Homeಮುಖಪುಟಮಾಲಿನ್ಯದಿಂದ ವಾಸಕ್ಕೆ ಯೋಗ್ಯವಲ್ಲದಷ್ಟು ಹದಗೆಟ್ಟ ದೆಹಲಿ: ಕೇಂದ್ರ ಮತ್ತು ರಾಜ್ಯ ಸರ್ಕಾರಕ್ಕೆ ಸುಪ್ರೀಂ ಛೀಮಾರಿ...

ಮಾಲಿನ್ಯದಿಂದ ವಾಸಕ್ಕೆ ಯೋಗ್ಯವಲ್ಲದಷ್ಟು ಹದಗೆಟ್ಟ ದೆಹಲಿ: ಕೇಂದ್ರ ಮತ್ತು ರಾಜ್ಯ ಸರ್ಕಾರಕ್ಕೆ ಸುಪ್ರೀಂ ಛೀಮಾರಿ…

- Advertisement -
- Advertisement -

ರಾಷ್ಟ್ರ ರಾಜಧಾನಿ ದೆಹಲಿ ಈಗ ವಿಷಪೂರಿತವಾಗಿದೆ. ವಾಯುಮಾಲಿನ್ಯ ಮಿತಿ ಮೀರಿದ್ದು,  ಉಸಿರಾಟ ತೊಂದರೆ ಮತ್ತು ಅನಾರೋಗ್ಯದಿಂದ ಜನರನ್ನು ಬಳಲುವಂತೆ ಮಾಡಿದೆ. ದೆಹಲಿಯ ತುಂಬ ದಟ್ಟ ಹೊಗೆ ಆವರಿಸಿದೆ. ಈ ಸಂಬಂಧ ಸುಪ್ರೀಂಕೋರ್ಟ್ ದೆಹಲಿ ಸರ್ಕಾರ ಮತ್ತು ಕೇಂದ್ರ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ.

ದೆಹಲಿಯಲ್ಲಿ ಸಾರ್ವಜನಿಕ ಆರೋಗ್ಯ ತುರ್ತುಸ್ಥಿತಿ ಘೋಷಣೆಯಾಗಿದೆ. ವರ್ಷದಿಂದ ವರ್ಷಕ್ಕೆ ಜನ ತಮ್ಮ ಉಸಿರು ಕಳೆದುಕೊಳ್ಳುತ್ತಿದ್ದಾರೆ. ವಿಷಪೂರಿತ ವಾತಾವರಣದಲ್ಲಿ ಬದುಕುವುದು ಹೇಗೆ..? ಯಾವುದೇ ಸುಸಂಸ್ಕೃತ ದೇಶದಲ್ಲಿ ಈ ರೀತಿಯಾಗಲು ಸಾಧ್ಯವಿಲ್ಲ ಎಂದು ಹೇಳಿದೆ.

ಸುಪ್ರೀಂಕೋರ್ಟ್ ನ್ಯಾ. ಅರುಣ್ ಮಿಶ್ರಾ, ದೆಹಲಿಯಲ್ಲಿ ಮಾಲಿನ್ಯ ನಿಯಂತ್ರಣ ಪ್ರಾಧಿಕಾರ ಸೂಕ್ತ ಕ್ರಮ ತೆಗೆದುಕೊಳ್ಳಬೇಕು. ತ್ಯಾಜ್ಯ ಮತ್ತು ಉದ್ಯಮ ಘಟಕಗಳಿಂದ ಬಿಡುವ ಹೊಗೆ ಸಾಕಷ್ಟು ಹಾನಿಯುಂಟು ಮಾಡುತ್ತಿದೆ. ಕೈಗಾರಿಕೆಗಳಿಂದ ಬಿಡಲಾಗುತ್ತಿರುವ ತ್ಯಾಜ್ಯ, ವಿಷಪೂರಿತ ಹೊಗೆ, ಕಸ ಸುಡುವುದರಿಂದ ಮಾಲಿನ್ಯದ ಪ್ರಮಾಣ ಹೆಚ್ಚುತ್ತಿದೆ. ಇಂಥ ವಾತಾವರಣದಲ್ಲಿ ಸಾರ್ವಜನಿಕರು ಬದುಕಲು ಸಾಧ್ಯವೇ..? ಇದು ಜನ ಬದುಕಲು ಇರುವ ಸರಿಯಾದ ಮಾರ್ಗವೂ ಅಲ್ಲ. ಹೀಗಾದರೆ ಮನೆಯಲ್ಲಿ ಇರುವವರು, ಹೊರಗೆ ಓಡಾಡುವವರಿಂದ ಹಿಡಿದು ಯಾರೂ ಸುರಕ್ಷಿತವಾಗಿರಲು ಸಾಧ್ಯವಿಲ್ಲ ಎಂದು ಸುಪ್ರೀಂಕೋರ್ಟ್ ಹೇಳಿದೆ.

ಇದನ್ನೂ ಓದಿ: ಮಾಲಿನ್ಯ ತಡೆಗಾಗಿ ಇಂದಿನಿಂದ ದೆಹಲಿಯಲ್ಲಿ ಬೆಸ-ಸಮ ನಿಯಮ ಜಾರಿ: ಬಿಜೆಪಿ ವಿರೋಧ

ದೆಹಲಿಯ ಸುತ್ತಮುತ್ತಲಿನ ನಗರಗಳಾದ ಪಂಜಾಬ್, ಹರ್ಯಾಣ, ಪಶ್ಚಿಮ ಉತ್ತರ ಪ್ರದೇಶ ಭಾಗದಲ್ಲಿನ ಬೆಳೆ, ಪೈರು ಕಟಾವಿನ ನಂತರ ತ್ಯಾಜ್ಯವನ್ನು ಸುಟ್ಟು, ಭೂಮಿಯನ್ನು ಮತ್ತೆ ಹದಗೊಳಿಸಲಾಗುತ್ತದೆ. ಇಂಥ ಸಮಯದಲ್ಲಿ ಮಾಲಿನ್ಯ ಪ್ರಮಾಣ ಮತ್ತಷ್ಟು ಹೆಚ್ಚುತ್ತದೆ. ಇದಕ್ಕೆ ವೈಜ್ಞಾನಿಕ ಮಾರ್ಗೋಪಾಯ ಕಂಡುಕೊಳ್ಳಲು ಸರ್ಕಾರಗಳು ಶ್ರಮಿಸಬೇಕು. ಪರಿಸರ ತಜ್ಞರು, ಐಐಟಿ ತಜ್ಞರನ್ನೂ ಕರೆಯಿಸಿ, ಸೂಕ್ತ ಸಮಾಲೋಚನೆ ನಡೆಸಿ, ವಾಯುಮಾಲಿನ್ಯ ಸಮಸ್ಯೆ ತಡೆಗೆ ಕೇಂದ್ರ ಸರ್ಕಾರ ಮತ್ತು ದೆಹಲಿ ಸರ್ಕಾರ ಪರಿಹಾರೋಪಾಯ ಕಂಡುಕೊಳ್ಳಬೇಕು. ಪ್ರತಿ ವರ್ಷ ಇದು ನಮ್ಮ ಮೂಗಿನ ನೇರಕ್ಕೆ ನಡೆಯುತ್ತಿದೆ. ಆದರೂ ಸರ್ಕಾರಗಳು ಎಚ್ಚೆತ್ತುಕೊಂಡಿಲ್ಲ. ದೆಹಲಿಗೆ ಬರಬೇಡಿ ಅಥವಾ ದೆಹಲಿ ಬಿಟ್ಟು ದೂರ ಹೋಗಿ ಎಂದು ಜನರಿಗೆ  ಹೇಳುವಂಥಹ ಕೆಟ್ಟ ಸ್ಥಿತಿ ನಿರ್ಮಾಣವಾಗಿದೆ. ಜನರು ತಮ್ಮದೇ ರಾಜ್ಯದಲ್ಲಿ ಮತ್ತು ಪಕ್ಕದ ರಾಜ್ಯಗಳಲ್ಲಿ ಸಾಯುತ್ತಿದ್ದಾರೆ.  ಇದನ್ನು ಸಹಿಸಿಕೊಳ್ಳುವುದು ಅಸಾಧ್ಯ ಎಂದು ಸುಪ್ರೀಂಕೋರ್ಟ್ ಹೇಳಿದೆ.

ದೆಹಲಿಯಲ್ಲಿ ಪ್ರತಿ ವರ್ಷ ವಾಯುಮಾಲಿನ್ಯ ಬೃಹತ್ ಸಮಸ್ಯೆಯಾಗಿ ಬೆಳೆಯುತ್ತಲೇ ಇದೆ. ಇದನ್ನು ತಡೆಗಟ್ಟಲು ನಾವು ಏನನ್ನೂ ಮಾಡುತ್ತಿಲ್ಲ. ಪ್ರತಿ ವರ್ಷ ಆಗುತ್ತಿರುವ ಸಮಸ್ಯೆಯನ್ನು ನಿರ್ಲಕ್ಷಿಸಲಾಗುತ್ತಿದೆ. ಜನ ಉಸಿರಾಟಕ್ಕೆ ಒಳ್ಳೆಯ ಗಾಳಿ ಸಿಗದೇ ಉಸಿರು ಚೆಲ್ಲುತ್ತಿದ್ದಾರೆ. ಇಂಥ ಘಟನೆ ಸುಸಂಸ್ಕೃತ ರಾಷ್ಟ್ರದಲ್ಲಿ ನಡೆಯುವುದಿಲ್ಲ, ನಡೆಯಲೂಬಾರದು ಎಂದು ಹೇಳಿದೆ.

ಮಾಲಿನ್ಯ ನಿಯಂತ್ರಣ ಮಂಡಳಿ ಪ್ರಾಧಿಕಾರ ವರದಿ ನೀಡಿದ್ದು, 2010ರಿಂದ ಇಲ್ಲಿಯವರೆಗೆ ಮಾಲಿನ್ಯ ಪ್ರಮಾಣ ಕಡಿಮೆಯಾಗಿದೆ. ಆದರೆ ನಗರದಲ್ಲಿ ಇನ್ನೂ ಶೇ. 65 ರಷ್ಟು ವಾಯುಮಾಲಿನ್ಯ ಕಡಿಮೆಯಾಗಬೇಕಿದೆ. ತ್ಯಾಜ್ಯ ಮತ್ತು ಕೈಗಾರಿಕೆಗಳಿಂದ ಹೊರಬರುವ ವಿಷಪೂರಿತ ಹೊಗೆ ಮತ್ತಷ್ಟು ಸಮಸ್ಯೆಯನ್ನು ಹೆಚ್ಚಿಸುತ್ತಿದೆ ಎಂದು ವರದಿ ನೀಡಿದೆ.

ಇತ್ತ ಹಿರಿಯ ವಕೀಲ ಅಪರಾಜಿತ್ ಸಿಂಗ್ ಮಾತನಾಡಿ, ಪಂಜಾಬ್ ನಲ್ಲಿ ತ್ಯಾಜ್ಯ ಸುಡುವ ಪ್ರಮಾಣ ಶೇ. 7ರಷ್ಟಿದೆ. ಹರ್ಯಾಣದಲ್ಲಿ ಶೇ. 17ರಷ್ಟಿದೆ ಎಂದು ಹೇಳಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಜಿಡಿಪಿ ಬಿಟ್ಟು ನಿಮ್ಮ ಮುಖದ ಸೌಂದರ್ಯದ ರಹಸ್ಯ ತಿಳಿಸಿ..’; ಪ್ರಧಾನಿ ಮೋದಿ ಕಾಲೆಳೆದ ಟಿಎಂಸಿ ಸಂಸದೆ ಮಹುವಾ ಮೊಯಿತ್ರಾ

ಇತ್ತೀಚೆಗೆ ಬಿಡುಗಡೆಯಾದ ಭಾರತದ ತ್ರೈಮಾಸಿಕ ಜಿಡಿಪಿ ಅಂಕಿಅಂಶಗಳ ಕುರಿತು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ಅವರು ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ವ್ಯಂಗ್ಯವಾಡಿದ್ದಾರೆ. 2026-27ರ ಹಣಕಾಸು ವರ್ಷದ ಮೊದಲ...

ರಾಜಕೀಯ ಪಕ್ಷಗಳ ಬಿಎಲ್‌ಎಗಳು ಎಸ್‌ಐಆರ್‌ನ ಎಲ್ಲ ಮಾಹಿತಿಗಳನ್ನೂ ಪರಿಶೀಲಿಸಲು ಜವಾಬ್ದಾರರಲ್ಲ : ದೆಹಲಿ ಹೈಕೋರ್ಟ್

ರಾಜಕೀಯ ಪಕ್ಷಗಳ ಬೂತ್ ಮಟ್ಟದ ಏಜೆಂಟ್‌ಗಳು (ಬಿಎಲ್‌ಎ) ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಸಂದರ್ಭದಲ್ಲಿ ಎಣಿಕೆ ನಮೂನೆಗಳಲ್ಲಿರುವ (ಎನ್ಯುಮರೇಷನ್ ಫಾರಂ) ಎಲ್ಲ ವಿವರಗಳನ್ನು ಪರಿಶೀಲಿಸಲು ಜವಾಬ್ದಾರರಲ್ಲ ಎಂದು ದೆಹಲಿ ಹೈಕೋರ್ಟ್...

‘ಕೈಯಿಂದ ಮಲ ಹೊರುವ ಪದ್ಧತಿ ಇಲ್ಲ’ ಎಂದ ಸರ್ಕಾರ: ‘ಹಾಗಾದರೆ ನಾವು ಇನ್ನೂ ಏಕೆ ಈ ಕೆಲಸ ಮಾಡುತ್ತಿದ್ದೇವೆ?’ ಎಂದು ಪ್ರಶ್ನಿಸಿದ ಮಹಿಳಾ ಕಾರ್ಮಿಕರು

ನವದೆಹಲಿ: ದೇಶದಲ್ಲಿ ಕೈಯಿಂದ ಮಲ ಹೊರುವ ಪದ್ಧತಿ ಸಂಪೂರ್ಣವಾಗಿ ನಿರ್ಮೂಲನೆಯಾಗಿದೆ ಎಂದು ಕೇಂದ್ರ ಸರ್ಕಾರ ಸಂಸತ್ತಿನಲ್ಲಿ ಹೇಳಿರುವ ಬೆನ್ನಲ್ಲೇ, ಉತ್ತರ ಪ್ರದೇಶ, ಮಧ್ಯಪ್ರದೇಶ, ಬಿಹಾರ ಮತ್ತು ಜಮ್ಮು ಮತ್ತು ಕಾಶ್ಮೀರದ ಮಹಿಳಾ ನೈರ್ಮಲ್ಯ...

ಕಾನೂನು ವಿದ್ಯಾರ್ಥಿಗಳ ವಿರುದ್ಧ ಶಿಸ್ತು ಕ್ರಮ ಜರುಗಿಸುವ ಅಧಿಕಾರ ಬಾರ್ ಕೌನ್ಸಿಲ್‌ಗಳಿಗೆ ಇಲ್ಲ; ನಲ್ಸಾರ್ ವಿವಿ ವಿರುದ್ಧದ ಬಿಸಿಐ ಅಧ್ಯಕ್ಷರ ಆದೇಶ ಕಾನೂನುಬಾಹಿರ : ಸುಪ್ರೀಂ ಕೋರ್ಟ್

ಕಾನೂನು ವಿದ್ಯಾರ್ಥಿಗಳ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲು ಬಾರ್ ಕೌನ್ಸಿಲ್ ಆಫ್ ಇಂಡಿಯಾ (ಬಿಸಿಐ) ಮತ್ತು ರಾಜ್ಯ ಬಾರ್ ಕೌನ್ಸಿಲ್‌ಗಳಿಗೆ ಯಾವುದೇ ಶಾಸನಬದ್ಧ ಅಧಿಕಾರವಿಲ್ಲ ಎಂದು ಸುಪ್ರೀಂ ಕೋರ್ಟ್ ಗುರುವಾರ (ಸೆ.3) ಮಹತ್ವದ...

ದೇಶದ ಆರ್ಥಿಕ ಸ್ಥಿರತೆಯ ಬಗ್ಗೆ ಕೇಂದ್ರ ಸರ್ಕಾರದಿಂದ ಸುಳ್ಳು ನಿರೂಪಣೆ ಸೃಷ್ಟಿ: ಶರದ್ ಪವಾರ್

ದೇಶದಲ್ಲಿ ಹೆಚ್ಚುತ್ತಿರುವ ಹಣದುಬ್ಬರ ಮತ್ತು ಸಂಕಷ್ಟದಲ್ಲಿರುವ ನೈಜ ಆರ್ಥಿಕತೆಯನ್ನು ಮರೆಮಾಚಲು ಕೇಂದ್ರ ಸರ್ಕಾರವು 'ಸಂಖ್ಯಾಶಾಸ್ತ್ರೀಯ ವಿಧಾನಗಳನ್ನು ತಿರುಚುತ್ತಿದೆ' ಎಂದು ನ್ಯಾಷನಲ್ ಕಾಂಗ್ರೆಸ್ ಪಾರ್ಟಿ (ಎಸ್‌ಪಿ) ಮುಖ್ಯಸ್ಥ ಶರದ್ ಪವಾರ್ ಆರೋಪಿಸಿದ್ದಾರೆ. "ಏಪ್ರಿಲ್-ಜೂನ್ ತ್ರೈಮಾಸಿಕದಲ್ಲಿ ಶೇಕಡಾ...

ಮಹದೇವಪುರ, ಗಾಂಧಿನಗರ ವೋಟರ್ ಲಿಸ್ಟ್ ಹಗರಣ: ಇಸಿಐ ತನಿಖೆಗೆ ರಾಜ್ಯ ಚುನಾವಣಾ ಆಯೋಗ ಶಿಫಾರಸು

ಮಹದೇವಪುರ ಮತ್ತು ಗಾಂಧಿನಗರ ವಿಧಾನಸಭಾ ಕ್ಷೇತ್ರಗಳ ಮತದಾರರ ಪಟ್ಟಿಯಲ್ಲಿ ಅಕ್ರಮ ನಡೆದಿದೆ ಎಂದು ಕಾಂಗ್ರೆಸ್ ಸಂಸದ ಮನ್ಸೂರ್ ಅಲಿ ಖಾನ್ ನೀಡಿದ್ದ ದೂರನ್ನು ಕರ್ನಾಟಕ ರಾಜ್ಯ ಚುನಾವಣಾ ಆಯೋಗವು ಕೇಂದ್ರ ಚುನಾವಣಾ ಆಯೋಗಕ್ಕೆ...

ಬಹುತೇಕ ಧರ್ಮಗಳು ಲಿಂಗ ಸಮಾನತೆಯನ್ನು ಗುರುತಿಸಲು ಹಿಂಜರಿಯುತ್ತವೆ: ಎಂ. ಎ. ಬೇಬಿ

ಸಾರ್ವಜನಿಕ ಸ್ಥಳಗಳಲ್ಲಿ ಮಹಿಳೆಯರ ಉಪಸ್ಥಿತಿಯ ಮೇಲೆ ನಿರ್ಬಂಧಗಳನ್ನು ಹೇರಬೇಕೆಂದು ಪ್ರತಿಪಾದಿಸಿದ್ದ ಇಸ್ಲಾಮಿಕ್ ಪಂಡಿತ ಕಾಂತಪುರಂ ಎ.ಪಿ. ಅಬೂಬಕರ್ ಮುಸ್ಲಿಯಾರ್ ಅವರ ಹೇಳಿಕೆಯನ್ನು ಸಿಪಿಐ(ಎಂ) ಪ್ರಧಾನ ಕಾರ್ಯದರ್ಶಿ ಎಂ. ಎ. ಬೇಬಿ ಅವರು ತೀವ್ರವಾಗಿ...

ಭಾಗವತ್ ಕಾರ್ಯಕ್ರಮಕ್ಕೆ ಅಮೆರಿಕದ ಧಾರ್ಮಿಕ ನಾಯಕರ ತೀವ್ರ ಆಕ್ಷೇಪ: ‘ನಮ್ಮನ್ನು ತಪ್ಪುದಾರಿಗೆಳೆದು ಆರ್‌ಎಸ್‌ಎಸ್ ಕಾರ್ಯಕ್ರಮಕ್ಕೆ ಕರೆಸಲಾಗಿತ್ತು’ ಎಂದು ಆರೋಪ

ನ್ಯೂಯಾರ್ಕ್: ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಅವರೊಂದಿಗೆ ನ್ಯೂಯಾರ್ಕ್‌ನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಕಾಣಿಸಿಕೊಂಡಿದ್ದ ಇಬ್ಬರು ಅಮೆರಿಕದ ಧಾರ್ಮಿಕ ಮುಖಂಡರು, ಕಾರ್ಯಕ್ರಮದ ನೈಜ ಉದ್ದೇಶ ಮತ್ತು ಭಾಗವತ್ ಅವರ ಭಾಗವಹಿಸುವಿಕೆ...

ನೈತಿಕ ಹೊಣೆ ಹೊತ್ತು ಪ್ರಿಯಾಂಕ್ ಖರ್ಗೆ ರಾಜೀನಾಮೆ ನೀಡಲಿ: ಎಚ್.ಡಿ. ಕುಮಾರಸ್ವಾಮಿ

ಕೆಪಿಎಸ್‌ಸಿ (KPSC) ಸಹಾಯಕ ಕಾರ್ಯಪಾಲಕ ಅಭಿಯಂತರ (AEE) ನೇಮಕಾತಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರ ರಾಜೀನಾಮೆಗೆ ತೀವ್ರ ಒತ್ತಡ ಹೇರಿರುವ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ, ಈ...

KPSC: ರಾಜ್ಯದ ಪ್ರಭಾವಿಗಳ ಸಲಹೆಯಂತೆ ಪರಾರಿಯಾಗಿದ್ದ ಜ್ಞಾನೇಂದ್ರ ಕುಮಾರ್ !

ಕೆಪಿಎಸ್‌ಸಿ (KPSC) ಪಶುವೈದ್ಯರ ನೇಮಕಾತಿ ಅಕ್ರಮ ಪ್ರಕರಣದಲ್ಲಿ ಬಂಧಿತರಾಗಿರುವ ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ಪರಾರಿಯಾದ ರೋಚಕ ಹಾದಿ ಸಿಐಡಿ (CID) ವಿಚಾರಣೆಯಿಂದ ಬಯಲಾಗಿದೆ. ರಾಜ್ಯದ ಪ್ರಭಾವಿ ವ್ಯಕ್ತಿಗಳು ಹಾಗೂ ರಾಜಕಾರಣಿಗಳ ಸತತ...