Homeಮುಖಪುಟಮಾಲಿನ್ಯದಿಂದ ವಾಸಕ್ಕೆ ಯೋಗ್ಯವಲ್ಲದಷ್ಟು ಹದಗೆಟ್ಟ ದೆಹಲಿ: ಕೇಂದ್ರ ಮತ್ತು ರಾಜ್ಯ ಸರ್ಕಾರಕ್ಕೆ ಸುಪ್ರೀಂ ಛೀಮಾರಿ...

ಮಾಲಿನ್ಯದಿಂದ ವಾಸಕ್ಕೆ ಯೋಗ್ಯವಲ್ಲದಷ್ಟು ಹದಗೆಟ್ಟ ದೆಹಲಿ: ಕೇಂದ್ರ ಮತ್ತು ರಾಜ್ಯ ಸರ್ಕಾರಕ್ಕೆ ಸುಪ್ರೀಂ ಛೀಮಾರಿ…

- Advertisement -
- Advertisement -

ರಾಷ್ಟ್ರ ರಾಜಧಾನಿ ದೆಹಲಿ ಈಗ ವಿಷಪೂರಿತವಾಗಿದೆ. ವಾಯುಮಾಲಿನ್ಯ ಮಿತಿ ಮೀರಿದ್ದು,  ಉಸಿರಾಟ ತೊಂದರೆ ಮತ್ತು ಅನಾರೋಗ್ಯದಿಂದ ಜನರನ್ನು ಬಳಲುವಂತೆ ಮಾಡಿದೆ. ದೆಹಲಿಯ ತುಂಬ ದಟ್ಟ ಹೊಗೆ ಆವರಿಸಿದೆ. ಈ ಸಂಬಂಧ ಸುಪ್ರೀಂಕೋರ್ಟ್ ದೆಹಲಿ ಸರ್ಕಾರ ಮತ್ತು ಕೇಂದ್ರ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ.

ದೆಹಲಿಯಲ್ಲಿ ಸಾರ್ವಜನಿಕ ಆರೋಗ್ಯ ತುರ್ತುಸ್ಥಿತಿ ಘೋಷಣೆಯಾಗಿದೆ. ವರ್ಷದಿಂದ ವರ್ಷಕ್ಕೆ ಜನ ತಮ್ಮ ಉಸಿರು ಕಳೆದುಕೊಳ್ಳುತ್ತಿದ್ದಾರೆ. ವಿಷಪೂರಿತ ವಾತಾವರಣದಲ್ಲಿ ಬದುಕುವುದು ಹೇಗೆ..? ಯಾವುದೇ ಸುಸಂಸ್ಕೃತ ದೇಶದಲ್ಲಿ ಈ ರೀತಿಯಾಗಲು ಸಾಧ್ಯವಿಲ್ಲ ಎಂದು ಹೇಳಿದೆ.

ಸುಪ್ರೀಂಕೋರ್ಟ್ ನ್ಯಾ. ಅರುಣ್ ಮಿಶ್ರಾ, ದೆಹಲಿಯಲ್ಲಿ ಮಾಲಿನ್ಯ ನಿಯಂತ್ರಣ ಪ್ರಾಧಿಕಾರ ಸೂಕ್ತ ಕ್ರಮ ತೆಗೆದುಕೊಳ್ಳಬೇಕು. ತ್ಯಾಜ್ಯ ಮತ್ತು ಉದ್ಯಮ ಘಟಕಗಳಿಂದ ಬಿಡುವ ಹೊಗೆ ಸಾಕಷ್ಟು ಹಾನಿಯುಂಟು ಮಾಡುತ್ತಿದೆ. ಕೈಗಾರಿಕೆಗಳಿಂದ ಬಿಡಲಾಗುತ್ತಿರುವ ತ್ಯಾಜ್ಯ, ವಿಷಪೂರಿತ ಹೊಗೆ, ಕಸ ಸುಡುವುದರಿಂದ ಮಾಲಿನ್ಯದ ಪ್ರಮಾಣ ಹೆಚ್ಚುತ್ತಿದೆ. ಇಂಥ ವಾತಾವರಣದಲ್ಲಿ ಸಾರ್ವಜನಿಕರು ಬದುಕಲು ಸಾಧ್ಯವೇ..? ಇದು ಜನ ಬದುಕಲು ಇರುವ ಸರಿಯಾದ ಮಾರ್ಗವೂ ಅಲ್ಲ. ಹೀಗಾದರೆ ಮನೆಯಲ್ಲಿ ಇರುವವರು, ಹೊರಗೆ ಓಡಾಡುವವರಿಂದ ಹಿಡಿದು ಯಾರೂ ಸುರಕ್ಷಿತವಾಗಿರಲು ಸಾಧ್ಯವಿಲ್ಲ ಎಂದು ಸುಪ್ರೀಂಕೋರ್ಟ್ ಹೇಳಿದೆ.

ಇದನ್ನೂ ಓದಿ: ಮಾಲಿನ್ಯ ತಡೆಗಾಗಿ ಇಂದಿನಿಂದ ದೆಹಲಿಯಲ್ಲಿ ಬೆಸ-ಸಮ ನಿಯಮ ಜಾರಿ: ಬಿಜೆಪಿ ವಿರೋಧ

ದೆಹಲಿಯ ಸುತ್ತಮುತ್ತಲಿನ ನಗರಗಳಾದ ಪಂಜಾಬ್, ಹರ್ಯಾಣ, ಪಶ್ಚಿಮ ಉತ್ತರ ಪ್ರದೇಶ ಭಾಗದಲ್ಲಿನ ಬೆಳೆ, ಪೈರು ಕಟಾವಿನ ನಂತರ ತ್ಯಾಜ್ಯವನ್ನು ಸುಟ್ಟು, ಭೂಮಿಯನ್ನು ಮತ್ತೆ ಹದಗೊಳಿಸಲಾಗುತ್ತದೆ. ಇಂಥ ಸಮಯದಲ್ಲಿ ಮಾಲಿನ್ಯ ಪ್ರಮಾಣ ಮತ್ತಷ್ಟು ಹೆಚ್ಚುತ್ತದೆ. ಇದಕ್ಕೆ ವೈಜ್ಞಾನಿಕ ಮಾರ್ಗೋಪಾಯ ಕಂಡುಕೊಳ್ಳಲು ಸರ್ಕಾರಗಳು ಶ್ರಮಿಸಬೇಕು. ಪರಿಸರ ತಜ್ಞರು, ಐಐಟಿ ತಜ್ಞರನ್ನೂ ಕರೆಯಿಸಿ, ಸೂಕ್ತ ಸಮಾಲೋಚನೆ ನಡೆಸಿ, ವಾಯುಮಾಲಿನ್ಯ ಸಮಸ್ಯೆ ತಡೆಗೆ ಕೇಂದ್ರ ಸರ್ಕಾರ ಮತ್ತು ದೆಹಲಿ ಸರ್ಕಾರ ಪರಿಹಾರೋಪಾಯ ಕಂಡುಕೊಳ್ಳಬೇಕು. ಪ್ರತಿ ವರ್ಷ ಇದು ನಮ್ಮ ಮೂಗಿನ ನೇರಕ್ಕೆ ನಡೆಯುತ್ತಿದೆ. ಆದರೂ ಸರ್ಕಾರಗಳು ಎಚ್ಚೆತ್ತುಕೊಂಡಿಲ್ಲ. ದೆಹಲಿಗೆ ಬರಬೇಡಿ ಅಥವಾ ದೆಹಲಿ ಬಿಟ್ಟು ದೂರ ಹೋಗಿ ಎಂದು ಜನರಿಗೆ  ಹೇಳುವಂಥಹ ಕೆಟ್ಟ ಸ್ಥಿತಿ ನಿರ್ಮಾಣವಾಗಿದೆ. ಜನರು ತಮ್ಮದೇ ರಾಜ್ಯದಲ್ಲಿ ಮತ್ತು ಪಕ್ಕದ ರಾಜ್ಯಗಳಲ್ಲಿ ಸಾಯುತ್ತಿದ್ದಾರೆ.  ಇದನ್ನು ಸಹಿಸಿಕೊಳ್ಳುವುದು ಅಸಾಧ್ಯ ಎಂದು ಸುಪ್ರೀಂಕೋರ್ಟ್ ಹೇಳಿದೆ.

ದೆಹಲಿಯಲ್ಲಿ ಪ್ರತಿ ವರ್ಷ ವಾಯುಮಾಲಿನ್ಯ ಬೃಹತ್ ಸಮಸ್ಯೆಯಾಗಿ ಬೆಳೆಯುತ್ತಲೇ ಇದೆ. ಇದನ್ನು ತಡೆಗಟ್ಟಲು ನಾವು ಏನನ್ನೂ ಮಾಡುತ್ತಿಲ್ಲ. ಪ್ರತಿ ವರ್ಷ ಆಗುತ್ತಿರುವ ಸಮಸ್ಯೆಯನ್ನು ನಿರ್ಲಕ್ಷಿಸಲಾಗುತ್ತಿದೆ. ಜನ ಉಸಿರಾಟಕ್ಕೆ ಒಳ್ಳೆಯ ಗಾಳಿ ಸಿಗದೇ ಉಸಿರು ಚೆಲ್ಲುತ್ತಿದ್ದಾರೆ. ಇಂಥ ಘಟನೆ ಸುಸಂಸ್ಕೃತ ರಾಷ್ಟ್ರದಲ್ಲಿ ನಡೆಯುವುದಿಲ್ಲ, ನಡೆಯಲೂಬಾರದು ಎಂದು ಹೇಳಿದೆ.

ಮಾಲಿನ್ಯ ನಿಯಂತ್ರಣ ಮಂಡಳಿ ಪ್ರಾಧಿಕಾರ ವರದಿ ನೀಡಿದ್ದು, 2010ರಿಂದ ಇಲ್ಲಿಯವರೆಗೆ ಮಾಲಿನ್ಯ ಪ್ರಮಾಣ ಕಡಿಮೆಯಾಗಿದೆ. ಆದರೆ ನಗರದಲ್ಲಿ ಇನ್ನೂ ಶೇ. 65 ರಷ್ಟು ವಾಯುಮಾಲಿನ್ಯ ಕಡಿಮೆಯಾಗಬೇಕಿದೆ. ತ್ಯಾಜ್ಯ ಮತ್ತು ಕೈಗಾರಿಕೆಗಳಿಂದ ಹೊರಬರುವ ವಿಷಪೂರಿತ ಹೊಗೆ ಮತ್ತಷ್ಟು ಸಮಸ್ಯೆಯನ್ನು ಹೆಚ್ಚಿಸುತ್ತಿದೆ ಎಂದು ವರದಿ ನೀಡಿದೆ.

ಇತ್ತ ಹಿರಿಯ ವಕೀಲ ಅಪರಾಜಿತ್ ಸಿಂಗ್ ಮಾತನಾಡಿ, ಪಂಜಾಬ್ ನಲ್ಲಿ ತ್ಯಾಜ್ಯ ಸುಡುವ ಪ್ರಮಾಣ ಶೇ. 7ರಷ್ಟಿದೆ. ಹರ್ಯಾಣದಲ್ಲಿ ಶೇ. 17ರಷ್ಟಿದೆ ಎಂದು ಹೇಳಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿ ವಾಯುಮಾಲಿನ್ಯ : ಏರ್ ಪ್ಯೂರಿಫೈಯರ್‌ ಜಿಎಸ್‌ಟಿ ಕಡಿತಕ್ಕೆ ಕೇಂದ್ರ ಆಕ್ಷೇಪ

ಏರ್‌ಪ್ಯೂರಿಫೈಯರ್‌ ಸಾಧನಗಳ ಮೇಲಿನ ಜಿಎಸ್‌ಟಿ ಕಡಿತಗೊಳಿಸುವಂತೆ ಜಿಎಸ್‌ಟಿ ಮಂಡಳಿಗೆ ಆದೇಶಿಸಿದರೆ ಅದು ಅಂತಹ ಇನ್ನಷ್ಟು ಪ್ರಕರಣಗಳು ಹೆಚ್ಚಳವಾಗಲು ಕಾರಣವಾಗುತ್ತದೆ (Pandora Box)ಎಂದು ಕೇಂದ್ರ ಸರ್ಕಾರ ಶುಕ್ರವಾರ (ಡಿ.26) ದೆಹಲಿ ಹೈಕೋರ್ಟ್‌ಗೆ ತಿಳಿಸಿದೆ. ದೆಹಲಿ ಎನ್‌ಸಿಆರ್‌...

ಬಳ್ಳಾರಿ | ಪ್ರಭಾವ, ಗೂಂಡಾಗಿರಿ ಮೂಲಕ ಬಡ ಜನರ ಭೂ ಕಬಳಿಕೆ : ಬುಡಾ ಮಾಜಿ ಅಧ್ಯಕ್ಷನ ವಿರುದ್ಧ ಗಂಭೀರ ಆರೋಪ

ಬಳ್ಳಾರಿ ನಗರಕ್ಕೆ ಹೊಂದಿಕೊಂಡಿರುವ ಕೌಲ್‌ ಬಜಾರಿನ ದಾನಪ್ಪಬೀದಿ ಮತ್ತು ಬಂಡಿಹಟ್ಟಿ ಏರಿಯಾಗಳ ಬಡ ಜನರಿಗೆ ಇನಾಂ ರದ್ದತಿಯ ಬಳಿಕ ನೀಡಲಾಗಿದ್ದ ಭೂಮಿಯನ್ನು ಬಳ್ಳಾರಿ ನಗರಾಭಿವೃದ್ದಿ ಪ್ರಾಧಿಕಾರ (ಬುಡಾ) ದ ಮಾಜಿ ಅಧ್ಯಕ್ಷ ಎನ್‌....

ಕ್ರಿಸ್‌ಮಸ್‌ ದಿನ ದೇಶದ ಹಲವು ನಗರಗಳಲ್ಲಿ ಗಿಗ್‌ ಕಾರ್ಮಿಕರಿಂದ ಪ್ರತಿಭಟನೆ : ಹೊಸ ವರ್ಷದಂದು ಮತ್ತೊಂದು ಹೋರಾಟಕ್ಕೆ ಸಿದ್ದತೆ

ವರ್ಷಾಂತ್ಯದ ಎರಡು ಪ್ರಮುಖ ದಿನಗಳಾದ ಡಿಸೆಂಬರ್ 25ರ ಕ್ರಿಸ್‌ಮಸ್‌ ಮತ್ತು ಡಿಸೆಂಬರ್ 31ರ ಹೊಸ ವರ್ಷದ ಸಂಜೆ (ಮುನ್ನಾದಿನ) ದೇಶದಾದ್ಯಂತ ಪ್ರತಿಭಟನೆ ನಡೆಸಲು ಗಿಗ್ ಕಾರ್ಮಿಕರು ನಿರ್ಧರಿಸಿದ್ದಾರೆ. ಈಗಾಗಲೇ ಡಿಸೆಂಬರ್ 25ರ ಕ್ರಿಸ್‌ಮಸ್‌ ದಿನದಂದು...

ಬಾಂಗ್ಲಾದಲ್ಲಿ ಮತ್ತೊಬ್ಬ ಹಿಂದೂ ವ್ಯಕ್ತಿಯ ಗುಂಪು ಹತ್ಯೆ : ಘಟನೆಗೆ ಕೋಮು ಆಯಾಮವಿಲ್ಲ ಎಂದ ಮಧ್ಯಂತರ ಸರ್ಕಾರ

ಬಾಂಗ್ಲಾದೇಶದ ರಾಜ್‌ಬರಿ ಜಿಲ್ಲೆಯಲ್ಲಿ ಸುಲಿಗೆ ಯತ್ನದ ಆರೋಪದ ಮೇಲೆ ವ್ಯಕ್ತಿಯೊಬ್ಬರನ್ನು ಗುಂಪೊಂದು ಥಳಿಸಿ ಕೊಂದಿದೆ. ಇದು ಇತ್ತೀಚೆಗೆ ಹಿಂದೂ ವ್ಯಕ್ತಿಯನ್ನು ಗುಂಪು ಹತ್ಯೆ ನಡೆಸಿರುವ ಎರಡನೇ ಘಟನೆಯಾಗಿದೆ. ಆದರೆ, ಅಲ್ಲಿನ ಮಧ್ಯಂತರ ಸರ್ಕಾರ...

ದೆಹಲಿ ವಾಯು ಮಾಲಿನ್ಯದಿಂದ ಸಾಂತಾ ಕ್ಲಾಸ್ ಮೂರ್ಛೆ ಹೋದ ವಿಡಿಯೋ ಹಂಚಿಕೆ : ಎಎಪಿಯ ಸೌರಭ್ ಭಾರದ್ವಾಜ್ ಸೇರಿ ಮೂವರ ವಿರುದ್ಧ ಪ್ರಕರಣ ದಾಖಲು

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ವಿಪರೀತ ವಾಯುಮಾಲಿನ್ಯದಿಂದ ಸಾಂತಾಕ್ಲಾಸ್ ವೇಷ ಧರಿಸಿದ ಪುರುಷರು ಮೂರ್ಛೆ ಹೋಗುತ್ತಿರುವುದನ್ನು ತೋರಿಸುವ ವಿಡಿಯೋ ಸ್ಕಿಟ್ (ಅಭಿನಯ) ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡಿದ ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕರಾದ...

ಕ್ರಿಸ್‌ಮಸ್‌ ವೇಳೆ ಶಾಲೆಗೆ ನುಗ್ಗಿ ದಾಂಧಲೆ : ವಿಹೆಚ್‌ಪಿ-ಬಜರಂಗದಳದ ನಾಲ್ವರ ಬಂಧನ

ನಲ್ಬರಿ ಜಿಲ್ಲೆಯ ಶಾಲೆಯೊಂದಕ್ಕೆ ನುಗ್ಗಿ ಕ್ರಿಸ್‌ಮಸ್ ಅಲಂಕಾರವನ್ನು ಧ್ವಂಸ ಮಾಡಿದ, ವಿಶ್ವ ಹಿಂದೂ ಪರಿಷತ್ (ವಿಹೆಚ್‌ಪಿ) ಮತ್ತು ಬಜರಂಗದಳದ ನಾಲ್ವರನ್ನು ಅಸ್ಸಾಂ ಪೊಲೀಸರು ಗುರುವಾರ (ಡಿ.25) ಬಂಧಿಸಿದ್ದಾರೆ. ಬಂಧಿತರನ್ನು ವಿಹೆಚ್‌ಪಿ ಜಿಲ್ಲಾ ಕಾರ್ಯದರ್ಶಿ ಭಾಸ್ಕರ್...

ಅಲಿಗಢ ಮುಸ್ಲಿಂ ವಿವಿ ಆವರಣದಲ್ಲಿ ಗುಂಡಿಕ್ಕಿ ಶಿಕ್ಷಕನ ಹತ್ಯೆ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯ (ಎಎಂಯು)ದ ಶಿಕ್ಷಕರೊಬ್ಬರನ್ನು ವಿಶ್ವವಿದ್ಯಾಲಯದ ಆವರಣದಲ್ಲಿ ಬುಧವಾರ (ಡಿ.24) ರಾತ್ರಿ ಅಪರಿಚಿತ ದುಷ್ಕರ್ಮಿಗಳು ಗುಂಡಿಕ್ಕಿ ಕೊಂದಿದ್ದು, ವಿದ್ಯಾರ್ಥಿಗಳು ಮತ್ತು ಸಿಬ್ಬಂದಿಗಳಲ್ಲಿ ಭೀತಿ ಮೂಡಿಸಿದೆ. ಮೃತರನ್ನು ಎಎಂಯುನ ಎಬಿಕೆ ಯೂನಿಯನ್ ಹೈಸ್ಕೂಲ್‌ನ ಶಿಕ್ಷಕ...

ಮತ್ತೊಬ್ಬ ವಲಸೆ ಕಾರ್ಮಿಕನ ಗುಂಪು ಹತ್ಯೆ : ಆರು ಜನರ ಬಂಧನ

ಬುಧವಾರ (ಡಿ.24) ಒಡಿಶಾದ ಸಂಬಾಲ್‌ಪುರದಲ್ಲಿ ಪಶ್ಚಿಮ ಬಂಗಾಳದ ಮುರ್ಷಿದಾಬಾದ್ ಜಿಲ್ಲೆಯ 30 ವರ್ಷದ ವಲಸೆ ಕಾರ್ಮಿಕರೊಬ್ಬರನ್ನು ಗುಂಪು ಹತ್ಯೆ ಮಾಡಲಾಗಿದೆ. ಈ ಸಂಬಂಧ ಆರು ಮಂದಿಯನ್ನು ಬಂಧಿಸಲಾಗಿದೆ ಎಂದು ದಿ ಇಂಡಿಯನ್ ಎಕ್ಸ್‌ಪ್ರೆಸ್...

ಉನ್ನಾವೋ ಅತ್ಯಾಚಾರ ಪ್ರಕರಣ : ಕುಲದೀಪ್ ಸೆಂಗಾರ್ ಶಿಕ್ಷೆ ಅಮಾನತು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ಗೆ ಅರ್ಜಿ

ಉನ್ನಾವೋ ಅತ್ಯಾಚಾರ ಪ್ರಕರಣದ ಅಪರಾಧಿ ಕುಲದೀಪ್ ಸಿಂಗ್ ಸೆಂಗಾರ್‌ನ ಜೀವಾವಧಿ ಶಿಕ್ಷೆ ಅಮಾನತುಗೊಳಿಸಿರುವುದನ್ನು ಪ್ರಶ್ನಿಸಿ ಇಬ್ಬರು ಮಹಿಳಾ ವಕೀಲರು ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದಾರೆ. ಕುಲದೀಪ್ ಸಿಂಗ್ ಸೆಂಗಾರ್‌ಗೆ ವಿಚಾರಣಾ ನ್ಯಾಯಾಲಯ ವಿಧಿಸಿದ್ದ ಜೀವಾವಧಿ ಶಿಕ್ಷೆಯನ್ನು...

ಉನ್ನಾವೋ ಅತ್ಯಾಚಾರ ಸಂತ್ರಸ್ತೆಯ ಅಪಹಾಸ್ಯ : ಮಾಧ್ಯಮಗಳ ಮುಂದೆ ವ್ಯಂಗ್ಯವಾಗಿ ನಕ್ಕ ಯುಪಿ ಸಚಿವ

ದೆಹಲಿಯ ಇಂಡಿಯಾ ಗೇಟ್ ಬಳಿ ಪ್ರತಿಭಟಿಸಿದ ಉನ್ನಾವೋ ಅತ್ಯಾಚಾರ ಪ್ರಕರಣದ ಸಂತ್ರಸ್ತೆಯನ್ನು ಉತ್ತರ ಪ್ರದೇಶದ ಬಿಜೆಪಿ ಸರ್ಕಾರದ ಸಚಿವ ಓಂ ಪ್ರಕಾಶ್ ರಾಜ್‌ಭರ್ ಅಪಹಾಸ್ಯ ಮಾಡಿದ್ದು, "ಆಕೆಯ ಮನೆ ಉನ್ನಾವೋದಲ್ಲಿರುವಾಗ ದೆಹಲಿಯಲ್ಲಿ ಏಕಿದ್ದಾಳೆ?"...