Homeಮುಖಪುಟಮಾಲಿನ್ಯದಿಂದ ವಾಸಕ್ಕೆ ಯೋಗ್ಯವಲ್ಲದಷ್ಟು ಹದಗೆಟ್ಟ ದೆಹಲಿ: ಕೇಂದ್ರ ಮತ್ತು ರಾಜ್ಯ ಸರ್ಕಾರಕ್ಕೆ ಸುಪ್ರೀಂ ಛೀಮಾರಿ...

ಮಾಲಿನ್ಯದಿಂದ ವಾಸಕ್ಕೆ ಯೋಗ್ಯವಲ್ಲದಷ್ಟು ಹದಗೆಟ್ಟ ದೆಹಲಿ: ಕೇಂದ್ರ ಮತ್ತು ರಾಜ್ಯ ಸರ್ಕಾರಕ್ಕೆ ಸುಪ್ರೀಂ ಛೀಮಾರಿ…

- Advertisement -
- Advertisement -

ರಾಷ್ಟ್ರ ರಾಜಧಾನಿ ದೆಹಲಿ ಈಗ ವಿಷಪೂರಿತವಾಗಿದೆ. ವಾಯುಮಾಲಿನ್ಯ ಮಿತಿ ಮೀರಿದ್ದು,  ಉಸಿರಾಟ ತೊಂದರೆ ಮತ್ತು ಅನಾರೋಗ್ಯದಿಂದ ಜನರನ್ನು ಬಳಲುವಂತೆ ಮಾಡಿದೆ. ದೆಹಲಿಯ ತುಂಬ ದಟ್ಟ ಹೊಗೆ ಆವರಿಸಿದೆ. ಈ ಸಂಬಂಧ ಸುಪ್ರೀಂಕೋರ್ಟ್ ದೆಹಲಿ ಸರ್ಕಾರ ಮತ್ತು ಕೇಂದ್ರ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ.

ದೆಹಲಿಯಲ್ಲಿ ಸಾರ್ವಜನಿಕ ಆರೋಗ್ಯ ತುರ್ತುಸ್ಥಿತಿ ಘೋಷಣೆಯಾಗಿದೆ. ವರ್ಷದಿಂದ ವರ್ಷಕ್ಕೆ ಜನ ತಮ್ಮ ಉಸಿರು ಕಳೆದುಕೊಳ್ಳುತ್ತಿದ್ದಾರೆ. ವಿಷಪೂರಿತ ವಾತಾವರಣದಲ್ಲಿ ಬದುಕುವುದು ಹೇಗೆ..? ಯಾವುದೇ ಸುಸಂಸ್ಕೃತ ದೇಶದಲ್ಲಿ ಈ ರೀತಿಯಾಗಲು ಸಾಧ್ಯವಿಲ್ಲ ಎಂದು ಹೇಳಿದೆ.

ಸುಪ್ರೀಂಕೋರ್ಟ್ ನ್ಯಾ. ಅರುಣ್ ಮಿಶ್ರಾ, ದೆಹಲಿಯಲ್ಲಿ ಮಾಲಿನ್ಯ ನಿಯಂತ್ರಣ ಪ್ರಾಧಿಕಾರ ಸೂಕ್ತ ಕ್ರಮ ತೆಗೆದುಕೊಳ್ಳಬೇಕು. ತ್ಯಾಜ್ಯ ಮತ್ತು ಉದ್ಯಮ ಘಟಕಗಳಿಂದ ಬಿಡುವ ಹೊಗೆ ಸಾಕಷ್ಟು ಹಾನಿಯುಂಟು ಮಾಡುತ್ತಿದೆ. ಕೈಗಾರಿಕೆಗಳಿಂದ ಬಿಡಲಾಗುತ್ತಿರುವ ತ್ಯಾಜ್ಯ, ವಿಷಪೂರಿತ ಹೊಗೆ, ಕಸ ಸುಡುವುದರಿಂದ ಮಾಲಿನ್ಯದ ಪ್ರಮಾಣ ಹೆಚ್ಚುತ್ತಿದೆ. ಇಂಥ ವಾತಾವರಣದಲ್ಲಿ ಸಾರ್ವಜನಿಕರು ಬದುಕಲು ಸಾಧ್ಯವೇ..? ಇದು ಜನ ಬದುಕಲು ಇರುವ ಸರಿಯಾದ ಮಾರ್ಗವೂ ಅಲ್ಲ. ಹೀಗಾದರೆ ಮನೆಯಲ್ಲಿ ಇರುವವರು, ಹೊರಗೆ ಓಡಾಡುವವರಿಂದ ಹಿಡಿದು ಯಾರೂ ಸುರಕ್ಷಿತವಾಗಿರಲು ಸಾಧ್ಯವಿಲ್ಲ ಎಂದು ಸುಪ್ರೀಂಕೋರ್ಟ್ ಹೇಳಿದೆ.

ಇದನ್ನೂ ಓದಿ: ಮಾಲಿನ್ಯ ತಡೆಗಾಗಿ ಇಂದಿನಿಂದ ದೆಹಲಿಯಲ್ಲಿ ಬೆಸ-ಸಮ ನಿಯಮ ಜಾರಿ: ಬಿಜೆಪಿ ವಿರೋಧ

ದೆಹಲಿಯ ಸುತ್ತಮುತ್ತಲಿನ ನಗರಗಳಾದ ಪಂಜಾಬ್, ಹರ್ಯಾಣ, ಪಶ್ಚಿಮ ಉತ್ತರ ಪ್ರದೇಶ ಭಾಗದಲ್ಲಿನ ಬೆಳೆ, ಪೈರು ಕಟಾವಿನ ನಂತರ ತ್ಯಾಜ್ಯವನ್ನು ಸುಟ್ಟು, ಭೂಮಿಯನ್ನು ಮತ್ತೆ ಹದಗೊಳಿಸಲಾಗುತ್ತದೆ. ಇಂಥ ಸಮಯದಲ್ಲಿ ಮಾಲಿನ್ಯ ಪ್ರಮಾಣ ಮತ್ತಷ್ಟು ಹೆಚ್ಚುತ್ತದೆ. ಇದಕ್ಕೆ ವೈಜ್ಞಾನಿಕ ಮಾರ್ಗೋಪಾಯ ಕಂಡುಕೊಳ್ಳಲು ಸರ್ಕಾರಗಳು ಶ್ರಮಿಸಬೇಕು. ಪರಿಸರ ತಜ್ಞರು, ಐಐಟಿ ತಜ್ಞರನ್ನೂ ಕರೆಯಿಸಿ, ಸೂಕ್ತ ಸಮಾಲೋಚನೆ ನಡೆಸಿ, ವಾಯುಮಾಲಿನ್ಯ ಸಮಸ್ಯೆ ತಡೆಗೆ ಕೇಂದ್ರ ಸರ್ಕಾರ ಮತ್ತು ದೆಹಲಿ ಸರ್ಕಾರ ಪರಿಹಾರೋಪಾಯ ಕಂಡುಕೊಳ್ಳಬೇಕು. ಪ್ರತಿ ವರ್ಷ ಇದು ನಮ್ಮ ಮೂಗಿನ ನೇರಕ್ಕೆ ನಡೆಯುತ್ತಿದೆ. ಆದರೂ ಸರ್ಕಾರಗಳು ಎಚ್ಚೆತ್ತುಕೊಂಡಿಲ್ಲ. ದೆಹಲಿಗೆ ಬರಬೇಡಿ ಅಥವಾ ದೆಹಲಿ ಬಿಟ್ಟು ದೂರ ಹೋಗಿ ಎಂದು ಜನರಿಗೆ  ಹೇಳುವಂಥಹ ಕೆಟ್ಟ ಸ್ಥಿತಿ ನಿರ್ಮಾಣವಾಗಿದೆ. ಜನರು ತಮ್ಮದೇ ರಾಜ್ಯದಲ್ಲಿ ಮತ್ತು ಪಕ್ಕದ ರಾಜ್ಯಗಳಲ್ಲಿ ಸಾಯುತ್ತಿದ್ದಾರೆ.  ಇದನ್ನು ಸಹಿಸಿಕೊಳ್ಳುವುದು ಅಸಾಧ್ಯ ಎಂದು ಸುಪ್ರೀಂಕೋರ್ಟ್ ಹೇಳಿದೆ.

ದೆಹಲಿಯಲ್ಲಿ ಪ್ರತಿ ವರ್ಷ ವಾಯುಮಾಲಿನ್ಯ ಬೃಹತ್ ಸಮಸ್ಯೆಯಾಗಿ ಬೆಳೆಯುತ್ತಲೇ ಇದೆ. ಇದನ್ನು ತಡೆಗಟ್ಟಲು ನಾವು ಏನನ್ನೂ ಮಾಡುತ್ತಿಲ್ಲ. ಪ್ರತಿ ವರ್ಷ ಆಗುತ್ತಿರುವ ಸಮಸ್ಯೆಯನ್ನು ನಿರ್ಲಕ್ಷಿಸಲಾಗುತ್ತಿದೆ. ಜನ ಉಸಿರಾಟಕ್ಕೆ ಒಳ್ಳೆಯ ಗಾಳಿ ಸಿಗದೇ ಉಸಿರು ಚೆಲ್ಲುತ್ತಿದ್ದಾರೆ. ಇಂಥ ಘಟನೆ ಸುಸಂಸ್ಕೃತ ರಾಷ್ಟ್ರದಲ್ಲಿ ನಡೆಯುವುದಿಲ್ಲ, ನಡೆಯಲೂಬಾರದು ಎಂದು ಹೇಳಿದೆ.

ಮಾಲಿನ್ಯ ನಿಯಂತ್ರಣ ಮಂಡಳಿ ಪ್ರಾಧಿಕಾರ ವರದಿ ನೀಡಿದ್ದು, 2010ರಿಂದ ಇಲ್ಲಿಯವರೆಗೆ ಮಾಲಿನ್ಯ ಪ್ರಮಾಣ ಕಡಿಮೆಯಾಗಿದೆ. ಆದರೆ ನಗರದಲ್ಲಿ ಇನ್ನೂ ಶೇ. 65 ರಷ್ಟು ವಾಯುಮಾಲಿನ್ಯ ಕಡಿಮೆಯಾಗಬೇಕಿದೆ. ತ್ಯಾಜ್ಯ ಮತ್ತು ಕೈಗಾರಿಕೆಗಳಿಂದ ಹೊರಬರುವ ವಿಷಪೂರಿತ ಹೊಗೆ ಮತ್ತಷ್ಟು ಸಮಸ್ಯೆಯನ್ನು ಹೆಚ್ಚಿಸುತ್ತಿದೆ ಎಂದು ವರದಿ ನೀಡಿದೆ.

ಇತ್ತ ಹಿರಿಯ ವಕೀಲ ಅಪರಾಜಿತ್ ಸಿಂಗ್ ಮಾತನಾಡಿ, ಪಂಜಾಬ್ ನಲ್ಲಿ ತ್ಯಾಜ್ಯ ಸುಡುವ ಪ್ರಮಾಣ ಶೇ. 7ರಷ್ಟಿದೆ. ಹರ್ಯಾಣದಲ್ಲಿ ಶೇ. 17ರಷ್ಟಿದೆ ಎಂದು ಹೇಳಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಮಿಯಾ ಮುಸ್ಲಿಮರು ನಮ್ಮ ಶತ್ರುಗಳಲ್ಲ..’; ಚುನಾವಣೆ ಸನಿಹದಲ್ಲಿ ಮಾತು ಬದಲಿಸಿದ ಅಸ್ಸಾಂ ಸಿಎಂ

ಭಾರತೀಯ ಜನತಾ ಪಕ್ಷವು (ಬಿಜೆಪಿ) ಅಸ್ಸಾಂನಲ್ಲಿರುವ ಬಂಗಾಳಿ ಮೂಲದ ಮುಸ್ಲಿಂ ಸಮುದಾಯವಾದ ಮಿಯಾ ಮುಸ್ಲಿಮರನ್ನು ತನ್ನ ಶತ್ರುಗಳೆಂದು ಪರಿಗಣಿಸುವುದಿಲ್ಲ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಗುರುವಾರ ಹೇಳಿದ್ದಾರೆ. ಇದೇ ವರ್ಷದ...

ಜೈಲಿನಲ್ಲಿರುವ ಪಿಎಫ್‌ಐ ನಾಯಕ ಇ ಅಬೂಬಕರ್ ಆರೋಗ್ಯ ಸ್ಥಿತಿ ಗಂಭೀರ

ಸುಮಾರು ನಾಲ್ಕು ವರ್ಷಗಳ ಕಾಲ ಜೈಲಿನಲ್ಲಿ ಶಿಕ್ಷೆ ಅನುಭವಿಸುತ್ತಿರುವ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್‌ಐ) ಸ್ಥಾಪಕ ಅಧ್ಯಕ್ಷ ಎರಪ್ಪುಂಗಲ್ ಅಬೂಬಕರ್ ಅವರ ಆರೋಗ್ಯ ಹದಗೆಟ್ಟ ನಂತರ ಬುಧವಾರದಿಂದ ಆಸ್ಪತ್ರೆಯಲ್ಲಿ ತೀವ್ರ ನಿಗಾ...

‘ಭಾರತ ನಮ್ಮನ್ನು ಹಿಂದುಕ್ಕುವುದಕ್ಕೆ ಬಿಡಲ್ಲ; ಅಮೆರಿಕದ ಹಿತಾಸಕ್ತಿಗಳಿಗೆ ಮೊದಲ ಆದ್ಯತೆ..’; ಕ್ರಿಸ್ಟೋಫರ್ ಲ್ಯಾಂಡೌ

ನಮ್ಮ ಪ್ರಮುಖ ಪ್ರತಿಸ್ಪರ್ಧಿಯಾಗಿ ಹೊರಹೊಮ್ಮಲು ಚೀನಾಗೆ ಮಾಡಿಕೊಟ್ಟ ಆರ್ಥಿಕ ಅನುಕೂಲಗಳನ್ನು ನಾವು ಭಾರತಕ್ಕೆ ನೀಡುವುದಿಲ್ಲ ಎಂದು ಯುನೈಟೆಡ್ ಸ್ಟೇಟ್ಸ್‌ (ಯುಎಸ್‌) ಉಪ ಕಾರ್ಯದರ್ಶಿ ಕ್ರಿಸ್ಟೋಫರ್ ಲ್ಯಾಂಡೌ ಗುರುವಾರ ಹೇಳಿದ್ದಾರೆ. ಅಮೆರಿಕ ಮತ್ತು ಭಾರತ...

ರೋಹಿತ್ ಆ್ಯಕ್ಟ್| ಸರ್ಕಾರದ ನಿರ್ಧಾರ ಸ್ವಾಗತಿಸಿದ ಹೋರಾಟಗಾರರು; ಕಾಯ್ದೆ ಪರಿಣಾಮಕಾರಿ ಜಾರಿಗೆ ಆಗ್ರಹ

“ರಾಜ್ಯದ ಎಲ್ಲಾ ಸರ್ಕಾರಿ, ಖಾಸಗಿ ಮತ್ತು ಡೀಮ್ಡ್ ವಿಶ್ವವಿದ್ಯಾಲಯಗಳಲ್ಲಿ ಜಾತಿ ಆಧಾರದ ಮೇಲೆ ವಿದ್ಯಾರ್ಥಿಗಳ ಮೇಲೆ ನಡೆಯುವ ʻಶೈಕ್ಷಣಿಕ ಮತ್ತು ಸಾಮಾಜಿಕ ದೌರ್ಜನ್ಯʼವನ್ನು ನಿಲ್ಲಿಸಲು ʻರೋಹಿತ್ ವೇಮುಲ ಕಾಯ್ದೆʼಯನ್ನು ಜಾರಿಗೆ ತರಲಾಗುವುದು” ಎಂದು...

Karnataka Budget 2026| ಸಮಾಜ ಕಲ್ಯಾಣ ಇಲಾಖೆಯಡಿ ‘ಬೌದ್ಧ ಅಭಿವೃದ್ಧಿ ನಿಗಮ’ ಸ್ಥಾಪನೆ

ಸಮಾಜ ಕಲ್ಯಾಣ ಇಲಾಖೆಯಡಿ 'ಬೌದ್ಧ ಅಭಿವೃದ್ಧಿ ನಿಗಮ' ಸ್ಥಾಪನೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದಿನ 2026-27ನೇ ಸಾಲಿನ ಆಯವ್ಯಯದಲ್ಲಿ ಘೋಷಿಸಿದರು. "ನಮ್ಮ ಸರ್ಕಾರವು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಿಂದುಳಿದ ವರ್ಗಗಳ...

Karnataka Budget 2026| ಗೃಹಲಕ್ಷ್ಮಿ ಯೋಜನೆಗೆ 28,608 ಕೋಟಿ ರೂ. ಮೀಸಲು; ದೇವದಾಸಿ-ಲಿಂಗತ್ವ ಅಲ್ಪಸಂಖ್ಯಾತರ ಸ್ಥಿತಿಗತಿ ಅರಿಯಲು ಸಮೀಕ್ಷೆ

2026-27 ಸಾಲಿನ ಆಯವ್ಯಯ ಮಂಡಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗೆ ಸಾಕಷ್ಟು ಅನುದಾನ ಘೋಷಣೆ ಮಾಡಿದ್ದಾರೆ. ಗೃಹಲಕ್ಷ್ಮಿ ಯೋಜನೆಗೆ 28,608 ಕೋಟಿ ರೂ. ಮೀಸಲಿಡಲಾಗಿದ್ದು, ಮಾಜಿ ದೇವದಾಸಿ ಮಹಿಳೆಯರು...

ಬಂಗಾಳ ರಾಜ್ಯಪಾಲ ಸಿ.ವಿ. ಆನಂದ ಬೋಸ್ ವಿಧಾನಸಭಾ ಚುನಾವಣೆಗೆ ಮುನ್ನ ರಾಜೀನಾಮೆ; ರಾಜಕೀಯ ಒತ್ತಡದ ಆರೋಪ

ಪಶ್ಚಿಮ ಬಂಗಾಳದ ರಾಜ್ಯಪಾಲ ಸಿ.ವಿ. ಆನಂದ ಬೋಸ್ ಅವರು ಸುಮಾರು ಮೂರುವರೆ ವರ್ಷಗಳ ಕಾಲ ಅಧಿಕಾರದಲ್ಲಿದ್ದ ನಂತರ ಗುರುವಾರ ರಾಜೀನಾಮೆ ನೀಡಿದ್ದಾರೆ. ಈ ಕ್ರಮವು ರಾಜ್ಯದಲ್ಲಿ ಮುಂಬರುವ ವಿಧಾನಸಭಾ ಚುನಾವಣೆಗೆ ಮುನ್ನ ರಾಜಕೀಯ...

Karnataka Budget 2026| ವಿಕ್ಟೋರಿಯಾ ಹೆಸರು ಬದಲಾವಣೆ; ʻಶಾಂತವೇರಿ ಗೋಪಾಲಗೌಡ ಆಸ್ಪತ್ರೆʼ ಎಂದು ಮರುನಾಮಕರಣ

ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯನ್ನು ʻಶಾಂತವೇರಿ ಗೋಪಾಲಗೌಡ ಆಸ್ಪತ್ರೆʼ ಎಂದು ಮರುನಾಮಕರಣಗೊಳಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ತಮ್ಮ ಬಜೆಟ್‌ ಭಾಷಣದಲ್ಲಿ ಘೋಷಿಸಿದರು. ತಮ್ಮ ಆಯವ್ಯಯದಲ್ಲಿ ವೈದ್ಯಕೀಯ ಶಿಕ್ಷಣ ಇಲಾಖೆಗೆ ಸಂಬಂಧಿಸಿದ ಘೋಷಣೆಗಳನ್ನು ಮಾಡಿದ...

Karnataka Budget 2026| ವಿಶ್ವ ವಿದ್ಯಾಲಯಗಳಲ್ಲಿ ಜಾತಿ ಆಧಾರಿತ ದೌರ್ಜನ್ಯ ತಡೆಗೆ ‘ರೋಹಿತ್ ವೇಮುಲ ಕಾಯ್ದೆ’

"ರಾಜ್ಯದ ಎಲ್ಲಾ ಸರ್ಕಾರಿ, ಖಾಸಗಿ ಮತ್ತು ಡೀಮ್ಡ್ ವಿಶ್ವವಿದ್ಯಾಲಯಗಳಲ್ಲಿ ಜಾತಿ ಆಧಾರದ ಮೇಲೆ ವಿದ್ಯಾರ್ಥಿಗಳ ಮೇಲೆ ನಡೆಯುವ ʻಶೈಕ್ಷಣಿಕ ಮತ್ತು ಸಾಮಾಜಿಕ ದೌರ್ಜನ್ಯʼವನ್ನು ನಿಲ್ಲಿಸಲು ʻರೋಹಿತ್ ವೇಮುಲ ಕಾಯ್ದೆʼಯನ್ನು ಜಾರಿಗೆ ತರಲಾಗುವುದು" ಎಂದು...

ಕರ್ನಾಟಕ ಬಜೆಟ್ 2026: 16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಮಾಧ್ಯಮ ನಿಷೇಧ – ಸಿಎಂ ಸಿದ್ದರಾಮಯ್ಯ ಘೋಷಣೆ

ಮಾರ್ಚ್ 6, ಶುಕ್ರವಾರದಂದು 2026 ರ ರಾಜ್ಯ ಬಜೆಟ್ ಮಂಡಿಸಿದ ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, 16 ವರ್ಷದೊಳಗಿನ ಮಕ್ಕಳು ಸಾಮಾಜಿಕ ಮಾಧ್ಯಮ ಬಳಸುವುದನ್ನು ನಿಷೇಧಿಸುವುದಾಗಿ ಘೋಷಿಸಿದರು. "ಮಕ್ಕಳ ಮೇಲೆ ಹೆಚ್ಚುತ್ತಿರುವ ಮೊಬೈಲ್...