Homeಮುಖಪುಟಮಾಲಿನ್ಯದಿಂದ ವಾಸಕ್ಕೆ ಯೋಗ್ಯವಲ್ಲದಷ್ಟು ಹದಗೆಟ್ಟ ದೆಹಲಿ: ಕೇಂದ್ರ ಮತ್ತು ರಾಜ್ಯ ಸರ್ಕಾರಕ್ಕೆ ಸುಪ್ರೀಂ ಛೀಮಾರಿ...

ಮಾಲಿನ್ಯದಿಂದ ವಾಸಕ್ಕೆ ಯೋಗ್ಯವಲ್ಲದಷ್ಟು ಹದಗೆಟ್ಟ ದೆಹಲಿ: ಕೇಂದ್ರ ಮತ್ತು ರಾಜ್ಯ ಸರ್ಕಾರಕ್ಕೆ ಸುಪ್ರೀಂ ಛೀಮಾರಿ…

- Advertisement -
- Advertisement -

ರಾಷ್ಟ್ರ ರಾಜಧಾನಿ ದೆಹಲಿ ಈಗ ವಿಷಪೂರಿತವಾಗಿದೆ. ವಾಯುಮಾಲಿನ್ಯ ಮಿತಿ ಮೀರಿದ್ದು,  ಉಸಿರಾಟ ತೊಂದರೆ ಮತ್ತು ಅನಾರೋಗ್ಯದಿಂದ ಜನರನ್ನು ಬಳಲುವಂತೆ ಮಾಡಿದೆ. ದೆಹಲಿಯ ತುಂಬ ದಟ್ಟ ಹೊಗೆ ಆವರಿಸಿದೆ. ಈ ಸಂಬಂಧ ಸುಪ್ರೀಂಕೋರ್ಟ್ ದೆಹಲಿ ಸರ್ಕಾರ ಮತ್ತು ಕೇಂದ್ರ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ.

ದೆಹಲಿಯಲ್ಲಿ ಸಾರ್ವಜನಿಕ ಆರೋಗ್ಯ ತುರ್ತುಸ್ಥಿತಿ ಘೋಷಣೆಯಾಗಿದೆ. ವರ್ಷದಿಂದ ವರ್ಷಕ್ಕೆ ಜನ ತಮ್ಮ ಉಸಿರು ಕಳೆದುಕೊಳ್ಳುತ್ತಿದ್ದಾರೆ. ವಿಷಪೂರಿತ ವಾತಾವರಣದಲ್ಲಿ ಬದುಕುವುದು ಹೇಗೆ..? ಯಾವುದೇ ಸುಸಂಸ್ಕೃತ ದೇಶದಲ್ಲಿ ಈ ರೀತಿಯಾಗಲು ಸಾಧ್ಯವಿಲ್ಲ ಎಂದು ಹೇಳಿದೆ.

ಸುಪ್ರೀಂಕೋರ್ಟ್ ನ್ಯಾ. ಅರುಣ್ ಮಿಶ್ರಾ, ದೆಹಲಿಯಲ್ಲಿ ಮಾಲಿನ್ಯ ನಿಯಂತ್ರಣ ಪ್ರಾಧಿಕಾರ ಸೂಕ್ತ ಕ್ರಮ ತೆಗೆದುಕೊಳ್ಳಬೇಕು. ತ್ಯಾಜ್ಯ ಮತ್ತು ಉದ್ಯಮ ಘಟಕಗಳಿಂದ ಬಿಡುವ ಹೊಗೆ ಸಾಕಷ್ಟು ಹಾನಿಯುಂಟು ಮಾಡುತ್ತಿದೆ. ಕೈಗಾರಿಕೆಗಳಿಂದ ಬಿಡಲಾಗುತ್ತಿರುವ ತ್ಯಾಜ್ಯ, ವಿಷಪೂರಿತ ಹೊಗೆ, ಕಸ ಸುಡುವುದರಿಂದ ಮಾಲಿನ್ಯದ ಪ್ರಮಾಣ ಹೆಚ್ಚುತ್ತಿದೆ. ಇಂಥ ವಾತಾವರಣದಲ್ಲಿ ಸಾರ್ವಜನಿಕರು ಬದುಕಲು ಸಾಧ್ಯವೇ..? ಇದು ಜನ ಬದುಕಲು ಇರುವ ಸರಿಯಾದ ಮಾರ್ಗವೂ ಅಲ್ಲ. ಹೀಗಾದರೆ ಮನೆಯಲ್ಲಿ ಇರುವವರು, ಹೊರಗೆ ಓಡಾಡುವವರಿಂದ ಹಿಡಿದು ಯಾರೂ ಸುರಕ್ಷಿತವಾಗಿರಲು ಸಾಧ್ಯವಿಲ್ಲ ಎಂದು ಸುಪ್ರೀಂಕೋರ್ಟ್ ಹೇಳಿದೆ.

ಇದನ್ನೂ ಓದಿ: ಮಾಲಿನ್ಯ ತಡೆಗಾಗಿ ಇಂದಿನಿಂದ ದೆಹಲಿಯಲ್ಲಿ ಬೆಸ-ಸಮ ನಿಯಮ ಜಾರಿ: ಬಿಜೆಪಿ ವಿರೋಧ

ದೆಹಲಿಯ ಸುತ್ತಮುತ್ತಲಿನ ನಗರಗಳಾದ ಪಂಜಾಬ್, ಹರ್ಯಾಣ, ಪಶ್ಚಿಮ ಉತ್ತರ ಪ್ರದೇಶ ಭಾಗದಲ್ಲಿನ ಬೆಳೆ, ಪೈರು ಕಟಾವಿನ ನಂತರ ತ್ಯಾಜ್ಯವನ್ನು ಸುಟ್ಟು, ಭೂಮಿಯನ್ನು ಮತ್ತೆ ಹದಗೊಳಿಸಲಾಗುತ್ತದೆ. ಇಂಥ ಸಮಯದಲ್ಲಿ ಮಾಲಿನ್ಯ ಪ್ರಮಾಣ ಮತ್ತಷ್ಟು ಹೆಚ್ಚುತ್ತದೆ. ಇದಕ್ಕೆ ವೈಜ್ಞಾನಿಕ ಮಾರ್ಗೋಪಾಯ ಕಂಡುಕೊಳ್ಳಲು ಸರ್ಕಾರಗಳು ಶ್ರಮಿಸಬೇಕು. ಪರಿಸರ ತಜ್ಞರು, ಐಐಟಿ ತಜ್ಞರನ್ನೂ ಕರೆಯಿಸಿ, ಸೂಕ್ತ ಸಮಾಲೋಚನೆ ನಡೆಸಿ, ವಾಯುಮಾಲಿನ್ಯ ಸಮಸ್ಯೆ ತಡೆಗೆ ಕೇಂದ್ರ ಸರ್ಕಾರ ಮತ್ತು ದೆಹಲಿ ಸರ್ಕಾರ ಪರಿಹಾರೋಪಾಯ ಕಂಡುಕೊಳ್ಳಬೇಕು. ಪ್ರತಿ ವರ್ಷ ಇದು ನಮ್ಮ ಮೂಗಿನ ನೇರಕ್ಕೆ ನಡೆಯುತ್ತಿದೆ. ಆದರೂ ಸರ್ಕಾರಗಳು ಎಚ್ಚೆತ್ತುಕೊಂಡಿಲ್ಲ. ದೆಹಲಿಗೆ ಬರಬೇಡಿ ಅಥವಾ ದೆಹಲಿ ಬಿಟ್ಟು ದೂರ ಹೋಗಿ ಎಂದು ಜನರಿಗೆ  ಹೇಳುವಂಥಹ ಕೆಟ್ಟ ಸ್ಥಿತಿ ನಿರ್ಮಾಣವಾಗಿದೆ. ಜನರು ತಮ್ಮದೇ ರಾಜ್ಯದಲ್ಲಿ ಮತ್ತು ಪಕ್ಕದ ರಾಜ್ಯಗಳಲ್ಲಿ ಸಾಯುತ್ತಿದ್ದಾರೆ.  ಇದನ್ನು ಸಹಿಸಿಕೊಳ್ಳುವುದು ಅಸಾಧ್ಯ ಎಂದು ಸುಪ್ರೀಂಕೋರ್ಟ್ ಹೇಳಿದೆ.

ದೆಹಲಿಯಲ್ಲಿ ಪ್ರತಿ ವರ್ಷ ವಾಯುಮಾಲಿನ್ಯ ಬೃಹತ್ ಸಮಸ್ಯೆಯಾಗಿ ಬೆಳೆಯುತ್ತಲೇ ಇದೆ. ಇದನ್ನು ತಡೆಗಟ್ಟಲು ನಾವು ಏನನ್ನೂ ಮಾಡುತ್ತಿಲ್ಲ. ಪ್ರತಿ ವರ್ಷ ಆಗುತ್ತಿರುವ ಸಮಸ್ಯೆಯನ್ನು ನಿರ್ಲಕ್ಷಿಸಲಾಗುತ್ತಿದೆ. ಜನ ಉಸಿರಾಟಕ್ಕೆ ಒಳ್ಳೆಯ ಗಾಳಿ ಸಿಗದೇ ಉಸಿರು ಚೆಲ್ಲುತ್ತಿದ್ದಾರೆ. ಇಂಥ ಘಟನೆ ಸುಸಂಸ್ಕೃತ ರಾಷ್ಟ್ರದಲ್ಲಿ ನಡೆಯುವುದಿಲ್ಲ, ನಡೆಯಲೂಬಾರದು ಎಂದು ಹೇಳಿದೆ.

ಮಾಲಿನ್ಯ ನಿಯಂತ್ರಣ ಮಂಡಳಿ ಪ್ರಾಧಿಕಾರ ವರದಿ ನೀಡಿದ್ದು, 2010ರಿಂದ ಇಲ್ಲಿಯವರೆಗೆ ಮಾಲಿನ್ಯ ಪ್ರಮಾಣ ಕಡಿಮೆಯಾಗಿದೆ. ಆದರೆ ನಗರದಲ್ಲಿ ಇನ್ನೂ ಶೇ. 65 ರಷ್ಟು ವಾಯುಮಾಲಿನ್ಯ ಕಡಿಮೆಯಾಗಬೇಕಿದೆ. ತ್ಯಾಜ್ಯ ಮತ್ತು ಕೈಗಾರಿಕೆಗಳಿಂದ ಹೊರಬರುವ ವಿಷಪೂರಿತ ಹೊಗೆ ಮತ್ತಷ್ಟು ಸಮಸ್ಯೆಯನ್ನು ಹೆಚ್ಚಿಸುತ್ತಿದೆ ಎಂದು ವರದಿ ನೀಡಿದೆ.

ಇತ್ತ ಹಿರಿಯ ವಕೀಲ ಅಪರಾಜಿತ್ ಸಿಂಗ್ ಮಾತನಾಡಿ, ಪಂಜಾಬ್ ನಲ್ಲಿ ತ್ಯಾಜ್ಯ ಸುಡುವ ಪ್ರಮಾಣ ಶೇ. 7ರಷ್ಟಿದೆ. ಹರ್ಯಾಣದಲ್ಲಿ ಶೇ. 17ರಷ್ಟಿದೆ ಎಂದು ಹೇಳಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ಹೊಸ ಕಾಯ್ದೆಯಿಂದ ಸಂಕಷ್ಟ : ಇಬ್ಬರು ಟ್ರಾನ್ಸ್‌ಜೆಂಡರ್ ವ್ಯಕ್ತಿಗಳಿಗೆ ಹಾರ್ಮೋನ್ ಚಿಕಿತ್ಸೆ ಮುಂದುವರಿಸಲು ಕೇರಳ ಹೈಕೋರ್ಟ್ ಅನುಮತಿ

ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ವಿಧೇಯ, 2026 ಅಂಗೀಕಾರಗೊಂಡ ನಂತರ ಆಸ್ಪತ್ರೆಗಳು ತಮ್ಮ ಚಿಕಿತ್ಸೆಯನ್ನು ಸ್ಥಗಿತಗೊಳಿಸಿವೆ ಎಂದು ಆರೋಪಿಸಿದ್ದ ಇಬ್ಬರು ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ ಹಾರ್ಮೋನ್ ಬದಲಿ ಚಿಕಿತ್ಸೆಯನ್ನು ಮುಂದುವರಿಸಲು ಕೇರಳ ಹೈಕೋರ್ಟ್...

ಮಾದಕವಸ್ತು ತನಿಖೆಗೆ ಸಹಾಯಕವಾಗಿ AI ಆಧಾರಿತ ಅಪ್ಲಿಕೇಶನ್ ಆರಂಭಿಸಿದ ಗುಜರಾತ್ ಪೊಲೀಸರು

ಅಹಮದಾಬಾದ್: ಮಾದಕವಸ್ತು ಪ್ರಕರಣಗಳ ತನಿಖೆಯನ್ನು ಸುಲಭವಾಗಿಸಲು ಮತ್ತು ವಿಚಾರಣೆಯ ಸಮಯದಲ್ಲಿ ಅವುಗಳನ್ನು ಬಲಪಡಿಸಲು, ಇದರಿಂದಾಗಿ ಶಿಕ್ಷೆಯ ಪ್ರಮಾಣ ಸುಧಾರಿಸಲು ಗುಜರಾತ್ ಪೊಲೀಸರು ಶುಕ್ರವಾರ ಕೃತಕ ಬುದ್ಧಿಮತ್ತೆ (AI) ಆಧಾರಿತ ಅಪ್ಲಿಕೇಶನ್ "NARIT AI"...

ಇಸ್ಲಾಮಾಬಾದ್‌ ಶಾಂತಿ ಮಾತುಕತೆ | ಅಮೆರಿಕ–ಇಸ್ರೇಲ್ ಹತ್ಯೆಗೈದ ಮಕ್ಕಳ ರಕ್ತಸಿಕ್ತ ಬ್ಯಾಗ್‌, ಶೂ ಹೊತ್ತು ತಂದ ಇರಾನ್

ಶಾಂತಿ ಮಾತುಕತೆಯಲ್ಲಿ ಭಾಗವಹಿಸಲು ಪಾಕಿಸ್ತಾನದ ಇಸ್ಲಾಮಾಬಾದ್‌ಗೆ ಆಗಮಿಸುವಾಗ, ಅಮೆರಿಕ-ಇಸ್ರೇಲ್‌ನ ಬಾಂಬ್‌ ದಾಳಿ ನಡೆಸಿ ಹತ್ಯೆಗೈದ ಮಕ್ಕಳ ಫೋಟೋ, ರಕ್ತಸಿಕ್ತ ಬ್ಯಾಗ್ ಮತ್ತು ಶೂಗಳನ್ನು ವಿಮಾನದಲ್ಲಿ ಹೊತ್ತು ತರುವ ಮೂಲಕ ಇರಾನ್‌ ಜಗತ್ತಿನ ಗಮನಸೆಳೆದಿದೆ. ಸಾಮಾಜಿಕ ಜಾಲತಾಣ...

ಮಣಿಪುರ: ಶಸ್ತ್ರಾಸ್ತ್ರಗಳು ಮತ್ತು ಗಸಗಸೆ ಬೀಜಗಳ ಚೀಲಗಳೊಂದಿಗೆ ಇಬ್ಬರನ್ನು ಬಂಧಿಸಿದ ಭದ್ರತಾ ಪಡೆ

ಇಂಫಾಲ: ಮಣಿಪುರದ ಚುರಚಂದಪುರ ಜಿಲ್ಲೆಯಲ್ಲಿ ಇಬ್ಬರು ವ್ಯಕ್ತಿಗಳಿಂದ ಶಸ್ತ್ರಾಸ್ತ್ರಗಳು ಮತ್ತು ಗಸಗಸೆ ಬೀಜಗಳ ಚೀಲಗಳನ್ನು(ಪಾಪಿ ಸೀಡ್ಸ್) ವಶಪಡಿಸಿಕೊಂಡ ನಂತರ ಭದ್ರತಾ ಪಡೆಗಳು ಅವರನ್ನು ಬಂಧಿಸಿವೆ ಎಂದು ಪೊಲೀಸರು ತಿಳಿಸಿದ್ದಾರೆ. ಶುಕ್ರವಾರ ಚುರಾಚಂದ್‌ಪುರ ಪೊಲೀಸ್ ಠಾಣೆ...

ಚಿತ್ರದುರ್ಗ: ಪ್ರೌಢಶಾಲಾ ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರವೆಸಗಿ ಗರ್ಭಪಾತ ಮಾಡಿಸಿದ ಶಿಕ್ಷಕನ ವಿರುದ್ಧ ಪೋಕ್ಸೋ ಪ್ರಕರಣ ದಾಖಲು

ನಾಯಕನಹಟ್ಟಿ (ಚಿತ್ರದುರ್ಗ ಜಿಲ್ಲೆ): ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆಯಲ್ಲಿ ಪ್ರೌಢಶಾಲಾ ವಿದ್ಯಾರ್ಥಿನಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಮತ್ತು ಆಕೆಯ ಗರ್ಭಪಾತ ಮಾಡಿದ ಆರೋಪದ ಮೇಲೆ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ನೀಡಿದ ದೂರು ಆಧರಿಸಿ...

ಎಸ್‌ಐಆರ್‌ನಲ್ಲಿ ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ : ಚುನಾವಣೆಗೆ ಸ್ಪರ್ಧಿಸಲು ಅವಕಾಶ ಕೋರಿದ್ದ ಮಹಿಳೆಯ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್

ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವೇಳೆ ಮತದಾರರ ಪಟ್ಟಿಯಿಂದ ಹೆಸರು ತೆಗೆದು ಹಾಕಿರುವ ಮಹಿಳೆಯೊಬ್ಬರು ಚುನಾವಣೆಗೆ ಸ್ಪರ್ಧಿಸಲು ಅವಕಾಶ ನೀಡುವಂತೆ ಕೋರಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಶುಕ್ರವಾರ (ಏ.10) ತಿರಸ್ಕರಿಸಿದೆ ಎಂದು ಕಾನೂನು...

ಇಸ್ಲಾಮಾಬಾದ್‌ನಲ್ಲಿ ಅಮೆರಿಕ–ಇರಾನ್ ಶಾಂತಿ ಮಾತುಕತೆ; ಪಾಕಿಸ್ತಾನ ಮಧ್ಯಸ್ಥಿಕೆ

ಹಲವು ರೀತಿಯ ಪ್ರತಿಷ್ಠೆ ಪ್ರದರ್ಶನ, ಭಿನ್ನಾಭಿಪ್ರಾಯಗಳ ನಡುವೆ ಅಮೆರಿಕ-ಇರಾನ್ ಶಾಂತಿ ಮಾತುಕತೆ ಶನಿವಾರ (ಏ.11) ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿ ಪ್ರಾರಂಭಗೊಳ್ಳಲಿದೆ. ಪಾಕಿಸ್ತಾನದ ಪಾಲಿಗೆ ಇದು ಅತ್ಯಂತ ಪ್ರತಿಷ್ಠೆಯ ವಿಷಯವಾಗಿ ಮಾರ್ಪಟ್ಟಿದೆ. ಅಮೆರಿಕದ ಪರವಾಗಿ ಉಪಾಧ್ಯಕ್ಷ ಜೆ.ಡಿ....

ಕಾಂಗ್ರೆಸ್ ನಿಂದ ಏಪ್ರಿಲ್ 12ರಂದು ‘ರನ್ ಫಾರ್ ಅಂಬೇಡ್ಕರ್, ರನ್ ಫಾರ್ ಕಾನ್ಸ್ಟಿಟ್ಯೂಷನ್’ ಮ್ಯಾರಥಾನ್ ಆಯೋಜನೆ

ನವದೆಹಲಿ: ಬಿ.ಆರ್. ಅಂಬೇಡ್ಕರ್ ಅವರ ಜನ್ಮ ದಿನಾಚರಣೆಯ ಅಂಗವಾಗಿ ಕಾಂಗ್ರೆಸ್ ಭಾನುವಾರ 'ಅಂಬೇಡ್ಕರ್‌ಗಾಗಿ ಓಟ, ಸಂವಿಧಾನಕ್ಕಾಗಿ ಓಟ' ಮ್ಯಾರಥಾನ್ ಆಯೋಜಿಸಿದೆ. ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಇಲ್ಲಿನ ಮಂಡಿ ಹೌಸ್‌ನಿಂದ ಮ್ಯಾರಥಾನ್‌ಗೆ...

ಮುಖ್ಯವಾಹಿನಿಗೆ ಬಂದ 42 ಕೇಡರ್‌ಗಳು; ರಾಜ್ಯದಲ್ಲಿ’ಮಾವೋವಾದಿ ಕಾರ್ಯಾಚರಣೆ’ ಅಂತ್ಯವಾಗಿದೆ ಎಂದ ತೆಲಂಗಾಣ ಪೊಲೀಸರು

ರಾಜ್ಯದಲ್ಲಿ ಸಿಪಿಐ (ಮಾವೋವಾದಿ) ಸಂಘಟನೆಯ ಕಾರ್ಯಚರಣೆ ಅಂತಿಮವಾಗಿದೆ ಎಂದು ತೆಲಂಗಾಣ ಪೊಲೀಸರು ಘೋಷಣೆ ಮಾಡಿದ್ದಾರೆ. ಬೆಟಾಲಿಯನ್ ಕಮಾಂಡರ್ ಮತ್ತು ಎರಡು ಪ್ರಮುಖ ಗುಂಪುಗಳ ಹಿರಿಯ ನಾಯಕತ್ವ ಸೇರಿದಂತೆ ನಿಷೇಧಿತ ಸಂಘಟನೆಯ 42 ಕೇಡರ್‌ಗಳು...

‘ಹಿಂದಿ ನಿರ್ಮೂಲನೆ ಮಾಡುತ್ತೇವೆ’ ಎಂದು ಸಚಿವರು ಹೇಳಿಲ್ಲ; ಹಿಂದಿ ಪರ ಅರ್ಜಿ ವಜಾ; ₹1 ಲಕ್ಷ ದಂಡ ವಿಧಿಸಿದ ಹೈಕೋರ್ಟ್‌

ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳಲ್ಲಿ ಹಿಂದಿ ಸೇರಿದಂತೆ ತೃತೀಯ ಭಾಷಾ ವಿಷಯಗಳ ಮೌಲ್ಯಮಾಪನ ಸಂಬಂಧ ರಾಜ್ಯ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ನೀಡಿದ ಹೇಳಿಕೆಯ ವಿರುದ್ಧ ಸಲ್ಲಿಸಲಾದ ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆಯನ್ನು (ಪಿಐಎಲ್) ಕರ್ನಾಟಕ...