Homeಮುಖಪುಟಮಾಲಿನ್ಯದಿಂದ ವಾಸಕ್ಕೆ ಯೋಗ್ಯವಲ್ಲದಷ್ಟು ಹದಗೆಟ್ಟ ದೆಹಲಿ: ಕೇಂದ್ರ ಮತ್ತು ರಾಜ್ಯ ಸರ್ಕಾರಕ್ಕೆ ಸುಪ್ರೀಂ ಛೀಮಾರಿ...

ಮಾಲಿನ್ಯದಿಂದ ವಾಸಕ್ಕೆ ಯೋಗ್ಯವಲ್ಲದಷ್ಟು ಹದಗೆಟ್ಟ ದೆಹಲಿ: ಕೇಂದ್ರ ಮತ್ತು ರಾಜ್ಯ ಸರ್ಕಾರಕ್ಕೆ ಸುಪ್ರೀಂ ಛೀಮಾರಿ…

- Advertisement -
- Advertisement -

ರಾಷ್ಟ್ರ ರಾಜಧಾನಿ ದೆಹಲಿ ಈಗ ವಿಷಪೂರಿತವಾಗಿದೆ. ವಾಯುಮಾಲಿನ್ಯ ಮಿತಿ ಮೀರಿದ್ದು,  ಉಸಿರಾಟ ತೊಂದರೆ ಮತ್ತು ಅನಾರೋಗ್ಯದಿಂದ ಜನರನ್ನು ಬಳಲುವಂತೆ ಮಾಡಿದೆ. ದೆಹಲಿಯ ತುಂಬ ದಟ್ಟ ಹೊಗೆ ಆವರಿಸಿದೆ. ಈ ಸಂಬಂಧ ಸುಪ್ರೀಂಕೋರ್ಟ್ ದೆಹಲಿ ಸರ್ಕಾರ ಮತ್ತು ಕೇಂದ್ರ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ.

ದೆಹಲಿಯಲ್ಲಿ ಸಾರ್ವಜನಿಕ ಆರೋಗ್ಯ ತುರ್ತುಸ್ಥಿತಿ ಘೋಷಣೆಯಾಗಿದೆ. ವರ್ಷದಿಂದ ವರ್ಷಕ್ಕೆ ಜನ ತಮ್ಮ ಉಸಿರು ಕಳೆದುಕೊಳ್ಳುತ್ತಿದ್ದಾರೆ. ವಿಷಪೂರಿತ ವಾತಾವರಣದಲ್ಲಿ ಬದುಕುವುದು ಹೇಗೆ..? ಯಾವುದೇ ಸುಸಂಸ್ಕೃತ ದೇಶದಲ್ಲಿ ಈ ರೀತಿಯಾಗಲು ಸಾಧ್ಯವಿಲ್ಲ ಎಂದು ಹೇಳಿದೆ.

ಸುಪ್ರೀಂಕೋರ್ಟ್ ನ್ಯಾ. ಅರುಣ್ ಮಿಶ್ರಾ, ದೆಹಲಿಯಲ್ಲಿ ಮಾಲಿನ್ಯ ನಿಯಂತ್ರಣ ಪ್ರಾಧಿಕಾರ ಸೂಕ್ತ ಕ್ರಮ ತೆಗೆದುಕೊಳ್ಳಬೇಕು. ತ್ಯಾಜ್ಯ ಮತ್ತು ಉದ್ಯಮ ಘಟಕಗಳಿಂದ ಬಿಡುವ ಹೊಗೆ ಸಾಕಷ್ಟು ಹಾನಿಯುಂಟು ಮಾಡುತ್ತಿದೆ. ಕೈಗಾರಿಕೆಗಳಿಂದ ಬಿಡಲಾಗುತ್ತಿರುವ ತ್ಯಾಜ್ಯ, ವಿಷಪೂರಿತ ಹೊಗೆ, ಕಸ ಸುಡುವುದರಿಂದ ಮಾಲಿನ್ಯದ ಪ್ರಮಾಣ ಹೆಚ್ಚುತ್ತಿದೆ. ಇಂಥ ವಾತಾವರಣದಲ್ಲಿ ಸಾರ್ವಜನಿಕರು ಬದುಕಲು ಸಾಧ್ಯವೇ..? ಇದು ಜನ ಬದುಕಲು ಇರುವ ಸರಿಯಾದ ಮಾರ್ಗವೂ ಅಲ್ಲ. ಹೀಗಾದರೆ ಮನೆಯಲ್ಲಿ ಇರುವವರು, ಹೊರಗೆ ಓಡಾಡುವವರಿಂದ ಹಿಡಿದು ಯಾರೂ ಸುರಕ್ಷಿತವಾಗಿರಲು ಸಾಧ್ಯವಿಲ್ಲ ಎಂದು ಸುಪ್ರೀಂಕೋರ್ಟ್ ಹೇಳಿದೆ.

ಇದನ್ನೂ ಓದಿ: ಮಾಲಿನ್ಯ ತಡೆಗಾಗಿ ಇಂದಿನಿಂದ ದೆಹಲಿಯಲ್ಲಿ ಬೆಸ-ಸಮ ನಿಯಮ ಜಾರಿ: ಬಿಜೆಪಿ ವಿರೋಧ

ದೆಹಲಿಯ ಸುತ್ತಮುತ್ತಲಿನ ನಗರಗಳಾದ ಪಂಜಾಬ್, ಹರ್ಯಾಣ, ಪಶ್ಚಿಮ ಉತ್ತರ ಪ್ರದೇಶ ಭಾಗದಲ್ಲಿನ ಬೆಳೆ, ಪೈರು ಕಟಾವಿನ ನಂತರ ತ್ಯಾಜ್ಯವನ್ನು ಸುಟ್ಟು, ಭೂಮಿಯನ್ನು ಮತ್ತೆ ಹದಗೊಳಿಸಲಾಗುತ್ತದೆ. ಇಂಥ ಸಮಯದಲ್ಲಿ ಮಾಲಿನ್ಯ ಪ್ರಮಾಣ ಮತ್ತಷ್ಟು ಹೆಚ್ಚುತ್ತದೆ. ಇದಕ್ಕೆ ವೈಜ್ಞಾನಿಕ ಮಾರ್ಗೋಪಾಯ ಕಂಡುಕೊಳ್ಳಲು ಸರ್ಕಾರಗಳು ಶ್ರಮಿಸಬೇಕು. ಪರಿಸರ ತಜ್ಞರು, ಐಐಟಿ ತಜ್ಞರನ್ನೂ ಕರೆಯಿಸಿ, ಸೂಕ್ತ ಸಮಾಲೋಚನೆ ನಡೆಸಿ, ವಾಯುಮಾಲಿನ್ಯ ಸಮಸ್ಯೆ ತಡೆಗೆ ಕೇಂದ್ರ ಸರ್ಕಾರ ಮತ್ತು ದೆಹಲಿ ಸರ್ಕಾರ ಪರಿಹಾರೋಪಾಯ ಕಂಡುಕೊಳ್ಳಬೇಕು. ಪ್ರತಿ ವರ್ಷ ಇದು ನಮ್ಮ ಮೂಗಿನ ನೇರಕ್ಕೆ ನಡೆಯುತ್ತಿದೆ. ಆದರೂ ಸರ್ಕಾರಗಳು ಎಚ್ಚೆತ್ತುಕೊಂಡಿಲ್ಲ. ದೆಹಲಿಗೆ ಬರಬೇಡಿ ಅಥವಾ ದೆಹಲಿ ಬಿಟ್ಟು ದೂರ ಹೋಗಿ ಎಂದು ಜನರಿಗೆ  ಹೇಳುವಂಥಹ ಕೆಟ್ಟ ಸ್ಥಿತಿ ನಿರ್ಮಾಣವಾಗಿದೆ. ಜನರು ತಮ್ಮದೇ ರಾಜ್ಯದಲ್ಲಿ ಮತ್ತು ಪಕ್ಕದ ರಾಜ್ಯಗಳಲ್ಲಿ ಸಾಯುತ್ತಿದ್ದಾರೆ.  ಇದನ್ನು ಸಹಿಸಿಕೊಳ್ಳುವುದು ಅಸಾಧ್ಯ ಎಂದು ಸುಪ್ರೀಂಕೋರ್ಟ್ ಹೇಳಿದೆ.

ದೆಹಲಿಯಲ್ಲಿ ಪ್ರತಿ ವರ್ಷ ವಾಯುಮಾಲಿನ್ಯ ಬೃಹತ್ ಸಮಸ್ಯೆಯಾಗಿ ಬೆಳೆಯುತ್ತಲೇ ಇದೆ. ಇದನ್ನು ತಡೆಗಟ್ಟಲು ನಾವು ಏನನ್ನೂ ಮಾಡುತ್ತಿಲ್ಲ. ಪ್ರತಿ ವರ್ಷ ಆಗುತ್ತಿರುವ ಸಮಸ್ಯೆಯನ್ನು ನಿರ್ಲಕ್ಷಿಸಲಾಗುತ್ತಿದೆ. ಜನ ಉಸಿರಾಟಕ್ಕೆ ಒಳ್ಳೆಯ ಗಾಳಿ ಸಿಗದೇ ಉಸಿರು ಚೆಲ್ಲುತ್ತಿದ್ದಾರೆ. ಇಂಥ ಘಟನೆ ಸುಸಂಸ್ಕೃತ ರಾಷ್ಟ್ರದಲ್ಲಿ ನಡೆಯುವುದಿಲ್ಲ, ನಡೆಯಲೂಬಾರದು ಎಂದು ಹೇಳಿದೆ.

ಮಾಲಿನ್ಯ ನಿಯಂತ್ರಣ ಮಂಡಳಿ ಪ್ರಾಧಿಕಾರ ವರದಿ ನೀಡಿದ್ದು, 2010ರಿಂದ ಇಲ್ಲಿಯವರೆಗೆ ಮಾಲಿನ್ಯ ಪ್ರಮಾಣ ಕಡಿಮೆಯಾಗಿದೆ. ಆದರೆ ನಗರದಲ್ಲಿ ಇನ್ನೂ ಶೇ. 65 ರಷ್ಟು ವಾಯುಮಾಲಿನ್ಯ ಕಡಿಮೆಯಾಗಬೇಕಿದೆ. ತ್ಯಾಜ್ಯ ಮತ್ತು ಕೈಗಾರಿಕೆಗಳಿಂದ ಹೊರಬರುವ ವಿಷಪೂರಿತ ಹೊಗೆ ಮತ್ತಷ್ಟು ಸಮಸ್ಯೆಯನ್ನು ಹೆಚ್ಚಿಸುತ್ತಿದೆ ಎಂದು ವರದಿ ನೀಡಿದೆ.

ಇತ್ತ ಹಿರಿಯ ವಕೀಲ ಅಪರಾಜಿತ್ ಸಿಂಗ್ ಮಾತನಾಡಿ, ಪಂಜಾಬ್ ನಲ್ಲಿ ತ್ಯಾಜ್ಯ ಸುಡುವ ಪ್ರಮಾಣ ಶೇ. 7ರಷ್ಟಿದೆ. ಹರ್ಯಾಣದಲ್ಲಿ ಶೇ. 17ರಷ್ಟಿದೆ ಎಂದು ಹೇಳಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಕರ್ನಾಟಕ ಸರ್ಕಾರ ಸಾಮಾಜಿಕ ನ್ಯಾಯ ನಿರಾಕರಿಸುತ್ತಿದೆ’: ವಿಶೇಷ ಸಚಿವ ಸಂಪುಟ ಸಭೆ ಮುಂದೂಡಿಕೆಗೆ ಹೋರಾಟಗಾರರ ಖಂಡನೆ

ಕಳೆದ 35 ವರ್ಷಗಳಿಂದ ಒಳಮೀಸಲಾತಿಗಾಗಿ ಆಗ್ರಹಿಸಿ ನಡೆಯುತ್ತಿದ್ದ ಹೋರಾಟಕ್ಕೆ ಸುಪ್ರೀಂ ಕೋರ್ಟ್‌ ತೀರ್ಪಿನ ನಂತರ ಕರ್ನಾಟಕದಲ್ಲಿ ಒಳಮೀಸಲಾತಿ ಜಾರಿಯಾಗುವ ಭರವಸೆಯನ್ನು ಒಳಮೀಸಲಾತಿ ಹೋರಾಟಗಾರರು ಹೊಂದಿದ್ದರು.  ಕಾಂಗ್ರೆಸ್‌ ನೇತೃತ್ವದ ಕರ್ನಾಟಕ ಸರ್ಕಾರ ಎರಡು ವರ್ಷಗಳಿಂದ ನಿರಂತರವಾಗಿ...

ನೇಪಾಳದ ನೂತನ ಪ್ರಧಾನಿಯಾಗಿ 35ವರ್ಷದ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ

ಕಠ್ಮಂಡು: 'ಬಾಲೆನ್' ಎಂದು ಪ್ರೀತಿಯಿಂದ ಕರೆಯಲ್ಪಡುವ ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು, ಹಿಮಾಲಯನ್ ರಾಷ್ಟ್ರದಲ್ಲಿ ಉನ್ನತ ಕಾರ್ಯಕಾರಿ ಹುದ್ದೆಯನ್ನು ಅಲಂಕರಿಸಿದ ಅತ್ಯಂತ ಕಿರಿಯ ನಾಯಕರಾಗಿ ಬಾಲೆನ್...

ಶಿವನ ಅವತಾರ ಎಂದು ಹೇಳಿಕೊಳ್ಳುತ್ತಿದ್ದ ಋುಷಿಕೇಶ್ ವೈದ್ಯ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣ: ಎಫ್‌ಐಆರ್ ನಂತರ ದೇವಮಾನವ ಪರಾರಿ

ವಸಾಯಿ: ಶಿವನ ಅವತಾರ ಎಂದು ಹೇಳಿಕೊಂಡು ಮಹಿಳೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಸ್ವಯಂ ಘೋಷಿತ ದೇವಮಾನವ ಋಷಿಕೇಶ್ ವೈದ್ಯ ವಿರುದ್ಧ ಪ್ರಕರಣ ದಾಖಲಾಗಿದೆ. ಈ ಘಟನೆ ವಸಾಯಿ-ವಿರಾರ್ ಪ್ರದೇಶ...

ಜ್ಯೋತಿಷಿ ಅಶೋಕ್ ಖರತ್ ಲೈಂಗಿಕ ದೌರ್ಜನ್ಯ; ಸಂತ್ರಸ್ತರ ವಿಡಿಯೋ ಪ್ರಸಾರ ಮಾಡುವವರ ವಿರುದ್ಧ ಕ್ರಿಮಿನಲ್ ಕೇಸ್: ದೇವೇಂದ್ರ ಫಡ್ನವೀಸ್

ಮುಂಬೈ: ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ಅವರಿಂದ ದೌರ್ಜನ್ಯಕ್ಕೊಳಗಾದ ಸಂತ್ರಸ್ತ ಮಹಿಳೆಯರ ಅಶ್ಲೀಲ ವೀಡಿಯೊಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಪ್ರಸಾರ ಮಾಡುವವರ ವಿರುದ್ಧ ಕ್ರಿಮಿನಲ್ ಕ್ರಮ ಕೈಗೊಳ್ಳಲಾಗುವುದು ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ...

ಕ್ಷಿಪಣಿಗಳ ಮೇಲೆ ಭಾರತ ಸೇರಿದಂತೆ ಹಲವು ರಾಷ್ಟ್ರಗಳಿಗೆ ಧನ್ಯವಾದ ಸಂದೇಶ ಬರೆದ ಇರಾನ್

ಯುನೈಟೆಡ್ ಸ್ಟೇಟ್ಸ್-ಇಸ್ರೇಲ್ ವಿರುದ್ಧದ ಯುದ್ಧದ ಮಧ್ಯೆ ಇರಾನ್‌ನೊಂದಿಗೆ ಒಗ್ಗಟ್ಟನ್ನು ತೋರಿಸಿದ ರಾಷ್ಟ್ರಗಳಿಗೆ ಇರಾನ್‌ ತನ್ನ ಕ್ಷಿಪಣಿಗಳು ಕೃತಜ್ಞತಾ ಸಂದೇಶ ಬರೆದಿದೆ. ಕ್ಷಿಪಣಿಗಳ ಮೇಲೆ ಬರೆಯಲಾದ ಸಂದೇಶಗಲ್ಲಿ "ಭಾರತದ ಜನರಿಗೆ ಧನ್ಯವಾದಗಳು" ಎಂದು ಕಂಡುಬಂದಿದೆ. ಜೊತೆಗೆ,...

ಬಿಜೆಪಿಗೆ ಉಳಿದೆಲ್ಲಾ ಪಕ್ಷಗಳಿಗಿಂತ 10 ಪಟ್ಟು ಹೆಚ್ಚು ದೇಣಿಗೆ: ವರದಿ

2024–25ರ ಆರ್ಥಿಕ ವರ್ಷದಲ್ಲಿ ಆಡಳಿತಾರೂಢ ಭಾರತೀಯ ಜನತಾ ಪಕ್ಷ ( ಬಿಜೆಪಿ ) ಇತರ ಎಲ್ಲಾ ರಾಷ್ಟ್ರೀಯ ಪಕ್ಷಗಳು ಒಟ್ಟು ಸೇರಿಸಿ ಪಡೆದ ದೇಣಿಗೆಗಿಂತ ಸುಮಾರು ಹತ್ತು ಪಟ್ಟು ಹೆಚ್ಚು ದೇಣಿಗೆ ಪಡೆದಿದೆ...

ವಿಶಾಖಪಟ್ಟಣ| ಕುಡಿದ ಮತ್ತಿನಲ್ಲಿ ಎಪಿಎಸ್‌ಆರ್‌ಟಿಸಿ ಬಸ್‌ ಅಪಹರಿಸಿದ ವ್ಯಕ್ತಿ

ಮದ್ಯದ ಅಮಲಿನಲ್ಲಿದ್ದ ವ್ಯಕ್ತಿಯೊಬ್ಬ ಎಪಿಎಸ್‌ಆರ್‌ಟಿಸಿ ಬಸ್ಸನ್ನು ಅಪಹರಿಸಿ ಸುಮಾರು ಒಂದು ಕಿಲೋಮೀಟರ್ ಅಜಾಗರೂಕತೆಯಿಂದ ಚಲಾಯಿಸಿ ಸಾರ್ವಜನಿಕರಲ್ಲಿ ಭೀತಿ ಮೂಡಿಸಿದ ಆಘಾತಕಾರಿ ಘಟನೆ ವಿಶಾಖಪಟ್ಟಣದಲ್ಲಿ ನಡೆದಿದೆ. ಪ್ರತ್ಯಕ್ಷ್ಯದರ್ಶಿಗಳ ಪ್ರಕಾರ, ಮಾರ್ಚ್ 26 ರ ಗುರುವಾರ ಬಸ್...

ಕರ್ನಾಟಕ ವಿಧಾನಸಭೆಯಲ್ಲಿ ಐಪಿಎಲ್ ಟಿಕೆಟ್ ವಿವಾದ; ಶಾಸಕರನ್ನು ಟೀಕಿಸಿದ ತೇಜಸ್ವಿ ಸೂರ್ಯ ವಿರುದ್ಧ ಡಿಕೆಶಿ ವಾಗ್ದಾಳಿ

ಶಾಸಕರಿಗೆ ಐಪಿಎಲ್ 2026 ಟಿಕೆಟ್ ಹಂಚಿಕೆ ವಿವಾದದ ನಡುವೆ ಕರ್ನಾಟಕ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ವಿರೋಧ ಪಕ್ಷದ ನಾಯಕ ತೇಜಸ್ವಿ ಸೂರ್ಯ ವಿರುದ್ಧ ಕಿಡಿಕಾರಿದ್ದಾರೆ  ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುವ ಪಂದ್ಯಗಳಿಗೆ ವಿಐಪಿ ಟಿಕೆಟ್‌ಗಳಿಗೆ...

ವಿಚಾರಣೆಯ ನಂತರವೂ 8 ಲಕ್ಷ ಮತದಾರರ ಹೆಸರು ಅಳಿಸಲಾಗಿದೆ; ಬಂಗಾಳದಲ್ಲಿ ಎನ್.ಆರ್.ಸಿ ಇಲ್ಲ: ಮಮತಾ ಬ್ಯಾನರ್ಜಿ

ಮೊದಲ ಪೂರಕ ಮತದಾರರ ಪಟ್ಟಿ ಪ್ರಕಟವಾದ ನಂತರ ಎಂಟು ಲಕ್ಷ ಮತದಾರರ ಹೆಸರುಗಳನ್ನು ಅಳಿಸಲಾಗಿದೆ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಆರೋಪಿಸಿದ್ದಾರೆ. ಇದು ರಾಜ್ಯದಲ್ಲಿ ಚುನಾವಣಾ ಪಾರದರ್ಶಕತೆಯ ಬಗ್ಗೆ ಗಂಭೀರ...

ಪೆಟ್ರೋಲ್-ಡೀಸೆಲ್ ಮೇಲಿನ ಅಬಕಾರಿ ಸುಂಕ ಕಡಿತಗೊಳಿಸಿದ ಕೇಂದ್ರ ಸರ್ಕಾರ

ಜಾಗತಿಕ ತೈಲ ಬೆಲೆಗಳ ಏರಿಕೆಯ ಪರಿಣಾಮವನ್ನು ತಗ್ಗಿಸುವ ಪ್ರಯತ್ನದಲ್ಲಿ ಸರ್ಕಾರವು ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನು ಪ್ರತಿ ಲೀಟರ್‌ಗೆ 10 ರೂ.ಗಳಷ್ಟು ಕಡಿಮೆ ಮಾಡಿದೆ, ಇದರಿಂದಾಗಿ ಪೆಟ್ರೋಲ್‌ಗೆ 3 ರೂ.ಗಳಷ್ಟು...