HomeUncategorizedಉನ್ನಾವ್ ಅತ್ಯಾಚಾರ ಆರೋಪಿ ಶಾಸಕನೂರಲ್ಲಿ ಸೆಂಗರ್ ಕುಟುಂಬದ್ದೇ ಪಾಳೇಗಾರಿಕೆ: ಇಲ್ಲಿದೆ ಗ್ರೌಂಡ್ ರಿಪೋರ್ಟ್

ಉನ್ನಾವ್ ಅತ್ಯಾಚಾರ ಆರೋಪಿ ಶಾಸಕನೂರಲ್ಲಿ ಸೆಂಗರ್ ಕುಟುಂಬದ್ದೇ ಪಾಳೇಗಾರಿಕೆ: ಇಲ್ಲಿದೆ ಗ್ರೌಂಡ್ ರಿಪೋರ್ಟ್

- Advertisement -
- Advertisement -

ಅತ್ಯಾಚಾರ ಮತ್ತು ಕೊಲೆಯತ್ನ ಆರೋಪ ಎದುರಿಸುತ್ತಿರುವ ಬಿಜೆಪಿಯ ಉಚ್ಛಾಟಿತ ಶಾಸಕ ಕುಲದೀಪ್ ಸೆಂಗರ್ ನ ಉನ್ನಾವ್ ಗ್ರಾಮಕ್ಕೆ ‘ದಿ ಕ್ವಿಂಟ್’ ತಂಡ ಭೇಟಿ ನೀಡಿ ಅಲ್ಲಿನ ಭಯಭೀತ ವಾತಾವರಣವನ್ನು ತೆರೆದಿಟ್ಟಿದೆ.

‘ಸೆಂಗರ್ ಗಳ ಹುಕುಂ ಇಲ್ಲದೇ ಇಲ್ಲಿ ಹುಲ್ಲುಕಡ್ಡಿ ಕೂಡ ಚಲಿಸುವಂತಿಲ್ಲ. ಅವರ ಒಪ್ಪಿಗೆಯಿಲ್ಲದೇ ತುಂಡುಭೂಮಿ ಮಾರಂಗಿಲ್ಲ, ಕೊಳ್ಳಂಗಿಲ್ಲ….’ – ಎನ್ನುತ್ತಾನೆ ಗ್ರಾಮದ ಯುವಕ ಅಜೀತ್.

ಇದು ಉನ್ನಾವ್. ಅತ್ಯಾಚಾರ ಮತ್ತು ಕೊಲೆಯತ್ನದ ಆರೋಪಿ ಶಾಸಕ ಕುಲದೀಪ್ ಸೆಂಗರ್ ನ ಗ್ರಾಮ. ಇಲ್ಲಿ ಶಾಸಕ ಮತ್ತು ಕುಟುಂಬದ ವಿರುದ್ಧ ಯಾರೂ ಮಾತಾಡುವಂತಿಲ್ಲ. ಈ ಕುಟುಂಬದ ನಜರ್ ಇಲ್ಲದೇ ಏನೂ ನಡೆಯುವಂತಿಲ್ಲ. ಒಂಥರಾ ಹಳೇ ಸಿನಿಮಾಗಳಲ್ಲಿ ಗೌಡರ ದರ್ಪ, ಪಾಳೇಗಾರಿಕೆಯಡಿ ನಲುಗುವ ಊರಿನಂತಿದೆ ಉನ್ನಾವ್.

ಸತತ ಸಾರ್ವಜನಿಕ ಒತ್ತಾಯ ಮತ್ತು ಒತ್ತಡಗಳ ಪರಿಣಾಮವಾಗಿ ಈಗ ಬಿಜೆಪಿ ಕುಲದೀಪ್ ಸೆಂಗರ್ ನನ್ನು ಪಕ್ಷದಿಂದ ಉಚ್ಛಾಟಿಸಿದೆ. ಅತ್ಯಾಚಾರ ಆರೋಪಕ್ಕೆ ಸಿಕ್ಕ 14 ತಿಂಗಳ ಬಳಿಕ ಬಿಜೆಪಿ ಈ ಕ್ರಮಕ್ಕೆ ಮುಂದಾಗಿದೆ. ಈ ಶಾಸಕರ ಉನ್ನಾವ್ 30 ಸಾವಿರದಷ್ಟು ಜನಸಂಖ್ಯೆ ಹೊಂದಿರುವ ದೊಡ್ಡ ಗ್ರಾಮವಾಗಿದ್ದು ಇಲ್ಲಿ ಯಾರೂ ಶಾಸಕರಿಗೆ ಅಹಿತ ಅನಿಸುವುದನ್ನು ಮಾತಾಡಲು ಒಲ್ಲರು, ಶಾಸಕರ ನಜರ್ ಗೆ ಬೀಳದಂತೆ ಬದುಕಲು ಯತ್ನಿಸುವವರು.

60 ವರ್ಷದಿಂದ ಸೆಂಗರ್ ಕುಟುಂಬದ್ದೇ ರಾಜಕೀಯ ಪಾರುಪತ್ಯ!

ಶಾಸಕ ಸೆಂಗರ್ ಅಜ್ಜ (ತಾಯಿಯ ತಂದೆ) 37 ವರ್ಷಗಳವರೆಗೆ ಗ್ರಾಮದ ಮುಖ್ಯಸ್ಥನಾಗಿದ್ದ. ನಂತರ ಕುಲದೀಪ್ ರಾಜಕೀಯ ಶುರು ಮಾಡಿದ. ಈಗ 4ನೇ ಬಾರಿ ಶಾಸಕನಾಗಿ ಆಯ್ಕೆಯಾಗಿದ್ದಾನೆ. ಸೆಂಗರ್ ತಾಯಿ ಎರಡು ಸಲ ಗ್ರಾಮ್ ಪ್ರಧಾನ್ ಆಗಿದ್ದರೆ, ಸಂಗರ್ ಸೊಸೆ, ಸಹೋದರನ ಪತ್ನಿ-ಹೀಗೆ ಗ್ರಾಮ್ ಪ್ರಧಾನ್ ಅಧಿಕಾರ ಅವರ ಕುಟುಂಬದ ಬಳಿಯೇ ಇದೆ ಎಂದು ಅಲ್ಲಿನ ಕೆಲವರು ಹೇಳುವಾಗ, ತಮ್ಮನ್ನು ಯಾರೂ ಗಮನಿಸುತ್ತಿಲ್ಲ ಎಂಬುದನ್ನು ಖಚಿತ ಮಾಡಿಕೊಳ್ಳುತ್ತಾರೆ.

ಆರಂಭದಲ್ಲಿ ಕಾಂಗ್ರೆಸ್‍ನಲ್ಲಿದ್ದ ಕುಲದೀಪ್ ಪಾರ್ಟಿಗಳನ್ನು ಬದಲಿಸುತ್ತಲೇ ಬಂದು ಈಗ ಬಿಜೆಪಿಯ ಪ್ರಭಾವಿ ಶಾಸಕನೂ, ಮುಖ್ಯಮಂತ್ರಿ ಯೋಗಿಯವರಿಗೆ ಆಪ್ತನೂ ಆಗಿದ್ದಾನೆ. ಅಕ್ರಮ ಕಲ್ಲು ಗಣಿಗಾರಿಕೆಯಿಂದ ಲೂಟಿ ಮಾಡುತ್ತಿರುವ ಈ ಕುಟುಂಬ ಪೊಲೀಸ್ ಅಧಿಕಾರಿಗಳ ಮೇಲೆಯೇ ದಾಳಿಗಳನ್ನು ಮಾಡುತ್ತ ಬಂದಿದೆ. 2004ರಲ್ಲಿ ಕುಲದೀಪ್ ಸೆಂಗರ್ ಸಹೋದರ ಅತುಲ್ ಜಿಲ್ಲಾ ಉಪ ಪೊಲೀಸ್ ವರಿಷ್ಠಾಧಿಕಾರಿ ರಾಮಲಾಲ್ ವರ್ಮಾ ಅವರ ಹೊಟ್ಟೆಗೆ ಗುಂಡು ಹೊಡೆದಿದ್ದ. ಈ ಕುಟುಂಬದ ಒತ್ತಡಕ್ಕೆ ಮಣಿದು ರಾಮಲಾಲ್ ವರ್ಮಾರೇ ದೂರು ಹಿಂಪಡೆಯಬೇಕಾಗಿತು.

ಪೊಲೀಸ್ ಅಧಿಕಾರಿಗಳ ಮೇಲೆಯೇ ಏರಿ ಹೋಗುವ ಈ ಕುಟುಂಬ ಸಾಮಾನ್ಯ ಜನರನ್ನು ಅದೆಷ್ಟು ಭಯಭೀತಿಯಲ್ಲಿ ಇಟ್ಟಿರಬಹುದು ಎಂದು ಊಹಿಸಿ. ಈ ಭೇಟಿಯ ವೇಳೆ ನಮ್ಮ ತಂಡಕ್ಕೆ ಅದರ ದರ್ಶನವೂ ಆಯಿತು. ‘ಪರಿಸ್ಥಿತಿ ಹೀಗಿರುವಾಗ ಅತ್ಯಾಚಾರ ಸಂತ್ರಸ್ತೆಯ ಕುಟುಂಬಕ್ಕೆ ಎಂತಹ ಹಿಂಸೆ ಕೊಟ್ಟಿರಬಹುದು ಊಹಿಸಿ’ ಎಂದ ಯುವಕ ಅಜಿತ್. (ಹೆಸರು ಬದಲಿಸಿದೆ).

2018ರಲ್ಲಿ ಇದೇ ಅತುಲ್ ಸೆಂಗರ್ ಅತ್ಯಾಚಾರ ಸಂತ್ರಸ್ತೆಯ ತಂದೆಯನ್ನು ಮರಕ್ಕೆ ಕಟ್ಟಿ ವಿಪರೀತ ಹಡೆದಿದ್ದ ಎಂದು ಹೆಸರು ಹೇಳಲು ಇಚ್ಛಿಸದ ಜನ ಹೇಳುತ್ತಾರೆ. ಆಗ ಬಹುಶಃ ಒಳಗಾಯಗಳಾಗಿದ್ದವು ಎನಿಸುತ್ತದೆ. ಮುಂದೆ ಐದೇ ದಿನದಲ್ಲಿ ಆಕೆಯ ತಂದೆ ಪೊಲೀಸ್ ಲಾಕಪ್ಪಿನಲ್ಲಿ ಮೃತಪಟ್ಟರು. ಪೊಲೀಸ್ ಸ್ಟೇಷನ್ನಿನಲ್ಲೂ ಅತುಲ್ ಒತ್ತಡ ಹೇರಿ ಮತ್ತೆ ದೌರ್ಜನ್ಯ ನಡೆಸಿದ್ದಾನೆ ಎಂಬ ಆರೋಪವೂ ಇದೆ. ಈ ಕುರಿತು ದೂರು ದಾಖಲಾಗಿದೆ.

ಅತುಲ್ ಮರಕ್ಕೆ ಕಟ್ಟಿ ದೌರ್ಜನ್ಯ ನಡೆಸಿದಾಗ ದೂರು ಕೊಟ್ಟರೂ ಬಂಧಿಸದ ಪೊಲೀಸರು, ಸಂತ್ರಸ್ತೆಯ ತಂದೆಯನ್ನೇ, ‘ ಅಕ್ರಮವಾಗಿ ಶಸ್ತ್ರಾಸ್ತ ಹೊಂದಿದ್ದ’ ಎಂದು ಆರೋಪಿಸಿ ಬಂಧಿಸಿದ್ದರು. ಶಾಸಕ ಮತ್ತು ಆತನ ಇಬ್ಬರು ಸಹೋದರರ ಈ ದರ್ಪ ಮತ್ತು ಪಾಳೇಗಾರಿಕೆಯ ಬಗ್ಗೆ ಭಯದಿಂದಲೇ ಇಲ್ಲಿನ ಜನರು ಹೇಳುತ್ತಾರೆ.

ಈಗ ಶಾಸಕನ ಅತ್ಯಾಚಾರ, ಕೊಲೆಯತ್ನ, ಸಂಚು ಕೇಸುಗಳಲ್ಲಿ, ಇನ್ನಿಬ್ಬರು ಸಹೋದರರು ಕೊಲೆಯತ್ನ ಕೇಸು ಎದುರಿಸುತ್ತಿದ್ದಾರೆ. ಇಷ್ಟೆಲ್ಲದರ ನಂತರವೂ ಶಾಸಕನ ವಿರುದ್ಧ ಇಲ್ಲಿ ಯಾರೂ ಸೊಲ್ಲೆತ್ತುವಂತಿಲ್ಲ. ಉತ್ತರ ಪ್ರದೇಶದ ಪಕ್ಷೇತರ ಶಾಸಕ, ಡಾನ್ ‘ರಾಜಾ ಭಯ್ಯಾ’ನ ಮಾದರಿಯಲ್ಲೇ ಕುಲದೀಪ್ ಕೂಡ ಜನರನ್ನು ಭಯದಲ್ಲಿಟ್ಟು ನಾಲ್ಕು ಸಲ ಗೆದ್ದಿದ್ದಾನೆ.

ಆಧಾರ: ದಿ ಕ್ವಿಂಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಮತಾ ಬ್ಯಾನರ್ಜಿಗೆ ಬಿಗ್ ಶಾಕ್: ನೇಮಕಗೊಂಡ ತಿಂಗಳಲ್ಲೇ ಟಿಎಂಸಿ ರಾಜ್ಯಾಧ್ಯಕ್ಷೆ ಚಂದ್ರಿಮಾ ಭಟ್ಟಾಚಾರ್ಯ ರಾಜೀನಾಮೆ

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಹೀನಾಯ ಸೋಲಿನ ಹಿನ್ನೆಲೆಯಲ್ಲಿ, ಅತ್ಯಂತ ನಿರ್ಣಾಯಕವಾದ ಸಾಂಸ್ಥಿಕ ಜವಾಬ್ದಾರಿಗೆ ನೇಮಕಗೊಂಡ ಕೇವಲ ಒಂದು ತಿಂಗಳ ಒಳಗಾಗಿಯೇ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ರಾಜ್ಯ ಘಟಕದ ಅಧ್ಯಕ್ಷೆ ಚಂದ್ರಿಮಾ...

ಜಿಲ್ಲಾ ನ್ಯಾಯಾಧೀಶೆ ತಬಸ್ಸುಮ್ ಖಾನ್‌ಗೆ ಬಲಪಂಥೀಯರಿಂದ ಬೆದರಿಕೆ : ಗಂಭೀರವಾಗಿ ಪರಿಗಣಿಸಿದ ಹೈಕೋರ್ಟ್

ನರ್ಮದಾಪುರಂ ಜಿಲ್ಲಾ ನ್ಯಾಯಾಧೀಶರಾದ ತಬಸ್ಸುಮ್ ಖಾನ್ ಅವರು ತಮ್ಮ ಕರ್ತವ್ಯ ನಿರ್ವಹಣೆಯ ಕಾರಣಕ್ಕಾಗಿ ಬೆದರಿಕೆ ಮತ್ತು ನಿಂದನೆಗೆ ಒಳಗಾಗಿರುವುದನ್ನು ಗಂಭೀರವಾಗಿ ಪರಿಗಣಿಸಿರುವ ಮಧ್ಯಪ್ರದೇಶ ಹೈಕೋರ್ಟ್, ಅವರಿಗೆ ಸೂಕ್ತ ರಕ್ಷಣೆ ನೀಡುವಂತೆ ಮತ್ತು ಅಪರಾಧಿಗಳನ್ನು ಪತ್ತೆಹಚ್ಚಲು ಕೈಗೊಂಡಿರುವ...

ಎಸ್ಐಆರ್ ಪ್ರಕ್ರಿಯೆಯಲ್ಲಿ ಚುನಾವಣಾ ಆಯೋಗದ ಪಕ್ಷಪಾತದ ಬಗ್ಗೆ ಸಿಜೆಐಗೆ ಪ್ರತಿಪಕ್ಷಗಳಿಂದ ಪತ್ರ: ‘ಪ್ರಜಾಪ್ರಭುತ್ವ ಅಪಾಯದಲ್ಲಿದೆ’ ಎಂದು ಆರೋಪ

ದೇಶದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರತೀಯ ಚುನಾವಣಾ ಆಯೋಗವು (ECI) ಪಕ್ಷಪಾತ ಧೋರಣೆ ತಳೆದಿದೆ ಎಂದು ಆರೋಪಿಸಿ, 24 ವಿರೋಧ ಪಕ್ಷಗಳ ನಾಯಕರು ಹಾಗೂ ಒಬ್ಬರು ಸ್ವತಂತ್ರ...

ಬೆಂಗಳೂರು| ಕೆ.ಆರ್. ವೃತ್ತದ ಬಳಿ ಬಿಎಂಟಿಸಿ ಬಸ್‌ಗಳ ನಡುವೆ ಅಪಘಾತ; ಹಲವರಿಗೆ ಗಾಯ

ಇಂದು ಬೆಳಿಗ್ಗೆ ವಿಧಾನಸೌಧದಿಂದ ಸ್ವಲ್ಪ ದೂರದಲ್ಲಿರುವ ಜನನಿಬಿಡ ಕೆ.ಆರ್. ವೃತ್ತ ಜಂಕ್ಷನ್ ಬಳಿ ಎರಡು ಬಿಎಂಟಿಸಿ ಬಸ್‌ಗಳು ಡಿಕ್ಕಿ ಹೊಡೆದ ಪರಿಣಾಮ ಹಲವಾರು ಪ್ರಯಾಣಿಕರು ಗಾಯಗೊಂಡರು. ಡಿಕ್ಕಿಯ ಪರಿಣಾಮ ಬಸ್ಸಿನೊಳಗೆ ಹಲವಾರು ಪ್ರಯಾಣಿಕರು...

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಲೋಪ ಆರೋಪ; ಕೋಲಾರ-ಮೈಸೂರಿನ ಅಧಿಕಾರಿಗಳಿಗೆ ನೋಟಿಸ್ ಜಾರಿ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್)ಗೆ ಸಂಬಂಧಿಸಿದಂತೆ, ಕೋಲಾರ ಮತ್ತು ಮೈಸೂರಿನಲ್ಲಿ ನಡೆದ ಕಾರ್ಯವಿಧಾನದಲ್ಲಿ ನಿಯಮ ಉಲ್ಲಂಘನೆ ಆರೋಪ ಕೇಳಿಬಂದೆ. ಕೋಲಾರದಲ್ಲಿ, ಪರಿಷ್ಕರಣಾ ಕಾರ್ಯದ ಸಮಯದಲ್ಲಿ ಕರ್ತವ್ಯ...

ಸೂರತ್ ಧ್ವಂಸ ಕಾರ್ಯಾಚರಣೆ ಸಂಪೂರ್ಣ ‘ಕಾನೂನುಬಾಹಿರ’: 100 ನಿರಾಶ್ರಿತ ಕುಟುಂಬಗಳ ಪುನರ್ವಸತಿಗೆ ಗುಜರಾತ್ ಹೈಕೋರ್ಟ್ ಆದೇಶ

ಅಹಮದಾಬಾದ್: ಗುಜರಾತ್‌ನ ಸೂರತ್‌ನ ನಾಸಿರ್ ನಗರದಲ್ಲಿ ನಡೆದ ಮನೆಗಳ ಧ್ವಂಸ ಕಾರ್ಯಾಚರಣೆಯನ್ನು ತೀವ್ರವಾಗಿ ಖಂಡಿಸಿರುವ ಗುಜರಾತ್ ಹೈಕೋರ್ಟ್, ಇದನ್ನು "ಸಂಪೂರ್ಣ ಕಾನೂನುಬಾಹಿರ" ಎಂದು ಕರೆದಿದೆ. ಮೇ 30 ರಂದು ನಡೆದ ಈ "ಅನಧಿಕೃತ"...

ವಿದ್ಯುತ್ ಖಾಸಗೀಕರಣ ವಿರುದ್ದದ ಹೋರಾಟಕ್ಕೆ ಗೆಲುವು: ಅರ್ಜಿ ಹಿಂಪಡೆದ ಟಾಟಾ ಪವರ್ ಕಂಪನಿ

ರಾಜ್ಯದಲ್ಲಿ ವಿದ್ಯುತ್ ಕ್ಷೇತ್ರದಲ್ಲಿ ಖಾಸಗೀಕರಣದ ಹೆಜ್ಜೆ ಇಡಲು ಮುಂದಾಗಿದ್ದ ಟಾಟಾ ಪವರ್ ಕಂಪನಿಗೆ ಭಾರಿ ಹಿನ್ನಡೆಯಾಗಿದೆ. ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗದ (KERC) ಮುಂದೆ ರಾಜ್ಯದ 19 ಕಂದಾಯ ಜಿಲ್ಲೆಗಳಿಗೆ ಸಂಬಂಧಿಸಿದಂತೆ ತಾನು...

SIR: ಮತದಾರರ ಮನೆಗೆ ಹೋಗದೆ ಕಚೇರಿಯಲ್ಲೇ ಕುಳಿತು ಫಾರ್ಮ್ ವಿತರಣೆ ಆರೋಪ, BLO ಗಳಿಗೆ ಎಚ್ಚರಿಕೆ ನೀಡಿದ ಆಯೋಗ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಸಾರ್ವಜನಿಕರಿಂದ ವ್ಯಾಪಕ ದೂರುಗಳು ಕೇಳಿಬಂದ ಬೆನ್ನಲ್ಲೇ, ರಾಜ್ಯ ಚುನಾವಣಾ ಆಯೋಗವು ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಮತದಾರರ ಮನೆ-ಮನೆಗೆ ಭೇಟಿ...

ಅಳುವ ಕಂದಮ್ಮಗಳನ್ನು ವಾಷಿಂಗ್ ಮೆಷಿನ್‌ನಲ್ಲಿ ಕೂಡಿಹಾಕ್ತಿದ್ದ ಇಬ್ಬರು ಕೇರ್‌ಟೇಕರ್ ಅರೆಸ್ಟ್

ಸಿಲಿಕಾನ್ ಸಿಟಿಯ ಬ್ರೂಕ್‌ಫೀಲ್ಡ್‌ನಲ್ಲಿರುವ ಪ್ರಮುಖ ಐಟಿ ಸಂಸ್ಥೆ 'ಕ್ಯಾಪ್‌ಜೆಮಿನಿ' ಕ್ಯಾಂಪಸ್‌ನ ಡೇ-ಕೇರ್ ಸೆಂಟರ್‌ನಲ್ಲಿ ಪುಟ್ಟ ಕಂದಮ್ಮಗಳನ್ನು ಬಾತ್‌ರೂಮ್ ಹಾಗೂ ವಾಷಿಂಗ್ ಮೆಷಿನ್‌ಗಳಲ್ಲಿ ಕೂಡಿಹಾಕಿ ವಿಕೃತಿ ಮೆರೆದಿದ್ದ ಪ್ರಕರಣದಲ್ಲಿ ಪೊಲೀಸರು ಭರ್ಜರಿ ಬೇಟೆಯಾಡಿದ್ದಾರೆ. ಪ್ರಕರಣದ...

“ನಾಗರಿಕರು ಸರ್ಕಾರದ ಗುಲಾಮರಲ್ಲ”: ಸಿಎಎ, ಜ್ಞಾನವಾಪಿ ವಿರೋಧಿ ಪ್ರತಿಭಟನೆ ಸಂಬಂಧ ಎಸ್‌ಡಿಪಿಐ ನಾಯಕನ ಗಡಿಪಾರು ಪ್ರಶ್ನಿಸಿದ ಬಾಂಬೆ ಹೈಕೋರ್ಟ್

“ದೇಶದ ನಾಗರಿಕರು ಸರ್ಕಾರದ ಗುಲಾಮರಲ್ಲ. ಕೇವಲ ಸರ್ಕಾರದ ನಿರ್ಧಾರಗಳನ್ನು ವಿರೋಧಿಸುವುದು ಅಥವಾ ಆಡಳಿತ ವ್ಯವಸ್ಥೆಯ ವಿರುದ್ಧ ಘೋಷಣೆಗಳನ್ನು ಕೂಗುವುದು ಒಬ್ಬ ನಾಗರಿಕನನ್ನು ಗಡಿಪಾರು ಮಾಡಲು ಕಾನೂನಾತ್ಮಕ ಕಾರಣವಾಗಲಾರದು,” ಎಂದು ಬಾಂಬೆ ಹೈಕೋರ್ಟ್‌ ಐತಿಹಾಸಿಕ...