Homeಮುಖಪುಟಮಾಲಿನ್ಯದಿಂದ ವಾಸಕ್ಕೆ ಯೋಗ್ಯವಲ್ಲದಷ್ಟು ಹದಗೆಟ್ಟ ದೆಹಲಿ: ಕೇಂದ್ರ ಮತ್ತು ರಾಜ್ಯ ಸರ್ಕಾರಕ್ಕೆ ಸುಪ್ರೀಂ ಛೀಮಾರಿ...

ಮಾಲಿನ್ಯದಿಂದ ವಾಸಕ್ಕೆ ಯೋಗ್ಯವಲ್ಲದಷ್ಟು ಹದಗೆಟ್ಟ ದೆಹಲಿ: ಕೇಂದ್ರ ಮತ್ತು ರಾಜ್ಯ ಸರ್ಕಾರಕ್ಕೆ ಸುಪ್ರೀಂ ಛೀಮಾರಿ…

- Advertisement -
- Advertisement -

ರಾಷ್ಟ್ರ ರಾಜಧಾನಿ ದೆಹಲಿ ಈಗ ವಿಷಪೂರಿತವಾಗಿದೆ. ವಾಯುಮಾಲಿನ್ಯ ಮಿತಿ ಮೀರಿದ್ದು,  ಉಸಿರಾಟ ತೊಂದರೆ ಮತ್ತು ಅನಾರೋಗ್ಯದಿಂದ ಜನರನ್ನು ಬಳಲುವಂತೆ ಮಾಡಿದೆ. ದೆಹಲಿಯ ತುಂಬ ದಟ್ಟ ಹೊಗೆ ಆವರಿಸಿದೆ. ಈ ಸಂಬಂಧ ಸುಪ್ರೀಂಕೋರ್ಟ್ ದೆಹಲಿ ಸರ್ಕಾರ ಮತ್ತು ಕೇಂದ್ರ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ.

ದೆಹಲಿಯಲ್ಲಿ ಸಾರ್ವಜನಿಕ ಆರೋಗ್ಯ ತುರ್ತುಸ್ಥಿತಿ ಘೋಷಣೆಯಾಗಿದೆ. ವರ್ಷದಿಂದ ವರ್ಷಕ್ಕೆ ಜನ ತಮ್ಮ ಉಸಿರು ಕಳೆದುಕೊಳ್ಳುತ್ತಿದ್ದಾರೆ. ವಿಷಪೂರಿತ ವಾತಾವರಣದಲ್ಲಿ ಬದುಕುವುದು ಹೇಗೆ..? ಯಾವುದೇ ಸುಸಂಸ್ಕೃತ ದೇಶದಲ್ಲಿ ಈ ರೀತಿಯಾಗಲು ಸಾಧ್ಯವಿಲ್ಲ ಎಂದು ಹೇಳಿದೆ.

ಸುಪ್ರೀಂಕೋರ್ಟ್ ನ್ಯಾ. ಅರುಣ್ ಮಿಶ್ರಾ, ದೆಹಲಿಯಲ್ಲಿ ಮಾಲಿನ್ಯ ನಿಯಂತ್ರಣ ಪ್ರಾಧಿಕಾರ ಸೂಕ್ತ ಕ್ರಮ ತೆಗೆದುಕೊಳ್ಳಬೇಕು. ತ್ಯಾಜ್ಯ ಮತ್ತು ಉದ್ಯಮ ಘಟಕಗಳಿಂದ ಬಿಡುವ ಹೊಗೆ ಸಾಕಷ್ಟು ಹಾನಿಯುಂಟು ಮಾಡುತ್ತಿದೆ. ಕೈಗಾರಿಕೆಗಳಿಂದ ಬಿಡಲಾಗುತ್ತಿರುವ ತ್ಯಾಜ್ಯ, ವಿಷಪೂರಿತ ಹೊಗೆ, ಕಸ ಸುಡುವುದರಿಂದ ಮಾಲಿನ್ಯದ ಪ್ರಮಾಣ ಹೆಚ್ಚುತ್ತಿದೆ. ಇಂಥ ವಾತಾವರಣದಲ್ಲಿ ಸಾರ್ವಜನಿಕರು ಬದುಕಲು ಸಾಧ್ಯವೇ..? ಇದು ಜನ ಬದುಕಲು ಇರುವ ಸರಿಯಾದ ಮಾರ್ಗವೂ ಅಲ್ಲ. ಹೀಗಾದರೆ ಮನೆಯಲ್ಲಿ ಇರುವವರು, ಹೊರಗೆ ಓಡಾಡುವವರಿಂದ ಹಿಡಿದು ಯಾರೂ ಸುರಕ್ಷಿತವಾಗಿರಲು ಸಾಧ್ಯವಿಲ್ಲ ಎಂದು ಸುಪ್ರೀಂಕೋರ್ಟ್ ಹೇಳಿದೆ.

ಇದನ್ನೂ ಓದಿ: ಮಾಲಿನ್ಯ ತಡೆಗಾಗಿ ಇಂದಿನಿಂದ ದೆಹಲಿಯಲ್ಲಿ ಬೆಸ-ಸಮ ನಿಯಮ ಜಾರಿ: ಬಿಜೆಪಿ ವಿರೋಧ

ದೆಹಲಿಯ ಸುತ್ತಮುತ್ತಲಿನ ನಗರಗಳಾದ ಪಂಜಾಬ್, ಹರ್ಯಾಣ, ಪಶ್ಚಿಮ ಉತ್ತರ ಪ್ರದೇಶ ಭಾಗದಲ್ಲಿನ ಬೆಳೆ, ಪೈರು ಕಟಾವಿನ ನಂತರ ತ್ಯಾಜ್ಯವನ್ನು ಸುಟ್ಟು, ಭೂಮಿಯನ್ನು ಮತ್ತೆ ಹದಗೊಳಿಸಲಾಗುತ್ತದೆ. ಇಂಥ ಸಮಯದಲ್ಲಿ ಮಾಲಿನ್ಯ ಪ್ರಮಾಣ ಮತ್ತಷ್ಟು ಹೆಚ್ಚುತ್ತದೆ. ಇದಕ್ಕೆ ವೈಜ್ಞಾನಿಕ ಮಾರ್ಗೋಪಾಯ ಕಂಡುಕೊಳ್ಳಲು ಸರ್ಕಾರಗಳು ಶ್ರಮಿಸಬೇಕು. ಪರಿಸರ ತಜ್ಞರು, ಐಐಟಿ ತಜ್ಞರನ್ನೂ ಕರೆಯಿಸಿ, ಸೂಕ್ತ ಸಮಾಲೋಚನೆ ನಡೆಸಿ, ವಾಯುಮಾಲಿನ್ಯ ಸಮಸ್ಯೆ ತಡೆಗೆ ಕೇಂದ್ರ ಸರ್ಕಾರ ಮತ್ತು ದೆಹಲಿ ಸರ್ಕಾರ ಪರಿಹಾರೋಪಾಯ ಕಂಡುಕೊಳ್ಳಬೇಕು. ಪ್ರತಿ ವರ್ಷ ಇದು ನಮ್ಮ ಮೂಗಿನ ನೇರಕ್ಕೆ ನಡೆಯುತ್ತಿದೆ. ಆದರೂ ಸರ್ಕಾರಗಳು ಎಚ್ಚೆತ್ತುಕೊಂಡಿಲ್ಲ. ದೆಹಲಿಗೆ ಬರಬೇಡಿ ಅಥವಾ ದೆಹಲಿ ಬಿಟ್ಟು ದೂರ ಹೋಗಿ ಎಂದು ಜನರಿಗೆ  ಹೇಳುವಂಥಹ ಕೆಟ್ಟ ಸ್ಥಿತಿ ನಿರ್ಮಾಣವಾಗಿದೆ. ಜನರು ತಮ್ಮದೇ ರಾಜ್ಯದಲ್ಲಿ ಮತ್ತು ಪಕ್ಕದ ರಾಜ್ಯಗಳಲ್ಲಿ ಸಾಯುತ್ತಿದ್ದಾರೆ.  ಇದನ್ನು ಸಹಿಸಿಕೊಳ್ಳುವುದು ಅಸಾಧ್ಯ ಎಂದು ಸುಪ್ರೀಂಕೋರ್ಟ್ ಹೇಳಿದೆ.

ದೆಹಲಿಯಲ್ಲಿ ಪ್ರತಿ ವರ್ಷ ವಾಯುಮಾಲಿನ್ಯ ಬೃಹತ್ ಸಮಸ್ಯೆಯಾಗಿ ಬೆಳೆಯುತ್ತಲೇ ಇದೆ. ಇದನ್ನು ತಡೆಗಟ್ಟಲು ನಾವು ಏನನ್ನೂ ಮಾಡುತ್ತಿಲ್ಲ. ಪ್ರತಿ ವರ್ಷ ಆಗುತ್ತಿರುವ ಸಮಸ್ಯೆಯನ್ನು ನಿರ್ಲಕ್ಷಿಸಲಾಗುತ್ತಿದೆ. ಜನ ಉಸಿರಾಟಕ್ಕೆ ಒಳ್ಳೆಯ ಗಾಳಿ ಸಿಗದೇ ಉಸಿರು ಚೆಲ್ಲುತ್ತಿದ್ದಾರೆ. ಇಂಥ ಘಟನೆ ಸುಸಂಸ್ಕೃತ ರಾಷ್ಟ್ರದಲ್ಲಿ ನಡೆಯುವುದಿಲ್ಲ, ನಡೆಯಲೂಬಾರದು ಎಂದು ಹೇಳಿದೆ.

ಮಾಲಿನ್ಯ ನಿಯಂತ್ರಣ ಮಂಡಳಿ ಪ್ರಾಧಿಕಾರ ವರದಿ ನೀಡಿದ್ದು, 2010ರಿಂದ ಇಲ್ಲಿಯವರೆಗೆ ಮಾಲಿನ್ಯ ಪ್ರಮಾಣ ಕಡಿಮೆಯಾಗಿದೆ. ಆದರೆ ನಗರದಲ್ಲಿ ಇನ್ನೂ ಶೇ. 65 ರಷ್ಟು ವಾಯುಮಾಲಿನ್ಯ ಕಡಿಮೆಯಾಗಬೇಕಿದೆ. ತ್ಯಾಜ್ಯ ಮತ್ತು ಕೈಗಾರಿಕೆಗಳಿಂದ ಹೊರಬರುವ ವಿಷಪೂರಿತ ಹೊಗೆ ಮತ್ತಷ್ಟು ಸಮಸ್ಯೆಯನ್ನು ಹೆಚ್ಚಿಸುತ್ತಿದೆ ಎಂದು ವರದಿ ನೀಡಿದೆ.

ಇತ್ತ ಹಿರಿಯ ವಕೀಲ ಅಪರಾಜಿತ್ ಸಿಂಗ್ ಮಾತನಾಡಿ, ಪಂಜಾಬ್ ನಲ್ಲಿ ತ್ಯಾಜ್ಯ ಸುಡುವ ಪ್ರಮಾಣ ಶೇ. 7ರಷ್ಟಿದೆ. ಹರ್ಯಾಣದಲ್ಲಿ ಶೇ. 17ರಷ್ಟಿದೆ ಎಂದು ಹೇಳಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...