Homeಅಂಕಣಗಳು"ಸುದೀಪನೂ ನಲವತ್ತು ಪರಸೆಂಟಾದ ಅಂತಾರಲ್ಲಾ ಸಾರ್"

“ಸುದೀಪನೂ ನಲವತ್ತು ಪರಸೆಂಟಾದ ಅಂತಾರಲ್ಲಾ ಸಾರ್”

- Advertisement -
- Advertisement -

ಬಿಜೆಪಿಯಲ್ಲಿ ಮತದಾರರಿಗೆ ತೋರಿಸಲು ಯೋಗ್ಯವಾದಂತಹ ಮುಸುಡಿ ಯಾವುದು ಇಲ್ಲವೆಂದು ಗ್ರಹಿಸಿದ ಬೊಮ್ಮಾಯಿ ನಮ್ಮ ಸರೋವರದ ಸಂಜೀವಣ್ಣನ ಮಗನಾದ ಸುದೀಪನನ್ನು ಗೋಗರೆದು ಎಳೆದು ತಂದಿದ್ದಾರಲ್ಲಾ. ತನ್ನ ಮಾತುಕತೆ ಮತ್ತು ಒಂದಿಷ್ಟು ಅಭಿನಯದಿಂದ ಜನಮನ ಸೆಳೆದಿದ್ದ ಸುದೀಪ್‌ನನ್ನು ಮಾತನಾಡಿಸಬೇಕೆನಿಸಿತು. ಫೋನ್ ಮಾಡಲಾಗಿ ರಿಂಗಾಯ್ತು ರಿಂಗ್ ಟೋನ್: “ಎಲ್ಲ ಮಾಯಾ ನಾವು ಮಾಯಾ ಎಲ್ಲ ಮಾ…”

“ಹಲೋ ಯಾರು?”

“ನಾನು ಸಾರ್ ನಿಮ್ಮ ಅಭಿಮಾನಿ ಯಾಹು.”

“ಯಾಹು ಅಂದ್ರ್ಯಾರು?”

“ಅದೆ ಸಾರ್, ಸಿರ್ಸಿ ಅತ್ರ ಮಾತಾಡ್ ಮಾತಾಡ್ ಮಲ್ಲಿಗೆ ಶೂಟಿಂಗ್ ನ್ಯಡಿವಾಗ ಪರಿಚಯಾದೆ. ನಿಮ್ಮ ಹೋಟ್ಲಲ್ಲಿ ಕುಡುದೂ ಕುಡುದು ಲಾಸಾದೆ ಅಂತ ನಿಮಗೆ ಮುಜುಗರ ಮಾಡಿದ್ನಲ್ಲಾ..”

“ಓ ಗೊತ್ತಾಯ್ತು ಬುಡಿ, ಹೇಗಿದ್ದೀರಿ?”

“ಹಾಗೆ ಇದ್ದಿನಿ, ನೀವ್ಯಾಕ್ ಸಾರ್ ಹಿಂಗಾದ್ರಿ?”

“ನಾನೇನಾಗಿದ್ದಿನಿ?”

“ಹೋಗಿ ಹೋಗಿ ಬಿಜೆಪಿ ಸೇರಿದ್ರಲ್ಲ ಸಾರ್?”

“ಬಿಜೆಪಿ ಸೇರಿಲ್ಲ. ನಮ್ಮ ಮಾಮನಿಗೆ ಕ್ಯಾನ್‌ವಾಸ್ ಮಾಡ್ತಿನಿ.”

“ಆ ನಿಮ್ಮ ಮಾಮ ಅಂದ್ರೆ ಯಾರು ಸಾರ್?”

“ಬೊಮ್ಮಾಯಿ.”

“ಅವರು ಬೇರೆ ಜಾತಿ, ನೀವು ಬೇರೆ ಜಾತಿ ಅಲ್ಲವಾ?”

“ಅವರು ನಮ್ಮ ಮಾವ ಆಗಿ ಹುಟ್ಟಬೇಕಾಗಿತ್ತು. ಮಿಸ್ಸಾದ್ರು ಆದ್ರು ನಮಗೆ ಮಾಮ.”

“ಯಾಕೊ ಈ ಸಂಬಂಧನೇ ಅಸಂಬದ್ಧವಾಗಿ ಕಾಣ್ತಾ ಅದೆ.”

“ವಿಶಾಲ ಮನಸ್ಸಿನಿಂದ ನೋಡಿ ಯಲ್ಲ ಸರಿಕಾಣ್ತದೆ.”

“ನಿಜ ಸಾರ್ ನೀವು ಬಿಗ್‌ಬಾಸಲ್ಲಿ ಕಾಣಿಸಿಕೊಂಡು ಮಾತಾಡದನ್ನ ಕೇಳಿದ್ರೆ ಈ ಮನುಷ್ಯನ ಮನಸ್ಸು ಎಷ್ಟು ವಿಶಾಲ ಅನ್ಸದು, ಆದ್ರೀಗೇನಾಯ್ತು ನೋಡಿ ಸಾ..”

“ಈಗೇನಾಗಿದೆ?”

“ನೀವು ಇಷ್ಟು ವರ್ಷ ಮಾಡಿದ್ದು ಮಾತಾಡಿದ್ದು ಯಲ್ಲ ಬಿಜೆಪಿ ಚರಂಡಿಲಿ ಕೊಚಗಂಡೋದಂಗಾಯ್ತು ಸಾರ್.”

“ಬಿಜೆಪಿನ ಚರಂಡಿ ಅಂತೀರಲ್ರೀ?”

“ಹೌದು ಸಾರ್ ಆ ಪಾರ್ಟಿ ಜನಕ್ಕೆ ಮುಸಲ್ಮಾನರನ್ನ ಕಂಡ್ರಾಗಲ್ಲ, ದಲಿತ್ರನ್ನ ಕಂಡ್ರಾಗಲ್ಲ, ಬಡವರನ್ನ ಕಂಡ್ರಾಗಲ್ಲ, ಸಾಹಿತಿಗಳನ್ನ ಕಂಡ್ರಾಗಲ್ಲ, ನಾಟಕ ಕಂಡ್ರಾಗಲ್ಲ, ಸಂಗೀತ ಕಂಡ್ರಾಗಲ್ಲ, ನಿಮ್ಮ ಮಕ್ಕಳು ಹಾಕೋ ಬಟ್ಟೆ ಕಂಡ್ರಾಗಲ್ಲ, ನಿಮ್ಮ ಮನೆ ಹೆಂಗಸರು ಕುಂಕುಮ ಇಡದೇಯಿದ್ರಾಗಲ್ಲ, ಅವುರೊಂಥರ ಬಗ್ಗೆ ಹೇಳಕ್ಕೆ ಈ ಪದ ಸಾಲಲ್ಲ ಸರ್. ಹೊಸ ಪದನೆ ಹುಡುಕಬೇಕು.”

ಇದನ್ನೂ ಓದಿ: ಸಾಚಾರ್ ವರದಿಯ ನಂತರವೂ ಇದ್ದ ನಾಲ್ಕು ಪರಸೆಂಟ್ ಮೀಸಲಾತಿ ಕಿತ್ತುಕೊಂಡರಲ್ಲಾ

“ನನಿಗೇನು ಅಂಗೆ ಕಾಣಲ್ಲ.”

“ಕಂಡಿದ್ರೆ ನೀವ್ಯಾಕೆ ಸಾರ್ ಬಿಜೆಪಿಗೊಯ್ತಿದ್ರಿ?”

“ಪುನಃ ಅದ್ನೆ ಹೇಳ್ತಿರಲ್ರಿ, ನಾನು ಬಿಜೆಪಿಗೋಗಿಲ್ಲ.”

“ಹೋಗದೆಯಿದ್ರು ನಿಮ್ಮ ಮಾಮನ ಜೊತೆ ನಿಂತಿದ್ದಿರಲ್ಲಾ?”

“ಹೌದು ನಮ್ಮ ಮಾವ ಅಂಗಲ್ಲ.”

“ನಿಮ್ಮ ಮಾವನ ಆಡಳಿತದಲ್ಲಿ ಏನಾಯ್ತು ಗೊತ್ತ ಸಾರ್?”

“ಏನಾಯ್ತು?”

“ಮುಸಲ್ಮಾನ ಹುಡುಗಿಯರ ಹಿಜಾಬ್ ಕಿತ್ರು, ಮುಸ್ಲಿಮರು ಹಣ್ಣು ಮಾರ್ತಾ ಯಿದ್ರೆ ಅಂಗಡಿನೆ ಉಡಾಯಿಸಿದ್ರು, ಹಣ್ಣು ಬೀದಿಗೆ ಚೆಲ್ಲಿ ತುಳುದ್ರು. ದನನಾ ಸಾಗುಸ್ತ ಅವರೆ ಅಂತ ಮುಸ್ಲಿಂ ಹುಡುಗನ್ನ ಹೊಡದ್ರು, ಅವುನು ಸೊಂಟ ಮುರುಕೊಂಡು ಕುಂತಲ್ಲೇ ಅವುನೆ. ಮೊನ್ನೆ ಕನಕಪುರದತ್ರ ಇದ್ರಿಷ್‌ನ ಕೊಲೆ ಆಯತು. ದೇವಸ್ಥಾನದತ್ರ ಮುಸ್ಲಿಮರು ಅಂಗಡಿ ಹಾಕದಂಗೆ ಮಾಡಿದ್ರು. ನಿಮ್ಮ ಹೋಟ್ಲಿರೋ ಶಿವಮೊಗ್ಗದಲ್ಲಿ 144 ಸೆಕ್ಷೆನ್ನಿದ್ರು ಈಶ್ವರಪ್ಪ ಮೆರವಣಿಗೆ ತೆಗೆದು ಮುಸಲ್ಮಾನರ ಕೇರಿಗೆ ನುಗ್ಗಿದರು. ಅವರ ಮನೆ ಲೂಟಿಯಾಗಂಗೆ ಮಾಡಿದ್ರು, ಟಿವಿ, ಪ್ರಿಜ್ಜು, ಪಾತ್ರೆ ಹರಡಿ ಬೀದಿಗಾಕಿದ್ರು. ಇದಕ್ಕೆ ಸಾಕ್ಷಿಯಾಗಿ ಎಂ.ಪಿ, ಡಿ.ಸಿ, ತಹಸೀಲ್ದಾರರೂ ಇದ್ರು. ಇದು ನಡೆದದ್ದು ಬೊಮ್ಮಾಯಿ ಅಂದ್ರೆ ನಿಮ್ಮ ಮಾವ ಮುಖ್ಯಮಂತ್ರಿಯಾಗಿದ್ದಾಗಿ ಸಾರ್. ಹಿಂಗಾಯ್ತಂತಲ್ಲಾ ಅಂತ ನಿಮ್ಮ ಮಾವನ್ನ ಕೇಳಿ; ಅದಕೇನಂತರೆ ಗೊತ್ತ? ಆಕ್ಷನ್‌ಗೆ ರಿಯಾಕ್ಷನ್ ಸಹಜ ಅಂತರೆ.”

“ಅದು ಸಹಜ ಅಲ್ಲವಾ.”

“ಪ್ರಚೋದನೆ ತಪ್ಪಲ್ಲವೇ? ನಿಮ್ಮನ್ನೆ ಒಬ್ಬ ಪತ್ರಕರ್ತ ಪದೇಪದೆ ಟೀಕೆ ಮಾಡಿದಾಗ ನೀವೇನಂದಿದ್ರೀ?”

“ಮರತೋಗಿದೆ..”

“ಬಿಜೆಪಿ ಸೇರಿದ ಮೇಲೆ ಮರಿಬೇಕಾಗುತ್ತೆ. ಆ ಪತ್ರಕರ್ತ ಹೀಗೆ ಬರೀತಿದ್ರೆ ನಾನು ಸುಮ್ಮನಿರಕ್ಕಾಗಲ್ಲ ಅಂದಿದ್ರಿ.”

“ಹೌದು ಆಗ ನನ್ನ ಸೈರಣೆ ಹಾಳಾಗಿತ್ತು.”

“ಸೈರಣೆ ಹಾಳಾದಾಗ ಸಂಭವಿಸೊ ಆಕ್ಷನ್‌ಗೆ ಯಾರು ಕಾರಣ ಸಾರ್? ಅದೆ ನಿಮ್ಮ ಮಾವನಿಗೆ ಗೊತ್ತಿಲ್ಲ, ಇರ್ಲಿ ಅಂತೂ ನಿಮಗೆ ನೀವೇ ಹಿನ್ನಡೆ ತಂದುಕೊಂಡ್ರಿ.”

“ಇದು ಹಿನ್ನಡೆ ಹೇಗ್ರಿ? ಒಂಥರದ ಮುನ್ನಡೆ.”

“ಇಲ್ಲ ಸಾರ್, ಕಾಗೆ ಸ್ನೇಹ ಮಾಡಿ ಗರುಡ ಪಕ್ಷಿ ಹಾಳಾಯ್ತು ಅನ್ನೋ ಗಾದೆ ಹಾಂಗೆ, ಸುದೀಪನ ವ್ಯಕ್ತಿತ್ವನೆ ಹಾಳಾಯ್ತು.”

“ಸುಮಲತಾರ ಚುನಾವಣೆ ಪ್ರಚಾರಕ್ಕೆ ದರ್ಶನ್, ಯಶ್ ಹೋಗಿರಲಿಲ್ವ?”

“ಕೊನೆಪಕ್ಷ ಸುಮಲತ ಪಕ್ಷೇತರವಾಗಿದ್ರು, ಅದರಲ್ಲೂ ಮಹಿಳೆ. ಅವರ ವಿರುದ್ಧ ಎರಡು ಪಾರ್ಟಿ ಒಂದಾಗಿದ್ದೋ. ಮಂಡ್ಯದಲ್ಲಿ ಸೆರೆಗೊಡ್ಡಿ ನಿಂತ ಆಕೆಯ ಸಹಾಯಕ್ಕೆ ಹೋಗಿದ್ದುದು ಮಾನವೀಯ ನಡವಳಿಕೆ. ಆಗ ನೀವು ದೂರ ಇದ್ರಿ.”

“ಅದಕ್ಕೆ ಬೇರೇ ಕಾರಣ ಇದೆ.”

“ಅವು ನಮಗೆ ಗೊತ್ತಾಗಲಿಲ್ಲ. ಅಂಬರೀಶು ಸರೋವರ ಸಂಜೀವಣ್ಣನಿಗೆ ಮಾಡಿದ ಉಪಕಾರಕ್ಕೆ ಸಂಜೀವಣ್ಣ ಚುನಾವಣಾ ಪ್ರಚಾರಕ್ಕೆ ಹೋಗಲಿಲ್ಲ. ಮೊಯ್ಲಿಯವರು ಭಾರಿ ಉಪಕಾರ ಮಾಡಿದ್ರಂತೆ, ಆದ್ರು ಅವರ ಚುನಾವಣೆ ಪ್ರಚಾರಕೆ ಸಂಜೀವಣ್ಣ ಹೋಗಲಿಲ್ಲ”

“ನಮ್ಮಪ್ಪ ನನ್ನಂಗೆ ಸ್ಟಾರ್ ನಟ ಅಲ್ಲ”

“ನೀವು ಸ್ಟಾರ್ ನಟ ಅಲ್ಲ ಸಾರ್. ನನಿಗೇನೋ ಬಿಜಿನೆಸ್ ಮ್ಯಾನ್ ತರ ಕಾಣ್ತಿರಿ. ನಟನೆ ಸೀರಿಯಸ್ಸಾಗಿ ತಗಂಡಂಗೆ ಕಾಣ್ತಯಿಲ್ಲ. ನಿಮ್ಮ ಮಾವ ನಿಮಗೆ ಸಹಾಯ ಮಾಡಿದ್ರೆ ಅದನ್ನ ವಾಪಸ್ ಮಾಡಿ, ಅದು ಬಿಟ್ಟು ನಿಮ್ಮ ವ್ಯಕ್ತಿತ್ವನೆ ನಾಶ ಮಾಡಿಕಂಡ್ರಲ್ಲ ಸಾರ್?”

“ವ್ಯಕ್ತಿತ್ವನ ನಾಶ ಆಗೋ ಅಂತದ್ದೇನಾಗಿದೇರಿ? ಸುಮ್ಮನೆ ಏನೇನೋ ಮಾತಾಡಬೇಡಿ..”

“ದೇವರಾಣೆ ನಾನು ಏನೇನೂ ಮಾತಾಡ್ತಯಿಲ್ಲ ಸಾರ್. ನಿಮ್ಮ ವಿಷಯದಲ್ಲಿ ಕಂಡಿದ್ನ ಹೇಳ್ತ ಯಿದಿನಿ. ಸಿನಿಮಾದಲ್ಲಿ ನಿಮ್ಮ ವಿಶೇಷ ಪ್ರತಿಭೆ ತೋರದೆಯಿದ್ರೂ ಬಿಗ್‌ಬಾಸಲ್ಲಿ ನೀವಾಡುತಿದ್ದ ಮಾತು, ತಿಕ್ಕಲ ಜನಗಳನ್ನೆಲ್ಲಾ ನೀವು ನಿಭಾಯಿಸುತಿದ್ದ ರೀತಿಗೆ ನಮ್ಮ ಜನ ನಿಮ್ಮನ್ನ ಮೆಚ್ಚಿಗಂಡಿದ್ರು. ಈಗ ಬಿಜೆಪಿ ಮಾಡಿರೋ ಎಲ್ಲಾ ಅನಾಹುತನೂ ನಿಮ್ಮ ತಲೆಗೆ ಕಟ್ಟಿ, ನೀವು ಟಿವಿ ಪರದೆ ಮೇಲೆ ಬಂದಾಗ, ಬಂದಾ ಇವುನೊಬ್ಬ ಅಂತರೆ ಜೆಡಿಎಸ್‌ನವರು, ಕಾಂಗ್ರೆಸ್ಸಿನವರು, ಎಎಪಿಗಳು ಇನ್ನು ಯಾರ್‍ಯಾರೋ ನಿಮ್ಮ ಮನಸ್ಥಿತಿಗೆ ಮರುಗಿ ಟಿವಿ ಆಫ್ ಮಾಡಬಹುದು. ಟಿವಿ ಒಂಥರ ನಮ್ಮ ಜನಗಳ ಮುಗ್ಧ ಮನಸ್ಸಿನ ಪರದೆ. ಅಲ್ಲಿ ಜನಮನ ಗೆದ್ದ ನೀವು ಮುಂದೆ ಒಬ್ಬ ಈಶ್ವರಪ್ಪನಂಗೆ ಕಾಣಬಹುದು. ರೇಣುಕಾಚಾರಿ, ಸಿ.ಟಿ ರವಿ, ಅಶ್ವತ್ಥನಾರಾಯಣ, ಮಾಡಾಳು ಮಗನಂಗೂ ಕಾಣಬಹುದು. ಜಾತ್ಯತೀತವಾಗಿ ಜನಸಮೂಹವನ್ನ ಆವರಿಸೊ ಸಿನಿಮಾ ಟಿವಿ ಪರದೆಯಲ್ಲಿ ಕಾಣಿಸಿಗಳೂ ಕಲಾವಿದರು ಜಾತ್ಯತೀತವಾಗಿ ಬದುಕೋದು ಒಳ್ಳೆದು. ಜಾತ್ಯತೀತವಾಗಿ ಬದುಕೋದು ಕಷ್ಟವಾದೋರು ಬಿಜೆಪಿ ಸೇರತರೆ. ಅಲ್ಲಿಗೆ ಅವರ ಅವಸಾನ ಆರಂಭವಾದಂಗೆ. ನಿಮ್ಮ ಕತೆನೂ ಅಂಗೇ ಆಗಬಹುದು ಅಂತ ನನ್ನ ಅನುಮಾನ.”

“ಅಂಗೇನೂ ಆಗಲ್ಲ ಕಂಡ್ರಿ, ಬಿಜೆಪಿಲೂ ನಾನು ಹೀರೊ ಆಯ್ತಿನಿ.”

“ಥೂತ್ತೇರಿ.”

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಂಬತ್ತನೇ ತರಗತಿ ಪಠ್ಯಪುಸ್ತಕದಲ್ಲಿ ತುರ್ತು ಪರಿಸ್ಥಿತಿ ಅಧ್ಯಾಯ ಸೇರಿಸಿದ ಎನ್‌ಸಿಇಆರ್‌ಟಿ

ಭಾರತದಲ್ಲಿ ತುರ್ತು ಪರಿಸ್ಥಿತಿ ಘೋಷಿಸಲ್ಪಟ್ಟ ಸುಮಾರು ಐದು ದಶಕಗಳ ನಂತರ, ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಈ ವಿಷಯವನ್ನು 9 ನೇ ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ ಮೊದಲ...

‘ಆರ್‌ಎಸ್‌ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದೆ’: ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ

ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ಹಾಗೂ ಆಡಳಿತಾರೂಢ ಬಿಜೆಪಿ ವಿರುದ್ಧ ಕರ್ನಾಟಕದ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಮತ್ತೊಮ್ಮೆ ತೀವ್ರ ಸ್ವರೂಪದ ಸೈದ್ಧಾಂತಿಕ ದಾಳಿ ನಡೆಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಸರಣಿ ಪ್ರಶ್ನೆಗಳನ್ನು...

ಹೊಸ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಜಾರಿಯ ಜೊತೆಯಲ್ಲೆ ಸುಪ್ರೀಂ ಕೋರ್ಟ್‌ಗೆ ಹೋಗಲು ಕರ್ನಾಟಕ ಸಜ್ಜು

ಕೇಂದ್ರ ಸರ್ಕಾರದ ಹೊಸ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ‘ವಿಕಸಿತ ಭಾರತ-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ)’ (VB-G RAM G) ಕಾಯ್ದೆಯ ಹಲವು ನಿಯಮಗಳಿಗೆ ತೀವ್ರ ವಿರೋಧ ವ್ಯಕ್ತಪಡಿಸಿದ್ದರೂ...

ಉತ್ತರ ಪ್ರದೇಶ: ಮದುವೆ ರಿಸೆಪ್ಷನ್‌ನಲ್ಲಿ ಗೋಮಾಂಸ ಬಡಿಸಿದ ಆರೋಪ; ವರನ ತಂದೆ ಸೇರಿ ಏಳು ಮಂದಿ ಬಂಧನ, ಮಂಟಪ ಸೀಲ್

ಶಾಮ್ಲಿ (ಉತ್ತರ ಪ್ರದೇಶ): ಉತ್ತರ ಪ್ರದೇಶದ ಶಾಮ್ಲಿ ಜಿಲ್ಲೆಯ ಕೈರಾನಾ ಪಟ್ಟಣದಲ್ಲಿ ನಡೆದ ಮದುವೆ ಆರತಕ್ಷತೆ (ವಲೀಮಾ) ಸಮಾರಂಭವೊಂದು ಈಗ ಭಾರೀ ವಿವಾದಕ್ಕೆ ಕಾರಣವಾಗಿದೆ. ಸಮಾರಂಭದಲ್ಲಿ ಅತಿಥಿಗಳಿಗೆ ಗೋಮಾಂಸವನ್ನು ಬೇಯಿಸಿ ಬಡಿಸಲಾಗಿದೆ ಎಂಬ...

ರಾಮ ಮಂದಿರ ದೇಣಿಗೆ ವಿವಾದ: ಎಫ್‌ಐಆರ್ ದಾಖಲಿಸಿ ತ್ವರಿತ ನ್ಯಾಯಾಲಯದ ವಿಚಾರಣೆಗೆ ವಿಶ್ವ ಹಿಂದೂ ಪರಿಷತ್ ಆಗ್ರಹ

ರಾಮ ದೇಣಿಗೆ ವಿವಾದ ದುರುಪಯೋಗ ಕುರಿತು ಎಸ್‌ಐಟಿ ತನ್ನ ಪ್ರಾಥಮಿಕ ವರದಿಯನ್ನು ಸಲ್ಲಿಸಿದ ಕೂಡಲೇ, ಬಲಪಂಥೀಯ ಹಿಂದುತ್ವ ಸಂಘಟನೆ ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ) ಪ್ರಕರಣದಲ್ಲಿ ಎಫ್‌ಐಆರ್ ದಾಖಲಿಸಬೇಕೆಂದು ಒತ್ತಾಯಿಸಿದೆ. ವಿಎಚ್‌ಪಿ ಅಂತರರಾಷ್ಟ್ರೀಯ...

ಪಾಸ್‌ಪೋರ್ಟ್ ಪೌರತ್ವದ ದಾಖಲೆಯಲ್ಲ: ವಿದೇಶಾಂಗ ಸಚಿವಾಲಯ

ಪಾಸ್‌ಪೋರ್ಟ್ ಒಂದು ಪ್ರಯಾಣದ ದಾಖಲೆಯಾಗಿದೆಯೇ ಹೊರತು, ಪೌರತ್ವದ ದಾಖಲೆಯಲ್ಲ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ (ಎಂಇಎ) ಅಧಿಕಾರಿಗಳು ಬುಧವಾರ (ಜೂನ್ 24) ತಿಳಿಸಿದ್ದಾರೆ. ಈ ಮೂಲಕ ಅವರು ಭಾರತೀಯ ಪೌರತ್ವವನ್ನು ಖಚಿತವಾಗಿ ಸಾಬೀತುಪಡಿಸುವ...

90 ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ, ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯ ಹಾಳಾಗಿದೆ ಆದರೆ ಪ್ರಧಾನ್ ತಮ್ಮ ಕುರ್ಚಿಗೆ ಅಂಟಿಕೊಂಡಿದ್ದಾರೆ: ಮಲ್ಲಿಕಾರ್ಜುನ ಖರ್ಗೆ

ನವದೆಹಲಿ: ದೇಶಾದ್ಯಂತ ಭಾರಿ ಸಂಚಲನ ಮೂಡಿಸಿರುವ 'ನೀಟ್' (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ವಿರುದ್ಧ ವಿರೋಧ ಪಕ್ಷಗಳು ತಮ್ಮ ಆಕ್ರೋಶವನ್ನು ಮತ್ತಷ್ಟು ತೀವ್ರಗೊಳಿಸಿವೆ. ಪರೀಕ್ಷಾ ಅಕ್ರಮಗಳನ್ನು ವಿರೋಧಿಸಿ...

2023ರಿಂದ 20 ಸಾವಿರಕ್ಕೂ ಹೆಚ್ಚು ಪ್ಯಾಲೆಸ್ತೀನ್ ಮಕ್ಕಳನ್ನು ಹತ್ಯೆಗೈದ ಇಸ್ರೇಲ್; ಉದ್ದೇಶಪೂರ್ವಕ ‘ನರಮೇಧ’ ಎಂದ ವರದಿ

ಪ್ಯಾಲೆಸ್ತೀನ್ ಮಕ್ಕಳನ್ನು ಉದ್ದೇಶಪೂರ್ವಕವಾಗಿ ಗುರಿಯಾಗಿಸಿಕೊಂಡು ಹತ್ಯೆ ಮಾಡುವ ಮೂಲಕ ಇಸ್ರೇಲ್‌ ಸೇನೆ ನರಮೇಧ ನಡೆಸಿದೆ ಎಂದು ವಿಶ್ವಸಂಸ್ಥೆಯ ಸ್ವತಂತ್ರ ಅಂತಾರಾಷ್ಟ್ರೀಯ ವಿಚಾರಣಾ ಆಯೋಗ ಮಂಗಳವಾರ (ಜೂ.23) ತಿಳಿಸಿದೆ. ಇಸ್ರೇಲ್ ಪಡೆಗಳು ಅಕ್ಟೋಬರ್ 2023ರಿಂದ ಈವರೆಗೆ...

ಮೀಸಲಾತಿ ರದ್ದುಗೊಳಿಸಲು ಬಿಜೆಪಿ ಮೂರನೇ ಎರಡರಷ್ಟು ಬಹುಮತ ಬಯಸುತ್ತಿದೆ: ಜೈರಾಮ್‌ ರಮೇಶ್‌

ಲೋಕಸಭೆಯಲ್ಲಿ ಬಿಜೆಪಿ ಮೂರನೇ ಎರಡರಷ್ಟು ಬಹುಮತಕ್ಕಾಗಿ ಶ್ರಮಿಸುತ್ತಿದೆ. ಏಕೆಂದರೆ, ಮೀಸಲಾತಿಯನ್ನು ಕೊನೆಗೊಳಿಸಲು ಸಂವಿಧಾನವನ್ನು ತಿದ್ದುಪಡಿ ಮಾಡುವುದು ಅದರ ನಿಜವಾದ ಮತ್ತು ಅಂತಿಮ ಗುರಿಯಾಗಿದೆ ಎಂದು ಕಾಂಗ್ರೆಸ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್...

ತಿರುವನಂತಪುರಂ | 20 ಬಿಜೆಪಿ ಕೌನ್ಸಿಲರ್‌ಗಳ ಪ್ರಮಾಣವಚನ ಅಸಿಂಧು : ಹೈಕೋರ್ಟ್ ಮಹತ್ವದ ಆದೇಶ

ತಿರುವನಂತಪುರಂ ಮಹಾನಗರ ಪಾಲಿಕೆಯ 20 ಬಿಜೆಪಿ ಕೌನ್ಸಿಲರ್‌ಗಳಿಗೆ ನಾಲ್ಕು ವಾರಗಳ ಒಳಗೆ ಮತ್ತೊಮ್ಮೆ ಪ್ರಮಾಣವಚನ ಸ್ವೀಕರಿಸುವಂತೆ ಕೇರಳ ಹೈಕೋರ್ಟ್ ಬುಧವಾರ (ಜೂ.24) ಆದೇಶಿಸಿದೆ. ಜನವರಿ ತಿಂಗಳಲ್ಲಿ ಕೌನ್ಸಿಲರ್‌ಗಳ ಪ್ರಮಾಣವಚನ ನಡೆದಿತ್ತು. ಡೆಪ್ಯುಟಿ ಮೇಯರ್...