Homeಮುಖಪುಟಭಿಕ್ಷೆ ಬೇಡಿ, ಸಾಲ ತನ್ನಿ ಇಲ್ಲವೇ ಕದ್ದುಕೊಂಡು ಬನ್ನಿ: ಆಮ್ಲಜನಕ ವಿಷಯವಾಗಿ ಕೇಂದ್ರದ ವಿರುದ್ಧ ಕಿಡಿಕಾರಿದ...

ಭಿಕ್ಷೆ ಬೇಡಿ, ಸಾಲ ತನ್ನಿ ಇಲ್ಲವೇ ಕದ್ದುಕೊಂಡು ಬನ್ನಿ: ಆಮ್ಲಜನಕ ವಿಷಯವಾಗಿ ಕೇಂದ್ರದ ವಿರುದ್ಧ ಕಿಡಿಕಾರಿದ ಹೈಕೋರ್ಟ್

- Advertisement -
- Advertisement -

ದೆಹಲಿಯ ಹಲವು ಆಸ್ಪತ್ರೆಗಳು ಆಮ್ಲಜನಕದ ಕೊರತೆಯಿಂದಾಗಿ ದೆಹಲಿ ಹೈಕೋರ್ಟ್ ಮೊರೆ ಹೋಗಿವೆ. ಕೆಲವೇ ಗಂಟೆಗಳಲ್ಲಿ ಇರುವ ಆಮ್ಲಜನಕ ಖಾಲಿಯಾಗಲಿದ್ದು, ರೋಗಿಗಳ ಗತಿಯೇನು ಎಂದು ತೀವ್ರ ಆತಂಕ ವ್ಯಕ್ತಪಡಿಸಿವೆ. ‘ಆಮ್ಲಜನಕವಿಲ್ಲದ ಕಾರಣ ಜನರು ಸಾಯುವಂತಿಲ್ಲ” ಎಂದು ಒತ್ತಿ ಹೇಳಿರುವ ದೆಹಲಿ ಹೈಕೋರ್ಟ್ ಕೇಂದ್ರದ ವಿರುದ್ಧ ವಾಗ್ದಾಳಿ ನಡೆಸಿ, ಸರ್ಕಾರಕ್ಕೆ ಮಾನವ ಜೀವನದ ಬಗ್ಗೆ ಕಾಳಜಿಯಿಲ್ಲ ಎಂದು ಕಿಡಿಕಾರಿದೆ.

‘ಭಿಕ್ಷೆಯನ್ನಾದರೂ ಬೇಡಿ, ಸಾಲ ಆದರೂ ತನ್ನಿ ಇಲ್ಲವೇ ಕದ್ದುಕೊಂಡಾದರೂ ಬನ್ನಿ ಎಂದು ಆಮ್ಲಜನಕ ಪೂರೈಕೆಯ ಕುರಿತು ಕೇಂದ್ರವನ್ನು ಕೋರ್ಟ್ ಎಚ್ಚರಿಸಿದೆ. ದೆಹಲಿಯ ಆಮ್ಲಜನಕ ಬಿಕ್ಕಟ್ಟನ್ನು ನಿಭಾಯಿಸಿದ ಬಗ್ಗೆ ದೆಹಲಿ ಹೈಕೋರ್ಟ್ ಬುಧವಾರ ಕೇಂದ್ರವನ್ನು ಕಟುಪದಗಳಲ್ಲಿ ಟೀಕಿಸಿದೆ.

ದೆಹಲಿ ಹೈಕೋರ್ಟ್‌ನ ತೀಕ್ಷ್ಣವಾದ ಪ್ರತಿಕ್ರಿಯೆಗಳು ಇವು:

1. ನಾಗರಿಕನು ಸರ್ಕಾರ/ಪ್ರಭುತ್ವದ ಮೇಲೆ ಮಾತ್ರ ಆಶ್ರಯಿತನಾಗಿರುತ್ತಾನೆ.. ಅದು ಸರ್ಕಾರದ ಜವಾಬ್ದಾರಿ. ಆಮ್ಲಜನಕಕ್ಕಾಗಿ ಭಿಕ್ಷೆಯನ್ನಾದರೂ ಬೇಡಿ, ಸಾಲ ಆದರೂ ತನ್ನಿ ಇಲ್ಲವೇ ಕದ್ದುಕೊಂಡಾದರೂ ಬನ್ನಿ ಅದು ನಿಮ್ಮ (ಕೇಂದ್ರ ಆರೋಗ್ಯ ಇಲಾಖೆ) ಕೆಲಸ.

2. ನಿತ್ಯದ ಕಠಿಣ ವಾಸ್ತವ ಪರಿಸ್ಥಿತಿಯನ್ನು ಸರ್ಕಾರ ಹೇಗೆ ಮರೆತುಬಿಡುತ್ತದೆ? ಆಮ್ಲಜನಕವಿಲ್ಲದ ಕಾರಣ ಜನರು ಸಾಯುವಂತಿಲ್ಲ. ನಿಮ್ಮ ಸ್ವಂತ ಸುಖಕ್ಕಾಗಿ ಸಮಯ ತೆಗೆದುಕೊಳ್ಳುತ್ತೀರಿ ಮತ್ತು ಜನರು ಸಾಯುತ್ತಾರೆ.

3. ಜನರು ಸಾಯುವಾಗ ನೀವು ಕೈಗಾರಿಕೆಗಳ ಬಗ್ಗೆ ಕಾಳಜಿ ವಹಿಸುತ್ತೀರಿ. ಇದು ನೈಸರ್ಗಿಕ ತುರ್ತು. ಆದರೆ ಮಾನವ ಜೀವನವು ಸರ್ಕಾರಕ್ಕೆ ಅಪ್ರಸ್ತುತವಾಗುತ್ತದೆ.

4. ಇಂದು ಆಸ್ಪತ್ರೆಗಳು ಒಣಗಿವೆ. (ಆಮ್ಲಜನಕವಿಲ್ಲದೇ ಉಸಿರುಗಟ್ಟಿವೆ) ಇದು ನಿಜವಾಗಿಯೂ ಹಾಸ್ಯಾಸ್ಪದವಾಗಿದೆ. ನಮ್ಮ ಕಾಳಜಿ ಕೇವಲ ದೆಹಲಿಯಲ್ಲ. ಭಾರತದಾದ್ಯಂತ ಆಮ್ಲಜನಕ ಪೂರೈಕೆಗೆ ಸಂಬಂಧಿಸಿದಂತೆ ಕೇಂದ್ರವು ಏನು ಮಾಡುತ್ತಿದೆ ಎಂದು ತಿಳಿಯಲು ನಾವು ಬಯಸುತ್ತೇವೆ.

5. ಆಮ್ಲಜನಕದ ಅವಶ್ಯಕತೆ ಹಲವಾರು ಪಟ್ಟು ಹೆಚ್ಚಾಗಿದೆ. ಸಾಕಷ್ಟು ಪೂರೈಕೆಯನ್ನು ಖಚಿತಪಡಿಸಿಕೊಳ್ಳುವುದು ಕೇಂದ್ರದ ಜವಾಬ್ದಾರಿಯಾಗಿದೆ. ಜೀವನ ವಿಧಾನದ ಮೂಲಭೂತ ಹಕ್ಕನ್ನು ರಕ್ಷಿಸಲು ಯಾವುದೇ ವಿಧಾನದಿಂದಲಾದರೂ ನಾವು ಸರ್ಕಾರವನ್ನು ನಿರ್ದೇಶಿಸುತ್ತೇವೆ.

6. ನಿನ್ನೆ (ಮಂಗಳವಾರ) ನಾವು ನಿಮಗೆ (ಕೇಂದ್ರ ಆರೋಗ್ಯ ಸಚಿವಾಲಯ) ಪೆಟ್ರೋಲಿಯಂ ಮತ್ತು ಉಕ್ಕಿನ ಕೈಗಾರಿಕೆಗಳಿಗೆ ಆಮ್ಲಜನಕ ಪೂರೈಕೆ ನಿಲ್ಲಿಸುವಂತೆ ಆದೇಶಿಸಿದ್ದೇವೆ. ನೀವು ಏನು ಮಾಡಿದ್ದೀರಿ? ಫಲಿತಾಂಶ ಏನು …? ನಾವು ಫೈಲ್‌ಗಳ ಬಗ್ಗೆ ತಲೆಕೆಡಿಸಿಕೊಳ್ಳುವುದಿಲ್ಲ. (ಇಲಾಖೆಯು ಈ ವಿಷಯದಲ್ಲಿ “ಫೈಲ್‌ಗಳು ಮೂವ್ ಆಗುತ್ತಿವೆ” ಎಂದು ಹೇಳಿದಾಗ).

7. ಟಾಟಾ ಕಂಪನಿ ತಮ್ಮ ಉಕ್ಕಿನ ಸ್ಥಾವರಗಳಿಂದ ಉತ್ಪತ್ತಿಯಾಗುವ ಆಮ್ಲಜನಕವನ್ನು ಬೇರೆಡೆಗೆ ತಿರುಗಿಸಲು ಸಾಧ್ಯವಾದರೆ ಇತರರಿಗೆ ಏಕೆ ಸಾಧ್ಯವಿಲ್ಲ? ಮಾನವೀಯತೆಯ ಪ್ರಜ್ಞೆ ಇಲ್ಲವೇ ಅಥವಾ ಏನು? ಅವುಗಳ ಬಳಕೆಗಾಗಿ ಆಮ್ಲಜನಕವನ್ನು ಉತ್ಪಾದಿಸುವ ಉಕ್ಕು ಮತ್ತು ಪೆಟ್ರೋಲಿಯಂ ಕೈಗಾರಿಕೆಗಳಿಂದ ಸರ್ಕಾರವು ಆಮ್ಲಜನಕವನ್ನು ಆರೋಗ್ಯ ಕ್ಷೇತ್ರಕ್ಕೆ ತಿರುಗಿಸಬಹುದು.

8. ಕೈಗಾರಿಕೆಗಳು ಸಹಾಯ ಮಾಡಲು ಸಿದ್ಧವಿವೆ. ಇದು ರಾಷ್ಟ್ರೀಯ ತುರ್ತು. ಆಮ್ಲಜನಕವನ್ನು ತಿರುಗಿಸಲು ನೀವು ಆದೇಶವನ್ನು ರವಾನಿಸಿದರೆ, ಯಾವುದೇ ಕೈಗಾರಿಕೆಗಳು ಇಲ್ಲ ಎಂದು ಹೇಳುವುದಿಲ್ಲ. ಮತ್ತು ನೀವು ನಿಮ್ಮದೇ ಆದ ಸರ್ಕಾರಿ-ಪೆಟ್ರೋಲಿಯಂ ಕಂಪನಿಗಳನ್ನು ಹೊಂದಿದ್ದೀರಿ. ನಾವು ನಿನ್ನೆ ಹಲವಾರು ಆದೇಶಗಳನ್ನು ನೀಡಿದ್ದೇವೆ. ಇಡೀ ದಿನ ನೀವು ಏನು ಮಾಡಿದ್ದೀರಿ?

9. ಸರ್ಕಾರ ವಾಸ್ತವಕ್ಕೆ ಏಕೆ ಎಚ್ಚರಗೊಳ್ಳುತ್ತಿಲ್ಲ. ನಮಗೆ ಆಘಾತವಾಗಿದೆ. ಏನಾಗುತ್ತಿದೆ? ಆಸ್ಪತ್ರೆಗಳಿಗೆ ಈ ಹಂತದಲ್ಲಿ ಆಮ್ಲಜನಕದ ನಿಲುಗಡೆ … ನರಕದರ್ಶನವಾಗುತ್ತಿದೆ…

10. ದಯವಿಟ್ಟು ಪರಿಸ್ಥಿತಿಯ ಗಂಭೀರತೆಯನ್ನು ಅರಿತುಕೊಳ್ಳಿ. ಸಾವಿರಾರು ಜೀವಗಳು ಅಪಾಯದಲ್ಲಿವೆ. ಸಾವಿರಾರು ಜನರು ಸಾಯುವುದನ್ನು ನೀವು ನೋಡಲು ಬಯಸುವಿರಾ?


ಇದನ್ನೂ ಓದಿ: ಆಕ್ಸಿಜನ್‌ಗಾಗಿ ರೋಗಿಗಳು ಕಾಯಬೇಕೆಂದು ಹೇಳುತ್ತೀರಾ?: ಕೇಂದ್ರದ ವಿರುದ್ಧ ಕಿಡಿಕಾರಿದ ಹೈಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...

‘ಕೆಲವರು ಮುಸ್ಲಿಮರನ್ನು ಬೈದ್ರೆ ಮಾತ್ರ ಲೀಡರ್‌ ಆಗೋದು ಅನ್ಕೊಂಡಿದಾರೆ!’: ಆರ್‌. ಅಶೋಕ್‌ ಹಳೆಯ ಹೇಳಿಕೆ ಮುಂದಿಟ್ಟು ಪ್ರಿಯಾಂಕ್ ಖರ್ಗೆ ಟೀಕೆ!

ಮೈಸೂರಿನ ಟಿ. ನರಸೀಪುರದಲ್ಲಿ ಗಣಪತಿ ಮೆರವಣಿಗೆ ಸಾಗುವ ಮಾರ್ಗದ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವ ಬೆನ್ನಲ್ಲೇ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ...

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...

ಕರ್ನಾಟಕದಲ್ಲಿ 2 ಗಂಟೆಗಳ ಬೃಹತ್ ಕಾರ್ಯಾಚರಣೆ: 800 ಬಾಲಕಾರ್ಮಿಕರ ರಕ್ಷಣೆ; ಬೆಂಗಳೂರಿನಲ್ಲೇ 503 ಮಕ್ಕಳು

ಬಾಲಕಾರ್ಮಿಕ ಪದ್ಧತಿಯ ವಿರುದ್ಧ ಕರ್ನಾಟಕ ಪೊಲೀಸರು ಹಾಗೂ ಕಾರ್ಮಿಕ ಇಲಾಖೆ ಶನಿವಾರ ರಾಜ್ಯಾದ್ಯಂತ ನಡೆಸಿದ ವಿಶೇಷ ಕಾರ್ಯಾಚರಣೆಯಲ್ಲಿ 800 ಮಕ್ಕಳನ್ನು ರಕ್ಷಿಸಲಾಗಿದೆ. ರಾಜ್ಯದ 962 ಪೊಲೀಸ್ ಠಾಣೆಗಳು ಹಾಗೂ ಘಟಕಗಳ ವ್ಯಾಪ್ತಿಯಲ್ಲಿ 16,951...

‘ದಿ ಹಿಂದೂ’, ‘ದೈನಿಕ್ ಭಾಸ್ಕರ್’ ಗಳಲ್ಲಿ ಅತ್ಯಾಚಾರ ಅಪರಾಧಿ ಗುರ್ಮೀತ್ ರಾಮ್ ರಹೀಮ್ ಸಮರ್ಥಿಸುವ ಜಾಹೀರಾತು: ಓದುಗರಲ್ಲಿ ಕ್ಷಮೆಯಾಚಿಸಿದ ‘ದಿ ಹಿಂದೂ’

ನವದೆಹಲಿ: ಇಬ್ಬರು ಮಹಿಳಾ ಶಿಷ್ಯೆಯರ ಮೇಲೆ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಶಿಕ್ಷೆಗೊಳಗಾಗಿರುವ ಡೇರಾ ಸಚ್ಚಾ ಸೌದಾ ಮುಖ್ಯಸ್ಥ ಗುರ್ಮೀತ್ ರಾಮ್ ರಹೀಮ್ ಸಿಂಗ್ ಅವರನ್ನು ಸಮರ್ಥಿಸುವ ರೀತಿಯಲ್ಲಿ ಪೂರ್ಣ ಪುಟದ ಮುಖಪುಟ ಜಾಹೀರಾತು...

ದ್ವಿ-ರಾಷ್ಟ್ರ ಪರಿಹಾರ : ಬ್ರಿಕ್ಸ್ ನಿಲುವು ಸ್ವಾಗತಿಸಿದ ಪ್ಯಾಲೆಸ್ತೀನ್

ಪ್ಯಾಲೆಸ್ತೀನ್-ಇಸ್ರೇಲ್ ವಿವಾದಕ್ಕೆ ದ್ವಿ-ರಾಷ್ಟ್ರ ಪರಿಹಾರವನ್ನು ಕಂಡುಕೊಳ್ಳುವಂತೆ ಕರೆ ನೀಡಿರುವ ಬ್ರಿಕ್ಸ್ (BRICS) ಜಂಟಿ ಘೋಷಣೆಯನ್ನು ಪ್ಯಾಲೆಸ್ತೀನ್ ವಿದೇಶಾಂಗ ಮತ್ತು ವಲಸಿಗರ ಸಚಿವಾಲಯವು ಮುಕ್ತಕಂಠದಿಂದ ಸ್ವಾಗತಿಸಿದೆ. ಬ್ರಿಕ್ಸ್‌ ಶೃಂಗಸಭೆ, ಜೆರುಸಲೆಮ್ ಸೇರಿದಂತೆ ಪ್ಯಾಲೆಸ್ತೀನಿಯರನ್ನು ಅವರದೇ ಭೂಮಿಯಿಂದ...