Homeಕರೋನಾ ತಲ್ಲಣಕೋವಿಡ್ ಬಿಕ್ಕಟ್ಟಿನಲ್ಲಿ ಜನರಿಗೆ ನೆರವು ನೀಡಲಾಗುತ್ತಿಲ್ಲ, ರಾಷ್ಟ್ರಪತಿ ಆಡಳಿತ ತನ್ನಿ: ಆಪ್ ಹಿರಿಯ ಶಾಸಕನ ಅಳಲು

ಕೋವಿಡ್ ಬಿಕ್ಕಟ್ಟಿನಲ್ಲಿ ಜನರಿಗೆ ನೆರವು ನೀಡಲಾಗುತ್ತಿಲ್ಲ, ರಾಷ್ಟ್ರಪತಿ ಆಡಳಿತ ತನ್ನಿ: ಆಪ್ ಹಿರಿಯ ಶಾಸಕನ ಅಳಲು

- Advertisement -
- Advertisement -

‘ನಾನು ಆರು ಬಾರಿ ಶಾಸಕ, ದೆಹಲಿಯ ಹಿರಿಯ ಶಾಸಕ. ಆದರೆ ಇದರ ಹೊರತಾಗಿಯೂ, ಯಾರೂ ಪ್ರತಿಕ್ರಿಯಿಸುತ್ತಿಲ್ಲ, ಜನರಿಗೆ ನೆರವು ನೀಡಲಾಗುತ್ತಿಲ್ಲ. ನೀವು ಯಾವುದೇ ನೋಡಲ್ ಅಧಿಕಾರಿಯನ್ನು ಸಂಪರ್ಕಿಸಲು ಸಾಧ್ಯವಿಲ್ಲ. ಈ ಪರಿಸ್ಥಿತಿಯಲ್ಲಿ ದೆಹಲಿಯಲ್ಲಿ ರಾಷ್ಟ್ರಪತಿ ಆಡಳಿತವನ್ನು ವಿಧಿಸುವಂತೆ ನಾನು ದೆಹಲಿ ಹೈಕೋರ್ಟ್‌ಗೆ ಮನವಿ ಮಾಡಲು ಬಯಸುತ್ತೇನೆ, ಇಲ್ಲದಿದ್ದರೆ ರಸ್ತೆಯಲ್ಲಿ ಮೃತ ದೇಹಗಳು ಇರುತ್ತವೆ” ಎಂದು ಆಮ್ ಆದ್ಮಿ ಪಕ್ಷದ ಶಾಸಕ ಶೋಯೆಬ್ ಇಕ್ಬಾಲ್ ಅಳಲು ತೋಡಿಕೊಂಡಿದ್ದಾರೆ ಎಂದು ಇಂಡಿಯನ್ ಎಕ್ಸ್‌ಪ್ರೆಸ್‌ ವರದಿ ಮಾಡಿದೆ.

ಮಾತಿಯಾ ಮಹಲ್‌ನ ಶಾಸಕ ಶೋಯೆಬ್ ಇಕ್ಬಾಲ್, ಕೋವಿಡ್ ಸಾಂಕ್ರಾಮಿಕದ ತೀವ್ರತೆಗೆ ನಲುಗಿರುವ ಜನತೆಗೆ ನೆರವು ನೀಡಲೂ ಆಗುತ್ತಿಲ್ಲ. ಪರಿಸ್ಥಿತಿ ಕೈ ಮೀರಿದೆ. ದೆಹಲಿಯಲ್ಲಿ ರಾಷ್ಟ್ರಪತಿ ಆಳ್ವಿಕೆ ತನ್ನಿ ಎಂದು ಅಸಹಾಯಕತೆಯಲ್ಲಿ ನ್ಯಾಯಾಲಯವನ್ನು ಕೋರಿದ್ದಾರೆ.

2020ರ ವಿಧಾನಸಭಾ ಚುನಾವಣೆಗೆ ಒಂದು ತಿಂಗಳ ಹಿಂದಿನ ತನಕ ಕಾಂಗ್ರೆಸ್ ಜೊತೆಗಿದ್ದ ಇಕ್ಬಾಲ್ ಅವರು ನಂತರ ಆಮ್ ಆದ್ಮಿ ಪಕ್ಷ ಸೇರಿ ಶಾಸಕರಾಗಿದ್ದಾರೆ. ಅವರ ವೀಡಿಯೊ ಸಂದೇಶದಲ್ಲಿ, “ದೆಹಲಿಯ ಸ್ಥಿತಿಯಿಂದ ನನಗೆ ನೋವಾಗಿದೆ.. ನಾನು ತುಂಬಾ ಚಿಂತಿತನಾಗಿದ್ದೇನೆ. ನನಗೆ ನಿದ್ರೆ ಬರುತ್ತಿಲ್ಲ. ಜನರಿಗೆ ಆಮ್ಲಜನಕ ಮತ್ತು ಔಷಧಿಗಳು ಸಿಗುತ್ತಿಲ್ಲ. ನನ್ನ ಸ್ನೇಹಿತ ಬಳಲುತ್ತಿದ್ದಾನೆ, ಆಸ್ಪತ್ರೆಯಲ್ಲಿದ್ದಾನೆ. ಆದರೆ ಆಮ್ಲಜನಕ ಅಥವಾ ವೆಂಟಿಲೇಟರ್ ಸಿಗುತ್ತಿಲ್ಲ. ರಿಮೆಡೆಸಿವಿರ್‌ಗಾಗಿ ಅವರ ಪ್ರಿಸ್ಕಿಪ್ಸನ್ ನನ್ನ ಬಳಿ ಇದೆ. ಆದರೆ ನಾನು ಅದನ್ನು ಎಲ್ಲಿಂದ ಪಡೆಯಲಿ? ಎಲ್ಲೂ ಸಿಗುತ್ತಿಲ್ಲ. ಸ್ನೇಹಿತನ ಮಕ್ಕಳು ಗಾಬರಿಯಲ್ಲಿ ಔಷಧಿಗಾಗಿ ಅಲೆಯುತ್ತಿದ್ದಾರೆ. ಇಂದು, ನಾವು ಶಾಸಕರಾಗಿದ್ದಕ್ಕೆ ನಾಚಿಕೆ ಪಡಬೇಕಾಗಿದೆ. ಏಕೆಂದರೆ ನಮಗೆ ಸಹಾಯ ಮಾಡಲು ಸಾಧ್ಯವಾಗುತ್ತಿಲ್ಲ. ಸರ್ಕಾರಕ್ಕೂ ಸಹಾಯ ಮಾಡಲು ಸಾಧ್ಯವಾಗುತ್ತಿಲ್ಲ’ ಎಂದು ತಮ್ಮ ನೋವನ್ನು ತೋಡಿಕೊಂಡಿದ್ದಾರೆ.

ಇಕ್ಬಾಲ್ 1993ರಿಂದ ದೆಹಲಿ ವಿಧಾನಸಭೆಯ ಮಾತಿಯಾ ಮಹಲ್ ಕ್ಷೇತ್ರವನ್ನು ಆರನೇ ಸಲ ಪ್ರತಿನಿಧಿಸುತ್ತಿದ್ದಾರೆ.

ಇಕ್ಬಾಲ್ ಈ ಹಿಂದೆ ಕಾಂಗ್ರೆಸ್, ಲೋಕ ಜನಶಕ್ತಿ ಪಕ್ಷ (ಜೆಎಲ್‌ಪಿ) ಮತ್ತು ಜನತಾದಳದ ಮೂರು ಅವತಾರಗಳಾದ ಜನತಾದಳ, ಜನತಾದಳ (ಜಾತ್ಯತೀತ) ಮತ್ತು ಜನತಾದಳ (ಯುನೈಟೆಡ್) ಜೊತೆಗಿದ್ದರು. ಆಪ್ 2015ರಲ್ಲಿ ಅವರ ಗೆಲುವಿಗೆ ಬ್ರೇಕ್ ಹಾಕಿತ್ತು. ಈ ಸಲ ಆಪ್‌ನಿಂದ ಶಾಸಕರಾಗಿದ್ದಾರೆ.

ಇಕ್ಬಾಲ್ ಅವರ ಈ ಹೇಳಿಕೆಯ ಬಗ್ಗೆ ಎಎಪಿ ರಾಜ್ಯ ಸಮಿತಿ ಈವರೆಗೆ ಪ್ರತಿಕ್ರಿಯಿಸಿಲ್ಲ. ಇಕ್ಬಾಲ್ ಅವರ ಹೇಳಿಕೆಗೆ ಪ್ರತಿಕ್ರಿಯಿಸಿದ ದೆಹಲಿ ಬಿಜೆಪಿ ವಕ್ತಾರ ಹರೀಶ್ ಖುರಾನಾ, “ಇಕ್ಬಾಲ್ ಕೇವಲ ಎಎಪಿ ಶಾಸಕರಲ್ಲ, ದೆಹಲಿ ವಿಧಾನಸಭೆಯಲ್ಲಿ ಹೆಚ್ಚು ಅನುಭವ ಹೊಂದಿರುವವರು. ಪರಿಸ್ಥಿತಿ ಹತೋಟಿಯಲ್ಲಿಲ್ಲ ಮತ್ತು ಜನರು ತೊಂದರೆ ಅನುಭವಿಸುತ್ತಿದ್ದಾರೆ ಎಂದು ಅವರು ಹೇಳುತ್ತಿದ್ದಾರೆಂದರೆ ಅದು ಸರಿಯಾಗಿದೆ. ಹಾಗಾಗಿ, ರಾಷ್ಟ್ರಪತಿ ಆಡಳಿತವನ್ನು ಹೇರಬೇಕು, ದೆಹಲಿ ಈಗ ಕೇಂದ್ರದ ನಿಯಂತ್ರಣದಲ್ಲಿರಬೇಕು. ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ಪರಿಸ್ಥಿತಿಯನ್ನು ನಿರ್ವಹಿಸಲು ಸಾಧ್ಯವಾಗದ ಕಾರಣ ರಾಷ್ಟ್ರಪತಿ ಆಡಳಿತವಿರಬೇಕು ಎಂದು ನಾವು ನಂಬುತ್ತೇವೆ’ ಎಂದಿದ್ದಾರೆ.

ದೆಹಲಿ ಕಾಂಗ್ರೆಸ್ ಉಪಾಧ್ಯಕ್ಷ ಅಭಿಷೇಕ್ ದತ್, ನಗರದಲ್ಲಿ ಕೋವಿಡ್ ಹರಡುವಿಕೆ ಮತ್ತು ಸಂಬಂಧಿತ ಸಾವುಗಳನ್ನು ಕೊನೆಗೊಳಿಸಲು ಸೇನೆಯು ದೆಹಲಿಯನ್ನು ಸ್ವಾಧೀನಪಡಿಸಿಕೊಳ್ಳಬೇಕು ಮತ್ತು ಆರೋಗ್ಯ ಮೂಲಸೌಕರ್ಯಗಳನ್ನು ನಿರ್ವಹಿಸಬೇಕು ಎಂದು ಹೇಳಿದರು. ರಾಜ್ಯದಲ್ಲಿ ಆರ್‌ಟಿ-ಪಿಸಿಆರ್ ಪರೀಕ್ಷೆಯನ್ನು ಸರ್ಕಾರ ನಿಧಾನಗೊಳಿಸಿದೆ ಮತ್ತು ಕೋವಿಡ್ ಸಾವಿನ ಅಂಕಿಅಂಶಗಳು ಸರಿಯಾಗಿ ವರದಿಯಾಗಿಲ್ಲ ಎಂದು ಅವರು ಆರೋಪಿಸಿದ್ದಾರೆ.


ಇದನ್ನೂ ಓದಿ: ದೆಹಲಿಯಾದ್ಯಂತ ಬೆಂಕಿಯೇ ಕಾಣುವಾಗ ಇಲ್ಲಿನ ಬಿಜೆಪಿ ಎಲ್ಲಿ?: ಆರ್‌ಎಸ್‌ಎಸ್ ಮುಖಂಡರೊಬ್ಬರ ಆಕ್ರೋಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸ್ವಕ್ಷೇತ್ರ ತಿರುವನಂತಪುರದಲ್ಲಿ ಬಿಜೆಪಿ ಭರ್ಜರಿ ಗೆಲುವು : ‘ಪ್ರಜಾಪ್ರಭುತ್ವದ ಸೌಂದರ್ಯ’ ಎಂದ ಕಾಂಗ್ರೆಸ್ ಸಂಸದ ಶಶಿ ತರೂರ್

ಕೇರಳದ ಸ್ಥಳೀಯ ಸಂಸ್ಥೆ ಚುನಾವಣೆಯ ಫಲಿತಾಂಶ ಇಂದು (ಡಿ.13) ಪ್ರಕಟಗೊಂಡಿದ್ದು, ತಿರುವನಂತಪುರಂ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಭರ್ಜರಿ ಗೆಲುವು ದಾಖಲಿಸಿದೆ. ಈ ಮೂಲಕ 45 ವರ್ಷಗಳ ಸಿಪಿಐ(ಎಂ) ನೇತೃತ್ವದ ಎಲ್‌ಡಿಎಫ್‌...

ಕೇರಳ ಸ್ಥಳೀಯ ಸಂಸ್ಥೆ ಚುನಾವಣೆ : ಯುಡಿಎಫ್‌ ಸ್ಪಷ್ಟ ಮೇಲುಗೈ

ಇಂದು (2025 ಡಿಸೆಂಬರ್ 13, ಶನಿವಾರ) ಪ್ರಕಟಗೊಂಡ ಕೇರಳದ ಸ್ಥಳೀಯ ಸಂಸ್ಥೆಗಳ ಚುನಾವಣಾ ಫಲಿತಾಂಶದಲ್ಲಿ ವಿರೋಧ ಪಕ್ಷಗಳ ಒಕ್ಕೂಟವಾದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್) ಸ್ಪಷ್ಟ ಮೇಲುಗೈ ಸಾಧಿಸಿದೆ. ಈ ಮೂಲಕ ರಾಜ್ಯ...

ಕೋಲ್ಕತ್ತಾ ಮೆಸ್ಸಿ ಕಾರ್ಯಕ್ರಮದಲ್ಲಿ ಗಲಾಟೆ | ಕ್ಷಮೆ ಯಾಚಿಸಿದ ಸಿಎಂ ಮಮತಾ ಬ್ಯಾನರ್ಜಿ, ತನಿಖೆಗೆ ಸಮಿತಿ ರಚನೆ; ಆಯೋಜಕನ ಬಂಧನ

ಫುಟ್ಬಾಲ್ ತಾರೆ ಲಿಯೋನೆಲ್ ಮೆಸ್ಸಿ ಭೇಟಿಯ ವೇಳೆ ಶನಿವಾರ (ಡಿಸೆಂಬರ್ 13) ಕೋಲ್ಕತ್ತಾದ ಸಾಲ್ಟ್ ಲೇಕ್ ಕ್ರೀಡಾಂಗಣದಲ್ಲಿ ಉಂಟಾದ ಗಲಾಟೆಗೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕ್ಷಮೆಯಾಚಿಸಿದ್ದು, ನಿವೃತ್ತ ನ್ಯಾಯಮೂರ್ತಿ...

ಮೆಸ್ಸಿ ನೋಡಲು 25 ಸಾವಿರ ರೂ. ಪಾವತಿಸಿದವರಿಗೆ ನಿರಾಶೆ; ಕೋಪಗೊಂಡ ಅಭಿಮಾನಿಗಳಿಂದ ಕ್ರೀಡಾಂಗಣದಲ್ಲಿ ದಾಂಧಲೆ

ಶನಿವಾರ ನಡೆದ ಲಿಯೋನೆಲ್ ಮೆಸ್ಸಿ ಅವರ ಬಹು ನಿರೀಕ್ಷಿತ "ಗೋಟ್ ಇಂಡಿಯಾ ಟೂರ್" ಕೋಲ್ಕತ್ತಾದಲ್ಲಿ ಅಸ್ತವ್ಯಸ್ತವಾಯಿತು. ಯುವ ಭಾರತಿ ಕ್ರಿರಂಗನ್‌ನಲ್ಲಿ ರೊಚ್ಚಿಗೆದ್ದ ಅಭಿಮಾನಿಗಳ ದಾಂಧಲೆಯಿಂದ ಕ್ರೀಡಾಂಗಣ ಅವ್ಯವಸ್ಥೆಗೆ ಒಳಗಾಯಿತು. ಸಾವಿರಾರು ಅಭಿಮಾನಿಗಳು ಅರ್ಜೆಂಟೀನಾದ...

ಡ್ರಗ್‌ ಪೆಡ್ಲರ್‌ಗಳ ಮನೆ ಒಡೆದು ಹಾಕುವ ಹೇಳಿಕೆ : ಪರಮೇಶ್ವರ್ ಮಾತಿಗೆ ಆತಂಕ ವ್ಯಕ್ತಪಡಿಸಿದ ಕಾಂಗ್ರೆಸ್ ಹಿರಿಯ ನಾಯಕ ಚಿದಂಬರಂ

"ಡ್ರಗ್‌ ಪೆಡ್ಲರ್‌ಗಳ ಬಾಡಿಗೆ ಮನೆಗಳನ್ನು ಒಡೆದು ಹಾಕುವ ಹಂತಕ್ಕೆ ಹೋಗಿದ್ದೇವೆ" ಎಂಬ ಗೃಹ ಸಚಿವ ಜಿ.ಪರಮೇಶ್ವರ್ ಹೇಳಿಕೆಗೆ ಕಾಂಗ್ರೆಸ್ ಹಿರಿಯ ನಾಯಕ, ಮಾಜಿ ಕೇಂದ್ರ ಸಚಿವ ಪಿ. ಚಿದಂಬರಂ ಆತಂಕ ವ್ಯಕ್ತಪಡಿಸಿದ್ದಾರೆ. ಸಾಮಾಜಿಕ...

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆ: ಶಶಿ ತರೂರ್ ಕ್ಷೇತ್ರ ತಿರುವನಂತಪುರಂನಲ್ಲಿ ಬಿಜೆಪಿ ಮುನ್ನಡೆ

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ, ವಿಶೇಷವಾಗಿ ತಿರುವನಂತಪುರಂನಲ್ಲಿ ಭಾರತೀಯ ಜನತಾ ಪಕ್ಷದ ಸಾಧನೆಯನ್ನು ಹಿರಿಯ ಕಾಂಗ್ರೆಸ್ ನಾಯಕ ಶಶಿ ತರೂರ್ ಶನಿವಾರ ಅಭಿನಂದಿಸಿದ್ದಾರೆ. ಜನರ ತೀರ್ಪನ್ನು ಗೌರವಿಸಬೇಕು ಎಂದು ಹೇಳಿದ್ದಾರೆ. ಎಕ್ಸ್‌ನಲ್ಲಿ ದೀರ್ಘ...

ಆಳಂದ ಮತಗಳ್ಳತನ | ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್ ಸೇರಿ 7 ಮಂದಿ ವಿರುದ್ಧ ಎಸ್‌ಐಟಿ ಚಾರ್ಜ್‌ಶೀಟ್‌

ಕಲಬುರಗಿಯ ಆಳಂದ ವಿಧಾನಸಭಾ ಕ್ಷೇತ್ರದಲ್ಲಿ ನಡೆದ ಮತಗಳ್ಳತನ (ಚುನಾವಣಾ ಆಕ್ರಮ) ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಿದ್ದು, ಆಳಂದದ ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್...

ಉತ್ತರ ಪ್ರದೇಶ| ಗಸ್ತು ವಾಹನ ಹಳ್ಳಕ್ಕೆ ಉರುಳಿಸಿದ ಪಾನಮತ್ತ ಪೊಲೀಸರು; ಕ್ರೇನ್ ಚಾಲಕನ ಮೇಲೆ ಹಲ್ಲೆ

ಶುಕ್ರವಾರ (ಡಿಸೆಂಬರ್ 12) ರಾತ್ರಿ ಪೊಲೀಸರೊಬ್ಬರು ಕಾರಿನ ನಿಯಂತ್ರಣ ಕಳೆದುಕೊಂಡ ಬಳಿಕ '112' ಪೊಲೀಸ್ ಪ್ರತಿಕ್ರಿಯೆ ವಾಹನ (ಪಿಆರ್‌ವಿ) ಹಳ್ಳಕ್ಕೆ ಉರುಳಿದೆ. ವರದಿಗಳ ಪ್ರಕಾರ, ಘಟನೆಯ ಸಮಯದಲ್ಲಿ ಪೊಲೀಸರು ಪಾನಮತ್ತರಾಗಿದ್ದರು. ಕಾರ್ ಕಂದಕಕ್ಕೆ...

ಲಿಯೋನೆಲ್ ಮೆಸ್ಸಿ ಇಂಡಿಯಾ ಪ್ರವಾಸ; ಅಭೂತಪೂರ್ವ ಸ್ವಾಗತ ಕೋರಿದ ಕೋಲ್ಕತ್ತಾ ಅಭಿಮಾನಿಗಳು

ಇಂಡಿಯಾ ಪ್ರವಾಸ ಪ್ರಾರಂಭಿಸಿರುವ ಅರ್ಜೆಂಟೀನಾದ ಪುಟ್‌ಬಾಲ್‌ ತಾರೆ ಲಿಯೋನೆಲ್ ಮೆಸ್ಸಿ ಕೋಲ್ಕತ್ತಾಗೆ ಬಂದಿಳಿದಿದ್ದಾರೆ. ಶನಿವಾರ ಬೆಳಗಿನ ಜಾವ ವಿಮಾನ ನಿಲ್ದಾಣದಲ್ಲಿ ನೆರೆದಿದ್ದ ಸಾವಿರಾರು ಅಭಿಮಾನಿಗಳಿಂದ ಅವರಿಗೆ ಅಭೂತಪೂರ್ವ ಸ್ವಾಗತ ಕೋರಿದರು. ಅರ್ಜೆಂಟೀನಾದ ಸೂಪರ್‌ಸ್ಟಾರ್ ದುಬೈ...

ನಟಿಯ ಅಪಹರಣ, ಅತ್ಯಾಚಾರ ಪ್ರಕರಣ : ಆರು ಅಪರಾಧಿಗಳಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

ಮಲಯಾಳಂ ಮೂಲದ ಬಹುಭಾಷಾ ನಟಿಯ ಅಪಹರಣ ಮತ್ತು ಅತ್ಯಾಚಾರ ಪ್ರಕರಣದ (2017ರ ಪ್ರಕರಣ) ಆರು ಅಪರಾಧಿಗಳಿಗೆ ಇಪ್ಪತ್ತು ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿ ಶುಕ್ರವಾರ (ಡಿಸೆಂಬರ್ 12) ಕೇರಳ ನ್ಯಾಯಾಲಯ ಆದೇಶಿಸಿದೆ. ಡಿಸೆಂಬರ್...