆಯತ್ನ ಆರೋಪ ಎದುರಿಸುತ್ತಿರುವ ಬಿಜೆಪಿಯ ಉಚ್ಛಾಟಿತ ಶಾಸಕ ಕುಲದೀಪ್ ಸೆಂಗರ್ ನ ಉನ್ನಾವ್ ಗ್ರಾಮಕ್ಕೆ ‘ದಿ ಕ್ವಿಂಟ್’ ತಂಡ ಭೇಟಿ ನೀಡಿ ಅಲ್ಲಿನ ಭಯಭೀತ ವಾತಾವರಣವನ್ನು ತೆರೆದಿಟ್ಟಿದೆ.

‘ಸೆಂಗರ್ ಗಳ ಹುಕುಂ ಇಲ್ಲದೇ ಇಲ್ಲಿ ಹುಲ್ಲುಕಡ್ಡಿ ಕೂಡ ಚಲಿಸುವಂತಿಲ್ಲ. ಅವರ ಒಪ್ಪಿಗೆಯಿಲ್ಲದೇ ತುಂಡುಭೂಮಿ ಮಾರಂಗಿಲ್ಲ, ಕೊಳ್ಳಂಗಿಲ್ಲ….’ – ಎನ್ನುತ್ತಾನೆ ಗ್ರಾಮದ ಯುವಕ ಅಜೀತ್.

ಇದು ಉನ್ನಾವ್. ಅತ್ಯಾಚಾರ ಮತ್ತು ಕೊಲೆಯತ್ನದ ಆರೋಪಿ ಶಾಸಕ ಕುಲದೀಪ್ ಸೆಂಗರ್ ನ ಗ್ರಾಮ. ಇಲ್ಲಿ ಶಾಸಕ ಮತ್ತು ಕುಟುಂಬದ ವಿರುದ್ಧ ಯಾರೂ ಮಾತಾಡುವಂತಿಲ್ಲ. ಈ ಕುಟುಂಬದ ನಜರ್ ಇಲ್ಲದೇ ಏನೂ ನಡೆಯುವಂತಿಲ್ಲ. ಒಂಥರಾ ಹಳೇ ಸಿನಿಮಾಗಳಲ್ಲಿ ಗೌಡರ ದರ್ಪ, ಪಾಳೇಗಾರಿಕೆಯಡಿ ನಲುಗುವ ಊರಿನಂತಿದೆ ಉನ್ನಾವ್.

ಸತತ ಸಾರ್ವಜನಿಕ ಒತ್ತಾಯ ಮತ್ತು ಒತ್ತಡಗಳ ಪರಿಣಾಮವಾಗಿ ಈಗ ಬಿಜೆಪಿ ಕುಲದೀಪ್ ಸೆಂಗರ್ ನನ್ನು ಪಕ್ಷದಿಂದ ಉಚ್ಛಾಟಿಸಿದೆ. ಅತ್ಯಾಚಾರ ಆರೋಪಕ್ಕೆ ಸಿಕ್ಕ 14 ತಿಂಗಳ ಬಳಿಕ ಬಿಜೆಪಿ ಈ ಕ್ರಮಕ್ಕೆ ಮುಂದಾಗಿದೆ. ಈ ಶಾಸಕರ ಉನ್ನಾವ್ 30 ಸಾವಿರದಷ್ಟು ಜನಸಂಖ್ಯೆ ಹೊಂದಿರುವ ದೊಡ್ಡ ಗ್ರಾಮವಾಗಿದ್ದು ಇಲ್ಲಿ ಯಾರೂ ಶಾಸಕರಿಗೆ ಅಹಿತ ಅನಿಸುವುದನ್ನು ಮಾತಾಡಲು ಒಲ್ಲರು, ಶಾಸಕರ ನಜರ್ ಗೆ ಬೀಳದಂತೆ ಬದುಕಲು ಯತ್ನಿಸುವವರು.

60 ವರ್ಷದಿಂದ ಸೆಂಗರ್ ಕುಟುಂಬದ್ದೇ ರಾಜಕೀಯ ಪಾರುಪತ್ಯ!

ಶಾಸಕ ಸೆಂಗರ್ ಅಜ್ಜ (ತಾಯಿಯ ತಂದೆ) 37 ವರ್ಷಗಳವರೆಗೆ ಗ್ರಾಮದ ಮುಖ್ಯಸ್ಥನಾಗಿದ್ದ. ನಂತರ ಕುಲದೀಪ್ ರಾಜಕೀಯ ಶುರು ಮಾಡಿದ. ಈಗ 4ನೇ ಬಾರಿ ಶಾಸಕನಾಗಿ ಆಯ್ಕೆಯಾಗಿದ್ದಾನೆ. ಸೆಂಗರ್ ತಾಯಿ ಎರಡು ಸಲ ಗ್ರಾಮ್ ಪ್ರಧಾನ್ ಆಗಿದ್ದರೆ, ಸಂಗರ್ ಸೊಸೆ, ಸಹೋದರನ ಪತ್ನಿ-ಹೀಗೆ ಗ್ರಾಮ್ ಪ್ರಧಾನ್ ಅಧಿಕಾರ ಅವರ ಕುಟುಂಬದ ಬಳಿಯೇ ಇದೆ ಎಂದು ಅಲ್ಲಿನ ಕೆಲವರು ಹೇಳುವಾಗ, ತಮ್ಮನ್ನು ಯಾರೂ ಗಮನಿಸುತ್ತಿಲ್ಲ ಎಂಬುದನ್ನು ಖಚಿತ ಮಾಡಿಕೊಳ್ಳುತ್ತಾರೆ.

ಆರಂಭದಲ್ಲಿ ಕಾಂಗ್ರೆಸ್‍ನಲ್ಲಿದ್ದ ಕುಲದೀಪ್ ಪಾರ್ಟಿಗಳನ್ನು ಬದಲಿಸುತ್ತಲೇ ಬಂದು ಈಗ ಬಿಜೆಪಿಯ ಪ್ರಭಾವಿ ಶಾಸಕನೂ, ಮುಖ್ಯಮಂತ್ರಿ ಯೋಗಿಯವರಿಗೆ ಆಪ್ತನೂ ಆಗಿದ್ದಾನೆ. ಅಕ್ರಮ ಕಲ್ಲು ಗಣಿಗಾರಿಕೆಯಿಂದ ಲೂಟಿ ಮಾಡುತ್ತಿರುವ ಈ ಕುಟುಂಬ ಪೊಲೀಸ್ ಅಧಿಕಾರಿಗಳ ಮೇಲೆಯೇ ದಾಳಿಗಳನ್ನು ಮಾಡುತ್ತ ಬಂದಿದೆ. 2004ರಲ್ಲಿ ಕುಲದೀಪ್ ಸೆಂಗರ್ ಸಹೋದರ ಅತುಲ್ ಜಿಲ್ಲಾ ಉಪ ಪೊಲೀಸ್ ವರಿಷ್ಠಾಧಿಕಾರಿ ರಾಮಲಾಲ್ ವರ್ಮಾ ಅವರ ಹೊಟ್ಟೆಗೆ ಗುಂಡು ಹೊಡೆದಿದ್ದ. ಈ ಕುಟುಂಬದ ಒತ್ತಡಕ್ಕೆ ಮಣಿದು ರಾಮಲಾಲ್ ವರ್ಮಾರೇ ದೂರು ಹಿಂಪಡೆಯಬೇಕಾಗಿತು.

ಪೊಲೀಸ್ ಅಧಿಕಾರಿಗಳ ಮೇಲೆಯೇ ಏರಿ ಹೋಗುವ ಈ ಕುಟುಂಬ ಸಾಮಾನ್ಯ ಜನರನ್ನು ಅದೆಷ್ಟು ಭಯಭೀತಿಯಲ್ಲಿ ಇಟ್ಟಿರಬಹುದು ಎಂದು ಊಹಿಸಿ. ಈ ಭೇಟಿಯ ವೇಳೆ ನಮ್ಮ ತಂಡಕ್ಕೆ ಅದರ ದರ್ಶನವೂ ಆಯಿತು. ‘ಪರಿಸ್ಥಿತಿ ಹೀಗಿರುವಾಗ ಅತ್ಯಾಚಾರ ಸಂತ್ರಸ್ತೆಯ ಕುಟುಂಬಕ್ಕೆ ಎಂತಹ ಹಿಂಸೆ ಕೊಟ್ಟಿರಬಹುದು ಊಹಿಸಿ’ ಎಂದ ಯುವಕ ಅಜಿತ್. (ಹೆಸರು ಬದಲಿಸಿದೆ).

2018ರಲ್ಲಿ ಇದೇ ಅತುಲ್ ಸೆಂಗರ್ ಅತ್ಯಾಚಾರ ಸಂತ್ರಸ್ತೆಯ ತಂದೆಯನ್ನು ಮರಕ್ಕೆ ಕಟ್ಟಿ ವಿಪರೀತ ಹಡೆದಿದ್ದ ಎಂದು ಹೆಸರು ಹೇಳಲು ಇಚ್ಛಿಸದ ಜನ ಹೇಳುತ್ತಾರೆ. ಆಗ ಬಹುಶಃ ಒಳಗಾಯಗಳಾಗಿದ್ದವು ಎನಿಸುತ್ತದೆ. ಮುಂದೆ ಐದೇ ದಿನದಲ್ಲಿ ಆಕೆಯ ತಂದೆ ಪೊಲೀಸ್ ಲಾಕಪ್ಪಿನಲ್ಲಿ ಮೃತಪಟ್ಟರು. ಪೊಲೀಸ್ ಸ್ಟೇಷನ್ನಿನಲ್ಲೂ ಅತುಲ್ ಒತ್ತಡ ಹೇರಿ ಮತ್ತೆ ದೌರ್ಜನ್ಯ ನಡೆಸಿದ್ದಾನೆ ಎಂಬ ಆರೋಪವೂ ಇದೆ. ಈ ಕುರಿತು ದೂರು ದಾಖಲಾಗಿದೆ.

ಅತುಲ್ ಮರಕ್ಕೆ ಕಟ್ಟಿ ದೌರ್ಜನ್ಯ ನಡೆಸಿದಾಗ ದೂರು ಕೊಟ್ಟರೂ ಬಂಧಿಸದ ಪೊಲೀಸರು, ಸಂತ್ರಸ್ತೆಯ ತಂದೆಯನ್ನೇ, ‘ ಅಕ್ರಮವಾಗಿ ಶಸ್ತ್ರಾಸ್ತ ಹೊಂದಿದ್ದ’ ಎಂದು ಆರೋಪಿಸಿ ಬಂಧಿಸಿದ್ದರು. ಶಾಸಕ ಮತ್ತು ಆತನ ಇಬ್ಬರು ಸಹೋದರರ ಈ ದರ್ಪ ಮತ್ತು ಪಾಳೇಗಾರಿಕೆಯ ಬಗ್ಗೆ ಭಯದಿಂದಲೇ ಇಲ್ಲಿನ ಜನರು ಹೇಳುತ್ತಾರೆ.

ಈಗ ಶಾಸಕನ ಅತ್ಯಾಚಾರ, ಕೊಲೆಯತ್ನ, ಸಂಚು ಕೇಸುಗಳಲ್ಲಿ, ಇನ್ನಿಬ್ಬರು ಸಹೋದರರು ಕೊಲೆಯತ್ನ ಕೇಸು ಎದುರಿಸುತ್ತಿದ್ದಾರೆ. ಇಷ್ಟೆಲ್ಲದರ ನಂತರವೂ ಶಾಸಕನ ವಿರುದ್ಧ ಇಲ್ಲಿ ಯಾರೂ ಸೊಲ್ಲೆತ್ತುವಂತಿಲ್ಲ. ಉತ್ತರ ಪ್ರದೇಶದ ಪಕ್ಷೇತರ ಶಾಸಕ, ಡಾನ್ ‘ರಾಜಾ ಭಯ್ಯಾ’ನ ಮಾದರಿಯಲ್ಲೇ ಕುಲದೀಪ್ ಕೂಡ ಜನರನ್ನು ಭಯದಲ್ಲಿಟ್ಟು ನಾಲ್ಕು ಸಲ ಗೆದ್ದಿದ್ದಾನೆ.

ಆಧಾರ: ದಿ ಕ್ವಿಂಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹಾವಿನ ವಿಷ ಪ್ರಕರಣ : ಎಲ್ವಿಶ್ ಯಾದವ್ ವಿರುದ್ಧದ ಎಫ್‌ಐಆರ್ ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಯೂಟ್ಯೂಬರ್ ಎಲ್ವಿಶ್ ಯಾದವ್ ವಿರುದ್ಧದ ಹಾವಿನ ವಿಷ ಪ್ರಕರಣಕ್ಕೆ ಸಂಬಂಧಿಸಿದ ಎಫ್‌ಐಆರ್ ಮತ್ತು ಕ್ರಿಮಿನಲ್ ಪ್ರಕ್ರಿಯೆಗಳನ್ನು ಸುಪ್ರೀಂ ಕೋರ್ಟ್ ಗುರುವಾರ (ಮಾ.19) ರದ್ದುಗೊಳಿಸಿದೆ.  ವನ್ಯಜೀವಿ (ರಕ್ಷಣೆ) ಕಾಯ್ದೆಯ ಅಡಿಯಲ್ಲಿ ಪ್ರಕರಣ ದಾಖಲಿಸಲು ಅಧಿಕೃತ ವ್ಯಕ್ತಿಯಿಂದ ದೂರು...

ದೆಹಲಿಯ ಉತ್ತಮ್ ನಗರದಲ್ಲಿ ಮುಸ್ಲಿಮರಿಗೆ ಬೆದರಿಕೆ; ಅಮಿತ್ ಶಾಗೆ ಪತ್ರ ಬರೆದ ವಿಪಕ್ಷ ಸಂಸದರು

ರಾಷ್ಟ್ರ ರಾಜಧಾನಿಯ ಉತ್ತಮ್ ನಗರದಲ್ಲಿ ಮುಸ್ಲಿಮರನ್ನು ಗುರಿಯಾಗಿಸಿಕೊಂಡು ಹಿಂದುತ್ವ ಗುಂಪುಗಳು ಮಾಡುತ್ತಿರುವ ಬೆದರಿಕೆಗಳ ಬಗ್ಗೆ ತುರ್ತು ಹಸ್ತಕ್ಷೇಪವನ್ನು ಕೋರಿ ಹಲವಾರು ವಿರೋಧ ಪಕ್ಷದ ಸದಸ್ಯರು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ...

‘ಇರಾನ್ ಕತಾರ್ ಮೇಲೆ ಮತ್ತೊಮ್ಮೆ ದಾಳಿ ಮಾಡಿದರೆ, ಸೌತ್ ಪಾರ್ಸ್ ಅನಿಲ ಕ್ಷೇತ್ರವನ್ನು ಸ್ಪೋಟಿಸುತ್ತೇವೆ’; ಟ್ರಂಪ್ ಬೆದರಿಕೆ

ಇರಾನ್ ಕತಾರ್‌ನ ಇಂಧನ ಸೌಲಭ್ಯಗಳನ್ನು ಗುರಿಯಾಗಿಸಿಕೊಂಡರೆ, ಅಮೆರಿಕ ”ಸೌತ್ ಪಾರ್ಸ್ ಅನಿಲ ಕ್ಷೇತ್ರವನ್ನು ಬೃಹತ್ ಪ್ರಮಾಣದಲ್ಲಿ ಸ್ಫೋಟಿಸುತ್ತದೆ” ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಬುಧವಾರ ರಾಜ್ಯಸಭೆಯಲ್ಲಿ ಎಚ್ಚರಿಸಿದ್ದಾರೆ. ಇರಾನ್‌ನ ಸೌತ್ ಪಾರ್ಸ್ ಗ್ಯಾಸ್...

ಮುಸ್ಲಿಂ ಪ್ರಯಾಣಿಕರ ಮೇಲೆ ಹಲ್ಲೆ ನಡೆಸಿದ್ದಾಗಿ ಹೇಳಿಕೊಂಡ ಓಲಾ ಚಾಲಕ; ‘ಇಸ್ಲಾಮೋಫೋಬಿಕ್’ ಕುರಿತು ಆತಂಕ ವ್ಯಕ್ತಪಡಿಸಿದ ವಕೀಲ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿನ ಓಲಾ ಕ್ಯಾಬ್ ಪ್ರಯಾಣದ ಸಂದರ್ಭದಲ್ಲಿ ಚಾಲಕನಿಂದ ನನಗೆ ಬೆದರಿಕೆ ಮತ್ತು ಇಸ್ಲಾಮೋಫೋಬಿಕ್ ಹೇಳಿಕೆಗಳು ಬಂದಿವೆ ಎಂದು ಸುಪ್ರೀಂ ಕೋರ್ಟ್ ವಕೀಲರೊಬ್ಬರು ಆರೋಪಿಸಿದ್ದಾರೆ. ಈ ಘಟನೆಯು, ಪ್ರಯಾಣಿಕರ ಸುರಕ್ಷತೆ ಮತ್ತು...

ಬೆಳ್ತಂಗಡಿ | ಮುಸ್ಲಿಂ ಬಾಲಕನ ಮೇಲೆ ಗುಂಪು ಹಲ್ಲೆ ಆರೋಪ; ಬಜರಂಗದಳದ ಕಾರ್ಯಕರ್ತರ ವಿರುದ್ಧ ಪ್ರಕರಣ ದಾಖಲು

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಉಜಿರೆಯ ಜನಾರ್ಧನ ಸ್ವಾಮಿ ದೇವಸ್ಥಾನದ ಬ್ರಹ್ಮಕಲಶೋತ್ಸವಕ್ಕೆ ಸ್ನೇಹಿತರೊಂದಿಗೆ ತೆರಳಿದ್ದ ಮುಸ್ಲಿಂ ಬಾಲಕನ ಮೇಲೆ ಅಮಾನುಷವಾಗಿ ಹಲ್ಲೆ ನಡೆಸಿ, ಅಪಹರಿಸಿ, ಬೆದರಿಕೆ ಹಾಕಿ ಆತ್ಮಹತ್ಯೆಗೆ ಪ್ರೇರೇಪಿಸಿದ ಆರೋಪದಡಿ...

ಉಮರ್ ಖಾಲಿದ್ ಬಂಧನ ನಿರಂಕುಶ; ಕಾನೂನು ಆಧಾರವಿಲ್ಲ: ವಿಶ್ವಸಂಸ್ಥೆ ಕಾರ್ಯಪಡೆ

"ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ (ಜೆಎನ್‌ಯು) ವಿದ್ಯಾರ್ಥಿ ಕಾರ್ಯಕರ್ತ ಮತ್ತು ಸಂಶೊಧನಾ ವಿದ್ಯಾರ್ಥಿ ಉಮರ್ ಖಾಲಿದ್ ಅವರ ಬಂಧನವು ನಿರಂಕುಶವಾಗಿದೆ, ಅದಕ್ಕೆ ಯಾವುದೇ ಕಾನೂನು ಆಧಾರವಿಲ್ಲ" ಎಂದು ವಿಶ್ವಸಂಸ್ಥೆಯ ಸಮಿತಿ ಹೇಳಿದೆ. ಸಾಮಾಜಿಕ ಕಾರ್ಯಕರ್ತರ...

ಮಹಾರಾಷ್ಟ್ರ | ಲೈಂಗಿಕ ದೌರ್ಜನ್ಯ ಆರೋಪ : ಸ್ವಯಂ ಘೋಷಿತ ದೇವಮಾನವನ ಬಂಧನ

ಮಹಿಳೆಯರನ್ನು ಅಸಭ್ಯವಾಗಿ ಚಿತ್ರೀಕರಿಸಿ, ಆ ವಿಡಿಯೋಗಳನ್ನು ಇಟ್ಟುಕೊಂಡು ಲೈಂಗಿಕವಾಗಿ ಶೋಷಣೆ ಮಾಡುತ್ತಿದ್ದ ಆರೋಪದ ಮೇಲೆ ಸ್ವಯಂಘೋಷಿತ ದೇವಮಾನವ ಮತ್ತು ಜ್ಯೋತಿಷಿ ಕ್ಯಾಪ್ಟನ್ ಅಶೋಕ್ ಖಾರಟ್‌ನನ್ನು ಮಹಾರಾಷ್ಟ್ರದ ನಾಸಿಕ್ ಪೊಲೀಸರು ಬಂಧಿಸಿದ್ದಾರೆ ಎಂದು ವರದಿಯಾಗಿದೆ....

‘ಕಾಂಗ್ರೆಸ್ ಜೊತೆ ಬಲವಂತದ ಮದುವೆ ಆಗಿತ್ತು’: ಖರ್ಗೆ ಅವರ ‘ಮೋದಿ ಜೊತೆ ಮದುವೆ’ ಟೀಕೆಗೆ ದೇವೇಗೌಡ ತಿರುಗೇಟು

ಸಂಸತ್ತಿನಲ್ಲಿ ಕಾಂಗ್ರೆಸ್ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ ಅವರ 'ಮದುವೆ' ಮತ್ತು 'ಪ್ರೀತಿ' ಹೇಳಿಕೆಗೆ ಮಾಜಿ ಪ್ರಧಾನಿ ಮತ್ತು ರಾಜ್ಯಸಭಾ ಸಂಸದ ಎಚ್‌ಡಿ ದೇವೇಗೌಡ ಪ್ರತಿಕ್ರಿಯಿಸಿದ್ದಾರೆ. ದೇವೇಗೌಡರು ಕಾಂಗ್ರೆಸ್ ಅನ್ನು "ಪ್ರೀತಿಸಿದರು" ಆದರೆ ಮೋದಿ (ಬಿಜೆಪಿ)...

ರಾಹುಲ್ ಗಾಂಧಿಯನ್ನು ‘ಟಪೋರಿ’ ಎಂದು ಕರೆದ ಬಿಜೆಪಿ ಸಂಸದೆ ಕಂಗನಾ ರಣಾವತ್

ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ವಾಗ್ದಾಳಿ ನಡೆಸಿರುವ ಬಿಜೆಪಿ ಸಂಸದೆ - ನಟಿ ಕಂಗನಾ ರನೌತ್, ಅವರನ್ನು ಟಪೋರಿ ಎಂದು ಕರೆದಿದ್ದಾರೆ. ಅವರ ನಡವಳಿಕೆಯು ಮಹಿಳೆಯರಿಗೆ ಅನಾನುಕೂಲವನ್ನುಂಟು ಮಾಡುತ್ತದೆ ಎಂದು...

ಎಸ್‌ಬಿಐಗೆ ವಂಚನೆ ಪ್ರಕರಣ : ಅನಿಲ್ ಅಂಬಾನಿ ವಿಚಾರಣೆ ನಡೆಸಿದ ಸಿಬಿಐ

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ದೂರಿನ ಮೇರೆಗೆ ರಿಲಯನ್ಸ್ ಕಮ್ಯುನಿಕೇಷನ್ಸ್ ಲಿಮಿಟೆಡ್ ವಿರುದ್ಧ ದಾಖಲಾಗಿರುವ 2,929 ಕೋಟಿ ರೂಪಾಯಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಗುರುವಾರ (ಮಾ.19) ಕೈಗಾರಿಕೋದ್ಯಮಿ ಅನಿಲ್ ಅಂಬಾನಿ ಅವರನ್ನು ಕೇಂದ್ರ...