HomeUncategorizedಉನ್ನಾವ್ ಅತ್ಯಾಚಾರ ಆರೋಪಿ ಶಾಸಕನೂರಲ್ಲಿ ಸೆಂಗರ್ ಕುಟುಂಬದ್ದೇ ಪಾಳೇಗಾರಿಕೆ: ಇಲ್ಲಿದೆ ಗ್ರೌಂಡ್ ರಿಪೋರ್ಟ್

ಉನ್ನಾವ್ ಅತ್ಯಾಚಾರ ಆರೋಪಿ ಶಾಸಕನೂರಲ್ಲಿ ಸೆಂಗರ್ ಕುಟುಂಬದ್ದೇ ಪಾಳೇಗಾರಿಕೆ: ಇಲ್ಲಿದೆ ಗ್ರೌಂಡ್ ರಿಪೋರ್ಟ್

- Advertisement -
- Advertisement -

ಅತ್ಯಾಚಾರ ಮತ್ತು ಕೊಲೆಯತ್ನ ಆರೋಪ ಎದುರಿಸುತ್ತಿರುವ ಬಿಜೆಪಿಯ ಉಚ್ಛಾಟಿತ ಶಾಸಕ ಕುಲದೀಪ್ ಸೆಂಗರ್ ನ ಉನ್ನಾವ್ ಗ್ರಾಮಕ್ಕೆ ‘ದಿ ಕ್ವಿಂಟ್’ ತಂಡ ಭೇಟಿ ನೀಡಿ ಅಲ್ಲಿನ ಭಯಭೀತ ವಾತಾವರಣವನ್ನು ತೆರೆದಿಟ್ಟಿದೆ.

‘ಸೆಂಗರ್ ಗಳ ಹುಕುಂ ಇಲ್ಲದೇ ಇಲ್ಲಿ ಹುಲ್ಲುಕಡ್ಡಿ ಕೂಡ ಚಲಿಸುವಂತಿಲ್ಲ. ಅವರ ಒಪ್ಪಿಗೆಯಿಲ್ಲದೇ ತುಂಡುಭೂಮಿ ಮಾರಂಗಿಲ್ಲ, ಕೊಳ್ಳಂಗಿಲ್ಲ….’ – ಎನ್ನುತ್ತಾನೆ ಗ್ರಾಮದ ಯುವಕ ಅಜೀತ್.

ಇದು ಉನ್ನಾವ್. ಅತ್ಯಾಚಾರ ಮತ್ತು ಕೊಲೆಯತ್ನದ ಆರೋಪಿ ಶಾಸಕ ಕುಲದೀಪ್ ಸೆಂಗರ್ ನ ಗ್ರಾಮ. ಇಲ್ಲಿ ಶಾಸಕ ಮತ್ತು ಕುಟುಂಬದ ವಿರುದ್ಧ ಯಾರೂ ಮಾತಾಡುವಂತಿಲ್ಲ. ಈ ಕುಟುಂಬದ ನಜರ್ ಇಲ್ಲದೇ ಏನೂ ನಡೆಯುವಂತಿಲ್ಲ. ಒಂಥರಾ ಹಳೇ ಸಿನಿಮಾಗಳಲ್ಲಿ ಗೌಡರ ದರ್ಪ, ಪಾಳೇಗಾರಿಕೆಯಡಿ ನಲುಗುವ ಊರಿನಂತಿದೆ ಉನ್ನಾವ್.

ಸತತ ಸಾರ್ವಜನಿಕ ಒತ್ತಾಯ ಮತ್ತು ಒತ್ತಡಗಳ ಪರಿಣಾಮವಾಗಿ ಈಗ ಬಿಜೆಪಿ ಕುಲದೀಪ್ ಸೆಂಗರ್ ನನ್ನು ಪಕ್ಷದಿಂದ ಉಚ್ಛಾಟಿಸಿದೆ. ಅತ್ಯಾಚಾರ ಆರೋಪಕ್ಕೆ ಸಿಕ್ಕ 14 ತಿಂಗಳ ಬಳಿಕ ಬಿಜೆಪಿ ಈ ಕ್ರಮಕ್ಕೆ ಮುಂದಾಗಿದೆ. ಈ ಶಾಸಕರ ಉನ್ನಾವ್ 30 ಸಾವಿರದಷ್ಟು ಜನಸಂಖ್ಯೆ ಹೊಂದಿರುವ ದೊಡ್ಡ ಗ್ರಾಮವಾಗಿದ್ದು ಇಲ್ಲಿ ಯಾರೂ ಶಾಸಕರಿಗೆ ಅಹಿತ ಅನಿಸುವುದನ್ನು ಮಾತಾಡಲು ಒಲ್ಲರು, ಶಾಸಕರ ನಜರ್ ಗೆ ಬೀಳದಂತೆ ಬದುಕಲು ಯತ್ನಿಸುವವರು.

60 ವರ್ಷದಿಂದ ಸೆಂಗರ್ ಕುಟುಂಬದ್ದೇ ರಾಜಕೀಯ ಪಾರುಪತ್ಯ!

ಶಾಸಕ ಸೆಂಗರ್ ಅಜ್ಜ (ತಾಯಿಯ ತಂದೆ) 37 ವರ್ಷಗಳವರೆಗೆ ಗ್ರಾಮದ ಮುಖ್ಯಸ್ಥನಾಗಿದ್ದ. ನಂತರ ಕುಲದೀಪ್ ರಾಜಕೀಯ ಶುರು ಮಾಡಿದ. ಈಗ 4ನೇ ಬಾರಿ ಶಾಸಕನಾಗಿ ಆಯ್ಕೆಯಾಗಿದ್ದಾನೆ. ಸೆಂಗರ್ ತಾಯಿ ಎರಡು ಸಲ ಗ್ರಾಮ್ ಪ್ರಧಾನ್ ಆಗಿದ್ದರೆ, ಸಂಗರ್ ಸೊಸೆ, ಸಹೋದರನ ಪತ್ನಿ-ಹೀಗೆ ಗ್ರಾಮ್ ಪ್ರಧಾನ್ ಅಧಿಕಾರ ಅವರ ಕುಟುಂಬದ ಬಳಿಯೇ ಇದೆ ಎಂದು ಅಲ್ಲಿನ ಕೆಲವರು ಹೇಳುವಾಗ, ತಮ್ಮನ್ನು ಯಾರೂ ಗಮನಿಸುತ್ತಿಲ್ಲ ಎಂಬುದನ್ನು ಖಚಿತ ಮಾಡಿಕೊಳ್ಳುತ್ತಾರೆ.

ಆರಂಭದಲ್ಲಿ ಕಾಂಗ್ರೆಸ್‍ನಲ್ಲಿದ್ದ ಕುಲದೀಪ್ ಪಾರ್ಟಿಗಳನ್ನು ಬದಲಿಸುತ್ತಲೇ ಬಂದು ಈಗ ಬಿಜೆಪಿಯ ಪ್ರಭಾವಿ ಶಾಸಕನೂ, ಮುಖ್ಯಮಂತ್ರಿ ಯೋಗಿಯವರಿಗೆ ಆಪ್ತನೂ ಆಗಿದ್ದಾನೆ. ಅಕ್ರಮ ಕಲ್ಲು ಗಣಿಗಾರಿಕೆಯಿಂದ ಲೂಟಿ ಮಾಡುತ್ತಿರುವ ಈ ಕುಟುಂಬ ಪೊಲೀಸ್ ಅಧಿಕಾರಿಗಳ ಮೇಲೆಯೇ ದಾಳಿಗಳನ್ನು ಮಾಡುತ್ತ ಬಂದಿದೆ. 2004ರಲ್ಲಿ ಕುಲದೀಪ್ ಸೆಂಗರ್ ಸಹೋದರ ಅತುಲ್ ಜಿಲ್ಲಾ ಉಪ ಪೊಲೀಸ್ ವರಿಷ್ಠಾಧಿಕಾರಿ ರಾಮಲಾಲ್ ವರ್ಮಾ ಅವರ ಹೊಟ್ಟೆಗೆ ಗುಂಡು ಹೊಡೆದಿದ್ದ. ಈ ಕುಟುಂಬದ ಒತ್ತಡಕ್ಕೆ ಮಣಿದು ರಾಮಲಾಲ್ ವರ್ಮಾರೇ ದೂರು ಹಿಂಪಡೆಯಬೇಕಾಗಿತು.

ಪೊಲೀಸ್ ಅಧಿಕಾರಿಗಳ ಮೇಲೆಯೇ ಏರಿ ಹೋಗುವ ಈ ಕುಟುಂಬ ಸಾಮಾನ್ಯ ಜನರನ್ನು ಅದೆಷ್ಟು ಭಯಭೀತಿಯಲ್ಲಿ ಇಟ್ಟಿರಬಹುದು ಎಂದು ಊಹಿಸಿ. ಈ ಭೇಟಿಯ ವೇಳೆ ನಮ್ಮ ತಂಡಕ್ಕೆ ಅದರ ದರ್ಶನವೂ ಆಯಿತು. ‘ಪರಿಸ್ಥಿತಿ ಹೀಗಿರುವಾಗ ಅತ್ಯಾಚಾರ ಸಂತ್ರಸ್ತೆಯ ಕುಟುಂಬಕ್ಕೆ ಎಂತಹ ಹಿಂಸೆ ಕೊಟ್ಟಿರಬಹುದು ಊಹಿಸಿ’ ಎಂದ ಯುವಕ ಅಜಿತ್. (ಹೆಸರು ಬದಲಿಸಿದೆ).

2018ರಲ್ಲಿ ಇದೇ ಅತುಲ್ ಸೆಂಗರ್ ಅತ್ಯಾಚಾರ ಸಂತ್ರಸ್ತೆಯ ತಂದೆಯನ್ನು ಮರಕ್ಕೆ ಕಟ್ಟಿ ವಿಪರೀತ ಹಡೆದಿದ್ದ ಎಂದು ಹೆಸರು ಹೇಳಲು ಇಚ್ಛಿಸದ ಜನ ಹೇಳುತ್ತಾರೆ. ಆಗ ಬಹುಶಃ ಒಳಗಾಯಗಳಾಗಿದ್ದವು ಎನಿಸುತ್ತದೆ. ಮುಂದೆ ಐದೇ ದಿನದಲ್ಲಿ ಆಕೆಯ ತಂದೆ ಪೊಲೀಸ್ ಲಾಕಪ್ಪಿನಲ್ಲಿ ಮೃತಪಟ್ಟರು. ಪೊಲೀಸ್ ಸ್ಟೇಷನ್ನಿನಲ್ಲೂ ಅತುಲ್ ಒತ್ತಡ ಹೇರಿ ಮತ್ತೆ ದೌರ್ಜನ್ಯ ನಡೆಸಿದ್ದಾನೆ ಎಂಬ ಆರೋಪವೂ ಇದೆ. ಈ ಕುರಿತು ದೂರು ದಾಖಲಾಗಿದೆ.

ಅತುಲ್ ಮರಕ್ಕೆ ಕಟ್ಟಿ ದೌರ್ಜನ್ಯ ನಡೆಸಿದಾಗ ದೂರು ಕೊಟ್ಟರೂ ಬಂಧಿಸದ ಪೊಲೀಸರು, ಸಂತ್ರಸ್ತೆಯ ತಂದೆಯನ್ನೇ, ‘ ಅಕ್ರಮವಾಗಿ ಶಸ್ತ್ರಾಸ್ತ ಹೊಂದಿದ್ದ’ ಎಂದು ಆರೋಪಿಸಿ ಬಂಧಿಸಿದ್ದರು. ಶಾಸಕ ಮತ್ತು ಆತನ ಇಬ್ಬರು ಸಹೋದರರ ಈ ದರ್ಪ ಮತ್ತು ಪಾಳೇಗಾರಿಕೆಯ ಬಗ್ಗೆ ಭಯದಿಂದಲೇ ಇಲ್ಲಿನ ಜನರು ಹೇಳುತ್ತಾರೆ.

ಈಗ ಶಾಸಕನ ಅತ್ಯಾಚಾರ, ಕೊಲೆಯತ್ನ, ಸಂಚು ಕೇಸುಗಳಲ್ಲಿ, ಇನ್ನಿಬ್ಬರು ಸಹೋದರರು ಕೊಲೆಯತ್ನ ಕೇಸು ಎದುರಿಸುತ್ತಿದ್ದಾರೆ. ಇಷ್ಟೆಲ್ಲದರ ನಂತರವೂ ಶಾಸಕನ ವಿರುದ್ಧ ಇಲ್ಲಿ ಯಾರೂ ಸೊಲ್ಲೆತ್ತುವಂತಿಲ್ಲ. ಉತ್ತರ ಪ್ರದೇಶದ ಪಕ್ಷೇತರ ಶಾಸಕ, ಡಾನ್ ‘ರಾಜಾ ಭಯ್ಯಾ’ನ ಮಾದರಿಯಲ್ಲೇ ಕುಲದೀಪ್ ಕೂಡ ಜನರನ್ನು ಭಯದಲ್ಲಿಟ್ಟು ನಾಲ್ಕು ಸಲ ಗೆದ್ದಿದ್ದಾನೆ.

ಆಧಾರ: ದಿ ಕ್ವಿಂಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...

ಹತ್ಯಾಕಾಂಡಕ್ಕೆ ಸಮನಾದ NEET ಹಗರಣ ನಡೆಯಲು ಬಿಟ್ಟ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಡಲಿ

ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಲೀಕ್ ಆದ ನಂತರದ ಬೆಳವಣಿಗೆಗಳನ್ನು ಇಡೀ ದೇಶ ಗಮನಿಸುತ್ತಿದೆ. ಅದರಲ್ಲೂ ವಿಶೇಷವಾಗಿ ಜೂನ್ ಆರಂಭದಿಂದ ಇಲ್ಲಿಯವರೆಗೆ ದೇಶದ ವಿದ್ಯಾರ್ಥಿಗಳು ನಡೆಸುತ್ತಿರುವ ಆಂದೋಲನವನ್ನು ದೇಶದ ಜನತೆ ನೋಡುತ್ತಿದ್ದಾರೆ. ದೇಶದ...

ಸಿಜೆಪಿ ಮತ್ತು ಜೆನ್‌ ಜಿಫಿಕೇಶನ್: ಪ್ರಸ್ತುತ ಬೆಳವಣಿಗೆ, ಭವಿಷ್ಯದ ಸಾಧ್ಯತೆ

ಇತ್ತೀಚಿನ ಬೆಳವಣಿಗೆಗಳು ಕಳೆದ ಒಂದು ತಿಂಗಳಿಂದ ನಡೆಯುತ್ತಿರುವ ಸಿಜೆಪಿ (ಕಾಕ್ರೋಚ್‌ ಜನತಾ ಪಕ್ಷ) ಪ್ರತಿಭಟನೆ ಈಗ ತಾರ್ಕಿಕ ಹಂತಕ್ಕೆ ತಲಪುತ್ತಿದೆ. ಪ್ರಶ್ನೆಪತ್ರಿಕೆ ಸೋರಿಕೆಯ ಕಾರಣಕ್ಕೆ ನೀಟ್‌ನ (ರಾಷ್ಟ್ರೀಯ ಅರ್ಹತಾ ಹಾಗೂ ಪ್ರವೇಶ ಪರೀಕ್ಷೆ) ಮೊದಲ...

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...

ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ನಡುವೆ ವಿದ್ಯಾರ್ಥಿಗಳ ಹೋರಾಟವನ್ನು ಕುಹಕವಾಡಿರುವ ವಿಧಾನ ಪರಿಷತ್ ಬಿಜೆಪಿ...