Homeಮುಖಪುಟಮಾಲಿನ್ಯದಿಂದ ವಾಸಕ್ಕೆ ಯೋಗ್ಯವಲ್ಲದಷ್ಟು ಹದಗೆಟ್ಟ ದೆಹಲಿ: ಕೇಂದ್ರ ಮತ್ತು ರಾಜ್ಯ ಸರ್ಕಾರಕ್ಕೆ ಸುಪ್ರೀಂ ಛೀಮಾರಿ...

ಮಾಲಿನ್ಯದಿಂದ ವಾಸಕ್ಕೆ ಯೋಗ್ಯವಲ್ಲದಷ್ಟು ಹದಗೆಟ್ಟ ದೆಹಲಿ: ಕೇಂದ್ರ ಮತ್ತು ರಾಜ್ಯ ಸರ್ಕಾರಕ್ಕೆ ಸುಪ್ರೀಂ ಛೀಮಾರಿ…

- Advertisement -
- Advertisement -

ರಾಷ್ಟ್ರ ರಾಜಧಾನಿ ದೆಹಲಿ ಈಗ ವಿಷಪೂರಿತವಾಗಿದೆ. ವಾಯುಮಾಲಿನ್ಯ ಮಿತಿ ಮೀರಿದ್ದು,  ಉಸಿರಾಟ ತೊಂದರೆ ಮತ್ತು ಅನಾರೋಗ್ಯದಿಂದ ಜನರನ್ನು ಬಳಲುವಂತೆ ಮಾಡಿದೆ. ದೆಹಲಿಯ ತುಂಬ ದಟ್ಟ ಹೊಗೆ ಆವರಿಸಿದೆ. ಈ ಸಂಬಂಧ ಸುಪ್ರೀಂಕೋರ್ಟ್ ದೆಹಲಿ ಸರ್ಕಾರ ಮತ್ತು ಕೇಂದ್ರ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ.

ದೆಹಲಿಯಲ್ಲಿ ಸಾರ್ವಜನಿಕ ಆರೋಗ್ಯ ತುರ್ತುಸ್ಥಿತಿ ಘೋಷಣೆಯಾಗಿದೆ. ವರ್ಷದಿಂದ ವರ್ಷಕ್ಕೆ ಜನ ತಮ್ಮ ಉಸಿರು ಕಳೆದುಕೊಳ್ಳುತ್ತಿದ್ದಾರೆ. ವಿಷಪೂರಿತ ವಾತಾವರಣದಲ್ಲಿ ಬದುಕುವುದು ಹೇಗೆ..? ಯಾವುದೇ ಸುಸಂಸ್ಕೃತ ದೇಶದಲ್ಲಿ ಈ ರೀತಿಯಾಗಲು ಸಾಧ್ಯವಿಲ್ಲ ಎಂದು ಹೇಳಿದೆ.

ಸುಪ್ರೀಂಕೋರ್ಟ್ ನ್ಯಾ. ಅರುಣ್ ಮಿಶ್ರಾ, ದೆಹಲಿಯಲ್ಲಿ ಮಾಲಿನ್ಯ ನಿಯಂತ್ರಣ ಪ್ರಾಧಿಕಾರ ಸೂಕ್ತ ಕ್ರಮ ತೆಗೆದುಕೊಳ್ಳಬೇಕು. ತ್ಯಾಜ್ಯ ಮತ್ತು ಉದ್ಯಮ ಘಟಕಗಳಿಂದ ಬಿಡುವ ಹೊಗೆ ಸಾಕಷ್ಟು ಹಾನಿಯುಂಟು ಮಾಡುತ್ತಿದೆ. ಕೈಗಾರಿಕೆಗಳಿಂದ ಬಿಡಲಾಗುತ್ತಿರುವ ತ್ಯಾಜ್ಯ, ವಿಷಪೂರಿತ ಹೊಗೆ, ಕಸ ಸುಡುವುದರಿಂದ ಮಾಲಿನ್ಯದ ಪ್ರಮಾಣ ಹೆಚ್ಚುತ್ತಿದೆ. ಇಂಥ ವಾತಾವರಣದಲ್ಲಿ ಸಾರ್ವಜನಿಕರು ಬದುಕಲು ಸಾಧ್ಯವೇ..? ಇದು ಜನ ಬದುಕಲು ಇರುವ ಸರಿಯಾದ ಮಾರ್ಗವೂ ಅಲ್ಲ. ಹೀಗಾದರೆ ಮನೆಯಲ್ಲಿ ಇರುವವರು, ಹೊರಗೆ ಓಡಾಡುವವರಿಂದ ಹಿಡಿದು ಯಾರೂ ಸುರಕ್ಷಿತವಾಗಿರಲು ಸಾಧ್ಯವಿಲ್ಲ ಎಂದು ಸುಪ್ರೀಂಕೋರ್ಟ್ ಹೇಳಿದೆ.

ಇದನ್ನೂ ಓದಿ: ಮಾಲಿನ್ಯ ತಡೆಗಾಗಿ ಇಂದಿನಿಂದ ದೆಹಲಿಯಲ್ಲಿ ಬೆಸ-ಸಮ ನಿಯಮ ಜಾರಿ: ಬಿಜೆಪಿ ವಿರೋಧ

ದೆಹಲಿಯ ಸುತ್ತಮುತ್ತಲಿನ ನಗರಗಳಾದ ಪಂಜಾಬ್, ಹರ್ಯಾಣ, ಪಶ್ಚಿಮ ಉತ್ತರ ಪ್ರದೇಶ ಭಾಗದಲ್ಲಿನ ಬೆಳೆ, ಪೈರು ಕಟಾವಿನ ನಂತರ ತ್ಯಾಜ್ಯವನ್ನು ಸುಟ್ಟು, ಭೂಮಿಯನ್ನು ಮತ್ತೆ ಹದಗೊಳಿಸಲಾಗುತ್ತದೆ. ಇಂಥ ಸಮಯದಲ್ಲಿ ಮಾಲಿನ್ಯ ಪ್ರಮಾಣ ಮತ್ತಷ್ಟು ಹೆಚ್ಚುತ್ತದೆ. ಇದಕ್ಕೆ ವೈಜ್ಞಾನಿಕ ಮಾರ್ಗೋಪಾಯ ಕಂಡುಕೊಳ್ಳಲು ಸರ್ಕಾರಗಳು ಶ್ರಮಿಸಬೇಕು. ಪರಿಸರ ತಜ್ಞರು, ಐಐಟಿ ತಜ್ಞರನ್ನೂ ಕರೆಯಿಸಿ, ಸೂಕ್ತ ಸಮಾಲೋಚನೆ ನಡೆಸಿ, ವಾಯುಮಾಲಿನ್ಯ ಸಮಸ್ಯೆ ತಡೆಗೆ ಕೇಂದ್ರ ಸರ್ಕಾರ ಮತ್ತು ದೆಹಲಿ ಸರ್ಕಾರ ಪರಿಹಾರೋಪಾಯ ಕಂಡುಕೊಳ್ಳಬೇಕು. ಪ್ರತಿ ವರ್ಷ ಇದು ನಮ್ಮ ಮೂಗಿನ ನೇರಕ್ಕೆ ನಡೆಯುತ್ತಿದೆ. ಆದರೂ ಸರ್ಕಾರಗಳು ಎಚ್ಚೆತ್ತುಕೊಂಡಿಲ್ಲ. ದೆಹಲಿಗೆ ಬರಬೇಡಿ ಅಥವಾ ದೆಹಲಿ ಬಿಟ್ಟು ದೂರ ಹೋಗಿ ಎಂದು ಜನರಿಗೆ  ಹೇಳುವಂಥಹ ಕೆಟ್ಟ ಸ್ಥಿತಿ ನಿರ್ಮಾಣವಾಗಿದೆ. ಜನರು ತಮ್ಮದೇ ರಾಜ್ಯದಲ್ಲಿ ಮತ್ತು ಪಕ್ಕದ ರಾಜ್ಯಗಳಲ್ಲಿ ಸಾಯುತ್ತಿದ್ದಾರೆ.  ಇದನ್ನು ಸಹಿಸಿಕೊಳ್ಳುವುದು ಅಸಾಧ್ಯ ಎಂದು ಸುಪ್ರೀಂಕೋರ್ಟ್ ಹೇಳಿದೆ.

ದೆಹಲಿಯಲ್ಲಿ ಪ್ರತಿ ವರ್ಷ ವಾಯುಮಾಲಿನ್ಯ ಬೃಹತ್ ಸಮಸ್ಯೆಯಾಗಿ ಬೆಳೆಯುತ್ತಲೇ ಇದೆ. ಇದನ್ನು ತಡೆಗಟ್ಟಲು ನಾವು ಏನನ್ನೂ ಮಾಡುತ್ತಿಲ್ಲ. ಪ್ರತಿ ವರ್ಷ ಆಗುತ್ತಿರುವ ಸಮಸ್ಯೆಯನ್ನು ನಿರ್ಲಕ್ಷಿಸಲಾಗುತ್ತಿದೆ. ಜನ ಉಸಿರಾಟಕ್ಕೆ ಒಳ್ಳೆಯ ಗಾಳಿ ಸಿಗದೇ ಉಸಿರು ಚೆಲ್ಲುತ್ತಿದ್ದಾರೆ. ಇಂಥ ಘಟನೆ ಸುಸಂಸ್ಕೃತ ರಾಷ್ಟ್ರದಲ್ಲಿ ನಡೆಯುವುದಿಲ್ಲ, ನಡೆಯಲೂಬಾರದು ಎಂದು ಹೇಳಿದೆ.

ಮಾಲಿನ್ಯ ನಿಯಂತ್ರಣ ಮಂಡಳಿ ಪ್ರಾಧಿಕಾರ ವರದಿ ನೀಡಿದ್ದು, 2010ರಿಂದ ಇಲ್ಲಿಯವರೆಗೆ ಮಾಲಿನ್ಯ ಪ್ರಮಾಣ ಕಡಿಮೆಯಾಗಿದೆ. ಆದರೆ ನಗರದಲ್ಲಿ ಇನ್ನೂ ಶೇ. 65 ರಷ್ಟು ವಾಯುಮಾಲಿನ್ಯ ಕಡಿಮೆಯಾಗಬೇಕಿದೆ. ತ್ಯಾಜ್ಯ ಮತ್ತು ಕೈಗಾರಿಕೆಗಳಿಂದ ಹೊರಬರುವ ವಿಷಪೂರಿತ ಹೊಗೆ ಮತ್ತಷ್ಟು ಸಮಸ್ಯೆಯನ್ನು ಹೆಚ್ಚಿಸುತ್ತಿದೆ ಎಂದು ವರದಿ ನೀಡಿದೆ.

ಇತ್ತ ಹಿರಿಯ ವಕೀಲ ಅಪರಾಜಿತ್ ಸಿಂಗ್ ಮಾತನಾಡಿ, ಪಂಜಾಬ್ ನಲ್ಲಿ ತ್ಯಾಜ್ಯ ಸುಡುವ ಪ್ರಮಾಣ ಶೇ. 7ರಷ್ಟಿದೆ. ಹರ್ಯಾಣದಲ್ಲಿ ಶೇ. 17ರಷ್ಟಿದೆ ಎಂದು ಹೇಳಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...

ಕೇರಳ: ತಪ್ಪು ಪ್ರಕರಣದಲ್ಲಿ ಪೊಲೀಸರಿಂದ ಚಿತ್ರಹಿಂಸೆ: 29 ವರ್ಷದ ಮುಸ್ಲಿಂ ಯುವಕ ಸಾವು: ಕುಟುಂಬಕ್ಕಿದ್ದ ಒಂದೇ ಆಧಾರ ಕಳೆದುಕೊಂಡ ಪೋಷಕರು

ತಪ್ಪು ಗ್ರಹಿಕೆಯಿಂದ ಪೊಲೀಸ್ ಕಸ್ಟಡಿಗೆ ಪಡೆದ 29 ವರ್ಷದ ಮುಸ್ಲಿಂ ಯುವಕನೋರ್ವ, ಪೊಲೀಸರ ಕಠೋರ ಕಸ್ಟಡಿ ಚಿತ್ರಹಿಂಸೆಯಿಂದಾಗಿ ಪಕ್ಕೆಲುಬು ಮುರಿತಕ್ಕೊಳಗಾಗಿ, ಶ್ವಾಸಕೋಶದ ಸೋಂಕು ತೀವ್ರಗೊಂಡು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಅಮಾನವೀಯ ಹಾಗೂ ಆಘಾತಕಾರಿ...

ಮಾಧ್ಯಮ ತನಿಖಾ ವರದಿಗೆ ಹೆದರಿ ₹ 99 ಲಕ್ಷ ಸಬ್ಸಿಡಿ ವಾಪಸ್ ಮಾಡಿದ ಕೇಂದ್ರ BJP ಸಚಿವ

ತಮ್ಮದೇ ಸಚಿವಾಲಯದ ಯೋಜನೆಯಡಿ ಬರೋಬ್ಬರಿ 99 ಲಕ್ಷ ರೂಪಾಯಿ ಸರ್ಕಾರಿ ಸಬ್ಸಿಡಿ ಪಡೆದು ಸಾರ್ವಜನಿಕರ ಆಕ್ರೋಶಕ್ಕೆ ಗುರಿಯಾಗಿದ್ದ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವ ಭಾಗೀರಥ್ ಚೌಧರಿ, ಕೊನೆಗೂ ಆ...

ಕಾಮನ್‌ವೆಲ್ತ್ ಕ್ರೀಡಾಕೂಟ: ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಶರ್ಮಿಳಾ ಧನ್ಖರ್

ಎರಡು ವರ್ಷವಿದ್ದಾಗ ಪೋಲಿಯೊದಿಂದ ಅಂಗವಿಕಲಳಾಗಿ, ಬಾಲ್ಯದಲ್ಲಿ ದೌರ್ಜನ್ಯಕ್ಕೊಳಗಾದ, ವಿವಾಹದ ಆಘಾತದಿಂದ ಬದುಕುಳಿದ ಮಹಿಳೆ ಶರ್ಮಿಳಾ ಧನ್ಖರ್, ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಗ್ಲ್ಯಾಸ್ಗೋದಲ್ಲಿ...

ಬಿಹಾರ: ವಿದ್ಯಾರ್ಥಿಗಳ ವಿರುದ್ಧ ಎಕೆ-47 ರೈಫಲ್ ಬಳಕೆ: ಗುಂಡು ಹಾರಿಸಲು ಆದೇಶಿಸಿದವರ ವಿರುದ್ಧ ತನಿಖೆಗೆ ಮನೋಜ್ ಝಾ ಆಗ್ರಹ; ಸುಪ್ರೀಂ ಮೆಟ್ಟಿಲೇರಿದ ಪ್ರಕರಣ

ನೀಟ್ (NEET) ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪವನ್ನು ಖಂಡಿಸಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ, ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಎಕೆ-47 ರೈಫಲ್‌ನಿಂದ ಗಾಳಿಯಲ್ಲಿ ಗುಂಡು ಹಾರಿಸುತ್ತಿದ್ದ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್...

ಧರ್ಮೇಂದ್ರ ಪ್ರಧಾನ್ ಖಾತೆ ಬದಲಾವಣೆ ಪ್ರಸ್ತಾವನೆ ತಿರಸ್ಕರಿಸಿದ್ದ ಸಿಜೆಪಿ: ವರದಿ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಜುಲೈ 25 ರಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ತಮ್ಮ ರಾಜೀನಾಮೆ ಸಲ್ಲಿಸಿದ್ದಾರೆ. ಆದರೆ, ಅದಕ್ಕೂ ಮೊದಲು ಕೇಂದ್ರ ಸರ್ಕಾರವು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ)...

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...