Homeಕರೋನಾ ತಲ್ಲಣಕೋವಿಡ್ ಬಿಕ್ಕಟ್ಟಿನಲ್ಲಿ ಜನರಿಗೆ ನೆರವು ನೀಡಲಾಗುತ್ತಿಲ್ಲ, ರಾಷ್ಟ್ರಪತಿ ಆಡಳಿತ ತನ್ನಿ: ಆಪ್ ಹಿರಿಯ ಶಾಸಕನ ಅಳಲು

ಕೋವಿಡ್ ಬಿಕ್ಕಟ್ಟಿನಲ್ಲಿ ಜನರಿಗೆ ನೆರವು ನೀಡಲಾಗುತ್ತಿಲ್ಲ, ರಾಷ್ಟ್ರಪತಿ ಆಡಳಿತ ತನ್ನಿ: ಆಪ್ ಹಿರಿಯ ಶಾಸಕನ ಅಳಲು

- Advertisement -
- Advertisement -

‘ನಾನು ಆರು ಬಾರಿ ಶಾಸಕ, ದೆಹಲಿಯ ಹಿರಿಯ ಶಾಸಕ. ಆದರೆ ಇದರ ಹೊರತಾಗಿಯೂ, ಯಾರೂ ಪ್ರತಿಕ್ರಿಯಿಸುತ್ತಿಲ್ಲ, ಜನರಿಗೆ ನೆರವು ನೀಡಲಾಗುತ್ತಿಲ್ಲ. ನೀವು ಯಾವುದೇ ನೋಡಲ್ ಅಧಿಕಾರಿಯನ್ನು ಸಂಪರ್ಕಿಸಲು ಸಾಧ್ಯವಿಲ್ಲ. ಈ ಪರಿಸ್ಥಿತಿಯಲ್ಲಿ ದೆಹಲಿಯಲ್ಲಿ ರಾಷ್ಟ್ರಪತಿ ಆಡಳಿತವನ್ನು ವಿಧಿಸುವಂತೆ ನಾನು ದೆಹಲಿ ಹೈಕೋರ್ಟ್‌ಗೆ ಮನವಿ ಮಾಡಲು ಬಯಸುತ್ತೇನೆ, ಇಲ್ಲದಿದ್ದರೆ ರಸ್ತೆಯಲ್ಲಿ ಮೃತ ದೇಹಗಳು ಇರುತ್ತವೆ” ಎಂದು ಆಮ್ ಆದ್ಮಿ ಪಕ್ಷದ ಶಾಸಕ ಶೋಯೆಬ್ ಇಕ್ಬಾಲ್ ಅಳಲು ತೋಡಿಕೊಂಡಿದ್ದಾರೆ ಎಂದು ಇಂಡಿಯನ್ ಎಕ್ಸ್‌ಪ್ರೆಸ್‌ ವರದಿ ಮಾಡಿದೆ.

ಮಾತಿಯಾ ಮಹಲ್‌ನ ಶಾಸಕ ಶೋಯೆಬ್ ಇಕ್ಬಾಲ್, ಕೋವಿಡ್ ಸಾಂಕ್ರಾಮಿಕದ ತೀವ್ರತೆಗೆ ನಲುಗಿರುವ ಜನತೆಗೆ ನೆರವು ನೀಡಲೂ ಆಗುತ್ತಿಲ್ಲ. ಪರಿಸ್ಥಿತಿ ಕೈ ಮೀರಿದೆ. ದೆಹಲಿಯಲ್ಲಿ ರಾಷ್ಟ್ರಪತಿ ಆಳ್ವಿಕೆ ತನ್ನಿ ಎಂದು ಅಸಹಾಯಕತೆಯಲ್ಲಿ ನ್ಯಾಯಾಲಯವನ್ನು ಕೋರಿದ್ದಾರೆ.

2020ರ ವಿಧಾನಸಭಾ ಚುನಾವಣೆಗೆ ಒಂದು ತಿಂಗಳ ಹಿಂದಿನ ತನಕ ಕಾಂಗ್ರೆಸ್ ಜೊತೆಗಿದ್ದ ಇಕ್ಬಾಲ್ ಅವರು ನಂತರ ಆಮ್ ಆದ್ಮಿ ಪಕ್ಷ ಸೇರಿ ಶಾಸಕರಾಗಿದ್ದಾರೆ. ಅವರ ವೀಡಿಯೊ ಸಂದೇಶದಲ್ಲಿ, “ದೆಹಲಿಯ ಸ್ಥಿತಿಯಿಂದ ನನಗೆ ನೋವಾಗಿದೆ.. ನಾನು ತುಂಬಾ ಚಿಂತಿತನಾಗಿದ್ದೇನೆ. ನನಗೆ ನಿದ್ರೆ ಬರುತ್ತಿಲ್ಲ. ಜನರಿಗೆ ಆಮ್ಲಜನಕ ಮತ್ತು ಔಷಧಿಗಳು ಸಿಗುತ್ತಿಲ್ಲ. ನನ್ನ ಸ್ನೇಹಿತ ಬಳಲುತ್ತಿದ್ದಾನೆ, ಆಸ್ಪತ್ರೆಯಲ್ಲಿದ್ದಾನೆ. ಆದರೆ ಆಮ್ಲಜನಕ ಅಥವಾ ವೆಂಟಿಲೇಟರ್ ಸಿಗುತ್ತಿಲ್ಲ. ರಿಮೆಡೆಸಿವಿರ್‌ಗಾಗಿ ಅವರ ಪ್ರಿಸ್ಕಿಪ್ಸನ್ ನನ್ನ ಬಳಿ ಇದೆ. ಆದರೆ ನಾನು ಅದನ್ನು ಎಲ್ಲಿಂದ ಪಡೆಯಲಿ? ಎಲ್ಲೂ ಸಿಗುತ್ತಿಲ್ಲ. ಸ್ನೇಹಿತನ ಮಕ್ಕಳು ಗಾಬರಿಯಲ್ಲಿ ಔಷಧಿಗಾಗಿ ಅಲೆಯುತ್ತಿದ್ದಾರೆ. ಇಂದು, ನಾವು ಶಾಸಕರಾಗಿದ್ದಕ್ಕೆ ನಾಚಿಕೆ ಪಡಬೇಕಾಗಿದೆ. ಏಕೆಂದರೆ ನಮಗೆ ಸಹಾಯ ಮಾಡಲು ಸಾಧ್ಯವಾಗುತ್ತಿಲ್ಲ. ಸರ್ಕಾರಕ್ಕೂ ಸಹಾಯ ಮಾಡಲು ಸಾಧ್ಯವಾಗುತ್ತಿಲ್ಲ’ ಎಂದು ತಮ್ಮ ನೋವನ್ನು ತೋಡಿಕೊಂಡಿದ್ದಾರೆ.

ಇಕ್ಬಾಲ್ 1993ರಿಂದ ದೆಹಲಿ ವಿಧಾನಸಭೆಯ ಮಾತಿಯಾ ಮಹಲ್ ಕ್ಷೇತ್ರವನ್ನು ಆರನೇ ಸಲ ಪ್ರತಿನಿಧಿಸುತ್ತಿದ್ದಾರೆ.

ಇಕ್ಬಾಲ್ ಈ ಹಿಂದೆ ಕಾಂಗ್ರೆಸ್, ಲೋಕ ಜನಶಕ್ತಿ ಪಕ್ಷ (ಜೆಎಲ್‌ಪಿ) ಮತ್ತು ಜನತಾದಳದ ಮೂರು ಅವತಾರಗಳಾದ ಜನತಾದಳ, ಜನತಾದಳ (ಜಾತ್ಯತೀತ) ಮತ್ತು ಜನತಾದಳ (ಯುನೈಟೆಡ್) ಜೊತೆಗಿದ್ದರು. ಆಪ್ 2015ರಲ್ಲಿ ಅವರ ಗೆಲುವಿಗೆ ಬ್ರೇಕ್ ಹಾಕಿತ್ತು. ಈ ಸಲ ಆಪ್‌ನಿಂದ ಶಾಸಕರಾಗಿದ್ದಾರೆ.

ಇಕ್ಬಾಲ್ ಅವರ ಈ ಹೇಳಿಕೆಯ ಬಗ್ಗೆ ಎಎಪಿ ರಾಜ್ಯ ಸಮಿತಿ ಈವರೆಗೆ ಪ್ರತಿಕ್ರಿಯಿಸಿಲ್ಲ. ಇಕ್ಬಾಲ್ ಅವರ ಹೇಳಿಕೆಗೆ ಪ್ರತಿಕ್ರಿಯಿಸಿದ ದೆಹಲಿ ಬಿಜೆಪಿ ವಕ್ತಾರ ಹರೀಶ್ ಖುರಾನಾ, “ಇಕ್ಬಾಲ್ ಕೇವಲ ಎಎಪಿ ಶಾಸಕರಲ್ಲ, ದೆಹಲಿ ವಿಧಾನಸಭೆಯಲ್ಲಿ ಹೆಚ್ಚು ಅನುಭವ ಹೊಂದಿರುವವರು. ಪರಿಸ್ಥಿತಿ ಹತೋಟಿಯಲ್ಲಿಲ್ಲ ಮತ್ತು ಜನರು ತೊಂದರೆ ಅನುಭವಿಸುತ್ತಿದ್ದಾರೆ ಎಂದು ಅವರು ಹೇಳುತ್ತಿದ್ದಾರೆಂದರೆ ಅದು ಸರಿಯಾಗಿದೆ. ಹಾಗಾಗಿ, ರಾಷ್ಟ್ರಪತಿ ಆಡಳಿತವನ್ನು ಹೇರಬೇಕು, ದೆಹಲಿ ಈಗ ಕೇಂದ್ರದ ನಿಯಂತ್ರಣದಲ್ಲಿರಬೇಕು. ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ಪರಿಸ್ಥಿತಿಯನ್ನು ನಿರ್ವಹಿಸಲು ಸಾಧ್ಯವಾಗದ ಕಾರಣ ರಾಷ್ಟ್ರಪತಿ ಆಡಳಿತವಿರಬೇಕು ಎಂದು ನಾವು ನಂಬುತ್ತೇವೆ’ ಎಂದಿದ್ದಾರೆ.

ದೆಹಲಿ ಕಾಂಗ್ರೆಸ್ ಉಪಾಧ್ಯಕ್ಷ ಅಭಿಷೇಕ್ ದತ್, ನಗರದಲ್ಲಿ ಕೋವಿಡ್ ಹರಡುವಿಕೆ ಮತ್ತು ಸಂಬಂಧಿತ ಸಾವುಗಳನ್ನು ಕೊನೆಗೊಳಿಸಲು ಸೇನೆಯು ದೆಹಲಿಯನ್ನು ಸ್ವಾಧೀನಪಡಿಸಿಕೊಳ್ಳಬೇಕು ಮತ್ತು ಆರೋಗ್ಯ ಮೂಲಸೌಕರ್ಯಗಳನ್ನು ನಿರ್ವಹಿಸಬೇಕು ಎಂದು ಹೇಳಿದರು. ರಾಜ್ಯದಲ್ಲಿ ಆರ್‌ಟಿ-ಪಿಸಿಆರ್ ಪರೀಕ್ಷೆಯನ್ನು ಸರ್ಕಾರ ನಿಧಾನಗೊಳಿಸಿದೆ ಮತ್ತು ಕೋವಿಡ್ ಸಾವಿನ ಅಂಕಿಅಂಶಗಳು ಸರಿಯಾಗಿ ವರದಿಯಾಗಿಲ್ಲ ಎಂದು ಅವರು ಆರೋಪಿಸಿದ್ದಾರೆ.


ಇದನ್ನೂ ಓದಿ: ದೆಹಲಿಯಾದ್ಯಂತ ಬೆಂಕಿಯೇ ಕಾಣುವಾಗ ಇಲ್ಲಿನ ಬಿಜೆಪಿ ಎಲ್ಲಿ?: ಆರ್‌ಎಸ್‌ಎಸ್ ಮುಖಂಡರೊಬ್ಬರ ಆಕ್ರೋಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...