HomeUncategorizedಉನ್ನಾವ್ ಅತ್ಯಾಚಾರ ಆರೋಪಿ ಶಾಸಕನೂರಲ್ಲಿ ಸೆಂಗರ್ ಕುಟುಂಬದ್ದೇ ಪಾಳೇಗಾರಿಕೆ: ಇಲ್ಲಿದೆ ಗ್ರೌಂಡ್ ರಿಪೋರ್ಟ್

ಉನ್ನಾವ್ ಅತ್ಯಾಚಾರ ಆರೋಪಿ ಶಾಸಕನೂರಲ್ಲಿ ಸೆಂಗರ್ ಕುಟುಂಬದ್ದೇ ಪಾಳೇಗಾರಿಕೆ: ಇಲ್ಲಿದೆ ಗ್ರೌಂಡ್ ರಿಪೋರ್ಟ್

- Advertisement -
- Advertisement -

ಅತ್ಯಾಚಾರ ಮತ್ತು ಕೊಲೆಯತ್ನ ಆರೋಪ ಎದುರಿಸುತ್ತಿರುವ ಬಿಜೆಪಿಯ ಉಚ್ಛಾಟಿತ ಶಾಸಕ ಕುಲದೀಪ್ ಸೆಂಗರ್ ನ ಉನ್ನಾವ್ ಗ್ರಾಮಕ್ಕೆ ‘ದಿ ಕ್ವಿಂಟ್’ ತಂಡ ಭೇಟಿ ನೀಡಿ ಅಲ್ಲಿನ ಭಯಭೀತ ವಾತಾವರಣವನ್ನು ತೆರೆದಿಟ್ಟಿದೆ.

‘ಸೆಂಗರ್ ಗಳ ಹುಕುಂ ಇಲ್ಲದೇ ಇಲ್ಲಿ ಹುಲ್ಲುಕಡ್ಡಿ ಕೂಡ ಚಲಿಸುವಂತಿಲ್ಲ. ಅವರ ಒಪ್ಪಿಗೆಯಿಲ್ಲದೇ ತುಂಡುಭೂಮಿ ಮಾರಂಗಿಲ್ಲ, ಕೊಳ್ಳಂಗಿಲ್ಲ….’ – ಎನ್ನುತ್ತಾನೆ ಗ್ರಾಮದ ಯುವಕ ಅಜೀತ್.

ಇದು ಉನ್ನಾವ್. ಅತ್ಯಾಚಾರ ಮತ್ತು ಕೊಲೆಯತ್ನದ ಆರೋಪಿ ಶಾಸಕ ಕುಲದೀಪ್ ಸೆಂಗರ್ ನ ಗ್ರಾಮ. ಇಲ್ಲಿ ಶಾಸಕ ಮತ್ತು ಕುಟುಂಬದ ವಿರುದ್ಧ ಯಾರೂ ಮಾತಾಡುವಂತಿಲ್ಲ. ಈ ಕುಟುಂಬದ ನಜರ್ ಇಲ್ಲದೇ ಏನೂ ನಡೆಯುವಂತಿಲ್ಲ. ಒಂಥರಾ ಹಳೇ ಸಿನಿಮಾಗಳಲ್ಲಿ ಗೌಡರ ದರ್ಪ, ಪಾಳೇಗಾರಿಕೆಯಡಿ ನಲುಗುವ ಊರಿನಂತಿದೆ ಉನ್ನಾವ್.

ಸತತ ಸಾರ್ವಜನಿಕ ಒತ್ತಾಯ ಮತ್ತು ಒತ್ತಡಗಳ ಪರಿಣಾಮವಾಗಿ ಈಗ ಬಿಜೆಪಿ ಕುಲದೀಪ್ ಸೆಂಗರ್ ನನ್ನು ಪಕ್ಷದಿಂದ ಉಚ್ಛಾಟಿಸಿದೆ. ಅತ್ಯಾಚಾರ ಆರೋಪಕ್ಕೆ ಸಿಕ್ಕ 14 ತಿಂಗಳ ಬಳಿಕ ಬಿಜೆಪಿ ಈ ಕ್ರಮಕ್ಕೆ ಮುಂದಾಗಿದೆ. ಈ ಶಾಸಕರ ಉನ್ನಾವ್ 30 ಸಾವಿರದಷ್ಟು ಜನಸಂಖ್ಯೆ ಹೊಂದಿರುವ ದೊಡ್ಡ ಗ್ರಾಮವಾಗಿದ್ದು ಇಲ್ಲಿ ಯಾರೂ ಶಾಸಕರಿಗೆ ಅಹಿತ ಅನಿಸುವುದನ್ನು ಮಾತಾಡಲು ಒಲ್ಲರು, ಶಾಸಕರ ನಜರ್ ಗೆ ಬೀಳದಂತೆ ಬದುಕಲು ಯತ್ನಿಸುವವರು.

60 ವರ್ಷದಿಂದ ಸೆಂಗರ್ ಕುಟುಂಬದ್ದೇ ರಾಜಕೀಯ ಪಾರುಪತ್ಯ!

ಶಾಸಕ ಸೆಂಗರ್ ಅಜ್ಜ (ತಾಯಿಯ ತಂದೆ) 37 ವರ್ಷಗಳವರೆಗೆ ಗ್ರಾಮದ ಮುಖ್ಯಸ್ಥನಾಗಿದ್ದ. ನಂತರ ಕುಲದೀಪ್ ರಾಜಕೀಯ ಶುರು ಮಾಡಿದ. ಈಗ 4ನೇ ಬಾರಿ ಶಾಸಕನಾಗಿ ಆಯ್ಕೆಯಾಗಿದ್ದಾನೆ. ಸೆಂಗರ್ ತಾಯಿ ಎರಡು ಸಲ ಗ್ರಾಮ್ ಪ್ರಧಾನ್ ಆಗಿದ್ದರೆ, ಸಂಗರ್ ಸೊಸೆ, ಸಹೋದರನ ಪತ್ನಿ-ಹೀಗೆ ಗ್ರಾಮ್ ಪ್ರಧಾನ್ ಅಧಿಕಾರ ಅವರ ಕುಟುಂಬದ ಬಳಿಯೇ ಇದೆ ಎಂದು ಅಲ್ಲಿನ ಕೆಲವರು ಹೇಳುವಾಗ, ತಮ್ಮನ್ನು ಯಾರೂ ಗಮನಿಸುತ್ತಿಲ್ಲ ಎಂಬುದನ್ನು ಖಚಿತ ಮಾಡಿಕೊಳ್ಳುತ್ತಾರೆ.

ಆರಂಭದಲ್ಲಿ ಕಾಂಗ್ರೆಸ್‍ನಲ್ಲಿದ್ದ ಕುಲದೀಪ್ ಪಾರ್ಟಿಗಳನ್ನು ಬದಲಿಸುತ್ತಲೇ ಬಂದು ಈಗ ಬಿಜೆಪಿಯ ಪ್ರಭಾವಿ ಶಾಸಕನೂ, ಮುಖ್ಯಮಂತ್ರಿ ಯೋಗಿಯವರಿಗೆ ಆಪ್ತನೂ ಆಗಿದ್ದಾನೆ. ಅಕ್ರಮ ಕಲ್ಲು ಗಣಿಗಾರಿಕೆಯಿಂದ ಲೂಟಿ ಮಾಡುತ್ತಿರುವ ಈ ಕುಟುಂಬ ಪೊಲೀಸ್ ಅಧಿಕಾರಿಗಳ ಮೇಲೆಯೇ ದಾಳಿಗಳನ್ನು ಮಾಡುತ್ತ ಬಂದಿದೆ. 2004ರಲ್ಲಿ ಕುಲದೀಪ್ ಸೆಂಗರ್ ಸಹೋದರ ಅತುಲ್ ಜಿಲ್ಲಾ ಉಪ ಪೊಲೀಸ್ ವರಿಷ್ಠಾಧಿಕಾರಿ ರಾಮಲಾಲ್ ವರ್ಮಾ ಅವರ ಹೊಟ್ಟೆಗೆ ಗುಂಡು ಹೊಡೆದಿದ್ದ. ಈ ಕುಟುಂಬದ ಒತ್ತಡಕ್ಕೆ ಮಣಿದು ರಾಮಲಾಲ್ ವರ್ಮಾರೇ ದೂರು ಹಿಂಪಡೆಯಬೇಕಾಗಿತು.

ಪೊಲೀಸ್ ಅಧಿಕಾರಿಗಳ ಮೇಲೆಯೇ ಏರಿ ಹೋಗುವ ಈ ಕುಟುಂಬ ಸಾಮಾನ್ಯ ಜನರನ್ನು ಅದೆಷ್ಟು ಭಯಭೀತಿಯಲ್ಲಿ ಇಟ್ಟಿರಬಹುದು ಎಂದು ಊಹಿಸಿ. ಈ ಭೇಟಿಯ ವೇಳೆ ನಮ್ಮ ತಂಡಕ್ಕೆ ಅದರ ದರ್ಶನವೂ ಆಯಿತು. ‘ಪರಿಸ್ಥಿತಿ ಹೀಗಿರುವಾಗ ಅತ್ಯಾಚಾರ ಸಂತ್ರಸ್ತೆಯ ಕುಟುಂಬಕ್ಕೆ ಎಂತಹ ಹಿಂಸೆ ಕೊಟ್ಟಿರಬಹುದು ಊಹಿಸಿ’ ಎಂದ ಯುವಕ ಅಜಿತ್. (ಹೆಸರು ಬದಲಿಸಿದೆ).

2018ರಲ್ಲಿ ಇದೇ ಅತುಲ್ ಸೆಂಗರ್ ಅತ್ಯಾಚಾರ ಸಂತ್ರಸ್ತೆಯ ತಂದೆಯನ್ನು ಮರಕ್ಕೆ ಕಟ್ಟಿ ವಿಪರೀತ ಹಡೆದಿದ್ದ ಎಂದು ಹೆಸರು ಹೇಳಲು ಇಚ್ಛಿಸದ ಜನ ಹೇಳುತ್ತಾರೆ. ಆಗ ಬಹುಶಃ ಒಳಗಾಯಗಳಾಗಿದ್ದವು ಎನಿಸುತ್ತದೆ. ಮುಂದೆ ಐದೇ ದಿನದಲ್ಲಿ ಆಕೆಯ ತಂದೆ ಪೊಲೀಸ್ ಲಾಕಪ್ಪಿನಲ್ಲಿ ಮೃತಪಟ್ಟರು. ಪೊಲೀಸ್ ಸ್ಟೇಷನ್ನಿನಲ್ಲೂ ಅತುಲ್ ಒತ್ತಡ ಹೇರಿ ಮತ್ತೆ ದೌರ್ಜನ್ಯ ನಡೆಸಿದ್ದಾನೆ ಎಂಬ ಆರೋಪವೂ ಇದೆ. ಈ ಕುರಿತು ದೂರು ದಾಖಲಾಗಿದೆ.

ಅತುಲ್ ಮರಕ್ಕೆ ಕಟ್ಟಿ ದೌರ್ಜನ್ಯ ನಡೆಸಿದಾಗ ದೂರು ಕೊಟ್ಟರೂ ಬಂಧಿಸದ ಪೊಲೀಸರು, ಸಂತ್ರಸ್ತೆಯ ತಂದೆಯನ್ನೇ, ‘ ಅಕ್ರಮವಾಗಿ ಶಸ್ತ್ರಾಸ್ತ ಹೊಂದಿದ್ದ’ ಎಂದು ಆರೋಪಿಸಿ ಬಂಧಿಸಿದ್ದರು. ಶಾಸಕ ಮತ್ತು ಆತನ ಇಬ್ಬರು ಸಹೋದರರ ಈ ದರ್ಪ ಮತ್ತು ಪಾಳೇಗಾರಿಕೆಯ ಬಗ್ಗೆ ಭಯದಿಂದಲೇ ಇಲ್ಲಿನ ಜನರು ಹೇಳುತ್ತಾರೆ.

ಈಗ ಶಾಸಕನ ಅತ್ಯಾಚಾರ, ಕೊಲೆಯತ್ನ, ಸಂಚು ಕೇಸುಗಳಲ್ಲಿ, ಇನ್ನಿಬ್ಬರು ಸಹೋದರರು ಕೊಲೆಯತ್ನ ಕೇಸು ಎದುರಿಸುತ್ತಿದ್ದಾರೆ. ಇಷ್ಟೆಲ್ಲದರ ನಂತರವೂ ಶಾಸಕನ ವಿರುದ್ಧ ಇಲ್ಲಿ ಯಾರೂ ಸೊಲ್ಲೆತ್ತುವಂತಿಲ್ಲ. ಉತ್ತರ ಪ್ರದೇಶದ ಪಕ್ಷೇತರ ಶಾಸಕ, ಡಾನ್ ‘ರಾಜಾ ಭಯ್ಯಾ’ನ ಮಾದರಿಯಲ್ಲೇ ಕುಲದೀಪ್ ಕೂಡ ಜನರನ್ನು ಭಯದಲ್ಲಿಟ್ಟು ನಾಲ್ಕು ಸಲ ಗೆದ್ದಿದ್ದಾನೆ.

ಆಧಾರ: ದಿ ಕ್ವಿಂಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸ್ಥಳಾಂತರಗೊಂಡ ಅಕ್ಬರ್ ನಗರ ನಿವಾಸಿಗಳನ್ನು SIR ನಿಂದ ಹೊರಗಿಟ್ಟಿರುವ ಬಗ್ಗೆ ಪರಿಶೀಲಿಸಲು ಲಕ್ನೋ ಚುನಾವಣಾ ಅಧಿಕಾರಿಗೆ ಸುಪ್ರೀಂ ಸೂಚನೆ

ಉತ್ತರ ಪ್ರದೇಶದಲ್ಲಿ ತಮ್ಮ ಮನೆಗಳನ್ನು ನೆಲಸಮಗೊಳಿಸಿ, ಸ್ಥಳಾಂತರದ ನಂತರ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ನಿಂದ ತಮ್ಮನ್ನು ಹೊರಗಿಡಲಾಗಿದೆ ಎಂದು ಆರೋಪಿಸಿ ಅಕ್ಬರ್ ನಗರದ ಮಾಜಿ ನಿವಾಸಿಗಳು ಎತ್ತಿರುವ ದೂರುಗಳನ್ನು...

‘ವಯಸ್ಕರು ಒಟ್ಟಿಗೆ ವಾಸಿಸಲು ನಿರ್ಧರಿಸುವುದು ಅಪರಾಧವಲ್ಲ..’; ಅಂತರಧರ್ಮೀಯ ಜೋಡಿ ಕುರಿತು ಕೋರ್ಟ್ ಮಹತ್ವದ ತೀರ್ಪು

"ಅಂತರ್ಧರ್ಮೀಯರಾದ ಇಬ್ಬರು ವಯಸ್ಕ ವ್ಯಕ್ತಿಗಳು, ಅವರು ತಮ್ಮ ಸ್ವತಂತ್ರ ಇಚ್ಛೆಯಿಂದ ಒಟ್ಟಿಗೆ ವಾಸಿಸಲು ನಿರ್ಧರಿಸುತ್ತಾರೆ, ಉತ್ತರ ಪ್ರದೇಶದ ಮತಾಂತರ ವಿರೋಧಿ ಕಾನೂನು ಅವರನ್ನು ತಡೆಯಲು ಅಥವಾ ಅಂತರಧರ್ಮೀಯ ವಿವಾಹಗಳನ್ನು ನಿಷೇಧಿಸಲು ಸಾಧ್ಯವಿಲ್ಲ" ಎಂದು...

ಗೋರಖ್‌ಪುರದ ಏಮ್ಸ್‌ನಲ್ಲಿ ನಾಗಾಲ್ಯಾಂಡ್ ವೈದ್ಯೆಗೆ ಕಿರುಕುಳ; ಜನಾಂಗೀಯ ನಿಂದನೆ

ಉತ್ತರ ಪ್ರದೇಶದ ಗೋರಖ್‌ಪುರದ ಏಮ್ಸ್‌ನಲ್ಲಿ ನಿಯೋಜಿತರಾಗಿದ್ದ ನಾಗಾಲ್ಯಾಂಡ್‌ನ ಮೂರನೇ ವರ್ಷದ ನಿವಾಸಿ ವೈದ್ಯರ ಮೇಲೆ ಭಾನುವಾರ ಸಂಜೆ ಸಂಸ್ಥೆಯ ಆವರಣದ ಬಳಿ ಮೂವರು ಜನಾಂಗೀಯ ನಿಂದನೆ, ಕಿರುಕುಳ ಮತ್ತು ದೈಹಿಕ ಹಲ್ಲೆ ನಡೆಸಿದ್ದಾರೆ...

‘2026 ರಲ್ಲಿ ಸಮುದ್ರವನ್ನು ಪ್ರಾಬಲ್ಯಗೊಳಿಸುತ್ತೇವೆ’: ಪಹಲ್ಗಾಮ್ ದಾಳಿಯ ಮಾಸ್ಟರ್ ಮೈಂಡ್ ಸೈಫುಲ್ಲಾ ಕಸೂರಿಯಿಂದ ಭಾರತಕ್ಕೆ ಬಹಿರಂಗ ಬೆದರಿಕೆ

2008ರ ಮುಂಬೈ ದಾಳಿಯ ಭೀಕರತೆಯನ್ನು ಪ್ರತಿಧ್ವನಿಸುವ ಕಟು ಬೆದರಿಕೆಯಲ್ಲಿ, ಪಾಕಿಸ್ತಾನ ಮೂಲದ ಭಯೋತ್ಪಾದಕ ಸಂಘಟನೆ ಲಷ್ಕರ್-ಎ-ತೊಯ್ಬಾ (LeT) ಭಾರತದಲ್ಲಿ ಮತ್ತೊಮ್ಮೆ ಸಮುದ್ರ ಮಾರ್ಗವನ್ನು ಬಳಸಿಕೊಂಡು 26/11 ಮಾದರಿಯ ದಾಳಿಯನ್ನು ನಡೆಸುವುದಾಗಿ ಬೆದರಿಕೆ ಹಾಕಿದೆ...

ಕೇರಳ ಹೆಸರು ಇನ್ನು ಮುಂದೆ ‘ಕೇರಳಂ’; ಕೇಂದ್ರ ಸಚಿವ ಸಂಪುಟ ಅನುಮೋದನೆ

ವಿಧಾನಸಭೆ ಚುನಾವಣೆ ಸಮೀಪಿಸುತ್ತಿರುವ ಹೊತ್ತಿನಲ್ಲಿ ಮಹತ್ವದ ಬೆಳವಣಿಗೆಯೊಂದರಲ್ಲಿ, ರಾಜ್ಯದ ಹೆಸರನ್ನು ಕೇರಳಂ ಎಂದು ಬದಲಾಯಿಸುವ ಪ್ರಸ್ತಾವನೆಗೆ ಕೇಂದ್ರ ಸಚಿವ ಸಂಪುಟ ಮಂಗಳವಾರ ಅನುಮೋದನೆ ನೀಡಿದೆ. "ಕೇರಳವನ್ನು ಕೇರಳಂ ಎಂದು ಮರುನಾಮಕರಣ ಮಾಡಲು ಕೇಂದ್ರ...

ನಾಡೋಜ ಗೌರವ ತಿರಸ್ಕರಿಸಿದ ಹಿರಿಯ ಚಿಂತಕ ಡಾ ಜಿ. ರಾಮಕೃಷ್ಣ; ರಾಜ್ಯಪಾಲರಿಂದ ಗೌರವ ಸ್ವೀಕರಿಸದಿರಲು ನಿರ್ಧಾರ

ಹಿರಿಯ ಚಿಂತಕ ಡಾ.ಜಿ.ರಾಮಕೃಷ್ಣ ಅವರು ಹಂಪಿ ಕನ್ನಡ ವಿಶ್ವವಿದ್ಯಾಲಯ ಕೊಡಮಾಡುವ ನಾಡೋಜ ಪ್ರಶಸ್ತಿಯನ್ನು ರಾಜ್ಯಪಾಲರಿಂದ ಸ್ವೀಕರಿಸಲು ನಿರಾಕರಿಸಿದ್ದಾರೆ. ಹಂಪಿ ಕನ್ನಡ ವಿಶ್ವವಿದ್ಯಾಲಯದ ವಿದ್ಯಾರಣ್ಯ ಕ್ಯಾಂಪಸ್‌ನ ‘ನವರಂಗ’ ಬಯಲು ರಂಗಮಂದಿರದಲ್ಲಿ ಮಂಗಳವಾರ ನಡೆಯುವ 34ನೇ ನುಡಿಹಬ್ಬದಲ್ಲಿ...

‘ಕೇರಳ ಸಂಪೂರ್ಣ ಸಾಮರಸ್ಯದಿಂದ ಬದುಕುತ್ತಿದೆ, ಸಿನಿಮಾದಲ್ಲಿ ತಪ್ಪು ಚಿತ್ರಣವಿದೆ’: ‘ದಿ ಕೇರಳ ಸ್ಟೋರಿ 2’ ಕುರಿತು ಕೇರಳ ಹೈಕೋರ್ಟ್

ವಿವಾದಾತ್ಮಕ 'ದಿ ಕೇರಳ ಸ್ಟೋರಿ 2 -ಗೋಸ್ ಬಿಯಾಂಡ್' ಸಿನಿಮಾಗೆ ಸರ್ಟಿಫಿಕೇಟ್ ನೀಡಿರುವ ಕುರಿತು ಕೇರಳ ಹೈಕೋರ್ಟ್ ಮಂಗಳವಾರ (ಫೆ.24) ಕೇಂದ್ರ ಚಲನಚಿತ್ರ ಪ್ರಮಾಣೀಕರಣ ಮಂಡಳಿಯನ್ನು (ಸಿಬಿಎಫ್‌ಸಿ) ಪ್ರಶ್ನಿಸಿದೆ ಎಂದು ಕಾನೂನು ಸುದ್ದಿ...

‘ಸರ್ವಾಧಿಕಾರಿ ಪ್ರವೃತ್ತಿ, ಹೇಡಿತನಕ್ಕೆ ಸಾಕ್ಷಿ’ : ಯುವ ಕಾಂಗ್ರೆಸ್‌ ನಾಯಕರ ಬಂಧನ ಖಂಡಿಸಿದ ರಾಹುಲ್ ಗಾಂಧಿ

ಯುವ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಉದಯ್ ಭಾನು ಚಿಬ್ ಮತ್ತು ಪಕ್ಷದ ಇತರ ಸದಸ್ಯರ ಬಂಧನವನ್ನು ತೀವ್ರವಾಗಿ ಖಂಡಿಸಿರುವ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, "ಇದು ಸರ್ವಾಧಿಕಾರಿ ಪ್ರವೃತ್ತಿ ಮತ್ತು...

‘ಸ್ವಾತಂತ್ರ್ಯದ 75 ವರ್ಷಗಳ ನಂತರವೂ ಭಾರತದ ಸಾಮಾಜಿಕ ರಚನೆಯಲ್ಲಿ ಬಿರುಕುಗಳು ಆಳವಾಗಿ ಅಡಗಿದೆ’; ನ್ಯಾಯಮೂರ್ತಿ ಉಜ್ವಲ್  ಭೂಯಾನ್

ಹೊಸದಿಲ್ಲಿ: ಭಾರತದ ಸಂವಿಧಾನವು ಪ್ರತಿಯೊಬ್ಬರಿಗೂ ಸಮಾನತೆ ಮತ್ತು ಘನತೆಯ ಭರವಸೆ ನೀಡುತ್ತದೆ. ಆದರೆ ಸ್ವಾತಂತ್ರ್ಯದ 75 ವರ್ಷಗಳ ನಂತರವೂ ಭಾರತದ ಸಾಮಾಜಿಕ ರಚನೆಯಲ್ಲಿ ಬಿರುಕುಗಳು ಆಳವಾಗಿ ಅಡಗಿದೆ ಎಂದು ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ...

ಹೈದರಾಬಾದ್ ವಿಶ್ವವಿದ್ಯಾಲಯದಲ್ಲಿ ದಲಿತ ವಿದ್ಯಾರ್ಥಿಯ ಮೇಲೆ ಹಲ್ಲೆ ಆರೋಪ; ಎಎಸ್ಎ ಪ್ರತಿಭಟನೆ

ದಲಿತ ವಿದ್ಯಾರ್ಥಿಯ ಮೇಲೆ ಜಾತಿ ಆಧಾರಿತ ಹಲ್ಲೆ ನಡೆದಿದ್ದರೂ ಪ್ರಕರಣದಲ್ಲಿ ಹೈದರಾಬಾದ್ ವಿಶ್ವವಿದ್ಯಾಲಯದ (ಯುಒಎಚ್) ಆಡಳಿತಾತ್ಮಕ ನಿಷ್ಕ್ರಿಯತೆ ಇದೆ ಎಂದು ಆರೋಪಿಸಿ, ಅಂಬೇಡ್ಕರ್ ವಿದ್ಯಾರ್ಥಿ ಸಂಘ (ಎಎಸ್ಎ) ಸೋಮವಾರ (ಫೆ.23) ಪ್ರತಿಭಟನೆ ನಡೆಸಿತು...