Homeಕರೋನಾ ತಲ್ಲಣಕೋವಿಡ್ ಬಿಕ್ಕಟ್ಟಿನಲ್ಲಿ ಜನರಿಗೆ ನೆರವು ನೀಡಲಾಗುತ್ತಿಲ್ಲ, ರಾಷ್ಟ್ರಪತಿ ಆಡಳಿತ ತನ್ನಿ: ಆಪ್ ಹಿರಿಯ ಶಾಸಕನ ಅಳಲು

ಕೋವಿಡ್ ಬಿಕ್ಕಟ್ಟಿನಲ್ಲಿ ಜನರಿಗೆ ನೆರವು ನೀಡಲಾಗುತ್ತಿಲ್ಲ, ರಾಷ್ಟ್ರಪತಿ ಆಡಳಿತ ತನ್ನಿ: ಆಪ್ ಹಿರಿಯ ಶಾಸಕನ ಅಳಲು

- Advertisement -
- Advertisement -

‘ನಾನು ಆರು ಬಾರಿ ಶಾಸಕ, ದೆಹಲಿಯ ಹಿರಿಯ ಶಾಸಕ. ಆದರೆ ಇದರ ಹೊರತಾಗಿಯೂ, ಯಾರೂ ಪ್ರತಿಕ್ರಿಯಿಸುತ್ತಿಲ್ಲ, ಜನರಿಗೆ ನೆರವು ನೀಡಲಾಗುತ್ತಿಲ್ಲ. ನೀವು ಯಾವುದೇ ನೋಡಲ್ ಅಧಿಕಾರಿಯನ್ನು ಸಂಪರ್ಕಿಸಲು ಸಾಧ್ಯವಿಲ್ಲ. ಈ ಪರಿಸ್ಥಿತಿಯಲ್ಲಿ ದೆಹಲಿಯಲ್ಲಿ ರಾಷ್ಟ್ರಪತಿ ಆಡಳಿತವನ್ನು ವಿಧಿಸುವಂತೆ ನಾನು ದೆಹಲಿ ಹೈಕೋರ್ಟ್‌ಗೆ ಮನವಿ ಮಾಡಲು ಬಯಸುತ್ತೇನೆ, ಇಲ್ಲದಿದ್ದರೆ ರಸ್ತೆಯಲ್ಲಿ ಮೃತ ದೇಹಗಳು ಇರುತ್ತವೆ” ಎಂದು ಆಮ್ ಆದ್ಮಿ ಪಕ್ಷದ ಶಾಸಕ ಶೋಯೆಬ್ ಇಕ್ಬಾಲ್ ಅಳಲು ತೋಡಿಕೊಂಡಿದ್ದಾರೆ ಎಂದು ಇಂಡಿಯನ್ ಎಕ್ಸ್‌ಪ್ರೆಸ್‌ ವರದಿ ಮಾಡಿದೆ.

ಮಾತಿಯಾ ಮಹಲ್‌ನ ಶಾಸಕ ಶೋಯೆಬ್ ಇಕ್ಬಾಲ್, ಕೋವಿಡ್ ಸಾಂಕ್ರಾಮಿಕದ ತೀವ್ರತೆಗೆ ನಲುಗಿರುವ ಜನತೆಗೆ ನೆರವು ನೀಡಲೂ ಆಗುತ್ತಿಲ್ಲ. ಪರಿಸ್ಥಿತಿ ಕೈ ಮೀರಿದೆ. ದೆಹಲಿಯಲ್ಲಿ ರಾಷ್ಟ್ರಪತಿ ಆಳ್ವಿಕೆ ತನ್ನಿ ಎಂದು ಅಸಹಾಯಕತೆಯಲ್ಲಿ ನ್ಯಾಯಾಲಯವನ್ನು ಕೋರಿದ್ದಾರೆ.

2020ರ ವಿಧಾನಸಭಾ ಚುನಾವಣೆಗೆ ಒಂದು ತಿಂಗಳ ಹಿಂದಿನ ತನಕ ಕಾಂಗ್ರೆಸ್ ಜೊತೆಗಿದ್ದ ಇಕ್ಬಾಲ್ ಅವರು ನಂತರ ಆಮ್ ಆದ್ಮಿ ಪಕ್ಷ ಸೇರಿ ಶಾಸಕರಾಗಿದ್ದಾರೆ. ಅವರ ವೀಡಿಯೊ ಸಂದೇಶದಲ್ಲಿ, “ದೆಹಲಿಯ ಸ್ಥಿತಿಯಿಂದ ನನಗೆ ನೋವಾಗಿದೆ.. ನಾನು ತುಂಬಾ ಚಿಂತಿತನಾಗಿದ್ದೇನೆ. ನನಗೆ ನಿದ್ರೆ ಬರುತ್ತಿಲ್ಲ. ಜನರಿಗೆ ಆಮ್ಲಜನಕ ಮತ್ತು ಔಷಧಿಗಳು ಸಿಗುತ್ತಿಲ್ಲ. ನನ್ನ ಸ್ನೇಹಿತ ಬಳಲುತ್ತಿದ್ದಾನೆ, ಆಸ್ಪತ್ರೆಯಲ್ಲಿದ್ದಾನೆ. ಆದರೆ ಆಮ್ಲಜನಕ ಅಥವಾ ವೆಂಟಿಲೇಟರ್ ಸಿಗುತ್ತಿಲ್ಲ. ರಿಮೆಡೆಸಿವಿರ್‌ಗಾಗಿ ಅವರ ಪ್ರಿಸ್ಕಿಪ್ಸನ್ ನನ್ನ ಬಳಿ ಇದೆ. ಆದರೆ ನಾನು ಅದನ್ನು ಎಲ್ಲಿಂದ ಪಡೆಯಲಿ? ಎಲ್ಲೂ ಸಿಗುತ್ತಿಲ್ಲ. ಸ್ನೇಹಿತನ ಮಕ್ಕಳು ಗಾಬರಿಯಲ್ಲಿ ಔಷಧಿಗಾಗಿ ಅಲೆಯುತ್ತಿದ್ದಾರೆ. ಇಂದು, ನಾವು ಶಾಸಕರಾಗಿದ್ದಕ್ಕೆ ನಾಚಿಕೆ ಪಡಬೇಕಾಗಿದೆ. ಏಕೆಂದರೆ ನಮಗೆ ಸಹಾಯ ಮಾಡಲು ಸಾಧ್ಯವಾಗುತ್ತಿಲ್ಲ. ಸರ್ಕಾರಕ್ಕೂ ಸಹಾಯ ಮಾಡಲು ಸಾಧ್ಯವಾಗುತ್ತಿಲ್ಲ’ ಎಂದು ತಮ್ಮ ನೋವನ್ನು ತೋಡಿಕೊಂಡಿದ್ದಾರೆ.

ಇಕ್ಬಾಲ್ 1993ರಿಂದ ದೆಹಲಿ ವಿಧಾನಸಭೆಯ ಮಾತಿಯಾ ಮಹಲ್ ಕ್ಷೇತ್ರವನ್ನು ಆರನೇ ಸಲ ಪ್ರತಿನಿಧಿಸುತ್ತಿದ್ದಾರೆ.

ಇಕ್ಬಾಲ್ ಈ ಹಿಂದೆ ಕಾಂಗ್ರೆಸ್, ಲೋಕ ಜನಶಕ್ತಿ ಪಕ್ಷ (ಜೆಎಲ್‌ಪಿ) ಮತ್ತು ಜನತಾದಳದ ಮೂರು ಅವತಾರಗಳಾದ ಜನತಾದಳ, ಜನತಾದಳ (ಜಾತ್ಯತೀತ) ಮತ್ತು ಜನತಾದಳ (ಯುನೈಟೆಡ್) ಜೊತೆಗಿದ್ದರು. ಆಪ್ 2015ರಲ್ಲಿ ಅವರ ಗೆಲುವಿಗೆ ಬ್ರೇಕ್ ಹಾಕಿತ್ತು. ಈ ಸಲ ಆಪ್‌ನಿಂದ ಶಾಸಕರಾಗಿದ್ದಾರೆ.

ಇಕ್ಬಾಲ್ ಅವರ ಈ ಹೇಳಿಕೆಯ ಬಗ್ಗೆ ಎಎಪಿ ರಾಜ್ಯ ಸಮಿತಿ ಈವರೆಗೆ ಪ್ರತಿಕ್ರಿಯಿಸಿಲ್ಲ. ಇಕ್ಬಾಲ್ ಅವರ ಹೇಳಿಕೆಗೆ ಪ್ರತಿಕ್ರಿಯಿಸಿದ ದೆಹಲಿ ಬಿಜೆಪಿ ವಕ್ತಾರ ಹರೀಶ್ ಖುರಾನಾ, “ಇಕ್ಬಾಲ್ ಕೇವಲ ಎಎಪಿ ಶಾಸಕರಲ್ಲ, ದೆಹಲಿ ವಿಧಾನಸಭೆಯಲ್ಲಿ ಹೆಚ್ಚು ಅನುಭವ ಹೊಂದಿರುವವರು. ಪರಿಸ್ಥಿತಿ ಹತೋಟಿಯಲ್ಲಿಲ್ಲ ಮತ್ತು ಜನರು ತೊಂದರೆ ಅನುಭವಿಸುತ್ತಿದ್ದಾರೆ ಎಂದು ಅವರು ಹೇಳುತ್ತಿದ್ದಾರೆಂದರೆ ಅದು ಸರಿಯಾಗಿದೆ. ಹಾಗಾಗಿ, ರಾಷ್ಟ್ರಪತಿ ಆಡಳಿತವನ್ನು ಹೇರಬೇಕು, ದೆಹಲಿ ಈಗ ಕೇಂದ್ರದ ನಿಯಂತ್ರಣದಲ್ಲಿರಬೇಕು. ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ಪರಿಸ್ಥಿತಿಯನ್ನು ನಿರ್ವಹಿಸಲು ಸಾಧ್ಯವಾಗದ ಕಾರಣ ರಾಷ್ಟ್ರಪತಿ ಆಡಳಿತವಿರಬೇಕು ಎಂದು ನಾವು ನಂಬುತ್ತೇವೆ’ ಎಂದಿದ್ದಾರೆ.

ದೆಹಲಿ ಕಾಂಗ್ರೆಸ್ ಉಪಾಧ್ಯಕ್ಷ ಅಭಿಷೇಕ್ ದತ್, ನಗರದಲ್ಲಿ ಕೋವಿಡ್ ಹರಡುವಿಕೆ ಮತ್ತು ಸಂಬಂಧಿತ ಸಾವುಗಳನ್ನು ಕೊನೆಗೊಳಿಸಲು ಸೇನೆಯು ದೆಹಲಿಯನ್ನು ಸ್ವಾಧೀನಪಡಿಸಿಕೊಳ್ಳಬೇಕು ಮತ್ತು ಆರೋಗ್ಯ ಮೂಲಸೌಕರ್ಯಗಳನ್ನು ನಿರ್ವಹಿಸಬೇಕು ಎಂದು ಹೇಳಿದರು. ರಾಜ್ಯದಲ್ಲಿ ಆರ್‌ಟಿ-ಪಿಸಿಆರ್ ಪರೀಕ್ಷೆಯನ್ನು ಸರ್ಕಾರ ನಿಧಾನಗೊಳಿಸಿದೆ ಮತ್ತು ಕೋವಿಡ್ ಸಾವಿನ ಅಂಕಿಅಂಶಗಳು ಸರಿಯಾಗಿ ವರದಿಯಾಗಿಲ್ಲ ಎಂದು ಅವರು ಆರೋಪಿಸಿದ್ದಾರೆ.


ಇದನ್ನೂ ಓದಿ: ದೆಹಲಿಯಾದ್ಯಂತ ಬೆಂಕಿಯೇ ಕಾಣುವಾಗ ಇಲ್ಲಿನ ಬಿಜೆಪಿ ಎಲ್ಲಿ?: ಆರ್‌ಎಸ್‌ಎಸ್ ಮುಖಂಡರೊಬ್ಬರ ಆಕ್ರೋಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....