Homeಮುಖಪುಟಮಾಲಿನ್ಯದಿಂದ ವಾಸಕ್ಕೆ ಯೋಗ್ಯವಲ್ಲದಷ್ಟು ಹದಗೆಟ್ಟ ದೆಹಲಿ: ಕೇಂದ್ರ ಮತ್ತು ರಾಜ್ಯ ಸರ್ಕಾರಕ್ಕೆ ಸುಪ್ರೀಂ ಛೀಮಾರಿ...

ಮಾಲಿನ್ಯದಿಂದ ವಾಸಕ್ಕೆ ಯೋಗ್ಯವಲ್ಲದಷ್ಟು ಹದಗೆಟ್ಟ ದೆಹಲಿ: ಕೇಂದ್ರ ಮತ್ತು ರಾಜ್ಯ ಸರ್ಕಾರಕ್ಕೆ ಸುಪ್ರೀಂ ಛೀಮಾರಿ…

- Advertisement -
- Advertisement -

ರಾಷ್ಟ್ರ ರಾಜಧಾನಿ ದೆಹಲಿ ಈಗ ವಿಷಪೂರಿತವಾಗಿದೆ. ವಾಯುಮಾಲಿನ್ಯ ಮಿತಿ ಮೀರಿದ್ದು,  ಉಸಿರಾಟ ತೊಂದರೆ ಮತ್ತು ಅನಾರೋಗ್ಯದಿಂದ ಜನರನ್ನು ಬಳಲುವಂತೆ ಮಾಡಿದೆ. ದೆಹಲಿಯ ತುಂಬ ದಟ್ಟ ಹೊಗೆ ಆವರಿಸಿದೆ. ಈ ಸಂಬಂಧ ಸುಪ್ರೀಂಕೋರ್ಟ್ ದೆಹಲಿ ಸರ್ಕಾರ ಮತ್ತು ಕೇಂದ್ರ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ.

ದೆಹಲಿಯಲ್ಲಿ ಸಾರ್ವಜನಿಕ ಆರೋಗ್ಯ ತುರ್ತುಸ್ಥಿತಿ ಘೋಷಣೆಯಾಗಿದೆ. ವರ್ಷದಿಂದ ವರ್ಷಕ್ಕೆ ಜನ ತಮ್ಮ ಉಸಿರು ಕಳೆದುಕೊಳ್ಳುತ್ತಿದ್ದಾರೆ. ವಿಷಪೂರಿತ ವಾತಾವರಣದಲ್ಲಿ ಬದುಕುವುದು ಹೇಗೆ..? ಯಾವುದೇ ಸುಸಂಸ್ಕೃತ ದೇಶದಲ್ಲಿ ಈ ರೀತಿಯಾಗಲು ಸಾಧ್ಯವಿಲ್ಲ ಎಂದು ಹೇಳಿದೆ.

ಸುಪ್ರೀಂಕೋರ್ಟ್ ನ್ಯಾ. ಅರುಣ್ ಮಿಶ್ರಾ, ದೆಹಲಿಯಲ್ಲಿ ಮಾಲಿನ್ಯ ನಿಯಂತ್ರಣ ಪ್ರಾಧಿಕಾರ ಸೂಕ್ತ ಕ್ರಮ ತೆಗೆದುಕೊಳ್ಳಬೇಕು. ತ್ಯಾಜ್ಯ ಮತ್ತು ಉದ್ಯಮ ಘಟಕಗಳಿಂದ ಬಿಡುವ ಹೊಗೆ ಸಾಕಷ್ಟು ಹಾನಿಯುಂಟು ಮಾಡುತ್ತಿದೆ. ಕೈಗಾರಿಕೆಗಳಿಂದ ಬಿಡಲಾಗುತ್ತಿರುವ ತ್ಯಾಜ್ಯ, ವಿಷಪೂರಿತ ಹೊಗೆ, ಕಸ ಸುಡುವುದರಿಂದ ಮಾಲಿನ್ಯದ ಪ್ರಮಾಣ ಹೆಚ್ಚುತ್ತಿದೆ. ಇಂಥ ವಾತಾವರಣದಲ್ಲಿ ಸಾರ್ವಜನಿಕರು ಬದುಕಲು ಸಾಧ್ಯವೇ..? ಇದು ಜನ ಬದುಕಲು ಇರುವ ಸರಿಯಾದ ಮಾರ್ಗವೂ ಅಲ್ಲ. ಹೀಗಾದರೆ ಮನೆಯಲ್ಲಿ ಇರುವವರು, ಹೊರಗೆ ಓಡಾಡುವವರಿಂದ ಹಿಡಿದು ಯಾರೂ ಸುರಕ್ಷಿತವಾಗಿರಲು ಸಾಧ್ಯವಿಲ್ಲ ಎಂದು ಸುಪ್ರೀಂಕೋರ್ಟ್ ಹೇಳಿದೆ.

ಇದನ್ನೂ ಓದಿ: ಮಾಲಿನ್ಯ ತಡೆಗಾಗಿ ಇಂದಿನಿಂದ ದೆಹಲಿಯಲ್ಲಿ ಬೆಸ-ಸಮ ನಿಯಮ ಜಾರಿ: ಬಿಜೆಪಿ ವಿರೋಧ

ದೆಹಲಿಯ ಸುತ್ತಮುತ್ತಲಿನ ನಗರಗಳಾದ ಪಂಜಾಬ್, ಹರ್ಯಾಣ, ಪಶ್ಚಿಮ ಉತ್ತರ ಪ್ರದೇಶ ಭಾಗದಲ್ಲಿನ ಬೆಳೆ, ಪೈರು ಕಟಾವಿನ ನಂತರ ತ್ಯಾಜ್ಯವನ್ನು ಸುಟ್ಟು, ಭೂಮಿಯನ್ನು ಮತ್ತೆ ಹದಗೊಳಿಸಲಾಗುತ್ತದೆ. ಇಂಥ ಸಮಯದಲ್ಲಿ ಮಾಲಿನ್ಯ ಪ್ರಮಾಣ ಮತ್ತಷ್ಟು ಹೆಚ್ಚುತ್ತದೆ. ಇದಕ್ಕೆ ವೈಜ್ಞಾನಿಕ ಮಾರ್ಗೋಪಾಯ ಕಂಡುಕೊಳ್ಳಲು ಸರ್ಕಾರಗಳು ಶ್ರಮಿಸಬೇಕು. ಪರಿಸರ ತಜ್ಞರು, ಐಐಟಿ ತಜ್ಞರನ್ನೂ ಕರೆಯಿಸಿ, ಸೂಕ್ತ ಸಮಾಲೋಚನೆ ನಡೆಸಿ, ವಾಯುಮಾಲಿನ್ಯ ಸಮಸ್ಯೆ ತಡೆಗೆ ಕೇಂದ್ರ ಸರ್ಕಾರ ಮತ್ತು ದೆಹಲಿ ಸರ್ಕಾರ ಪರಿಹಾರೋಪಾಯ ಕಂಡುಕೊಳ್ಳಬೇಕು. ಪ್ರತಿ ವರ್ಷ ಇದು ನಮ್ಮ ಮೂಗಿನ ನೇರಕ್ಕೆ ನಡೆಯುತ್ತಿದೆ. ಆದರೂ ಸರ್ಕಾರಗಳು ಎಚ್ಚೆತ್ತುಕೊಂಡಿಲ್ಲ. ದೆಹಲಿಗೆ ಬರಬೇಡಿ ಅಥವಾ ದೆಹಲಿ ಬಿಟ್ಟು ದೂರ ಹೋಗಿ ಎಂದು ಜನರಿಗೆ  ಹೇಳುವಂಥಹ ಕೆಟ್ಟ ಸ್ಥಿತಿ ನಿರ್ಮಾಣವಾಗಿದೆ. ಜನರು ತಮ್ಮದೇ ರಾಜ್ಯದಲ್ಲಿ ಮತ್ತು ಪಕ್ಕದ ರಾಜ್ಯಗಳಲ್ಲಿ ಸಾಯುತ್ತಿದ್ದಾರೆ.  ಇದನ್ನು ಸಹಿಸಿಕೊಳ್ಳುವುದು ಅಸಾಧ್ಯ ಎಂದು ಸುಪ್ರೀಂಕೋರ್ಟ್ ಹೇಳಿದೆ.

ದೆಹಲಿಯಲ್ಲಿ ಪ್ರತಿ ವರ್ಷ ವಾಯುಮಾಲಿನ್ಯ ಬೃಹತ್ ಸಮಸ್ಯೆಯಾಗಿ ಬೆಳೆಯುತ್ತಲೇ ಇದೆ. ಇದನ್ನು ತಡೆಗಟ್ಟಲು ನಾವು ಏನನ್ನೂ ಮಾಡುತ್ತಿಲ್ಲ. ಪ್ರತಿ ವರ್ಷ ಆಗುತ್ತಿರುವ ಸಮಸ್ಯೆಯನ್ನು ನಿರ್ಲಕ್ಷಿಸಲಾಗುತ್ತಿದೆ. ಜನ ಉಸಿರಾಟಕ್ಕೆ ಒಳ್ಳೆಯ ಗಾಳಿ ಸಿಗದೇ ಉಸಿರು ಚೆಲ್ಲುತ್ತಿದ್ದಾರೆ. ಇಂಥ ಘಟನೆ ಸುಸಂಸ್ಕೃತ ರಾಷ್ಟ್ರದಲ್ಲಿ ನಡೆಯುವುದಿಲ್ಲ, ನಡೆಯಲೂಬಾರದು ಎಂದು ಹೇಳಿದೆ.

ಮಾಲಿನ್ಯ ನಿಯಂತ್ರಣ ಮಂಡಳಿ ಪ್ರಾಧಿಕಾರ ವರದಿ ನೀಡಿದ್ದು, 2010ರಿಂದ ಇಲ್ಲಿಯವರೆಗೆ ಮಾಲಿನ್ಯ ಪ್ರಮಾಣ ಕಡಿಮೆಯಾಗಿದೆ. ಆದರೆ ನಗರದಲ್ಲಿ ಇನ್ನೂ ಶೇ. 65 ರಷ್ಟು ವಾಯುಮಾಲಿನ್ಯ ಕಡಿಮೆಯಾಗಬೇಕಿದೆ. ತ್ಯಾಜ್ಯ ಮತ್ತು ಕೈಗಾರಿಕೆಗಳಿಂದ ಹೊರಬರುವ ವಿಷಪೂರಿತ ಹೊಗೆ ಮತ್ತಷ್ಟು ಸಮಸ್ಯೆಯನ್ನು ಹೆಚ್ಚಿಸುತ್ತಿದೆ ಎಂದು ವರದಿ ನೀಡಿದೆ.

ಇತ್ತ ಹಿರಿಯ ವಕೀಲ ಅಪರಾಜಿತ್ ಸಿಂಗ್ ಮಾತನಾಡಿ, ಪಂಜಾಬ್ ನಲ್ಲಿ ತ್ಯಾಜ್ಯ ಸುಡುವ ಪ್ರಮಾಣ ಶೇ. 7ರಷ್ಟಿದೆ. ಹರ್ಯಾಣದಲ್ಲಿ ಶೇ. 17ರಷ್ಟಿದೆ ಎಂದು ಹೇಳಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನೇಮಕಾತಿ ಅಕ್ರಮ ಖಂಡಿಸಿ ಜಾರ್ಖಂಡ್‌ನಲ್ಲಿ ಧರಣಿ: ವಿದ್ಯಾರ್ಥಿಗಳ ಹೋರಾಟಕ್ಕೆ ತಲೆಬಾಗಿದ ಸಿಎಂ ಹೇಮಂತ್ ಸೊರೇನ್, ‘ನ್ಯಾಯದ ಭರವಸೆ’

ಜಾರ್ಖಂಡ್‌ನ ಸರ್ಕಾರಿ ಉದ್ಯೋಗ ಆಕಾಂಕ್ಷಿಗಳು ಹಾಗೂ ಯುವಜನತೆ ತಮ್ಮ ಭವಿಷ್ಯದ ಭದ್ರತೆಗಾಗಿ ಬೀದಿಗಿಳಿದು ನಡೆಸುತ್ತಿರುವ ಬೃಹತ್ ಪ್ರತಿಭಟನೆ ಈಗ ಇಡೀ ರಾಜ್ಯದ ಗಮನ ಸೆಳೆದಿದೆ. ಜಾರ್ಖಂಡ್ ಸಾರ್ವಜನಿಕ ಸೇವಾ ಆಯೋಗ (JPSC) ಮತ್ತು...

ಪ.ಬಂಗಾಳ : ಮಮತಾ ಬ್ಯಾನರ್ಜಿ ಕಾರಿನ ಮೇಲೆ ದಾಳಿ; ಕಲ್ಲು, ಚಪ್ಪಲಿ ತೂರಿದ ಗುಂಪು

ಪೊಲೀಸ್ ಕಸ್ಟಡಿಯಲ್ಲಿ ಸಾವನ್ನಪ್ಪಿದ್ದಾರೆ ಎನ್ನಲಾದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಕಾರ್ಯಕರ್ತನ ಮನೆಗೆ ಹೋಗುತ್ತಿದ್ದಾಗ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಇದ್ದ ಕಾರಿನ ಮೇಲೆ ಗುಂಪೊಂದು ದಾಳಿ ನಡೆಸಿದ ಘಟನೆ ಭಾನುವಾರ...

SIR ನೆಪದಲ್ಲಿ 1 ಕೋಟಿ ಮತ ಡಿಲೀಟ್ ಮಾಡೋ ಸಂಚು: ಎಚ್ಚೆತ್ತುಕೊಳ್ಳುವಂತೆ ಕಾರ್ಯಕರ್ತರಿಗೆ ಡಿ.ಕೆ. ಶಿವಕುಮಾರ್ ಕರೆ

SIR ನೆಪದಲ್ಲಿ ಮತದಾರರ ಪಟ್ಟಿಯಿಂದ ಒಂದು ಕೋಟಿಗೂ ಹೆಚ್ಚು ಮತಗಳನ್ನು ಅಳಿಸುವ ಸಂಚು ನಡೆಯುತ್ತಿದೆ, ಕಾಂಗ್ರೆಸ್ ಕಾರ್ಯಕರ್ತರು ಈ ವಿಚಾರದಲ್ಲಿ ಎಚ್ಚೆತ್ತುಕೊಳ್ಳಬೇಕು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಕರೆ ನೀಡಿದರು. ಕೆಪಿಸಿಸಿ ಕಚೇರಿಯ...

‘ಮೋದಿ ದೇಶದ ಯುವಕರನ್ನು ಸಬಲೀಕರಣಗೊಳಿಸಲು ಶ್ರಮಿಸುತ್ತಿದ್ದಾರೆ ’: ‘ಜೆನ್ ಝೀ’ಗಳನ್ನು ‘ಬಾಹ್ಯ ಶಕ್ತಿಗಳು ದಾರಿ ತಪ್ಪಿಸುತ್ತಿವೆ’: ಒಡಿಶಾ ಸಿಎಂ ಮೋಹನ್ ಚರಣ್ ಮಾಝಿ

ಭುವನೇಶ್ವರ: ಜಾಗತಿಕ ವೇದಿಕೆಯಲ್ಲಿ "ತಮ್ಮನ್ನು ದಾರಿ ತಪ್ಪಿಸಲು ಮತ್ತು ಭಾರತವನ್ನು ದುರ್ಬಲಗೊಳಿಸಲು" ನಿರಂತರವಾಗಿ ಪ್ರಯತ್ನಿಸುತ್ತಿರುವ "ಬಾಹ್ಯ ಶಕ್ತಿಗಳಿಗೆ" ಬಲಿಯಾಗಬೇಡಿ ಎಂದು ಒಡಿಶಾ ಮುಖ್ಯಮಂತ್ರಿ ಮೋಹನ್ ಚರಣ್ ಮಾಝಿ ಭಾನುವಾರ ಜೆನ್ ಝೀ (GEN-Z)...

ಪದವಿ ಪ್ರದಾನ ಸಮಾರಂಭಕ್ಕೆ CJI ಆಹ್ವಾನಿಸಲು ಹೈದರಾಬಾದ್ ಕಾನೂನು ವಿಶ್ವವಿದ್ಯಾಲಯದಲ್ಲಿ ವಿದ್ಯಾರ್ಥಿಗಳ ವಿರೋಧ

ಹೈದರಾಬಾದ್‌ನ ‘ನಾಲ್ಸಾರ್’ (NALSAR) ಕಾನೂನು ವಿಶ್ವವಿದ್ಯಾಲಯದ ಪದವಿ ಪ್ರದಾನ ಸಮಾರಂಭಕ್ಕೆ ಭಾರತದ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯ ಕಾಂತ್ ಅವರನ್ನು ಮುಖ್ಯ ಅತಿಥಿಯಾಗಿ ಆಹ್ವಾನಿಸಬಾರದು ಎಂದು ವಿಶ್ವವಿದ್ಯಾಲಯದ ವಿದ್ಯಾರ್ಥಿಗಳ ಒಂದು ಗುಂಪು ಆಡಳಿತ...

3ನೇ ಹಂತದ ‘SIR’ ಕರಡು ಮತದಾರರ ಪಟ್ಟಿ ಬಿಡುಗಡೆ: 12 ರಾಜ್ಯಗಳಲ್ಲಿ 1.58 ಕೋಟಿ ಮತದಾರರ ಹೆಸರು ಕೈಬಿಟ್ಟ ಆಯೋಗ, ಇನ್ನು ಕರ್ನಾಟಕ ಬಾಕಿ

3ನೇ ಹಂತದದಲ್ಲಿ ದೇಶದ 12 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಜುಲೈನಿಂದ ನಡೆಸಲಾದ ‘ವಿಶೇಷ ತೀವ್ರ ಮತಪಟ್ಟಿ ಪರಿಷ್ಕರಣೆ’ (SIR) ಪ್ರಕ್ರಿಯೆಯ ಬಳಿಕ ಬಿಡುಗಡೆಯಾದ ಕರಡು ಮತದಾರರ ಪಟ್ಟಿಯಲ್ಲಿ ಭಾರಿ ಪ್ರಮಾಣದ ಹೆಸರುಗಳು...

ದಾರುಲ್ ಉಲೂಮ್ ದಿಯೋಬಂದ್ ಆವರಣದಲ್ಲಿ ಶಿವಲಿಂಗವಿದೆ ಎಂದ ಹಿಂದುತ್ವ ಸಂಘಟನೆ : ಆ.11ರಂದು ಗಂಗಾಜಲ ಅರ್ಪಿಸುವುದಾಗಿ ಘೋಷಣೆ

ಉತ್ತರ ಪ್ರದೇಶದ ದಿಯೋಬಂದ್‌ನಲ್ಲಿರುವ ಪ್ರಸಿದ್ದ ಮುಸ್ಲಿಂ ಶಿಕ್ಷಣ ಸಂಸ್ಥೆ ದಾರುಲ್ ಉಲೂಮ್ ಆವರಣದಲ್ಲಿ ಶಿವಲಿಂಗವಿದೆ ಎಂದು ಪ್ರತಿಪಾದಿಸಿರುವ ಹಿಂದೂ ರಕ್ಷಾ ದಳ ಸಂಘಟನೆ, ಆಗಸ್ಟ್ 11 ರಂದು ಸಂಸ್ಥೆಗೆ ಭೇಟಿ ನೀಡಿ ಗಂಗಾಜಲ...

‘ಮೋದಿ ನಮ್ಮನ್ನು ಗುಂಡಿಕ್ಕಿ ಕೊಂದರೂ ಈ ಜೀವಿತಾವಧಿಯಲ್ಲಿ ವಂದೇ ಮಾತರಂ ಪೂರ್ಣ ಆವೃತ್ತಿ ಹಾಡುವುದಿಲ್ಲ’: ಕೇರಳ ಕಾಂಗ್ರೆಸ್ ಸಂಸದ ರಾಜಮೋಹನ್ ಉನ್ನಿತ್ತಾನ್

ಕಾಸರಗೋಡು (ಕೇರಳ): ಕೇಂದ್ರ ಸರ್ಕಾರದ ನಿರ್ದೇಶನದ ಮೇರೆಗೆ 'ಹರ್ ಘರ್ ತಿರಂಗಾ' ಅಭಿಯಾನದ ಸಮಯದಲ್ಲಿ ರಾಷ್ಟ್ರಗೀತೆ 'ವಂದೇ ಮಾತರಂ'ನ ಸಂಪೂರ್ಣ ವಾಗ್ವಾದ/ಆವೃತ್ತಿಯನ್ನು ಹಾಡುವಂತೆ ರಾಜ್ಯ ಸರ್ಕಾರ ಹೊರಡಿಸಿರುವ ಸಂವಹನದ ಸುತ್ತ ಭಾರಿ ವಿವಾದ...

ಮೊಜ್ತಬಾ ಖಾಮಿನೈ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದ ಇಸ್ರೇಲ್ ಮಾಧ್ಯಮಗಳು : ವಿಡಿಯೋ ಬಿಡುಗಡೆ ಮಾಡಿ ಕೌಂಟರ್ ಕೊಟ್ಟ ಇರಾನ್

ಇರಾನ್‌ನ ಸರ್ವೋಚ್ಚ ನಾಯಕ ಮೊಜ್ತಾಬಾ ಖಾಮಿನೈ ಅವರ ಆರೋಗ್ಯ ಸ್ಥಿತಿ 'ಅತ್ಯಂತ ಗಂಭೀರವಾಗಿದೆ' ಎಂದು ಇಸ್ರೇಲಿ ಮಾಧ್ಯಮಗಳು ವರದಿ ಮಾಡಿದ ಬೆನ್ನಲ್ಲೇ, ಅವರು ಉತ್ತಮ ಆರೋಗ್ಯದಿಂದ ಇರುವಂತೆ ಕಾಣಿಸುವ ದಿನಾಂಕವಿಲ್ಲದ ವಿಡಿಯೋ ಒಂದನ್ನು...

‘ಬ್ರಿಟಿಷರಿಂದ ಕಠಿಣ ಶಿಕ್ಷೆ ಅನುಭವಿಸಿದವರು ಸಾವರ್ಕರ್’ ಎಂಬ ಕೇರಳ ಶಾಲೆಯೊಂದರ ಕ್ವಿಜ್‌ ಪ್ರಶ್ನೆ ತಂದಿಟ್ಟ ವಿವಾದ

ಕೇರಳದ ಕಾಸರಗೋಡು ಜಿಲ್ಲೆಯ ಮಂಜೇಶ್ವರಂ ಮತ್ತು ಕುಂಬಳೆ ಉಪಜಿಲ್ಲೆಗಳ ಕಿರಿಯ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳಿಗಾಗಿ ಆಯೋಜಿಸಲಾಗಿದ್ದ ಸ್ವಾತಂತ್ರ್ಯ ದಿನಾಚರಣೆ ಕ್ವಿಜ್‌ನಲ್ಲಿ ವಿ ವಿನಾಯಕ ದಾಮೋದರ ಸಾವರ್ಕರ್ ಕುರಿತಾದ ಪ್ರಶ್ನೆಯೊಂದು ತೀವ್ರ ವಿವಾದಕ್ಕೆ ಕಾರಣವಾಗಿದೆ....