Homeಕರೋನಾ ತಲ್ಲಣಕೋವಿಡ್ ಬಿಕ್ಕಟ್ಟಿನಲ್ಲಿ ಜನರಿಗೆ ನೆರವು ನೀಡಲಾಗುತ್ತಿಲ್ಲ, ರಾಷ್ಟ್ರಪತಿ ಆಡಳಿತ ತನ್ನಿ: ಆಪ್ ಹಿರಿಯ ಶಾಸಕನ ಅಳಲು

ಕೋವಿಡ್ ಬಿಕ್ಕಟ್ಟಿನಲ್ಲಿ ಜನರಿಗೆ ನೆರವು ನೀಡಲಾಗುತ್ತಿಲ್ಲ, ರಾಷ್ಟ್ರಪತಿ ಆಡಳಿತ ತನ್ನಿ: ಆಪ್ ಹಿರಿಯ ಶಾಸಕನ ಅಳಲು

- Advertisement -
- Advertisement -

‘ನಾನು ಆರು ಬಾರಿ ಶಾಸಕ, ದೆಹಲಿಯ ಹಿರಿಯ ಶಾಸಕ. ಆದರೆ ಇದರ ಹೊರತಾಗಿಯೂ, ಯಾರೂ ಪ್ರತಿಕ್ರಿಯಿಸುತ್ತಿಲ್ಲ, ಜನರಿಗೆ ನೆರವು ನೀಡಲಾಗುತ್ತಿಲ್ಲ. ನೀವು ಯಾವುದೇ ನೋಡಲ್ ಅಧಿಕಾರಿಯನ್ನು ಸಂಪರ್ಕಿಸಲು ಸಾಧ್ಯವಿಲ್ಲ. ಈ ಪರಿಸ್ಥಿತಿಯಲ್ಲಿ ದೆಹಲಿಯಲ್ಲಿ ರಾಷ್ಟ್ರಪತಿ ಆಡಳಿತವನ್ನು ವಿಧಿಸುವಂತೆ ನಾನು ದೆಹಲಿ ಹೈಕೋರ್ಟ್‌ಗೆ ಮನವಿ ಮಾಡಲು ಬಯಸುತ್ತೇನೆ, ಇಲ್ಲದಿದ್ದರೆ ರಸ್ತೆಯಲ್ಲಿ ಮೃತ ದೇಹಗಳು ಇರುತ್ತವೆ” ಎಂದು ಆಮ್ ಆದ್ಮಿ ಪಕ್ಷದ ಶಾಸಕ ಶೋಯೆಬ್ ಇಕ್ಬಾಲ್ ಅಳಲು ತೋಡಿಕೊಂಡಿದ್ದಾರೆ ಎಂದು ಇಂಡಿಯನ್ ಎಕ್ಸ್‌ಪ್ರೆಸ್‌ ವರದಿ ಮಾಡಿದೆ.

ಮಾತಿಯಾ ಮಹಲ್‌ನ ಶಾಸಕ ಶೋಯೆಬ್ ಇಕ್ಬಾಲ್, ಕೋವಿಡ್ ಸಾಂಕ್ರಾಮಿಕದ ತೀವ್ರತೆಗೆ ನಲುಗಿರುವ ಜನತೆಗೆ ನೆರವು ನೀಡಲೂ ಆಗುತ್ತಿಲ್ಲ. ಪರಿಸ್ಥಿತಿ ಕೈ ಮೀರಿದೆ. ದೆಹಲಿಯಲ್ಲಿ ರಾಷ್ಟ್ರಪತಿ ಆಳ್ವಿಕೆ ತನ್ನಿ ಎಂದು ಅಸಹಾಯಕತೆಯಲ್ಲಿ ನ್ಯಾಯಾಲಯವನ್ನು ಕೋರಿದ್ದಾರೆ.

2020ರ ವಿಧಾನಸಭಾ ಚುನಾವಣೆಗೆ ಒಂದು ತಿಂಗಳ ಹಿಂದಿನ ತನಕ ಕಾಂಗ್ರೆಸ್ ಜೊತೆಗಿದ್ದ ಇಕ್ಬಾಲ್ ಅವರು ನಂತರ ಆಮ್ ಆದ್ಮಿ ಪಕ್ಷ ಸೇರಿ ಶಾಸಕರಾಗಿದ್ದಾರೆ. ಅವರ ವೀಡಿಯೊ ಸಂದೇಶದಲ್ಲಿ, “ದೆಹಲಿಯ ಸ್ಥಿತಿಯಿಂದ ನನಗೆ ನೋವಾಗಿದೆ.. ನಾನು ತುಂಬಾ ಚಿಂತಿತನಾಗಿದ್ದೇನೆ. ನನಗೆ ನಿದ್ರೆ ಬರುತ್ತಿಲ್ಲ. ಜನರಿಗೆ ಆಮ್ಲಜನಕ ಮತ್ತು ಔಷಧಿಗಳು ಸಿಗುತ್ತಿಲ್ಲ. ನನ್ನ ಸ್ನೇಹಿತ ಬಳಲುತ್ತಿದ್ದಾನೆ, ಆಸ್ಪತ್ರೆಯಲ್ಲಿದ್ದಾನೆ. ಆದರೆ ಆಮ್ಲಜನಕ ಅಥವಾ ವೆಂಟಿಲೇಟರ್ ಸಿಗುತ್ತಿಲ್ಲ. ರಿಮೆಡೆಸಿವಿರ್‌ಗಾಗಿ ಅವರ ಪ್ರಿಸ್ಕಿಪ್ಸನ್ ನನ್ನ ಬಳಿ ಇದೆ. ಆದರೆ ನಾನು ಅದನ್ನು ಎಲ್ಲಿಂದ ಪಡೆಯಲಿ? ಎಲ್ಲೂ ಸಿಗುತ್ತಿಲ್ಲ. ಸ್ನೇಹಿತನ ಮಕ್ಕಳು ಗಾಬರಿಯಲ್ಲಿ ಔಷಧಿಗಾಗಿ ಅಲೆಯುತ್ತಿದ್ದಾರೆ. ಇಂದು, ನಾವು ಶಾಸಕರಾಗಿದ್ದಕ್ಕೆ ನಾಚಿಕೆ ಪಡಬೇಕಾಗಿದೆ. ಏಕೆಂದರೆ ನಮಗೆ ಸಹಾಯ ಮಾಡಲು ಸಾಧ್ಯವಾಗುತ್ತಿಲ್ಲ. ಸರ್ಕಾರಕ್ಕೂ ಸಹಾಯ ಮಾಡಲು ಸಾಧ್ಯವಾಗುತ್ತಿಲ್ಲ’ ಎಂದು ತಮ್ಮ ನೋವನ್ನು ತೋಡಿಕೊಂಡಿದ್ದಾರೆ.

ಇಕ್ಬಾಲ್ 1993ರಿಂದ ದೆಹಲಿ ವಿಧಾನಸಭೆಯ ಮಾತಿಯಾ ಮಹಲ್ ಕ್ಷೇತ್ರವನ್ನು ಆರನೇ ಸಲ ಪ್ರತಿನಿಧಿಸುತ್ತಿದ್ದಾರೆ.

ಇಕ್ಬಾಲ್ ಈ ಹಿಂದೆ ಕಾಂಗ್ರೆಸ್, ಲೋಕ ಜನಶಕ್ತಿ ಪಕ್ಷ (ಜೆಎಲ್‌ಪಿ) ಮತ್ತು ಜನತಾದಳದ ಮೂರು ಅವತಾರಗಳಾದ ಜನತಾದಳ, ಜನತಾದಳ (ಜಾತ್ಯತೀತ) ಮತ್ತು ಜನತಾದಳ (ಯುನೈಟೆಡ್) ಜೊತೆಗಿದ್ದರು. ಆಪ್ 2015ರಲ್ಲಿ ಅವರ ಗೆಲುವಿಗೆ ಬ್ರೇಕ್ ಹಾಕಿತ್ತು. ಈ ಸಲ ಆಪ್‌ನಿಂದ ಶಾಸಕರಾಗಿದ್ದಾರೆ.

ಇಕ್ಬಾಲ್ ಅವರ ಈ ಹೇಳಿಕೆಯ ಬಗ್ಗೆ ಎಎಪಿ ರಾಜ್ಯ ಸಮಿತಿ ಈವರೆಗೆ ಪ್ರತಿಕ್ರಿಯಿಸಿಲ್ಲ. ಇಕ್ಬಾಲ್ ಅವರ ಹೇಳಿಕೆಗೆ ಪ್ರತಿಕ್ರಿಯಿಸಿದ ದೆಹಲಿ ಬಿಜೆಪಿ ವಕ್ತಾರ ಹರೀಶ್ ಖುರಾನಾ, “ಇಕ್ಬಾಲ್ ಕೇವಲ ಎಎಪಿ ಶಾಸಕರಲ್ಲ, ದೆಹಲಿ ವಿಧಾನಸಭೆಯಲ್ಲಿ ಹೆಚ್ಚು ಅನುಭವ ಹೊಂದಿರುವವರು. ಪರಿಸ್ಥಿತಿ ಹತೋಟಿಯಲ್ಲಿಲ್ಲ ಮತ್ತು ಜನರು ತೊಂದರೆ ಅನುಭವಿಸುತ್ತಿದ್ದಾರೆ ಎಂದು ಅವರು ಹೇಳುತ್ತಿದ್ದಾರೆಂದರೆ ಅದು ಸರಿಯಾಗಿದೆ. ಹಾಗಾಗಿ, ರಾಷ್ಟ್ರಪತಿ ಆಡಳಿತವನ್ನು ಹೇರಬೇಕು, ದೆಹಲಿ ಈಗ ಕೇಂದ್ರದ ನಿಯಂತ್ರಣದಲ್ಲಿರಬೇಕು. ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ಪರಿಸ್ಥಿತಿಯನ್ನು ನಿರ್ವಹಿಸಲು ಸಾಧ್ಯವಾಗದ ಕಾರಣ ರಾಷ್ಟ್ರಪತಿ ಆಡಳಿತವಿರಬೇಕು ಎಂದು ನಾವು ನಂಬುತ್ತೇವೆ’ ಎಂದಿದ್ದಾರೆ.

ದೆಹಲಿ ಕಾಂಗ್ರೆಸ್ ಉಪಾಧ್ಯಕ್ಷ ಅಭಿಷೇಕ್ ದತ್, ನಗರದಲ್ಲಿ ಕೋವಿಡ್ ಹರಡುವಿಕೆ ಮತ್ತು ಸಂಬಂಧಿತ ಸಾವುಗಳನ್ನು ಕೊನೆಗೊಳಿಸಲು ಸೇನೆಯು ದೆಹಲಿಯನ್ನು ಸ್ವಾಧೀನಪಡಿಸಿಕೊಳ್ಳಬೇಕು ಮತ್ತು ಆರೋಗ್ಯ ಮೂಲಸೌಕರ್ಯಗಳನ್ನು ನಿರ್ವಹಿಸಬೇಕು ಎಂದು ಹೇಳಿದರು. ರಾಜ್ಯದಲ್ಲಿ ಆರ್‌ಟಿ-ಪಿಸಿಆರ್ ಪರೀಕ್ಷೆಯನ್ನು ಸರ್ಕಾರ ನಿಧಾನಗೊಳಿಸಿದೆ ಮತ್ತು ಕೋವಿಡ್ ಸಾವಿನ ಅಂಕಿಅಂಶಗಳು ಸರಿಯಾಗಿ ವರದಿಯಾಗಿಲ್ಲ ಎಂದು ಅವರು ಆರೋಪಿಸಿದ್ದಾರೆ.


ಇದನ್ನೂ ಓದಿ: ದೆಹಲಿಯಾದ್ಯಂತ ಬೆಂಕಿಯೇ ಕಾಣುವಾಗ ಇಲ್ಲಿನ ಬಿಜೆಪಿ ಎಲ್ಲಿ?: ಆರ್‌ಎಸ್‌ಎಸ್ ಮುಖಂಡರೊಬ್ಬರ ಆಕ್ರೋಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...