Homeಕರೋನಾ ತಲ್ಲಣಕೋವಿಡ್ ಬಿಕ್ಕಟ್ಟಿನಲ್ಲಿ ಜನರಿಗೆ ನೆರವು ನೀಡಲಾಗುತ್ತಿಲ್ಲ, ರಾಷ್ಟ್ರಪತಿ ಆಡಳಿತ ತನ್ನಿ: ಆಪ್ ಹಿರಿಯ ಶಾಸಕನ ಅಳಲು

ಕೋವಿಡ್ ಬಿಕ್ಕಟ್ಟಿನಲ್ಲಿ ಜನರಿಗೆ ನೆರವು ನೀಡಲಾಗುತ್ತಿಲ್ಲ, ರಾಷ್ಟ್ರಪತಿ ಆಡಳಿತ ತನ್ನಿ: ಆಪ್ ಹಿರಿಯ ಶಾಸಕನ ಅಳಲು

- Advertisement -
- Advertisement -

‘ನಾನು ಆರು ಬಾರಿ ಶಾಸಕ, ದೆಹಲಿಯ ಹಿರಿಯ ಶಾಸಕ. ಆದರೆ ಇದರ ಹೊರತಾಗಿಯೂ, ಯಾರೂ ಪ್ರತಿಕ್ರಿಯಿಸುತ್ತಿಲ್ಲ, ಜನರಿಗೆ ನೆರವು ನೀಡಲಾಗುತ್ತಿಲ್ಲ. ನೀವು ಯಾವುದೇ ನೋಡಲ್ ಅಧಿಕಾರಿಯನ್ನು ಸಂಪರ್ಕಿಸಲು ಸಾಧ್ಯವಿಲ್ಲ. ಈ ಪರಿಸ್ಥಿತಿಯಲ್ಲಿ ದೆಹಲಿಯಲ್ಲಿ ರಾಷ್ಟ್ರಪತಿ ಆಡಳಿತವನ್ನು ವಿಧಿಸುವಂತೆ ನಾನು ದೆಹಲಿ ಹೈಕೋರ್ಟ್‌ಗೆ ಮನವಿ ಮಾಡಲು ಬಯಸುತ್ತೇನೆ, ಇಲ್ಲದಿದ್ದರೆ ರಸ್ತೆಯಲ್ಲಿ ಮೃತ ದೇಹಗಳು ಇರುತ್ತವೆ” ಎಂದು ಆಮ್ ಆದ್ಮಿ ಪಕ್ಷದ ಶಾಸಕ ಶೋಯೆಬ್ ಇಕ್ಬಾಲ್ ಅಳಲು ತೋಡಿಕೊಂಡಿದ್ದಾರೆ ಎಂದು ಇಂಡಿಯನ್ ಎಕ್ಸ್‌ಪ್ರೆಸ್‌ ವರದಿ ಮಾಡಿದೆ.

ಮಾತಿಯಾ ಮಹಲ್‌ನ ಶಾಸಕ ಶೋಯೆಬ್ ಇಕ್ಬಾಲ್, ಕೋವಿಡ್ ಸಾಂಕ್ರಾಮಿಕದ ತೀವ್ರತೆಗೆ ನಲುಗಿರುವ ಜನತೆಗೆ ನೆರವು ನೀಡಲೂ ಆಗುತ್ತಿಲ್ಲ. ಪರಿಸ್ಥಿತಿ ಕೈ ಮೀರಿದೆ. ದೆಹಲಿಯಲ್ಲಿ ರಾಷ್ಟ್ರಪತಿ ಆಳ್ವಿಕೆ ತನ್ನಿ ಎಂದು ಅಸಹಾಯಕತೆಯಲ್ಲಿ ನ್ಯಾಯಾಲಯವನ್ನು ಕೋರಿದ್ದಾರೆ.

2020ರ ವಿಧಾನಸಭಾ ಚುನಾವಣೆಗೆ ಒಂದು ತಿಂಗಳ ಹಿಂದಿನ ತನಕ ಕಾಂಗ್ರೆಸ್ ಜೊತೆಗಿದ್ದ ಇಕ್ಬಾಲ್ ಅವರು ನಂತರ ಆಮ್ ಆದ್ಮಿ ಪಕ್ಷ ಸೇರಿ ಶಾಸಕರಾಗಿದ್ದಾರೆ. ಅವರ ವೀಡಿಯೊ ಸಂದೇಶದಲ್ಲಿ, “ದೆಹಲಿಯ ಸ್ಥಿತಿಯಿಂದ ನನಗೆ ನೋವಾಗಿದೆ.. ನಾನು ತುಂಬಾ ಚಿಂತಿತನಾಗಿದ್ದೇನೆ. ನನಗೆ ನಿದ್ರೆ ಬರುತ್ತಿಲ್ಲ. ಜನರಿಗೆ ಆಮ್ಲಜನಕ ಮತ್ತು ಔಷಧಿಗಳು ಸಿಗುತ್ತಿಲ್ಲ. ನನ್ನ ಸ್ನೇಹಿತ ಬಳಲುತ್ತಿದ್ದಾನೆ, ಆಸ್ಪತ್ರೆಯಲ್ಲಿದ್ದಾನೆ. ಆದರೆ ಆಮ್ಲಜನಕ ಅಥವಾ ವೆಂಟಿಲೇಟರ್ ಸಿಗುತ್ತಿಲ್ಲ. ರಿಮೆಡೆಸಿವಿರ್‌ಗಾಗಿ ಅವರ ಪ್ರಿಸ್ಕಿಪ್ಸನ್ ನನ್ನ ಬಳಿ ಇದೆ. ಆದರೆ ನಾನು ಅದನ್ನು ಎಲ್ಲಿಂದ ಪಡೆಯಲಿ? ಎಲ್ಲೂ ಸಿಗುತ್ತಿಲ್ಲ. ಸ್ನೇಹಿತನ ಮಕ್ಕಳು ಗಾಬರಿಯಲ್ಲಿ ಔಷಧಿಗಾಗಿ ಅಲೆಯುತ್ತಿದ್ದಾರೆ. ಇಂದು, ನಾವು ಶಾಸಕರಾಗಿದ್ದಕ್ಕೆ ನಾಚಿಕೆ ಪಡಬೇಕಾಗಿದೆ. ಏಕೆಂದರೆ ನಮಗೆ ಸಹಾಯ ಮಾಡಲು ಸಾಧ್ಯವಾಗುತ್ತಿಲ್ಲ. ಸರ್ಕಾರಕ್ಕೂ ಸಹಾಯ ಮಾಡಲು ಸಾಧ್ಯವಾಗುತ್ತಿಲ್ಲ’ ಎಂದು ತಮ್ಮ ನೋವನ್ನು ತೋಡಿಕೊಂಡಿದ್ದಾರೆ.

ಇಕ್ಬಾಲ್ 1993ರಿಂದ ದೆಹಲಿ ವಿಧಾನಸಭೆಯ ಮಾತಿಯಾ ಮಹಲ್ ಕ್ಷೇತ್ರವನ್ನು ಆರನೇ ಸಲ ಪ್ರತಿನಿಧಿಸುತ್ತಿದ್ದಾರೆ.

ಇಕ್ಬಾಲ್ ಈ ಹಿಂದೆ ಕಾಂಗ್ರೆಸ್, ಲೋಕ ಜನಶಕ್ತಿ ಪಕ್ಷ (ಜೆಎಲ್‌ಪಿ) ಮತ್ತು ಜನತಾದಳದ ಮೂರು ಅವತಾರಗಳಾದ ಜನತಾದಳ, ಜನತಾದಳ (ಜಾತ್ಯತೀತ) ಮತ್ತು ಜನತಾದಳ (ಯುನೈಟೆಡ್) ಜೊತೆಗಿದ್ದರು. ಆಪ್ 2015ರಲ್ಲಿ ಅವರ ಗೆಲುವಿಗೆ ಬ್ರೇಕ್ ಹಾಕಿತ್ತು. ಈ ಸಲ ಆಪ್‌ನಿಂದ ಶಾಸಕರಾಗಿದ್ದಾರೆ.

ಇಕ್ಬಾಲ್ ಅವರ ಈ ಹೇಳಿಕೆಯ ಬಗ್ಗೆ ಎಎಪಿ ರಾಜ್ಯ ಸಮಿತಿ ಈವರೆಗೆ ಪ್ರತಿಕ್ರಿಯಿಸಿಲ್ಲ. ಇಕ್ಬಾಲ್ ಅವರ ಹೇಳಿಕೆಗೆ ಪ್ರತಿಕ್ರಿಯಿಸಿದ ದೆಹಲಿ ಬಿಜೆಪಿ ವಕ್ತಾರ ಹರೀಶ್ ಖುರಾನಾ, “ಇಕ್ಬಾಲ್ ಕೇವಲ ಎಎಪಿ ಶಾಸಕರಲ್ಲ, ದೆಹಲಿ ವಿಧಾನಸಭೆಯಲ್ಲಿ ಹೆಚ್ಚು ಅನುಭವ ಹೊಂದಿರುವವರು. ಪರಿಸ್ಥಿತಿ ಹತೋಟಿಯಲ್ಲಿಲ್ಲ ಮತ್ತು ಜನರು ತೊಂದರೆ ಅನುಭವಿಸುತ್ತಿದ್ದಾರೆ ಎಂದು ಅವರು ಹೇಳುತ್ತಿದ್ದಾರೆಂದರೆ ಅದು ಸರಿಯಾಗಿದೆ. ಹಾಗಾಗಿ, ರಾಷ್ಟ್ರಪತಿ ಆಡಳಿತವನ್ನು ಹೇರಬೇಕು, ದೆಹಲಿ ಈಗ ಕೇಂದ್ರದ ನಿಯಂತ್ರಣದಲ್ಲಿರಬೇಕು. ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ಪರಿಸ್ಥಿತಿಯನ್ನು ನಿರ್ವಹಿಸಲು ಸಾಧ್ಯವಾಗದ ಕಾರಣ ರಾಷ್ಟ್ರಪತಿ ಆಡಳಿತವಿರಬೇಕು ಎಂದು ನಾವು ನಂಬುತ್ತೇವೆ’ ಎಂದಿದ್ದಾರೆ.

ದೆಹಲಿ ಕಾಂಗ್ರೆಸ್ ಉಪಾಧ್ಯಕ್ಷ ಅಭಿಷೇಕ್ ದತ್, ನಗರದಲ್ಲಿ ಕೋವಿಡ್ ಹರಡುವಿಕೆ ಮತ್ತು ಸಂಬಂಧಿತ ಸಾವುಗಳನ್ನು ಕೊನೆಗೊಳಿಸಲು ಸೇನೆಯು ದೆಹಲಿಯನ್ನು ಸ್ವಾಧೀನಪಡಿಸಿಕೊಳ್ಳಬೇಕು ಮತ್ತು ಆರೋಗ್ಯ ಮೂಲಸೌಕರ್ಯಗಳನ್ನು ನಿರ್ವಹಿಸಬೇಕು ಎಂದು ಹೇಳಿದರು. ರಾಜ್ಯದಲ್ಲಿ ಆರ್‌ಟಿ-ಪಿಸಿಆರ್ ಪರೀಕ್ಷೆಯನ್ನು ಸರ್ಕಾರ ನಿಧಾನಗೊಳಿಸಿದೆ ಮತ್ತು ಕೋವಿಡ್ ಸಾವಿನ ಅಂಕಿಅಂಶಗಳು ಸರಿಯಾಗಿ ವರದಿಯಾಗಿಲ್ಲ ಎಂದು ಅವರು ಆರೋಪಿಸಿದ್ದಾರೆ.


ಇದನ್ನೂ ಓದಿ: ದೆಹಲಿಯಾದ್ಯಂತ ಬೆಂಕಿಯೇ ಕಾಣುವಾಗ ಇಲ್ಲಿನ ಬಿಜೆಪಿ ಎಲ್ಲಿ?: ಆರ್‌ಎಸ್‌ಎಸ್ ಮುಖಂಡರೊಬ್ಬರ ಆಕ್ರೋಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...

ಬಿಹಾರ: ನಕಲಿ ದಾಖಲೆ ನೀಡಿ ಕೆಲಸ ಗಿಟ್ಟಿಸಿದ್ದ 3,000ಕ್ಕೂ ಹೆಚ್ಚು ಶಿಕ್ಷಕರು ವಜಾ!

ನಕಲಿ ಪದವಿ ಹಾಗೂ ನಕಲಿ ಶೈಕ್ಷಣಿಕ ಪ್ರಮಾಣಪತ್ರಗಳನ್ನು ನೀಡಿ ಸರ್ಕಾರಿ ಶಾಲೆಗಳಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದ 3,000ಕ್ಕೂ ಹೆಚ್ಚು ಶಿಕ್ಷಕರನ್ನು ಸೇವೆಯಿಂದ ವಜಾಗೊಳಿಸಲು ಬಿಹಾರ ಸರ್ಕಾರ ನಿರ್ಧರಿಸಿದೆ. ಈ ಕುರಿತು ಶುಕ್ರವಾರ ಅಧಿಕೃತ ಪ್ರಕಟಣೆ...