HomeUncategorizedಉನ್ನಾವ್ ಅತ್ಯಾಚಾರ ಆರೋಪಿ ಶಾಸಕನೂರಲ್ಲಿ ಸೆಂಗರ್ ಕುಟುಂಬದ್ದೇ ಪಾಳೇಗಾರಿಕೆ: ಇಲ್ಲಿದೆ ಗ್ರೌಂಡ್ ರಿಪೋರ್ಟ್

ಉನ್ನಾವ್ ಅತ್ಯಾಚಾರ ಆರೋಪಿ ಶಾಸಕನೂರಲ್ಲಿ ಸೆಂಗರ್ ಕುಟುಂಬದ್ದೇ ಪಾಳೇಗಾರಿಕೆ: ಇಲ್ಲಿದೆ ಗ್ರೌಂಡ್ ರಿಪೋರ್ಟ್

- Advertisement -
- Advertisement -

ಅತ್ಯಾಚಾರ ಮತ್ತು ಕೊಲೆಯತ್ನ ಆರೋಪ ಎದುರಿಸುತ್ತಿರುವ ಬಿಜೆಪಿಯ ಉಚ್ಛಾಟಿತ ಶಾಸಕ ಕುಲದೀಪ್ ಸೆಂಗರ್ ನ ಉನ್ನಾವ್ ಗ್ರಾಮಕ್ಕೆ ‘ದಿ ಕ್ವಿಂಟ್’ ತಂಡ ಭೇಟಿ ನೀಡಿ ಅಲ್ಲಿನ ಭಯಭೀತ ವಾತಾವರಣವನ್ನು ತೆರೆದಿಟ್ಟಿದೆ.

‘ಸೆಂಗರ್ ಗಳ ಹುಕುಂ ಇಲ್ಲದೇ ಇಲ್ಲಿ ಹುಲ್ಲುಕಡ್ಡಿ ಕೂಡ ಚಲಿಸುವಂತಿಲ್ಲ. ಅವರ ಒಪ್ಪಿಗೆಯಿಲ್ಲದೇ ತುಂಡುಭೂಮಿ ಮಾರಂಗಿಲ್ಲ, ಕೊಳ್ಳಂಗಿಲ್ಲ….’ – ಎನ್ನುತ್ತಾನೆ ಗ್ರಾಮದ ಯುವಕ ಅಜೀತ್.

ಇದು ಉನ್ನಾವ್. ಅತ್ಯಾಚಾರ ಮತ್ತು ಕೊಲೆಯತ್ನದ ಆರೋಪಿ ಶಾಸಕ ಕುಲದೀಪ್ ಸೆಂಗರ್ ನ ಗ್ರಾಮ. ಇಲ್ಲಿ ಶಾಸಕ ಮತ್ತು ಕುಟುಂಬದ ವಿರುದ್ಧ ಯಾರೂ ಮಾತಾಡುವಂತಿಲ್ಲ. ಈ ಕುಟುಂಬದ ನಜರ್ ಇಲ್ಲದೇ ಏನೂ ನಡೆಯುವಂತಿಲ್ಲ. ಒಂಥರಾ ಹಳೇ ಸಿನಿಮಾಗಳಲ್ಲಿ ಗೌಡರ ದರ್ಪ, ಪಾಳೇಗಾರಿಕೆಯಡಿ ನಲುಗುವ ಊರಿನಂತಿದೆ ಉನ್ನಾವ್.

ಸತತ ಸಾರ್ವಜನಿಕ ಒತ್ತಾಯ ಮತ್ತು ಒತ್ತಡಗಳ ಪರಿಣಾಮವಾಗಿ ಈಗ ಬಿಜೆಪಿ ಕುಲದೀಪ್ ಸೆಂಗರ್ ನನ್ನು ಪಕ್ಷದಿಂದ ಉಚ್ಛಾಟಿಸಿದೆ. ಅತ್ಯಾಚಾರ ಆರೋಪಕ್ಕೆ ಸಿಕ್ಕ 14 ತಿಂಗಳ ಬಳಿಕ ಬಿಜೆಪಿ ಈ ಕ್ರಮಕ್ಕೆ ಮುಂದಾಗಿದೆ. ಈ ಶಾಸಕರ ಉನ್ನಾವ್ 30 ಸಾವಿರದಷ್ಟು ಜನಸಂಖ್ಯೆ ಹೊಂದಿರುವ ದೊಡ್ಡ ಗ್ರಾಮವಾಗಿದ್ದು ಇಲ್ಲಿ ಯಾರೂ ಶಾಸಕರಿಗೆ ಅಹಿತ ಅನಿಸುವುದನ್ನು ಮಾತಾಡಲು ಒಲ್ಲರು, ಶಾಸಕರ ನಜರ್ ಗೆ ಬೀಳದಂತೆ ಬದುಕಲು ಯತ್ನಿಸುವವರು.

60 ವರ್ಷದಿಂದ ಸೆಂಗರ್ ಕುಟುಂಬದ್ದೇ ರಾಜಕೀಯ ಪಾರುಪತ್ಯ!

ಶಾಸಕ ಸೆಂಗರ್ ಅಜ್ಜ (ತಾಯಿಯ ತಂದೆ) 37 ವರ್ಷಗಳವರೆಗೆ ಗ್ರಾಮದ ಮುಖ್ಯಸ್ಥನಾಗಿದ್ದ. ನಂತರ ಕುಲದೀಪ್ ರಾಜಕೀಯ ಶುರು ಮಾಡಿದ. ಈಗ 4ನೇ ಬಾರಿ ಶಾಸಕನಾಗಿ ಆಯ್ಕೆಯಾಗಿದ್ದಾನೆ. ಸೆಂಗರ್ ತಾಯಿ ಎರಡು ಸಲ ಗ್ರಾಮ್ ಪ್ರಧಾನ್ ಆಗಿದ್ದರೆ, ಸಂಗರ್ ಸೊಸೆ, ಸಹೋದರನ ಪತ್ನಿ-ಹೀಗೆ ಗ್ರಾಮ್ ಪ್ರಧಾನ್ ಅಧಿಕಾರ ಅವರ ಕುಟುಂಬದ ಬಳಿಯೇ ಇದೆ ಎಂದು ಅಲ್ಲಿನ ಕೆಲವರು ಹೇಳುವಾಗ, ತಮ್ಮನ್ನು ಯಾರೂ ಗಮನಿಸುತ್ತಿಲ್ಲ ಎಂಬುದನ್ನು ಖಚಿತ ಮಾಡಿಕೊಳ್ಳುತ್ತಾರೆ.

ಆರಂಭದಲ್ಲಿ ಕಾಂಗ್ರೆಸ್‍ನಲ್ಲಿದ್ದ ಕುಲದೀಪ್ ಪಾರ್ಟಿಗಳನ್ನು ಬದಲಿಸುತ್ತಲೇ ಬಂದು ಈಗ ಬಿಜೆಪಿಯ ಪ್ರಭಾವಿ ಶಾಸಕನೂ, ಮುಖ್ಯಮಂತ್ರಿ ಯೋಗಿಯವರಿಗೆ ಆಪ್ತನೂ ಆಗಿದ್ದಾನೆ. ಅಕ್ರಮ ಕಲ್ಲು ಗಣಿಗಾರಿಕೆಯಿಂದ ಲೂಟಿ ಮಾಡುತ್ತಿರುವ ಈ ಕುಟುಂಬ ಪೊಲೀಸ್ ಅಧಿಕಾರಿಗಳ ಮೇಲೆಯೇ ದಾಳಿಗಳನ್ನು ಮಾಡುತ್ತ ಬಂದಿದೆ. 2004ರಲ್ಲಿ ಕುಲದೀಪ್ ಸೆಂಗರ್ ಸಹೋದರ ಅತುಲ್ ಜಿಲ್ಲಾ ಉಪ ಪೊಲೀಸ್ ವರಿಷ್ಠಾಧಿಕಾರಿ ರಾಮಲಾಲ್ ವರ್ಮಾ ಅವರ ಹೊಟ್ಟೆಗೆ ಗುಂಡು ಹೊಡೆದಿದ್ದ. ಈ ಕುಟುಂಬದ ಒತ್ತಡಕ್ಕೆ ಮಣಿದು ರಾಮಲಾಲ್ ವರ್ಮಾರೇ ದೂರು ಹಿಂಪಡೆಯಬೇಕಾಗಿತು.

ಪೊಲೀಸ್ ಅಧಿಕಾರಿಗಳ ಮೇಲೆಯೇ ಏರಿ ಹೋಗುವ ಈ ಕುಟುಂಬ ಸಾಮಾನ್ಯ ಜನರನ್ನು ಅದೆಷ್ಟು ಭಯಭೀತಿಯಲ್ಲಿ ಇಟ್ಟಿರಬಹುದು ಎಂದು ಊಹಿಸಿ. ಈ ಭೇಟಿಯ ವೇಳೆ ನಮ್ಮ ತಂಡಕ್ಕೆ ಅದರ ದರ್ಶನವೂ ಆಯಿತು. ‘ಪರಿಸ್ಥಿತಿ ಹೀಗಿರುವಾಗ ಅತ್ಯಾಚಾರ ಸಂತ್ರಸ್ತೆಯ ಕುಟುಂಬಕ್ಕೆ ಎಂತಹ ಹಿಂಸೆ ಕೊಟ್ಟಿರಬಹುದು ಊಹಿಸಿ’ ಎಂದ ಯುವಕ ಅಜಿತ್. (ಹೆಸರು ಬದಲಿಸಿದೆ).

2018ರಲ್ಲಿ ಇದೇ ಅತುಲ್ ಸೆಂಗರ್ ಅತ್ಯಾಚಾರ ಸಂತ್ರಸ್ತೆಯ ತಂದೆಯನ್ನು ಮರಕ್ಕೆ ಕಟ್ಟಿ ವಿಪರೀತ ಹಡೆದಿದ್ದ ಎಂದು ಹೆಸರು ಹೇಳಲು ಇಚ್ಛಿಸದ ಜನ ಹೇಳುತ್ತಾರೆ. ಆಗ ಬಹುಶಃ ಒಳಗಾಯಗಳಾಗಿದ್ದವು ಎನಿಸುತ್ತದೆ. ಮುಂದೆ ಐದೇ ದಿನದಲ್ಲಿ ಆಕೆಯ ತಂದೆ ಪೊಲೀಸ್ ಲಾಕಪ್ಪಿನಲ್ಲಿ ಮೃತಪಟ್ಟರು. ಪೊಲೀಸ್ ಸ್ಟೇಷನ್ನಿನಲ್ಲೂ ಅತುಲ್ ಒತ್ತಡ ಹೇರಿ ಮತ್ತೆ ದೌರ್ಜನ್ಯ ನಡೆಸಿದ್ದಾನೆ ಎಂಬ ಆರೋಪವೂ ಇದೆ. ಈ ಕುರಿತು ದೂರು ದಾಖಲಾಗಿದೆ.

ಅತುಲ್ ಮರಕ್ಕೆ ಕಟ್ಟಿ ದೌರ್ಜನ್ಯ ನಡೆಸಿದಾಗ ದೂರು ಕೊಟ್ಟರೂ ಬಂಧಿಸದ ಪೊಲೀಸರು, ಸಂತ್ರಸ್ತೆಯ ತಂದೆಯನ್ನೇ, ‘ ಅಕ್ರಮವಾಗಿ ಶಸ್ತ್ರಾಸ್ತ ಹೊಂದಿದ್ದ’ ಎಂದು ಆರೋಪಿಸಿ ಬಂಧಿಸಿದ್ದರು. ಶಾಸಕ ಮತ್ತು ಆತನ ಇಬ್ಬರು ಸಹೋದರರ ಈ ದರ್ಪ ಮತ್ತು ಪಾಳೇಗಾರಿಕೆಯ ಬಗ್ಗೆ ಭಯದಿಂದಲೇ ಇಲ್ಲಿನ ಜನರು ಹೇಳುತ್ತಾರೆ.

ಈಗ ಶಾಸಕನ ಅತ್ಯಾಚಾರ, ಕೊಲೆಯತ್ನ, ಸಂಚು ಕೇಸುಗಳಲ್ಲಿ, ಇನ್ನಿಬ್ಬರು ಸಹೋದರರು ಕೊಲೆಯತ್ನ ಕೇಸು ಎದುರಿಸುತ್ತಿದ್ದಾರೆ. ಇಷ್ಟೆಲ್ಲದರ ನಂತರವೂ ಶಾಸಕನ ವಿರುದ್ಧ ಇಲ್ಲಿ ಯಾರೂ ಸೊಲ್ಲೆತ್ತುವಂತಿಲ್ಲ. ಉತ್ತರ ಪ್ರದೇಶದ ಪಕ್ಷೇತರ ಶಾಸಕ, ಡಾನ್ ‘ರಾಜಾ ಭಯ್ಯಾ’ನ ಮಾದರಿಯಲ್ಲೇ ಕುಲದೀಪ್ ಕೂಡ ಜನರನ್ನು ಭಯದಲ್ಲಿಟ್ಟು ನಾಲ್ಕು ಸಲ ಗೆದ್ದಿದ್ದಾನೆ.

ಆಧಾರ: ದಿ ಕ್ವಿಂಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: 2ಲಕ್ಷ ಮತದಾರರಲ್ಲಿ ಬಸವನಗುಡಿಯಲ್ಲಿ ಉಳಿಯುವುದು 88 ಸಾವಿರ ಮಾತ್ರಾ?: SIR ಪರಿಷ್ಕರಣೆಯ ಆಘಾತಕಾರಿ ಲೆಕ್ಕಾಚಾರ

2023ರ ಚುನಾವಣೆಯಲ್ಲಿ ಬಸವನಗುಡಿಯಲ್ಲಿ 1.28 ಲಕ್ಷ ಮತಗಳು ಚಲಾಯಿಸಲ್ಪಟ್ಟಿದ್ದವು. ಆದರೆ ಪ್ರಸ್ತುತ SIR ಪ್ರಕ್ರಿಯೆಯಲ್ಲಿ 1.13 ಲಕ್ಷ ಜನರನ್ನು ಹೊರಗಿಟ್ಟು, ಕರಡು ಪಟ್ಟಿಯಲ್ಲಿ ಕೇವಲ 1.35 ಲಕ್ಷ ಮತದಾರರನ್ನು ಮಾತ್ರ ಉಳಿಸಿಕೊಳ್ಳಲಾಗಿದೆ. ಇದರ...

ಕರ್ನಾಟಕ ಎಸ್ಐಆರ್: 43.81 ಲಕ್ಷ ಜನರಿಗೆ SIR ನೋಟಿಸ್: ಗಣ್ಯರ ಹೆಸರು ಸರಿಪಡಿಸುವ ಚುನಾವಣಾ ಆಯೋಗಕ್ಕೆ ಜನ-ಸಾಮಾನ್ಯರ ನೋವು ಕಾಣುತ್ತಿಲ್ಲವೇ?

ಕರ್ನಾಟಕದಲ್ಲಿ SIR ವೇಳೆ 43.81 ಲಕ್ಷ ಮತದಾರರ ಪ್ರಕರಣಗಳಿಗೆ ನೋಟಿಸ್‌ಗಳನ್ನು ಸೃಷ್ಟಿಸಲಾಗಿದ್ದು, ಅವರ ದಾಖಲೆಗಳ ಪರಿಶೀಲನೆಗೆ ಕ್ರಮ ಕೈಗೊಳ್ಳಲಾಗಿದೆ. ಈ ಪೈಕಿ 23.45 ಲಕ್ಷ ಪ್ರಕರಣಗಳಲ್ಲಿ 2002ರ ಮತದಾರರ ಪಟ್ಟಿಯೊಂದಿಗೆ ಮ್ಯಾಪಿಂಗ್ ಆಗದಿರುವುದು...

ಪಿಣರಾಯಿ ವಿಜಯನ್ ವಿರುದ್ಧ ಎಫ್‌ಐಆರ್‌ಗೆ ಇಡಿ ಪತ್ರ: ಕಾನೂನು ಪರಿಶೀಲನೆ ನಡೆಸಲಾಗುವುದು ಎಂದ ಸಿಎಂ ವಿ.ಡಿ. ಸತೀಶನ್

ಆರೋಪಿತ ಸಿಎಂಆರ್‌ಎಲ್ ಲಂಚ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಪಿಐ(ಎಂ) ಹಿರಿಯ ನಾಯಕ ಪಿಣರಾಯಿ ವಿಜಯನ್ ಮತ್ತು ಇತರರ ವಿರುದ್ಧ ಎಫ್‌ಐಆರ್ ದಾಖಲಿಸಲು ಜಾರಿ ನಿರ್ದೇಶನಾಲಯ (ಇಡಿ) ನೀಡಿರುವ ಪತ್ರವನ್ನು ಕಾನೂನುಬದ್ಧವಾಗಿ ಪರಿಶೀಲಿಸಲಾಗುವುದು, ಅದರ ನಂತರ...

‘ಸಿಇಸಿ ಜ್ಞಾನೇಶ್ ಕುಮಾರ್ ಮಗಳು’ : ನೋಯ್ಡಾ ಜಿಲ್ಲಾಧಿಕಾರಿಗೆ ಅಲಹಾಬಾದ್ ಹೈಕೋರ್ಟ್ ತಪರಾಕಿ ಬೆನ್ನಲ್ಲೇ ವಿಪಕ್ಷ ನಾಯಕರ ವಾಗ್ದಾಳಿ

ರಾಷ್ಟ್ರೀಯ ಭದ್ರತಾ ಕಾಯ್ದೆಯಡಿ (NSA) ದೆಹಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿನಿಯೊಬ್ಬರನ್ನು ಮುನ್ನೆಚ್ಚರಿಕೆ ಕ್ರಮವಾಗಿ ವಶಕ್ಕೆ ಪಡೆದಿದ್ದಕ್ಕಾಗಿ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ಮಗಳು ಹಾಗೂ ನೋಯ್ಡಾ ಜಿಲ್ಲಾಧಿಕಾರಿ ಮೇಧಾ ರೂಪಮ್ ಅವರನ್ನು...

ಮಲ್ಲಿಕಾರ್ಜುನ ಖರ್ಗೆ ಸಭೆಯ ನಂತರ ‘ಶುದ್ಧೀಕರಣ’ ವಿವಾದ: ಅಪರಿಚಿತರ ವಿರುದ್ಧ ಎಫ್‌ಐಆರ್, ತೀವ್ರ ಆಕ್ರೋಶ ವ್ಯಕ್ತಪಡಿಸಿದ ಕಾಂಗ್ರೆಸ್!

ಉತ್ತರಾಖಂಡದ ಹಲ್ದ್ವಾನಿಯ ರಾಮಲೀಲಾ ಮೈದಾನದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಸಾರ್ವಜನಿಕ ಸಭೆ ನಡೆದ ನಂತರ, ಆ ಮೈದಾನವನ್ನು 'ಶುದ್ಧೀಕರಣ' (ಶುದ್ಧೀಕರಣ ಯಜ್ಞ) ಗೊಳಿಸಿದ ವಿವಾದಾತ್ಮಕ ಪ್ರಕರಣಕ್ಕೆ ಸಂಬಂಧಿಸಿದಂತೆ ಹಲ್ದ್ವಾನಿಯ ಕೊತ್ವಾಲಿ...

ದೆಹಲಿ ಮತದಾರರ ಪಟ್ಟಿಗೆ ರಾಘವ್ ಚಡ್ಡಾ ಹೆಸರು ಸೇರ್ಪಡೆ; ಸೂಕ್ತ ಪ್ರಕ್ರಿಯೆ ಅನುಸರಿಸಿಲ್ಲ ಎಂದು ಎಎಪಿ ಆರೋಪ

ರಾಷ್ಟ್ರ ರಾಜಧಾನಿಯ ಮತದಾರರ ಪಟ್ಟಿಯ ಪ್ರಸ್ತುತ ನಡೆಯುತ್ತಿರುವ ವಿಶೇಷ ಪರಿಷ್ಕರಣೆ (ಎಸ್‌ಐಆರ್) ಅಡಿಯಲ್ಲಿ, ಪಂಜಾಬ್‌ನ ಬಿಜೆಪಿ ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರನ್ನು ದೆಹಲಿಯ ಮತದಾರರ ಪಟ್ಟಿಗೆ ಸೇರಿಸಲಾಗಿದೆ ಎಂದು ಚುನಾವಣಾ...

ಮಲ್ಲಿಕಾರ್ಜುನ ಖರ್ಗೆ ಭಾಷಣ ಮಾಡಿದ ವೇದಿಕೆ ‘ಶುದ್ಧೀಕರಣ’ : 29 ದಿನಗಳ ನಂತರ ಎಫ್‌ಐಆರ್ ದಾಖಲು

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ್ದ ಉತ್ತರಾಖಂಡದ ಹಲ್ದ್ವಾನಿಯ ವೇದಿಕೆಯೊಂದರಲ್ಲಿ 'ಶುದ್ಧೀಕರಣ' ನಡೆದ ಇಪ್ಪತ್ತೊಂಬತ್ತು ದಿನಗಳ ನಂತರ, ಪೊಲೀಸರು ಮಂಗಳವಾರ (ಸೆಪ್ಟೆಂಬರ್ 8) ಎಸ್‌ಸಿ/ಎಸ್‌ಟಿ ಕಾಯ್ದೆಯ ನಿಬಂಧನೆಗಳ ಅಡಿಯಲ್ಲಿ...

‘ಪ್ರೊ. ಸಿಎನ್ಆರ್ ರಾವ್‌ ಅವರಿಗೆ ನೋಟಿಸ್ ಕೊಟ್ಟಿಲ್ಲ..’; ಚುನಾವಣಾ ಆಯೋಗದ ಸ್ಪಷ್ಟನೆ

ಕರ್ನಾಟಕದ ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ (ಎಸ್‌ಐಆರ್) ವೇಳೆ ಹೆಸರಿನ ಕಾಗುಣಿತದಲ್ಲಿನ ವ್ಯತ್ಯಾಸ ಕಂಡುಬಂದ ಹಿನ್ನೆಲೆಯಲ್ಲಿ, ದೇಶದ ಪ್ರಸಿದ್ಧ ವಿಜ್ಞಾನಿಗಳಲ್ಲಿ ಒಬ್ಬರಾದ ಭಾರತರತ್ನ ಪ್ರೊ. ಸಿ.ಎನ್.ಆರ್. ರಾವ್ ಅವರಿಗೆ ತಮ್ಮ ಗುರುತನ್ನು ಸಾಬೀತುಪಡಿಸಲು...

‘ಬಂಗಾಳಿಗಳು ಮೀನು ಇಲ್ಲದೆ ಬದುಕಲು ಸಾಧ್ಯವಿಲ್ಲ’; ಆಹಾರ ಪದ್ಧತಿ ನಿರ್ಧಾರ ಬಿಜೆಪಿ ಕೆಲಸವಲ್ಲ: ಬಿಜೆಪಿ ಮುಖ್ಯಸ್ಥ ಸಮಿಕ್ ಭಟ್ಟಾಚಾರ್ಯ 

ಕೊಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ಕೆಲವೇ ತಿಂಗಳುಗಳಲ್ಲಿ ದುರ್ಗಾ ಪೂಜೆ ಮತ್ತು ನವರಾತ್ರಿ ಆಚರಣೆಗಳ ಸಂದರ್ಭದಲ್ಲಿ ಆಹಾರ ಪದ್ಧತಿಯ ಕುರಿತು ಕೆಲವು ಧಾರ್ಮಿಕ ನಾಯಕರು ಹಾಗೂ ವಿಶ್ವ ಹಿಂದೂ...

ಮತದಾರ ಇರುವುದು ವಿದೇಶದಲ್ಲಿ, ಆದರೆ ವಿಚಾರಣೆ ನಡೆಯುತ್ತಿರುವುದು ಇಲ್ಲಿ: ಕರ್ನಾಟಕ SIR ತಂದಿಟ್ಟ ಧರ್ಮಸಂಕಟ

ಕರ್ನಾಟಕದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ, ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಿದ್ದ ಅನೇಕ ಅನಿವಾಸಿ ಕನ್ನಡಿಗರಿಗೆ ಬಿಸಿ ತುಪ್ಪವಾಗಿ ಪರಿಣಮಿಸಿದೆ. ಹೆಸರಿನಲ್ಲಿನ ವ್ಯತ್ಯಾಸ, ವಯಸ್ಸಿನ ವ್ಯತ್ಯಾಸ...