Homeಮುಖಪುಟಮಾಲಿನ್ಯದಿಂದ ವಾಸಕ್ಕೆ ಯೋಗ್ಯವಲ್ಲದಷ್ಟು ಹದಗೆಟ್ಟ ದೆಹಲಿ: ಕೇಂದ್ರ ಮತ್ತು ರಾಜ್ಯ ಸರ್ಕಾರಕ್ಕೆ ಸುಪ್ರೀಂ ಛೀಮಾರಿ...

ಮಾಲಿನ್ಯದಿಂದ ವಾಸಕ್ಕೆ ಯೋಗ್ಯವಲ್ಲದಷ್ಟು ಹದಗೆಟ್ಟ ದೆಹಲಿ: ಕೇಂದ್ರ ಮತ್ತು ರಾಜ್ಯ ಸರ್ಕಾರಕ್ಕೆ ಸುಪ್ರೀಂ ಛೀಮಾರಿ…

- Advertisement -
- Advertisement -

ರಾಷ್ಟ್ರ ರಾಜಧಾನಿ ದೆಹಲಿ ಈಗ ವಿಷಪೂರಿತವಾಗಿದೆ. ವಾಯುಮಾಲಿನ್ಯ ಮಿತಿ ಮೀರಿದ್ದು,  ಉಸಿರಾಟ ತೊಂದರೆ ಮತ್ತು ಅನಾರೋಗ್ಯದಿಂದ ಜನರನ್ನು ಬಳಲುವಂತೆ ಮಾಡಿದೆ. ದೆಹಲಿಯ ತುಂಬ ದಟ್ಟ ಹೊಗೆ ಆವರಿಸಿದೆ. ಈ ಸಂಬಂಧ ಸುಪ್ರೀಂಕೋರ್ಟ್ ದೆಹಲಿ ಸರ್ಕಾರ ಮತ್ತು ಕೇಂದ್ರ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ.

ದೆಹಲಿಯಲ್ಲಿ ಸಾರ್ವಜನಿಕ ಆರೋಗ್ಯ ತುರ್ತುಸ್ಥಿತಿ ಘೋಷಣೆಯಾಗಿದೆ. ವರ್ಷದಿಂದ ವರ್ಷಕ್ಕೆ ಜನ ತಮ್ಮ ಉಸಿರು ಕಳೆದುಕೊಳ್ಳುತ್ತಿದ್ದಾರೆ. ವಿಷಪೂರಿತ ವಾತಾವರಣದಲ್ಲಿ ಬದುಕುವುದು ಹೇಗೆ..? ಯಾವುದೇ ಸುಸಂಸ್ಕೃತ ದೇಶದಲ್ಲಿ ಈ ರೀತಿಯಾಗಲು ಸಾಧ್ಯವಿಲ್ಲ ಎಂದು ಹೇಳಿದೆ.

ಸುಪ್ರೀಂಕೋರ್ಟ್ ನ್ಯಾ. ಅರುಣ್ ಮಿಶ್ರಾ, ದೆಹಲಿಯಲ್ಲಿ ಮಾಲಿನ್ಯ ನಿಯಂತ್ರಣ ಪ್ರಾಧಿಕಾರ ಸೂಕ್ತ ಕ್ರಮ ತೆಗೆದುಕೊಳ್ಳಬೇಕು. ತ್ಯಾಜ್ಯ ಮತ್ತು ಉದ್ಯಮ ಘಟಕಗಳಿಂದ ಬಿಡುವ ಹೊಗೆ ಸಾಕಷ್ಟು ಹಾನಿಯುಂಟು ಮಾಡುತ್ತಿದೆ. ಕೈಗಾರಿಕೆಗಳಿಂದ ಬಿಡಲಾಗುತ್ತಿರುವ ತ್ಯಾಜ್ಯ, ವಿಷಪೂರಿತ ಹೊಗೆ, ಕಸ ಸುಡುವುದರಿಂದ ಮಾಲಿನ್ಯದ ಪ್ರಮಾಣ ಹೆಚ್ಚುತ್ತಿದೆ. ಇಂಥ ವಾತಾವರಣದಲ್ಲಿ ಸಾರ್ವಜನಿಕರು ಬದುಕಲು ಸಾಧ್ಯವೇ..? ಇದು ಜನ ಬದುಕಲು ಇರುವ ಸರಿಯಾದ ಮಾರ್ಗವೂ ಅಲ್ಲ. ಹೀಗಾದರೆ ಮನೆಯಲ್ಲಿ ಇರುವವರು, ಹೊರಗೆ ಓಡಾಡುವವರಿಂದ ಹಿಡಿದು ಯಾರೂ ಸುರಕ್ಷಿತವಾಗಿರಲು ಸಾಧ್ಯವಿಲ್ಲ ಎಂದು ಸುಪ್ರೀಂಕೋರ್ಟ್ ಹೇಳಿದೆ.

ಇದನ್ನೂ ಓದಿ: ಮಾಲಿನ್ಯ ತಡೆಗಾಗಿ ಇಂದಿನಿಂದ ದೆಹಲಿಯಲ್ಲಿ ಬೆಸ-ಸಮ ನಿಯಮ ಜಾರಿ: ಬಿಜೆಪಿ ವಿರೋಧ

ದೆಹಲಿಯ ಸುತ್ತಮುತ್ತಲಿನ ನಗರಗಳಾದ ಪಂಜಾಬ್, ಹರ್ಯಾಣ, ಪಶ್ಚಿಮ ಉತ್ತರ ಪ್ರದೇಶ ಭಾಗದಲ್ಲಿನ ಬೆಳೆ, ಪೈರು ಕಟಾವಿನ ನಂತರ ತ್ಯಾಜ್ಯವನ್ನು ಸುಟ್ಟು, ಭೂಮಿಯನ್ನು ಮತ್ತೆ ಹದಗೊಳಿಸಲಾಗುತ್ತದೆ. ಇಂಥ ಸಮಯದಲ್ಲಿ ಮಾಲಿನ್ಯ ಪ್ರಮಾಣ ಮತ್ತಷ್ಟು ಹೆಚ್ಚುತ್ತದೆ. ಇದಕ್ಕೆ ವೈಜ್ಞಾನಿಕ ಮಾರ್ಗೋಪಾಯ ಕಂಡುಕೊಳ್ಳಲು ಸರ್ಕಾರಗಳು ಶ್ರಮಿಸಬೇಕು. ಪರಿಸರ ತಜ್ಞರು, ಐಐಟಿ ತಜ್ಞರನ್ನೂ ಕರೆಯಿಸಿ, ಸೂಕ್ತ ಸಮಾಲೋಚನೆ ನಡೆಸಿ, ವಾಯುಮಾಲಿನ್ಯ ಸಮಸ್ಯೆ ತಡೆಗೆ ಕೇಂದ್ರ ಸರ್ಕಾರ ಮತ್ತು ದೆಹಲಿ ಸರ್ಕಾರ ಪರಿಹಾರೋಪಾಯ ಕಂಡುಕೊಳ್ಳಬೇಕು. ಪ್ರತಿ ವರ್ಷ ಇದು ನಮ್ಮ ಮೂಗಿನ ನೇರಕ್ಕೆ ನಡೆಯುತ್ತಿದೆ. ಆದರೂ ಸರ್ಕಾರಗಳು ಎಚ್ಚೆತ್ತುಕೊಂಡಿಲ್ಲ. ದೆಹಲಿಗೆ ಬರಬೇಡಿ ಅಥವಾ ದೆಹಲಿ ಬಿಟ್ಟು ದೂರ ಹೋಗಿ ಎಂದು ಜನರಿಗೆ  ಹೇಳುವಂಥಹ ಕೆಟ್ಟ ಸ್ಥಿತಿ ನಿರ್ಮಾಣವಾಗಿದೆ. ಜನರು ತಮ್ಮದೇ ರಾಜ್ಯದಲ್ಲಿ ಮತ್ತು ಪಕ್ಕದ ರಾಜ್ಯಗಳಲ್ಲಿ ಸಾಯುತ್ತಿದ್ದಾರೆ.  ಇದನ್ನು ಸಹಿಸಿಕೊಳ್ಳುವುದು ಅಸಾಧ್ಯ ಎಂದು ಸುಪ್ರೀಂಕೋರ್ಟ್ ಹೇಳಿದೆ.

ದೆಹಲಿಯಲ್ಲಿ ಪ್ರತಿ ವರ್ಷ ವಾಯುಮಾಲಿನ್ಯ ಬೃಹತ್ ಸಮಸ್ಯೆಯಾಗಿ ಬೆಳೆಯುತ್ತಲೇ ಇದೆ. ಇದನ್ನು ತಡೆಗಟ್ಟಲು ನಾವು ಏನನ್ನೂ ಮಾಡುತ್ತಿಲ್ಲ. ಪ್ರತಿ ವರ್ಷ ಆಗುತ್ತಿರುವ ಸಮಸ್ಯೆಯನ್ನು ನಿರ್ಲಕ್ಷಿಸಲಾಗುತ್ತಿದೆ. ಜನ ಉಸಿರಾಟಕ್ಕೆ ಒಳ್ಳೆಯ ಗಾಳಿ ಸಿಗದೇ ಉಸಿರು ಚೆಲ್ಲುತ್ತಿದ್ದಾರೆ. ಇಂಥ ಘಟನೆ ಸುಸಂಸ್ಕೃತ ರಾಷ್ಟ್ರದಲ್ಲಿ ನಡೆಯುವುದಿಲ್ಲ, ನಡೆಯಲೂಬಾರದು ಎಂದು ಹೇಳಿದೆ.

ಮಾಲಿನ್ಯ ನಿಯಂತ್ರಣ ಮಂಡಳಿ ಪ್ರಾಧಿಕಾರ ವರದಿ ನೀಡಿದ್ದು, 2010ರಿಂದ ಇಲ್ಲಿಯವರೆಗೆ ಮಾಲಿನ್ಯ ಪ್ರಮಾಣ ಕಡಿಮೆಯಾಗಿದೆ. ಆದರೆ ನಗರದಲ್ಲಿ ಇನ್ನೂ ಶೇ. 65 ರಷ್ಟು ವಾಯುಮಾಲಿನ್ಯ ಕಡಿಮೆಯಾಗಬೇಕಿದೆ. ತ್ಯಾಜ್ಯ ಮತ್ತು ಕೈಗಾರಿಕೆಗಳಿಂದ ಹೊರಬರುವ ವಿಷಪೂರಿತ ಹೊಗೆ ಮತ್ತಷ್ಟು ಸಮಸ್ಯೆಯನ್ನು ಹೆಚ್ಚಿಸುತ್ತಿದೆ ಎಂದು ವರದಿ ನೀಡಿದೆ.

ಇತ್ತ ಹಿರಿಯ ವಕೀಲ ಅಪರಾಜಿತ್ ಸಿಂಗ್ ಮಾತನಾಡಿ, ಪಂಜಾಬ್ ನಲ್ಲಿ ತ್ಯಾಜ್ಯ ಸುಡುವ ಪ್ರಮಾಣ ಶೇ. 7ರಷ್ಟಿದೆ. ಹರ್ಯಾಣದಲ್ಲಿ ಶೇ. 17ರಷ್ಟಿದೆ ಎಂದು ಹೇಳಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಂತರ್ ಮಂತರ್ ಉಪವಾಸ ಸತ್ಯಾಗ್ರಹ ಸ್ಥಳಕ್ಕೆ ಕೇಜ್ರಿವಾಲ್ ಭೇಟಿ

ದೇಶಾದ್ಯಂತ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿರುವ ನೀಟ್ (NEET) ಪರೀಕ್ಷಾ ಅಕ್ರಮ ಹಾಗೂ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಜಂತರ್ ಮಂತರ್‌ನಲ್ಲಿ ಆಮರಣಾಂತ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಖ್ಯಾತ ಶಿಕ್ಷಣ ತಜ್ಞ ಹಾಗೂ ಪರಿಸರ...

E20 ಪೆಟ್ರೋಲ್ ಪ್ರಕರಣ : ‘ಗ್ರ್ಯಾಂಡ್ ವಿಟಾರಾ’ ಕಾರು ಬದಲಾಯಿಸಿ ಕೊಡಲು ಮಾರುತಿ ಸುಝುಕಿಗೆ ಗ್ರಾಹಕ ನ್ಯಾಯಾಲಯ ಆದೇಶ

ಛತ್ತೀಸ್‌ಗಢದ ರಾಯ್‌ಪುರದ ಜಿಲ್ಲಾ ಗ್ರಾಹಕ ವಿವಾದಗಳ ಪರಿಹಾರ ಆಯೋಗವು (ಡಿಸಿಡಿಆರ್‌ಸಿ), E20 ಇಂಧನ (ಪೆಟ್ರೋಲ್) ಬಳಕೆಯಿಂದಾಗಿ ಕಾರು ಕೆಟ್ಟುಹೋಗಿದೆ ಎಂದು ಆರೋಪಿಸಿದ ವ್ಯಕ್ತಿಗೆ ಹೊಸ 'ಗ್ರಾಂಡ್ ವಿಟಾರಾ' ಕಾರನ್ನು ನೀಡುವಂತೆ ಕಾರು ತಯಾರಿಕಾ...

ಸಿಜೆಪಿ ಶಾಂತಿಯುತ ಪ್ರತಿಭಟನೆಗೆ ನಿರಂತರ ಪೊಲೀಸ್ ಕಣ್ಗಾವಲು ಪ್ರಶ್ನಿಸಿ ದೆಹಲಿ ಹೈಕೋರ್ಟ್‌ಗೆ ಅರ್ಜಿ

ರಾಷ್ಟ್ರ ರಾಜಧಾನಿ ದೆಹಲಿಯ ಜಂತರ್ ಮಂತರ್‌ನಲ್ಲಿ ಜಿರಳೆ ಜನತಾ ಪಕ್ಷ (ಸಿಜೆಪಿ) ಆಯೋಜಿಸಿರುವ ಶಾಂತಿಯುತ ಧರಣಿ ಮತ್ತು ಉಪವಾಸ ಸತ್ಯಾಗ್ರಹದಲ್ಲಿ ಭಾಗವಹಿಸುವ ನಾಗರಿಕರ ಮೇಲೆ ದೆಹಲಿ ಪೊಲೀಸರು ನಿರಂತರ ಮತ್ತು ವ್ಯಾಪಕ ಕಣ್ಗಾವಲು...

IAS ಆಗುವ ಮುನ್ನ ‘ಪರಿಪೂರ್ಣ ತಾಯಿ’ಯಾಗಿ ಎಂದ ರಾಜ್ಯಪಾಲರ ಸಲಹೆ ಪುರುಷ ಪ್ರಾಧ್ಯಾನ್ಯತೆಯ ಮುಂದುವರೆದ ಆಚರಣೆ ಅಲ್ಲವೆ?

ಇತ್ತೀಚೆಗೆ ಉತ್ತರ ಪ್ರದೇಶದ ರಾಜ್ಯಪಾಲರಾದ ಆನಂದಿಬೆನ್ ಪಟೇಲ್ ಅವರು, "ಮಹಿಳೆಯರು IAS ಅಧಿಕಾರಿ ಅಥವಾ ಶಿಕ್ಷಕಿಯಾಗುವ ಕನಸು ಕಾಣುವ ಮೊದಲು 'ಪರಿಣಿತ ತಾಯಿ' ಆಗುವುದನ್ನು ಕಲಿಯಬೇಕು ಎಂದು ಸಲಹೆ ನೀಡಿದ್ದರು. ಕಾನ್ಪುರದ ಛತ್ರಪತಿ...

ಹಿಂದಿನ ಮದುವೆ, ಮಗು ವಿಚಾರ ಮುಚ್ಚಿಟ್ಟಿದ್ದಕ್ಕೆ ಸಹೋದರನೊಂದಿಗಿನ ಸಂಬಂಧ ಮುರಿದುಕೊಂಡಿದ್ದ ಕಾನೂನು ವಿದ್ಯಾರ್ಥಿನಿಯನ್ನು ಇರಿದು ಕೊಂದ ತಮ್ಮ

ಬೆಂಗಳೂರು: ಮೊದಲ ಮದುವೆ ಹಾಗೂ ಮಗುವಿದ್ದ ವಿಷಯವನ್ನು ಮುಚ್ಚಿಟ್ಟು ವಂಚಿಸಿದ್ದ ಪ್ರಿಯಕರನೊಂದಿಗಿನ ಸಂಬಂಧವನ್ನು ಮುರಿದುಕೊಂಡ ಕಾರಣಕ್ಕೆ, ಆತನ ಸಹೋದರನಿಂದಲೇ ಚಾಕು ಇರಿತಕ್ಕೊಳಗಾಗಿದ್ದ ಕಾನೂನು ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಘಟನೆ ಸಿಲಿಕಾನ್ ಸಿಟಿಯಲ್ಲಿ...

ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ಅಮೆರಿಕ ದಾಳಿಗೆ ಇರಾನ್‌ನಿಂದ ಪ್ರತೀಕಾರ

ಕಳೆದ ಗುರುವಾರ (ಜು.16) ಖುಜೆಸ್ತಾನ್ ಪ್ರಾಂತ್ಯದಲ್ಲಿರುವ ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ನಡೆದ ದಾಳಿಗೆ ಪ್ರತೀಕಾರವಾಗಿ, ಕುವೈತ್ ಮತ್ತು ಬಹ್ರೇನ್ ಸೇರಿದಂತೆ ಗಲ್ಫ್ ರಾಷ್ಟ್ರಗಳಲ್ಲಿರುವ ಅಮೆರಿಕದ ವಾಯು ನೆಲೆಗಳ ಮೇಲೆ ಇರಾನ್ ಪ್ರತಿದಾಳಿ...

Lazarus To World Leaks : ಆತಂಕ ಸೃಷ್ಟಿಸಿದ ಕೂಡಂಕುಳಂ ಸೈಬರ್ ದಾಳಿಗಳು

ಭಾರತದ ಅತಿ ದೊಡ್ಡ ಪರಮಾಣು ವಿದ್ಯುತ್ ಕೇಂದ್ರವಾದ ತಮಿಳುನಾಡಿನ  ತಿರುನೆಲ್ವೇಲಿಯ ಕೂಡಂಕುಳಂ, ಕಳೆದ ಏಳು ವರ್ಷಗಳ ಅವಧಿಯಲ್ಲಿ ಎರಡು ಬಾರಿ ಪ್ರಮುಖ ಸೈಬರ್ ಭದ್ರತಾ ಆತಂಕಗಳಿಗೆ ಕೇಂದ್ರ ಬಿಂದುವಾಗಿದೆ. 2019ರ ಮೊದಲ ಘಟನೆಯು...

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ: ಪ್ರಶ್ನೆಗಳನ್ನು ಖರೀದಿಸಲು 5 ಲಕ್ಷ ರೂ. ಪಾವತಿಸಿದ್ದ ಲಾತೂರ್ ಕೋಚಿಂಗ್ ಮಾಲೀಕ: ನ್ಯಾಯಾಲಯಕ್ಕೆ ಸಿಬಿಐ ಮಾಹಿತಿ

ದೇಶಾದ್ಯಂತ ಕೋಟ್ಯಂತರ ವಿದ್ಯಾರ್ಥಿಗಳ ಭವಿಷ್ಯವನ್ನು ಕತ್ತಲಿಗೆ ತಳ್ಳಿದ ನೀಟ್ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣದಲ್ಲಿ ದಿನಕ್ಕೊಂದು ಆಘಾತಕಾರಿ ಸತ್ಯಗಳು ಹೊರಬರುತ್ತಿದ್ದು, ಇಡೀ ಶಿಕ್ಷಣ ವ್ಯವಸ್ಥೆಯನ್ನು ಜರ್ಜರಿತಗೊಳಿಸಿರುವ ಈ ದಂಧೆಯ ಆಳ ಎಷ್ಟು...

ನಾನು ಸತ್ತರೂ ಪರ್ವಾಗಿಲ್ಲ, ಉಪವಾಸ ಹಿಂಪಡೆಯಲ್ಲ: ಜುಲೈ 20ರ ಸಂಸತ್ ಚಲೋಗೆ ವಾಂಗ್‌ಚುಕ್ ಕರೆ

ದೇಶದ ಶಿಕ್ಷಣ ವ್ಯವಸ್ಥೆಯಲ್ಲಿನ ಸರಣಿ ಪರೀಕ್ಷಾ ಅಕ್ರಮ ಹಾಗೂ ನೀಟ್ (NEET) ಹಗರಣದ ವಿರುದ್ಧ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ನಡೆಯುತ್ತಿರುವ ಆಮರಣಾಂತ ಉಪವಾಸ ಸತ್ಯಾಗ್ರಹವನ್ನು ತಕ್ಷಣವೇ...

ಉತ್ತರ ಪ್ರದೇಶ : ಮೊಹಮ್ಮದ್ ಅಲಿ ಜೌಹರ್ ವಿವಿಯ 38 ಕಟ್ಟಡಗಳನ್ನು ಕೆಡವಲು ಮುಂದಾದ ಸರ್ಕಾರ!

ಸಮಾಜವಾದಿ ಪಕ್ಷದ (ಎಸ್‌ಪಿ) ಮುಖಂಡ ಆಝಂ ಖಾನ್ ಅವರಿಗೆ ಸೇರಿದ ಮೊಹಮ್ಮದ್ ಅಲಿ ಜೌಹರ್ ವಿಶ್ವವಿದ್ಯಾಲಯದ 38 ಕಟ್ಟಡಗಳನ್ನು ಕೆಡವಲು ಉತ್ತರ ಪ್ರದೇಶದ ರಾಂಪುರ ನಗರಾಭಿವೃದ್ಧಿ ಪ್ರಾಧಿಕಾರ (ಆರ್‌ಡಿಎ) ಆದೇಶಿಸಿದೆ ಎಂದು ಬುಧವಾರ...