Homeಕರೋನಾ ತಲ್ಲಣಕೋವಿಡ್ ಬಿಕ್ಕಟ್ಟಿನಲ್ಲಿ ಜನರಿಗೆ ನೆರವು ನೀಡಲಾಗುತ್ತಿಲ್ಲ, ರಾಷ್ಟ್ರಪತಿ ಆಡಳಿತ ತನ್ನಿ: ಆಪ್ ಹಿರಿಯ ಶಾಸಕನ ಅಳಲು

ಕೋವಿಡ್ ಬಿಕ್ಕಟ್ಟಿನಲ್ಲಿ ಜನರಿಗೆ ನೆರವು ನೀಡಲಾಗುತ್ತಿಲ್ಲ, ರಾಷ್ಟ್ರಪತಿ ಆಡಳಿತ ತನ್ನಿ: ಆಪ್ ಹಿರಿಯ ಶಾಸಕನ ಅಳಲು

- Advertisement -
- Advertisement -

‘ನಾನು ಆರು ಬಾರಿ ಶಾಸಕ, ದೆಹಲಿಯ ಹಿರಿಯ ಶಾಸಕ. ಆದರೆ ಇದರ ಹೊರತಾಗಿಯೂ, ಯಾರೂ ಪ್ರತಿಕ್ರಿಯಿಸುತ್ತಿಲ್ಲ, ಜನರಿಗೆ ನೆರವು ನೀಡಲಾಗುತ್ತಿಲ್ಲ. ನೀವು ಯಾವುದೇ ನೋಡಲ್ ಅಧಿಕಾರಿಯನ್ನು ಸಂಪರ್ಕಿಸಲು ಸಾಧ್ಯವಿಲ್ಲ. ಈ ಪರಿಸ್ಥಿತಿಯಲ್ಲಿ ದೆಹಲಿಯಲ್ಲಿ ರಾಷ್ಟ್ರಪತಿ ಆಡಳಿತವನ್ನು ವಿಧಿಸುವಂತೆ ನಾನು ದೆಹಲಿ ಹೈಕೋರ್ಟ್‌ಗೆ ಮನವಿ ಮಾಡಲು ಬಯಸುತ್ತೇನೆ, ಇಲ್ಲದಿದ್ದರೆ ರಸ್ತೆಯಲ್ಲಿ ಮೃತ ದೇಹಗಳು ಇರುತ್ತವೆ” ಎಂದು ಆಮ್ ಆದ್ಮಿ ಪಕ್ಷದ ಶಾಸಕ ಶೋಯೆಬ್ ಇಕ್ಬಾಲ್ ಅಳಲು ತೋಡಿಕೊಂಡಿದ್ದಾರೆ ಎಂದು ಇಂಡಿಯನ್ ಎಕ್ಸ್‌ಪ್ರೆಸ್‌ ವರದಿ ಮಾಡಿದೆ.

ಮಾತಿಯಾ ಮಹಲ್‌ನ ಶಾಸಕ ಶೋಯೆಬ್ ಇಕ್ಬಾಲ್, ಕೋವಿಡ್ ಸಾಂಕ್ರಾಮಿಕದ ತೀವ್ರತೆಗೆ ನಲುಗಿರುವ ಜನತೆಗೆ ನೆರವು ನೀಡಲೂ ಆಗುತ್ತಿಲ್ಲ. ಪರಿಸ್ಥಿತಿ ಕೈ ಮೀರಿದೆ. ದೆಹಲಿಯಲ್ಲಿ ರಾಷ್ಟ್ರಪತಿ ಆಳ್ವಿಕೆ ತನ್ನಿ ಎಂದು ಅಸಹಾಯಕತೆಯಲ್ಲಿ ನ್ಯಾಯಾಲಯವನ್ನು ಕೋರಿದ್ದಾರೆ.

2020ರ ವಿಧಾನಸಭಾ ಚುನಾವಣೆಗೆ ಒಂದು ತಿಂಗಳ ಹಿಂದಿನ ತನಕ ಕಾಂಗ್ರೆಸ್ ಜೊತೆಗಿದ್ದ ಇಕ್ಬಾಲ್ ಅವರು ನಂತರ ಆಮ್ ಆದ್ಮಿ ಪಕ್ಷ ಸೇರಿ ಶಾಸಕರಾಗಿದ್ದಾರೆ. ಅವರ ವೀಡಿಯೊ ಸಂದೇಶದಲ್ಲಿ, “ದೆಹಲಿಯ ಸ್ಥಿತಿಯಿಂದ ನನಗೆ ನೋವಾಗಿದೆ.. ನಾನು ತುಂಬಾ ಚಿಂತಿತನಾಗಿದ್ದೇನೆ. ನನಗೆ ನಿದ್ರೆ ಬರುತ್ತಿಲ್ಲ. ಜನರಿಗೆ ಆಮ್ಲಜನಕ ಮತ್ತು ಔಷಧಿಗಳು ಸಿಗುತ್ತಿಲ್ಲ. ನನ್ನ ಸ್ನೇಹಿತ ಬಳಲುತ್ತಿದ್ದಾನೆ, ಆಸ್ಪತ್ರೆಯಲ್ಲಿದ್ದಾನೆ. ಆದರೆ ಆಮ್ಲಜನಕ ಅಥವಾ ವೆಂಟಿಲೇಟರ್ ಸಿಗುತ್ತಿಲ್ಲ. ರಿಮೆಡೆಸಿವಿರ್‌ಗಾಗಿ ಅವರ ಪ್ರಿಸ್ಕಿಪ್ಸನ್ ನನ್ನ ಬಳಿ ಇದೆ. ಆದರೆ ನಾನು ಅದನ್ನು ಎಲ್ಲಿಂದ ಪಡೆಯಲಿ? ಎಲ್ಲೂ ಸಿಗುತ್ತಿಲ್ಲ. ಸ್ನೇಹಿತನ ಮಕ್ಕಳು ಗಾಬರಿಯಲ್ಲಿ ಔಷಧಿಗಾಗಿ ಅಲೆಯುತ್ತಿದ್ದಾರೆ. ಇಂದು, ನಾವು ಶಾಸಕರಾಗಿದ್ದಕ್ಕೆ ನಾಚಿಕೆ ಪಡಬೇಕಾಗಿದೆ. ಏಕೆಂದರೆ ನಮಗೆ ಸಹಾಯ ಮಾಡಲು ಸಾಧ್ಯವಾಗುತ್ತಿಲ್ಲ. ಸರ್ಕಾರಕ್ಕೂ ಸಹಾಯ ಮಾಡಲು ಸಾಧ್ಯವಾಗುತ್ತಿಲ್ಲ’ ಎಂದು ತಮ್ಮ ನೋವನ್ನು ತೋಡಿಕೊಂಡಿದ್ದಾರೆ.

ಇಕ್ಬಾಲ್ 1993ರಿಂದ ದೆಹಲಿ ವಿಧಾನಸಭೆಯ ಮಾತಿಯಾ ಮಹಲ್ ಕ್ಷೇತ್ರವನ್ನು ಆರನೇ ಸಲ ಪ್ರತಿನಿಧಿಸುತ್ತಿದ್ದಾರೆ.

ಇಕ್ಬಾಲ್ ಈ ಹಿಂದೆ ಕಾಂಗ್ರೆಸ್, ಲೋಕ ಜನಶಕ್ತಿ ಪಕ್ಷ (ಜೆಎಲ್‌ಪಿ) ಮತ್ತು ಜನತಾದಳದ ಮೂರು ಅವತಾರಗಳಾದ ಜನತಾದಳ, ಜನತಾದಳ (ಜಾತ್ಯತೀತ) ಮತ್ತು ಜನತಾದಳ (ಯುನೈಟೆಡ್) ಜೊತೆಗಿದ್ದರು. ಆಪ್ 2015ರಲ್ಲಿ ಅವರ ಗೆಲುವಿಗೆ ಬ್ರೇಕ್ ಹಾಕಿತ್ತು. ಈ ಸಲ ಆಪ್‌ನಿಂದ ಶಾಸಕರಾಗಿದ್ದಾರೆ.

ಇಕ್ಬಾಲ್ ಅವರ ಈ ಹೇಳಿಕೆಯ ಬಗ್ಗೆ ಎಎಪಿ ರಾಜ್ಯ ಸಮಿತಿ ಈವರೆಗೆ ಪ್ರತಿಕ್ರಿಯಿಸಿಲ್ಲ. ಇಕ್ಬಾಲ್ ಅವರ ಹೇಳಿಕೆಗೆ ಪ್ರತಿಕ್ರಿಯಿಸಿದ ದೆಹಲಿ ಬಿಜೆಪಿ ವಕ್ತಾರ ಹರೀಶ್ ಖುರಾನಾ, “ಇಕ್ಬಾಲ್ ಕೇವಲ ಎಎಪಿ ಶಾಸಕರಲ್ಲ, ದೆಹಲಿ ವಿಧಾನಸಭೆಯಲ್ಲಿ ಹೆಚ್ಚು ಅನುಭವ ಹೊಂದಿರುವವರು. ಪರಿಸ್ಥಿತಿ ಹತೋಟಿಯಲ್ಲಿಲ್ಲ ಮತ್ತು ಜನರು ತೊಂದರೆ ಅನುಭವಿಸುತ್ತಿದ್ದಾರೆ ಎಂದು ಅವರು ಹೇಳುತ್ತಿದ್ದಾರೆಂದರೆ ಅದು ಸರಿಯಾಗಿದೆ. ಹಾಗಾಗಿ, ರಾಷ್ಟ್ರಪತಿ ಆಡಳಿತವನ್ನು ಹೇರಬೇಕು, ದೆಹಲಿ ಈಗ ಕೇಂದ್ರದ ನಿಯಂತ್ರಣದಲ್ಲಿರಬೇಕು. ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ಪರಿಸ್ಥಿತಿಯನ್ನು ನಿರ್ವಹಿಸಲು ಸಾಧ್ಯವಾಗದ ಕಾರಣ ರಾಷ್ಟ್ರಪತಿ ಆಡಳಿತವಿರಬೇಕು ಎಂದು ನಾವು ನಂಬುತ್ತೇವೆ’ ಎಂದಿದ್ದಾರೆ.

ದೆಹಲಿ ಕಾಂಗ್ರೆಸ್ ಉಪಾಧ್ಯಕ್ಷ ಅಭಿಷೇಕ್ ದತ್, ನಗರದಲ್ಲಿ ಕೋವಿಡ್ ಹರಡುವಿಕೆ ಮತ್ತು ಸಂಬಂಧಿತ ಸಾವುಗಳನ್ನು ಕೊನೆಗೊಳಿಸಲು ಸೇನೆಯು ದೆಹಲಿಯನ್ನು ಸ್ವಾಧೀನಪಡಿಸಿಕೊಳ್ಳಬೇಕು ಮತ್ತು ಆರೋಗ್ಯ ಮೂಲಸೌಕರ್ಯಗಳನ್ನು ನಿರ್ವಹಿಸಬೇಕು ಎಂದು ಹೇಳಿದರು. ರಾಜ್ಯದಲ್ಲಿ ಆರ್‌ಟಿ-ಪಿಸಿಆರ್ ಪರೀಕ್ಷೆಯನ್ನು ಸರ್ಕಾರ ನಿಧಾನಗೊಳಿಸಿದೆ ಮತ್ತು ಕೋವಿಡ್ ಸಾವಿನ ಅಂಕಿಅಂಶಗಳು ಸರಿಯಾಗಿ ವರದಿಯಾಗಿಲ್ಲ ಎಂದು ಅವರು ಆರೋಪಿಸಿದ್ದಾರೆ.


ಇದನ್ನೂ ಓದಿ: ದೆಹಲಿಯಾದ್ಯಂತ ಬೆಂಕಿಯೇ ಕಾಣುವಾಗ ಇಲ್ಲಿನ ಬಿಜೆಪಿ ಎಲ್ಲಿ?: ಆರ್‌ಎಸ್‌ಎಸ್ ಮುಖಂಡರೊಬ್ಬರ ಆಕ್ರೋಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...

ಮಹಿಳಾ ಮೀಸಲು ಮಸೂದೆ 2023ರಲ್ಲೇ ಗೆದ್ದಿದೆ, ಈಗ ಸೋತಿರುವುದು ಮೋದಿ ಸರ್ಕಾರ

ಮೋದಿ ಸರ್ಕಾರ ಮಂಡಿಸಿದ್ದ ಮಹಿಳಾ ಮೀಸಲಾತಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾಗಿದೆ ಎಂಬುವುದು ದೇಶದಲ್ಲಿ ಪ್ರಸ್ತುತ ದೊಡ್ಡ ಚರ್ಚೆಯ ವಿಷಯವಾಗಿದೆ. ಕಾಂಗ್ರೆಸ್‌ ನೇತೃತ್ವದಲ್ಲಿ ವಿಪಕ್ಷಗಳು ಮಸೂದೆಯನ್ನು ಸೋಲಿಸುವ ಮೂಲಕ ದೇಶದ ಮಹಿಳೆಯರ ಸಬಲೀಕರಣಕ್ಕೆ...